ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಚೆನಾಬ್ ರೈಲು ಸೇತುವೆ ನಿರ್ಮಾಣದಲ್ಲಿ ಭಾಗಿಯಾಗಿರುವ ಕೆಲವು ಜನರೊಂದಿಗೆ ಸಂವಾದ ನಡೆಸಿದರು. ರಾಷ್ಟ್ರಕ್ಕಾಗಿ ಆಧುನಿಕ ಮೂಲಸೌಕರ್ಯಗಳನ್ನು ನಿರ್ಮಿಸುವ ಅವರ ಅಚಲ ಬದ್ಧತೆಯನ್ನು ಶ್ರೀ ನರೇಂದ್ರ ಮೋದಿ ಶ್ಲಾಘಿಸಿದರು.
ಈ ಸಂಬಂಧ ಪ್ರಧಾನಮಂತ್ರಿ ಅವರು ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ;
"ಚೆನಾಬ್ ರೈಲು ಸೇತುವೆ ನಿರ್ಮಾಣದಲ್ಲಿ ತೊಡಗಿರುವ ಕೆಲವು ಜನರೊಂದಿಗೆ ಸಂವಹನ ನಡೆಸಿದ್ದೇನೆ. ಅವರು ಭಾರತದ ವಿವಿಧ ಭಾಗಗಳಿಗೆ ಸೇರಿದವರು ಮತ್ತು ತಮ್ಮ ಸಹ ಭಾರತೀಯರಿಗೆ ಆಧುನಿಕ ಮೂಲಸೌಕರ್ಯಗಳನ್ನು ನಿರ್ಮಿಸುವ ಸಂಕಲ್ಪದಲ್ಲಿ ಅಚಲರಾಗಿದ್ದಾರೆ. ಅವರು ಕೆಲವು ಸವಾಲಿನ ಸಮಯಗಳಲ್ಲಿ ಕೆಲಸ ಮಾಡುವುದು ಸೇರಿದಂತೆ ತಮ್ಮ ಅನುಭವಗಳನ್ನು ಹಂಚಿಕೊಂಡರು. ಅವರು ಮಾಡಿದ ಕೆಲಸದ ಬಗ್ಗೆ ತಮ್ಮ ಕುಟುಂಬಗಳು ಹೇಗೆ ಹೆಮ್ಮೆಪಡುತ್ತವೆ ಎಂದು ಅವರು ಹಂಚಿಕೊಂಡರು!’’
Interacted with some of the people involved in building the Chenab Rail Bridge. They belong to different parts of India and are unwavering in their resolve to build modern infrastructure for their fellow Indians. They shared their experiences, including working in some very… pic.twitter.com/zU9nCkbhio
— Narendra Modi (@narendramodi) June 6, 2025


