ʻಸಶಕ್ತ ಉತ್ತರಾಖಂಡ್ʼ ಪುಸ್ತಕ ಹಾಗೂ ʻಹೌಸ್ ಆಫ್ ಹಿಮಾಲಯಸ್‌ʼ ಬ್ರಾಂಡ್‌ನ ಲೋಕಾರ್ಪಣೆ
"ನಾವು ದೈವತ್ವ ಮತ್ತು ಅಭಿವೃದ್ಧಿ ಎರಡನ್ನೂ ಒಟ್ಟಿಗೆ ಅನುಭವಿಸುವ ರಾಜ್ಯ ಉತ್ತರಾಖಂಡ"
"ಭಾರತದ ʻಎಸ್‌ಡಬ್ಲ್ಯೂಒಟಿʼ ವಿಶ್ಲೇಷಣೆಯು ಆಕಾಂಕ್ಷೆಗಳು, ಭರವಸೆ, ಆತ್ಮವಿಶ್ವಾಸ, ನಾವೀನ್ಯತೆ ಮತ್ತು ಅವಕಾಶಗಳ ಸಮೃದ್ಧಿಯನ್ನು ಪ್ರತಿಬಿಂಬಿಸುತ್ತದೆ"
"ಮಹತ್ವಾಕಾಂಕ್ಷೆಯ ಭಾರತವು ಅಸ್ಥಿರ ಸರಕಾರಕ್ಕಿಂತಲೂ ಸ್ಥಿರವಾದ ಸರ್ಕಾರವನ್ನು ಬಯಸುತ್ತದೆ"
"ಉತ್ತರಾಖಂಡ ಸರ್ಕಾರ ಮತ್ತು ಭಾರತ ಸರ್ಕಾರ ಪರಸ್ಪರ ಪ್ರಯತ್ನಗಳನ್ನು ಹೆಚ್ಚಿಸುತ್ತಿವೆ"
'ಮೇಕ್ ಇನ್ ಇಂಡಿಯಾ' ಮಾದರಿಯಲ್ಲಿ 'ವೆಡ್ ಇನ್ ಇಂಡಿಯಾ' ಆಂದೋಲನವನ್ನು ಪ್ರಾರಂಭಿಸಿ
"ಉತ್ತರಾಖಂಡದಲ್ಲಿ ಮಧ್ಯಮ ವರ್ಗದ ಸಮಾಜದ ಶಕ್ತಿ ದೊಡ್ಡ ಮಾರುಕಟ್ಟೆಯನ್ನು ಸೃಷ್ಟಿಸುತ್ತಿದೆ"
"ನಮ್ಮ ʻವೋಕಲ್ ಫಾರ್ ಲೋಕಲ್ʼ ಮತ್ತು ʻಲೋಕಲ್ ಫಾರ್ ಗ್ಲೋಬಲ್ʼ ಪರಿಕಲ್ಪನೆಯನ್ನು ʻಹೌಸ್ ಆಫ್ ಹಿಮಾಲಯಾಸ್ʼ ಮತ್ತಷ್ಟು ಬಲಪಡಿಸುತ್ತದೆ"
"ನಾನು ಎರಡು ಕೋಟಿ ʻಲಕ್ಷಾಧಿಪತಿ ದೀದಿʼಯರನ್ನು ಸೃಷ್ಟಿಸಲು ಸಂಕಲ್ಪ ಮಾಡಿದ್ದೇನೆ"
"ಇದು ಸರಿಯಾದ ಸಮಯ, ಇದು ಭಾರತದ ಕಾಲ”

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಉತ್ತರಾಖಂಡದ ಡೆಹ್ರಾಡೂನ್‌ನ ʻಅರಣ್ಯ ಸಂಶೋಧನಾ ಸಂಸ್ಥೆʼಯಲ್ಲಿ ನಡೆಯುತ್ತಿರುವ 'ಉತ್ತರಾಖಂಡ್ ಜಾಗತಿಕ ಹೂಡಿಕೆದಾರರ ಸಮಾವೇಶ-2023' ಅನ್ನು ಉದ್ಘಾಟಿಸಿದರು. ಇಲ್ಲಿ ಏರ್ಪಡಿಸಲಾಗಿದ್ದ ವಸ್ತುಪ್ರದರ್ಶನದಲ್ಲಿ ಹೆಜ್ಜೆ ಹಾಕಿದ ಶ್ರೀ ಮೋದಿ ಅವರು ಉದ್ಘಾಟನಾ ಫಲಕವನ್ನು ಅನಾವರಣಗೊಳಿಸಿದರು. ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ʻಸಶಕ್ತ ಉತ್ತರಾಖಂಡ್ʼ ಪುಸ್ತಕವನ್ನು ಹಾಗೂ ʻಹೌಸ್ ಆಫ್ ಹಿಮಾಲಯಸ್‌ʼ ಬ್ರಾಂಡ್  ಅನ್ನು ಲೋಕಾರ್ಪಣೆ ಮಾಡಿದರು. 'ಶಾಂತಿಯಿಂದ ಸಮೃದ್ಧಿಗೆ' ಎಂಬ ವಿಷಯಾಧಾರಿತವಾಗಿ ಈ ಬಾರಿಯ ಹೂಡಿಕೆದಾರರ ಸಮಾವೇಶವನ್ನು ಏರ್ಪಡಿಸಲಾಗಿದೆ.

ಉದ್ಯಮದ ಪ್ರಮುಖರು ಈ ಸಂದರ್ಭದಲ್ಲಿ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದರು. ಅದಾನಿ ಗ್ರೂಪ್‌ನ ನಿರ್ದೇಶಕ ಮತ್ತು ವ್ಯವಸ್ಥಾಪಕ ನಿರ್ದೇಶಕ (ಕೃಷಿ, ತೈಲ ಮತ್ತು ಅನಿಲ) ಶ್ರೀ ಪ್ರಣವ್ ಅದಾನಿ ಅವರು ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಉತ್ತರಾಖಂಡವು ತನ್ನ ಬೆಳವಣಿಗೆ ಮತ್ತು ಅಭಿವೃದ್ಧಿಯ ವಿಧಾನದಿಂದಾಗಿ ಖಾಸಗಿ ವಲಯದ ಹೂಡಿಕೆಗೆ ಅತ್ಯಂತ ಆಕರ್ಷಕ ತಾಣಗಳಲ್ಲಿ ಒಂದಾಗಿದೆ. ಏಕೆಂದರೆ ಏಕ-ಗವಾಕ್ಷಿ ಮಾದರಿಯಲ್ಲಿ ಅನುಮತಿಗಳು, ಸ್ಪರ್ಧಾತ್ಮಕ ಭೂಮಿಯ ಬೆಲೆಗಳು, ಕೈಗೆಟುಕುವ ವಿದ್ಯುತ್ ಹಾಗೂ ಪರಿಣಾಮಕಾರಿ ವಿತರಣೆ, ಹೆಚ್ಚು ನುರಿತ ಮಾನವಶಕ್ತಿ ಮತ್ತು ರಾಷ್ಟ್ರ ರಾಜಧಾನಿಗೆ ಸಾಮೀಪ್ಯ ಮತ್ತು ಅತ್ಯಂತ ಸ್ಥಿರವಾದ ಕಾನೂನು-ಸುವ್ಯವಸ್ಥೆ ವಾತಾವರಣದ ಸಂಯೋಜನೆಯು ರಾಜ್ಯವನ್ನು ಹೂಡಿಕೆಗೆ ಆಕರ್ಷಕ ತಾಣವನ್ನಾಗಿಸಿದೆ ಎಂದರು.  ಶ್ರೀ ಅದಾನಿ ಅವರು ರಾಜ್ಯದಲ್ಲಿ ವಿಸ್ತರಿಸಲಿರುವ ಹಾಗೂ ಹೆಚ್ಚಿನ ಹೂಡಿಕೆ ಮತ್ತು ಉದ್ಯೋಗಗಳನ್ನು ತರುವ ತಮ್ಮ ಯೋಜನೆಗಳ ಬಗ್ಗೆ ಮಾಹಿತಿ ನೀಡಿದರು. ಉತ್ತರಾಖಂಡ ರಾಜ್ಯಕ್ಕೆ ನಿರಂತರ ಬೆಂಬಲ ನೀಡುತ್ತಿರುವ ಪ್ರಧಾನಮಂತ್ರಿಯವರಿಗೆ ಧನ್ಯವಾದ ಅರ್ಪಿಸಿದ ಅವರು, ಭಾರತದ ಜನರು ತಮ್ಮ ಮೇಲೆ ಅಭೂತಪೂರ್ವ ವಿಶ್ವಾಸ ಮತ್ತು ವಿಶ್ವಾಸವನ್ನು ಇಟ್ಟಿದ್ದಾರೆ ಎಂದರು.

 

ʻಜೆಎಸ್‌ಡಬ್ಲ್ಯೂʼನ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ ಶ್ರೀ ಸಜ್ಜನ್ ಜಿಂದಾಲ್ ಅವರು ಮಾತನಾಡಿ, ಕೇದಾರನಾಥ ಮತ್ತು ಬದರೀನಾಥದ ಅಭಿವೃದ್ಧಿ ಯೋಜನೆಗಳ ಸಂದರ್ಭದಲ್ಲಿ ಶ್ರೀ ಜಿಂದಾಲ್‌ ಅವರು ಅನುಭವಿಸಿದ ಉತ್ತರಾಖಂಡ ರಾಜ್ಯದೊಂದಿಗಿನ ಪ್ರಧಾನಮಂತ್ರಿಯವರ ಸಂಪರ್ಕದ ಬಗ್ಗೆ ವಿವರಿಸಿದರು. ರಾಷ್ಟ್ರದ ಮುಖವನ್ನು ಬದಲಿಸಿದ ಪ್ರಧಾನಮಂತ್ರಿಯವರ ಪ್ರಯತ್ನಗಳನ್ನು ಅವರು ಶ್ಲಾಘಿಸಿದರು. ಜಿಡಿಪಿ ಬೆಳವಣಿಗೆಯ ಅಂಕಿ-ಅಂಶಗಳನ್ನು ಉಲ್ಲೇಖಿಸಿದರು. ಭಾರತವು ಶೀಘ್ರದಲ್ಲೇ ವಿಶ್ವದ 3ನೇ ಅತಿದೊಡ್ಡ ಆರ್ಥಿಕತೆಯಾಗಲಿದೆ. ಜಾಗತಿಕ ಸೂಪರ್ ಪವರ್ ಆಗುವ ಭಾರತದ ಪಯಣದಲ್ಲಿ ನಾಯಕತ್ವ ವಹಿಸಿದ್ದಕ್ಕಾಗಿ ಶ್ರೀ ಜಿನಾಲ್ ಅವರು ಪ್ರಧಾನಮಂತ್ರಿಯವರಿಗೆ ಧನ್ಯವಾದ ಅರ್ಪಿಸಿದರು. ದೇಶಾದ್ಯಂತದ ಯಾತ್ರಾ ಸ್ಥಳಗಳಿಗೆ ಸಂಪರ್ಕವನ್ನು ಸುಧಾರಿಸಲು ಸರ್ಕಾರ ಒತ್ತು ನೀಡಿರುವುದನ್ನು ಅವರು ಉಲ್ಲೇಖಿಸಿದರು. ಉತ್ತರಾಖಂಡದಲ್ಲಿ ಸುಮಾರು 15,000 ಕೋಟಿ ರೂ.ಗಳ ಹೂಡಿಕೆಯನ್ನು ತರುವ ಕಂಪನಿಯ ಯೋಜನೆಯ ಬಗ್ಗೆ ಅವರು ವಿವರಿಸಿದರು. ನವೆಂಬರ್‌ನಲ್ಲಿ ಪ್ರಾರಂಭಿಸಲಾದ 'ಕ್ಲೀನ್ ಕೇದಾರನಾಥ ಯೋಜನೆ' ಬಗ್ಗೆಯೂ ಮಾತನಾಡಿದರು. ಉತ್ತರಾಖಂಡ ಸರ್ಕಾರದ ಬೆಂಬಲಕ್ಕೆ ಧನ್ಯವಾದ ಅರ್ಪಿಸಿದ ಅವರು, ಭಾರತದ ಅಭಿವೃದ್ಧಿಯ ಪಯಣದಲ್ಲಿ ಕಂಪನಿ ನಿರಂತರ ಬೆಂಬಲ ನೀಡಲಿದೆ ಎಂದು ಭರವಸೆಯಿತ್ತು.

ʻಜಿ-20ʼ ಶೃಂಗಸಭೆಯ ಯಶಸ್ಸನ್ನು ಸ್ಮರಿಸಿದ ʻಐಟಿಸಿʼ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಶ್ರೀ ಸಂಜೀವ್ ಪುರಿ ಅವರು, ಪ್ರಧಾನಮಂತ್ರಿಯವರ ಜಾಗತಿಕ ರಾಜನೀತಿ ಮತ್ತು ಜಾಗತಿಕ ದಕ್ಷಿಣದ ದೇಶಗಳ ಒಳಿತಿಗಾಗಿ ಅವರ ಪ್ರಯತ್ನಗಳನ್ನು ಶ್ಲಾಘಿಸಿದರು. ಕಳೆದ ಕೆಲವು ವರ್ಷಗಳಲ್ಲಿ ಕೈಗೊಂಡ ಉದ್ದೇಶಪೂರ್ವಕ ನೀತಿ ಉಪಕ್ರಮಗಳಿಂದಾಗಿ ಬಹು ಆಯಾಮದ ಸವಾಲುಗಳನ್ನು ಎದುರಿಸುತ್ತಿರುವ ಜಗತ್ತಿನ ನಡುವೆ ಭಾರತ ಅನುಕೂಲಕರ ಸ್ಥಿತಿಯಲ್ಲಿರಲು ಸಾಧ್ಯವಾಗಿದೆ ಎಂದು ಅವರು ಹೇಳಿದರು. ಆರ್ಥಿಕತೆಯ ಅನೇಕ ಕ್ಷೇತ್ರಗಳ ಪರಿವರ್ತನೆ ಮತ್ತು ಜಿಡಿಪಿ ಸಂಖ್ಯೆಗಳು ಸ್ವತಃ ಈ ಬಗ್ಗೆ ಮಾತನಾಡುತ್ತವೆ ಎಂದು ಅವರು ಹೇಳಿದರು. ಪ್ರಧಾನಿಯವರ ನಾಯಕತ್ವದಿಂದಾಗಿ ಈ ದಶಕ ಮಾತ್ರವಲ್ಲ ಇಡೀ ಶತಮಾನವು ಭಾರತಕ್ಕೆ ಸೇರಿದೆ ಎಂದು ಜಾಗತಿಕವಾಗಿ ಕೆಲವರು ಹೇಳುವ ಪರಿಸ್ಥಿತಿಯನ್ನು ನಿರ್ಮಾಣವಾಗಿದೆ.

 

ʻಪತಂಜಲಿʼ ಸಂಸ್ಥೆಯ ಸಂಸ್ಥಾಪಕ ಮತ್ತು ಯೋಗ ಗುರು ಶ್ರೀ ಬಾಬಾ ರಾಮದೇವ್ ಅವರು ಮಾತನಾಡಿ, ಪ್ರಧಾನಿಯನ್ನು 'ವಿಕಸಿತ ಭಾರತʼದ ಮುನ್ನೋಟ ಉಳ್ಳವರು ಎಂದರು. ಪ್ರಧಾನಿ ಮೋದಿ ಅವರನ್ನು 140 ಕೋಟಿ ಭಾರತೀಯರು ಮತ್ತು ವಿಶ್ವದ ಕುಟುಂಬ ಸದಸ್ಯ ಎಂದು ಬಣ್ಣಿಸಿದರು. 5 ಟ್ರಿಲಿಯನ್ ಡಾಲರ್ ಆರ್ಥಿಕತೆಯನ್ನು ಸಾಧಿಸುವ ಪ್ರಧಾನ ಮಂತ್ರಿಯವರ ಗುರಿಯನ್ನು ಅವರು ಎತ್ತಿ ಹಿಡಿದರು. ಹೂಡಿಕೆಗಳನ್ನು ತರುವಲ್ಲಿ ಮತ್ತು ಉದ್ಯೋಗಾವಕಾಶಗಳನ್ನು ಸೃಷ್ಟಿಸುವಲ್ಲಿ ʻಪತಂಜಲಿʼಯ ಕೊಡುಗೆಗಳನ್ನು ಉಲ್ಲೇಖಿಸಿದರು. ಮುಂಬರುವ ದಿನಗಳಲ್ಲಿ 10,000 ಕೋಟಿ ರೂ.ಗಿಂತ ಅಧಿಕ ಹೂಡಿಕೆ ಮತ್ತು 10,000ಕ್ಕೂ ಹೆಚ್ಚು ಉದ್ಯೋಗಗಳ ಸೃಷ್ಟಿಯ ಬಗ್ಗೆ ಅವರು ಪ್ರಧಾನಿಗೆ ಭರವಸೆ ನೀಡಿದರು. ನವ ಭಾರತದ ನಿರ್ಮಾಣದಲ್ಲಿ ಪ್ರಧಾನಮಂತ್ರಿಯವರ ಸಂಕಲ್ಪ ಮತ್ತು ಇಚ್ಛಾಶಕ್ತಿಯನ್ನು ಅವರು ಶ್ಲಾಘಿಸಿದರು. ರಾಜ್ಯಗಳಲ್ಲಿ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವಲ್ಲಿ ಉತ್ತರಾಖಂಡದ ಮುಖ್ಯಮಂತ್ರಿಯ ಪ್ರಯತ್ನಗಳನ್ನು ಅವರು ಶ್ಲಾಘಿಸಿದರು. ರಾಜ್ಯದಲ್ಲಿ ಘಟಕವನ್ನು ಸ್ಥಾಪಿಸುವಂತೆ ಕಾರ್ಪೊರೇಟ್ ಸಂಸ್ಥೆಗಳನ್ನು ಬಾಬಾ ರಾಮ್‌ದೇವ್‌ ಒತ್ತಾಯಿಸಿದರು. ಪ್ರಧಾನಮಂತ್ರಿಯವರ ನಾಯಕತ್ವದಲ್ಲಿ ರಾಜ್ಯದ ಪ್ರವಾಸೋದ್ಯಮ, ಆರೋಗ್ಯ, ಶಿಕ್ಷಣ, ಕೃಷಿ, ಸಂಪರ್ಕ ಮತ್ತು ಮೂಲಸೌಕರ್ಯ ಕ್ಷೇತ್ರಗಳ ಅಭಿವೃದ್ಧಿಯನ್ನು ಅವರು ಶ್ಲಾಘಿಸಿದರು. ಭಾರತವನ್ನು ಜಾಗತಿಕ ಆರ್ಥಿಕ ಶಕ್ತಿ ಕೇಂದ್ರವನ್ನಾಗಿ ಮಾಡುವ ಮತ್ತು ʻವಿಕಸಿತ ಭಾರತʼದ ಗುರಿಯನ್ನು ಸಾಧಿಸುವ ಪ್ರಧಾನಮಂತ್ರಿಯವರ ಸಂಕಲ್ಪವನ್ನು ಬಲಪಡಿಸುವಂತೆ ಅವರು ಹೂಡಿಕೆದಾರರಿಗೆ ಮನವಿ ಮಾಡಿದರು.

ʻಎಮಾರ್ ಇಂಡಿಯಾʼದ ಸಿಇಓ ಶ್ರೀ ಕಲ್ಯಾಣ್ ಚಕ್ರವರ್ತಿ ಅವರು ಮಾತನಾಡಿ, ದೇಶದ ಅಭಿವೃದ್ಧಿಗೆ ನಿರ್ದೇಶನ, ದೂರದೃಷ್ಟಿ ಮತ್ತು ಮುನ್ನೋಟವನ್ನು ಒದಗಿಸಿದ್ದಕ್ಕಾಗಿ ಪ್ರಧಾನಮಂತ್ರಿಯವರಿಗೆ ಧನ್ಯವಾದ ಅರ್ಪಿಸಿದರು. ಭಾರತವು ʻವಿಕಸಿತ ರಾಷ್ಟ್ರʼವಾಗುವ ಪ್ರಯಾಣದಲ್ಲಿ ಪಾಲುದಾರರಾಗಲು ಕಾರ್ಪೊರೇಟ್ ಪ್ರಪಂಚದ ಬದ್ಧತೆಯನ್ನು ಅವರು ಒತ್ತಿ ಹೇಳಿದರು. ʻಭಾರತ-ಯುಎಇʼ ಸಂಬಂಧದಲ್ಲಿ ಹೊಸ ಹುಮ್ಮಸ್ಸು ಮೂಡಿದೆ ಎಂದು ಅವರು ಗಮನಸೆಳೆದರು. ʻಎಮಾರ್ʼನ ಪ್ರಧಾನ ಕಚೇರಿ ʻಯುಎಇʼನಲ್ಲಿದೆ. ಶ್ರೀ ಕಲ್ಯಾಣ್ ಚಕ್ರವರ್ತಿ ಅವರು ಭಾರತದ ಬಗ್ಗೆ ಜಾಗತಿಕ ದೃಷ್ಟಿಕೋನದಲ್ಲಿ ಬಂದಿರುವ ಸಕಾರಾತ್ಮಕ ಬದಲಾವಣೆಯನ್ನು ಎತ್ತಿ ತೋರಿಸಿದರು. ಜಿಎಸ್‌ಟಿ ಮತ್ತು ʻಫಿನ್‌ಟೆಕ್‌ʼ ಕ್ರಾಂತಿಯಂತಹ ಹಲವಾರು ನೀತಿ ಸುಧಾರಣೆಗಳನ್ನು ಅವರು ಉಲ್ಲೇಖಿಸಿದರು, ಇದು ಕೈಗಾರಿಕಾ ಜಗತ್ತಿಗೆ ಹೊಸ ಅವಕಾಶಗಳನ್ನು ಸೃಷ್ಟಿಸುತ್ತಿದೆ ಎಂದರು.

 

ʻಟಿವಿಎಸ್ ಸಪ್ಲೈ ಚೈನ್ ಸೊಲ್ಯೂಷನ್ಸ್ʼನ ಅಧ್ಯಕ್ಷರಾದ ಶ್ರೀ ಆರ್ ದಿನೇಶ್ ಅವರು ಮಾತನಾಡಿ, ಪ್ರಧಾನಮಂತ್ರಿಯವರ ದೂರದೃಷ್ಟಿಯ ನಾಯಕತ್ವಕ್ಕೆ ಕಂಪನಿಯ ಬದ್ಧತೆಯನ್ನು ಪುನರುಚ್ಚರಿಸಿದರು. ಉತ್ತರಾಖಂಡದ ಬೆಳವಣಿಗೆಯ ಯಶೋಗಾಥೆಯಲ್ಲಿ ಸಂಸ್ಥೆಯ ಕೊಡುಗೆಗಳನ್ನು ಉಲ್ಲೇಖಿಸಿದ ಅವರು, ಟೈರ್ ಮತ್ತು ಆಟೋ ಬಿಡಿಭಾಗಗಳ ಉತ್ಪಾದನಾ ಘಟಕಗಳು ಹಾಗೂ ಸರಕು-ಸಾಗಣೆ ಮತ್ತು ವಾಹನ ವಲಯದಲ್ಲಿನ ಸೇವೆಗಳ ಉದಾಹರಣೆಗಳನ್ನು ನೀಡಿದರು. ಉತ್ಪಾದನಾ ವಲಯ ಮತ್ತು ಗೋದಾಮು ಸಾಮರ್ಥ್ಯದಲ್ಲಿ ಹೆಚ್ಚಿನ ಹೂಡಿಕೆ ಮಾಡುವ ಹಾಗೂ ಆ ಮೂಲಕ ಸಮೂಹದ ಎಲ್ಲಾ ಕಂಪನಿಗಳಲ್ಲಿ 7,000ಕ್ಕೂ ಹೆಚ್ಚು ಉದ್ಯೋಗಗಳನ್ನು ಸೃಷ್ಟಿಸುವ ಕಂಪನಿಯ ಯೋಜನೆಗಳನ್ನು ಅವರು ವಿವರಿಸಿದರು.  ಪ್ರಸ್ತುತ ಬದಲಾಗುತ್ತಿರುವ ವಿಶ್ವ ಸನ್ನಿವೇಶಗಳ ಹಿನ್ನೆಲೆಯಲ್ಲಿ, ಡಿಜಿಟಲ್ ಮತ್ತು ಸುಸ್ಥಿರತೆಗೆ ರೂಪಾಂತರಗೊಳ್ಳಲು ಆರ್ಥಿಕ ಬೆಂಬಲ ಮತ್ತು ಕೌಶಲ್ಯವನ್ನು ಒದಗಿಸುವ ಮೂಲಕ ವಾಹನ ಮಾರುಕಟ್ಟೆ ವಲಯದಲ್ಲಿ ಪಾಲುದಾರರನ್ನು ಕೈಹಿಡಿಯಲು ಕಂಪನಿಯು ಸಿದ್ಧವಾಗಿದೆ ಎಂದು ಅವರು ಒತ್ತಿ ಹೇಳಿದರು. ʻಸಿಐಐʼ ಅಧ್ಯಕ್ಷರಾಗಿ, 1 ಲಕ್ಷಕ್ಕೂ ಹೆಚ್ಚು ಜನರಿಗೆ ಸಮಾಲೋಚನೆ ಮತ್ತು ಬೆಂಬಲವನ್ನು ಒದಗಿಸಲು 10 ಮಾದರಿ ವೃತ್ತಿ ಕೇಂದ್ರಗಳನ್ನು ಸ್ಥಾಪಿಸಲು ಅವರು ಬದ್ಧತೆ ವ್ಯಕ್ತಪಡಿಸಿದ್ದಾರೆ. ಆತಿಥ್ಯ, ಆರೋಗ್ಯ ರಕ್ಷಣೆ ಮತ್ತು ಸುಧಾರಿತ ಉತ್ಪಾದನಾ ಕ್ಷೇತ್ರಗಳನ್ನು ಒಳಗೊಂಡಂತೆ 10,000 ಜನರಿಗೆ ತರಬೇತಿ ನೀಡುವ ಸಾಮರ್ಥ್ಯದೊಂದಿಗೆ ʻವಿಶೇಷ ಬಹು ಕೌಶಲ್ಯ ಅಭಿವೃದ್ಧಿ ಕೇಂದ್ರʼವನ್ನು ಸ್ಥಾಪಿಸಿದ ದೇಶದ ಮೊದಲ ರಾಜ್ಯ ಉತ್ತರಾಖಂಡ ಎಂದು ಅವರು ಮಾಹಿತಿ ನೀಡಿದರು.

ಸಭಿಕರನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿಯವರು, ಉತ್ತರಾಖಂಡದ ದೇವಭೂಮಿಗೆ ಬಂದಿರುವುದಕ್ಕೆ ಸಂತಸ ವ್ಯಕ್ತಪಡಿಸಿದರು. ಇದೇ ವೇಳೆ,  ಈ ಶತಮಾನದ ಮೂರನೇ ದಶಕವು  ಉತ್ತರಾಖಂಡಕ್ಕೆ ಸಂದ ದಶಕ ಎಂಬ ತಮ್ಮ ಹೇಳಿಕೆಯನ್ನು ಸ್ಮರಿಸಿದರು. ಈ ಹೇಳಿಕೆಯು ತಳಮಟ್ಟದಲ್ಲಿ ಸಾಕಾರಗೊಳ್ಳುತ್ತಿರುವುದು ತೃಪ್ತಿಯ ವಿಷಯವಾಗಿದೆ ಎಂದು ಶ್ರೀ ಮೋದಿ ಹೇಳಿದರು. ಸಿಲ್ಕಿಯಾರಾದಲ್ಲಿನ ಸುರಂಗದಿಂದ ಕಾರ್ಮಿಕರನ್ನು ಯಶಸ್ವಿಯಾಗಿ ರಕ್ಷಿಸುವ ಯೋಜನೆಯಲ್ಲಿ ಭಾಗಿಯಾಗಿರುವ ರಾಜ್ಯ ಸರ್ಕಾರ ಮತ್ತು ಎಲ್ಲರನ್ನೂ ಪ್ರಧಾನಿ ಅಭಿನಂದಿಸಿದರು.

 

ಉತ್ತರಾಖಂಡ ಜೊತೆಗಿನ ತಮ್ಮ ನಿಕಟ ಸಂಬಂಧವನ್ನು ಪುನರುಚ್ಚರಿಸಿದ ಪ್ರಧಾನಮಂತ್ರಿಯವರು, ಉತ್ತರಾಖಂಡವು ಏಕಕಾಲದಲ್ಲಿ ದೈವತ್ವ ಮತ್ತು ಅಭಿವೃದ್ಧಿಯನ್ನು ಅನುಭವಿಸುವ ರಾಜ್ಯವಾಗಿದೆ ಎಂದರು. ಈ ಭಾವನೆಯನ್ನು ಮತ್ತಷ್ಟು ವಿವರಿಸಲು ಪ್ರಧಾನಮಂತ್ರಿಯವರು ತಮ್ಮ ಕವಿತೆಗಳಲ್ಲಿ ಒಂದನ್ನು ವಾಚಿಸಿದರು.

ಈ ಸಂದರ್ಭದಲ್ಲಿ ಹಾಜರಿದ್ದ ಹೂಡಿಕೆದಾರರನ್ನು, ಉದ್ಯಮದ ಪ್ರಮುಖರು ಎಂದು ಉಲ್ಲೇಖಿಸಿದ ಪ್ರಧಾನಮಂತ್ರಿಯವರು, ಬಹುರಾಷ್ಟ್ರೀಯ ಕಂಪನಿಗಳು ನಡೆಸಿದ ʻಸಾಮರ್ಥ್ಯಗಳು, ದೌರ್ಬಲ್ಯ, ಅವಕಾಶ ಮತ್ತು ಅಪಾಯʼ(Strengths, Weaknesses, Opportunities, and Threats- SWOT) ವಿಶ್ಲೇಷಣೆಯ ಹೋಲಿಕೆಯನ್ನು ಉಲ್ಲೇಖಿಸಿದರು. ಭಾರತದ ಮೇಲೂ ಇಂತಹ ವಿಶ್ಲೇಷಣೆ ನಡೆಸುವಂತೆ ಒತ್ತಿ ಹೇಳಿದರು. ʻಎಸ್‌ಡಬ್ಲ್ಯೂಒಟಿʼ ವಿಶ್ಲೇಷಣೆಯ ಫಲಿತಾಂಶಗಳು ದೇಶದಲ್ಲಿ ಸಮೃದ್ಧವಾಗಿರುವ ಆಕಾಂಕ್ಷೆಗಳು, ಭರವಸೆ, ಆತ್ಮವಿಶ್ವಾಸ, ನಾವೀನ್ಯತೆ ಮತ್ತು ಅವಕಾಶಗಳನ್ನು ಸೂಚಿಸುತ್ತವೆ ಎಂದು ಅವರು ಒತ್ತಿ ಹೇಳಿದರು. ನೀತಿ ಚಾಲಿತ ಆಡಳಿತದ ಸೂಚಕಗಳು ಮತ್ತು ರಾಜಕೀಯ ಸ್ಥಿರತೆಗಾಗಿ ನಾಗರಿಕರ ಸಂಕಲ್ಪವನ್ನು ಪ್ರಧಾನ ಮಂತ್ರಿಗಳು ಉಲ್ಲೇಖಿಸಿದರು. "ಮಹತ್ವಾಕಾಂಕ್ಷೆಯ ಭಾರತವು ಅಸ್ಥಿರ ಸರ್ಕಾರದ ಬದಲಿಗೆ ಸ್ಥಿರ ಸರ್ಕಾರವನ್ನು ಬಯಸುತ್ತದೆ," ಎಂದು ಹೇಳಿದ ಪ್ರಧಾನಿ, ಇದಕ್ಕೆ ಇತ್ತೀಚೆಗೆ ಮುಕ್ತಾಯಗೊಂಡ ವಿಧಾನಸಭಾ ಚುನಾವಣೆಗಳ ಫಲಿತಾಂಶದ ಉದಾಹರಣೆ ನೀಡಿದರು. ಉತ್ತಮ ಆಡಳಿತ ಮತ್ತು ಸರ್ಕಾರದ ಸಾಧನೆಯ ಆಧಾರದ ಮೇಲೆ ಜನರು ಮತ ಚಲಾಯಿಸಿದ್ದಾರೆ ಎಂದು ಒತ್ತಿ ಹೇಳಿದರು. ಕೋವಿಡ್ ಸಾಂಕ್ರಾಮಿಕ ಮತ್ತು ಅಸ್ಥಿರ ಭೌಗೋಳಿಕ-ರಾಜಕೀಯ ಸನ್ನಿವೇಶವನ್ನು ಲೆಕ್ಕಿಸದೆ ದಾಖಲೆಯ ವೇಗದಲ್ಲಿ ಮುಂದುವರಿಯುವ ದೇಶದ ಸಾಮರ್ಥ್ಯದ ಬಗ್ಗೆ ಪ್ರಧಾನಿ ಮೋದಿ ವಿಶೇಷವಾಗಿ ಪ್ರಸ್ತಾಪಿಸಿದರು. "ಅದು ಕರೋನಾ ಲಸಿಕೆಯಾಗಿರಲಿ ಅಥವಾ ಆರ್ಥಿಕ ನೀತಿಗಳಾಗಿರಲಿ, ಭಾರತವು ತನ್ನ ಸಾಮರ್ಥ್ಯಗಳು ಮತ್ತು ನೀತಿಗಳಲ್ಲಿ ನಂಬಿಕೆ ಹೊಂದಿತ್ತು," ಎಂದು ಪ್ರಧಾನಿ ಹೇಳಿದರು. ಇದರ ಪರಿಣಾಮವಾಗಿ, ವಿಶ್ವದ ಇತರ ದೊಡ್ಡ ಆರ್ಥಿಕತೆಗಳಿಗೆ ಹೋಲಿಸಿದರೆ ಭಾರತವು ತನ್ನದೇ ಆದ ಸ್ಥಾನದಲ್ಲಿ ನಿಂತಿದೆ ಎಂದು ಪ್ರಧಾನಿ ಹೇಳಿದರು. ಉತ್ತರಾಖಂಡ ಸೇರಿದಂತೆ ಭಾರತದ ಪ್ರತಿಯೊಂದು ರಾಜ್ಯವೂ ಈ ಶಕ್ತಿಯ ಲಾಭವನ್ನು ಪಡೆಯುತ್ತಿದೆ ಎಂದು ಅವರು ಗಮನ ಸೆಳೆದರು.

ʻಡಬಲ್ ಇಂಜಿನ್ʼ ಸರ್ಕಾರದ ಪ್ರಯೋಜನಗಳನ್ನು ಪುನರುಚ್ಚರಿಸಿದ ಪ್ರಧಾನಿ, ಅದರ ದ್ವಿಮುಖ ಪ್ರಯತ್ನಗಳು ಎಲ್ಲೆಡೆ ಗೋಚರಿಸುತ್ತಿವೆ ಎಂದರು. ರಾಜ್ಯ ಸರ್ಕಾರವು ಸ್ಥಳೀಯ ವಾಸ್ತವಗಳನ್ನು ಗಮನದಲ್ಲಿಟ್ಟುಕೊಂಡು ಕೆಲಸ ಮಾಡುತ್ತಿದ್ದರೆ, ಭಾರತ ಸರ್ಕಾರವು ಉತ್ತರಾಖಂಡದಲ್ಲಿ ಅಭೂತಪೂರ್ವ ಹೂಡಿಕೆಗಳನ್ನು ಮಾಡುತ್ತಿದೆ. ಸರ್ಕಾರದ ಎರಡೂ ಹಂತಗಳು ಪರಸ್ಪರರ ಪ್ರಯತ್ನಗಳನ್ನು ಹೆಚ್ಚಿಸುತ್ತಿವೆ. ಗ್ರಾಮೀಣ ಪ್ರದೇಶಗಳಿಂದ ʻಚಾರ್ ಧಾಮ್ʼಗೆ ಹೋಗುವ ಕಾಮಗಾರಿಯನ್ನು ಉಲ್ಲೇಖಿಸಿದ ಪ್ರಧಾನಮಂತ್ರಿಯವರು, ದೆಹಲಿ-ಡೆಹ್ರಾಡೂನ್ ನಡುವಿನ ಪ್ರಯಾಣ ಅವಧಿಯನ್ನು ಎರಡೂವರೆ ಗಂಟೆಗಳಿಗೆ ಇಳಿಸುವ ದಿನ ದೂರವಿಲ್ಲ ಎಂದರು. ಡೆಹ್ರಾಡೂನ್ ಮತ್ತು ಪಂತ್‌ನಗರ ವಿಮಾನ ನಿಲ್ದಾಣ ವಿಸ್ತರಣೆಯು ವಾಯು ಸಂಪರ್ಕವನ್ನು ಬಲಪಡಿಸುತ್ತದೆ. ರಾಜ್ಯದಲ್ಲಿ ಹೆಲಿ-ಟ್ಯಾಕ್ಸಿ ಸೇವೆಗಳನ್ನು ವಿಸ್ತರಿಸಲಾಗುತ್ತಿದೆ ಮತ್ತು ರೈಲು ಸಂಪರ್ಕವನ್ನು ಬಲಪಡಿಸಲಾಗುತ್ತಿದೆ. ಇವೆಲ್ಲವೂ ಕೃಷಿ, ಕೈಗಾರಿಕೆ, ಸರಕು-ಸಾಗಣೆ, ಸಂಗ್ರಹಣೆ, ಪ್ರವಾಸೋದ್ಯಮ ಹಾಗೂ ಆತಿಥ್ಯಕ್ಕೆ ಹೊಸ ಅವಕಾಶಗಳನ್ನು ಸೃಷ್ಟಿಸುತ್ತಿವೆ ಎಂದು ಪ್ರಧಾನಿ ಮಾಹಿತಿ ನೀಡಿದರು.

ಗಡಿ ಪ್ರದೇಶಗಳಲ್ಲಿರುವ ಸ್ಥಳಗಳಿಗೆ ಸೀಮಿತ ಅಭಿವೃದ್ಧಿ ಅವಕಾಶಗಳನ್ನು ನೀಡಿದ ಹಿಂದಿನ ಸರ್ಕಾರಗಳ ಕಾರ್ಯವಿಧಾನಕ್ಕೆ ವ್ಯತಿರಿಕ್ತವಾಗಿ, ಅವುಗಳನ್ನು ದೇಶದ ಮೊದಲ ಗ್ರಾಮವಾಗಿ ಅಭಿವೃದ್ಧಿಪಡಿಸುವ ಡಬಲ್ ಎಂಜಿನ್ ಸರ್ಕಾರದ ಪ್ರಯತ್ನಗಳನ್ನು ಪ್ರಧಾನಿ ಒತ್ತಿ ಹೇಳಿದರು. ʻಮಹತ್ವಾಕಾಂಕ್ಷೆಯ ಜಿಲ್ಲೆಗಳುʼ ಮತ್ತು ʻಮಹತ್ವಾಕಾಂಕ್ಷೆಯ ಬ್ಲಾಕ್ʼಗಳ ಕಾರ್ಯಕ್ರಮವನ್ನು ಪ್ರಸ್ತಾಪಿಸಿದ ಅವರು, ಅಲ್ಲಿ ಅಭಿವೃದ್ಧಿ ಮಾನದಂಡಗಳಲ್ಲಿ ಹಿಂದುಳಿದಿರುವ ಗ್ರಾಮಗಳು ಮತ್ತು ಪ್ರದೇಶಗಳಿಗೆ ಒತ್ತು ನೀಡಲಾಗುತ್ತಿದೆ ಎಂದರು. ಉತ್ತರಾಖಂಡದ ಬಳಕೆಯಾಗದ ಸಾಮರ್ಥ್ಯವನ್ನು ಎತ್ತಿ ತೋರಿಸಿದ ಶ್ರೀ ಮೋದಿ ಅವರು, ಇದರ ಗರಿಷ್ಠ ಲಾಭವನ್ನು ಪಡೆದುಕೊಳ್ಳುವಂತೆ ಹೂಡಿಕೆದಾರರನ್ನು ಒತ್ತಾಯಿಸಿದರು.

 

ಡಬಲ್ ಇಂಜಿನ್ ಸರ್ಕಾರದ ಲಾಭ ಪಡೆದಿರುವ ಉತ್ತರಾಖಂಡದ ಪ್ರವಾಸೋದ್ಯಮ ಕ್ಷೇತ್ರದ ಬಗ್ಗೆ ಬೆಳಕು ಚೆಲ್ಲಿದ ಪ್ರಧಾನಮಂತ್ರಿಯವರು, ಭಾರತಕ್ಕೆ ಭೇಟಿ ನೀಡಲು ವಿಶ್ವದಾದ್ಯಂತ ಮತ್ತು ದೇಶದ ಜನರು ತೋರುತ್ತಿರುವ ಉತ್ಸಾಹವನ್ನು ಉಲ್ಲೇಖಿಸಿದರು. ಪ್ರವಾಸಿಗರಿಗೆ ಪ್ರಕೃತಿ ಮತ್ತು ಭಾರತದ ಪರಂಪರೆಯನ್ನು ಪರಿಚಯಿಸುವ ಉದ್ದೇಶದಿಂದ ʻಥೀಮ್ʼ ಆಧಾರಿತ ಪ್ರವಾಸಿ ಸರ್ಕ್ಯೂಟ್‌ಗಳ ರಚನೆಯ ಬಗ್ಗೆ ಅವರು ಮಾಹಿತಿ ನೀಡಿದರು. ಪ್ರಕೃತಿ, ಸಂಸ್ಕೃತಿ ಮತ್ತು ಪರಂಪರೆಯನ್ನು ಒಳಗೊಂಡಿರುವ ಉತ್ತರಾಖಂಡವು ಒಂದು ʻಬ್ರಾಂಡ್ʼ ಆಗಿ ಹೊರಹೊಮ್ಮಲಿದೆ ಎಂದು ಪ್ರಧಾನಿ ಒತ್ತಿ ಹೇಳಿದರು. ಯೋಗ, ಆಯುರ್ವೇದ, ತೀರ್ಥಯಾತ್ರೆ ಮತ್ತು ಸಾಹಸ ಕ್ರೀಡಾ ಕ್ಷೇತ್ರಗಳಲ್ಲಿ ಅವಕಾಶಗಳನ್ನು ಅನ್ವೇಷಿಸಲು ಮತ್ತು ಸೃಷ್ಟಿಸಲು ಆದ್ಯತೆ ನೀಡುವಂತೆ ಅವರು ಹೂಡಿಕೆದಾರರಿಗೆ ಒತ್ತಿ ಹೇಳಿದರು. 'ಮೇಕ್ ಇನ್ ಇಂಡಿಯಾ' ಮಾದರಿಯಲ್ಲಿ 'ವೆಡ್ ಇನ್ ಇಂಡಿಯಾ' ಆಂದೋಲನವನ್ನು ಪ್ರಾರಂಭಿಸುವಂತೆ ಪ್ರಧಾನಿ ಮೋದಿ ದೇಶದ ಶ್ರೀಮಂತರು ಮತ್ತು ಯುವಕರಿಗೆ ಮನವಿ ಮಾಡಿದರು. ಮುಂದಿನ ಐದು ವರ್ಷಗಳಲ್ಲಿ ಉತ್ತರಾಖಂಡದಲ್ಲಿ ಕನಿಷ್ಠ ಒಂದು ವಿವಾಹ ಸಮಾರಂಭವನ್ನು ನಡೆಸಿ ಆಯೋಜಿಸುವಂತೆ ಅವರು ವಿನಂತಿಸಿದರು. "ಉತ್ತರಾಖಂಡದಲ್ಲಿ 1 ವರ್ಷದಲ್ಲಿ 5000 ವಿವಾಹಗಳು ನಡೆದರೂ, ಹೊಸ ಮೂಲಸೌಕರ್ಯಗಳು ಜಾರಿಗೆ ಬರುತ್ತವೆ ಮತ್ತು ರಾಜ್ಯವನ್ನು ವಿಶ್ವದ ವಿವಾಹ ತಾಣವಾಗಿ ಪರಿವರ್ತಿಸುತ್ತವೆ," ಎಂದು ಪ್ರಧಾನಿ ಹೇಳಿದರು.

ಭಾರತದಲ್ಲಿ ಬದಲಾವಣೆಯ ಬಲವಾದ ಗಾಳಿ ಬೀಸುತ್ತಿದೆ ಎಂದು ಪ್ರಧಾನಿ ಹೇಳಿದರು. ಕಳೆದ 10 ವರ್ಷಗಳಲ್ಲಿ ʻಮಹತ್ವಾಕಾಂಕ್ಷೆಯ ಭಾರತʼವನ್ನು ಸೃಷ್ಟಿಸಲಾಗಿದೆ. ಈ ಹಿಂದೆ ಅವಕಾಶ ವಂಚಿತರಾಗಿದ್ದ ಹೆಚ್ಚಿನ ಪಾಲಿನ ಜನರಿಗೆ ಸರ್ಕಾರದ ಯೋಜನೆಗಳು ಮತ್ತು ಅವಕಾಶಗಳನ್ನು ತಲುಪಿಸಲಾಗುತ್ತಿದೆ. ಬಡತನದಿಂದ ಹೊರಬಂದ ಕೋಟ್ಯಂತರ ಜನರು ಆರ್ಥಿಕತೆಗೆ ಹೊಸ ವೇಗವನ್ನು ನೀಡುತ್ತಿದ್ದಾರೆ. ನವ ಮಧ್ಯಮ ವರ್ಗ ಮತ್ತು ಮಧ್ಯಮ ವರ್ಗ ಎರಡೂ ಹೆಚ್ಚು ಖರ್ಚು ಮಾಡುತ್ತಿವೆ ಎಂದರು. "ನಾವು ಭಾರತದ ಮಧ್ಯಮ ವರ್ಗದ ಸಾಮರ್ಥ್ಯವನ್ನು ಅರ್ಥಮಾಡಿಕೊಳ್ಳಬೇಕು. ಉತ್ತರಾಖಂಡದಲ್ಲಿ ಸಮಾಜದ ಈ ಶಕ್ತಿಯು ನಿಮಗೆ ದೊಡ್ಡ ಮಾರುಕಟ್ಟೆಯನ್ನು ಸೃಷ್ಟಿಸುತ್ತಿದೆ", ಎಂದು ಶ್ರೀ ಮೋದಿ ಹೇಳಿದರು.

ʻಹೌಸ್ ಆಫ್ ಹಿಮಾಲಯಾʼ ಬ್ರಾಂಡ್ ಅನ್ನು ಪ್ರಾರಂಭಿಸಿದ್ದಕ್ಕಾಗಿ ಉತ್ತರಾಖಂಡ ಸರ್ಕಾರವನ್ನು ಪ್ರಧಾನಿ ಅಭಿನಂದಿಸಿದರು ಮತ್ತು ಇದು  ಉತ್ತರಾಖಂಡದ ಸ್ಥಳೀಯ ಉತ್ಪನ್ನಗಳನ್ನು ವಿದೇಶಿ ಮಾರುಕಟ್ಟೆಗಳಿಗೆ ಕೊಂಡೊಯ್ಯುವ ನವೀನ ಪ್ರಯತ್ನ ಎಂದು ಬಣ್ಣಿಸಿದರು. "ಹೌಸ್ ಆಫ್ ಹಿಮಾಲಯʼವು ʻವೋಕಲ್ ಫಾರ್ ಲೋಕಲ್ʼ ಮತ್ತು ʻಲೋಕಲ್ ಫಾರ್ ಗ್ಲೋಬಲ್ʼ ಎಂಬ ನಮ್ಮ ಪರಿಕಲ್ಪನೆಯನ್ನು ಮತ್ತಷ್ಟು ಬಲಪಡಿಸುತ್ತದೆ," ಎಂದು ಶ್ರೀ ಮೋದಿ ಹೇಳಿದರು. ಭಾರತದ ಪ್ರತಿಯೊಂದು ಜಿಲ್ಲೆ ಮತ್ತು ಬ್ಲಾಕ್‌ನ ಉತ್ಪನ್ನಗಳು ಜಾಗತಿಕ ಉತ್ಪನ್ನವಾಗುವ ಸಾಮರ್ಥ್ಯವನ್ನು ಹೊಂದಿವೆ ಎಂದು ಅವರು ಗಮನ ಸೆಳೆದರು. ವಿದೇಶಗಳಲ್ಲಿ ದುಬಾರಿ ಮಣ್ಣಿನ ಪಾತ್ರೆಗಳನ್ನು ತಯಾರಿಸಿ ವಿಶೇಷ ರೀತಿಯಲ್ಲಿ ಪ್ರಸ್ತುತಪಡಿಸುವ ಉದಾಹರಣೆಯನ್ನು ಅವರು ನೀಡಿದರು. ಸಾಂಪ್ರದಾಯಿಕವಾಗಿ ಇಂತಹ ಅನೇಕ ಅತ್ಯುತ್ತಮ ಉತ್ಪನ್ನಗಳನ್ನು ತಯಾರಿಸುವ ಭಾರತದ ವಿಶ್ವಕರ್ಮರ ಕೌಶಲ್ಯ ಮತ್ತು ಕರಕುಶಲತೆಯ ಬಗ್ಗೆ ಗಮನ ಸೆಳೆದ ಪ್ರಧಾನಮಂತ್ರಿಯವರು, ಇಂತಹ ಸ್ಥಳೀಯ ಉತ್ಪನ್ನಗಳಿಗೆ ಜಾಗತಿಕ ಮಾರುಕಟ್ಟೆಯನ್ನು ಅನ್ವೇಷಿಸುವ ಮಹತ್ವವನ್ನು ಒತ್ತಿ ಹೇಳಿದರು. ಅಂತಹ ಉತ್ಪನ್ನಗಳನ್ನು ವಿವಿಧ ಜಿಲ್ಲೆಗಳಲ್ಲಿ ಗುರುತಿಸುವಂತೆ ಹೂಡಿಕೆದಾರರನ್ನು ಒತ್ತಾಯಿಸಿದರು. ಮಹಿಳಾ ಸ್ವಸಹಾಯ ಗುಂಪುಗಳು ಮತ್ತು ʻಎಫ್‌ಪಿಒʼಗಳೊಂದಿಗೆ ತೊಡಗಿಸಿಕೊಳ್ಳುವ ಸಾಧ್ಯತೆಗಳನ್ನು ಅನ್ವೇಷಿಸುವಂತೆ ಅವರು ಒತ್ತಾಯಿಸಿದರು. "ಉತ್ಪನ್ನಗಳನ್ನು ಸ್ಥಳೀಯ-ಜಾಗತಿಕʼವಾಗಿಸಲು ಇದು ಅದ್ಭುತ ಪಾಲುದಾರಿಕೆಯಾಗಬಹುದು," ಎಂದು ಅವರು ಹೇಳಿದರು. ʻಲಕ್ಷಾಧಿಪತಿ ದೀದಿʼ ಅಭಿಯಾನದ ಬಗ್ಗೆ ಪ್ರಸ್ತಾಪಿಸಿದ ಪ್ರಧಾನಮಂತ್ರಿಯವರು, ದೇಶದ ಗ್ರಾಮೀಣ ಪ್ರದೇಶಗಳಿಂದ ಎರಡು ಕೋಟಿ ʻಲಕ್ಷಾಧಿಪತಿ ದೀದಿʼಯರನ್ನು ಸೃಷ್ಟಿಸುವ ತಮ್ಮ ಸಂಕಲ್ಪವನ್ನು ಒತ್ತಿ ಹೇಳಿದರು. ʻಹೌಸ್ ಆಫ್ ಹಿಮಾಲಯʼದ ಬ್ರಾಂಡ್ ಉದ್ಘಾಟನೆಯೊಂದಿಗೆ ಈ ಉಪಕ್ರಮವು ವೇಗವನ್ನು ಪಡೆಯಲಿದೆ ಎಂದರು. ಈ ಉಪಕ್ರಮಕ್ಕಾಗಿ ಅವರು ಉತ್ತರಾಖಂಡ ಸರ್ಕಾರಕ್ಕೆ ಧನ್ಯವಾದ ಅರ್ಪಿಸಿದರು.

 

ರಾಷ್ಟ್ರೀಯ ಚಾರಿತ್ರ್ಯವನ್ನು ಬಲಪಡಿಸುವ ಬಗ್ಗೆ ಕೆಂಪು ಕೋಟೆಯಿಂದ ತಾವು ನೀಡಿದ ಕರೆಯನ್ನು ಉಲ್ಲೇಖಿಸಿದ ಪ್ರಧಾನಮಂತ್ರಿಯವರು, "ನಾವು ಏನೇ ಮಾಡಿದರೂ ಅದು ವಿಶ್ವದಲ್ಲೇ ಅತ್ಯುತ್ತಮವಾಗಿರಬೇಕು. ನಮ್ಮ ಮಾನದಂಡಗಳನ್ನು ಜಗತ್ತು ಅನುಸರಿಸಬೇಕು. ನಮ್ಮ ಉತ್ಪಾದನೆಯು ಶೂನ್ಯ ಪರಿಣಾಮ, ಶೂನ್ಯ ದೋಷದ ತತ್ವದ ಮೇಲೆ ಇರಬೇಕು. ರಫ್ತು ಆಧಾರಿತ ಉತ್ಪಾದನೆಯನ್ನು ಹೇಗೆ ಹೆಚ್ಚಿಸುವುದು ಎಂಬುದರ ಬಗ್ಗೆ ನಾವು ಈಗ ಗಮನ ಹರಿಸಬೇಕಾಗಿದೆ. ಮಹತ್ವಾಕಾಂಕ್ಷೆಯ ʻಪಿಎಲ್ಐʼ ಅಭಿಯಾನಗಳು ನಿರ್ಣಾಯಕ ಕ್ಷೇತ್ರಗಳಿಗೆ ಪರಿಸರ ವ್ಯವಸ್ಥೆಯನ್ನು ರಚಿಸುವ ಸಂಕಲ್ಪವನ್ನು ಪ್ರದರ್ಶಿಸುತ್ತವೆ ಎಂದು ಅವರು ಹೇಳಿದರು. ಹೊಸ ಹೂಡಿಕೆಯ ಮೂಲಕ ಸ್ಥಳೀಯ ಪೂರೈಕೆ ಸರಪಳಿ ಮತ್ತು ಸಣ್ಣ ಕೈಗಾರಿಕೆಗಳನ್ನು ಬಲಪಡಿಸುವ ಅಗತ್ಯವನ್ನು ಅವರು ಒತ್ತಿ ಹೇಳಿದರು.

ಅಗ್ಗದ ರಫ್ತಿನ ಮನಸ್ಥಿತಿಯಿಂದ ಹೊರಬಂದು ಸಾಮರ್ಥ್ಯ ವರ್ಧನೆಗೆ ಆದ್ಯತೆ ನೀಡುವ ಅಗತ್ಯವಿದೆ ಎಂದು ಪ್ರಧಾನಿ ಹೇಳಿದರು. ಪೆಟ್ರೋಲಿಯಂಗೆ 15 ಲಕ್ಷ ಕೋಟಿ ರೂ.ಗಳ ಆಮದು ವೆಚ್ಚ ಮತ್ತು ಕಲ್ಲಿದ್ದಲಿಗೆ 4 ಲಕ್ಷ ಕೋಟಿ ರೂ.ಗಳ ಆಮದು ವೆಚ್ಚದ ಬಗ್ಗೆ ಅವರು ಉಲ್ಲೇಖಿಸಿದರು. ಇಂದಿಗೂ ಭಾರತವು 15 ಸಾವಿರ ಕೋಟಿ ಮೌಲ್ಯದ ಬೇಳೆಕಾಳುಗಳನ್ನು ಆಮದು ಮಾಡಿಕೊಳ್ಳುತ್ತಿರುವುದರಿಂದ ಬೇಳೆಕಾಳುಗಳು ಮತ್ತು ಎಣ್ಣೆಕಾಳುಗಳ ಆಮದನ್ನು ಕಡಿಮೆ ಮಾಡುವ ಪ್ರಯತ್ನಗಳ ಬಗ್ಗೆ ಅವರು ವಿವರಿಸಿದರು.

ಭಾರತವು ಸಿರಿಧಾನ್ಯಗಳಂತಹ ಪೌಷ್ಟಿಕ ಆಹಾರದಿಂದ ಸಮೃದ್ಧವಾಗಿದೆ. ಹೀಗಿದ್ದರೂ ಪೌಷ್ಠಿಕಾಂಶದ ಹೆಸರಿನಲ್ಲಿ ಪ್ಯಾಕೇಜ್ ಮಾಡಿದ ಆಹಾರ ಬಳಕೆ ವಿರುದ್ಧ ಪ್ರಧಾನಿ ಎಚ್ಚರಿಕೆ ನೀಡಿದರು. ಆಯುಷ್ ಸಂಬಂಧಿತ ಸಾವಯವ ಆಹಾರದ ಸಾಧ್ಯತೆಗಳು ಮತ್ತು ಅವು ರಾಜ್ಯದ ರೈತರಿಗೆ ಮತ್ತು ಉದ್ಯಮಿಗಳಿಗೆ ಒದಗಿಸುವ ಅವಕಾಶಗಳನ್ನು ಅವರು ಎತ್ತಿ ತೋರಿಸಿದರು. ಪ್ಯಾಕೇಜ್ ಮಾಡಿದ ಆಹಾರದಲ್ಲಿಯೂ ಸಹ, ಸ್ಥಳೀಯ ಉತ್ಪನ್ನವು ಜಾಗತಿಕ ಮಾರುಕಟ್ಟೆಗಳನ್ನು ಪ್ರವೇಶಿಸಲು ಸಹಾಯ ಮಾಡುವಂತೆ ಅವರು ಕರೆ ನೀಡಿದರು.

ತಮ್ಮ ಭಾಷಣವನ್ನು ಮುಗಿಸುವ ಮುನ್ನ ಪ್ರಧಾನಮಂತ್ರಿಯವರು, ವರ್ತಮಾನವು ಭಾರತಕ್ಕೆ, ಅದರ ಕಂಪನಿಗಳಿಗೆ ಮತ್ತು ಅದರ ಹೂಡಿಕೆದಾರರಿಗೆ ಅಭೂತಪೂರ್ವ ಸಮಯವಾಗಿದೆ ಎಂದರು. "ಮುಂದಿನ ಕೆಲವು ವರ್ಷಗಳಲ್ಲಿ ಭಾರತವು ವಿಶ್ವದ ಮೂರನೇ ಅತಿದೊಡ್ಡ ಆರ್ಥಿಕತೆಯಾಗಲಿದೆ" ಎಂದು ಅವರು ಹೇಳಿದರು. ಸ್ಥಿರ ಸರ್ಕಾರ, ಬೆಂಬಲಿತ ನೀತಿ ವ್ಯವಸ್ಥೆ, ಸುಧಾರಣೆ ಮತ್ತು ಪರಿವರ್ತನೆಯ ಮನಸ್ಥಿತಿ ಹಾಗೂ ಅಭಿವೃದ್ಧಿಯಲ್ಲಿ ವಿಶ್ವಾಸದ ಸಂಯೋಜನೆಯನ್ನು ಅವರು ಶ್ಲಾಘಿಸಿದರು. "ಇದು ಸರಿಯಾದ ಸಮಯ, ಇದು ಭಾರತದ ಸಮಯ," ಎಂದು ಪ್ರಧಾನಿ ಹೇಳಿದರು. ಉತ್ತರಾಖಂಡದೊಂದಿಗೆ ಹೆಜ್ಜೆ ಹಾಕುವಂತೆ ಮತ್ತು ಅದರ ಅಭಿವೃದ್ಧಿಯ ಪಯಣದಲ್ಲಿ ಭಾಗವಹಿಸುವಂತೆ ಹೂಡಿಕೆದಾರರಿಗೆ ಮನವಿ ಮಾಡಿದರು.

ಉತ್ತರಾಖಂಡದ ರಾಜ್ಯಪಾಲ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮಿತ್ ಸಿಂಗ್ ಮತ್ತು ಉತ್ತರಾಖಂಡದ ಮುಖ್ಯಮಂತ್ರಿ ಶ್ರೀ ಪುಷ್ಕರ್ ಸಿಂಗ್ ಧಾಮಿ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಹಿನ್ನೆಲೆ

'ಉತ್ತರಾಖಂಡ್ ಜಾಗತಿಕ ಹೂಡಿಕೆದಾರರ ಸಮಾವೇಶ-2023' ಉತ್ತರಾಖಂಡವನ್ನು ಹೊಸ ಹೂಡಿಕೆ ತಾಣವಾಗಿ ಸ್ಥಾಪಿಸುವ ನಿಟ್ಟಿನಲ್ಲಿ ಒಂದು ಮಹತ್ವದ ಹೆಜ್ಜೆಯಾಗಿದೆ. ಎರಡು ದಿನಗಳ ಸಮಾವೇಶವು 2023ರ ಡಿಸೆಂಬರ್ 8 ಮತ್ತು 9 ರಂದು "ಶಾಂತಿಯಿಂದ ಸಮೃದ್ಧಿಗೆ" ಎಂಬ ವಿಷಯಾಧಾರಿತವಾಗಿ ನಡೆಯಲಿದೆ.

ವಿಶ್ವದ ವಿವಿಧ ಭಾಗಗಳಿಂದ ಸಾವಿರಾರು ಹೂಡಿಕೆದಾರರು ಮತ್ತು ಪ್ರತಿನಿಧಿಗಳು ಸಮಾಶದಲ್ಲಿ ಭಾಗವಹಿಸಲಿದ್ದಾರೆ. ಕೇಂದ್ರ ಸಚಿವರು, ವಿವಿಧ ದೇಶಗಳ ರಾಯಭಾರಿಗಳು ಮತ್ತು ಪ್ರಮುಖ ಕೈಗಾರಿಕೋದ್ಯಮಿಗಳು ಸಮಾವೇಶದಲ್ಲಿ ಭಾಗವಹಿಸಿದ್ದಾರೆ.

 

ಭಾಷಣದ ಪೂರ್ಣ ಪಠ್ಯವನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
MSME exports touch Rs 9.52 lakh crore in April–September FY26: Govt tells Parliament

Media Coverage

MSME exports touch Rs 9.52 lakh crore in April–September FY26: Govt tells Parliament
NM on the go

Nm on the go

Always be the first to hear from the PM. Get the App Now!
...
Assam has picked up a new momentum of development: PM Modi at the foundation stone laying of Ammonia-Urea Fertilizer Project in Namrup
December 21, 2025
Assam has picked up a new momentum of development: PM
Our government is placing farmers' welfare at the centre of all its efforts: PM
Initiatives like PM Dhan Dhanya Krishi Yojana and the Dalhan Atmanirbharta Mission are launched to promote farming and support farmers: PM
Guided by the vision of Sabka Saath, Sabka Vikas, our efforts have transformed the lives of poor: PM

उज्जनिर रायज केने आसे? आपुनालुकोलोई मुर अंतोरिक मोरोम आरु स्रद्धा जासिसु।

असम के गवर्नर लक्ष्मण प्रसाद आचार्य जी, मुख्यमंत्री हिमंता बिस्वा शर्मा जी, केंद्र में मेरे सहयोगी और यहीं के आपके प्रतिनिधि, असम के पूर्व मुख्यमंत्री, सर्बानंद सोनोवाल जी, असम सरकार के मंत्रीगण, सांसद, विधायक, अन्य महानुभाव, और विशाल संख्या में आए हुए, हम सबको आशीर्वाद देने के लिए आए हुए, मेरे सभी भाइयों और बहनों, जितने लोग पंडाल में हैं, उससे ज्यादा मुझे वहां बाहर दिखते हैं।

सौलुंग सुकाफा और महावीर लसित बोरफुकन जैसे वीरों की ये धरती, भीमबर देउरी, शहीद कुसल कुवर, मोरान राजा बोडौसा, मालती मेम, इंदिरा मिरी, स्वर्गदेव सर्वानंद सिंह और वीरांगना सती साध`नी की ये भूमि, मैं उजनी असम की इस महान मिट्टी को श्रद्धापूर्वक नमन करता हूँ।

साथियों,

मैं देख रहा हूँ, सामने दूर-दूर तक आप सब इतनी बड़ी संख्या में अपना उत्साह, अपना उमंग, अपना स्नेह बरसा रहे हैं। और खासकर, मेरी माताएँ बहनें, इतनी विशाल संख्या में आप जो प्यार और आशीर्वाद लेकर आईं हैं, ये हमारी सबसे बड़ी शक्ति है, सबसे बड़ी ऊर्जा है, एक अद्भुत अनुभूति है। मेरी बहुत सी बहनें असम के चाय बगानों की खुशबू लेकर यहां उपस्थित हैं। चाय की ये खुशबू मेरे और असम के रिश्तों में एक अलग ही ऐहसास पैदा करती है। मैं आप सभी को प्रणाम करता हूँ। इस स्नेह और प्यार के लिए मैं हृदय से आप सबका आभार करता हूँ।

साथियों,

आज असम और पूरे नॉर्थ ईस्ट के लिए बहुत बड़ा दिन है। नामरूप और डिब्रुगढ़ को लंबे समय से जिसका इंतज़ार था, वो सपना भी आज पूरा हो रहा है, आज इस पूरे इलाके में औद्योगिक प्रगति का नया अध्याय शुरू हो रहा है। अभी थोड़ी देर पहले मैंने यहां अमोनिया–यूरिया फर्टिलाइज़र प्लांट का भूमि पूजन किया है। डिब्रुगढ़ आने से पहले गुवाहाटी में एयरपोर्ट के एक टर्मिनल का उद्घाटन भी हुआ है। आज हर कोई कह रहा है, असम विकास की एक नई रफ्तार पकड़ चुका है। मैं आपको बताना चाहता हूँ, अभी आप जो देख रहे हैं, जो अनुभव कर रहे हैं, ये तो एक शुरुआत है। हमें तो असम को बहुत आगे लेकर के जाना है, आप सबको साथ लेकर के आगे बढ़ना है। असम की जो ताकत और असम की भूमिका ओहोम साम्राज्य के दौर में थी, विकसित भारत में असम वैसी ही ताकतवर भूमि बनाएंगे। नए उद्योगों की शुरुआत, आधुनिक इनफ्रास्ट्रक्चर का निर्माण, Semiconductors, उसकी manufacturing, कृषि के क्षेत्र में नए अवसर, टी-गार्डेन्स और उनके वर्कर्स की उन्नति, पर्यटन में बढ़ती संभावनाएं, असम हर क्षेत्र में आगे बढ़ रहा है। मैं आप सभी को और देश के सभी किसान भाई-बहनों को इस आधुनिक फर्टिलाइज़र प्लांट के लिए बहुत-बहुत शुभकामनाएँ देता हूँ। मैं आपको गुवाहटी एयरपोर्ट के नए टर्मिनल के लिए भी बधाई देता हूँ। बीजेपी की डबल इंजन सरकार में, उद्योग और कनेक्टिविटी की ये जुगलबंदी, असम के सपनों को पूरा कर रही है, और साथ ही हमारे युवाओं को नए सपने देखने का हौसला भी दे रही है।

साथियों,

विकसित भारत के निर्माण में देश के किसानों की, यहां के अन्नदाताओं की बहुत बड़ी भूमिका है। इसलिए हमारी सरकार किसानों के हितों को सर्वोपरि रखते हुए दिन-रात काम कर रही है। यहां आप सभी को किसान हितैषी योजनाओं का लाभ दिया जा रहा है। कृषि कल्याण की योजनाओं के बीच, ये भी जरूरी है कि हमारे किसानों को खाद की निरंतर सप्लाई मिलती रहे। आने वाले समय में ये यूरिया कारख़ाना यह सुनिश्चित करेगा। इस फर्टिलाइज़र प्रोजेक्ट पर करीब 11 हजार करोड़ रुपए खर्च किए जाएंगे। यहां हर साल 12 लाख मीट्रिक टन से ज्यादा खाद बनेगी। जब उत्पादन यहीं होगा, तो सप्लाई तेज होगी। लॉजिस्टिक खर्च घटेगा।

साथियों,

नामरूप की ये यूनिट रोजगार-स्वरोजगार के हजारों नए अवसर भी बनाएगी। प्लांट के शुरू होते ही अनेकों लोगों को यहीं पर स्थायी नौकरी भी मिलेगी। इसके अलावा जो काम प्लांट के साथ जुड़ा होता है, मरम्मत हो, सप्लाई हो, कंस्ट्रक्शन का बहुत बड़ी मात्रा में काम होगा, यानी अनेक काम होते हैं, इन सबमें भी यहां के स्थानीय लोगों को और खासकर के मेरे नौजवानों को रोजगार मिलेगा।

लेकिन भाइयों बहनों,

आप सोचिए, किसानों के कल्याण के लिए काम बीजेपी सरकार आने के बाद ही क्यों हो रहा है? हमारा नामरूप तो दशकों से खाद उत्पादन का केंद्र था। एक समय था, जब यहां बनी खाद से नॉर्थ ईस्ट के खेतों को ताकत मिलती थी। किसानों की फसलों को सहारा मिलता था। जब देश के कई हिस्सों में खाद की आपूर्ति चुनौती बनी, तब भी नामरूप किसानों के लिए उम्मीद बना रहा। लेकिन, पुराने कारखानों की टेक्नालजी समय के साथ पुरानी होती गई, और काँग्रेस की सरकारों ने कोई ध्यान नहीं दिया। नतीजा ये हुआ कि, नामरूप प्लांट की कई यूनिट्स इसी वजह से बंद होती गईं। पूरे नॉर्थ ईस्ट के किसान परेशान होते रहे, देश के किसानों को भी तकलीफ हुई, उनकी आमदनी पर चोट पड़ती रही, खेती में तकलीफ़ें बढ़ती गईं, लेकिन, काँग्रेस वालों ने इस समस्या का कोई हल ही नहीं निकाला, वो अपनी मस्ती में ही रहे। आज हमारी डबल इंजन सरकार, काँग्रेस द्वारा पैदा की गई उन समस्याओं का समाधान भी कर रही है।

साथियों,

असम की तरह ही, देश के दूसरे राज्यों में भी खाद की कितनी ही फ़ैक्टरियां बंद हो गईं थीं। आप याद करिए, तब किसानों के क्या हालात थे? यूरिया के लिए किसानों को लाइनों में लगना पड़ता था। यूरिया की दुकानों पर पुलिस लगानी पड़ती थी। पुलिस किसानों पर लाठी बरसाती थी।

भाइयों बहनों,

काँग्रेस ने जिन हालातों को बिगाड़ा था, हमारी सरकार उन्हें सुधारने के लिए एडी-चोटी की ताकत लगा रही है। और इन्होंने इतना बुरा किया,इतना बुरा किया कि, 11 साल से मेहनत करने के बाद भी, अभी मुझे और बहुत कुछ करना बाकी है। काँग्रेस के दौर में फर्टिलाइज़र्स फ़ैक्टरियां बंद होती थीं। जबकि हमारी सरकार ने गोरखपुर, सिंदरी, बरौनी, रामागुंडम जैसे अनेक प्लांट्स शुरू किए हैं। इस क्षेत्र में प्राइवेट सेक्टर को भी बढ़ावा दिया जा रहा है। आज इसी का नतीजा है, हम यूरिया के क्षेत्र में आने वाले कुछ समय में आत्मनिर्भर हो सके, उस दिशा में मजबूती से कदम रख रहे हैं।

साथियों,

2014 में देश में सिर्फ 225 लाख मीट्रिक टन यूरिया का ही उत्पादन होता था। आपको आंकड़ा याद रहेगा? आंकड़ा याद रहेगा? मैं आपने मुझे काम दिया 10-11 साल पहले, तब उत्पादन होता था 225 लाख मीट्रिक टन। ये आंकड़ा याद रखिए। पिछले 10-11 साल की मेहनत में हमने उत्पादन बढ़ाकर के करीब 306 लाख मीट्रिक टन तक पहुंच चुका है। लेकिन हमें यहां रूकना नहीं है, क्योंकि अभी भी बहुत करने की जरूरत है। जो काम उनको उस समय करना था, नहीं किया, और इसलिए मुझे थोड़ा एक्स्ट्रा मेहनत करनी पड़ रही है। और अभी हमें हर साल करीब 380 लाख मीट्रिक टन यूरिया की जरूरत पड़ती है। हम 306 पर पहुंचे हैं, 70-80 और करना है। लेकिन मैं देशवासियों को विश्वास दिलाता हूं, हम जिस प्रकार से मेहनत कर रहे हैं, जिस प्रकार से योजना बना रहे हैं और जिस प्रकार से मेरे किसान भाई-बहन हमें आशीर्वाद दे रहे हैं, हम हो सके उतना जल्दी इस गैप को भरने में कोई कमी नहीं रखेंगे।

और भाइयों और बहनों,

मैं आपको एक और बात बताना चाहता हूं, आपके हितों को लेकर हमारी सरकार बहुत ज्यादा संवेदनशील है। जो यूरिया हमें महंगे दामों पर विदेशों से मंगाना पड़ता है, हम उसकी भी चोट अपने किसानों पर नहीं पड़ने देते। बीजेपी सरकार सब्सिडी देकर वो भार सरकार खुद उठाती है। भारत के किसानों को सिर्फ 300 रुपए में यूरिया की बोरी मिलती है, उस एक बोरी के बदले भारत सरकार को दूसरे देशों को, जहां से हम बोरी लाते हैं, करीब-करीब 3 हजार रुपए देने पड़ते हैं। अब आप सोचिए, हम लाते हैं 3000 में, और देते हैं 300 में। यह सारा बोझ देश के किसानों पर हम नहीं पड़ने देते। ये सारा बोझ सरकार खुद भरती है। ताकि मेरे देश के किसान भाई बहनों पर बोझ ना आए। लेकिन मैं किसान भाई बहनों को भी कहूंगा, कि आपको भी मेरी मदद करनी होगी और वह मेरी मदद है इतना ही नहीं, मेरे किसान भाई-बहन आपकी भी मदद है, और वो है यह धरती माता को बचाना। हम धरती माता को अगर नहीं बचाएंगे तो यूरिया की कितने ही थैले डाल दें, यह धरती मां हमें कुछ नहीं देगी और इसलिए जैसे शरीर में बीमारी हो जाए, तो दवाई भी हिसाब से लेनी पड़ती है, दो गोली की जरूरत है, चार गोली खा लें, तो शरीर को फायदा नहीं नुकसान हो जाता है। वैसा ही इस धरती मां को भी अगर हम जरूरत से ज्यादा पड़ोस वाला ज्यादा बोरी डालता है, इसलिए मैं भी बोरी डाल दूं। इस प्रकार से अगर करते रहेंगे तो यह धरती मां हमसे रूठ जाएगी। यूरिया खिला खिलाकर के हमें धरती माता को मारने का कोई हक नहीं है। यह हमारी मां है, हमें उस मां को भी बचाना है।

साथियों,

आज बीज से बाजार तक भाजपा सरकार किसानों के साथ खड़ी है। खेत के काम के लिए सीधे खाते में पैसे पहुंचाए जा रहे हैं, ताकि किसान को उधार के लिए भटकना न पड़े। अब तक पीएम किसान सम्मान निधि के लगभग 4 लाख करोड़ रुपए किसानों के खाते में भेजे गए हैं। आंकड़ा याद रहेगा? भूल जाएंगे? 4 लाख करोड़ रूपया मेरे देश के किसानों के खाते में सीधे जमा किए हैं। इसी साल, किसानों की मदद के लिए 35 हजार करोड़ रुपए की दो योजनाएं नई योजनाएं शुरू की हैं 35 हजार करोड़। पीएम धन धान्य कृषि योजना और दलहन आत्मनिर्भरता मिशन, इससे खेती को बढ़ावा मिलेगा।

साथियों,

हम किसानों की हर जरूरत को ध्यान रखते हुए काम कर रहे हैं। खराब मौसम की वजह से फसल नुकसान होने पर किसान को फसल बीमा योजना का सहारा मिल रहा है। फसल का सही दाम मिले, इसके लिए खरीद की व्यवस्था सुधारी गई है। हमारी सरकार का साफ मानना है कि देश तभी आगे बढ़ेगा, जब मेरा किसान मजबूत होगा। और इसके लिए हर संभव प्रयास किए जा रहे हैं।

साथियों,

केंद्र में हमारी सरकार बनने के बाद हमने किसान क्रेडिट कार्ड की सुविधा से पशुपालकों और मछलीपालकों को भी जोड़ दिया था। किसान क्रेडिट कार्ड, KCC, ये KCC की सुविधा मिलने के बाद हमारे पशुपालक, हमारे मछली पालन करने वाले इन सबको खूब लाभ उठा रहा है। KCC से इस साल किसानों को, ये आंकड़ा भी याद रखो, KCC से इस साल किसानों को 10 लाख करोड़ रुपये से ज्यादा की मदद दी गई है। 10 लाख करोड़ रुपया। बायो-फर्टिलाइजर पर GST कम होने से भी किसानों को बहुत फायदा हुआ है। भाजपा सरकार भारत के किसानों को नैचुरल फार्मिंग के लिए भी बहुत प्रोत्साहन दे रही है। और मैं तो चाहूंगा असम के अंदर कुछ तहसील ऐसे आने चाहिए आगे, जो शत प्रतिशत नेचुरल फार्मिंग करते हैं। आप देखिए हिंदुस्तान को असम दिशा दिखा सकता है। असम का किसान देश को दिशा दिखा सकता है। हमने National Mission On Natural Farming शुरू की, आज लाखों किसान इससे जुड़ चुके हैं। बीते कुछ सालों में देश में 10 हजार किसान उत्पाद संघ- FPO’s बने हैं। नॉर्थ ईस्ट को विशेष ध्यान में रखते हुए हमारी सरकार ने खाद्य तेलों- पाम ऑयल से जुड़ा मिशन भी शुरू किया। ये मिशन भारत को खाद्य तेल के मामले में आत्मनिर्भर तो बनाएगा ही, यहां के किसानों की आय भी बढ़ाएगा।

साथियों,

यहां इस क्षेत्र में बड़ी संख्या में हमारे टी-गार्डन वर्कर्स भी हैं। ये भाजपा की ही सरकार है जिसने असम के साढ़े सात लाख टी-गार्डन वर्कर्स के जनधन बैंक खाते खुलवाए। अब बैंकिंग व्यवस्था से जुड़ने की वजह से इन वर्कर्स के बैंक खातों में सीधे पैसे भेजे जाने की सुविधा मिली है। हमारी सरकार टी-गार्डन वाले क्षेत्रों में स्कूल, रोड, बिजली, पानी, अस्पताल की सुविधाएं बढ़ा रही है।

साथियों,

हमारी सरकार सबका साथ सबका विकास के मंत्र के साथ आगे बढ़ रही है। हमारा ये विजन, देश के गरीब वर्ग के जीवन में बहुत बड़ा बदलाव लेकर आया है। पिछले 11 वर्षों में हमारे प्रयासों से, योजनाओं से, योजनाओं को धरती पर उतारने के कारण 25 करोड़ लोग, ये आंकड़ा भी याद रखना, 25 करोड़ लोग गरीबी से बाहर निकले हैं। देश में एक नियो मिडिल क्लास तैयार हुआ है। ये इसलिए हुआ है, क्योंकि बीते वर्षों में भारत के गरीब परिवारों के जीवन-स्तर में निरंतर सुधार हुआ है। कुछ ताजा आंकड़े आए हैं, जो भारत में हो रहे बदलावों के प्रतीक हैं।

साथियों,

और मैं मीडिया में ये सारी चीजें बहुत काम आती हैं, और इसलिए मैं आपसे आग्रह करता हूं मैं जो बातें बताता हूं जरा याद रख के औरों को बताना।

साथियों,

पहले गांवों के सबसे गरीब परिवारों में, 10 परिवारों में से 1 के पास बाइक तक होती नहीं थी। 10 में से 1 के पास भी नहीं होती थी। अभी जो सर्वे आए हैं, अब गांव में रहने वाले करीब–करीब आधे परिवारों के पास बाइक या कार होती है। इतना ही नहीं मोबाइल फोन तो लगभग हर घर में पहुंच चुके हैं। फ्रिज जैसी चीज़ें, जो पहले “लग्ज़री” मानी जाती थीं, अब ये हमारे नियो मिडल क्लास के घरों में भी नजर आने लगी है। आज गांवों की रसोई में भी वो जगह बना चुका है। नए आंकड़े बता रहे हैं कि स्मार्टफोन के बावजूद, गांव में टीवी रखने का चलन भी बढ़ रहा है। ये बदलाव अपने आप नहीं हुआ। ये बदलाव इसलिए हुआ है क्योंकि आज देश का गरीब सशक्त हो रहा है, दूर-दराज के क्षेत्रों में रहने वाले गरीब तक भी विकास का लाभ पहुंचने लगा है।

साथियों,

भाजपा की डबल इंजन सरकार गरीबों, आदिवासियों, युवाओं और महिलाओं की सरकार है। इसीलिए, हमारी सरकार असम और नॉर्थ ईस्ट में दशकों की हिंसा खत्म करने में जुटी है। हमारी सरकार ने हमेशा असम की पहचान और असम की संस्कृति को सर्वोपरि रखा है। भाजपा सरकार असमिया गौरव के प्रतीकों को हर मंच पर हाइलाइट करती है। इसलिए, हम गर्व से महावीर लसित बोरफुकन की 125 फीट की प्रतिमा बनाते हैं, हम असम के गौरव भूपेन हजारिका की जन्म शताब्दी का वर्ष मनाते हैं। हम असम की कला और शिल्प को, असम के गोमोशा को दुनिया में पहचान दिलाते हैं, अभी कुछ दिन पहले ही Russia के राष्ट्रपति श्रीमान पुतिन यहां आए थे, जब दिल्ली में आए, तो मैंने बड़े गर्व के साथ उनको असम की ब्लैक-टी गिफ्ट किया था। हम असम की मान-मर्यादा बढ़ाने वाले हर काम को प्राथमिकता देते हैं।

लेकिन भाइयों बहनों,

भाजपा जब ये काम करती है तो सबसे ज्यादा तकलीफ काँग्रेस को होती है। आपको याद होगा, जब हमारी सरकार ने भूपेन दा को भारत रत्न दिया था, तो काँग्रेस ने खुलकर उसका विरोध किया था। काँग्रेस के राष्ट्रीय अध्यक्ष ने कहा था कि, मोदी नाचने-गाने वालों को भारत रत्न दे रहा है। मुझे बताइए, ये भूपेन दा का अपमान है कि नहीं है? कला संस्कृति का अपमान है कि नहीं है? असम का अपमान है कि नहीं है? ये कांग्रेस दिन रात करती है, अपमान करना। हमने असम में सेमीकंडक्टर यूनिट लगवाई, तो भी कांग्रेस ने इसका विरोध किया। आप मत भूलिए, यही काँग्रेस सरकार थी, जिसने इतने दशकों तक टी कम्यूनिटी के भाई-बहनों को जमीन के अधिकार नहीं मिलने दिये! बीजेपी की सरकार ने उन्हें जमीन के अधिकार भी दिये और गरिमापूर्ण जीवन भी दिया। और मैं तो चाय वाला हूं, मैं नहीं करूंगा तो कौन करेगा? ये कांग्रेस अब भी देशविरोधी सोच को आगे बढ़ा रही है। ये लोग असम के जंगल जमीन पर उन बांग्लादेशी घुसपैठियों को बसाना चाहते हैं। जिनसे इनका वोट बैंक मजबूत होता है, आप बर्बाद हो जाए, उनको इनकी परवाह नहीं है, उनको अपनी वोट बैंक मजबूत करनी है।

भाइयों बहनों,

काँग्रेस को असम और असम के लोगों से, आप लोगों की पहचान से कोई लेना देना नहीं है। इनको केवल सत्ता,सरकार और फिर जो काम पहले करते थे, वो करने में इंटरेस्ट है। इसीलिए, इन्हें अवैध बांग्लादेशी घुसपैठिए ज्यादा अच्छे लगते हैं। अवैध घुसपैठियों को काँग्रेस ने ही बसाया, और काँग्रेस ही उन्हें बचा रही है। इसीलिए, काँग्रेस पार्टी वोटर लिस्ट के शुद्धिकरण का विरोध कर रही है। तुष्टीकरण और वोटबैंक के इस काँग्रेसी जहर से हमें असम को बचाकर रखना है। मैं आज आपको एक गारंटी देता हूं, असम की पहचान, और असम के सम्मान की रक्षा के लिए भाजपा, बीजेपी फौलाद बनकर आपके साथ खड़ी है।

साथियों,

विकसित भारत के निर्माण में, आपके ये आशीर्वाद यही मेरी ताकत है। आपका ये प्यार यही मेरी पूंजी है। और इसीलिए पल-पल आपके लिए जीने का मुझे आनंद आता है। विकसित भारत के निर्माण में पूर्वी भारत की, हमारे नॉर्थ ईस्ट की भूमिका लगातार बढ़ रही है। मैंने पहले भी कहा है कि पूर्वी भारत, भारत के विकास का ग्रोथ इंजन बनेगा। नामरूप की ये नई यूनिट इसी बदलाव की मिसाल है। यहां जो खाद बनेगी, वो सिर्फ असम के खेतों तक नहीं रुकेगी। ये बिहार, झारखंड, पश्चिम बंगाल और पूर्वी उत्तर प्रदेश तक पहुंचेगी। ये कोई छोटी बात नहीं है। ये देश की खाद जरूरत में नॉर्थ ईस्ट की भागीदारी है। नामरूप जैसे प्रोजेक्ट, ये दिखाते हैं कि, आने वाले समय में नॉर्थ ईस्ट, आत्मनिर्भर भारत का बहुत बड़ा केंद्र बनकर उभरेगा। सच्चे अर्थ में अष्टलक्ष्मी बन के रहेगा। मैं एक बार फिर आप सभी को नए फर्टिलाइजर प्लांट की बधाई देता हूं। मेरे साथ बोलिए-

भारत माता की जय।

भारत माता की जय।

और इस वर्ष तो वंदे मातरम के 150 साल हमारे गौरवपूर्ण पल, आइए हम सब बोलें-

वंदे मातरम्।

वंदे मातरम्।

वंदे मातरम्।

वंदे मातरम्।

वंदे मातरम्।

वंदे मातरम्।

वंदे मातरम्।

वंदे मातरम्।

वंदे मातरम्।