ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು, ಗಗನಯಾತ್ರಿ ಶುಭಾಂಶು ಶುಕ್ಲಾ ಅವರೊಂದಿಗೆ ಉತ್ಕೃಷ್ಟ ಸಂವಾದ ನಡೆಸಿ, ಇದು ರಾಷ್ಟ್ರಕ್ಕೆ ಹೆಮ್ಮೆಯ ಕ್ಷಣವಾಗಿ ಗುರುತಿಸಿದರು. ಅವರಿಬ್ಬರ ಭೇಟಿಯಲ್ಲಿ ಶ್ರೀ ಶುಕ್ಲಾ ಅವರ ಬಾಹ್ಯಾಕಾಶದಲ್ಲಿನ ಅನುಭವ, ವಿಜ್ಞಾನ ಮತ್ತು ತಂತ್ರಜ್ಞಾನದಲ್ಲಿ ಭಾರತದ ಪ್ರಗತಿ ಹಾಗೂ ದೇಶದ ಮಹತ್ವಾಕಾಂಕ್ಷಿ ಮಾನವಸಹಿತ ಬಾಹ್ಯಾಕಾಶ ಯೋಜನೆ-ಗಗನಯಾನ ಒಳಗೊಂಡಂತೆ ವಿವಿಧ ವಿಷಯಗಳ ಕುರಿತು ಚರ್ಚೆ ನಡೆಸಿದರು.
ಎಕ್ಸ್ ಪೋಸ್ಟ್ ನಲ್ಲಿ ಶ್ರೀ ಮೋದಿ ಅವರು ಹೀಗೆ ಬರೆದಿದ್ದಾರೆ:
ಶುಭಾಂಶು ಶುಕ್ಲಾ ಅವರೊಂದಿಗೆ ಉತ್ತಮ ಸಂವಾದ ನಡೆಯಿತು. ಬಾಹ್ಯಾಕಾಶದಲ್ಲಿ ಅವರ ಅನುಭವಗಳು, ವಿಜ್ಞಾನ ಮತ್ತು ತಂತ್ರಜ್ಞಾನದಲ್ಲಿನ ಪ್ರಗತಿ ಹಾಗೂ ಭಾರತದ ಮಹತ್ವಾಕಾಂಕ್ಷೆಯ ಗಗನಯಾನ ಮಿಷನ್ ಸೇರಿದಂತೆ ವಿವಿಧ ವಿಷಯಗಳ ಕುರಿತು ನಾವು ಚರ್ಚೆ ನಡೆಸಿದೆವು. ಅವರ ಸಾಧನೆಯ ಬಗ್ಗೆ ಭಾರತ ಹೆಮ್ಮೆಪಡುತ್ತದೆ.”
@gagan_shux”
Had a great interaction with Shubhanshu Shukla. We discussed a wide range of subjects including his experiences in space, progress in science & technology as well as India's ambitious Gaganyaan mission. India is proud of his feat.@gagan_shux pic.twitter.com/RO4pZmZkNJ
— Narendra Modi (@narendramodi) August 18, 2025


