Several projects in Delhi which were incomplete for many years were taken up by our government and finished before the scheduled time: PM
All MPs have taken care of both the products and the process in the productivity of Parliament and have attained a new height in this direction: PM
Parliament proceedings continued even during the pandemic: PM Modi

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಸಂಸತ್ ಸದಸ್ಯರಿಗಾಗಿ ಬಹುಮಹಡಿ ವಸತಿಗಳನ್ನು ಉದ್ಘಾಟಿಸಿದರು. ನವದೆಹಲಿಯ ಡಾ. ಬಿ.ಡಿ. ಮಾರ್ಗ್ ನಲ್ಲಿ ಈ ವಸತಿಗಳಿವೆ. 80 ವರ್ಷಕ್ಕಿಂತ ಹಳೆಯ 8 ಹಳೆಯ ಬಂಗ್ಲೆಗಳನ್ನು 76 ಫ್ಲಾಟ್ ಗಳಾಗಿ ಅಭಿವೃದ್ಧಿಪಡಿಸಲಾಗಿದೆ.

ಈ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಮಂತ್ರಿಯವರು, ಸಂಸತ್ ಸದಸ್ಯರಿಗಾಗಿ ನಿರ್ಮಿಸಿರುವ ಈ ಬಹುಮಹಡಿ ಫ್ಲಾಟ್ ಗಳಲ್ಲಿ ಹಸಿರು ಕಟ್ಟಡದ ನಿಯಮಗಳನ್ನು ಅಳವಡಿಸಲಾಗಿದೆ ಎಂದು ತಿಳಿಸಿದರು. ಈ ಹೊಸ ಫ್ಲ್ಯಾಟ್‌ ಗಳು ಎಲ್ಲಾ ನಿವಾಸಿಗಳು ಮತ್ತು ಸಂಸದರನ್ನು ಸುರಕ್ಷಿತವಾಗಿ ಮತ್ತು ಸದೃಢವಾಗಿರಿಸುತ್ತವೆ ಎಂದು ಅವರು ಆಶಿಸಿದರು. ಸಂಸತ್ ಸದಸ್ಯರಿಗೆ ವಸತಿ ಸೌಕರ್ಯವು ದೀರ್ಘಕಾಲದ ಸಮಸ್ಯೆಯಾಗಿತ್ತು, ಈಗ ಅದನ್ನು ಪರಿಹರಿಸಲಾಗಿದೆ ಎಂದು ಅವರು ಹೇಳಿದರು. ದಶಕಗಳ ಹಳೆಯ ಸಮಸ್ಯೆಗಳಿಗೆ ಸ್ಪಂದಿಸದೆ ತಪ್ಪಿಸಿಕೊಳ್ಳುವುದರಿಂದ ಅವು ಬಗೆಹರಿಯುವುದಿಲ್ಲ, ಬದಲಾಗಿ ಅದಕ್ಕೆ ಪರಿಹಾರಗಳನ್ನು ಕಂಡುಕೊಳ್ಳುವ ಮೂಲಕ ಪರಿಹರಿಸಬೇಕು ಎಂದು ಅವರು ಹೇಳಿದರು. ದೆಹಲಿಯಲ್ಲಿ ಅಂತಹ ಅನೇಕ ಯೋಜನೆಗಳನ್ನು ಪಟ್ಟಿ ಮಾಡಿದ ಅವರು, ಅವುಗಳು ಹಲವು ವರ್ಷಗಳಿಂದ ಅಪೂರ್ಣವಾಗಿದ್ದವು, ಈ ಸರ್ಕಾರ ಅದನ್ನು ಕೈಗೆತ್ತಿಕೊಂಡಿತು ಮತ್ತು ನಿಗದಿತ ಗಡುವಿಗೆ ಮುಂಚಿತವಾಗಿ ಪೂರ್ಣಗೊಳಿಸಿತು ಎಂದರು. ಪ್ರಧಾನಮಂತ್ರಿ ಅಟಲ್ ಬಿಹಾರಿ ವಾಜಪೇಯಿ ಅವರ ಕಾಲದಲ್ಲಿ ಅಂಬೇಡ್ಕರ್ ರಾಷ್ಟ್ರೀಯ ಸ್ಮಾರಕದ ಚರ್ಚೆ ಆರಂಭವಾಯಿತು, ಆದರೆ 23 ವರ್ಷಗಳ ತರುವಾಯ ತಮ್ಮ ಸರ್ಕಾರ ಅದನ್ನು ನಿರ್ಮಾಣ ಮಾಡಿತು. ಕೇಂದ್ರೀಯ ಮಾಹಿತಿ ಆಯುಕ್ತರ ಕಚೇರಿ ನೂತನ ಕಟ್ಟಡ, ಇಂಡಿಯಾ ಗೇಟ್ ಬಳಿ ಯುದ್ಧ ಸ್ಮಾರಕ ಮತ್ತು ರಾಷ್ಟ್ರೀಯ ಪೊಲೀಸ್ ಸ್ಮಾರಕ ಬಹುಕಾಲದಿಂದ ನನೆಗುದಿಗೆ ಬಿದ್ದಿತ್ತು, ಈ ಸರ್ಕಾರ ಅದನ್ನು ನಿರ್ಮಾಣ ಮಾಡಿತು.

ಸಂಸತ್ತಿನ ಫಲಪ್ರದತೆಯಲ್ಲಿ ವಸ್ತು ಮತ್ತು ಪ್ರಕ್ರಿಯೆ ಎರಡರ ಬಗ್ಗೆ ಎಲ್ಲಾ ಸಂಸದರೂ ಕಾಳಜಿ ವಹಿಸುತ್ತಿದ್ದಾರೆ ಮತ್ತು ಈ ದಿಕ್ಕಿನಲ್ಲಿ ಹೊಸ ಎತ್ತರಕ್ಕೆ ಏರುತ್ತಿದ್ದಾರೆ ಎಂದು ಪ್ರಧಾನಮಂತ್ರಿ ಉಲ್ಲೇಖಿಸಿದರು. ಫಲಪ್ರದತೆ ಮತ್ತು ಕಾರ್ಯವಿಧಾನ ಉತ್ತಮವಾಗಿ ನಡೆಸುತ್ತಿರುವ ಸದನದ ಉಸ್ತುವಾರಿ ನೋಡಿಕೊಳ್ಳುವ ಲೋಕಸಭಾಧ್ಯರನ್ನು ಅವರು ಶ್ಲಾಘಿಸಿದರು. ಸಾಂಕ್ರಾಮಿಕದ ಸಮಯದಲ್ಲಿ ಸಹ ಹೊಸ ನಿಯಮಗಳು ಮತ್ತು ಹಲವಾರು ಮುನ್ನೆಚ್ಚರಿಕೆ ಕ್ರಮಗಳೊಂದಿಗೆ ಸಂಸತ್ತಿನ ಪ್ರಕ್ರಿಯೆಗಳು ಮುಂದುವರೆಯಿತು ಎಂದು ಅವರು ಸಂತಸ ವ್ಯಕ್ತಪಡಿಸಿದರು. ಮುಂಗಾರು ಅಧಿವೇಶನದಲ್ಲಿ ಸುಗಮ ಪ್ರಕ್ರಿಯೆಯನ್ನು ಖಾತ್ರಿಪಡಿಸಲು ಉಭಯ ಸದನಗಳು ವಾರಾಂತ್ಯದಲ್ಲಿ ಸಹ ಕಲಾಪ ನಡೆಸಿದವು ಎಂದು ಅವರು ಹೇಳಿದರು.

16-18 ವರ್ಷ ವಯಸ್ಸು ಯುವಕರಿಗೆ ಬಹಳ ಮುಖ್ಯವಾದ್ದು ಎಂದ ಅವರು, ನಾವು 2019ರ ಚುನಾವಣೆಯೊಂದಿಗೆ 16 ನೇ ಲೋಕಸಭೆಯ ಅವಧಿಯನ್ನು ಪೂರ್ಣಗೊಳಿಸಿದ್ದೇವೆ ಮತ್ತು ಈ ಅವಧಿಯು ದೇಶದ ಪ್ರಗತಿ ಮತ್ತು ಅಭಿವೃದ್ಧಿಗೆ ಐತಿಹಾಸಿಕವಾಗಿ ಮಹತ್ವದ್ದಾಗಿದೆ ಎಂದು ಅವರು ಹೇಳಿದರು. 17 ನೇ ಲೋಕಸಭೆಯ ಅವಧಿ 2019ರಿಂದ ಪ್ರಾರಂಭವಾಗಿದೆ ಮತ್ತು ಈ ಅವಧಿಯಲ್ಲಿ ಲೋಕಸಭೆಯಲ್ಲಿ ಈಗಾಗಲೇ ಕೆಲವು ಐತಿಹಾಸಿಕ ನಿರ್ಧಾರಗಳನ್ನು ಕೈಗೊಳ್ಳಲಾಗಿದೆ ಎಂದು ಅವರು ಹೇಳಿದರು. ಹೊಸ ದಶಕದಲ್ಲಿ ದೇಶವನ್ನು ಮುಂದೆ ಕೊಂಡೊಯ್ಯುವಲ್ಲಿ ಮುಂದಿನ (18 ನೇ) ಲೋಕಸಭೆಯೂ ಬಹಳ ಮಹತ್ವದ ಪಾತ್ರ ವಹಿಸುತ್ತದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

Click here to read full text speech

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
India’s data centre boom: Mumbai cracks global top 15, Hyderabad pipeline set to surge 15x

Media Coverage

India’s data centre boom: Mumbai cracks global top 15, Hyderabad pipeline set to surge 15x
NM on the go

Nm on the go

Always be the first to hear from the PM. Get the App Now!
...
ಆಗಸ್ಟ್ 27ರಂದು 'ಖೇಲೋ ಇಂಡಿಯಾ' ಸಂವಾದದಲ್ಲಿ ಯುವಜನರನ್ನುದ್ದೇಶಿಸಿ ಮಾತನಾಡಲಿರುವ ಪ್ರಧಾನಮಂತ್ರಿ
August 26, 2026
'ಖೇಲೋ ಇಂಡಿಯಾ' ಸಂವಾದವು ಕ್ರೀಡೆ, ಯುವ ನಾಯಕತ್ವ, ನಾಗರಿಕ ಜವಾಬ್ದಾರಿ, ಸ್ವಯಂಸೇವೆ, ಫಿಟ್‌ನೆಸ್‌ ಮತ್ತು ರಾಷ್ಟ್ರ ನಿರ್ಮಾಣವನ್ನು ಒಂದೇ ವೇದಿಕೆಯಲ್ಲಿ ಒಟ್ಟುಗೂಡಿಸಲಿದೆ
'ಖೇಲೋ ಇಂಡಿಯಾ' ಸಂವಾದದ ಅಡಿಯಲ್ಲಿ ನಡೆಯುವ 'ಯುವ ಸಂವಾದ'ವು ಐದು ಪ್ರಮುಖ ವಿಷಯಗಳ ಮೇಲೆ ಕೇಂದ್ರೀಕರಿಸಲಿದೆ: ಕ್ರೀಡೆ, ಒಲಿಂಪಿಕ್ ಆಕಾಂಕ್ಷೆಗಳು, ಯುವ ನಾಯಕತ್ವ, 'ವಿಕಸಿತ ಭಾರತ' ಮತ್ತು 'ನಶಾ ಮುಕ್ತ ಯುವ' ಅಭಿಯಾನ

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಆಗಸ್ಟ್ 27ರಂದು ಬೆಳಿಗ್ಗೆ 11 ಗಂಟೆಗೆ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ 'ಖೇಲೋ ಇಂಡಿಯಾ' ಸಂವಾದವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಈ ಕಾರ್ಯಕ್ರಮವು ಯುವಕರಿಗೆ ಭಾರತದ ಕ್ರೀಡಾ ಪ್ರಯಾಣದಲ್ಲಿ ತೊಡಗಿಸಿಕೊಳ್ಳಲು, ಅವರ ಆಕಾಂಕ್ಷೆಗಳನ್ನು ಹಂಚಿಕೊಳ್ಳಲು ಮತ್ತು ಬಲವಾದ ಯುವಕರ ನೇತೃತ್ವದ 'ವಿಕಸಿತ ಭಾರತ'ಕ್ಕಾಗಿ ತಮ್ಮ ವಿಚಾರಗಳನ್ನು ನೀಡಲು ಸಹಾಯ ಮಾಡುವುದು ಕಾರ್ಯಕ್ರಮದ ಉದ್ದೇಶವಾಗಿದೆ.

2026ರ ರಾಷ್ಟ್ರೀಯ ಕ್ರೀಡಾ ದಿನಾಚರಣೆಯ ಅಂಗವಾಗಿ 'ಮೇರಾ ಯುವ ಭಾರತ್' (ಮೈ ಭಾರತ್‌) ಆಯೋಜಿಸಿರುವ ಈ ಕಾರ್ಯಕ್ರಮವು, ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಾದ್ಯಂತ ಪ್ರತಿಯೊಂದು ಜಿಲ್ಲೆಯ ಎರಡು ಕಾಲೇಜುಗಳಲ್ಲಿ ಯುವಕರ ಭಾಗವಹಿಸುವಿಕೆಯೊಂದಿಗೆ ದೇಶಾದ್ಯಂತ ನಡೆಯಲಿದೆ. ಯುವಕರ ಆಕಾಂಕ್ಷೆಗಳನ್ನು ರಾಷ್ಟ್ರೀಯ ಅಭಿವೃದ್ಧಿ ಕಾರ್ಯಸೂಚಿಯ ಕೇಂದ್ರಭಾಗದಲ್ಲಿ ಇರಿಸಿಕೊಂಡು ಸದೃಢ, ಶಿಸ್ತುಬದ್ಧ ಮತ್ತು ಕ್ರೀಡಾ ರಾಷ್ಟ್ರವನ್ನು ನಿರ್ಮಿಸುವ ಪ್ರಧಾನಮಂತ್ರಿಯವರ ದೃಷ್ಟಿಕೋನಕ್ಕೆ ಅನುಗುಣವಾಗಿ ಈ ಕಾರ್ಯಕ್ರಮವನ್ನು ನಡೆಸಲಾಗುತ್ತಿದೆ.

ರಾಷ್ಟ್ರವ್ಯಾಪಿ ನಡೆಯುವ 'ಖೇಲೋ ಇಂಡಿಯಾ ಸಂವಾದ'ವು ಕ್ರೀಡೆ, ಯುವ ನಾಯಕತ್ವ, ನಾಗರಿಕ ಜವಾಬ್ದಾರಿ, ಸ್ವಯಂ ಸೇವೆ, ಫಿಟ್ನೆಸ್ ಮತ್ತು ರಾಷ್ಟ್ರ ನಿರ್ಮಾಣವನ್ನು ಒಂದೇ ವೇದಿಕೆಯಲ್ಲಿ ಒಟ್ಟುಗೂಡಿಸಲಿದೆ. ಭಾರತದ ಯುವ ಮತ್ತು ಕ್ರೀಡಾ ಪರಿಸರ ವ್ಯವಸ್ಥೆಯ ಕುರಿತಾದ ನಿರಂತರ ಸಂವಾದದಲ್ಲಿ ಯುವಕರ ಆಲೋಚನೆಗಳು ಮತ್ತು ದೃಷ್ಟಿಕೋನಗಳಿಗೆ ಸ್ಥಾನವನ್ನು ಖಚಿತಪಡಿಸಿಕೊಳ್ಳುವ ಜೊತೆಗೆ, ದೇಶದ ಕ್ರೀಡಾ ಮಹತ್ವಾಕಾಂಕ್ಷೆಗಳೊಂದಿಗೆ ಯುವಕರು ತೊಡಗಿಸಿಕೊಳ್ಳಲು ಇದು ನೇರ ಮಾರ್ಗವನ್ನು ಒದಗಿಸುತ್ತದೆ.

ರಾಷ್ಟ್ರೀಯ ಕಾರ್ಯಕ್ರಮದ ನಂತರ ಯುವ ಭಾಗಿದಾರರು, 'ಮೈ ಭಾರತ್' ಸ್ವಯಂಸೇವಕರು, ಸ್ಥಳೀಯ ಕ್ರೀಡಾಪಟುಗಳು ಮತ್ತು ಜನಪ್ರತಿನಿಧಿಗಳನ್ನು ಒಳಗೊಂಡ ಸ್ಥಳೀಯ ಸಂವಾದಗಳು ನಡೆಯಲಿವೆ. ಕ್ರೀಡೆಯಲ್ಲಿ ಆಸಕ್ತಿ ಹೊಂದಿರುವ ಯುವಕರು ಮತ್ತು ಪ್ರಮುಖ ಭಾರತೀಯ ಅಥ್ಲೀಟ್‌ಗಳು ಹಾಗೂ ಪದಕ ವಿಜೇತರ ನಡುವಿನ ನೇರ ಸಂವಾದವು ಈ ಉಪಕ್ರಮದ ಪ್ರಮುಖ ಲಕ್ಷಣವಾಗಿದೆ. 'ಯುವ ಸಂವಾದ'ವು ಈ ಕಾರ್ಯಕ್ರಮದ ಕೇಂದ್ರ ಬಿಂದುವಾಗಿದ್ದು, ಇದರಲ್ಲಿ ಯುವ ಭಾಗಿದಾರರನ್ನು ತಮ್ಮ ಸ್ವಂತ ಆಲೋಚನೆಗಳು, ದೃಷ್ಟಿಕೋನಗಳು ಮತ್ತು ಆಕಾಂಕ್ಷೆಗಳನ್ನು ವ್ಯಕ್ತಪಡಿಸಲು ಆಹ್ವಾನಿಸಲಾಗುತ್ತದೆ. ಈ ಸಂವಾದವನ್ನು ಐದು ವಿಷಯಗಳ ಸುತ್ತ ರಚಿಸಲಾಗಿದೆ:

  • ಉತ್ತಮ ಸೌಲಭ್ಯಗಳು, ತರಬೇತಿ, ಕ್ರೀಡಾ ವಿಜ್ಞಾನ ಮತ್ತು ಎಲ್ಲರನ್ನೂ ಒಳಗೊಂ ಭಾಗವಹಿಸುವಿಕೆಯ ಮೂಲಕ ಭಾರತದ ಕ್ರೀಡಾ ಪರಿಸರ ವ್ಯವಸ್ಥೆಯನ್ನು ಸುಧಾರಿಸುವುದು;
  • ವೈಜ್ಞಾನಿಕ ಪ್ರತಿಭಾ ಶೋಧನೆ, ಪಾರದರ್ಶಕ ಆಯ್ಕೆ ಮತ್ತು ದೀರ್ಘಕಾಲೀನ ಕ್ರೀಡಾಪಟು ಅಭಿವೃದ್ಧಿಯ ಮೂಲಕ 2036ರ ಒಲಿಂಪಿಕ್ಸ್‌ ಕ್ರೀಡಾಕೂಟಕ್ಕೆ ಗೆ ಪ್ರತಿಭೆಗಳನ್ನು ಪೋಷಿಸುವುದು;
  • ಆಡಳಿತ ವೇದಿಕೆಗಳು ಮತ್ತು 'ಮೈ ಭಾರತ್' ನೇತೃತ್ವದ ಸ್ವಯಂಸೇವಕ ಸೇವೆಯ ಮೂಲಕ ಯುವ ನಾಯಕರನ್ನು ಸೃಷ್ಟಿಸುವುದು;
  • ನಾಗರಿಕ ಪ್ರಜ್ಞೆ, ಭವಿಷ್ಯಕ್ಕೆ ಸಿದ್ಧವಾದ ಕೌಶಲ್ಯಗಳು ಮತ್ತು ರಚನಾತ್ಮಕ ಸ್ವಯಂಸೇವಕ ಸೇವೆಯನ್ನು ಬೆಳೆಸುವ ಮೂಲಕ ವಿಕಸಿತ ಭಾರತಕ್ಕಾಗಿ ಯುವಕರನ್ನು ಸಬಲೀಕರಣಗೊಳಿಸುವುದು;
  • ಮಾದಕ ವ್ಯಸನದ ವಿರುದ್ಧ ಹೋರಾಡಲು ಕ್ರೀಡೆ ಮತ್ತು ಸಮಾನಮನಸ್ಕ ಜಾಲಗಳನ್ನು ಬಳಸಿಕೊಳ್ಳುವ 'ನಶಾ ಮುಕ್ತ ಯುವ ಆಂದೋಲ'ನವನ್ನು ಉತ್ತೇಜಿಸುವುದು. ಇದು 2026ರ ಆಗಸ್ಟ್ 2ರಂದು ಪ್ರಾರಂಭಿಸಲಾದ ಪ್ರಧಾನಮಂತ್ರಿಯವರ 100 ವಾರಗಳ ರಾಷ್ಟ್ರವ್ಯಾಪಿ ಅಭಿಯಾನದ ಅಡಿಯಲ್ಲಿ ಸಾಪ್ತಾಹಿಕ 'ಜನ ಭಾಗೀದಾರಿ' ಚಟುವಟಿಕೆಗಳಿಂದ ಬೆಂಬಲಿತವಾಗಿದೆ.