“ಭೂಕಂಪದ ಸಮಯದಲ್ಲಿ ಭಾರತದ ತ್ವರಿತ ಪ್ರತಿಕ್ರಿಯೆ ಇಡೀ ಪ್ರಪಂಚದ ಗಮನವನ್ನು ಸೆಳೆದಿದೆ. ಇದು ನಮ್ಮ ರಕ್ಷಣಾ ಮತ್ತು ಪರಿಹಾರ ತಂಡಗಳ ಸನ್ನದ್ಧತೆಯ ಪ್ರತಿಬಿಂಬವಾಗಿದೆ”
"ಭಾರತವು ಸ್ವಾವಲಂಬನೆಯೊಂದಿಗೆ ತನ್ನ ನಿಸ್ವಾರ್ಥತೆಯನ್ನೂ ಪೋಷಿಸಿದೆ"
"ಜಗತ್ತಿನಲ್ಲಿ ಎಲ್ಲಿ ವಿಪತ್ತು ಸಂಭವಿಸಿದರೂ, ಭಾರತವು ಮೊದಲ ಪ್ರತಿಸ್ಪಂದಕ ಆಗಿರುತ್ತದೆ"
"ತಿರಂಗ'ದೊಂದಿಗೆ ನಾವು ಎಲ್ಲಿಗೆ ತಲುಪುತ್ತೇವೆಯೋ, ಅಲ್ಲಿ ಭಾರತೀಯ ತಂಡಗಳು ಬಂದ ನಂತರ ಪರಿಸ್ಥಿತಿ ಉತ್ತಮವಾಗುತ್ತದೆ ಎಂಬ ಭರವಸೆ ಇರುತ್ತದೆ"
“ಎನ್‌ಡಿಆರ್‌ಎಫ್ ದೇಶದ ಜನರಲ್ಲಿ ಉತ್ತಮ ಹೆಸರು ಗಳಿಸಿದೆ. ದೇಶದ ಜನತೆ ನಿಮ್ಮನ್ನು ನಂಬಿದ್ದಾರೆ"
"ವಿಶ್ವದ ಅತ್ಯುತ್ತಮ ಪರಿಹಾರ ಮತ್ತು ರಕ್ಷಣಾ ತಂಡವಾಗಿ ನಾವು ನಮ್ಮ ಗುರುತನ್ನು ಬಲಪಡಿಸಬೇಕಾಗಿದೆ. ನಮ್ಮ ಸ್ವಂತ ತಯಾರಿ ಉತ್ತಮವಾದಷ್ಟೂ ನಾವು ಜಗತ್ತಿಗೆ ಸೇವೆ ಸಲ್ಲಿಸಲು ಸಾಧ್ಯವಾಗುತ್ತದೆ.”

ಭೂಕಂಪ ಪೀಡಿತ ಟರ್ಕಿ ಮತ್ತು ಸಿರಿಯಾದಲ್ಲಿ ‘ಆಪರೇಷನ್ ದೋಸ್ತ್ʼನಲ್ಲಿ ಭಾಗಿಯಾಗಿದ್ದ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ಸಿಬ್ಬಂದಿಯೊಂದಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಸಂವಾದ ನಡೆಸಿದರು.

ಸಿಬ್ಬಂದಿಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿಯವರು, ಭೂಕಂಪ ಪೀಡಿತ ಟರ್ಕಿ ಮತ್ತು ಸಿರಿಯಾದಲ್ಲಿ ‘ಆಪರೇಷನ್ ದೋಸ್ತ್ʼನಲ್ಲಿ ಸಿಬ್ಬಂದಿಯ ಮಹತ್ತರ ಕಾರ್ಯಕ್ಕಾಗಿ ಅವರನ್ನು ಶ್ಲಾಘಿಸಿದರು. ವಸುಧೈವ ಕುಟುಂಬಕಂ ಪರಿಕಲ್ಪನೆಯನ್ನು ಪ್ರಧಾನಿ ವಿವರಿಸಿದರು. ಟರ್ಕಿ ಮತ್ತು ಸಿರಿಯಾದಲ್ಲಿ ಭಾರತ ತಂಡವು ಇಡೀ ಜಗತ್ತು ನಮಗೆ ಒಂದೇ ಕುಟುಂಬ ಎಂಬ ಮನೋಭಾವವನ್ನು ಪ್ರತಿಬಿಂಬಿಸಿದೆ ಎಂದು ಪ್ರಧಾನಿ ಹೇಳಿದರು.

ನೈಸರ್ಗಿಕ ವಿಕೋಪದ ಸಮಯದಲ್ಲಿ ತ್ವರಿತ ಪ್ರತಿಕ್ರಿಯೆಯ ಪ್ರಾಮುಖ್ಯತೆಯನ್ನು ವಿವರಿಸಿದ ಪ್ರಧಾನಿಯವರು, 'ಗೋಲ್ಡನ್ ಅವರ್' ಅನ್ನು ಉಲ್ಲೇಖಿಸಿದರು ಮತ್ತು ಟರ್ಕಿಯಲ್ಲಿ ಎನ್‌ಡಿಆರ್‌ಎಫ್ ತಂಡದ ತ್ವರಿತ ಪ್ರತಿಕ್ರಿಯೆಯು ಇಡೀ ಪ್ರಪಂಚದ ಗಮನವನ್ನು ಸೆಳೆಯಿತು ಎಂದು ಹೇಳಿದರು. ತ್ವರಿತ ಪ್ರತಿಕ್ರಿಯೆಯು ತಂಡದ ಸನ್ನದ್ಧತೆ ಮತ್ತು ತರಬೇತಿ ಕೌಶಲ್ಯವನ್ನು ಎತ್ತಿ ತೋರಿಸುತ್ತದೆ ಎಂದು ಅವರು ಹೇಳಿದರು.

ಅವರ ಶ್ರಮಕ್ಕಾಗಿ ತಂಡದ ಸದಸ್ಯರನ್ನು ಆಶೀರ್ವದಿಸಿದ ತಾಯಿಯ ಚಿತ್ರಗಳನ್ನು ನೆನಪಿಸಿಕೊಂಡ ಪ್ರಧಾನಮಂತ್ರಿಯವರು, ಸಂತ್ರಸ್ತ ಪ್ರದೇಶಗಳಲ್ಲಿ ನಡೆಸಲಾದ ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆಗಳ ಪ್ರತಿ ಚಿತ್ರವನ್ನು ವೀಕ್ಷಿಸಿದ ನಂತರ ಪ್ರತಿಯೊಬ್ಬ ಭಾರತೀಯನು ಹೆಮ್ಮೆ ಪಟ್ಟಿದ್ದಾನೆ ಎಂದರು. ಸಾಟಿಯಿಲ್ಲದ ವೃತ್ತಿಪರತೆ ಮತ್ತು ಮಾನವ ಸ್ಪರ್ಶವನ್ನು ಒತ್ತಿ ಹೇಳಿದ ಪ್ರಧಾನಿ, ಒಬ್ಬ ವ್ಯಕ್ತಿಯು ಆಘಾತದಲ್ಲಿದ್ದಾಗ ಮತ್ತು ಎಲ್ಲವನ್ನೂ ಕಳೆದುಕೊಂಡಾಗ ಅದು ನಿರ್ಣಾಯಕ ಪಾತ್ರವನ್ನು ವಹಿಸುತ್ತದೆ ಎಂದು ಹೇಳಿದರು. ತಂಡವು ತೋರಿದ ಸಹಾನುಭೂತಿಯ ಕೆಲಸಗಳನ್ನು ಪ್ರಧಾನಿ ಶ್ಲಾಘಿಸಿದರು.

2001ರಲ್ಲಿ ಗುಜರಾತ್‌ನಲ್ಲಿ ಸಂಭವಿಸಿದ ಭೂಕಂಪದ ಸಮಯದಲ್ಲಿ ಸ್ವಯಂಸೇವಕರಾಗಿದ್ದನ್ನು ನೆನಪಿಸಿಕೊಂಡ ಪ್ರಧಾನಮಂತ್ರಿಯವರು, ಅವಶೇಷಗಳನ್ನು ತೆಗೆದು ಕೆಳಗಿರುವ ಜನರನ್ನು ಹುಡುಕುವ ಕೆಲಸದ ಕಷ್ಟವನ್ನು ಒತ್ತಿಹೇಳಿದರು. ಭುಜ್‌ನಲ್ಲಿ ಆಸ್ಪತ್ರೆಯೇ ಕುಸಿದುಬಿದ್ದಿದ್ದರಿಂದ ಇಡೀ ವೈದ್ಯಕೀಯ ವ್ಯವಸ್ಥೆಗೆ ಹೇಗೆ ಹಾನಿಯಾಯಿತು ಎಂಬುದನ್ನು ವಿವರಿಸಿದರು. 1979 ರಲ್ಲಿ ನಡೆದ ಮಚ್ಚು ಅಣೆಕಟ್ಟು ದುರಂತವನ್ನು ಸಹ ಪ್ರಧಾನಿ ನೆನಪಿಸಿಕೊಂಡರು. ಈ ವಿಪತ್ತುಗಳ ಸಂದರ್ಭಲ್ಲಿನ ನನ್ನ ಅನುಭವಗಳ ಆಧಾರದ ಮೇಲೆ, ನಿಮ್ಮ ಶ್ರಮ, ಉತ್ಸಾಹ ಮತ್ತು ಭಾವನೆಗಳನ್ನು ನಾನು ಪ್ರಶಂಸಿಸುತ್ತೇನೆ. ಇಂದು ನಾನು ನಿಮ್ಮೆಲ್ಲರಿಗೂ ವಂದಿಸುತ್ತೇನೆ ಎಂದು ಪ್ರಧಾನಿ ಹೇಳಿದರು.

ಕಷ್ಟದ ಸಂದರ್ಭಗಳಲ್ಲಿ ತಮಗೆ ತಾವೇ ಸಹಾಯ ಮಾಡಿಕೊಳ್ಳುವ ಸಾಮರ್ಥ್ಯವನ್ನು ಹೊಂದಿರುವವರನ್ನು ಸ್ವಾವಲಂಬಿಗಳು ಎಂದು ಕರೆಯಲಾಗುತ್ತದೆ. ಆದರೆ ಕಷ್ಟದ ಸಮಯದಲ್ಲಿ ಇತರರಿಗೆ ಸಹಾಯ ಮಾಡುವವರನ್ನು ನಿಸ್ವಾರ್ಥಿಗಳು ಎಂದು ಕರೆಯಲಾಗುತ್ತದೆ ಎಂದು ಅವರು ಒತ್ತಿ ಹೇಳಿದರು. ಇದು ವ್ಯಕ್ತಿಗಳಿಗೆ ಮಾತ್ರವಲ್ಲ ರಾಷ್ಟ್ರಗಳಿಗೂ ಅನ್ವಯಿಸುತ್ತದೆ ಎಂದರು. ಅದಕ್ಕಾಗಿಯೇ ಕಳೆದ ಕೆಲವು ವರ್ಷಗಳಲ್ಲಿ ಭಾರತವು ತನ್ನ ಸ್ವಾವಲಂಬನೆಯ ಜೊತೆಗೆ ತನ್ನ ನಿಸ್ವಾರ್ಥತೆಯನ್ನು ಪೋಷಿಸಿದೆ. ನಾವು 'ತಿರಂಗ'ದೊಂದಿಗೆ ಎಲ್ಲಿಗೆ ತಲುಪಿದರೂ, ಅಲ್ಲಿ ಭಾರತೀಯ ತಂಡಗಳು ಬಂದ ನಂತರ ಪರಿಸ್ಥಿತಿ ಸುಧಾರಿಸಲು ಪ್ರಾರಂಭಿಸುತ್ತದೆ ಎಂಬ ಭರವಸೆ ಇರುತ್ತದೆ ಎಂದ ಪ್ರಧಾನಿಯವರು ಉಕ್ರೇನ್‌ನಲ್ಲಿ ತಿರಂಗಾ ವಹಿಸಿದ ಪಾತ್ರದ ಮೇಲೆ ಬೆಳಕು ಚೆಲ್ಲಿದರು.

ತ್ರಿವರ್ಣ ಧ್ವಜವು ಸ್ಥಳೀಯ ಜನರಲ್ಲಿ ಗಳಿಸಿದ ಗೌರವದ ಬಗ್ಗೆಯೂ ಪ್ರಧಾನಿ ಮಾತನಾಡಿದರು. ಗಂಗಾ ಕಾರ್ಯಾಚರಣೆಯ ಸಂದರ್ಭದಲ್ಲಿ ಉಕ್ರೇನ್‌ನಲ್ಲಿರುವ ಪ್ರತಿಯೊಬ್ಬರಿಗೂ ತ್ರಿವರ್ಣ ಧ್ವಜವು ಹೇಗೆ ಗುರಾಣಿಯಾಗಿ ಕಾರ್ಯನಿರ್ವಹಿಸಿತು ಎಂಬುದನ್ನು ಪ್ರಧಾನಿ ನೆನಪಿಸಿಕೊಂಡರು. ಅಂತೆಯೇ, ಆಪರೇಷನ್ ದೇವಿ ಶಕ್ತಿಯಲ್ಲಿ ಅಫ್ಘಾನಿಸ್ತಾನದಿಂದ ಅತ್ಯಂತ ಪ್ರತಿಕೂಲ ಸಂದರ್ಭಗಳಲ್ಲಿ ಜನರನ್ನು ಸ್ಥಳಾಂತರಿಸಲಾಯಿತು. ಕೊರೊನಾ ಸಾಂಕ್ರಾಮಿಕ ಸಮಯದಲ್ಲಿ ಭಾರತವು ಪ್ರತಿಯೊಬ್ಬ ನಾಗರಿಕರನ್ನು ಮರಳಿ ಅವರ ಊರಿಗೆ ಕರೆತಂದಾಗ ಮತ್ತು ಔಷಧಿಗಳು ಮತ್ತು ಲಸಿಕೆಗಳನ್ನು ಪೂರೈಸುವ ಮೂಲಕ ಜಾಗತಿಕ ಅಭಿಮಾನವನ್ನು ಗಳಿಸಿದಾಗಲೂ ಅದೇ ಬದ್ಧತೆ ಸ್ಪಷ್ಟವಾಗಿತ್ತು ಎಂದು ಪ್ರಧಾನಿ ಹೇಳಿದರು.

ಟರ್ಕಿ ಮತ್ತು ಸಿರಿಯಾದಲ್ಲಿ ಭೂಕಂಪ ಸಂಭವಿಸಿದಾಗ ಮೊದಲು ಪ್ರತಿಕ್ರಿಯಿಸಿದವರಲ್ಲಿ ಭಾರತವು ಒಂದಾಗಿತ್ತು. 'ಆಪರೇಷನ್ ದೋಸ್ತ್' ಮೂಲಕ ಮಾನವೀಯತೆಗೆ ಭಾರತದ ಬದ್ಧತೆಯನ್ನು ಪ್ರಧಾನಿ ಒತ್ತಿ ಹೇಳಿದರು. ನೇಪಾಳದಲ್ಲಿ ಭೂಕಂಪ, ಮಾಲ್ಡೀವ್ಸ್ ಮತ್ತು ಶ್ರೀಲಂಕಾದಲ್ಲಿನ ಬಿಕ್ಕಟ್ಟಿನ ಉದಾಹರಣೆಗಳನ್ನು ನೀಡಿದ ಅವರು ಇಲ್ಲೆಲ್ಲಾ ಸಹಾಯ ಮಾಡಲು ಮೊದಲು ಮುಂದೆ ಬಂದದ್ದು ಭಾರತ ಎಂದು ಹೇಳಿದರು. ಭಾರತೀಯ ಪಡೆಗಳು ಮತ್ತು ಎನ್‌ಡಿಆರ್‌ಎಫ್‌ ಮೇಲೆ ಇತರ ದೇಶಗಳ ವಿಶ್ವಾಸವೂ ಹೆಚ್ಚುತ್ತಿದೆ ಎಂದು ಅವರು ಹೇಳಿದರು. ಹಲವು ವರ್ಷಗಳಿಂದ ಎನ್‌ಡಿಆರ್‌ಎಫ್‌ ದೇಶದ ಜನರಲ್ಲಿ ಉತ್ತಮ ಹೆಸರು ಗಳಿಸಿದೆ ಎಂದು ಪ್ರಧಾನಮಂತ್ರಿ ಹರ್ಷ ವ್ಯಕ್ತಪಡಿಸಿದರು. ದೇಶದ ಜನರು ಎನ್‌ಡಿಆರ್‌ಎಫ್ ಅನ್ನು ನಂಬುತ್ತಾರೆ ಎಂದು ಅವರು ಹೇಳಿದರು. ಘಟನಾ ಸ್ಥಳಕ್ಕೆ ಎನ್‌ಡಿಆರ್‌ಎಫ್ ತಲುಪಿದಾಗ ಜನರಲ್ಲಿ ನಂಬಿಕೆ ಮತ್ತು ಭರವಸೆ ಮೂಡುತ್ತದೆ. ಸ್ವತಃ ಇದೇ ಒಂದು ದೊಡ್ಡ ಸಾಧನೆಯಾಗಿದೆ ಎಂದರು. ಕೌಶಲ್ಯವಿರುವ ಪಡೆಗೆ ಸಂವೇದನಾಶೀಲತೆಯನ್ನು ಸೇರಿಸಿದಾಗ, ಆ ಪಡೆಯ ಬಲವು ಹಲವಾರು ಪಟ್ಟು ಹೆಚ್ಚಾಗುತ್ತದೆ ಎಂದು ಪ್ರಧಾನಿ ಹೇಳಿದರು.

ದುರಂತದ ಸಮಯದಲ್ಲಿ ಪರಿಹಾರ ಮತ್ತು ರಕ್ಷಣೆಗಾಗಿ ಭಾರತದ ಸಾಮರ್ಥ್ಯವನ್ನು ಬಲಪಡಿಸುವ ಅಗತ್ಯವನ್ನು ಒತ್ತಿ ಹೇಳಿದ ಪ್ರಧಾನಮಂತ್ರಿಯವರು, ವಿಶ್ವದ ಅತ್ಯುತ್ತಮ ಪರಿಹಾರ ಮತ್ತು ರಕ್ಷಣಾ ತಂಡವಾಗಿ ನಾವು ನಮ್ಮ ಗುರುತನ್ನು ಬಲಪಡಿಸಬೇಕಾಗಿದೆ. ನಮ್ಮ ಸ್ವಂತ ತಯಾರಿ ಉತ್ತಮವಾದಷ್ಟೂ ನಾವು ಜಗತ್ತಿಗೆ ಸೇವೆ ಸಲ್ಲಿಸಲು ಸಾಧ್ಯವಾಗುತ್ತದೆ ಎಂದರು. ಎನ್‌ಡಿಆರ್‌ಎಫ್ ತಂಡದ ಪ್ರಯತ್ನಗಳು ಮತ್ತು ಅನುಭವಗಳನ್ನು ಶ್ಲಾಘಿಸಿದ ಪ್ರಧಾನಿಯವರು, ಸಿಬ್ಬಂದಿಯು ಘಟನಾ ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆಯನ್ನು ನಡೆಸುತ್ತಿದ್ದರೂ, ಕಳೆದ 10 ದಿನಗಳಿಂದ ಮನಸ್ಸು ಮತ್ತು ಹೃದಯದ ಮೂಲಕ ನಾನು ಅವರೊಂದಿಗೆ ಸಂಪರ್ಕ ಹೊಂದಿದ್ದೆ ಎಂದು ಹೇಳಿದರು.

ಭಾಷಣದ ಪೂರ್ಣ ಪಠ್ಯವನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
PM Modi gets 'full marks' from former India cricketer as Chennai set to host historic Big Bash League opener

Media Coverage

PM Modi gets 'full marks' from former India cricketer as Chennai set to host historic Big Bash League opener
NM on the go

Nm on the go

Always be the first to hear from the PM. Get the App Now!
...
India-New Zealand relations are at a turning point: PM Modi at the India-New Zealand Business Event
July 11, 2026

Your Excellency, Prime Minister क्रिस्टोफर लक्सन,

भारत और न्यूज़ीलैंड के business leaders,

नमस्कार

किया ओरा

ऑकलैंड में आप सबके बीच आकर मुझे बहुत प्रसन्नता हो रही है। मैं प्रधानमंत्री लक्सन का, उनके सकारात्मक विचारों और भारत के प्रति उनकी गहरी प्रतिबद्धता के लिए विशेष आभार व्यक्त करता हूँ।

आप सभी की उपस्थिति न्यूज़ीलैंड की innovation, enterprise और future-oriented सोच का प्रतीक है। भारत की ओर से, मैं 140 करोड़ लोगों की aspirations और ambitions का संदेश लेकर आया हूँ।

Friends,

यह बैठक ऐसे समय में हो रही है जब भारत और न्यूज़ीलैंड के संबंध एक turning point पर हैं। आज हम अपने संबंधों को Strategic Partnership के सूत्र में बांध रहे हैं। यह केवल एक diplomatic milestone नहीं है। यह हमारे साझा भविष्य का एक नया संकल्प है।

इस वर्ष दोनों देशों के बीच नौ महीनों के रिकॉर्ड समय में Free Trade Agreement किया गया। यह आप सभी के लिए market access, investment, services, technology और talent mobility के नए अवसर लेकर आएगा। मुझे विश्वास है कि नए जोश और उत्साह के साथ काम करते हुए हम 2030 तक द्विपक्षीय व्यापार को दोगुना बढ़ाएंगे।

न्यूज़ीलैंड द्वारा अगले पंद्रह वर्षों में भारत में बीस बिलियन डॉलर का investment commitment किया गया है। यह केवल निवेश का ही नहीं, बल्कि भारत की विकास यात्रा में सहभागी बनने का भी commitment है।

Friends,

आज भारत दुनिया की fastest-growing major economy है। हमारी बढ़ती मिडल क्लास, large scale digital adoption और इंफ्रास्ट्रक्चर push, भारत को एक unique growth story बनाते हैं।

भारत में हमने reform, perform और transform को governance का आधार बनाया है। आज भारत में policy stability है, political stability है, और growth की continuity है।

इसलिए आज विश्व को हमारा संदेश है: India is not only a market; India is a launchpad for global growth.

भारत में बन रहे इन अवसरों का लाभ उठाने के लिए मैं कुछ उदाहरण आपके सामने रखना चाहूँगा। भारत में manufacturing को बढ़ावा देने के लिए हमने Production Linked Incentive scheme शुरू की है। इसके अंतर्गत food processing से लेकर textiles जैसे 14 sectors में लगभग बीस बिलियन डॉलर का सपोर्ट दिया जा रहा है। मैं आप सभी को इस manufacturing momentum का हिस्सा बनने के लिए आमंत्रित करता हूँ।

भारत में airports, regional connectivity, air cargo और टुरिज़म तेज़ी से बढ़ रहे हैं। भारत आज दुनिया का तीसरा सबसे बड़ा domestic aviation market है। हम मिलकर cargo corridors, flight connectivity और joint tourism packages बना सकते हैं।

Kiwi, apples, honey और seafood के लिए perishable cargo solutions विकसित किए जा सकते हैं। न्यूज़ीलैंड के पास horticulture, dairy science, और forestry में विशाल एक्स्पर्टीज़ है। भारत के पास consumer market, food parks और agri-tech talent की ताकत है। हम मिलकर farm-to-market value chains और global export platforms बना सकते हैं।

Fin Tech में आज भारत global leader है। आज दुनिया की पचास प्रतिशत real time digital payments भारत में होती हैं। हम digital payments के साथ साथ green bonds और blended finance में आगे बढ़ सकते हैं।

हमने space sector को private participation के लिए खोल दिया है। आज भारत में 400 से अधिक space start-ups है और अब तो एक यूनिकॉर्न भी बन गई है। दोनों देशों की कम्पनियां भारत के space ecosystem के साथ मिलकर small satellites, remote sensing और ocean monitoring में काम कर सकती हैं।

भारत में Smart Cities Mission के अंतर्गत 100 cities में 8,000 से अधिक projects पर काम हो रहा है। हम मिलकर urban mobility, water management, waste management जैसे क्षेत्रों में काम कर सकते हैं।

Friends,

मैं माओरी business leaders का विशेष अभिनंदन करता हूँ। भारत की सभ्यता और माओरी tradition, दोनों में प्रकृति, समुदाय और सस्टेनेबिलिटी के प्रति गहरा सम्मान है। हमारे FTA में भी माओरी बिजनेसस के लिए अवसरों को विशेष स्थान दिया गया है। हमारी इन साझा मूल्यों को जोड़कर हम inclusive and sustainable trade का नया model बना सकते हैं।

Friends,

मेरा सुझाव है कि हम मिलकर एक बहुत ही ambitious Business Roadmap बनाएं। अपनी strengths को जोड़ते हुए हम कम से कम पाँच flagship प्रोजेक्ट्स की पहचान करें, और उन्हें समयबद्ध तरीके से पूरा करने के लिए review मेकनिज़म बनाएं। तभी हम अपने संबंधों के पूरे potential को realise कर सकेंगे, और दोनों देशों के लोगों की आकांक्षाओं और अपेक्षाओं पर खरे उतर सकेंगे।

मैं आप सभी को इस यात्रा में कंधे से कंधा मिलाकर चलने के लिए आमंत्रित करता हूँ।

Let us make our partnership a platform for prosperity, a bridge for innovation, and a force for global good.

और मैं चाहता हूँ की भारत और नई ज़ीलैण्ड मिल कर के एक नयी शक्ति के रूप में उभरें।

और मेरा एक और आग्रह है। जैसे अभी आपने बताया कि खेल के हमारे संबंधों के सौ साल हो रहे हैं। यह बड़ा महत्वपूर्ण इवेंट है।

इसको तो हम मनाएंगे ही मनाएंगे। लेकिन क्या हम यह सोच सकते हैं, की 35 से कम उम्र के Businessmen, ऐसा एक बड़ा डेलीगेशन भारत आएं, और भारत से भी 35 से नीचे की उम्र का एक बिज़नेस डेलीगेशन New Zealand आये?

ताकि हम एक नयी पीढ़ी को हम तैयार करें ? इसी एक शुभकामना के साथ आप सब का बहुत-बहुत धन्यवाद।