ಆಗಸ್ಟ್ 5 ಭಾರತದ ಇತಿಹಾಸದಲ್ಲಿ ಅತ್ಯಂತ ಮಹತ್ವದ್ದು, ಕಲಂ 370 ರದ್ದತಿ ಮತ್ತು ರಾಮಮಂದಿರ ನಿರ್ಮಾಣದ ಜೊತೆ ನಂಟು ಹೊಂದಿದೆ: ಪ್ರಧಾನಮಂತ್ರಿ
ನಮ್ಮ ರಾಷ್ಟ್ರೀಯ ಕ್ರೀಡೆ ಹಾಕಿ ವೈಭವವನ್ನು ಮರು ಸ್ಥಾಪಿಸುವ ನಿಟ್ಟಿನಲ್ಲಿ ಇಂದು ನಮ್ಮ ಯುವಜನತೆ ಮಹತ್ವದ ಹೆಜ್ಜೆ ಇಟ್ಟಿದ್ದಾರೆ :ಪ್ರಧಾನಮಂತ್ರಿ
ರಾಜಕೀಯ ಸ್ವಾರ್ಥಕ್ಕಾಗಿ ಇಲ್ಲಿ ಕೆಲವರು ಸ್ವಯಂ ಹೋಲು ಹೊಡೆಯುತ್ತಿರುವುದರ ನಡುವೆಯೇ ನಮ್ಮ ಯುವಜರು ಗೆಲುವಿನ ಗೋಲು ಗಳಿಸುತ್ತಿದ್ದಾರೆ: ಪ್ರಧಾನಮಂತ್ರಿ
ಭಾರತದ ಯುವಕರು ತಾವು ಮತ್ತು ಭಾರತ ಇಬ್ಬರೂ ಮುನ್ನಡೆಯುತ್ತಿದ್ದೇವೆ ಎಂಬ ದೃಢವಾದ ನಂಬಿಕೆ ಹೊಂದಿದ್ದಾರೆ: ಪ್ರಧಾನಮಂತ್ರಿ
ಈ ಮಹಾನ್ ದೇಶವು ಸ್ವಾರ್ಥ ಮತ್ತು ರಾಷ್ಟ್ರವಿರೋಧಿ ರಾಜಕೀಯಕ್ಕೆ ಒತ್ತೆಯಾಳಾಗಲು ಸಾದ್ಯವಿಲ್ಲ :ಪ್ರಧಾನಮಂತ್ರಿ
ಡಬಲ್ ಎಂಜಿನ್ ಸರ್ಕಾರವು ಬಡವರು, ದೀನದಲಿತರು, ಹಿಂದುಳಿದವರು ಮತ್ತು ಬುಡಕಟ್ಟುಜನಾಂಗದವರಿಗಾಗಿ ರೂಪಿಸಿದ ಯೋಜನೆಗಳನ್ನು ಉತ್ತರಪ್ರದೇಶದಲ್ಲಿ ತ್ವರಿತಗತಿಯಲ್ಲಿ ಅನುಷ್ಠಾನ ಖಾತ್ರಿಯಾಗಿದೆ :ಪ್ರಧಾನಮಂತ್ರಿ
ಉತ್ತರ ಪ್ರದೇಶವನ್ನು ಯಾವಾಗಲೂ ರಾಜಕೀಯ ಮಸೂರದಿಂದಲೇ ನೋಡಲಾಗುತ್ತಿತ್ತು, ಆದರೆ ಇತ್ತೀಚಿನ ವರ್ಷಗಳಲ್ಲಿ ಉತ್ತರಪ್ರದೇಶ ಭಾರತದ ಪ್ರಗತಿಗಾಥೆಯ ಶಕ್ತಿ ಕೇಂದ್ರವಾಗಿ ಹೊರಹೊಮ್ಮಿದೆ ಎಂಬ ವಿಶ್ವಾಸ ಮೂಡಿದೆ: ಪ್ರಧಾನಮಂತ್ರಿ
ಈ ದಶಕವು ಉತ್ತರಪ್ರದೇಶಕ್ಕೆ ಕಳೆದ 7 ದಶಕಗಳ ಕೊರತೆಯನ್ನು ತುಂಬುವ ದಶಕವಾಗಿದೆ :ಪ್ರಧಾನಮ

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಉತ್ತರಪ್ರದೇಶದಲ್ಲಿನ ಪ್ರಧಾನಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆಯ ಫಲಾನುಭವಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಂವಾದ ನಡೆಸಿದರು. ಉತ್ತರಪ್ರದೇಶದ ಮುಖ್ಯಮಂತ್ರಿ ಶ್ರೀ ಯೋಗಿ ಆದಿತ್ಯನಾಥ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ ಅವರು, ಆಗಸ್ಟ್ 5 ಭಾರತಕ್ಕೆ ವಿಶೇಷ ದಿನವಾಗಿದೆ. ಇದೇ ಆಗಸ್ಟ್ 5ರಂದು ಎರಡು ವರ್ಷಗಳ ಹಿಂದೆ ಕಲಂ 370 ಅನ್ನು ರದ್ದುಗೊಳಿಸುವ ಮೂಲಕ ಏಕ್ ಭಾರತ್, ಶ್ರೇಷ್ಠ ಭಾರತ್ ಭಾವನೆಯನ್ನು ಮತ್ತಷ್ಟು ಬಲವರ್ಧನೆಗೊಳಿಸಲಾಯಿತು. ಆ ಮೂಲಕ ಎಲ್ಲ ಹಕ್ಕು ಮತ್ತು ಸೌಕರ್ಯಗಳು ಜಮ್ಮು ಮತ್ತು ಕಾಶ್ಮೀರದ ಪ್ರತಿಯೊಬ್ಬ ಪ್ರಜೆಗೂ ಲಭ್ಯವಾಗುವಂತೆ ಮಾಡಲಾಯಿತು. ಪ್ರಧಾನಮಂತ್ರಿ ಅವರು ನೂರಾರು ವರ್ಷಗಳ ನಂತರ ಭಾರತೀಯರು ಭವ್ಯ ರಾಮಮಂದಿರ ನಿರ್ಮಾಣದತ್ತ ಮೊದಲ ಹೆಜ್ಜೆ ಇಟ್ಟಿದ್ದು ಕೂಡ ಆಗಸ್ಟ್ 5ರಂದೇ ಎಂದು ಉಲ್ಲೇಖಿಸಿದರು. ಅಯೋಧ್ಯೆಯಲ್ಲಿಂದು ರಾಮಮಂದಿರವನ್ನು ಅತ್ಯಂತ ಕ್ಷಿಪ್ರವಾಗಿ ನಿರ್ಮಾಣ ಮಾಡಲಾಗುತ್ತಿದೆ.

ಈ ದಿನಾಂಕಕ್ಕೆ ಇರುವ ಮಹತ್ವದ ಕುರಿತು ಮಾತನಾಡುವುದನ್ನು ಮುಂದುವರಿಸಿದ ಪ್ರಧಾನಮಂತ್ರಿ, ಇಂದು ತಂದ ಉತ್ಸಾಹ ಮತ್ತು ಚೈತನ್ಯದ ಬಗ್ಗೆ ಮಾತನಾಡಿದರು ಮತ್ತು ಒಲಿಂಪಿಕ್ ಮೈದಾನದಲ್ಲಿ ದೇಶದ ಪುನರುಜ್ಜೀವನಗೊಂಡ ಯುವಕರು ಹಾಕಿಯಲ್ಲಿ ತಮ್ಮ ಹೆಮ್ಮಯನ್ನು ಪುನಃ ಸ್ಥಾಪಿಸಿದರು ಎಂದರು.

ಒಂದೆಡೆ ನಮ್ಮ ದೇಶ, ನಮ್ಮ ಯುವಜನತೆ ಭಾರತಕ್ಕಾಗಿ ಹೊಸ ಸಾಧನೆಗಳನ್ನು ಮಾಡುತ್ತಿದ್ದಾರೆ, ಅವರು ಗೋಲುಗಳ ಗೆಲುವು ಸಾಧಿಸುತ್ತಿದ್ದಾರೆ. ಮತ್ತೊಂದೆಡೆ ದೇಶದಲ್ಲಿನ ಕೆಲವು ಜನರು ತಮ್ಮ ರಾಜಕೀಯ ಸ್ವಾರ್ಥಕ್ಕಾಗಿ ಸ್ವಯಂ ಗೋಲು ಹೊಡೆಯುವುದರಲ್ಲಿ ತೊಡಗಿದ್ದಾರೆ ಎಂದು ಪ್ರಧಾನಮಂತ್ರಿ ಟೀಕಿಸಿದರು. ದೇಶಕ್ಕೆ ಏನು ಬೇಕು, ದೇಶ ಏನು ಸಾಧಿಸುತ್ತಿದೆ ಮತ್ತು ದೇಶ ಹೇಗೆ ಬದಲಾಗುತ್ತಿದೆ ಎಂಬ ಬಗ್ಗೆ ಅವರಿಗೆ ಯಾವುದೇ ಕಾಳಜಿ ಇಲ್ಲ ಎಂದು ಅವರು ಹೇಳಿದರು. ಈ ಮಹಾನ್ ದೇಶವು ಇಂತಹ ಸ್ವಾರ್ಥ ಮತ್ತು ದೇಶ ವಿರೋಧಿ ರಾಜಕೀಯಕ್ಕೆ ಒತ್ತೆಯಾಳಗಾಲು ಸಾಧ್ಯವಿಲ್ಲ ಎಂದು ಪ್ರಧಾನಮಂತ್ರಿ ತಿಳಿಸಿದರು. ದೇಶದ ಅಭಿವೃದ್ಧಿಯನ್ನು ನಿಲ್ಲಿಸಲು ಈ ಜನರು ಎಷ್ಟೇ ಪ್ರಯತ್ನಿಸಿದರೂ ಸಹ ಈ ದೇಶವು ಅವರಿಗೆ ಬಗ್ಗುವುದಿಲ್ಲ, ದೇಶ ಪ್ರತಿಯೊಂದು ವಲಯದಲ್ಲೂ ಕ್ಷಿಪ್ರ ಪ್ರಗತಿ ಸಾಧಿಸುತ್ತಿದೆ ಮತ್ತು ಎಲ್ಲ ಕಷ್ಟಗಳನ್ನು ಮೆಟ್ಟಿ ನಿಲ್ಲುತ್ತಿದೆ ಎಂದರು.

ಹೊಸ ಚೈತನ್ಯ ಮತ್ತು ಸ್ಪೂರ್ತಿಯನ್ನು ವಿವರಿಸಲು ಪ್ರಧಾನಮಂತ್ರಿ ಅವರು ಭಾರತೀಯರು ಇತ್ತೀಚೆಗೆ ಮಾಡಿದ ದಾಖಲೆಗಳು ಮತ್ತು ಸಾಧನೆಗಳನ್ನು ಪಟ್ಟಿ ಮಾಡಿದರು. ಒಲಿಂಪಿಕ್ಸ್ ಮಾತ್ರವಲ್ಲದೆ, ಮುಂದೆ ಹೆಗ್ಗುರುತಾಗಲಿರುವ ದಾಖಲೆಯ 50 ಕೋಟಿ ಲಸಿಕೀಕರಣ,  ಜುಲೈ ತಿಂಗಳಲ್ಲಿ 1 ಲಕ್ಷ 16ಸಾವಿರ ರೂ, ದಾಖಲೆಯ ಜಿಎಸ್ ಟಿ ಸಂಗ್ರಹ  ಆರ್ಥಿಕತೆಯಲ್ಲಿ ಹೊಸ ವೇಗವನ್ನು ನೀಡಿದೆ ಎಂದರು. ಅನಿರೀಕ್ಷಿತ ರೀತಿಯಲ್ಲಿ ಹೆಚ್ಚಾಗಿರುವ ಮಾಸಿಕ ಕೃಷಿ ರಫ್ತು ಅಂಕಿ ಅಂಶ 2ಲಕ್ಷದ 62 ಕೋಟಿಗೆ ಏರಿಕೆಯಾಗಿರುವ ಕುರಿತು ಅವರು ಮಾತನಾಡಿದರು. ಸ್ವಾತಂತ್ರ್ಯಾನಂತರ ಇದು ಅತಿ ದೊಡ್ಡ ಸಾಧನೆಯಾಗಿದ್ದು, ಇದು ಭಾರತವನ್ನು ಅಗ್ರ 10 ಕೃಷಿ ಉತ್ಪನ್ನಗಳ ರಫ್ತು ರಾಷ್ಟ್ರಗಳ ಸಾಲಿನಲ್ಲಿ ನಿಲ್ಲಿಸಿದೆ ಎಂದರು. ಭಾರತದ ಮೊದಲ ಮೇಡ್ ಇನ್ ಇಂಡಿಯಾ ವಿಮಾನ ನೌಕೆ ವಿಕ್ರಾಂತ್, ವಿಶ್ವದ ಅತಿ ಎತ್ತರದ ಪ್ರದೇಶ ಲಡಾಖ್ ನಲ್ಲಿ ಮೋಟಾರು ವಾಹನಗಳು ಸಂಚರಿಸಬಹುದಾದ ರಸ್ತೆ ನಿರ್ಮಾಣ ಕಾರ್ಯ ಪೂರ್ಣ ಮತ್ತು ಇ-ರುಪಿ ಬಿಡುಗಡೆ ಮತ್ತಿತರ ವಿಚಾರಗಳ ಕುರಿತು ಮಾತನಾಡಿದರು. 

ತಮ್ಮ ಸ್ಥಾನಕ್ಕಾಗಿ ಮಾತ್ರ ಚಿಂತಿಸುವವರು ಈಗ ಭಾರತವನ್ನು ತಡೆಯಲು ಸಾಧ್ಯವಿಲ್ಲ ಎಂದು ಪ್ರಧಾನಮಂತ್ರಿ ಟೀಕಿಸಿದರು. ನವ ಭಾರತ ಶ್ರೇಯಾಂಕಗಳಲ್ಲ, ಪದಕಗಳನ್ನು ಗೆಲ್ಲುವ ಮೂಲಕ ಇಡೀ ವಿಶ್ವವನ್ನು ಆಳುತ್ತಿದೆ.  ನವ ಭಾರತದಲ್ಲಿ ಮುನ್ನಡೆಯುವುದನ್ನು ಕುಟುಂಬದ ಹೆಸರಿನಿಂದ ನಿರ್ಧರಿಸಲಾಗುವುದಿಲ್ಲ, ಆದರೆ ಕಠಿಣ ಪರಿಶ್ರಮದಿಂದ ಸಾಧ್ಯ ಎಂದು ಅವರು ಹೇಳಿದರು. ಭಾರತದ ಯುವಜನತೆ ತಾವು ಮತ್ತು ಭಾರತ ಇಬ್ಬರೂ ಚಲಿಸುತ್ತಿದ್ದೇವೆ ಎಂಬ ದೃಢವಾದ ನಂಬಿಕೆಯನ್ನು ಹೊಂದಿದ್ದಾರೆ.

ಸಾಂಕ್ರಾಮಿಕದ ಕುರಿತು ಮಾತನಾಡಿದ ಪ್ರಧಾನಮಂತ್ರಿ, ಹಿಂದೆ ದೇಶದಲ್ಲಿ ದೊಡ್ಡ ಬಿಕ್ಕಟ್ಟು ಇದ್ದಾಗ ದೇಶದ ಎಲ್ಲ ವ್ಯವಸ್ಥೆಗಳು ಕೆಟ್ಟದಾಗಿ ಅಲುಗಾಡುತ್ತಿದ್ದನ್ನು ಗಮನಿಸಿದ್ದೆವು. ಆದರೆ ಭಾರತದಲ್ಲಿ ಇಂದು, ಪ್ರತಿಯೊಬ್ಬ ಪ್ರಜೆಯೂ ಸಾಂಕ್ರಾಮಿಕದ ವಿರುದ್ಧ ಪೂರ್ಣಶಕ್ತಿಯಿಂದ ಹೋರಾಡುತ್ತಿದ್ದಾರೆ ಎಂದರು. ಶತಮಾನದಲ್ಲಿ ಒಮ್ಮೆ ಎದುರಾಗಿರುವ ಅತಿ ದೊಡ್ಡ ಬಿಕ್ಕಟ್ಟಿನ್ನು ಎದುರಿಸಲು ಕೈಗೊಂಡ ಪ್ರುಯತ್ನಗಳ ಕುರಿತು ಪ್ರಧಾನಮಂತ್ರಿ ಮಾತನಾಡಿದರು. ವೈದ್ಯಕೀಯ ಮೂಲಸೌಕರ್ಯಗಳ ವರ್ಧನೆ, ವಿಶ್ವದ ಅತಿದೊಡ್ಡ ಉಚಿತ ಲಸಿಕಾ ಕಾರ್ಯಕ್ರಮ, ದುರ್ಬಲ ವರ್ಗದವರ ಹಸಿವಿನ ವಿರುದ್ಧದ ಹೋರಾಟದ ಅಭಿಯಾನ, ಇಂತಹ ಕಾರ್ಯಕ್ರಮಗಳಿಗೆ ಲಕ್ಷಗಳು ಮತ್ತು ಕೋಟ್ಯಂತರ ರೂಪಾಯಿ ಹೂಡಿಕೆಯನ್ನು ಸ್ವೀಕರಿಸಿದರು ಮತ್ತು ಭಾರತವು ಯಶಸ್ವಿಯಾಗಿ ಮುನ್ನಡೆಯುತ್ತಿದೆ ಎಂದರು. ಉತ್ತರ ಪ್ರದೇಶದಲ್ಲಿ ಹೆದ್ದಾರಿ, ಎಕ್ಸಪ್ರೆಸ್ ಹೈವೇ ಯೋಜನೆಗಳು, ನಿರ್ದಿಷ್ಟ ಸರಕು ಕಾರಿಡಾರ್ ಮತ್ತು ರಕ್ಷಣಾ ಕಾರಿಡಾರ್ ಗಳ ಮೂಲಕ ಸಾಂಕ್ರಾಮಿಕ ರೋಗದ ಮಧ್ಯೆ ಮೂಲಸೌಕರ್ಯ ಉತ್ಪನ್ನಗಳು ನಿಲ್ಲದೆ ಸಾಗಿವೆ.

ಬಡವರು, ದೀನದಲಿತರು, ಹಿಂದುಳಿದವರು, ಬುಡಕಟ್ಟು ಜನರಿಗಾಗಿ ಮಾಡಿದ ಯೋಜನೆಗಳನ್ನು ತ್ವರಿತಗತಿಯಲ್ಲಿ ಅನುಷ್ಠಾನಗೊಳಿಸುವುದನ್ನು ಡಬಲ್ ಎಂಜಿನ್ ಸರ್ಕಾರ ಖಾತ್ರಿಪಡಿಸಿದೆ ಎಂದು ಪ್ರಧಾನಮಂತ್ರಿ ಹೇಳಿದರು. ಇದಕ್ಕೆ ಪಿಎಂ ಸ್ವನಿಧಿ ಯೋಜನೆ ಅತಿ ದೊಡ್ಡ ಉದಾಹರಣೆಯಾಗಿದೆ ಎಂದರು. ಸಾಂಕ್ರಾಮಿಕದ ಸಮಯದಲ್ಲಿ ಪರಿಸ್ಥಿತಿಯನ್ನು ನಿರ್ವಹಿಸಲು ಕೈಗೊಂಡ ಕ್ರಮಗಳನ್ನು ಪ್ರಧಾನಮಂತ್ರಿಯವರು ವಿಸ್ತೃತವಾಗಿ ವಿವರಿಸಿದರು. ಒಂದು ಪರಿಣಾಮಕಾರಿ ಕಾರ್ಯತಂತ್ರವು ಆಹಾರ ಬೆಲೆಗಳನ್ನು ನಿಯಂತ್ರಣದಲ್ಲಿರಿಸಿತು, ರೈತರಿಗೆ ರಸಗೊಬ್ಬರ ಮತ್ತು ಬಿತ್ತನೆ ಬೀಜಗಳ ಪೂರೈಕೆಯನ್ನು ಖಾತ್ರಿಪಡಿಸಲು ಸೂಕ್ತ ಕ್ರಮಗಳನ್ನು ಕೈಗೊಳ್ಳಲಾಯಿತು, ಅದರ ಪರಿಣಾಮ ರೈತರು ದಾಖಲೆಯ ಆಹಾರ ಧಾನ್ಯವನ್ನು ಬೆಳೆದರು ಮತ್ತು ಸರ್ಕಾರ ಎಂಎಸ್ ಪಿ ಅಡಿ ದಾಖಲೆ ಪ್ರಮಾಣದ ಆಹಾರ ಧಾನ್ಯಗಳನ್ನು ಖರೀದಿ ಮಾಡಿತು.

ಅಲ್ಲದೆ, ಪ್ರಧಾನಮಂತ್ರಿ ಅವರು ಉತ್ತರಪ್ರದೇಶದಲ್ಲಿ ಎಂಎಸ್ ಪಿ ಖರೀದಿಯಲ್ಲಿ ದಾಖಲೆ ನಿರ್ಮಿಸಿರುವುದರ ಬಗ್ಗೆ ಮುಖ್ಯಮಂತ್ರಿಗಳನ್ನು ಶ್ಲಾಘಿಸಿದರು. ಕಳೆದ ವರ್ಷ ಉತ್ತರ ಪ್ರದೇಶದಲ್ಲಿ ಎಂಎಸ್ ಪಿ ಲಾಭ ಪಡೆದ ರೈತರ ಸಂಖ್ಯೆ ದುಪ್ಪಟ್ಟಾಗಿದೆ. ಉತ್ತರ ಪ್ರದೇಶದಲ್ಲಿ ಸುಮಾರು 13 ಲಕ್ಷ ರೈತ ಕುಟುಂಬಗಳ ಖಾತೆಗೆ ಅವರು ಬೆಳೆದ ಬೆಳೆಗೆ  24ಸಾವಿರ ಕೋಟಿಗೂ ಅಧಿಕ ಹಣ ಜಮೆಯಾಗಿದೆ. ಉತ್ತರ ಪ್ರದೇಶದಲ್ಲಿ 17 ಲಕ್ಷ ಕುಟುಂಬಗಳಿಗೆ ಮನೆಗಳನ್ನು ಹಂಚಿಕೆ ಮಾಡಲಾಗಿದೆ, ಲಕ್ಷಾಂತರ ಬಡವರಿಗೆ ಶೌಚಾಲಯಗಳನ್ನು ನಿರ್ಮಿಸಿಕೊಡಲಾಗಿದೆ. ಲಕ್ಷಾಂತರ ಕುಟುಂಬಗಳಿಗೆ ಉಚಿತ ವಿದ್ಯುತ್ ಮತ್ತು ಅಡುಗೆ ಅನಿಲ ಸಂಪರ್ಕಗಳನ್ನು ಒದಗಿಸಲಾಗಿದೆ. 27 ಲಕ್ಷ ಕುಟುಂಬಗಳಿಗೆ ರಾಜ್ಯದಲ್ಲಿ ಕೊಳಾಯಿ ಮೂಲಕ ಶುದ್ಧ ಕುಡಿಯುವ ನೀರು ಒದಗಿಸಲಾಗುತ್ತಿದೆ ಎಂದು ಪ್ರಧಾನಮಂತ್ರಿ ಹೇಳಿದರು.

ಕಳೆದ ದಶಕದಲ್ಲಿ ಉತ್ತರ ಪ್ರದೇಶವನ್ನು ಯಾವಾಗಲೂ ರಾಜಕೀಯ ದೃಷ್ಟಿಯಿಂದ ನೋಡಲಾಗುತ್ತಿತ್ತು ಎಂದು ಪ್ರಧಾನಮಂತ್ರಿ ಟೀಕಿಸಿದರು. ದೇಶದ ಅಭಿವೃದ್ಧಿಯಲ್ಲಿ ಉತ್ತರಪ್ರದೇಶ ಹೇಗೆ ಉತ್ತಮ ಪಾತ್ರ ನಿರ್ವಹಿಸಬಲ್ಲದು ಎಂಬ ಬಗ್ಗೆ ಚರ್ಚೆ ಮಾಡಲೂ ಸಹ ಅವಕಾಶ ನೀಡಲಿಲ್ಲ.

ಡಬಲ್ ಎಂಜಿನ್ ಸರ್ಕಾರವು ನಾವು ಸಂಕುಚಿತ ದೃಷ್ಟಿಕೋನದಿಂದ ನೋಡುವ ಮನಸ್ಥಿತಿಯನ್ನು ಬದಲಾಯಿಸಿದೆ ಎಂದು ಪ್ರಧಾನಮಂತ್ರಿ ಹೇಳಿದರು. ಇತ್ತೀಚಿನ ದಿನಗಳಲ್ಲಿ ಉತ್ತರ ಪ್ರದೇಶ ಭಾರತದ ಪ್ರಗತಿಯ ಶಕ್ತಿ ಕೇಂದ್ರವಾಗಬಹುದು ಎನ್ನುವ ವಿಶ್ವಾಸ ಮೂಡಿದೆ ಎಂದು ಅವರು ಹೇಳಿದರು.

ಕಳೆದ 7 ದಶಕಗಳ ಕೊರತೆಯನ್ನು ನೀಗಿಸಲು ಈ ದಶಕ ಉತ್ತರಪ್ರದೇಶದ ದಶಕವಾಗಿದೆ.  ಉತ್ತರ ಪ್ರದೇಶದ ಯುವಜನತೆ, ಹೆಣ್ಣುಮಕ್ಕಳು, ಬಡವರು, ಶೋಷಿತರು ಮತ್ತು ಹಿಂದುಳಿದವರ ಸಕ್ರಿಯ ಪಾಲ್ಗೊಳ್ಳುವಿಕೆ ಇಲ್ಲದೆ ಮತ್ತು ಅವರಿಗೆ ಉತ್ತಮ ಅವಕಾಶಗಳನ್ನು ನೀಡದಿದ್ದರೆ ಇದು ಸಾಧ್ಯವಾಗುತ್ತಿರಲಿಲ್ಲ ಎಂದು ಪ್ರಧಾನಮಂತ್ರಿ ತಮ್ಮ ಭಾಷಣದ ಮುಕ್ತಾಯದ ವೇಳೆ ಹೇಳಿದರು.

ಭಾಷಣದ ಪೂರ್ಣ ಪಠ್ಯವನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
India’s Defence Exports Explode: ₹40,000 Crore Milestone Signals a New Manufacturing Era

Media Coverage

India’s Defence Exports Explode: ₹40,000 Crore Milestone Signals a New Manufacturing Era
NM on the go

Nm on the go

Always be the first to hear from the PM. Get the App Now!
...
Text of PM’s remarks during inauguration of Swaminarayan Hindu Temple in Paris
September 06, 2026

पूज्य महंत स्वामी, फ्रांस सरकार के सम्मानित प्रतिनिधिगण, उपस्थित अतिथिगण, इंडियन कम्युनिटी के मेरे साथी, देश दुनिया से जुड़े सभी हरि भक्त, देवियों और सज्जनों, जय स्वामीनारायण!

आज फ्रांस की राजधानी पेरिस में भव्य स्वामीनारायण मंदिर का लोकार्पण हो रहा है। यह लोकार्पण भारत और फ्रांस के सांस्कृतिक संबंधों का नया युग स्तंभ है। पूज्य संत जनों और सनातन परंपरा के श्रेष्ठ जनों के आशीर्वाद के साथ आज इस लोकार्पण का मंच ‘वसुधैव कुटुम्बकम’ के भाव का मंच बन गया है। भगवान स्वामीनारायण की कृपा और हमारे संतों का स्नेह, संतों का आशीर्वाद, मेरा सौभाग्य है कि मुझे ऐसे पुण्य अवसरों से जुड़ने का अवसर हमेशा मिलता रहता है। आज भी मैं भले ही पेरिस में आप सबके बीच उपस्थित नहीं हूं, लेकिन मन से और हृदय से, मैं स्वयं को आपके बीच ही अनुभव कर रहा हूं।

साथियों,

आज इस अवसर पर मैं परम पूज्य प्रमुख स्वामी जी महाराज का भी श्रद्धापूर्वक स्मरण करता हूं। प्राचीन काल में भारत का जो सांस्कृतिक आध्यात्मिक वैभव था, उन्होंने उसके पुनर्जागरण का एक अभियान शुरू किया था। आज उसका प्रकाश यूरोप समेत पूरी दुनिया में फैल रहा है। 2024 में अबू धाबी में भव्य मंदिर का लोकार्पण हुआ था। आज वहां हजारों लोग दर्शन करने जाते हैं और अब यहां पेरिस में स्वामीनारायण मंदिर का निर्माण सृजन की यह निरंतरता, यह संतों की संकल्प शक्ति का ही प्रमाण है। मैं पुनीत कार्य के लिए पूज्य महंत स्वामी का आभार प्रकट करता हूं, मैं उनके चरणों में प्रणाम करता हूं। मैं BAPS स्वामीनारायण संस्था को और करोड़ों हरि भक्तों को इस अवसर पर हृदय की गहराई से बधाई देता हूं।

साथियों,

BAPS के माध्यम से जब अलग-अलग देश में मंदिरों की प्राण प्रतिष्ठा होती है, तो वहां भारत के प्राचीन विचार और मानवीय मूल्य भी साथ-साथ ही जाते हैं और भारत का विचार कहता है ‘समानं मनः सह चित्तमेषाम्’ अर्थात हमारे मन समान हो, हमारे हृदय साथ जुड़े। इसलिए आज जब फ्रांस में इतना भव्य मंदिर बनकर तैयार हुआ है, यह फ्रांस की विविधता को तो समृद्ध करेगा ही, इससे भारत और फ्रांस के सांस्कृतिक संबंधों को भी ऊर्जा मिलेगी।

साथियों,

बीते वर्षों में भारत और फ्रांस के संबंध नई ऊंचाइयों तक पहुंचे हैं। मेरे मित्र, प्रेसिडेंट मैक्रों के साथ मिलकर दोनों देश एक Special Global Strategic Partnership बना रहे हैं। Technology, AI और Defence से लेकर Space और Climate Action तक हम एक नई गति और नई ऊर्जा के साथ मिलकर के आगे बढ़ रहे हैं। हम 2026 को India-France Year of Innovation के रूप में भी सेलिब्रेट कर रहे हैं। भारत-फ्रांस की ये Strategic Partnership इसलिए भी खास है, क्योंकि ये हमारे पुराने सांस्कृतिक-राजनैतिक सम्बन्धों की मजबूत बुनियाद पर टिकी है। इतिहास गवाह है, फ्रांस में भारतीय सैनिकों के बलिदान का इतिहास आज भी मन-मंदिर में जीवित है। भाषा से जुड़े विषयों में रुचि रखने वाले लोग यह भी जानते हैं कि फ्रेंच स्कॉलर्स ने संस्कृत को लोकप्रिय बनाने में कितनी अहम भूमिका निभाई है। रामकृष्ण परमहंस और स्वामी विवेकानंद पर रोमाँ रोलाँ की की लेखनी हमारी सोसाइटीज़ को और करीब लाई है। पेरिस से पुडुचेरी के अरबिंदो आश्रम तक 'The mother' की spiritual journey, उसने कितने ही भारतीय और फ्रेंच साधकों को inspire किया है।

साथियों,

दशकों पहले श्रील प्रभुपाद स्वामी भी फ्रांस आए थे। इस्कॉन के जरिए भारत फ्रांस के बीच आध्यात्मिक सम्बन्धों का नया अध्याय उन्होंने शुरू किया था। आज योग भी भारत-फ्रांस के people to people कनेक्ट का एक माध्यम बन चुका है। 'इंटरनेशनल योगा डे' पर एफिल टॉवर के सामने से आने वाली तस्वीरें फ्रांस में योग की लोकप्रियता का उदाहरण बनती हैं और अब BAPS के इस भव्य मंदिर के जरिए, हमारे उन सांस्कृतिक सम्बन्धों में एक नया अध्याय जुड़ रहा है।

साथियों,

इन दिनों, भारत फ्रांस Joint Ventures की संभावनाओं पर बातें होती हैं। स्वामीनारायण मंदिर ने इस संभावना में भी एक नया आयाम जोड़ा है। यह मंदिर 'मेड इन इंडिया' है और 'बिल्ट इन फ्रांस' है। इसके काफी पत्थरों को भारत में तराशा गया है। भारत की प्राचीन प्रतिभा यहाँ फ्रांस में आधुनिक इंजीनियरिंग से आकर जुड़ चुकी है। पेरिस में इस भव्य मंदिर ने आकार लिया है। इसलिए, मैं आशा करता हूँ, यह मंदिर सदियों तक भारत और फ्रांस के बीच सहयोग और संभावनाओं का भी प्रतीक बनकर उभरेगा।

साथियों,

स्वामीनारायण मंदिर हमेशा से भक्ति के साथ-साथ सेवा का माध्यम भी रहे हैं। मुझे बताया गया है, यह मंदिर भी सेवा प्रकल्पों का वैसा ही केंद्र बनेगा। मुझे विश्वास है कि यहाँ से भारतीय संस्कृति के जो स्वर निकलेंगे, उनका लाभ पूरे यूरोप में लोगों को मिलेगा। भविष्य में मुझे जब भी समय मिलेगा, मैं इस मंदिर में दर्शन करने का प्रयास अवश्य करूंगा। इन्हीं शब्दों के साथ, एक बार फिर आज के इस लोकार्पण समारोह में सम्मिलित सभी अतिथिगणों को, सभी परिवारों को, सभी हरि भक्तों को और पूरी Indian Diaspora को मेरी ओर से इस शुभारंभ पर्व की ढेरों शुभकामनाएं!

बहुत-बहुत धन्यवाद!

मर्सी बोकू!

जय स्वामीनारायण!