860 ಕೋಟಿ ರೂ.ಗೂ ಅಧಿಕ ಮೌಲ್ಯದ ಹಲವಾರು ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿದರು
"ರಾಜ್ ಕೋಟ್ ಅನ್ನು ಸೌರಾಷ್ಟ್ರದ ಬೆಳವಣಿಗೆಯ ಪ್ರಮುಖ ಗುರಿಕಾರ ಎಂದು ಗುರುತಿಸಲಾಗಿದೆ"
"ನಾನು ಯಾವಾಗಲೂ ರಾಜ್ಕೋಟ್ ಗೆ ಸಲ್ಲಬೇಕಾದ ಗೌರವವನ್ನು ಸಲ್ಲಿಸುತ್ತೇನೆ"
"ನಾವು ಉತ್ತಮ ಆಡಳಿತದ ಭರವಸೆಯನ್ನು ನೀಡಿದ್ದೇವೆ. ಅದನ್ನು ಸದಾ ಪಾಲಿಸುತ್ತಿದ್ದೇವೆ"
"ನವ-ಮಧ್ಯಮ ಮತ್ತು ಮಧ್ಯಮ ವರ್ಗಗಳ ಉನ್ನತೀಕರಣ ಸರ್ಕಾರದ ಆದ್ಯತೆಯಾಗಿದೆ"
"ವಾಯುಸೇವಾ ವಿಸ್ತರಣೆಯು ಭಾರತದ ವಾಯುಯಾನ ಕ್ಷೇತ್ರದ ಪರಾಕಾಷ್ಠೆಯಾಗಿದೆ"
"ಸುಗಮ ಜೀವನ ಮತ್ತು ಜೀವನದ ಗುಣಮಟ್ಟವು ಸರ್ಕಾರದ ಪ್ರಮುಖ ಆದ್ಯತೆಗಳಲ್ಲಿ ಒಂದಾಗಿದೆ"
"ಇಂದು, ರೇರಾ ಕಾನೂನು ಲಕ್ಷಾಂತರ ಜನರ ಹಣ ಕೊಳ್ಳೆಹೋಗುವುದನ್ನು ತಪ್ಪಿಸುತ್ತಿದೆ"
"ಇಂದು, ನಮ್ಮ ನೆರೆ-ಹೊರೆಯ ದೇಶಗಳಲ್ಲಿ ಹಣದುಬ್ಬರವು ಶೇಕಡಾ 25-30ರಷ್ಟು ಹೆಚ್ಚುತ್ತಿದೆ. ಆದರೆ ಭಾರತದ ಸ್ಥಿತಿ ಹಾಗಿಲ್ಲ."

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ಗುಜರಾತ್ ನ ರಾಜ್ ಕೋಟ್ ನಲ್ಲಿ ರಾಜ್ ಕೋಟ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಮತ್ತು 860 ಕೋಟಿ ರೂ.ಗೂ ಅಧಿಕ ಮೌಲ್ಯದ ಹಲವಾರು ಅಭಿವೃದ್ಧಿ ಯೋಜನೆಗಳನ್ನು ರಾಷ್ಟ್ರಕ್ಕೆ ಸಮರ್ಪಿಸಿದರು. ಈ ಯೋಜನೆಗಳಲ್ಲಿ ಸೌನಿ ಯೋಜನಾ ಲಿಂಕ್ 3ರ ಪ್ಯಾಕೇಜ್ 8 ಮತ್ತು 9; ದ್ವಾರಕಾ ಗ್ರಾಮೀಣ ನೀರು ಸರಬರಾಜು ಮತ್ತು ನೈರ್ಮಲ್ಯ (RWSS) ಯೋಜನೆಯ ಉತ್ತಮೀಕರಣ; ಉಪರ್ಕೋಟ್ ಕೋಟೆಯ ಸಂರಕ್ಷಣೆ, ಪುನಃಸ್ಥಾಪನೆ ಮತ್ತು ಅಭಿವೃದ್ಧಿಯ ಹಂತ 1 ಮತ್ತು 2; ನೀರು ಸಂಸ್ಕರಣಾ ಘಟಕ, ಒಳಚರಂಡಿ ಸಂಸ್ಕರಣಾ ಘಟಕ ಮತ್ತು ಮೇಲ್ಸೇತುವೆಯ ನಿರ್ಮಾಣ ಸೇರಿವೆ. ಪ್ರಧಾನಮಂತ್ರಿಯವರು ಹೊಸದಾಗಿ ಉದ್ಘಾಟಿಸಲಾದ ರಾಜ್ ಕೋಟ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ ಕಟ್ಟಡಕ್ಕೂ ಭೇಟಿ ನೀಡಿದರು.

 

ಸಭಿಕರನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿಯವರು, ಇಂದು ರಾಜ್ ಕೋಟ್ ಗೆ ಮಾತ್ರವಲ್ಲ, ಇಡೀ ಸೌರಾಷ್ಟ್ರ ಪ್ರದೇಶಕ್ಕೆ ಉತ್ತಮವಾದ ದಿನವಾಗಿದೆ ಎಂದರು. ಈ ಪ್ರದೇಶದಲ್ಲಿ ಚಂಡಮಾರುತ ಮತ್ತು ಪ್ರವಾಹದಂತಹ ಇತ್ತೀಚಿನ ನೈಸರ್ಗಿಕ ವಿಪತ್ತುಗಳಿಂದ ನಷ್ಟ ಅನುಭವಿಸಿದವರಿಗೆ ಅವರು ಗೌರವ ಸಲ್ಲಿಸಿದರು. ಸರ್ಕಾರ ಮತ್ತು ಜನತೆ ಒಟ್ಟಾಗಿ ಬಿಕ್ಕಟ್ಟನ್ನು ಎದುರಿಸಿದ್ದೇವೆ. ರಾಜ್ಯ ಸರ್ಕಾರದ ಸಹಾಯದಿಂದ ಸಂತ್ರಸ್ತರಿಗೆ ಪುನರ್ವಸತಿ ಕಲ್ಪಿಸಲಾಗುತ್ತಿದೆ ಎಂದು ಪ್ರಧಾನಿ ಭರವಸೆ ನೀಡಿದರು. ಕೇಂದ್ರ ಸರ್ಕಾರವು ರಾಜ್ಯ ಸರ್ಕಾರಕ್ಕೆ ಸಾಧ್ಯವಿರುವ ಎಲ್ಲ ಬೆಂಬಲವನ್ನು ನೀಡುತ್ತದೆ ಎಂದು ಅವರು ಭರವಸೆ ನೀಡಿದರು.

ಈಗ ರಾಜ್ ಕೋಟ್ ಸೌರಾಷ್ಟ್ರದ ಬೆಳವಣಿಗೆಯ ಪ್ರಮುಖ ಭಾಗವಾಗಿ ಗುರುತಿಸಲ್ಪಟ್ಟಿದೆ ಎಂದು ಪ್ರಧಾನಿಯವರು ಹೇಳಿದರು. ರಾಜ್ ಕೋಟ್ ನ ಉದ್ಯಮ, ಸಂಸ್ಕೃತಿ ಮತ್ತು ಪಾಕಪದ್ಧತಿಯ ಹೊರತಾಗಿ, ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಅಗತ್ಯವನ್ನು ಇಂದು ಪೂರೈಸಲಾಗಿದೆ ಎಂದು ಅವರು ಹೇಳಿದರು. ರಾಜ್ ಕೋಟ್ ತಮ್ಮನ್ನು ಮೊದಲ ಬಾರಿಗೆ ಶಾಸಕನಾಗಿ ಆಯ್ಕೆ ಮಾಡಿದ್ದನ್ನು ಸ್ಮರಿಸಿದ ಪ್ರಧಾನಿಯವರು, ಈ ನಗರವು ತಮಗೆ ಸಾಕಷ್ಟು ಕಲಿಸಿದೆ ಎಂದು ಉಲ್ಲೇಖಿಸಿದರು. "ರಾಜ್ ಕೋಟ್ ಗೆ ನಾನು ಸದಾ ಋಣಿಯಾಗಿರುತ್ತೇನೆ. ಇಲ್ಲಿ ಸೇವೆ ಸಲ್ಲಿಸಲು ನಾನು ಸದಾ ಸಿದ್ದನಿದ್ದೇನೆ" ಎಂದು ಅವರು ಹೇಳಿದರು.

ಇಂದು ಉದ್ಘಾಟಿಸಲಾದ ವಿಮಾನ ನಿಲ್ದಾಣವನ್ನು ಉಲ್ಲೇಖಿಸಿದ ಪ್ರಧಾನಮಂತ್ರಿಯವರು, ಪ್ರಯಾಣವನ್ನು ಸುಲಭಗೊಳಿಸುವುದರ ಹೊರತಾಗಿ, ಈ ಪ್ರದೇಶದ ಕೈಗಾರಿಕೆಗಳಿಗೆ ವಿಮಾನ ನಿಲ್ದಾಣದಿಂದ ಭಾರಿ ಲಾಭವಾಗಲಿದೆ ಎಂದು ತಿಳಿಸಿದರು. ಹೊಸ ಮುಖ್ಯಮಂತ್ರಿಯಾಗಿ ತಾವು ಕಂಡ 'ಮಿನಿ ಜಪಾನ್' ಕನಸನ್ನು ರಾಜ್ ಕೋಟ್ ಸಾಕಾರಗೊಳಿಸಿದೆ ಎಂದು ಪ್ರಧಾನಿಯವರು ಹೇಳಿದರು. ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ರೂಪದಲ್ಲಿ, ರಾಜ್ ಕೋಟ್ ಗೆ ಶಕ್ತಿ ಕೇಂದ್ರ ದೊರೆತಿದೆ, ಅದು ಹೊಸ ಶಕ್ತಿ ಮತ್ತು ಹುಮ್ಮಸ್ಸನ್ನು ನೀಡುತ್ತದೆ ಎಂದು ಅವರು ಹೇಳಿದರು. 

ಇಂದು ಹಲವಾರು ವಿವಿಧ ಯೋಜನೆಗಳನ್ನು ಉದ್ಘಾಟಿಸಿ ಸೌನಿ ಯೋಜನೆಯ ಬಗ್ಗೆ ಮಾತನಾಡಿದ ಪ್ರಧಾನಮಂತ್ರಿಯವರು, ಈ ಯೋಜನೆಗಳು ಪೂರ್ಣಗೊಳ್ಳುವುದರಿಂದ ಈ ಪ್ರದೇಶದ ಹಲವಾರು ಹಳ್ಳಿಗಳಿಗೆ ಕುಡಿಯಲು ಮತ್ತು ನೀರಾವರಿಗೆ ನೀರು ದೊರೆಯಲಿದೆ ಎಂದರು. ಇಂದಿನ ಅಭಿವೃದ್ಧಿ ಯೋಜನೆಗಳಿಗಾಗಿ ರಾಜ್ ಕೋಟ್ ಜನರನ್ನು ಪ್ರಧಾನಮಂತ್ರಿಯವರು ಅಭಿನಂದಿಸಿದರು.

 

ಕಳೆದ 9 ವರ್ಷಗಳಲ್ಲಿ, ಕೇಂದ್ರ ಸರ್ಕಾರವು ಪ್ರತಿಯೊಂದು ಸಾಮಾಜಿಕ ವರ್ಗ ಮತ್ತು ಪ್ರದೇಶದ ಜೀವನವನ್ನು ಸುಲಭಗೊಳಿಸುವ ನಿಟ್ಟಿನಲ್ಲಿ ಕೆಲಸ ಕೈಗೊಂಡಿದೆ ಎಂದು ಪ್ರಧಾನಿಯವರು ತಿಳಿಸಿದರು. "ನಾವು 'ಸುಶಾಸನ್' ಅಥವಾ ಉತ್ತಮ ಆಡಳಿತದ ಭರವಸೆಯನ್ನು ನೀಡಿದ್ದೇವೆ. ನಾವು ಇಂದು ಅದನ್ನು ಅನುಸರಿಸುತ್ತಿದ್ದೇವೆ" ಎಂದು ಪ್ರಧಾನಿ ಹೇಳಿದರು. "ಬಡವರು, ದಲಿತರು, ಬುಡಕಟ್ಟು ಜನಾಂಗದವರು ಅಥವಾ ಹಿಂದುಳಿದ ವರ್ಗವರು ಯಾರೇ ಇರಲಿ, ನಾವು ಯಾವಾಗಲೂ ಅವರ ಜೀವನವನ್ನು ಸುಧಾರಿಸುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿದ್ದೇವೆ" ಎಂದು ತಿಳಿಸಿದರು. ದೇಶದಲ್ಲಿ ಬಡತನದ ಮಟ್ಟವು ಅತ್ಯಂತ ವೇಗವಾಗಿ ಕುಸಿಯುತ್ತಿದೆ ಎಂದು ಒತ್ತಿಹೇಳಿದ ಪ್ರಧಾನಿ, ಕಳೆದ 5 ವರ್ಷಗಳಲ್ಲಿ 13.5 ಕೋಟಿ ನಾಗರಿಕರು ಬಡತನ ರೇಖೆಯಿಂದ ಹೊರಬಂದಿದ್ದಾರೆ ಎಂಬ ಇತ್ತೀಚಿನ ವರದಿಯನ್ನು ಉಲ್ಲೇಖಿಸಿದರು. ಈ ಜನರು ದೇಶದಲ್ಲಿ ನವ-ಮಧ್ಯಮ ವರ್ಗವಾಗಿ ಹೊರಹೊಮ್ಮುತ್ತಿದ್ದಾರೆ ಎಂದು ಹೇಳಿದರು. ಆದ್ದರಿಂದ, ನವ-ಮಧ್ಯಮ ಮತ್ತು ಮಧ್ಯಮ ವರ್ಗಗಳೆರಡನ್ನೂ ಮಧ್ಯಮ ವರ್ಗಕ್ಕೆ ಸೇರಿಸುವುದು ಸರ್ಕಾರದ ಆದ್ಯತೆಯಾಗಿದೆ ಎಂದು ಪ್ರಧಾನಿಯವರು ಹೇಳಿದರು.

ಸಂಪರ್ಕದ ಬಗ್ಗೆ ಮಧ್ಯಮ ವರ್ಗದವರ ದೀರ್ಘಕಾಲೀಯ ಬೇಡಿಕೆಯ ಬಗ್ಗೆ ಪ್ರಧಾನಿಯವರು ಮಾತನಾಡಿ, ಸಂಪರ್ಕವನ್ನು ಸುಧಾರಿಸಲು ಕಳೆದ 9 ವರ್ಷಗಳಲ್ಲಿ ಕೈಗೊಂಡ ಕ್ರಮಗಳನ್ನು ಅವರು ಮನವರಿಕೆ ಮಾಡಿಕೊಟ್ಟರು. 2014ರಲ್ಲಿ, ಕೇವಲ 4 ನಗರಗಳು ಮೆಟ್ರೋ ಜಾಲವನ್ನು ಹೊಂದಿದ್ದವು, ಇಂದು ಮೆಟ್ರೋ ಜಾಲವು ಭಾರತದ 20 ಕ್ಕೂ ಹೆಚ್ಚು ನಗರಗಳಿಗೆ ವ್ಯಾಪಿಸಿದೆ. ವಂದೇ ಭಾರತ್ ರೈಲಿನಂತಹ ಆಧುನಿಕ ರೈಲುಗಳು 25 ಮಾರ್ಗಗಳಲ್ಲಿ ಚಲಿಸುತ್ತಿವೆ. 2014ರಲ್ಲಿ 70ರಷ್ಟಿದ್ದ ವಿಮಾನ ನಿಲ್ದಾಣಗಳು ಈ ಅವಧಿಯಲ್ಲಿ ದ್ವಿಗುಣಗೊಂಡಿದೆ. "ವಿಮಾನ ಸೇವೆಗಳ ವಿಸ್ತರಣೆಯು ಭಾರತದ ವಾಯುಯಾನ ಕ್ಷೇತ್ರಕ್ಕೆ ಹೊಸ ಪರಾಕಾಷ್ಠೆಯನ್ನು ನೀಡಿದೆ. ಭಾರತೀಯ ಕಂಪನಿಗಳು ಕೋಟ್ಯಂತರ ರೂಪಾಯಿ ಮೌಲ್ಯದ ವಿಮಾನಗಳನ್ನು ಖರೀದಿಸುತ್ತಿವೆ." ವಿಮಾನಗಳನ್ನು ನಿರ್ಮಿಸುವ ದಿಕ್ಕಿನಲ್ಲಿ ಗುಜರಾತ್ ಮುಂದುವರಿಯುತ್ತಿದೆ ಎಂದು ಅವರು ಮಾಹಿತಿ ನೀಡಿದರು.

 

"ಸುಗಮ ಜೀವನ ಮತ್ತು ಜನತೆಯ ಜೀವನದ ಗುಣಮಟ್ಟವು ಸರ್ಕಾರದ ಪ್ರಮುಖ ಆದ್ಯತೆಗಳಲ್ಲಿ ಒಂದಾಗಿದೆ" ಎಂದು ಪ್ರಧಾನಮಂತ್ರಿಯವರು ಹೇಳಿದರು. ಈ ಹಿಂದೆ ಜನರು ಅನುಭವಿಸಿದ ಅನಾನುಕೂಲತೆಗಳನ್ನು ಸ್ಮರಿಸಿದ ಪ್ರಧಾನಮಂತ್ರಿಯವರು, ಆಸ್ಪತ್ರೆಗಳು ಮತ್ತು ಯುಟಿಲಿಟಿ ಪಾವತಿ ಕೇಂದ್ರಗಳಲ್ಲಿ ಉದ್ದನೆಯ ಸರತಿ ಸಾಲುಗಳು, ವಿಮೆ ಮತ್ತು ಪಿಂಚಣಿ ಸಂಬಂಧಿತ ಸಮಸ್ಯೆಗಳು ಮತ್ತು ತೆರಿಗೆ ರಿಟರ್ನ್ಸ್ ಸಲ್ಲಿಸುವಲ್ಲಿನ ತೊಂದರೆಗಳನ್ನು ಉಲ್ಲೇಖಿಸಿದರು. ಈ ಎಲ್ಲಾ ಸಮಸ್ಯೆಗಳನ್ನು ಡಿಜಿಟಲ್ ಇಂಡಿಯಾ ಅಭಿಯಾನದ ಮೂಲಕ ನಿವಾರಿಸಲಾಗಿದೆ ಎಂದು ಅವರು ಹೇಳಿದರು. ತೆರಿಗೆ ರಿಟರ್ನ್ಸ್ ಸಲ್ಲಿಸಲು ಮೊಬೈಲ್ ಬ್ಯಾಂಕಿಂಗ್ ಮತ್ತು ಆನ್ ಲೈನ್ ಫೈಲಿಂಗ್ ಸುಲಭತೆಯನ್ನು ಪ್ರಸ್ತಾಪಿಸಿದ ಅವರು, ಅಲ್ಪಾವಧಿಯಲ್ಲಿ ರಿಟರ್ನ್ ಗಳನ್ನು ನೇರವಾಗಿ ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸಲಾಗುತ್ತದೆ ಎಂಬ ವಿಚಾರವನ್ನು ಒತ್ತಿ ಹೇಳಿದರು.

ವಸತಿಯ ಮಹತ್ವದ ಬಗ್ಗೆ ಮಾತನಾಡಿದ ಪ್ರಧಾನಮಂತ್ರಿಯವರು, "ನಾವು ಬಡವರ ವಸತಿಯ ಅಗತ್ಯಗಳನ್ನು ಪೂರೈಸಿದ್ದೇವೆ, ಮಧ್ಯಮ ವರ್ಗದವರ ಸ್ವಂತ ಮನೆಯ ಕನಸನ್ನು ಈಡೇರಿಸಿದ್ದೇವೆ" ಎಂದು ಹೇಳಿದರು. ಮಧ್ಯಮ ವರ್ಗದವರಿಗೆ ಪಿಎಂ ಆವಾಸ್ ಯೋಜನೆಯಡಿ 18 ಲಕ್ಷ ರೂ.ಗಳವರೆಗೆ ವಿಶೇಷ ಸಬ್ಸಿಡಿಯ ನೀಡಿಕೆಯನ್ನು ಅವರು ಉಲ್ಲೇಖಿಸಿದರು. ಗುಜರಾತ್ ನ 60 ಸಾವಿರ ಕುಟುಂಬಗಳು ಸೇರಿದಂತೆ 6 ಲಕ್ಷಕ್ಕೂ ಹೆಚ್ಚು ಕುಟುಂಬಗಳು ಇದರ ಪ್ರಯೋಜನ ಪಡೆದಿವೆ ಎಂದು ಅವರು ಮಾಹಿತಿ ನೀಡಿದರು.

ವಸತಿಯ ಹೆಸರಿನಲ್ಲಿ ನಡೆಯುತ್ತಿದ್ದ ವಂಚನೆಯ ಬಗ್ಗೆ ಪ್ರಸ್ತಾಪಿಸಿದ ಪ್ರಧಾನಮಂತ್ರಿಯವರು, ಕಾನೂನಿನ ಅನುಪಸ್ಥಿತಿಯಿಂದಾಗಿ ಹಿಂದಿನ ಸರ್ಕಾರಗಳ ಅವಧಿಯಲ್ಲಿ ವಸತಿಯ ಹಕ್ಕುದಾರರಿಗೆ ಮನೆಯ ಸ್ವಾಧೀನತ್ವವನ್ನು ಪಡೆಯಲಾಗಿರಲಿಲ್ಲ ಎಂದು ಉಲ್ಲೇಖಿಸಿದರು. ಪ್ರಸ್ತುತ ಸರ್ಕಾರವು ರೇರಾ ಕಾನೂನನ್ನು ಜಾರಿಗೆ ತಂದು ಜನರ ಹಿತಾಸಕ್ತಿಗಳನ್ನು ರಕ್ಷಿಸಿದೆ ಎಂದು ಅವರು ಹೇಳಿದರು. "ಇಂದು, ರೇರಾ ಕಾನೂನು ಲಕ್ಷಾಂತರ ಜನರ ಹಣ ಲೂಟಿಯಾಗುವುದನ್ನು ತಡೆಯುತ್ತಿದೆ" ಎಂದು ಅವರು ಹೇಳಿದರು.

 

ಈ ಹಿಂದೆ ಹಣದುಬ್ಬರ ದರ ಶೇ.10ನ್ನು ತಲುಪಿತ್ತು ಎಂದು ಪ್ರಧಾನಿ ಹೇಳಿದರು. ಸಾಂಕ್ರಾಮಿಕ ರೋಗ ಮತ್ತು ಯುದ್ಧದ ಹೊರತಾಗಿಯೂ ಪ್ರಸ್ತುತ ಸರ್ಕಾರ ಹಣದುಬ್ಬರವನ್ನು ನಿಯಂತ್ರಿಸಿದೆ ಎಂದು ಅವರು ಹೇಳಿದರು. "ಇಂದು, ನಮ್ಮ ನೆರೆಯ ದೇಶಗಳಲ್ಲಿ ಹಣದುಬ್ಬರವು ಶೇಕಡಾ 25-30ರ ದರದಲ್ಲಿ ಹೆಚ್ಚುತ್ತಿದೆ. ಆದರೆ ಭಾರತದ ಸ್ಥಿತಿ ಹಾಗಿಲ್ಲ. ನಾವು ಹಣದುಬ್ಬರವನ್ನು ಪೂರ್ಣ ಸೂಕ್ಷ್ಮತೆಯಿಂದ ನಿಯಂತ್ರಿಸಲು ಪ್ರಯತ್ನಿಸುತ್ತಿದ್ದೇವೆ. ಅದನ್ನು ಭವಿಷ್ಯದಲ್ಲಿಯೂ ಮುಂದುವರಿಸುತ್ತೇವೆ" ಎಂದು ಅವರು ಹೇಳಿದರು.

ಬಡವರು ಮತ್ತು ಮಧ್ಯಮ ವರ್ಗದವರ ವೆಚ್ಚಗಳನ್ನು ಉಳಿಸುವುದರ ಜೊತೆಗೆ, ಇಂದಿನ ಸರ್ಕಾರವು ಮಧ್ಯಮ ವರ್ಗದವರಿಗೆ ಗರಿಷ್ಠ ಉಳಿತಾಯವನ್ನು ಖಾತ್ರಿಪಡಿಸುತ್ತಿದೆ ಎಂದು ಪ್ರಧಾನಿ ಒತ್ತಿ ಹೇಳಿದರು. 9 ವರ್ಷಗಳ ಹಿಂದೆ ವಾರ್ಷಿಕ 2 ಲಕ್ಷ ರೂ.ವರೆಗಿನ ಆದಾಯಕ್ಕೆ ತೆರಿಗೆ ವಿಧಿಸಲಾಗುತ್ತಿತ್ತು, ಆದರೆ ಇಂದು 7 ಲಕ್ಷ ರೂ.ವರೆಗಿನ ಆದಾಯ ಹೊಂದಿರುವವರು ಯಾವುದೇ ತೆರಿಗೆಯನ್ನು ಪಾವತಿಸಬೇಕಾಗಿಲ್ಲ ಎಂದು ಹೇಳಿದರು. "ಇಂದು 7 ಲಕ್ಷ ರೂ.ಗಳ ಆದಾಯದ ಮೇಲೆ ಯಾವುದೇ ತೆರಿಗೆ ಇಲ್ಲ" ಎಂದು ಹೇಳಿದ ಪ್ರಧಾನಮಂತ್ರಿಯವರು, ಇದರಿಂದಾಗಿ ನಗರಗಳಲ್ಲಿ ವಾಸಿಸುವ ಮಧ್ಯಮ ವರ್ಗದ ಕುಟುಂಬಗಳಿಗೆ ಪ್ರತಿವರ್ಷ ಸಾವಿರಾರು ರೂಪಾಯಿಗಳು ಉಳಿಯುತ್ತಿದೆ ಎಂದು ಹೇಳಿದರು. ಸಣ್ಣ ಉಳಿತಾಯಗಳ ಮೇಲೆ ಹೆಚ್ಚಿನ ಬಡ್ಡಿ ಪಾವತಿ ಮತ್ತು ಇಪಿಎಫ್ಒಗೆ ಶೇಕಡಾ 8.25ರಷ್ಟು ಬಡ್ಡಿಯನ್ನು ನಿಗದಿಪಡಿಸಲಾಗಿದೆ ಎಂದು ಅವರು ಉಲ್ಲೇಖಿಸಿದರು.

ಇಂದಿನ ಸರ್ಕಾರದ ನೀತಿಗಳು ನಾಗರಿಕರಿಗೆ ಹೇಗೆ ಹಣವನ್ನು ಉಳಿಸುತ್ತಿವೆ ಎಂಬುದನ್ನು ವಿವರಿಸಲು ಮೊಬೈಲ್ ಫೋನ್ ಬಳಕೆಯ ವೆಚ್ಚದ ಉದಾಹರಣೆಯನ್ನು ಪ್ರಧಾನಿಯವರು ನೀಡಿದರು. 2014ರಲ್ಲಿ 1 ಜಿಬಿ ಡೇಟಾದ ಬೆಲೆ 300 ರೂ. ಆಗಿತ್ತು. ಇಂದು, ಪ್ರತಿ ವ್ಯಕ್ತಿಯು ತಿಂಗಳಿಗೆ ಸರಾಸರಿ 20 ಜಿಬಿ ಡೇಟಾವನ್ನು ಬಳಸುತ್ತಾರೆ. ಇದು ಸರಾಸರಿ ಪ್ರತಿ ನಾಗರಿಕರಿಗೆ ತಿಂಗಳಿಗೆ 5000 ರೂ.ಗಿಂತ ಹೆಚ್ಚು ಉಳಿತಾಯವಾಗಿದೆ ಎಂದು ಅವರು ಹೇಳಿದರು.

 

ಜನೌಷಧಿ ಕೇಂದ್ರಗಳು ಅಗ್ಗದ ಬೆಲೆಯಲ್ಲಿ ಔಷಧಿಗಳನ್ನು ನೀಡುತ್ತಿರುವ ಬಗ್ಗೆ ಮಾತನಾಡಿದ ಪ್ರಧಾನಮಂತ್ರಿಯವರು, ನಿಯಮಿತವಾಗಿ ಔಷಧಿಗಳನ್ನು ತೆಗೆದುಕೊಳ್ಳಬೇಕಾದವರಿಗೆ ಇದು ವರದಾನವಾಗಿದೆ. ಈ ಕೇಂದ್ರಗಳು ಬಡವರು ಮತ್ತು ಮಧ್ಯಮ ವರ್ಗದವರಿಗೆ ಸುಮಾರು 20,000 ಕೋಟಿ ರೂ.ಗಳನ್ನು ಉಳಿಸಿದೆ ಎಂದು ತಿಳಿಸಿದರು. "ಬಡವರು ಮತ್ತು ಮಧ್ಯಮ ವರ್ಗದವರಿಗೆ ಸೂಕ್ಷ್ಮ ಸರ್ಕಾರವು ಈ ರೀತಿ ಕಾರ್ಯನಿರ್ವಹಿಸುತ್ತದೆ"  ಎಂದು ಅವರು ಹೇಳಿದರು.

ಗುಜರಾತ್ ಮತ್ತು ಸೌರಾಷ್ಟ್ರದ ಅಭಿವೃದ್ಧಿಗೆ ಸರ್ಕಾರ ಸಂಪೂರ್ಣ ಸಂವೇದನಾಶೀಲತೆಯಿಂದ ಕೆಲಸ ಮಾಡುತ್ತಿದೆ ಎಂದು ಪ್ರಧಾನಮಂತ್ರಿಯವರು ಹೇಳಿದರು. ಸೌನಿ ಯೋಜನೆಯು ಈ ಪ್ರದೇಶದ ನೀರಿನ ಅವಶ್ಯಕತೆಗೆ ತಂದ ಬದಲಾವಣೆಯನ್ನು ಅವರು ಉಲ್ಲೇಖಿಸಿದರು. "ಸೌರಾಷ್ಟ್ರದಲ್ಲಿ ಡಜನ್ ಗಟ್ಟಲೆ ಅಣೆಕಟ್ಟುಗಳು ಮತ್ತು ಸಾವಿರಾರು ಚೆಕ್ ಡ್ಯಾನ್ ಗಳು ಇಂದು ಜನತೆಯ ನೀರಿನ ಮೂಲಗಳಾಗಿವೆ. 'ಹರ್ ಘರ್ ಜಲ್' ಯೋಜನೆಯ ಅಡಿಯಲ್ಲಿ ಗುಜರಾತ್ ನ ಕೋಟ್ಯಂತರ ಕುಟುಂಬಗಳು ಈಗ ನಲ್ಲಿ ನೀರನ್ನು ಪಡೆಯುತ್ತಿವೆ" ಎಂದು ಅವರು ಹೇಳಿದರು.

ತಮ್ಮ ಭಾಷಣವನ್ನು ಮುಕ್ತಾಯಗೊಳಿಸಿದ ಪ್ರಧಾನಮಂತ್ರಿಯವರು, ಕಳೆದ 9 ವರ್ಷಗಳಲ್ಲಿ ಅಭಿವೃದ್ಧಿಪಡಿಸಲಾದ ಈ ಮಾದರಿಯ ಆಡಳಿತವು ಸಮಾಜದ ಪ್ರತಿಯೊಂದು ವರ್ಗದ ಜನತೆಯ ಅಗತ್ಯತೆಗಳು ಮತ್ತು ಆಕಾಂಕ್ಷೆಗಳಿಗೆ ಬದ್ಧವಾಗಿದೆ ಎಂದರು. "ವಿಕಸಿತ ಭಾರತವನ್ನು ನಿರ್ಮಿಸುವಲ್ಲಿ ಇದು ನಮ್ಮ ಮಾರ್ಗವಾಗಿದೆ. ಇದೇ ಹಾದಿಯಲ್ಲಿ ನಡೆಯುವ ಮೂಲಕ ನಾವು ಅಮೃತಕಾಲದ ಸಂಕಲ್ಪಗಳನ್ನು ಪೂರೈಸುತ್ತೇವೆ" ಎಂದು ಪ್ರಧಾನಿಯವರು ತಮ್ಮ ಭಾಷಣವನ್ನು ಮುಕ್ತಾಯಗೊಳಿಸಿದರು.

 

ಗುಜರಾತ್ ರಾಜ್ಯದ ಮುಖ್ಯಮಂತ್ರಿ ಶ್ರೀ ಭೂಪೇಂದ್ರ ಪಟೇಲ್, ಕೇಂದ್ರ ನಾಗರಿಕ ವಿಮಾನಯಾನ ಸಚಿವ ಶ್ರೀ ಜ್ಯೋತಿರಾದಿತ್ಯ ಸಿಂಧಿಯಾ, ಸಂಸತ್ ಸದಸ್ಯ ಶ್ರೀ ಸಿ. ಆರ್. ಪಾಟೀಲ್, ಗುಜರಾತ್ ಸರ್ಕಾರ ಮತ್ತು ಗುಜರಾತ್ ವಿಧಾನಸಭೆಯ ಸಚಿವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಹಿನ್ನೆಲೆ:
ರಾಜ್ ಕೋಟ್ ನಲ್ಲಿ ಹೊಸ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಅಭಿವೃದ್ಧಿಯೊಂದಿಗೆ ದೇಶಾದ್ಯಂತ ವಾಯು ಸಂಪರ್ಕವನ್ನು ಹೆಚ್ಚಿಸುವ ಪ್ರಧಾನಮಂತ್ರಿಯವರ ದೃಷ್ಟಿಕೋನಕ್ಕೆ ಉತ್ತೇಜನ ದೊರೆತಿದೆ. ಗ್ರೀನ್ ಫೀಲ್ಡ್ ವಿಮಾನ ನಿಲ್ದಾಣವನ್ನು ಒಟ್ಟು 2500 ಎಕರೆ ಪ್ರದೇಶದಲ್ಲಿ 1400 ಕೋಟಿ ರೂ.ಗಿಂತ ಹೆಚ್ಚು ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗಿದೆ. ಈ ಹೊಸ ವಿಮಾನ ನಿಲ್ದಾಣವು ಆಧುನಿಕ ತಂತ್ರಜ್ಞಾನ ಮತ್ತು ಸುಸ್ಥಿರ ವೈಶಿಷ್ಟ್ಯಗಳ ಸಂಯೋಜನೆಯನ್ನು ಹೊಂದಿದೆ. ಟರ್ಮಿನಲ್ ಕಟ್ಟಡವು ಗ್ರಿಹ-4 ಅನುಸರಣೆಯ (GRIHA, ಗ್ರೀನ್ ರೇಟಿಂಗ್ ಫಾರ್ ಇಂಟಿಗ್ರೇಟೆಡ್ ಹ್ಯಾಬಿಟೇಟ್ ಅಸೆಸ್ಮೆಂಟ್) ಮತ್ತು ಡಬಲ್ ಇನ್ಸುಲೇಟೆಡ್ ರೂಫಿಂಗ್ ಸಿಸ್ಟಮ್, ಸ್ಕೈಲೈಟ್ ಗಳು, ಎಲ್ಇಡಿ ಲೈಟಿಂಗ್, ಲೋ ಹೀಟ್ ಗೇನ್ ಗ್ಲೇಸಿಂಗ್ ಮುಂತಾದ ವಿವಿಧ ಸುಸ್ಥಿರ ವೈಶಿಷ್ಟ್ಯಗಳನ್ನು ಹೊಂದಿದ ಹೊಸ ಟರ್ಮಿನಲ್ ಕಟ್ಟಡವನ್ನು ((NITB) ಹೊಂದಿದೆ.

ರಾಜ್ ಕೋಟ್ ನ ಸಾಂಸ್ಕೃತಿಕ ಅಭಿವೃದ್ದಿಯು ವಿಮಾನ ನಿಲ್ದಾಣದ ಟರ್ಮಿನಲ್ ನ ವಿನ್ಯಾಸಕ್ಕೆ ಸ್ಫೂರ್ತಿ ನೀಡಿದೆ. ಲಿಪ್ಪಾನ್ ಕಲೆಯಿಂದ ದಾಂಡಿಯಾ ನೃತ್ಯದವರೆಗೆ ಎಲ್ಲಾ ಕಲಾ ಪ್ರಕಾರಗಳನ್ನು ಕ್ರಿಯಾತ್ಮಕವಾಗಿ ಬಾಹ್ಯ ಮುಂಭಾಗ ಮತ್ತು ಭವ್ಯವಾದ ಒಳಾಂಗಣಗಳಲ್ಲಿ ಚಿತ್ರಿಸಲಾಗಿದೆ. ಈ ವಿಮಾನ ನಿಲ್ದಾಣವು ಸ್ಥಳೀಯ ವಾಸ್ತುಶಿಲ್ಪದ ಪರಂಪರೆಯ ಸಾರಾಂಶವಾದಿದೆ. ಗುಜರಾತ್ ನ ಕಾಥೇವಾಡ ಪ್ರದೇಶದ ಕಲೆ ಮತ್ತು ನೃತ್ಯ ಪ್ರಕಾರಗಳ ಸಾಂಸ್ಕೃತಿಕ ವೈಭವವನ್ನು ಇದು ಪ್ರತಿಬಿಂಬಿಸುತ್ತದೆ.  ರಾಜ್ ಕೋಟ್ ನ ಹೊಸ ವಿಮಾನ ನಿಲ್ದಾಣವು ರಾಜ್ ಕೋಟ್ ನ ಸ್ಥಳೀಯ ಆಟೋಮೊಬೈಲ್ ಉದ್ಯಮದ ಅಭಿವೃದ್ಧಿಗೆ ಕೊಡುಗೆ ನೀಡುವುದಲ್ಲದೆ, ಗುಜರಾತ್ ನಾದ್ಯಂತ ವ್ಯಾಪಾರ, ಪ್ರವಾಸೋದ್ಯಮ, ಶಿಕ್ಷಣ ಮತ್ತು ಕೈಗಾರಿಕಾ ಕ್ಷೇತ್ರಗಳನ್ನು ಉತ್ತೇಜಿಸುತ್ತದೆ.

 

ಪ್ರಧಾನಮಂತ್ರಿಯವರು 860 ಕೋಟಿ ರೂ.ಗೂ ಅಧಿಕ ಮೌಲ್ಯದ ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿದರು. ಸೌನಿ ಯೋಜನೆಯ ಲಿಂಕ್ 3ರ ಪ್ಯಾಕೇಜ್ 8 ಮತ್ತು 9 ನೀರಾವರಿ ಸೌಲಭ್ಯಗಳನ್ನು ಮತ್ತಷ್ಟು ಬಲಪಡಿಸಲು ಮತ್ತು ಸೌರಾಷ್ಟ್ರ ಪ್ರದೇಶಕ್ಕೆ ಕುಡಿಯುವ ನೀರಿನ ಪ್ರಯೋಜನಗಳನ್ನು ಒದಗಿಸಲು ಸಹಾಯ ಮಾಡುತ್ತದೆ. ದ್ವಾರಕಾ ಗ್ರಾಮೀಣ ನೀರು ಸರಬರಾಜು ಮತ್ತು ನೈರ್ಮಲ್ಯವನ್ನು ಉತ್ತಮೀಕರಿಸುವುದರಿಂದ ಪೈಪ್ ಲೈನ್ ಮೂಲಕ ಹಳ್ಳಿಗಳಿಗೆ ಸಾಕಷ್ಟು ಮತ್ತು ಕುಡಿಯುವ ನೀರನ್ನು ಒದಗಿಸಲು ಸಹಾಯ ಮಾಡುತ್ತದೆ. ಈಗ ಕೈಗೊಳ್ಳಲಾಗುತ್ತಿರುವ ಇತರ ಯೋಜನೆಗಳಲ್ಲಿ ಉಪರ್ಕೋಟ್ ಕೋಟೆಯ ಸಂರಕ್ಷಣೆ, ಪುನಃಸ್ಥಾಪನೆ ಮತ್ತು ಅಭಿವೃದ್ಧಿಯ ಹಂತ 1 ಮತ್ತು 2; ನೀರು ಸಂಸ್ಕರಣಾ ಘಟಕ ನಿರ್ಮಾಣ; ಒಳಚರಂಡಿ ಸಂಸ್ಕರಣಾ ಘಟಕ; ಫ್ಲೈಓವರ್ ಸೇತುವೆ, ಇತ್ಯಾದಿಗಳು ಸೇರಿವೆ.

 

ಭಾಷಣದ ಪೂರ್ಣ ಪಠ್ಯವನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
Safran’s Hyderabad engine MRO starts operations, targets 300 LEAP engines annually

Media Coverage

Safran’s Hyderabad engine MRO starts operations, targets 300 LEAP engines annually
NM on the go

Nm on the go

Always be the first to hear from the PM. Get the App Now!
...
The government stands firmly with the youth in the fight against drugs: PM Modi
August 02, 2026


नमस्‍कार!

आज हम सभी देशवासी एक महान और महत्वपूर्ण संकल्प के लिए एकजुट हुए हैं। इस संकल्प को लेकर, इसक कार्यक्रम से जुड़े सभी पूज्य संतजन, अलग-अलग राज्यों का प्रतिनिधित्व कर रहे सभी राज्यपाल, सभी मुख्यमंत्री, अन्‍य सभी जनप्रतिनिधिगण, 28 हजार से अधिक स्थानों से जुड़े एक करोड़ से युवा साथी, मैं आज इस शुभ घड़ी पर, शुभ संकल्प के लिए करोड़ों-करोड़ों नौजवानों का विशेष रूप से अभिनंदन करता हूं। आज हम सभी जिस अभियान के साक्षी बन रहे हैं, वह अभियान व्यक्ति के लिए हैं, परिवार के लिए हैं, समाज के लिए भी है और सबसे बड़ी बात है, यह राष्‍ट्र के लिए है।

साथियों,

विकसित भारत संकल्प अभियान के लिए ‘नशा मुक्त युवा’ इस मूवमेंट का नाम ही इसके संकल्प को स्पष्ट करता है, क्योंकि आज जब देश ने विकसित भारत का लक्ष्य तय किया है, तो इसके लिए आवश्यक है, देश का युवा तन से स्वस्थ हो, मन से स्वस्थ हो, आत्‍मविश्‍वास से भरपूर हो और ड्रग्स जैसी घातक आदत से हमेशा-हमेशा दूर ही रहे, दूर हो। यही इस अभियान का उद्देश्य है। इसलिए हम सबको यह संकल्प लेना है, हमारे युवा नशे और ड्रग्स के खतरों को समझे, हर तरह से जागरूक रहे और उससे दूर रहें और इस संकल्प में अब ‘राष्‍ट्रीय नशा मुक्त युवा’ अभियान की बड़ी भूमिका है।

साथियों,

काशी का सांसद होने के नाते मुझे खुशी है कि यह अभियान का पायलट प्रोजेक्ट के तौर पर पिछले साल काशी की पवित्र धरती से शुरू हुआ था। इसलिए वैज्ञानिक स्‍पष्‍टता के साथ-साथ इसमें आध्यात्मिक ऊर्जा भी है, संतों के आशीर्वाद भी हैं और महान सांस्कृतिक विरासत भी हैं। इसमें वह सांस्कृतिक समर्पण भी है, जिसने सदियों से नशे को खारिज किया है। यही वजह है, देश के 125 से अधिक आध्यात्मिक संगठन करोड़ों-करोड़ों देशवासियों के हित के लिए आज हमारे साथ जुड़ चुके हैं। सामाजिक संगठनों ने, NGOs ने इस दिशा में संकल्प लिया है। सबने मिलकर ‘काशी डिक्लेरेशन’ के जरिए रोडमैप तैयार किया है और आज हम देख रहे हैं, काशी से उठा वो कल्याणकारी विचार अब यह एक नेशनल प्रोजेक्ट्स बन गया है। आज से देशभर में ‘नशा मुक्त युवा’ अभियान आरंभ हो रहा है।

साथियों,

कुछ काम ऐसे होते हैं, जो व्यक्तिगत रूप से कोई प्रयास करे, तो कभी-कभी निराश हो जाता है, थकान महसूस करता है, लंबी दूरी चलने में मन तैयार नहीं होता है, लेकिन जब सामूहिक अभियान बन जाता है, कंधे से कंधा मिलाकर करोड़ों लोग चल पड़ते हैं, तो ऐसे सभी जो व्यक्तिगत रूप से अपने आप कुछ नहीं कर पाते हैं, उनको भी एक नई ऊर्जा मिल जाती है। सामूहिकता की एक ताकत होती है और आज उस ताकत को लेकर के यह अभियान हर युवा मन को छूने वाला है। थोड़ी देर पहले देश के लाखों युवाओं ने नशा मुक्ति की शपथ ली है। आपने अपने जीवन को नशे से दूर रखने का संकल्प लिया है। आपने अपने स्कूल, अपने कॉलेज और अपने समाज में नशा मुक्ति का संदेश पहुंचाने का संकल्प लिया है।

साथियों,

आज लिया गया यह संकल्प आने वाले 100 सप्ताह तक लगातार ऐसे ही आगे बढ़ेगा। हर रविवार, कला, संस्‍कृति, स्पोर्ट्स, मेडिटेशन, आध्यात्म और सेवा से जुड़ी गतिविधियां होंगी। नशा मुक्ति का संदेश नए लोगों तक पहुंचेगा। आने वाले 100 रविवार नशा मुक्त भारत की दिशा में 100 मजबूत कदम होंगे, हंड्रेड मजबूत स्‍टेप्‍स।

साथियों,

आज हजारों स्कूलों, कॉलेजों और यूनिवर्सिटीज़ के लाखों विद्यार्थी इस कार्यक्रम से ऑनलाइन जुड़े हैं। माई भारत के वॉलंटियर्स भी लाखों की तादाद में आज इससे जुड़े हैं। मेरे एनएसएस के नौजवान भी आज हमारे साथ शामिल हैं। देश के अलग-अलग क्षेत्रों से, अलग-अलग संस्‍थानों से, अलग-अलग बैकग्राउंड के एक करोड़ से अधिक युवा आज एक साथ हैं। मेरा आप सभी से आग्रह है, आप सब इस बड़े मोवमेंट के लीडर हैं। आपने मेरे इस विश्वास को और मजबूत किया है कि भारत का युवा कितना जागरूक है, कितना समझदार है और अपने कर्तव्यों के प्रति कितना गंभीर है। मैं आप सभी को इस अभियान के लिए अनेक-अनेक शुभकामनाएं देता हूं।

मेरे युवा साथियों,

आप भारत की अमृत पीढ़ी हैं। आप अगले 20-25 वर्षों में अपने जीवन को भी दिशा देंगे और आप ही 2047 में देश को विकसित भारत की मंजिल तक लेकर जाएंगे और उसको शिखर पर आप ही बैठे होंगे, उसका सारा रसपान करने का अवसर आप ही को मिलने वाला है। देश को आपकी ऊर्जा, आपकी कल्पनाशक्ति और आपके टैलेंट की जरूरत है। इसलिए, देश के लिए और अपने जीवन के लिए, खुद को नशा मुक्त रखना बहुत जरूरी है। नशा फोकस को भटकाता है, और धीरे-धीरे युवा को उसके अपने सपनों से दूर ले जाता है। अभी जिन नौजवानों ने नाट्य मंचन किया, बहुत कम समय में, बहुत अच्छे तरीके से नाट्य मंचन में उन्होंने समस्या भी बताई, समस्या के कारण पैदा हुए संकट भी बताए और बाहर निकलने के सामूहिक प्रयत्न का रास्ता भी दिखाया। नाट्य मंचन छोटा था, लेकिन जैसा उन्होंने कहा, आओ हम नाटक देखें! यह नाटक नहीं था, यह हम लोगों के लिए एक बहुत बड़ा संदेश था। हमें जगा रहा था, हमें जूझने के लिए प्रेरित कर रहा था।

साथियों,

आजकल हम देखते हैं, आज के युवा स्‍टार्टअप्‍स की दुनिया में छाए हैं, AI को लीड कर रहे हैं, Sports में तिरंगा लहरा रहे हैं, स्‍पेस से लेकर Science तक नए कीर्तिमान बना रहे हैं। लेकिन साथियों, जब कोई युवा, अगर ड्रग्स के एडिक्‍शन में फंस जाए, तो केवल एक युवा नहीं हारता, एक सपना हार जाता है, एक सपने की बाल मृत्यु हो जाती है, एक परिवार हार जाता है, पूरा का पूरा परिवार टूट जाता है, समाज से भी नफरत का शिकार बन जाता है। नशा केवल शरीर को नुकसान नहीं पहुंचाता, नशा एक माँ की मुस्कान छीन लेता है। नशा एक पिता के सपनों को चूर-चूर कर देता है। एक बहन की राखी की उम्मीद को कमजोर कर देता है। एक छोटे भाई का आदर्श छीन लेता है। घर के बुजुर्ग हर दिन इस दर्द को जीते हैं कि उनका अपना बच्चा धीरे-धीरे खुद को खो रहा है, खुद को गला रहा है, तिल-तिल गल रहा है, आंखों के सामने उसे बर्बाद होते देख रहे हैं और जब परिवार में, समाज में ऐसा होता है और कहीं न कहीं, राष्ट्र की शक्ति भी कमजोर पड़ जाती है और इसलिए दुश्मन देश भी षड्यंत्र करके हमारे देश के युवाओं को इस नशे की लत में खींचने के लिए कोई कोशिश बाकी नहीं रखते हैं। ड्रग्स सप्लाई कर-करके कमाई करना और हमारे जैसे देश को तबाह करना, यह भी उनकी आतंकी साजिश का हिस्सा होता है और इसलिए हमें हर एक युवा को नशे के चंगुल में फंसने से बचाना है।

साथियों,

नशा मुक्त रहकर आपको अपने पोटेंशियल को प्रोटेक्ट करना है! आपको ध्यान रखना है, ड्रग्स कुछ समय के लिए 'High' देता है। लेकिन आपके करियर और फैमिली लाइफ को 'Low' कर देता है। हमें नशे को किसी भी तरह की स्वीकार्यता नहीं देनी है।

साथियों,

हमारे समाज में भी हमेशा नशे को एक बुराई के रूप में देखा है। हमारे संतों ने, गुरुओं ने हमें इससे बचने के लिए चेताया। श्री गुरु ग्रंथ साहिब में भी कहा गया है- "जितु पीतै मति दूरि होइ बरलु पवै विचि आइ। आपणा पराइआ न पछाणई खसमहु धके खाइ॥'' अर्थात, जिस पदार्थ के सेवन से बुद्धि और विवेक साथ छोड़ दें, इंसान अपने और पराए की पहचान भूल जाए, ऐसा नशा उसे पतन की ओर ले जाता है।

साथियों,

हमारी संस्कृति में बचाव के लिए चेतावनी भी दी गईं है और नशे की आदत लगने पर उससे निकलने के रास्ते भी बताए गए हैं। समाज का सहयोग, योग और ध्यान की ताकत, यह नशे के खिलाफ हमारे अंतर्मन को ताकत देते हैं। और आज तो हमारे पास नशा छोड़ने के लिए rehabilitation center जैसी सुविधाएं भी हैं। इसलिए, अगर कोई युवा गलती से नशे में फंस भी गया है, तो इसका ये मतलब बिल्कुल नहीं है कि उसके सारे रास्ते बंद हो गए हैं। हमें हमेशा इस बात का ध्यान रखना है, घर का कोई बच्चा अगर नशे का शिकार बन गया है, तो इसे सामाजिक प्रतिष्ठा की आड़ में छिपाएं नहीं। जिसकी जरूरत हो, उसका सहयोग मांगे, मन खोलकर के उससे बात करें, जो एक्सपर्ट्स हैं, उनका सहयोग लें। मेडिकल हेल्प से अपने बच्चे को नशे से मुक्त कराने का प्रयास करें। हमें परिवार में बच्चों से खुलकर संवाद की संस्कृति भी बनानी चाहिए, ताकि ऐसे भंवर में फंसने से पहले ही आप उसका हाथ थाम सके। आपको भनक आ जाएगी, थोड़ा ध्यान रखिए पता चलेगा, उसमें बदलाव आ रहा है, वो खोया-खोया लग रहा है, वो मुँह छुपा रहा है, कमरे में बंद हो जा रहा है, देर रात आ रहा है, पैसे अनाब-शनाब मांग रहा है, यह सारी चीजों से पता चल जाता है, भनक आ जाती है, कुछ मामला गड़बड़ है।

साथियों,

एक आवाहन मैं कॉलेज और यूनिवर्सिटीज़ के हमारे प्रोफेसर्स साथियों से भी करना चाहता हूँ, आप भी कोर्स की पढ़ाई के साथ-साथ स्टूडेंट्स के साथ ड्रग्स के खतरों पर बात करें। नशे के खिलाफ अपने कैम्पस में एक मूवमेंट चलाएं। आपके प्रयास बड़े-बड़े परिणाम ला सकते हैं। और साथियों, हमें एक और बात ध्यान रखनी है, जो युवा नशे से लड़कर बाहर निकलते हैं, वह कमजोर नहीं होते, जो नशे को परास्‍त करके निकला है न, वह असली योद्धा होता है, समाज को उनका सम्मान करना चाहिए, अपनापन देना चाहिए, उसे दूसरा अवसर देना चाहिए क्योंकि ड्रग्स से जुड़ा किसी का अतीत उसकी पहचान नहीं हो सकता, उसका साहस उसकी पहचान होता है।

साथियों,

ड्रग्स के खिलाफ अभियान में आज सरकार भी मजबूती से युवाओं के साथ खड़ी है। देश में नशे के कारोबारियों और तस्करों पर सख्ती के साथ कार्रवाई हो रही है। पहले की तुलना में कई गुना ज्यादा गिरफ्तारियां हुई हैं। हजारों करोड़ रुपए की ड्रग्स भी जब्त की गई है। यह दिखाता है कि, ड्रग्स के खिलाफ हमारी सरकार कितनी सख्त है। मुझे विश्वास है, केन्‍द्र सरकार, राज्य सरकार, हर कोई इसे मिशन मोड में करेंगे। मुझे विश्वास है, हमारे देश का युवा नशे से मुक्त रहकर अपनी युवा ऊर्जा को न केवल संरक्षित करेगा, बल्कि विकसित भारत के संकल्पों को भी आगे बढ़ाएगा। और जब मैं आज अनेक महान संतों को मेरे सामने देख रहा हूं, दूर से मैं मन से उनको प्रणाम करता हूं। मैं इन सभी सामाजिक संस्‍थाएं, आध्यात्मिक संस्‍थाएं, आध्यात्मिक गुरुजन, आपका देश के कोने-कोने में संगठन है, आपके युवा साथी डिवोटीज हैं। आने वाले 100 दिन में हर एक संगठन, एक सप्ताह अपने जिम्मे ले सकता है, पूरा सप्ताह पूरे देश में वह संगठन नेतृत्व करे, बाकी सब शक्तियां उसके साथ जुड़े और रविवार को बहुत बड़ा कार्यक्रम करें। दूसरे सप्ताह, दूसरा संगठन, दूसरी शक्ति, सप्ताह भर प्रयोग करें, कार्यक्रम करे और रविवार को बड़ा कार्यक्रम करे। अगर 100 सप्ताह हमारे देश के ऐसे आध्यात्मिक, सामाजिक संगठन, युवा संगठन एक-एक सप्ताह अपने जिम्मे ले लें और बाकी सारी शक्तियां वह जुड़े और रविवार सब मिलकर के करें, आप कल्पना कर सकते हैं, देश में कितना बड़ा आंदोलन खड़ा हो जाएगा। मैं एक बार फिर आप सबने समय निकाला, इस पवित्र कार्य में हम सबको आशीर्वाद दिए, इसके लिए संतों का, आचार्यो का, संगठन के महारथियों का हृदय से आभार व्यक्त करता हूं। मैं इन एक करोड़ से ज्यादा जुटे नौजवानों का विशेष रूप से अभिनंदन करता हूं, आपने यह बहुत बड़ा काम किया है। मैं माई भारत के वॉलंटियर्स की बधाई करता हूं, वो जो भी ठान लेते हैं, आजकल करके दिखाते हैं। अभी पिछले दिनों मुझे माई भारत के वॉलंटियर्स को मिलने का मौका मिला, वह हिन्‍दुस्‍तान के सीमावर्ती गांवों में जाकर के एक-एक सप्ताह रूक करके आए हैं। जिसे कभी देश का आखिरी गांव कहा जाता है, जाता था जिसको आज हम देश का पहला गांव कहते हैं, वहां जाकर के आए। उनके अनुभव बड़े प्रेरक थे और आज इतना बड़ा कार्यक्रम माई भारत के वॉलंटियर्स कर पाते हैं, यह अपने आप में उनकी राष्‍ट्र के प्रति जागरूक समर्पित भावना का प्रतीक है, मैं उनकी बधाई देता हूं, उनका भी अभिनंदन करता हूं। और मुझे पूरा विश्वास है कि आप सबके सामूहिक प्रयत्नों से यह हमारी मोवमेंट घर-घर पहुंचेगी, हर युवा के दिन में पहुंचेगी और यह ड्रग्स के कारोबारियों के लिए बहुत बड़ा खौफ भी बन जाएगी। आइए, हम सब मिलकर के आगे चलें, मेरी आप सबको बहुत-बहुत शुभकामनाएं!

बहुत-बहुत धन्यवाद!