ಶೇರ್
 
Comments
Lays Foundation Stone for various projects under Integrated Development of Kevadia
Flags-off Ekta Cruise Service to the Statue of Unity

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದು ಕೆವಾಡಿಯಾದಲ್ಲಿ ಸರ್ದಾರ್ ಪಟೇಲ್ ವನ್ಯಮೃಗಗಳ ಉದ್ಯಾನ ಮತ್ತು ಭೂಮಿಯಂತೆ ಗೋಳಾಕಾರದ ಪಂಜರ ಉದ್ಘಾಟಿಸಿದರು. ಕೆವಾಡಿಯಾ ಸಮಗ್ರ ಅಭಿವೃದ್ಧಿ ಅಡಿಯಲ್ಲಿ 17 ಯೋಜನೆಗಳ ಲೋಕಾರ್ಪಣೆ ಮಾಡಿ, 4 ಹೊಸ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು. ಈ ಯೋಜನೆಗಳಲ್ಲಿ ಪಥದರ್ಶಕ ಕಾಲುವೆ, ನೂತನ ಗೋರಾ ಸೇತುವೆ, ಗರುಡೇಶ್ವರ್ ಅಣೆಕಟ್ಟು, ಸರ್ಕಾರಿ ವಸತಿಗೃಹಗಳು, ಬಸ್ ಬೇ ಟರ್ಮಿನಸ್, ಏಕತಾ ನರ್ಸರಿ, ಖಲ್ವಾನಿ ಪರಿಸರ ಪ್ರವಾಸೋದ್ಯಮ, ಬುಡಕಟ್ಟು ಹೋಂ ಸ್ಟೇ ಸೇರಿವೆ. ಜೊತೆಗೆ ಪ್ರಧಾನಿ ಏಕತಾ ಪ್ರತಿಮೆವರೆಗಿನ ಏಕತಾ ಕ್ರ್ಯೂಸ್ ಸೇವೆಗೂ ಹಸಿರು ನಿಶಾನೆ ತೋರಿದರು.

 

ಜಂಗಲ್ ಸಫಾರಿ ಮತ್ತು ಭೂಮಿಯಂತೆ ಗೋಳಾಕಾರಣ ಪಂಜರ

“ಎತ್ತರಕ್ಕೆ ಹಾರಿ ಗೋಳಾಕಾರದ ಪಂಜರ, ಪಕ್ಷಿಗಳ ವೀಕ್ಷಣೆಯಲ್ಲಿ ಆಸಕ್ತಿ ಹೊಂದಿರುವವರಿಗೆ ಒಂದು ತಾಣವಾಗಿದೆ. ಕೆವಾಡಿಯಾಕ್ಕೆ ಬಂದು ಜಂಗಲ್ ಸಫಾರಿ ಸಮುಚ್ಛಯದ ಒಂದು ಭಾಗವಾಗಿರುವ ಈ ಪಂಜರಕ್ಕೆ ಭೇಟಿ ನೀಡಿ. ಇದು ಉತ್ತಮ ಕಲಿಕೆಯ ಅನುಭವವಾಗಿರುತ್ತದೆ.” ಎಂದು ಪ್ರಧಾನಮಂತ್ರಿ ಹೇಳಿದರು.

ಜಂಗಲ್ ಸಫಾರಿ ಅತ್ಯಾಧುನಿಕ ಪ್ರಾಣಿಗಳ ಉದ್ಯಾನವಾಗಿದ್ದು, 375 ಎಕರೆ ಪ್ರದೇಶದಲ್ಲಿ 29ರಿಂದ 180 ಮೀಟರ್ ವರೆಗಿನ ಎತ್ತರದ ಏಳು ವಿವಿಧ ಹಂತಗಳ ಶ್ರೇಣಿಯನ್ನೊಳಗೊಂಡಿದೆ. ಇದರಲ್ಲ 1100 ಹಕ್ಕಿಗಳು ಮತ್ತು ಪ್ರಾಣಿಗಳು ಹಾಗೂ 5 ಲಕ್ಷ ಗಿಡಮರಗಳಿವೆ. ಇದು ಅತ್ಯಂತ ವೇಗವಾಗಿ ನಿರ್ಮಿಸಲಾದ ಜಂಗಲ್ ಸಫಾರಿಯಾಗಿದೆ. ಪ್ರಾಣಿಗಳ ಉದ್ಯಾನದಲ್ಲಿ ಎರಡು ಪಂಜರಗಳಿವೆ – ಒಂದರಲ್ಲಿ ದೇಶೀಯ ಹಕ್ಕಿಗಳಿದ್ದರೆ ಮತ್ತೊಂದರಲ್ಲಿ ವಿಶಿಷ್ಟ ಪಕ್ಷಿಗಳಿವೆ. ಇದು ವಿಶ್ವದ ಅತಿ ದೊಡ್ಡ ಭೂಮಿಯಾಕಾರದ ಪಕ್ಷಿ ಪಂಜರವಾಗಿದೆ. ಈ ಪಂಜರಗಳು ಸಾಕುಪಕ್ಷಿ ವಲಯದಿಂದ ಸುತ್ತುವರಿದಿದ್ದು, ಇಲ್ಲಿ ಮಕಾವ್, ಕಾಕಟೂ, ವಿವಿಧ ಜಾತಿಯ ಮೊಲ ಮುಂತಾದ ಪ್ರಾಣಿ ಪಕ್ಷಿಗಳನ್ನು ಎತ್ತಿ ಮುದ್ದಾಡುವ ವಿಶಿಷ್ಟ ಸ್ಪರ್ಶಾವಕಾಶವಿದೆ ಮತ್ತು ಆಹ್ಲಾದಕರ ಅನುಭವವನ್ನು ನೀಡುತ್ತದೆ.

 

ಏಕತಾ ಕ್ರ್ಯೂಸ್ ಸೇವೆ

ಏಕತಾ ಕ್ರೂಸ್ ಸೇವೆಯಲ್ಲಿ ಶ್ರೇಷ್ಠ ಭಾರತ್ ಭವನದಿಂದ ಏಕತಾ ಪ್ರತಿಮೆವರೆಗೆ 6 ಕಿ.ಮೀ ದೂರವನ್ನು ಕ್ರಮಿಸಿ ದೋಣಿಯಿಂದ ಏಕತಾ ಪ್ರತಿಮೆಯನ್ನು ವೀಕ್ಷಿಸುವ ಅನುಭವ ಪಡೆಯಬಹುದು. 40 ನಿಮಿಷಗಳ ದೋಣಿ ವಿಹಾರ ಇದಾಗಿದ್ದು, ಫೆರ್ರಿ ಏಕಕಾಲದಲ್ಲಿ 200 ಪ್ರಯಾಣಿಕರನ್ನು ಕರೆದೊಯ್ಯಬಲ್ಲುದಾಗಿದೆ. ದೋಣಿ ಸೇವೆಯ ಕಾರ್ಯಾಚರಣೆಗಾಗಿ ಹೊಸ ಗೋರಾ ಸೇತುವೆಯನ್ನು ನಿರ್ಮಿಸಲಾಗಿದೆ. ಏಕತಾ ಪ್ರತಿಮೆಗೆ ಭೇಟಿ ನೀಡುವ ಪ್ರವಾಸಿಗರಿಗೆ ಬೋಟಿಂಗ್ ಸೇವೆಗಳನ್ನು ಒದಗಿಸಲು ಬೋಟಿಂಗ್ ಕಾಲುವೆ ನಿರ್ಮಿಸಲಾಗಿದೆ.

 

Explore More
76ನೇ ಸ್ವಾತಂತ್ರ್ಯೋತ್ಸವ ದಿನದಂದು ಕೆಂಪು ಕೋಟೆಯ ಮೇಲಿಂದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮಾಡಿದ ಭಾಷಣದ ಕನ್ನಡ ಭಾಷಾಂತರ

ಜನಪ್ರಿಯ ಭಾಷಣಗಳು

76ನೇ ಸ್ವಾತಂತ್ರ್ಯೋತ್ಸವ ದಿನದಂದು ಕೆಂಪು ಕೋಟೆಯ ಮೇಲಿಂದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮಾಡಿದ ಭಾಷಣದ ಕನ್ನಡ ಭಾಷಾಂತರ
'Exceptional': PM Modi lauds HAL's record revenue of ₹26,500 crore

Media Coverage

'Exceptional': PM Modi lauds HAL's record revenue of ₹26,500 crore
...

Nm on the go

Always be the first to hear from the PM. Get the App Now!
...
PM condoles demise of Indian Cricketer, Salim Durani
April 02, 2023
ಶೇರ್
 
Comments

The Prime Minister, Shri Narendra Modi has expressed deep grief over the demise of Indian Cricketer, Salim Durani.

In a tweet thread, the Prime Minister said;

“Salim Durani Ji was a cricketing legend, an institution in himself. He made a key contribution to India’s rise in the world of cricket. On and off the field, he was known for his style. Pained by his demise. Condolences to his family and friends. May his soul rest in peace.”

“Salim Durani Ji had a very old and strong association with Gujarat. He played for Saurashtra and Gujarat for a few years. He also made Gujarat his home. I have had the opportunity to interact with him and was deeply impressed by his multifaceted persona. He will surely be missed.”