ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರು ಇಂದು ಮುದ್ರಣ ಮಾಧ್ಯಮದ ಇಪ್ಪತ್ತಕ್ಕೂ ಹೆಚ್ಚು ಪತ್ರಕರ್ತರು ಮತ್ತು ಪ್ರಮುಖರೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಂವಾದ ನಡೆಸಿದರು. ಹನ್ನೊಂದು ವಿಭಿನ್ನ ಭಾಷೆಗಳನ್ನು ಪ್ರತಿನಿಧಿಸುವ ರಾಷ್ಟ್ರೀಯ ಮತ್ತು ಪ್ರಾದೇಶಿಕ ಮಾಧ್ಯಮಗಳ ಪತ್ರಕರ್ತರು ಹದಿನಾಲ್ಕು ಸ್ಥಳಗಳಿಂದ ಸಂವಾದದಲ್ಲಿ ಪಾಲ್ಗೊಂಡರು.

ದೇಶದ ಮೂಲೆ ಮೂಲೆಗೂ ಮಾಹಿತಿಯನ್ನು ಒದಗಿಸುವಂತಹ ಪ್ರಶಂಸಾರ್ಹ ಪಾತ್ರವನ್ನು ಮಾಧ್ಯಮಗಳು ಮಾಡುತ್ತಿವೆ ಎಂದು ಪ್ರಧಾನಿ ಹೇಳಿದರು. ಮಾಧ್ಯಮಗಳ ಜಾಲವು ಭಾರತದ ಉದ್ದಗಲಕ್ಕೆ ನಗರಗಳು ಮತ್ತು ಹಳ್ಳಿಗಳಿಗೆ ವ್ಯಾಪಿಸಿದೆ ಎಂದು ಅವರು ಹೇಳಿದರು. ಇದರಿಂದಾಗಿ COVID 19 ರ ಸವಾಲನ್ನು ಎದುರಿಸಲು ಮತ್ತು ಅದರ ಬಗ್ಗೆ ಸೂಕ್ತ ಮಾಹಿತಿಯನ್ನು ತಳಮಟ್ಟದಲ್ಲಿ ಹರಡಲು ಮಾಧ್ಯಮವು ಹೆಚ್ಚು ಮಹತ್ವದ್ದಾಗಿದೆ ಎಂದರು.

ಪತ್ರಿಕೆಗಳು ಅಪಾರ ವಿಶ್ವಾಸಾರ್ಹತೆಯನ್ನು ಹೊಂದಿವೆ ಮತ್ತು ಒಂದು ಪ್ರದೇಶದ ಸ್ಥಳೀಯ ಪುಟವನ್ನು ಜನರು ವ್ಯಾಪಕವಾಗಿ ಓದುತ್ತಾರೆ. ಆದ್ದರಿಂದ ಈ ಪುಟದಲ್ಲಿ ಲೇಖನಗಳ ಮೂಲಕ ಕೊರೋನಾವೈರಸ್ ಬಗ್ಗೆ ಜಾಗೃತಿ ಮೂಡಿಸುವುದು ಕಡ್ಡಾಯವಾಗಿದೆ ಎಂದು ಅವರು ಹೇಳಿದರು. ಪರೀಕ್ಷಾ ಕೇಂದ್ರಗಳು ಎಲ್ಲಿವೆ? ಯಾರು ಪರೀಕ್ಷೆಗೆ ಒಳಗಾಗಬೇಕು? ಪರೀಕ್ಷೆಗಾಗಿ ಯಾರನ್ನು ಸಂಪರ್ಕಿಸಬೇಕು? ಮತ್ತು ಮನೆಯಲ್ಲಿಯೇ ಪ್ರತ್ಯೇಕವಾಗಿರುವುದು ಹೇಗೆ? ಎಂದು ಜನರಿಗೆ ತಿಳಿಸುವುದು ಅತ್ಯಗತ್ಯವಾಗಿದೆ. ಈ ಮಾಹಿತಿಯನ್ನು ಪತ್ರಿಕೆಗಳು ಮತ್ತು ಅವುಗಳ ವೆಬ್ ಪೋರ್ಟಲ್‌ಗಳಲ್ಲಿ ಹಂಚಿಕೊಳ್ಳಬೇಕು ಎಂದು ಪ್ರಧಾನಿ ಹೇಳಿದರು. ಲಾಕ್ ಡೌನ್ ಸಮಯದಲ್ಲಿ ಅಗತ್ಯ ವಸ್ತುಗಳು ಲಭ್ಯವಾಗುವ ಸ್ಥಳದಂತಹ ಮಾಹಿತಿಯನ್ನು ಪ್ರಾದೇಶಿಕ ಪುಟಗಳಲ್ಲಿ ಹಂಚಿಕೊಳ್ಳಬಹುದು ಎಂದು ಅವರು ಸಲಹೆ ನೀಡಿದರು.

ಸರ್ಕಾರ ಮತ್ತು ಜನರ ನಡುವಿನ ಕೊಂಡಿಯಾಗಿ ಕಾರ್ಯನಿರ್ವಹಿಸುವಂತೆ ಮತ್ತು ರಾಷ್ಟ್ರೀಯ ಮತ್ತು ಪ್ರಾದೇಶಿಕ ಮಟ್ಟದಲ್ಲಿ ನಿರಂತರವಾಗಿ ಫೀಡ್ ಬ್ಯಾಕ್ ನೀಡುವಂತೆ ಪ್ರಧಾನಿಯವರು ಮಾಧ್ಯಮಗಳನ್ನು ತಿಳಿಸಿದರು. ಸಾಮಾಜಿಕ ಅಂತರದ ಮಹತ್ವವನ್ನು ಅವರು ಒತ್ತಿಹೇಳಿದರು, ಇದರ ಪ್ರಾಮುಖ್ಯತೆಯ ಬಗ್ಗೆ ಜಾಗೃತಿ ಮೂಡಿಸುವಂತೆ, ರಾಜ್ಯಗಳ ಲಾಕ್‌ಡೌನ್ ನಿರ್ಧಾರದ ಬಗ್ಗೆ ಜನರಿಗೆ ತಿಳಿಸುವಂತೆ ಮತ್ತು ಅಂತರರಾಷ್ಟ್ರೀಯ ದತ್ತಾಂಶಗಳ ಮೂಲಕ ಮತ್ತು ಇತರ ದೇಶಗಳ ಬಗೆಗಿನ ಕೇಸ್ ಸ್ಟಡೀಸ್ ಮೂಲಕ ವೈರಸ್ ಹರಡುವಿಕೆಯ ಪರಿಣಾಮವನ್ನು ಪತ್ರಿಕೆಗಳಲ್ಲಿ ಪ್ರಮುಖವಾಗಿ ತಿಳಿಸುವಂತೆ ಅವರು ಮಾಧ್ಯಮವನ್ನು ಕೇಳಿಕೊಂಡರು,

ಜನರ ಹೋರಾಟದ ಮನೋಭಾವವನ್ನು ಉಳಿಸಿಕೊಳ್ಳುವುದು ಬಹಳ ಮುಖ್ಯವಾಗಿದೆ; ನಿರಾಶಾವಾದ, ನಕಾರಾತ್ಮಕತೆ ಮತ್ತು ವದಂತಿಗಳ ಹರಡುವಿಕೆಯನ್ನು ನಿಭಾಯಿಸುವುದು ಮುಖ್ಯವಾಗಿದೆ ಎಂದು ಪ್ರಧಾನಿಯವರು ಒತ್ತಿ ಹೇಳಿದರು. COVID-19 ರ ಪರಿಣಾಮವನ್ನು ನಿಭಾಯಿಸಲು ಸರ್ಕಾರ ಬದ್ಧವಾಗಿದೆ ಎಂದು ನಾಗರಿಕರಿಗೆ ಭರವಸೆ ನೀಡಬೇಕಾಗಿದೆ ಎಂದೂ ಅವರು ಹೇಳಿದರು.
ಪರಿಣಾಮಕಾರಿಯಾಗಿ ಸಂವಹನ ನಡೆಸುವಲ್ಲಿ ಮತ್ತು ದೇಶವನ್ನು ಮುನ್ನಡೆಸುವಲ್ಲಿ ಪ್ರಧಾನಿಯವರು ವಹಿಸಿರುವ ಪಾತ್ರವನ್ನು ಮುದ್ರಣ ಮಾಧ್ಯಮದ ಪತ್ರಕರ್ತರು ಮತ್ತು ಪ್ರಮುಖರು ಶ್ಲಾಘಿಸಿದರು. ಸ್ಪೂರ್ತಿದಾಯಕ ಮತ್ತು ಸಕಾರಾತ್ಮಕ ಕಥೆಗಳನ್ನು ಪ್ರಕಟಿಸುವಂತೆ ಪ್ರಧಾನ ಮಂತ್ರಿಯವರು ನೀಡಿರುವ ಸಲಹೆಗಳ ಮೇರೆಗೆ ಕೆಲಸ ಮಾಡುತ್ತೇವೆ. ಈ ಗಂಭೀರ ಸವಾಲನ್ನು ಎದುರಿಸಲು ಒಟ್ಟಾಗುವ ಅವರ ಸಂದೇಶವನ್ನು ಇಡೀ ರಾಷ್ಟ್ರವು ಅನುಸರಿಸಿದೆ ಎಂದರು. ಮುದ್ರಣ ಮಾಧ್ಯಮದ ವಿಶ್ವಾಸಾರ್ಹತೆಯನ್ನು ಬಲಪಡಿಸಿದ್ದಕ್ಕಾಗಿ ಅವರು ಪ್ರಧಾನಿಯವರಿಗೆ ಧನ್ಯವಾದ ಅರ್ಪಿಸಿದರು.

ಸಂವಾದದಲ್ಲಿ ಭಾಗವಹಿಸಿ, ಫೀಡ್ ಬ್ಯಾಕ್ ನೀಡಿದ್ದಕ್ಕಾಗಿ ಪ್ರಧಾನ ಮಂತ್ರಿಯವರು ಧನ್ಯವಾದ ತಿಳಿಸಿದರು ಮತ್ತು ದುರ್ಬಲ ವರ್ಗಗಳೆಡೆಗಿನ ಮಾಧ್ಯಮದವರ ಸಾಮಾಜಿಕ ಜವಾಬ್ದಾರಿಯನ್ನು ನೆನಪಿಸಿದರು. ನಮ್ಮ ರಾಷ್ಟ್ರೀಯ ಭದ್ರತೆಯನ್ನು ಕಾಪಾಡಲು ಸಾಮಾಜಿಕ ಒಗ್ಗಟ್ಟು ಸುಧಾರಿಸುವುದು ನಿರ್ಣಾಯಕವಾಗಿದೆ ಎಂದು ಅವರು ಹೇಳಿದರು.

ಸರ್ಕಾರದ ಸಕ್ರಿಯ ಮತ್ತು ಶ್ರೇಣೀಕೃತ ಪ್ರತಿಕ್ರಿಯೆಯ ಬಗ್ಗೆ ಮಾಹಿತಿಯನ್ನು ನೀಡುವ ಮೂಲಕ ಭೀತಿ ಹರಡುವುದನ್ನು ತಡೆಗಟ್ಟಿದ್ದಕ್ಕಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಕಾರ್ಯದರ್ಶಿಯವರು ಪತ್ರಕರ್ತರಿಗೆ ಧನ್ಯವಾದಗಳನ್ನು ತಿಳಿಸಿದರು. ಬಿಕ್ಕಟ್ಟಿನ ಸಮಯದಲ್ಲಿ ತಪ್ಪು ಮಾಹಿತಿ ಹರಡುವುದನ್ನು ತಡೆಯುವಂತೆ ಅವರು ಮುದ್ರಣ ಮಾಧ್ಯಮಕ್ಕೆ ಮನವಿ ಮಾಡಿದರು.

ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವರು ಮತ್ತು ಮಾಹಿತಿ ಮತ್ತು ಪ್ರಸಾರ ಸಚಿವಾಲಯದ ಕಾರ್ಯದರ್ಶಿ ಸಂವಾದದಲ್ಲಿ ಭಾಗವಹಿಸಿದ್ದರು.

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
India-UK free trade deal to take effect on July 15, opening 99% of exports to tariff-free access

Media Coverage

India-UK free trade deal to take effect on July 15, opening 99% of exports to tariff-free access
NM on the go

Nm on the go

Always be the first to hear from the PM. Get the App Now!
...
Prime Minister shares Sanskrit Subhashitam highlighting the virtues of truth, service, learning and action
June 18, 2026

The Prime Minister, Shri Narendra Modi said that wealth follows truthfulness, fame follows selfless service, knowledge follows constant practice and wisdom follows action. He noted that these values play a vital role in shaping individual character and contributing to collective progress.

The Prime Minister shared a Sanskrit Subhashitam-

“सत्यानुसारिणी लक्ष्मीः कीर्तिस्त्यागानुसारिणी।

अभ्याससारिणी विद्या बुद्धिः कर्मानुसारिणी।।”

The Prime Minister wrote on X;