ಈ ತಿಂಗಳ ಆರಂಭದಲ್ಲಿ ಜೀವಿಕಾ ನಿಧಿ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಉದ್ಘಾಟಿಸುವ ಅವಕಾಶ ನನಗೆ ಸಿಕ್ಕಿತು, ಈಗ, ಈ ಉಪಕ್ರಮದ ಬಲವು ಮುಖ್ಯಮಂತ್ರಿ ಮಹಿಳಾ ರೋಜ್‌ಗಾರ್ ಯೋಜನೆಯೊಂದಿಗೆ ಮತ್ತಷ್ಟು ಹೆಚ್ಚಾಗುತ್ತದೆ: ಪ್ರಧಾನಮಂತ್ರಿ
ಮುಖ್ಯಮಂತ್ರಿ ಮಹಿಳಾ ರೋಜ್‌ಗಾರ್ ಯೋಜನೆಯು ಕೇಂದ್ರ ಸರ್ಕಾರದ ಲಖ್‌ಪತಿ ದೀದಿ ಅಭಿಯಾನವನ್ನು ಮತ್ತಷ್ಟು ಬಲಪಡಿಸಿದೆ: ಪ್ರಧಾನಮಂತ್ರಿ
ಸರ್ಕಾರವು ಮಹಿಳೆಯರನ್ನು ಗಮನದಲ್ಲಿಟ್ಟುಕೊಂಡು ನೀತಿಗಳನ್ನು ರೂಪಿಸಿದಾಗ, ಪ್ರಯೋಜನಗಳು ಸಮಾಜದ ಇತರೆ ಭಾಗಗಳಿಗೂ ವಿಸ್ತರಿಸುತ್ತದೆ, ಉಜ್ವಲ ಯೋಜನೆಯ ಪರಿವರ್ತನಾತ್ಮಕ ಪರಿಣಾಮವನ್ನು ಈಗ ವಿಶ್ವಾದ್ಯಂತ ಗುರುತಿಸಲಾಗುತ್ತಿದೆ: ಪ್ರಧಾನಮಂತ್ರಿ
ಸ್ವಸ್ಥ ನಾರಿ, ಸಶಕ್ತ್ ಪರಿವಾರ್ ಅಭಿಯಾನದ ಅಡಿ ರಕ್ತಹೀನತೆ, ರಕ್ತದೊತ್ತಡ, ಮಧುಮೇಹ ಮತ್ತು ಕ್ಯಾನ್ಸರ್‌ನಂತಹ ಗಂಭೀರ ಆರೋಗ್ಯ ಸ್ಥಿತಿಗಳಿಗಾಗಿ ಗ್ರಾಮಗಳು ಮತ್ತು ಪಟ್ಟಣಗಳಲ್ಲಿ 4.25 ಲಕ್ಷಕ್ಕೂ ಹೆಚ್ಚು ಆರೋಗ್ಯ ಶಿಬಿರಗಳನ್ನು ಆಯೋಜಿಸಲಾಗುತ್ತಿದೆ: ಪ್ರಧಾನಮಂತ್ರಿ
ಮಹಿಳೆ ಪ್ರಗತಿ ಹೊಂದಿದಾಗ, ಇಡೀ ಸಮಾಜವು ಮುಂದುವರಿಯುತ್ತದೆ: ಪ್ರಧಾನಮಂತ್ರಿ
ಈ 75 ಲಕ್ಷ ಮಹಿಳೆಯರಲ್ಲಿ ಪ್ರತಿಯೊಬ್ಬರ ಬ್ಯಾಂಕ್ ಖಾತೆಗಳಿಗೆ ಏಕಕಾಲದಲ್ಲಿ 10,000 ರೂ. ವರ್ಗಾಯಿಸಲಾಗಿದೆ ಎಂದು ಘೋಷಿಸಿದರು.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವೀಡಿಯೊ ಕಾನ್ಫರೆನ್ಸ್ ಮೂಲಕ ಬಿಹಾರದ ಮುಖ್ಯಮಂತ್ರಿ ಮಹಿಳಾ ರೋಜ್‌ಗಾರ್ ಯೋಜನೆ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಎಲ್ಲರಿಗೂ ನವರಾತ್ರಿಯ ಶುಭಾಶಯ ಕೋರಿದರು. ಬಿಹಾರದ ಮಹಿಳೆಯರೊಂದಿಗೆ ಈ ಆಚರಣೆಯಲ್ಲಿ ಭಾಗವಹಿಸುತ್ತಿರುವುದಕ್ಕೆ ಸಂತೋಷ ವ್ಯಕ್ತಪಡಿಸಿದ ಅವರು, ಮುಖ್ಯಮಂತ್ರಿ ಮಹಿಳಾ ರೋಜ್‌ಗಾರ್ ಯೋಜನೆಯನ್ನು ಇಂದು ಪ್ರಾರಂಭಿಸಲಾಗುತ್ತಿದೆ. 75 ಲಕ್ಷ ಮಹಿಳೆಯರು ಈಗಾಗಲೇ ಈ ಉಪಕ್ರಮಕ್ಕೆ ಸೇರಿದ್ದಾರೆ . ಈ 75 ಲಕ್ಷ ಮಹಿಳೆಯರಲ್ಲಿ ಪ್ರತಿಯೊಬ್ಬರ ಬ್ಯಾಂಕ್ ಖಾತೆಗಳಿಗೆ ಏಕಕಾಲದಲ್ಲಿ 10,000 ರೂ. ವರ್ಗಾಯಿಸಲಾಗಿದೆ ಎಂದು ಘೋಷಿಸಿದರು.

ಈ ಪ್ರಕ್ರಿಯೆ ನಡೆಯುತ್ತಿರುವಾಗ ತಮಗೆ 2 ಆಲೋಚನೆಗಳು ಇದ್ದವು. ಮೊದಲನೆಯದಾಗಿ, ಇಂದು ಬಿಹಾರದ ಮಹಿಳೆಯರು ಮತ್ತು ಹೆಣ್ಣು ಮಕ್ಕಳಿಗೆ ನಿಜವಾಗಿಯೂ ಮಹತ್ವದ ಮೈಲಿಗಲ್ಲಾಗಿದೆ. ಒಬ್ಬ ಮಹಿಳೆ ಉದ್ಯೋಗ ಅಥವಾ ಸ್ವ-ಉದ್ಯೋಗದಲ್ಲಿ ತೊಡಗಿಸಿಕೊಂಡಾಗ, ಆಕೆಯ ಕನಸುಗಳು ಹೊಸ ರೆಕ್ಕೆಪುಕ್ಕ ಪಡೆಯುತ್ತವೆ, ಸಮಾಜದಲ್ಲಿ ಆಕೆಯ ಗೌರವ ಬೆಳೆಯುತ್ತದೆ. ಎರಡನೆಯದಾಗಿ, ಸರ್ಕಾರವು 11 ವರ್ಷಗಳ ಹಿಂದೆ ಜನ ಧನ್ ಯೋಜನೆ ಪ್ರಾರಂಭಿಸಲು ದೃಢನಿಶ್ಚಯ ಮಾಡದಿದ್ದರೆ, ಈ ಯೋಜನೆಯಡಿ 30 ಕೋಟಿಗೂ ಹೆಚ್ಚು ಮಹಿಳೆಯರು ಬ್ಯಾಂಕ್ ಖಾತೆಗಳನ್ನು ತೆರೆಯದಿದ್ದರೆ, ಈ ಖಾತೆಗಳನ್ನು ಮೊಬೈಲ್ ಫೋನ್‌ಗಳು ಮತ್ತು ಆಧಾರ್‌ಗೆ ಲಿಂಕ್ ಮಾಡದಿದ್ದರೆ, ಇಂದು ಅಂತಹ ಹಣವನ್ನು ನೇರವಾಗಿ ಅವರ ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸಲು ಸಾಧ್ಯವಾಗುತ್ತಿರಲಿಲ್ಲ. ಈ ಮೂಲಸೌಕರ್ಯವಿಲ್ಲದಿದ್ದರೆ, ಹಣವು ಮಧ್ಯವರ್ತಿಗಳ ಪಾಲಾಗುತ್ತಿತ್ತು, ಇದು ಫಲಾನುಭವಿಗಳಿಗೆ ನಿಜಕ್ಕೂ ಅನ್ಯಾಯವಾಗುತ್ತಿತ್ತು ಎಂದು ಹೇಳಿದರು.

 

ತನ್ನ ಸಹೋದರಿ ಆರೋಗ್ಯವಾಗಿ, ಸಮೃದ್ಧಿಯಾಗಿದ್ದಾಗ ಮತ್ತು ಆಕೆಯ ಕುಟುಂಬ ಆರ್ಥಿಕವಾಗಿ ಸದೃಢವಾಗಿದ್ದಾಗ ಸಹೋದರ ನಿಜವಾದ ಸಂತೋಷ ಕಂಡುಕೊಳ್ಳುತ್ತಾನೆ. ಈ ಯೋಗಕ್ಷೇಮವನ್ನು ಖಚಿತಪಡಿಸಿಕೊಳ್ಳಲು ಒಬ್ಬ ಸಹೋದರ ತನ್ನಿಂದ ಸಾಧ್ಯವಾದ ಎಲ್ಲವನ್ನೂ ಮಾಡುತ್ತಾನೆ. ಇಂದು ಇಬ್ಬರು ಸಹೋದರರು, ತಾವು ಮತ್ತು ಶ್ರೀ ನಿತೀಶ್ ಕುಮಾರ್ ಅವರು ಬಿಹಾರದ ಮಹಿಳೆಯರ ಸೇವೆ, ಸಮೃದ್ಧಿ ಮತ್ತು ಘನತೆಗಾಗಿ ಒಟ್ಟಾಗಿ ಕೆಲಸ ಮಾಡುತ್ತಿದ್ದೇವೆ. ಇಂದಿನ ಕಾರ್ಯಕ್ರಮವು ಈ ಬದ್ಧತೆಗೆ ಸಾಕ್ಷಿಯಾಗಿದೆ ಎಂದು ಪ್ರಧಾನಿ ಹೇಳಿದರು.

ಮುಖ್ಯಮಂತ್ರಿ ಮಹಿಳಾ ರೋಜ್‌ಗಾರ್ ಯೋಜನೆಯನ್ನು ಮೊದಲು ಅವರು ಪ್ರಸ್ತುತಪಡಿಸಿದಾಗ ಅದರ ದೃಷ್ಟಿಕೋನದಿಂದ ಪ್ರಭಾವಿತನಾದೆ. ಈ ಯೋಜನೆಯಡಿ ಪ್ರತಿ ಕುಟುಂಬದಿಂದ ಕನಿಷ್ಠ ಒಬ್ಬ ಮಹಿಳಾ ಫಲಾನುಭವಿ ಇರುತ್ತಾರೆ. 10,000 ರೂ. ಆರಂಭಿಕ ಆರ್ಥಿಕ ನೆರವಿನೊಂದಿಗೆ ಪ್ರಾರಂಭಿಸಿ, ಈ ಯೋಜನೆಯು ಉದ್ಯಮದ ಯಶಸ್ಸಿನ ಆಧಾರದ ಮೇಲೆ 2 ಲಕ್ಷ ರೂ. ವರೆಗೆ ಸಾಲ ಒದಗಿಸಬಹುದು. ಈ ಉಪಕ್ರಮದ ಪ್ರಮಾಣವನ್ನು ಎಲ್ಲರೂ ಪರಿಗಣಿಸಬೇಕು, ಬಿಹಾರದ ಮಹಿಳೆಯರು ಈಗ ದಿನಸಿ, ಪಾತ್ರೆಗಳು, ಸೌಂದರ್ಯವರ್ಧಕಗಳು, ಆಟಿಕೆಗಳು ಮತ್ತು ಲೇಖನ ಸಾಮಗ್ರಿಗಳನ್ನು ಮಾರಾಟ ಮಾಡುವ ಅಂಗಡಿಗಳನ್ನು ತೆರೆಯಬಹುದು. ಅವರು ಜಾನುವಾರು ಸಾಕಣೆ ಮತ್ತು ಕೋಳಿ ಸಾಕಣೆಯಂತಹ ಜಾನುವಾರು ಸಂಬಂಧಿತ ವ್ಯವಹಾರಗಳನ್ನು ಸಹ ಮುಂದುವರಿಸಬಹುದು. ಈ ಎಲ್ಲಾ ಉದ್ಯಮಗಳಿಗೆ, ಅಗತ್ಯ ತರಬೇತಿ ನೀಡಲಾಗುವುದು. ಬಿಹಾರದಲ್ಲಿ ಈಗಾಗಲೇ ಸ್ವಸಹಾಯ ಗುಂಪುಗಳ ಬಲಿಷ್ಠ ಜಾಲವಿದ್ದು, ಸುಮಾರು 11 ಲಕ್ಷ ಗುಂಪುಗಳು ಸಕ್ರಿಯವಾಗಿ ಕಾರ್ಯ ನಿರ್ವಹಿಸುತ್ತಿವೆ. ಇದರರ್ಥ ಸುಸ್ಥಾಪಿತ ವ್ಯವಸ್ಥೆ ಈಗಾಗಲೇ ಜಾರಿಯಲ್ಲಿದೆ. "ಈ ತಿಂಗಳ ಆರಂಭದಲ್ಲಿ, ಜೀವಿಕಾ ನಿಧಿ ಕ್ರೆಡಿಟ್ ಕೋಆಪರೇಟಿವ್ ಸೊಸೈಟಿ ಉದ್ಘಾಟಿಸುವ ಅವಕಾಶ ನನಗೆ ಸಿಕ್ಕಿತು. ಈ ವ್ಯವಸ್ಥೆಯ ಬಲವನ್ನು ಈಗ ಮುಖ್ಯಮಂತ್ರಿ ಮಹಿಳಾ ರೋಜ್‌ಗಾರ್ ಯೋಜನೆಯೊಂದಿಗೆ ಸಂಯೋಜಿಸಲಾಗುವುದು, ಇದರಿಂದಾಗಿ ಯೋಜನೆಯು ಆರಂಭದಿಂದಲೇ ಬಿಹಾರದಾದ್ಯಂತ ಪರಿಣಾಮಕಾರಿಯಾಗಿರುತ್ತದೆ" ಎಂದು ಪ್ರಧಾನಿ ಹೇಳಿದರು.

ಮುಖ್ಯಮಂತ್ರಿ ಮಹಿಳಾ ರೋಜ್‌ಗಾರ್ ಯೋಜನೆಯು ಕೇಂದ್ರ ಸರ್ಕಾರದ ಲಖ್‌ಪತಿ ದೀದಿ ಅಭಿಯಾನವನ್ನು ಮತ್ತಷ್ಟು ಬಲಪಡಿಸಿದೆ, ಕೇಂದ್ರ ಸರ್ಕಾರವು ದೇಶಾದ್ಯಂತ 3 ಕೋಟಿ ಲಕ್ಷಪತಿ ದೀದಿಗಳನ್ನು ರೂಪಿಸುವ ಗುರಿ ಹೊಂದಿದೆ, 2 ಕೋಟಿಗೂ ಹೆಚ್ಚು ಮಹಿಳೆಯರು ಈಗಾಗಲೇ ಈ ಮೈಲಿಗಲ್ಲು ಸಾಧಿಸಿದ್ದಾರೆ. ಅವರ ಕಠಿಣ ಪರಿಶ್ರಮವು ಹಳ್ಳಿಗಳನ್ನು ಪರಿವರ್ತಿಸಿದೆ ಮತ್ತು ಸಮಾಜವನ್ನು ಪುನರೂಪಿಸಿದೆ. ಬಿಹಾರದಲ್ಲೂ ಲಕ್ಷಾಂತರ ಮಹಿಳೆಯರು ಲಖ್‌ಪತಿ ದೀದಿಗಳಾಗಿದ್ದಾರೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಈ ಉಪಕ್ರಮವನ್ನು ಮುನ್ನಡೆಸುತ್ತಿರುವ ರೀತಿ ನೋಡಿದರೆ, ಬಿಹಾರವು ದೇಶದಲ್ಲಿ ಅತಿ ಹೆಚ್ಚು ಲಕ್ಷಪತಿ ದೀದಿಗಳನ್ನು ಹೊಂದುವ ದಿನ ದೂರವಿಲ್ಲ ಎಂದು ಹೇಳಿದರು.

 

ಕೇಂದ್ರ ಸರ್ಕಾರದ ಮುದ್ರಾ ಯೋಜನೆ, ಡ್ರೋನ್ ದೀದಿ ಅಭಿಯಾನ, ಬಿಮಾ ಸಖಿ ಅಭಿಯಾನ ಮತ್ತು ಬ್ಯಾಂಕ್ ದೀದಿ ಅಭಿಯಾನ ಮುಂತಾದ ಉಪಕ್ರಮಗಳು ಮಹಿಳೆಯರಿಗೆ ಉದ್ಯೋಗ ಮತ್ತು ಸ್ವ-ಉದ್ಯೋಗ ವಿಸ್ತರಿಸುವ ಮಾರ್ಗಗಳಾಗಿವೆ. ಈ ಪ್ರಯತ್ನಗಳ ಹಿಂದಿನ ಏಕೈಕ ಗುರಿ ಮಹಿಳೆಯರಿಗೆ ಗರಿಷ್ಠ ಅವಕಾಶಗಳನ್ನು ಒದಗಿಸುವ ಮೂಲಕ ಅವರ ಕನಸುಗಳನ್ನು ನನಸಾಗಿಸಲು ಸಹಾಯ ಮಾಡುವುದಾಗಿದೆ ಎಂದು ಅವರು ಹೇಳಿದರು.

ಕೇಂದ್ರ ಸರ್ಕಾರದ ಪ್ರಯತ್ನಗಳು ದೇಶಾದ್ಯಂತ ಮಹಿಳೆಯರು ಮತ್ತು ಹೆಣ್ಣು ಮಕ್ಕಳಿಗೆ ಹೊಸ ವಲಯಗಳನ್ನು ತೆರೆದಿವೆ. ಇಂದು ಹೆಚ್ಚಿನ ಸಂಖ್ಯೆಯ ಯುವತಿಯರು ಸಶಸ್ತ್ರ ಪಡೆಗಳು ಮತ್ತು ಪೊಲೀಸ್ ಸೇವೆಗೆ ಸೇರುತ್ತಿದ್ದಾರೆ, ಯುದ್ಧ ವಿಮಾನಗಳ ಹಾರಾಟ ನಡೆಸುತ್ತಿದ್ದಾರೆ. ಆದಾಗ್ಯೂ, ಬಿಹಾರವು ವಿರೋಧ ಪಕ್ಷದ ಆಳ್ವಿಕೆಯಲ್ಲಿದ್ದ ಆ ದಿನಗಳನ್ನು – ಲಾಟೀನು ಆಡಳಿತದ ಯುಗವನ್ನು - ಎಲ್ಲರೂ ಮರೆಯಬಾರದು. ಆ ಸಮಯದಲ್ಲಿ, ಬಿಹಾರದ ಮಹಿಳೆಯರು ಕಾನೂನುಬಾಹಿರ ಮತ್ತು ಭ್ರಷ್ಟಾಚಾರದ ಹೊರೆ ಹೊತ್ತುಕೊಂಡರು. ಬಿಹಾರದಲ್ಲಿ ಪ್ರಮುಖ ರಸ್ತೆಗಳು ಹೇಗೆ ಹಾಳಾಗಿದ್ದವು, ಸೇತುವೆಗಳು ಇರಲಿಲ್ಲ, ಕಳಪೆ ಮೂಲಸೌಕರ್ಯದಿಂದಾಗಿ ಮಹಿಳೆಯರು ಹೆಚ್ಚು ಬಳಲುತ್ತಿದ್ದರು. ಪ್ರವಾಹ ಸಮಯದಲ್ಲಿ ಕಷ್ಟಗಳು ಹೆಚ್ಚಾದವು. ಗರ್ಭಿಣಿಯರು ಸಮಯಕ್ಕೆ ಸರಿಯಾಗಿ ಆಸ್ಪತ್ರೆಗಳನ್ನು ತಲುಪಲು ಸಾಧ್ಯವಾಗಲಿಲ್ಲ, ನಿರ್ಣಾಯಕ ಸಂದರ್ಭಗಳಲ್ಲಿ ಸರಿಯಾದ ಚಿಕಿತ್ಸೆಗೆ ಅವಕಾಶವಿರಲಿಲ್ಲ. ಮಹಿಳೆಯರು ಈ ಕಠಿಣ ಪರಿಸ್ಥಿತಿಯಿಂದ ಹೊರಬರಲು ಸಹಾಯ ಮಾಡಿದ್ದು ತಮ್ಮ ಸರ್ಕಾರ. ಕೇಂದ್ರ ಮತ್ತು ರಾಜ್ಯದಲ್ಲಿ ತಮ್ಮ ಸರ್ಕಾರ ಬಂದ ನಂತರ, ಬಿಹಾರದಲ್ಲಿ ರಸ್ತೆ ನಿರ್ಮಾಣವು ವೇಗ ಪಡೆದುಕೊಂಡಿತು. ಬಿಹಾರದಲ್ಲಿ ಸಂಪರ್ಕ ಸುಧಾರಿಸುವ ಪ್ರಯತ್ನಗಳು ನಡೆಯುತ್ತಿವೆ, ಈ ಎಲ್ಲಾ ಬೆಳವಣಿಗೆಗಳು ರಾಜ್ಯದ ಮಹಿಳೆಯರ ಜೀವನವನ್ನು ಸುಲಭಗೊಳಿಸಿವೆ ಎಂದು ಅವರು ಹೇಳಿದರು.

ಬಿಹಾರದಲ್ಲಿ ಪ್ರಸ್ತುತ ನಡೆಯುತ್ತಿರುವ ಪ್ರದರ್ಶನದ ಬಗ್ಗೆ ತಮಗೆ ಮಾಹಿತಿ ಸಿಕ್ಕಿದೆ ಎಂದು ಹೇಳಿದ ಶ್ರೀ ಮೋದಿ, ಈ ಪ್ರದರ್ಶನವು ಹಳೆಯ ಪತ್ರಿಕೆಗಳ ಮುಖ್ಯಾಂಶಗಳನ್ನು ಪ್ರದರ್ಶಿಸುತ್ತದೆ, ಇದು ಬಿಹಾರದಲ್ಲಿ ವಿರೋಧ ಪಕ್ಷದ ಆಡಳಿತದ ಸಮಯದಲ್ಲಿ ಭಯದ ವಾತಾವರಣವನ್ನು ಸ್ಪಷ್ಟವಾಗಿ ನೆನಪಿಸುತ್ತದೆ. ಆ ಸಮಯದಲ್ಲಿ ಯಾವುದೇ ಮನೆ ಸುರಕ್ಷಿತವಾಗಿರಲಿಲ್ಲ, ನಕ್ಸಲರ ಹಿಂಸಾಚಾರ ಭಯೋತ್ಪಾದನೆಯನ್ನು ನಿಯಂತ್ರಿಸಲಾಗಿರಲಿಲ್ಲ. ಆ ವರ್ಷಗಳಲ್ಲಿ ಮಹಿಳೆಯರು ಅತ್ಯಂತ ದೊಡ್ಡ ನೋವು ಅನುಭವಿಸಿದರು. ಬಡವರಿಂದ ಹಿಡಿದು ವೈದ್ಯರು ಮತ್ತು ಐಎಎಸ್ ಅಧಿಕಾರಿಗಳ ಕುಟುಂಬಗಳವರೆಗೆ, ವಿರೋಧ ಪಕ್ಷದ ನಾಯಕರು ಮಾಡಿದ ದೌರ್ಜನ್ಯಗಳಿಂದ ಯಾರೂ ತಪ್ಪಿಸಿಕೊಳ್ಳಲಾಗಲಿಲ್ಲ.

 

ಶ್ರೀ ನಿತೀಶ್ ಕುಮಾರ್ ನೇತೃತ್ವದಲ್ಲಿ, ಬಿಹಾರದಲ್ಲಿ ಕಾನೂನನ್ನು ಪುನಃಸ್ಥಾಪಿಸಲಾಗಿದೆ, ಮಹಿಳೆಯರು ಈ ಬದಲಾವಣೆಯ ಪ್ರಾಥಮಿಕ ಫಲಾನುಭವಿಗಳಾಗಿದ್ದಾರೆ. ಬಿಹಾರದ ಹೆಣ್ಣು ಮಕ್ಕಳು ಈಗ ಭಯವಿಲ್ಲದೆ ತಮ್ಮ ಮನೆಗಳಿಂದ ಹೊರಬರುತ್ತಾರೆ, ತಡರಾತ್ರಿಯೂ ಕೆಲಸ ಮಾಡುವ ಸ್ವಾತಂತ್ರ್ಯ ಹೊಂದಿದ್ದಾರೆ. ಬಿಹಾರಕ್ಕೆ ಭೇಟಿ ನೀಡಿದಾಗ ಮಹಿಳಾ ಪೊಲೀಸ್ ಸಿಬ್ಬಂದಿಯ ದೊಡ್ಡ ನಿಯೋಜನೆಯನ್ನು ವೀಕ್ಷಿಸಿದ್ದಕ್ಕೆ ಪ್ರಧಾನಿ ತೃಪ್ತಿ ವ್ಯಕ್ತಪಡಿಸಿದರು. ಬಿಹಾರವು ಎಂದಿಗೂ ಹಿಂದಿನ ಕತ್ತಲೆಗೆ ಮರಳಬಾರದು ಎಂದು ಎಲ್ಲರೂ ಸಾಮೂಹಿಕವಾಗಿ ಪ್ರತಿಜ್ಞೆ ಮಾಡಬೇಕೆಂದು ಅವರು ಒತ್ತಾಯಿಸಿದರು.

ಮಹಿಳೆಯರನ್ನು ಗಮನದಲ್ಲಿ ಇಟ್ಟುಕೊಂಡು ಸರ್ಕಾರ ನೀತಿಗಳನ್ನು ರೂಪಿಸಿದಾಗ, ಅದರ ಪ್ರಯೋಜನಗಳು ಸಮಾಜದ ಇತರೆ ವರ್ಗಗಳಿಗೂ ವಿಸ್ತರಿಸುತ್ತವೆ. ಉಜ್ವಲ ಯೋಜನೆಯು ಅಂತಹ ಪರಿವರ್ತನಾತ್ಮಕ ಬದಲಾವಣೆಯ ಪ್ರಬಲ ಉದಾಹರಣೆಯಾಗಿದೆ, ಇದನ್ನು ಈಗ ಜಾಗತಿಕವಾಗಿ ಗುರುತಿಸಲಾಗಿದೆ. ಗ್ರಾಮೀಣ ಪ್ರದೇಶಗಳಲ್ಲಿ ಅನಿಲ ಸಂಪರ್ಕ ಹೊಂದುವುದು ದೂರದ ಕನಸೆಂದು ಪರಿಗಣಿಸಲಾಗಿದ್ದ ಕಾಲವಿತ್ತು. ಬಡ ತಾಯಂದಿರು, ಸಹೋದರಿಯರು ಮತ್ತು ಹೆಣ್ಣು ಮಕ್ಕಳು ಹೊಗೆ ತುಂಬಿದ ಅಡುಗೆ ಮನೆಗಳಲ್ಲಿ ಕೆಮ್ಮುತ್ತಾ ತಮ್ಮ ಜೀವನವನ್ನು ಹೇಗೆ ಕಳೆದರು, ಶ್ವಾಸಕೋಶದ ಕಾಯಿಲೆಗಳು ಸಾಮಾನ್ಯವಾಗುತ್ತಿದ್ದವು, ದೃಷ್ಟಿಯೇ ಹೋಗುತ್ತಿತ್ತು. ಬಿಹಾರದಲ್ಲಿ, ಉರುವಲು ಸಂಗ್ರಹಿಸುವ ಹೊರೆಯಿಂದ ಮಹಿಳೆಯರ ಜೀವನವು ಸವೆಯುತ್ತಿತ್ತು. ಮಳೆಯ ಸಮಯದಲ್ಲಿ, ಒದ್ದೆಯಾದ ಕಟ್ಟಿಗೆ ಸುಡುವುದಿಲ್ಲ; ಪ್ರವಾಹ ಸಮಯದಲ್ಲಿ, ಉರುವಲು ನೆನೆಯುತ್ತದೆ. ಅನೇಕ ಬಾರಿ, ಮನೆಯಲ್ಲಿರುವ ಮಕ್ಕಳು ಹಸಿವಿನಿಂದ ಮಲಗಬೇಕಾಗಿತ್ತು ಅಥವಾ ರಾತ್ರಿಯಿಡೀ ಹಳಸಿದ ಅನ್ನ ತಿಂದು ಬದುಕಬೇಕಾಗಿತ್ತು.

ಈ ನೋವು ಯಾವುದೇ ಪುಸ್ತಕದಲ್ಲಿ ಬರೆದಿಲ್ಲ, ಆದರೆ ಇದನ್ನು ಬಿಹಾರದ ಮಹಿಳೆಯರು ಅನುಭವಿಸಿ ಬದುಕಿದ್ದಾರೆ. ತಮ್ಮ ಸರ್ಕಾರವು ಮಹಿಳೆಯರನ್ನು ಗಮನದಲ್ಲಿಟ್ಟುಕೊಂಡು ನೀತಿಗಳನ್ನು ರೂಪಿಸಲು ಪ್ರಾರಂಭಿಸಿದಾಗ, ಚಿತ್ರಣ ಬದಲಾಗಲು ಪ್ರಾರಂಭಿಸಿತು.  ಕೋಟ್ಯಂತರ ಮನೆಗಳಿಗೆ ಏಕಕಾಲದಲ್ಲಿ ಅನಿಲ ಸಂಪರ್ಕಗಳನ್ನು ತಲುಪಿಸಲಾಯಿತು. ಇಂದು ಕೋಟ್ಯಂತರ ಮಹಿಳೆಯರು ಅನಿಲ ಒಲೆಗಳ ಮೇಲೆ ಶಾಂತಿಯುತವಾಗಿ ಅಡುಗೆ ಮಾಡುತ್ತಿದ್ದಾರೆ, ಹೊಗೆಯಿಂದ ಮುಕ್ತರಾಗಿದ್ದಾರೆ, ಉಸಿರಾಟ ಮತ್ತು ಕಣ್ಣಿನ ಕಾಯಿಲೆಗಳಿಂದ ಮುಕ್ತರಾಗಿದ್ದಾರೆ. ಮನೆಯಲ್ಲಿರುವ ಮಕ್ಕಳು ಈಗ ಪ್ರತಿದಿನ ಬಿಸಿ ಊಟ ಪಡೆಯುತ್ತಿದ್ದಾರೆ. ಉಜ್ವಲ ಅನಿಲ ಸಂಪರ್ಕಗಳು ಬಿಹಾರದಲ್ಲಿ ಅಡುಗೆ ಮನೆಗಳನ್ನು ಬೆಳಗಿಸುವುದಲ್ಲದೆ, ಮಹಿಳೆಯರ ಜೀವನವನ್ನು ಸಹ ಪರಿವರ್ತಿಸಿವೆ ಎಂದು ಪ್ರಧಾನಿ ಹೇಳಿದರು.

 

ನಾಗರಿಕರು ಎದುರಿಸುತ್ತಿರುವ ಪ್ರತಿಯೊಂದು ಕಷ್ಟವನ್ನು ಪರಿಹರಿಸುವುದು ಸರ್ಕಾರದ ಜವಾಬ್ದಾರಿ ಎಂದು ದೃಢಪಡಿಸಿದ ಶ್ರೀ ಮೋದಿ, ಕೋವಿಡ್-19 ಸಾಂಕ್ರಾಮಿಕ ರೋಗದ ಸವಾಲಿನ ಸಮಯದಲ್ಲಿ ಸರ್ಕಾರವು ಉಚಿತ ಆಹಾರ ಧಾನ್ಯ ಯೋಜನೆ ಪ್ರಾರಂಭಿಸಿತು. ಅದು ಒದಗಿಸಿದ ಅಪಾರ ಪರಿಹಾರವನ್ನು ಪರಿಗಣಿಸಿ, ಈ ಉಪಕ್ರಮವನ್ನು ಮುಂದುವರಿಸಲು ನಿರ್ಧರಿಸಲಾಯಿತು. ಇಂದು, ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆಯಡಿ, ಬಿಹಾರದಲ್ಲಿ 8.5 ಕೋಟಿಗೂ ಹೆಚ್ಚು ಸಂಕಷ್ಟದಲ್ಲಿರುವ ಕುಟುಂಬಗಳು ಉಚಿತ ಪಡಿತರ ಪಡೆಯುತ್ತಿದ್ದಾರೆ. ಈ ಯೋಜನೆಯು ಸಾರ್ವಜನಿಕ ಕಳವಳಗಳನ್ನು ಎಷ್ಟು ಕಡಿಮೆ ಮಾಡಿವೆ. ಇನ್ನೊಂದು ಉದಾಹರಣೆ ಉಲ್ಲೇಖಿಸಿದ ಪ್ರಧಾನಿ, ಬಿಹಾರದ ಒಂದು ದೊಡ್ಡ ಪ್ರದೇಶವು ಉಸ್ನಾ ಅಕ್ಕಿಗೆ ಆದ್ಯತೆ ನೀಡುತ್ತದೆ. ಹಿಂದೆ, ತಾಯಂದಿರು ಮತ್ತು ಸಹೋದರಿಯರಿಗೆ ಸರ್ಕಾರಿ ಪಡಿತರ ಮೂಲಕ ಅರ್ವಾ ಅಕ್ಕಿ ನೀಡಲಾಗುತ್ತಿತ್ತು,  ಮಾರುಕಟ್ಟೆಯಲ್ಲಿ ಉಸ್ನಾ ಅಕ್ಕಿಗೆ ವಿನಿಮಯ ಮಾಡಿಕೊಳ್ಳಬೇಕಾಗಿತ್ತು - ಆಗಾಗ್ಗೆ 20 ಕೆಜಿ ಅರ್ವಾ ಅಕ್ಕಿಗೆ ಪ್ರತಿಯಾಗಿ ಕೇವಲ 10 ಕೆಜಿ ಉಸ್ನಾ ಅಕ್ಕಿನ್ನು ಪಡೆಯಲಾಗುತ್ತಿತ್ತು. ಸರ್ಕಾರ ಈ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿದೆ, ಈಗ ಪಡಿತರ ವ್ಯವಸ್ಥೆಯ ಮೂಲಕ ನೇರವಾಗಿ ಉಸ್ನಾ ಅಕ್ಕಿ ನೀಡಲು ಪ್ರಾರಂಭಿಸಿದೆ ಎಂದು ಪ್ರಧಾನಿ ಹೇಳಿದರು.

ಸಾಂಪ್ರದಾಯಿಕವಾಗಿ, ಭಾರತದಲ್ಲಿ ಆಸ್ತಿ - ಅದು ಮನೆ, ಅಂಗಡಿ ಅಥವಾ ಭೂಮಿಯಾಗಿರಬಹುದು - ಪುರುಷರ ಹೆಸರಿನಲ್ಲಿ ನೋಂದಾಯಿಸಲಾಗುತ್ತಿತ್ತು. ಆದರೆ ಪ್ರಧಾನ ಮಂತ್ರಿ ಆವಾಸ್ ಯೋಜನೆ ಪ್ರಾರಂಭಿಸುವುದರೊಂದಿಗೆ, ತಾಯಂದಿರು, ಸಹೋದರಿಯರು ಮತ್ತು ಹೆಣ್ಣು ಮಕ್ಕಳನ್ನು ಸಹ ಈ ಮನೆಗಳ ಮಾಲೀಕರಾಗಿ ಹೆಸರಿಸುವುದನ್ನು ಖಚಿತಪಡಿಸಿಕೊಳ್ಳಲು ಹೊಸ ನಿಬಂಧನೆ ಪರಿಚಯಿಸಲಾಗಿದೆ.  ಬಿಹಾರದಲ್ಲಿ 50 ಲಕ್ಷಕ್ಕೂ ಹೆಚ್ಚು ಪ್ರಧಾನ ಮಂತ್ರಿ ಆವಾಸ್ ಮನೆಗಳನ್ನು ನಿರ್ಮಿಸಲಾಗಿದೆ, ಅವುಗಳಲ್ಲಿ ಹೆಚ್ಚಿನವುಗಳಲ್ಲಿ ಮಹಿಳೆಯರನ್ನು ಸಹ-ಮಾಲೀಕರನ್ನಾಗಿ ಪಟ್ಟಿ ಮಾಡಲಾಗಿದೆ. ಮಹಿಳೆಯರು ಈಗ ತಮ್ಮ ಮನೆಗಳ ನಿಜವಾದ ಮಾಲೀಕರಾಗಿದ್ದಾರೆ ಎಂದು ಅವರು ದೃಢಪಡಿಸಿದರು.

ಮಹಿಳೆಯ ಆರೋಗ್ಯ ಹದಗೆಟ್ಟಾಗ, ಇಡೀ ಕುಟುಂಬದ ಮೇಲೆ ಪರಿಣಾಮ ಬೀರುತ್ತದೆ, ಮಹಿಳೆಯರು ಮೌನವಾಗಿ ಅನಾರೋಗ್ಯ ಸಹಿಸಿಕೊಂಡು, ಮನೆಯ ಹಣವನ್ನು ತಮ್ಮ ಚಿಕಿತ್ಸೆಗೆ ಖರ್ಚು ಮಾಡಲು ಇಚ್ಛಿಸದೆ ಇದ್ದ ಕಾಲವಿತ್ತು. ಆಯುಷ್ಮಾನ್ ಭಾರತ್ ಯೋಜನೆಯು ಈ ಕಾಳಜಿಯನ್ನು ಪರಿಹರಿಸಿದೆ, ಬಿಹಾರದ ಲಕ್ಷಾಂತರ ಮಹಿಳೆಯರಿಗೆ 5 ಲಕ್ಷ ರೂ.ವರೆಗೆ ಉಚಿತ ವೈದ್ಯಕೀಯ ಚಿಕಿತ್ಸೆ ಒದಗಿಸಲಾಗುತ್ತಿದೆ. ಪ್ರಧಾನ ಮಂತ್ರಿ ಮಾತೃ ವಂದನಾ ಯೋಜನೆಯಡಿ, ಗರ್ಭಿಣಿಯರ ಬ್ಯಾಂಕ್ ಖಾತೆಗಳಿಗೆ ನೇರವಾಗಿ ಆರ್ಥಿಕ ಸಹಾಯ ವರ್ಗಾಯಿಸಲಾಗುತ್ತಿದೆ ಎಂದರು.

 

ನಾಗರಿಕರ, ವಿಶೇಷವಾಗಿ ಮಹಿಳೆಯರ ಆರೋಗ್ಯವು ಸರ್ಕಾರಕ್ಕೆ ಅತ್ಯಂತ ಪ್ರಮುಖ ಆದ್ಯತೆಯಾಗಿದೆ. ವಿಶ್ವಕರ್ಮ ಜಯಂತಿಯಂದು ಸೆಪ್ಟೆಂಬರ್ 17, 2025ರಂದು ಪ್ರಾರಂಭವಾದ ಪ್ರಮುಖ ಉಪಕ್ರಮ - ಸ್ವಸ್ಥ ನಾರಿ, ಸಶಕ್ತ ಪರಿವಾರ್ ಅಭಿಯಾನ ಪ್ರಾರಂಭಿಸಲಾಗಿದೆ ಎಂದು ಘೋಷಿಸಿದರು. ಈ ಅಭಿಯಾನದಡಿ, ಹಳ್ಳಿಗಳು ಮತ್ತು ಪಟ್ಟಣಗಳಲ್ಲಿ 4.25 ಲಕ್ಷಕ್ಕೂ ಹೆಚ್ಚು ಆರೋಗ್ಯ ಶಿಬಿರಗಳನ್ನು ಆಯೋಜಿಸಲಾಗುತ್ತಿದೆ. ಈ ಶಿಬಿರಗಳು ರಕ್ತಹೀನತೆ, ರಕ್ತದೊತ್ತಡ, ಮಧುಮೇಹ ಮತ್ತು ಕ್ಯಾನ್ಸರ್‌ನಂತಹ ಗಂಭೀರ ಕಾಯಿಲೆಗಳಿಗೆ ತಪಾಸಣೆ ನಡೆಸುತ್ತಿವೆ. ಈ ಉಪಕ್ರಮದ ಮೂಲಕ ಈಗಾಗಲೇ ಒಂದು ಕೋಟಿಗೂ ಹೆಚ್ಚು ಮಹಿಳೆಯರು ಉಚಿತ ಆರೋಗ್ಯ ತಪಾಸಣೆಗಳನ್ನು ಪಡೆದಿದ್ದಾರೆ. ಬಿಹಾರದ ಎಲ್ಲಾ ಮಹಿಳೆಯರು ಈ ಶಿಬಿರಗಳಲ್ಲಿ ಭಾಗವಹಿಸಿ ತಮ್ಮನ್ನು ತಾವು ಪರೀಕ್ಷಿಸಿಕೊಳ್ಳುವಂತೆ ಅವರು ಮನವಿ ಮಾಡಿದರು.

ಹಬ್ಬದ ಋತು ಆರಂಭವಾಗಿದೆ. ನವರಾತ್ರಿ ನಡೆಯುತ್ತಿದೆ, ದೀಪಾವಳಿ ಸಮೀಪಿಸುತ್ತಿದೆ ಮತ್ತು ಛಠ್ ಪೂಜೆ ಸಮೀಪಿಸುತ್ತಿದೆ. ಈ ಸಮಯದಲ್ಲಿ ಮಹಿಳೆಯರು ಮನೆಯ ವೆಚ್ಚವನ್ನು ಹೇಗೆ ನಿರ್ವಹಿಸುವುದು ಮತ್ತು ಉಳಿಸುವುದು ಎಂಬುದರ ಕುರಿತು ನಿರಂತರವಾಗಿ ಯೋಚಿಸುತ್ತಾರೆ. ಈ ಕಳವಳ ಕಡಿಮೆ ಮಾಡಲು, ನಮ್ಮ ಸರ್ಕಾರವು ಸೆಪ್ಟೆಂಬರ್ 22 2025 ರಿಂದ ದೇಶಾದ್ಯಂತ ಜಿಎಸ್ಟಿ ದರಗಳನ್ನು ಕಡಿಮೆ ಮಾಡುವ ಮೂಲಕ ಪ್ರಮುಖ ಹೆಜ್ಜೆ ಇಟ್ಟಿದೆ. ಇದರ ಪರಿಣಾಮವಾಗಿ, ಟೂತ್‌ಪೇಸ್ಟ್, ಸೋಪ್, ಶಾಂಪೂ, ತುಪ್ಪ ಮತ್ತು ಆಹಾರ ಪದಾರ್ಥಗಳಂತಹ ದೈನಂದಿನ ಅಗತ್ಯ ವಸ್ತುಗಳು ಈಗ ಕಡಿಮೆ ಬೆಲೆಗೆ ಸಿಗುತ್ತಿವೆ.  ಮಕ್ಕಳ ಶಿಕ್ಷಣಕ್ಕಾಗಿ ಲೇಖನ ಸಾಮಗ್ರಿಗಳು, ಹಾಗೆಯೇ ಹಬ್ಬದ ಸಂದರ್ಭಗಳಲ್ಲಿ ಬಟ್ಟೆ ಮತ್ತು ಪಾದರಕ್ಷೆಗಳ ಬೆಲೆಯೂ ಕಡಿಮೆಯಾಗಿದೆ. ಈ ಕ್ರಮವು ಮನೆ ಮತ್ತು ಅಡುಗೆಮನೆ ಬಜೆಟ್‌ಗಳನ್ನು ನಿರ್ವಹಿಸುವ ಮಹಿಳೆಯರಿಗೆ ಗಮನಾರ್ಹ ಪರಿಹಾರ ನೀಡುತ್ತದೆ.  ಹಬ್ಬಗಳ ಸಮಯದಲ್ಲಿ ಮಹಿಳೆಯರ ಮೇಲಿನ ಹೊರೆ ಕಡಿಮೆ ಮಾಡುವುದು ಮತ್ತು ಅವರ ಮುಖದಲ್ಲಿ ಸಂತೋಷ ತರುವುದು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಗಂಭೀರವಾಗಿ ಪರಿಗಣಿಸುವ ಜವಾಬ್ದಾರಿಯಾಗಿದೆ ಎಂದು ಅವರು ದೃಢಪಡಿಸಿದರು.

ಬಿಹಾರದಲ್ಲಿ ಮಹಿಳೆಯರಿಗೆ ಅವಕಾಶಗಳನ್ನು ನೀಡಿದಾಗಲೆಲ್ಲಾ, ಅವರು ತಮ್ಮ ಧೈರ್ಯ ಮತ್ತು ದೃಢಸಂಕಲ್ಪದ ಮೂಲಕ ಪರಿವರ್ತನಾತ್ಮಕ ಬದಲಾವಣೆ ತಂದಿದ್ದಾರೆ. ಮಹಿಳೆಯರ ಪ್ರಗತಿಯು ಇಡೀ ಸಮಾಜದ ಪ್ರಗತಿಗೆ ಕಾರಣವಾಗುತ್ತದೆ. ಮುಖ್ಯಮಂತ್ರಿ ಮಹಿಳಾ ರೋಜ್‌ಗಾರ್ ಯೋಜನೆ ಪ್ರಾರಂಭಿಸಿದ್ದಕ್ಕಾಗಿ ಬಿಹಾರದ ಜನರಿಗೆ ಮತ್ತೊಮ್ಮೆ ಅಭಿನಂದನೆಗಳನ್ನು ಸಲ್ಲಿಸುವ ಮೂಲಕ ಪ್ರಧಾನಿ ಅವರು ತಮ್ಮ ಭಾಷಣ ಮುಕ್ತಾಯಗೊಳಿಸಿದರು.

 

ಬಿಹಾರದ ಮುಖ್ಯಮಂತ್ರಿ ಶ್ರೀ ನಿತೀಶ್ ಕುಮಾರ್, ಕೇಂದ್ರ ಸಚಿವ ಶ್ರೀ ರಾಜೀವ್ ರಂಜನ್ ಸಿಂಗ್ ಮತ್ತು ಇತರೆ ಗಣ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಹಿನ್ನೆಲೆ

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಬಿಹಾರದ ಮುಖ್ಯಮಂತ್ರಿ ಮಹಿಳಾ ರೋಜ್‌ಗಾರ್ ಯೋಜನೆಯನ್ನು ವೀಡಿಯೊ ಕಾನ್ಫರೆನ್ಸ್ ಮೂಲಕ ಉದ್ಘಾಟಿಸಿದರು. ಈ ಕಾರ್ಯಕ್ರಮದ ಸಂದರ್ಭದಲ್ಲಿ, ಪ್ರಧಾನಮಂತ್ರಿ ಅವರು ಬಿಹಾರದಾದ್ಯಂತ 75 ಲಕ್ಷ ಮಹಿಳೆಯರ ಬ್ಯಾಂಕ್ ಖಾತೆಗಳಿಗೆ ತಲಾ 10,000 ರೂ.ನಂತೆ ಒಟ್ಟು 7,500 ಕೋಟಿ ರೂ. ನೇರವಾಗಿ ವರ್ಗಾಯಿಸಿದರು,

ಬಿಹಾರ ಸರ್ಕಾರದ ಉಪಕ್ರಮವಾದ ಈ ಯೋಜನೆಯು ಮಹಿಳೆಯರನ್ನು ಆತ್ಮನಿರ್ಭರವನ್ನಾಗಿ ಮಾಡುವುದು, ಸ್ವ-ಉದ್ಯೋಗ ಮತ್ತು ಜೀವನೋಪಾಯ ಅವಕಾಶಗಳ ಮೂಲಕ ಮಹಿಳಾ ಸಬಲೀಕರಣ ಉತ್ತೇಜಿಸುವ ಗುರಿ ಹೊಂದಿದೆ. ಇದು ರಾಜ್ಯದ ಪ್ರತಿ ಕುಟುಂಬದಿಂದ ಒಬ್ಬ ಮಹಿಳೆಗೆ ಆರ್ಥಿಕ ನೆರವು ನೀಡುತ್ತದೆ, ಅವರು ತಮ್ಮ ಆಯ್ಕೆಯ ಉದ್ಯೋಗ ಅಥವಾ ಜೀವನೋಪಾಯ ಚಟುವಟಿಕೆಗಳನ್ನು ಪ್ರಾರಂಭಿಸಲು ಅನುವು ಮಾಡಿಕೊಡುತ್ತದೆ, ಇದರಿಂದಾಗಿ ಆರ್ಥಿಕ ಸ್ವಾತಂತ್ರ್ಯ ಮತ್ತು ಸಾಮಾಜಿಕ ಸಬಲೀಕರಣವನ್ನು ಉತ್ತೇಜಿಸುತ್ತದೆ.

ಈ ಯೋಜನೆಯಡಿ, ಪ್ರತಿಯೊಬ್ಬ ಫಲಾನುಭವಿಯು ನೇರ ನಗದು ವರ್ಗಾವಣೆಯ ಮೂಲಕ 10,000 ರೂ. ಆರಂಭಿಕ ಅನುದಾನ ಪಡೆಯುತ್ತಾರೆ, ನಂತರದ ಹಂತಗಳಲ್ಲಿ 2 ಲಕ್ಷ ರೂ.ವರೆಗೆ ಹೆಚ್ಚುವರಿ ಆರ್ಥಿಕ ಬೆಂಬಲದ ಸಾಧ್ಯತೆಯಿದೆ. ಕೃಷಿ, ಪಶುಸಂಗೋಪನೆ, ಕರಕುಶಲ ವಸ್ತುಗಳು, ಟೈಲರಿಂಗ್, ನೇಯ್ಗೆ ಮತ್ತು ಇತರ ಸಣ್ಣ ಪ್ರಮಾಣದ ಉದ್ಯಮಗಳು ಸೇರಿದಂತೆ ಫಲಾನುಭವಿಯ ಆಯ್ಕೆಯ ಕ್ಷೇತ್ರಗಳಲ್ಲಿ ಈ ಸಹಾಯವನ್ನು ಬಳಸಿಕೊಳ್ಳಬಹುದು.

ಈ ಯೋಜನೆಯು ಸಮುದಾಯ ಚಾಲಿತವಾಗಿದ್ದು, ಆರ್ಥಿಕ ನೆರವಿನ ಜತೆಗೆ, ಸ್ವಸಹಾಯ ಗುಂಪುಗಳಿಗೆ ಸಂಪರ್ಕ ಹೊಂದಿದ ಸಮುದಾಯ ಸಂಪನ್ಮೂಲ ವ್ಯಕ್ತಿಗಳ ಪ್ರಯತ್ನಗಳಿಗೆ ಬೆಂಬಲ ನೀಡಲು ತರಬೇತಿ ನೀಡುತ್ತಾರೆ. ತಮ್ಮ ಉತ್ಪನ್ನಗಳ ಮಾರಾಟ ಬೆಂಬಲಿಸಲು, ರಾಜ್ಯದಲ್ಲಿ ಗ್ರಾಮೀಣ ಹಾತ್-ಬಜಾರ್‌ಗಳನ್ನು ಮತ್ತಷ್ಟು ಅಭಿವೃದ್ಧಿಪಡಿಸಲಾಗುತ್ತದೆ.

ಮುಖ್ಯಮಂತ್ರಿ ಮಹಿಳಾ ರೋಜ್‌ಗಾರ್ ಯೋಜನೆಯ ಉದ್ಘಾಟನೆಯು ರಾಜ್ಯದ ಬಹು ಆಡಳಿತ ಹಂತಗಳಲ್ಲಿ - ಜಿಲ್ಲೆ, ಬ್ಲಾಕ್, ಕ್ಲಸ್ಟರ್ ಮತ್ತು ಗ್ರಾಮ ಮಟ್ಟದಲ್ಲಿ ರಾಜ್ಯಾದ್ಯಂತ ಕಾರ್ಯಕ್ರಮ ಒಳಗೊಂಡಿರುತ್ತದೆ, 1 ಕೋಟಿಗೂ ಹೆಚ್ಚು ಮಹಿಳೆಯರು ಕಾರ್ಯಕ್ರಮಕ್ಕೆ ಸಾಕ್ಷಿಯಾಗುತ್ತಾರೆ.

 

ಭಾಷಣದ ಪೂರ್ಣ ಪಠ್ಯವನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
38 Per Cent Women In Rural And Semi-Urban Use UPI Weekly For Daily Essentials: Survey

Media Coverage

38 Per Cent Women In Rural And Semi-Urban Use UPI Weekly For Daily Essentials: Survey
NM on the go

Nm on the go

Always be the first to hear from the PM. Get the App Now!
...
The government places great emphasis on bringing a 'technology culture' to agriculture: PM Modi
March 06, 2026
This year’s Union Budget gives a strong push to agriculture and rural transformation : PM
Government has continuously strengthened the agriculture sector ,major efforts have reduced the risks for farmers and provided them with basic economic security: PM
If we scale high-value agriculture together, it will transform agriculture into a globally competitive sector: PM
As export-oriented production increases, employment will be created in rural areas through processing and value addition: PM
Fisheries can become a major platform for export growth, a high-value, high-impact sector of rural prosperity: PM
The government is developing digital public infrastructure for agriculture through AgriStack: PM
Technology delivers results when systems adopt it, institutions integrate it, and entrepreneurs build innovations on it: PM

नमस्कार !

बजट वेबिनार सीरीज के तीसरे वेबिनार में, मैं आप सभी का अभिनंदन करता हूं। इससे पहले, टेक्नोलॉजी, रिफॉर्म्स और इकोनॉमिक ग्रोथ जैसे अहम विषयों पर दो वेबिनार हो चुके हैं। आज, Rural Economy और Agriculture जैसे अहम सेक्टर पर चर्चा हो रही है। आप सभी ने बजट निर्माण में अपने मूल्यवान सुझावों से बहुत सहयोग दिया, और आपने देखा होगा बजट में आप सबके सुझाव रिफ्लेक्ट हो रहे हैं, बहुत काम आए हैं। लेकिन अब बजट आ चुका है, अब बजट के बाद उसके full potential का लाभ देश को मिले, इस दिशा में भी आपका अनुभव, आपके सुझाव और सरल तरीके से बजट का सर्वाधिक लोगों को लाभ हो। बजट का पाई-पाई पैसा जिस हेतु से दिया गया है, उसको परिपूर्ण कैसे करें? जल्द से जल्द कैसे करें? आपके सुझाव ये वेबिनार के लिए बहुत अहम है।

साथियों,

आप सभी जानते हैं, कृषि, एग्रीकल्चर, विश्वकर्मा, ये सब हमारी अर्थव्यवस्था का मुख्य आधार है। एग्रीकल्चर, भारत की लॉन्ग टर्म डेवलपमेंट जर्नी का Strategic Pillar भी है, और इसी सोच के साथ हमारी सरकार ने कृषि सेक्टर को लगातार मजबूत किया है। करीब 10 करोड़ किसानों को 4 लाख करोड़ रुपए से अधिक की पीएम किसान सम्मान निधि मिली है। MSP में हुए Reforms से अब किसानों को डेढ़ गुना तक रिटर्न मिल रहा है। इंस्टिट्यूशनल क्रेडिट कवरेज 75 प्रतिशत से अधिक हो चुका है। पीएम फसल बीमा योजना के तहत लगभग 2 लाख करोड़ रुपए के क्लेम सेटल किए गए हैं। ऐसे अनेक प्रयासों से किसानों का रिस्क बहुत कम हुआ है, और उन्हें एक बेसिक इकोनॉमिक सिक्योरिटी मिली है। इससे कृषि क्षेत्र का आत्मविश्वास भी बढ़ा है। आज खाद्यान्न और दालों से लेकर तिलहन तक देश रिकॉर्ड उत्पादन कर रहा है। लेकिन अब, जब 21वीं सदी का दूसरा क्वार्टर शुरू हो चुका है, 25 साल बीत चुके हैं, तब कृषि क्षेत्र को नई ऊर्जा से भरना भी उतना ही आवश्यक है। इस साल के बजट में इस दिशा में नए प्रयास हुए हैं। मुझे विश्वास है, इस वेबिनार में आप सभी के बीच हुई चर्चा, इससे निकले सुझाव, बजट प्रावधानों को जल्द से जल्द जमीन पर उतारने में मदद करेंगे।

साथियों,

आज दुनिया के बाजार खुल रहे हैं, ग्लोबल डिमांड बदल रही है। इस वेबिनार में अपनी खेती को एक्सपोर्ट ओरिएंटेड बनाने पर भी ज्यादा से ज्यादा चर्चा आवश्य़क है। हमारे पास Diverse Climate है, हमें इसका पूरा फायदा उठाना है। एग्रो क्लाइमेटिक जोन, उस विषय में हम बहुत समृद्ध है। इस साल का बजट इन सब बातों के लिए अनगिनत नए अवसर देने वाला बजट है। प्रोडक्टिविटी बढ़ाने की दिशा तय करता है, और एक्सपोर्ट स्ट्रेंथ को बढ़ावा देता है। बजट में हमने high value agriculture पर फोकस किया है। नारियल, काजू, कोको, चंदन, ऐसे उत्पादों के regional-specific promotion की बात कही है, और आपको मालूम है, दक्षिण के हमारे जो राज्य हैं खासकर केरल है, तमिलनाडु है, नारियल की पैदावार बहुत करते हैं। लेकिन अब वो क्रॉप, वो सारे पेड़ इतने पुराने हो चुके हैं कि उसकी वो क्षमता नहीं रही है। केरल के किसानों को अतिरिक्त लाभ हो, तमिलनाडु के किसानों को अतिरिक्त लाभ हो। इसलिए इस बार कोकोनट पर एक विशेष बल दिया गया है, जिसका फायदा आने वाले दिनों में हमारे इन किसानों को मिलेगा।

साथियों,

नॉर्थ ईस्ट की तरफ देखें, अगरवुड बहुत कम लोगों को मालूम है, जो ये अगरबत्ती शब्द है ना, वो अगरवुड से आया हुआ है। अब हिमालयन राज्यों में टेम्परेट नट क्रॉप्स, और इन्हें बढ़ावा देने का प्रस्ताव बजट में रखा गया है। जब एक्सपोर्ट ओरिएंटेड प्रोडक्शन बढ़ेगा, तो ग्रामीण क्षेत्रों में प्रोसेसिंग और वैल्यू एडिशन के जरिए रोजगार सृजन होगा। इस दिशा में एक coordinated action कैसे हो, आप सभी स्टेकहोल्डर्स मिलकर जरूर मंथन करें। अगर हम मिलकर High Value Agriculture को स्केल करते हैं, तो ये एग्रीकल्चर को ग्लोबली कंपेटिटिव सेक्टर में बदल सकता है। एग्री experts, इंडस्ट्री और किसान एक साथ कैसे आएं, किसानों को ग्लोबल मार्केट से जोड़ने के लिए किस तरह से गोल्स सेट किए जाएं, क्वालिटी, ब्रांडिंग और स्टैंडर्ड्स, ऐसे हर पहलू, इन सबको कैसे प्रमोट किया जाए, इन सारे विषयों पर चर्चा, इस वेबिनार को, इसके महत्व को बढ़ाएंगे। मैं एक और बात आपसे कहना चाहूंगा। आज दुनिया हेल्थ के संबंध में ज्यादा कॉनशियस है। होलिस्टिक हेल्थ केयर और उसमें ऑर्गेनिक डाइट, ऑर्गेनिक फूड, इस पर बहुत रुचि है। भारत में हमें केमिकल फ्री खेती पर बल देना ही होगा, हमें नेचुरल फार्मिंग पर बल देना होगा। नेचुरल फार्मिंग से, केमिकल फ्री प्रोडक्ट से दुनिया के बाजार तक पहुंचने में हमारे लिए एक राजमार्ग बन जाता है। उसके लिए सर्टिफिकेशन, लेबोरेटरी ये सारी व्यवस्थाएं सरकार सोच रही है। लेकिन आप लोग इसमें भी जरूर अपने विचार रखिए।

साथियों,

एक्सपोर्ट बढ़ाने में एक बहुत बड़ा फैक्टर फिशरीज सेक्टर का पोटेंशियल भी है। भारत दुनिया का दूसरा सबसे बड़ा मछली उत्पादक देश भी है। आज हमारे अलग-अलग तरह के जलाशय, तालाब, ये सब मिलाकर लगभग 4 लाख टन मछली उत्पादन होता है। जबकि इसमें 20 लाख टन अतिरिक्त उत्पादन की संभावना मौजूद है। अब विचार कीजिए आप, 4 लाख टन से हम अतिरिक्त 20 लाख टन जोड़ दें, तो हमारे गरीब मछुआरे भाई-बहन हैं, उनकी जिंदगी कैसी बदल जाएगी। हमारे पास Rural Income को डायवर्सिफाई करने का अवसर है। फिशरीज एक्सपोर्ट ग्रोथ का बड़ा प्लेटफॉर्म बन सकता है, दुनिया में इसकी मांग है। इस वेबिनार से अगर बहुत ही प्रैक्टिकल सुझाव निकलते हैं, तो कैसे रिज़रवॉयर, उसकी पोटेंशियल की सटीक मैपिंग की जाए, कैसे क्लस्टर प्लानिंग की जाए, कैसे फिशरीज डिपार्टमेंट और लोकल कम्युनिटी के बीच मजबूत कोऑर्डिनेशन हो, तो बहुत ही उत्तम होगा। हैचरी, फीड, प्रोसेसिंग, ब्रांडिंग, एक्सपोर्ट, उसके लिए आवश्यक लॉजिस्टिक्स, हर स्तर पर हमें नए बिजनेस मॉडल विकसित करने ही होंगे। ये Rural Prosperity, ग्रामीण समृद्धि के लिए, वहां की हाई वैल्यू, हाई इम्पैक्ट सेक्टर के रूप में परिवर्तित करने का एक अवसर है हमारे लिए, और इस दिशा में भी हम सबको मिलकर काम करना है, और आप आज जो मंथन करेंगे, उसके लिए, उस कार्य के लिए रास्ता बनेगा।

साथियों,

पशुपालन सेक्टर, ग्रामीण इकोनॉमी का हाई ग्रोथ पिलर है। भारत आज दुनिया का सबसे बड़ा मिल्क प्रोड्यूसर है, Egg प्रोडक्शन में हम दूसरे स्थान पर है। हमें इसे और आगे ले जाने के लिए ब्रीडिंग क्वालिटी, डिजीज प्रिवेंशन और साइंटिफिक मैनेजमेंट पर फोकस करना होगा। एक और अहम विषय पशुधन के स्वास्थ्य का भी है। मैं जब One Earth One Health की बात करता हूं, तो उसमें पौधा हो या पशु, सबके स्वास्थ्य की बात शामिल है। भारत अब वैक्सीन उत्पादन में आत्मनिर्भर है। फुट एंड माउथ डिजीज, उससे पशुओं को बचाने के लिए सवा सौ करोड़ से अधिक डोज पशुओं को लगाई जा चुकी है। राष्ट्रीय गोकुल मिशन के तहत टेक्नोलॉजी का विस्तार किया जा रहा है। हमारी सरकार में अब पशुपालन क्षेत्र के किसानों को किसान क्रेडिट कार्ड का भी लाभ मिल रहा है। निजी निवेश को प्रोत्साहित करने के लिए एनिमल हसबेंड्री इंफ्रास्ट्रक्चर डेवलपमेंट फंड की शुरुआत भी की गई है, और आपको ये पता है हम लोगों ने गोबरधन योजना लागू की है। गांव के पशुओं के निकलने वाला मलमूत्र है, गांव का जो वेस्ट है, कूड़ा-कचरा है। हम गोबरधन योजना में इसका उपयोग करके गांव भी स्वच्छ रख सकते हैं, दूध से आय होती है, तो गोबर से भी आय हो सकती है, और एनर्जी सिक्योरिटी की दिशा में गैस सप्लाई में भी ये गोबरधन बहुत बड़ा योगदान दे सकता है। ये मल्टीपर्पज बेनिफिट वाला काम है, और गांव के लिए बहुत उपयोगी है। मैं चाहूंगा कि सभी राज्य सरकारें इसको प्राथमिकता दें, इसको आगे बढ़ाएं।

साथियों,

हमने पिछले अनुभवों से समझा है कि केवल एक ही फसल पर टिके रहना किसान के लिए जोखिम भरा है। इससे आय के विकल्प भी सीमित हो जाते हैं। इसलिए, हम crop diversification पर फोकस कर रहे हैं। इसके अलावा, National Mission on Edible Oils And Pulses, National Mission on Natural Farming, ये सभी एग्रीकल्चर सेक्टर की ताकत बढ़ा रहे हैं।

साथियों,

आप भी जानते हैं एग्रीकल्चर स्टेट सब्जेक्ट है, राज्यों का भी एक बड़ा एग्रीकल्चर बजट होता है, हमें राज्यों को भी निरंतर प्रेरित करना है कि वो अपना दायित्व निभाने में, हम उनको कैसे मदद दें, हमारे सुझाव उनको कैसे काम आएं। राज्य का भी एक-एक पैसा जो गांव के लिए, किसान के लिए तय हुआ है, वो सही उपयोग हो। हमें बजट प्रावधानों को जिला स्तर तक मजबूत करना होगा। तभी नई पॉलिसीज का ज्यादा से ज्यादा फायदा उठाया जा सकता है।

साथियों,

ये टेक्नोलॉजी की सदी है और सरकार का बहुत जोर एग्रीकल्चर में टेक्नोलॉजी कल्चर लाने पर भी है। आज e-NAM के माध्यम से मार्केट एक्सेस का डेमोक्रेटाइजेशन हुआ है। सरकार एग्रीस्टैक के जरिए, एग्रीकल्चर के लिए डिजिटल पब्लिक इंफ्रास्ट्रक्चर विकसित कर रही है। इसके तहत डिजिटल पहचान, यानी किसान आईडी बनाई जा रही है। अब तक लगभग 9 करोड़ किसानों की किसान आईडी बन चुकी है, और लगभग 30 करोड़ भूमि पार्सलों का डिजिटल सर्वे किया गया है। भारत-विस्तार जैसे AI आधारित प्लेटफॉर्म, रिसर्च इंस्टीट्यूशंस और किसानों के बीच की दूरी कम कर रहे हैं।

लेकिन साथियों,

टेक्नोलॉजी तभी परिणाम देती है, जब सिस्टम उसे अपनाएं, संस्थाएं उसे इंटीग्रेट करें और एंटरप्रेन्योर्स उस पर इनोवेशन खड़ा करें। इस वेबिनार में आपको इससे जुड़े सुझावों को मजबूती से सामने लाना होगा। हम टेक्नोलॉजी को कैसे सही तरीके से इंटीग्रेट करें, इस दिशा में इस वेबिनार से निकले सुझावों की बहुत बड़ी भूमिका होगी।

साथियों,

हमारी सरकार ग्रामीण समृद्धि के निर्माण के लिए प्रतिबद्ध है। प्रधानमंत्री आवास योजना, स्वामित्व योजना, पीएम ग्रामीण सड़क योजना, स्वयं सहायता समूहों को आर्थिक मदद, इसने रूरल इकोनॉमी को निरंतर मजबूत किया है। लखपति दीदी अभियान की सफलता को भी हमें नई ऊंचाई देनी है। अभी तक गांव की 3 करोड़ महिलाओं को लखपति दीदी बनाने में हम सफल हो चुके हैं। अब 2029 तक, 2029 तक 3 करोड़ में और 3 करोड़ जोड़ना है, और 3 करोड़ और लखपति दीदियां बनाने का लक्ष्य तय किया गया है। ये लक्ष्य और तेजी से कैसे प्राप्त किया जाए, इसे लेकर भी आपके सुझाव महत्वपूर्ण होंगे।

साथियों,

देश में स्टोरेज का बहुत बड़ा अभियान चल रहा है। लाखों गोदाम बनाए जा रहे हैं। स्टोरेज के अलावा एग्री एंटरप्रेन्योर्स प्रोसेसिंग, सप्लाई चैन, एग्री-टेक, एग्री-फिनटेक, एक्सपोर्ट, इन सब में इनोवेशन और निवेश बढ़ाना आज समय की मांग है। मुझे विश्वास है आज जो आप मंथन करेंगे, उससे निकले अमृत से ग्रामीण अर्थव्यवस्था को नई ऊर्जा मिलेगी। आप सबको इस वेबिनार के लिए मेरी बहुत-बहुत शुभकामनाएं हैं, और मुझे पूरा विश्वास है कि जमीन से जुड़े हुए विचार, जड़ों से जुड़े हुए विचार, इस बजट को सफल बनाने के लिए, गांव-गांव तक पहुंचाने के लिए बहुत काम आएंगे। आपको बहुत-बहुत शुभकामनाएं।

बहुत-बहुत धन्यवाद। नमस्कार।