ಪ್ರಧಾನಮಂತ್ರಿ ಅವರು ಇಂದು ಮಸ್ಕತ್‌ನಲ್ಲಿ ಭಾರತೀಯ ಸಮುದಾಯದ ಬೃಹತ್ ಸಭೆಯನ್ನುದ್ದೇಶಿಸಿ ಮಾತನಾಡಿದರು. ಈ ಸಭೆಯಲ್ಲಿ ವಿವಿಧ ಭಾರತೀಯ ಶಾಲೆಗಳ 700ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಓಮನ್ ನಲ್ಲಿ ಭಾರತೀಯ ಶಾಲೆಗಳು ಸ್ಥಾಪನೆಯಾಗಿ 50 ವರ್ಷಗಳನ್ನು ಪೂರೈಸುತ್ತಿರುವ ಹಿನ್ನೆಲೆಯಲ್ಲಿ, ಈ ವರ್ಷವು ಅಲ್ಲಿನ ಶಿಕ್ಷಣ ಸಂಸ್ಥೆಗಳಿಗೆ ವಿಶೇಷವಾಗಿದೆ. 

 

ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ ಅವರು, ಭಾರತದಲ್ಲಿರುವ ಕುಟುಂಬದವರು ಮತ್ತು ಸ್ನೇಹಿತರ ಪರವಾಗಿ ಅನಿವಾಸಿ ಭಾರತೀಯರಿಗೆ ಶುಭಾಶಯಗಳನ್ನು ತಿಳಿಸಿದರು. ತಮಗೆ ನೀಡಿದ ಅತ್ಯಂತ ಆತ್ಮೀಯ ಮತ್ತು ವರ್ಣರಂಜಿತ ಸ್ವಾಗತಕ್ಕಾಗಿ ಅವರು ಧನ್ಯವಾದಗಳನ್ನು ಅರ್ಪಿಸಿದರು. ಓಮನ್ ನಲ್ಲಿ ನೆಲೆಸಿರುವ ಭಾರತದ ವಿವಿಧ ಭಾಗಗಳ ಜನರನ್ನು ಭೇಟಿಯಾಗುತ್ತಿರುವುದು ತಮಗೆ ಅಪಾರ ಸಂತೋಷ ತಂದಿದೆ ಎಂದು ಹೇಳಿದ ಅವರು, ವೈವಿಧ್ಯತೆಯೇ ಭಾರತೀಯ ಸಂಸ್ಕೃತಿಯ ಬುನಾದಿಯಾಗಿದೆ ಎಂದು ಉಲ್ಲೇಖಿಸಿದರು. ಈ ಮೌಲ್ಯವು ಭಾರತೀಯರು ತಾವು ವಾಸಿಸುವ ಯಾವುದೇ ಸಮಾಜದೊಂದಿಗೆ ಸುಲಭವಾಗಿ ಬೆರೆಯಲು ಮತ್ತು ಒಂದಾಗಲು ಸಹಾಯ ಮಾಡುತ್ತದೆ ಎಂದು ಅವರು ಅಭಿಪ್ರಾಯಪಟ್ಟರು. ಓಮನ್ ನಲ್ಲಿ ಭಾರತೀಯ ಸಮುದಾಯವನ್ನು ಅತ್ಯಂತ ಗೌರವದಿಂದ ಕಾಣಲಾಗುತ್ತಿದೆ ಎಂದು ಸ್ಮರಿಸಿದ ಪ್ರಧಾನಮಂತ್ರಿಯವರು, ಸಹಬಾಳ್ವೆ ಮತ್ತು ಸಹಕಾರವು ಭಾರತೀಯ ಅನಿವಾಸಿ ಸಮುದಾಯದ ಪ್ರಮುಖ ವೈಶಿಷ್ಟ್ಯಗಳಾಗಿವೆ ಎಂದರು.

 

ಪ್ರಧಾನಮಂತ್ರಿ ಅವರು ತಮ್ಮ ಭಾಷಣದಲ್ಲಿ ಭಾರತ ಮತ್ತು ಓಮನ್ ನಡುವೆ 'ಮಾಂಡವಿಯಿಂದ ಮಸ್ಕತ್'ವರೆಗೆ ಹರಡಿರುವ ಶತಮಾನಗಳಷ್ಟು ಹಳೆಯದಾದ ಬಾಂಧವ್ಯವನ್ನು ಸ್ಮರಿಸಿದರು. ಇಂದು ಈ ಐತಿಹಾಸಿಕ ಸಂಬಂಧವನ್ನು ಅನಿವಾಸಿ ಭಾರತೀಯರು ತಮ್ಮ ಕಠಿಣ ಪರಿಶ್ರಮ ಮತ್ತು ಒಗ್ಗಟ್ಟಿನ ಮೂಲಕ ಹೆಮ್ಮೆಯಿಂದ ಪೋಷಿಸುತ್ತಿದ್ದಾರೆ ಎಂದು ಅವರು ಶ್ಲಾಘಿಸಿದರು. 'ಭಾರತ್ ಕೊ ಜಾನಿಯೇ' ರಸಪ್ರಶ್ನೆ ಸ್ಪರ್ಧೆಯಲ್ಲಿ ಅನಿವಾಸಿ ಭಾರತೀಯ ಸಮುದಾಯವು ಅತ್ಯಂತ ಉತ್ಸಾಹದಿಂದ ಮತ್ತು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿರುವುದಕ್ಕೆ ಪ್ರಧಾನಿಯವರು ಮೆಚ್ಚುಗೆ ವ್ಯಕ್ತಪಡಿಸಿದರು. ಜ್ಞಾನ ಮತ್ತು ಶಿಕ್ಷಣವು ಭಾರತ-ಓಮನ್ ಸಂಬಂಧಗಳ ಕೇಂದ್ರಬಿಂದುವಾಗಿದೆ ಎಂದು ಒತ್ತಿ ಹೇಳಿದ ಅವರು, ಓಮನ್ ನಲ್ಲಿ ಭಾರತೀಯ ಶಾಲೆಗಳು 50 ವರ್ಷಗಳನ್ನು ಯಶಸ್ವಿಯಾಗಿ ಪೂರೈಸಿರುವ ಈ ಸಂಭ್ರಮದ ಸಂದರ್ಭಕ್ಕೆ ಎಲ್ಲರಿಗೂ ಅಭಿನಂದನೆಗಳನ್ನು ಸಲ್ಲಿಸಿದರು. ಇದೇ ಸಂದರ್ಭದಲ್ಲಿ, ಓಮನ್ನಲ್ಲಿರುವ ಭಾರತೀಯ ಸಮುದಾಯದ ಕ್ಷೇಮಾಭಿವೃದ್ಧಿಗೆ ಮತ್ತು ಅವರ ಹಿತರಕ್ಷಣೆಗೆ ನಿರಂತರ ಬೆಂಬಲ ನೀಡುತ್ತಿರುವ ಓಮನ್ ದೊರೆ, ಹಿಸ್ ಮೆಜೆಸ್ಟಿ ಸುಲ್ತಾನ್ ಹೈತಮ್ ಬಿನ್ ತಾರಿಕ್ ಅವರಿಗೆ ಪ್ರಧಾನಮಂತ್ರಿಯವರು ವಿಶೇಷವಾಗಿ ಕೃತಜ್ಞತೆಗಳನ್ನು ಅರ್ಪಿಸಿದರು.

 

ಪ್ರಧಾನಮಂತ್ರಿ ಅವರು ಭಾರತದ ಪರಿವರ್ತನಾತ್ಮಕ ಬೆಳವಣಿಗೆ ಮತ್ತು ಅಭಿವೃದ್ಧಿ, ಬದಲಾವಣೆಯ ವೇಗ ಮತ್ತು ವ್ಯಾಪ್ತಿ ಹಾಗೂ ಕಳೆದ ತ್ರೈಮಾಸಿಕದಲ್ಲಿ ಶೇಕಡಾ 8ಕ್ಕಿಂತ ಹೆಚ್ಚು ಬೆಳವಣಿಗೆಯಿಂದ ಪ್ರತಿಫಲಿಸುವ ಆರ್ಥಿಕತೆಯ ಸದೃಢತೆಯ ಬಗ್ಗೆ ಮಾತನಾಡಿದರು. ಕಳೆದ 11 ವರ್ಷಗಳಲ್ಲಿ ಸರ್ಕಾರದ ಸಾಧನೆಗಳನ್ನು ಸ್ಮರಿಸುತ್ತಾ, ಮೂಲಸೌಕರ್ಯ ಅಭಿವೃದ್ಧಿ, ಉತ್ಪಾದನೆ, ಆರೋಗ್ಯ ರಕ್ಷಣೆ, ಹಸಿರು ಬೆಳವಣಿಗೆ ಮತ್ತು ಮಹಿಳಾ ಸಬಲೀಕರಣದ ಕ್ಷೇತ್ರಗಳಲ್ಲಿ ದೇಶವು ಆಮೂಲಾಗ್ರ ಬದಲಾವಣೆಗಳನ್ನು ಕಂಡಿದೆ ಎಂದು ಅವರು ಗಮನಿಸಿದರು. ವಿಶ್ವದರ್ಜೆಯ ನಾವೀನ್ಯತೆ, ಸ್ಟಾರ್ಟ್ಅಪ್ ಮತ್ತು ಡಿಜಿಟಲ್ ಸಾರ್ವಜನಿಕ ಮೂಲಸೌಕರ್ಯ ವ್ಯವಸ್ಥೆಯನ್ನು ಅಭಿವೃದ್ಧಿಪಡಿಸುವ ಮೂಲಕ ಭಾರತವು 21ನೇ ಶತಮಾನಕ್ಕೆ ತನ್ನನ್ನು ಸಿದ್ಧಪಡಿಸಿಕೊಳ್ಳುತ್ತಿದೆ ಎಂದು ಅವರು ತಿಳಿಸಿದರು. ಜಾಗತಿಕವಾಗಿ ನಡೆಯುವ ಎಲ್ಲಾ ಡಿಜಿಟಲ್ ಪಾವತಿಗಳಲ್ಲಿ ಸುಮಾರು ಶೇಕಡಾ 50 ರಷ್ಟು ಪಾಲು ಹೊಂದಿರುವ ಭಾರತದ ಯುಪಿಐ ವ್ಯವಸ್ಥೆಯು ಹೆಮ್ಮೆ ಮತ್ತು ಸಾಧನೆಯ ವಿಷಯವಾಗಿದೆ ಎಂದು ಪ್ರಧಾನಮಂತ್ರಿ ಹೇಳಿದರು. ಚಂದ್ರನ ಮೇಲೆ ಇಳಿಯುವುದರಿಂದ ಹಿಡಿದು ಯೋಜಿತ 'ಗಗನಯಾನ' ಮಾನವ ಬಾಹ್ಯಾಕಾಶ ಮಿಷನ್ ವರೆಗೆ ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಇತ್ತೀಚಿನ ಅದ್ಭುತ ಸಾಧನೆಗಳನ್ನು ಅವರು ಉಲ್ಲೇಖಿಸಿದರು. ಬಾಹ್ಯಾಕಾಶವು ಭಾರತ ಮತ್ತು ಓಮನ್ ನಡುವಿನ ಸಹಯೋಗದ ಪ್ರಮುಖ ಭಾಗವಾಗಿದೆ ಎಂದು ತಿಳಿಸಿದ ಅವರು, ಯುವಜನರಿಗಾಗಿ ಇಸ್ರೋ ಹಮ್ಮಿಕೊಂಡಿರುವ 'ಯುವಿಕಾ' (YUVIKA) ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ವಿದ್ಯಾರ್ಥಿಗಳಿಗೆ ಆಹ್ವಾನ ನೀಡಿದರು. ಭಾರತವು ಕೇವಲ ಒಂದು ಮಾರುಕಟ್ಟೆಯಲ್ಲ, ಬದಲಿಗೆ ಸರಕು ಮತ್ತು ಸೇವೆಗಳಿಂದ ಡಿಜಿಟಲ್ ಪರಿಹಾರಗಳವರೆಗೆ ಇಡೀ ವಿಶ್ವಕ್ಕೇ ಒಂದು ಮಾದರಿಯಾಗಿದೆ ಎಂದು ಪ್ರಧಾನಮಂತ್ರಿ ಅವರು ಹೇಳಿದರು.

 

ಅನಿವಾಸಿ ಭಾರತೀಯರ ಕ್ಷೇಮಾಭಿವೃದ್ಧಿಯ ಬಗ್ಗೆ ಭಾರತಕ್ಕಿರುವ ಆಳವಾದ ಬದ್ಧತೆಯನ್ನು ಪ್ರಧಾನಮಂತ್ರಿ ಅವರು ವ್ಯಕ್ತಪಡಿಸಿದರು. ನಮ್ಮ ಜನರು ಯಾವಾಗ ಮತ್ತು ಎಲ್ಲಿಯೇ ಸಂಕಷ್ಟದಲ್ಲಿದ್ದರೂ ಅಥವಾ ಅವರಿಗೆ ಸಹಾಯದ ಅಗತ್ಯವಿದ್ದರೂ, ಸರ್ಕಾರವು ಅವರ ಬೆಂಬಲಕ್ಕೆ ಸದಾ ಇರುತ್ತದೆ ಮತ್ತು ಅವರ ಕೈಹಿಡಿಯುತ್ತದೆ ಎಂದು ಅವರು ಭರವಸೆ ನೀಡಿದರು.

 

ಕೃತಕ ಬುದ್ಧಿಮತ್ತೆ ಸಹಯೋಗ, ಡಿಜಿಟಲ್ ಕಲಿಕೆ, ನಾವೀನ್ಯತೆ ಪಾಲುದಾರಿಕೆ ಮತ್ತು ಉದ್ಯಮಶೀಲತೆಯ ವಿನಿಮಯದ ಮೂಲಕ ಭಾರತ-ಓಮನ್ ಪಾಲುದಾರಿಕೆಯು ಭವಿಷ್ಯಕ್ಕೆ ಸಜ್ಜಾಗುತ್ತಿದೆ ಎಂದು ಪ್ರಧಾನಮಂತ್ರಿಯವರು ಈ ಸಂದರ್ಭದಲ್ಲಿ ಪುನರುಚ್ಚರಿಸಿದರು. ಯುವಜನರು ದೊಡ್ಡದಾಗಿ ಕನಸು ಕಾಣಬೇಕು, ವಿಷಯಗಳನ್ನು ಆಳವಾಗಿ ಕಲಿಯಬೇಕು ಮತ್ತು ಧೈರ್ಯದಿಂದ ನಾವೀನ್ಯತೆಗಳನ್ನು ಕೈಗೊಳ್ಳಬೇಕು, ಆ ಮೂಲಕ ಮಾನವಕುಲಕ್ಕೆ ಅರ್ಥಪೂರ್ಣ ಕೊಡುಗೆ ನೀಡಬೇಕು ಎಂದು ಅವರು ಕರೆ ನೀಡಿದರು.

 

ಭಾಷಣದ ಪೂರ್ಣ ಪಠ್ಯವನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
India’s AI moment: Sarvam turns unicorn at $1.5 billion valuation

Media Coverage

India’s AI moment: Sarvam turns unicorn at $1.5 billion valuation
NM on the go

Nm on the go

Always be the first to hear from the PM. Get the App Now!
...
Today, the world does not suffer from a shortage of resources; it suffers from a shortage of trust: PM Modi at G7 Summit in Evian, France
June 16, 2026

राष्ट्रपति मैक्रों,
Your Excellencies,

नमस्कार!

G-7 समिट में हमारे गर्मजोशी भरे स्वागत के लिए मैं राष्ट्रपति मैक्रों का हार्दिक आभार व्यक्त करता हूँ।

Friends,

आज का विश्व पहले से कहीं अधिक inter-connected और inter-dependent है। किसी भी देश की ऊर्जा सुरक्षा, खाद्य सुरक्षा, स्वास्थ्य सुरक्षा, साइबर सुरक्षा और आर्थिक समृद्धि केवल उसकी सीमाओं के भीतर तय नहीं होती। Mobility, data, capital, technology, ये सभी हमें आपस में जोड़ते हैं।

ऐसे समय में Partnerships का महत्व स्वाभाविक रूप से बढ़ जाता है। लेकिन साझेदारियाँ तभी सफल होती हैं जब उनके केंद्र में विश्वास हो। आज सबसे महत्वपूर्ण Strategic Asset कोई mineral, technology या market नहीं, बल्कि आपसी विश्वास है।

विश्वास कि टेक्नॉलजी और supply chains को हथियार के रूप में नहीं, global good के लिए इस्तेमाल किया जाएगा। विश्वास कि विकास के अवसर कुछ देशों तक सीमित नहीं रहेंगे। विश्वास कि वैश्विक संस्थान सभी देशों की आकांक्षाओं को पूरा करने में सक्षम होंगे।

Friends,

पिछली सदी में मानवता को दो विश्व युद्धों से गुज़रना पड़ा। अनेक बलिदानों के बाद विश्व समुदाय ने शांति, स्थिरता और समृद्धि की ओर बढ़ने के लिए व्यवस्थाएं विकसित की। इन व्यवस्थाओं का आधार भी trust ही था।

किन्तु अनेक दशकों से, अनेक पीढ़ियों के योगदान से बनाए गए विश्वास को आज चोट पहुँच रही है। कोविड ने हमें आईना दिखाया कि trust और solidarity के दावे कितने खोखले थे।

Today the world does not suffer from a shortage of resources; it suffers from a shortage of trust. And the future of our partnerships depends on building this trust.

अमेरिका के राष्ट्रपति रोनल्ड रेगन ने कहा था: Trust but Verify. यह आज के समय में भी प्रासंगिक है। भावी पीढ़ियों के प्रति हमारा दायित्व है कि हम नए युग के अनुरूप trusted rules based order का निर्माण करें।

Friends,

भारत ने सदैव विश्व को एक परिवार के रूप में देखा है। हमारे सभी प्रयास “सर्वजन हिताय, सर्वजन सुखाय” यानि, welfare and happiness for all के मूल सिद्धांत पर आधारित रहे हैं।

भारत का अनुभव दिखाता है कि विकास सबसे अधिक प्रभावी तब होता है जब वह लोगों की आकांक्षाओं से जुड़ा हो। यही सिद्धांत हमारी अंतरराष्ट्रीय साझेदारियों का भी आधार है। इसी सोच के साथ भारत ने International Solar Alliance, Coalition for Disaster Resilient Infrastructure, ग्लोबल बायोफ्यूल्स एलायंस, Mission LiFE, और “एक पेड़ माँ के नाम” जैसी वैश्विक पहलों को आगे बढ़ाया है।

संकट के समय भारत ने First Responder के रूप में सभी देशों की सहायता करना अपना दायित्व समझा है। कोविड महामारी के दौरान भारत ने डेढ़ सौ से अधिक देशों को दवाइयाँ और vaccines उपलब्ध कराईं।

श्रीलंका में cyclone हो, अफगानिस्तान में भूकंप हो, मोज़ाम्बिक में floods हों, या क्यूबा और जमैका में hurricane, भारत ने सदैव "Humanity First" के सिद्धांत पर कार्य किया है। हमारी विकास साझेदारियाँ भी इसी भावना को प्रतिबिंबित करती हैं। हमारे प्रयास पार्टनर देशों में capacity building और कौशल विकास पर केन्द्रित रहे हैं।

भारत का मानना है: The true test of partnership is not what we build for others, but what we enable others to build for themselves.

Friends,

आज ग्लोबल साउथ की विश्व समुदाय से बहुत उम्मीदें हैं। किन्तु उनकी अपेक्षा सहारे की नहीं, साथ की है। वे वैश्विक विकास के लाभार्थी नहीं, उसके भागीदार बनना चाहते हैं।

हमें donor–recipient की सोच से आगे बढ़कर, equal पार्टनर्स के रूप में काम करना होगा। उनके पास-पास नहीं, साथ-साथ चलना होगा। साझेदारी को dependency के बजाय, dignity से जोड़ना होगा। इन प्रयासों से हम भावी पीढ़ियों के सतत विकास की मजबूत नींव रख सकेंगे।

Friends,

अंतरराष्ट्रीय साझेदारियाँ और वैश्विक एकजुटता तभी सार्थक बन सकती हैं, जब हम साझा चुनौतियों का मिलकर समाधान करें। भारत का दृढ विश्वास है कि विश्व के विभिन्न हिस्सों में चल रहे तनावों और युद्धों का स्थायी समाधान dialogue, diplomacy और अंतरराष्ट्रीय सहयोग के मार्ग से ही संभव है।

हम west asia में शांति प्रयासों में हुई प्रगति का स्वागत करते हैं। इस संघर्ष से west asia में हमारे मित्र देशों को जान-माल का नुकसान झेलना पड़ा है। होर्मुज़ स्ट्रेट में maritime ट्रेड में आई बाधा के कारण पूरे विश्व की अर्थव्यवस्था को नुकसान पहुंचा। भारत के कई civilians को जान गंवानी पड़ी। Global maritime ट्रेड के माध्यम से सभी देशों को आपस में जोड़ने वाले नाविकों की सुरक्षा हमारा दायित्व है। हमें यह सुनिश्चित करना होगा कि समुद्री मार्ग सुरक्षित रहें, और Seafarers बिना भय के अपना कार्य कर सकें।

Friends,

भारत इन विषयों पर सभी पार्टनर्स के साथ मिलकर काम करने के लिए पूरी तरह से तैयार है।

बहुत-बहुत धन्यवाद।