1.25 ಲಕ್ಷಕ್ಕೂ ಅಧಿಕ ಪಿಎಂ ಕಿಸಾನ್ ಸಂಮೃದ್ಧಿ ಕೇಂದ್ರಗಳ ಲೋಕಾರ್ಪಣೆ
ಪಿಎಂ-ಕಿಸಾನ್ ಯೋಜನೆಯಡಿ 17,000 ಕೋಟಿ ರೂ. ಗಳ 14ನೇ ಕಂತು ಬಿಡುಗಡೆ
1600 ರೈತ ಉತ್ಪನ್ನಗಳ ಸಂಸ್ಥೆಗಳನ್ನು ಡಿಜಿಟಲ್ ವಹಿವಾಟಿನ ಮುಕ್ತ ಜಾಲ (ಒಎನ್ ಡಿಸಿ) ವೇದಿಕೆಗೆ ತರುವುದಕ್ಕೆ ಚಾಲನೆ
ಸಲ್ಫರ್ ಲೇಪಿತ ಯೂರಿಯಾ- ಯೂರಿಯಾ ಗೋಲ್ಡ್ ಬಿಡುಗಡೆ
5 ಹೊಸ ವೈದ್ಯಕೀಯ ಕಾಲೇಜುಗಳ ಉದ್ಘಾಟನೆ ಮತ್ತು 7 ಹೊಸ ವೈದ್ಯಕೀಯ ಕಾಲೇಜುಗಳಿಗೆ ಶಂಕುಸ್ಥಾಪನೆ
“ರೈತರ ನೋವು ಮತ್ತು ಅಗತ್ಯಗಳನ್ನು ಅರ್ಥಮಾಡಿಕೊಳ್ಳುವ ಸರ್ಕಾರ ಕೇಂದ್ರದಲ್ಲಿದೆ’’
“ಯೂರಿಯಾ ಬೆಲೆಗಳಿಂದ ನಮ್ಮ ರೈತರಿಂದ ತೊಂದರೆಗಳಾಗಲು ಸರ್ಕಾರ ಬಿಡುವುದಿಲ್ಲ. ರೈತರು ಯೂರಿಯಾ ಖರೀದಿಗೆ ಹೋದರೆ ಮೋದಿ ಅವರ ಗ್ಯಾರಂಟಿ ಇದೆ ಎಂಬ ನಂಬಿಕೆ ಅವರಲ್ಲಿರಬೇಕು’’
“ಗ್ರಾಮಗಳು ವಿಕಾಸವಾದರೆ ಮಾತ್ರ ಭಾರತ ವಿಕಸಿತವಾಗುತ್ತದೆ’’
“ರಾಜಸ್ಥಾನದಲ್ಲಿ ಆಧುನಿಕ ಮೂಲಸೌಕರ್ಯ ಸೃಷ್ಟಿಸುವುದು ನಮ್ಮ ಆದ್ಯತೆಯಾಗಿದೆ’’
“ನಾವೆಲ್ಲರೂ ಸೇರಿ ರಾಜಸ್ಥಾನದ ಪರಂಪರೆ ಮತ್ತು ಹೆಮ್ಮೆಗೆ ಇಡೀ ವಿಶ್ವದಲ್ಲಿಯೇ ಹೊಸ ಹೆಗ್ಗುರುತು ನೀಡೋಣ’’

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ರಾಜಸ್ಥಾನದ ಸಿಕಾರ್ ನಲ್ಲಿಂದು ಹಲವು ಅಭಿವೃದ್ಧಿ ಯೋಜನೆಗಳನ್ನು ರಾಷ್ಟ್ರಕ್ಕೆ ಸಮರ್ಪಿಸಿದರು ಮತ್ತು ಶಂಕುಸ್ಥಾಪನೆಯನ್ನು ನೆರವೇರಿಸಿದರು. ರಾಷ್ಟ್ರಕ್ಕೆ ಸಮರ್ಪಿಸಲಾದ ಈ ಯೋಜನೆಗಳಲ್ಲಿ 1.25 ಲಕ್ಷಕ್ಕೂ ಅಧಿಕ ಪಿಎಂ ಕಿಸಾನ್ ಸಮೃದ್ಧಿ ಕೇಂದ್ರಗಳು(ಪಿಎಂಕೆಎಸ್ ಕೆ)ಗಳ ಲೋಕಾರ್ಪಣೆ, ಸಲ್ಫರ್ ಲೇಪಿತ ಹೊಸ ಬಗೆಯ ಯೂರಿಯಾ – ಯೂರಿಯಾ ಗೋಲ್ಡ್ ಬಿಡುಗಡೆ, 1600ರೈತ ಉತ್ಪನ್ನ ಸಂಸ್ಥೆಗಳು(ಎಫ್ ಪಿಒ)ಗಳನ್ನು ಡಿಜಿಟಲ್ ವ್ಯವಹಾರಕ್ಕೆ ಮುಕ್ತ ಜಾಲ(ಒಎನ್ ಡಿಸಿ) ವೇದಿಕೆಗೆ ತರುವುದು, ಪಿಎಂ ಕಿಸಾನ್ ಸಮ್ಮಾನ್ ನಿಧಿ(ಪಿಎಂ-ಕಿಸಾನ್)ಅಡಿ 8.5 ಕೋಟಿ ಫಲಾನುಭವಿಗಳಿಗೆ 14ನೇ ಕಂತಿನ 17,000 ಕೋಟಿ ರೂ. ಬಿಡುಗಡೆ, ಚಿತ್ತೋರ್ ಗಢ, ಧೋಲಾಪುರ್, ಸಿರೋಹಿ, ಸಿಕಾರ್ ಮತ್ತು  ಶ್ರೀಗಂಗಾನಗರಗಳಲ್ಲಿ 5 ಹೊಸ ವೈದ್ಯಕೀಯ ಕಾಲೇಜುಗಳ ಉದ್ಘಾಟನೆ, ಬರಾನ್, ಬುಂಡಿ, ಕರೌಲಿ, ಜುನ್ ಜಹುನು, ಸವಾಯಿ ಮಾಧೋಪುರ್, ಜೈಸಲ್ಮೇರ್, ಟೋಂಕ್ ನಲ್ಲಿ 7 ಹೊಸ ವೈದ್ಯಕೀಯ ಕಾಲೇಜುಗಳಿಗೆ ಶಂಕುಸ್ಥಾಪನೆ, ಉದಯ್ ಪುರ, ಬನ್ಸವಾರ್, ಪ್ರತಾಪ್ ಗಡ್ ಮತ್ತು ಡುಂಗಾರ್ಪುರ ಜಿಲ್ಲೆಗಳಲ್ಲಿ ಮತ್ತು ಜೋಧ್ ಪುರ್ ನ ಕೇಂದ್ರೀಯ ವಿದ್ಯಾಲಯ ತಿವರಿಯಲ್ಲಿ 6 ಏಕಲವ್ಯ ಮಾದರಿ ವಸತಿ ಶಾಲೆಗಳ ಉದ್ಘಾಟನೆಯೂ ಸೇರಿದೆ.   

ಕಾರ್ಯಕ್ರಮದ ಸ್ಥಳಕ್ಕೆ ಆಗಮಿಸುತ್ತಿದ್ದಂತೆ ಪ್ರಧಾನಿ ಅವರು, ಪಿಎಂ-ಕಿಸಾನ್ ಸಮೃದ್ಧಿ ಕೇಂದ್ರದ ಮಾದರಿ ಮೂಲಕ ಹಾದು ಹೋದರು. ಬಳಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ ದೇಶದ ನಾನಾ ಭಾಗಗಳಿಂದ ಇಂದಿನ ಕಾರ್ಯಕ್ರಮದಲ್ಲಿ ಭಾಗಿಯಾಗಿರುವ ಕೋಟ್ಯಾಂತರ ರೈತರಿಗೆ ನಮನ ಸಲ್ಲಿಸಿದರು ಮತ್ತು ಕತುಶಾಮ್ ಜಿ ಅವರ ಈ ಭೂಮಿ ಭಾರತದ ಮೂಲೆ ಮೂಲೆಯ ಜನರಿಗೆ ಯಾತ್ರೆಯ ಅನುಭವವನ್ನು ನೀಡಿದೆ ಎಂದರು. ಶೆಖಾವತಿ ಅವರ ಧೀರೋದ್ದಾತ ನೆಲದಿಂದ ಹಲವು ಅಭಿವೃದ್ಧಿ ಕಾರ್ಯಕ್ರಮಗಳನ್ನು ಉದ್ಘಾಟಿಸಲು ತಮಗೆ ಈ ಅವಕಾಶ ದೊರೆತಿದ್ದಕ್ಕಾಗಿ ಕೃತಜ್ಞತೆಗಳನ್ನು ಸಲ್ಲಿಸಿದರು ಮತ್ತು ಕೋಟ್ಯಾಂತರ ರೈತ ಫಲಾನುಭವಿಗಳಿಗೆ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ(ಪಿಎಂ-ಕಿಸಾನ್) ಅಡಿ ಕಂತಿನ ಹಣ ನೇರ ಬಿಡುಗಡೆಯಾಗಿದೆ ಎಂದು ಹೇಳಿದರು. ದೇಶಕ್ಕೆ 1.25 ಲಕ್ಷಕ್ಕೂ ಅಧಿಕ ಪಿಎಂ-ಕಿಸಾನ್ ಸಮೃದ್ಧಿ ಕೇಂದ್ರಗಳನ್ನು ಸಮರ್ಪಿಸಿದ ಬಗ್ಗೆ ಮಾತನಾಡಿದ ಪ್ರಧಾನಮಂತ್ರಿ ಅವರು, ಇವು ಗ್ರಾಮಗಳು ಹಾಗೂ ಬ್ಲಾಕ್ ಮಟ್ಟದಲ್ಲಿ ಕೋಟ್ಯಾಂತರ ರೈತರಿಗೆ ನೇರ ಅನುಕೂಲಗಳನ್ನು ಒದಗಿಸುತ್ತದೆ ಎಂದರು. ಅಲ್ಲದೆ ರೈತ ಉತ್ಪನ್ನ ಸಂಸ್ಥೆಗಳು(ಎಫ್ ಪಿಒ)ಗಳನ್ನು ಡಿಜಿಟಲ್ ವಹಿವಾಟಿನ ಮುಕ್ತ ಜಾಲಕ್ಕೆ(ಒಎನ್ ಡಿಸಿ) ವ್ಯಾಪ್ತಿಗೆ ತಂದಿರುವುದನ್ನು ಉಲ್ಲೇಖಿಸಿದರು ಮತ್ತು ಇದರಿಂದ ರೈತರು ತಮ್ಮ ಉತ್ಪನ್ನಗಳನ್ನು ದೇಶದ ಯಾವುದೇ ಮೂಲೆಯ ಮಾರುಕಟ್ಟೆಗೆ ಬೇಕಾದರೂ ಕೊಂಡೊಯ್ಯಲು ಸುಲಭವಾಗುತ್ತದೆ ಎಂದರು. ಅಲ್ಲದೆ ಹೊಸ ಬಗೆಯ ಯೂರಿಯಾ ಗೋಲ್ಡ್ ಬಿಡುಗಡೆ, ಹೊಸ ವೈದ್ಯಕೀಯ ಕಾಲೇಜುಗಳು ಮತ್ತು ಏಕಲವ್ಯ ಮಾದರಿ ಕಾಲೇಜುಗಳ ಉದ್ಘಾಟನೆಯನ್ನು ಅವರು ಉಲ್ಲೇಖಿಸಿದರು. ಪ್ರಧಾನಮಂತ್ರಿ ಅವರು, ಇಂದಿನ ಅಭಿವೃದ್ಧಿ ಕಾರ್ಯಕ್ರಮಗಳಿಗಾಗಿ ದೇಶದ ಜನತೆಗೆ ಮತ್ತು ಕೋಟ್ಯಾಂತರ ರೈತರಿಗೆ ಅಭಿನಂದನೆ ಸಲ್ಲಿಸಿದರು.  

 

ಸಿಕಾರ್ ಮತ್ತು ಶೇಖಾವತಿ ಪ್ರಾಂತ್ಯದ ರೈತರ ಪ್ರಾಮುಖ್ಯತೆಯನ್ನು ಉಲ್ಲೇಖಿಸಿದ ಪ್ರಧಾನಮಂತ್ರಿ ಅವರು, ಅವರ ಪರಿಶ್ರಮಕ್ಕಾಗಿ ಗೌರವವನ್ನು ಸಲ್ಲಿಸಿದರು. ಸದ್ಯ ಕೇಂದ್ರದಲ್ಲಿರುವ ಸರ್ಕಾರ ರೈತರ ನೋವು ಮತ್ತು ಅಗತ್ಯತೆಗಳನ್ನು ಅರ್ಥಮಾಡಿಕೊಳ್ಳುತ್ತದೆ ಎಂದು ಪ್ರಧಾನಮಂತ್ರಿ ಹೇಳಿದರು. ಕಳೆದ 9 ವರ್ಷಗಳ್ಲಲಿ ಬೀಜದಿಂದ ಮಾರುಕಟ್ಟೆವರೆಗೆ(ಬೀಜ್ ಸೆ ಬಜಾರ್ ತಕ್) ವರೆಗೆ ಹೊಸ ವ್ಯವಸ್ಥೆಯನ್ನು ಸೃಷ್ಟಿಸಿರುವ ಬಗ್ಗೆ ಪ್ರಧಾನಮಂತ್ರಿ ವಿವರಿಸಿದರು. 2015ರಲ್ಲಿ ಸೂರತ್ ಗರ್ ನಲ್ಲಿ ಮಣ್ಣಿನ ಆರೋಗ್ಯ ಕಾರ್ಡ್ ಯೋಜನೆಗೆ ಚಾಲನೆ ನೀಡಿದ್ದನ್ನು ಪ್ರಧಾನಮಂತ್ರಿ ಸ್ಮರಿಸಿದರು. ಈ ಯೋಜನೆಯ ಮೂಲಕ ಮಣ್ಣಿನ ಆರೋಗ್ಯದ ಬಗ್ಗೆ ತಿಳಿದುಕೊಂಡು, ಕೋಟ್ಯಾಂತರ ರೈತರು ಸಕಾರಾತ್ಮಕ ನಿರ್ಧಾರಗಳನ್ನು ಕೈಗೊಂಡಿದ್ದಾರೆ ಎಂದರು. 125ಲಕ್ಷ ಪಿಎಂ – ಕಿಸಾನ್ ಸಮೃದ್ಧಿ ಕೇಂದ್ರಗಳು(ಪಿಎಂಕೆಎಸ್ ಕೆ)ಗಳು ರೈತರ ಅಭ್ಯುದಯಕ್ಕೆ ದಾರಿಮಾಡಿಕೊಡಲಿವೆ ಎಂದು ಅವರು ಹೇಳಿದರು. ಈ ಕೇಂದ್ರಗಳನ್ನು ರೈತರ ಎಲ್ಲ ಅಗತ್ಯತೆಗಳನ್ನು ಪೂರೈಸುವ ಏಕೈಕ ತಾಣವನ್ನಾಗಿ ಅಭಿವೃದ್ಧಿಪಡಿಸಲಾಗುವುದು. ಈ ಕೇಂದ್ರಗಳು ಕೃಷಿಗೆ ಸಂಬಂಧಿಸಿದಂತೆ ರೈತರಿಗೆ ಎಲ್ಲಾ ಅತ್ಯಾಧುನಿಕ ಮತ್ತು ಇತ್ತೀಚಿನ ಮಾಹಿತಿಯನ್ನು ಒದಗಿಸಲಿವೆ ಎಂದರು. ಅಲ್ಲದೆ ಈ ಕೇಂದ್ರಗಳು ಸರ್ಕಾರದ ಕೃಷಿ ಯೋಜನೆಗಳ ಬಗ್ಗೆ ಸಕಾಲದಲ್ಲಿ ಸೂಕ್ತ ಮಾಹಿತಿಯನ್ನು ಒದಗಿಸುತ್ತವೆ. ರೈತರು ಈ ಕೇಂದ್ರಗಳಿಗೆ ಆಗಾಗ್ಗೆ ಭೇಟಿ ನೀಡುತ್ತಿರಬೇಕು ಮತ್ತು ಅಲ್ಲಿ ಲಭ್ಯವಿರುವ ಜ್ಞಾನದ ಪ್ರಯೋಜನ ಪಡೆಯಬೇಕು ಎಂದು ಪ್ರಧಾನಿ ರೈತರಿಗೆ ಸಲಹೆ ನೀಡಿದರು. ಈ ವರ್ಷಾಂತ್ಯಕ್ಕೂ ಮುನ್ನ ದೇಶಾದ್ಯಂತ ಇನ್ನೂ 1.75 ಲಕ್ಷ ಪಿಎಂ-ಕಿಸಾನ್ ಸಮೃದ್ಧಿ ಕೇಂದ್ರ(ಪಿಎಂಕೆಎಸ್ ಕೆ)ಗಳನ್ನು ಹೆಚ್ಚುವರಿಯಾಗಿ ಆರಂಭಿಸಲಾಗುವುದು ಎಂದು ಅವರು ಹೇಳಿದರು.

ಸದ್ಯದ ಕೇಂದ್ರ ಸರ್ಕಾರ ರೈತರ ವೆಚ್ಚವನ್ನು ತಗ್ಗಿಸಲು ಎಲ್ಲಾ ಹಂತದಲ್ಲೂ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದೆ ಮತ್ತು ಅವರ ಅಗತ್ಯಕ್ಕೆ ಸ್ಪಂದಿಸುವ ಎಲ್ಲ ನೆರವು ನೀಡಲಾಗುತ್ತಿದೆ ಎಂದರು. ಪಿಎಂ ಕಿಸಾನ್ ಸಮ್ಮಾನ್ ನಿಧಿಯನ್ನು ಉಲ್ಲೇಖಿಸಿದ ಪ್ರಧಾನಮಂತ್ರಿ ಅವರು, ರೈತರು ಬ್ಯಾಂಕ್ ಖಾತೆಗಳಿಗೆ ನೇರ ಹಣ ವರ್ಗಾಯಿಸುವ ಈ ಯೋಜನೆ ವಿಶ್ವದ ಅತ್ಯಂತ ಅತಿದೊಡ್ಡ ಯೋಜನೆಯಾಗಿದೆ ಎಂದರು. ರೈತರ ಬ್ಯಾಂಕ್ ಖಾತೆಗಳಿಗೆ 14ನೇ ಕಂತನ್ನು ಬಿಡುಗಡೆ ಮಾಡಲಾಗಿದೆ. ಈವರೆಗೆ 2 ಲಕ್ಷ 60 ಸಾವಿರ ಕೋಟಿ ರೂಪಾಯಿಗೂ ಅಧಿಕ ಹಣವನ್ನು ರೈತರ ಖಾತೆಗಳಿಗೆ ವರ್ಗಾಯಿಸಲಾಗಿದೆ. ಇದು ರೈತರಿಗೆ ಅವರಿಗೆ ಇತರೆ ವೆಚ್ಚವನ್ನು ಸರಿದೂಗಿಸಿಕೊಳ್ಳಲು ನೆರವಾಗಲಿದೆ ಎಂದರು. ಸರ್ಕಾರ ರೈತರ ವೆಚ್ಚವನ್ನು ಉಳಿತಾಯ ಮಾಡುತ್ತಿದೆ ಎಂಬುದಕ್ಕೆ ದೇಶದಲ್ಲಿನ ಯೂರಿಯಾ ಬೆಲೆಯೇ ಸಾಕ್ಷಿ ಎಂದು ಅವರು ಹೇಳಿದರು. ಕೊರೊನಾ ಸಾಂಕ್ರಾಮಿಕ ಮತ್ತು ರಷ್ಯಾ ಉಕ್ರೇನ್ ಯುದ್ಧವನ್ನು ಉಲ್ಲೇಖಿಸಿದ ಅವರು, ಇದರಿಂದ ರಸಗೊಬ್ಬರ ವಲಯದಲ್ಲಿ ಭಾರೀ ವ್ಯತ್ಯಯವಾಗಿದೆ. ಆದರೆ ಪ್ರಸಕ್ತ ಸರ್ಕಾರ ಇದರಿಂದ ದೇಶದ ರೈತರಿಗೆ ಯಾವುದೇ ತೊಂದೆಯಾಗದಂತೆ ನೋಡಿಕೊಂಡಿದೆ ಎಂದು ಪ್ರಧಾನಮಂತ್ರಿ ಹೇಳಿದರು.  ರಸಗೊಬ್ಬರಗಳ ಬೆಲೆ ಕುರಿತಂತೆ ಮಾತನಾಡಿದ ಪ್ರಧಾನಮಂತ್ರಿ, ಒಂದು ಚೀಲ ಯೂರಿಯಾ ಬೆಲೆ ಭಾರತದಲ್ಲಿ 266 ರೂ. ಇದ್ದರೆ, ಪಾಕಿಸ್ತಾನದಲ್ಲಿ 800 ರೂ, ಬಾಂಗ್ಲಾದೇಶದಲ್ಲಿ 720 ರೂ, ಚೀನಾದಲ್ಲಿ 2100 ರೂ. ಮತ್ತು ಅಮೆರಿಕದಲ್ಲ 3000 ರೂ.ಗಳಿಗೂ ಅಧಿಕ ದರವಿದೆ ಎಂದರು. “ಯೂರಿಯಾ ಬೆಲೆ ನಮ್ಮ ರೈತರನ್ನು ಬಾಧಿಸಲು ಸರ್ಕಾರ ಬಿಡುವುದಿಲ್ಲ ಎಂದು ಶ್ರೀ ನರೇಂದ್ರ ಮೋದಿ ಹೇಳಿದರು” “ನಮ್ಮ ರೈತರು ಯೂರಿಯಾ ಖರೀದಿಸಲು ಹೋದರೆ ಅವರಿಗೆ ಮೋದಿ ಅವರ ಗ್ಯಾರಂಟಿ ಇದೆ ಎನ್ನುವ ನಂಬಿಕೆ ಇರಬೇಕಾಗಿದೆ” ಎಂದು ಹೇಳಿದರು. ಸಿರಿಧಾನ್ಯಗಳ ಉತ್ತೇಜನ ಮತ್ತು ಅವುಗಳ ಬ್ಯಾಂಡಿಂಗ್ ಅನ್ನು ಶ್ರೀ ಅನ್ನ ಯೋಜನೆಯಡಿಯಲ್ಲಿ ಮಾಡುವಂತೆ ಪ್ರಧಾನಮಂತ್ರಿ ಹೇಳಿದರು. ಶ್ರೀ ಅನ್ನ ಯೋಜನೆಯನ್ನು ಉತ್ತೇಜಿಸುವ ಮೂಲಕ ಸಿರಿಧಾನ್ಯಗಳ ಉತ್ಪಾದನೆ, ಸಂಸ್ಕರಣೆ ಮತ್ತು ರಫ್ತು ಹೆಚ್ಚಳವಾಗಿದೆ ಎಂದು ಅವರು ಹೇಳಿದರು. ತಮ್ಮ ಇತ್ತೀಚಿನ ಅಮೆರಿಕ ಭೇಟಿ ವೇಳೆ ಶ್ವೇತಭವನದ ಅಧಿಕೃತ ಔತಣಕೂಟದಲ್ಲಿ ಸಿರಿಧಾನ್ಯಗಳ ಖಾದ್ಯಗಳಿದ್ದವು ಎಂದು ಪ್ರಧಾನಮಂತ್ರಿ ಸ್ಮರಿಸಿದರು.

 

“ಗ್ರಾಮಗಳ ಅಭಿವೃದ್ಧಿಯಾಗದ ಹೊರತು ಭಾರತದ ಅಭಿವೃದ್ಧಿಯಾಗುವುದಿಲ್ಲ. ಗ್ರಾಮಗಳು ಅಭಿವೃದ್ಧಿ ಹೊಂದಿದರೆ ಮಾತ್ರ ಭಾರತ ವಿಕಸಿತವಾಗುತ್ತದೆ. ಅದಕ್ಕಾಗಿಯೇ ಕೇಂದ್ರ ಸರ್ಕಾರ ಕೆಲವೇ ಕೆಲವು ನಗರಗಳಲ್ಲಿರುವ ಎಲ್ಲಾ ಸೌಕರ್ಯಗಳನ್ನು ಗ್ರಾಮಗಳಿಗೂ ಒದಗಿಸುವ ನಿಟ್ಟಿನಲ್ಲಿ ನಿರಂತರವಾಗಿ ಕಾರ್ಯನಿರ್ವಹಿಸುತ್ತಿದೆ” ಎಂದು ಪ್ರಧಾನಮಂತ್ರಿ ಹೇಳಿದರು. ಆರೋಗ್ಯ ಮೂಲಸೌಕರ್ಯ ವಿಸ್ತರಣೆಯನ್ನು ಉಲ್ಲೇಖಿಸಿದ ಪ್ರಧಾನಮಂತ್ರಿ, ಕಳೆದ 9 ವರ್ಷಗಳ ವರೆಗೆ ರಾಜಸ್ಥಾನದಲ್ಲಿ ಕೇವಲ 10 ವೈದ್ಯಕೀಯ ಕಾಲೇಜುಗಳಿದ್ದವು. ಇಂದು ಅವುಗಳ ಸಂಖ್ಯೆ 35 ತಲುಪಿದೆ. ಇದರಿಂದ ಸಮೀಪದ ಪ್ರದೇಶಗಳಲ್ಲಿ ವೈದ್ಯಕೀಯ ಸೌಕರ್ಯಗಳು ಸುಧಾರಿಸಿವೆ ಮತ್ತು ವೈದ್ಯಕೀಯ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣದ ಅವಕಾಶಗಳು ದೊರೆಯುತ್ತಿವೆ ಎಂದರು.

ಇಂದು ಉದ್ಘಾಟಿಸಲಾದ ವೈದ್ಯಕೀಯ ಕಾಲೇಜುಗಳು ಮತ್ತು ಇಂದು ಶಂಕುಸ್ಥಾಪನೆ ನೆರವೇರಿಸಲಾದ ವೈದ್ಯಕೀಯ ಕಾಲೇಜುಗಳಿಂದಾಗಿ ರಾಜ್ಯದ ಹಲವು ಪ್ರದೇಶಗಳಲ್ಲಿ ವೈದ್ಯಕೀಯ ಮೂಲಸೌಕರ್ಯ ವೃದ್ಧಿಯಾಗಲಿದೆ ಎಂದರು. ವೈದ್ಯಕೀಯ ಶಿಕ್ಷಣವನ್ನು ಕೈಗೆಟಕುವಂತೆ ಮಾಡಲಾಗಿದೆ ಎಂದ ಪ್ರಧಾನಮಂತ್ರಿ ಅವರು, ಮಾತೃಭಾಷೆಯಲ್ಲಿಯೇ ವೈದ್ಯಕೀಯ ಶಿಕ್ಷಣವನ್ನು ಒದಗಿಸುವ ನಿಟ್ಟಿನಲ್ಲಿ ಹೆಜ್ಜೆ ಇಡಲಾಗಿದೆ ಎಂದು ಉಲ್ಲೇಖಿಸಿದರು. ಇದರಿಂದ ದುರ್ಬಲ ವರ್ಗದವರಿಗೆ ಮತ್ತಷ್ಟು ಅವಕಾಶಗಳನ್ನು ಒದಗಿಸಲಾಗುತ್ತಿದೆ ಎಂದರು. “ಆಂಗ್ಲಭಾಷೆ ತಿಳಿದಿಲ್ಲದಿದ್ದರೂ, ಯಾವುದೇ ಬಡವ್ಯಕ್ತಿಯ ಪುತ್ರ ಅಥವಾ ಪುತ್ರಿ ವೈದ್ಯಕೀಯ ಶಿಕ್ಷಣದಿಂದ ವಂಚಿತವಾಗಲು ಅವಕಾಶವಿಲ್ಲ, ಇದು ನರೇಂದ್ರ ಮೋದಿ ಸರ್ಕಾರದ ಗ್ಯಾರಂಟಿಯಾಗಿದೆ” ಎಂದು ಪ್ರಧಾನಿ ಹೇಳಿದರು.

 

ದಶಕಗಳವರೆಗೆ ಹಲವು ಗ್ರಾಮಗಳಲ್ಲಿ ಉತ್ತಮ ಶಾಲೆಗಳು ಮತ್ತು ಶಿಕ್ಷಣವಿಲ್ಲದೆ, ಹಿಂದುಳಿದಿದ್ದೆವು. ಬಡವರು ಮತ್ತು ಗ್ರಾಮಗಳಿಗೆ ಹಿನ್ನೆಡೆಯಾಗಿತ್ತು. ಹಿಂದುಳಿದ ಮತ್ತು ಬುಡಕಟ್ಟು ಸಮಾಜದ ಮಕ್ಕಳು ತಮ್ಮ ಕನಸುಗಳನ್ನು ಸಾಕಾರ ಮಾಡಿಕೊಳ್ಳಲು ಅವಕಾಶಗಳೇ ಇರಲಿಲ್ಲ ಎಂದು ಹೇಳಿದರು. ಪ್ರಸಕ್ತ ಸರ್ಕಾರ ಶಿಕ್ಷಣದ ಸಂಪನ್ಮೂಲಕ್ಕೆ ಬಜೆಟ್ ನಲ್ಲಿ ಹೆಚ್ಚಳ ಮಾಡಿರುವುದೇ ಅಲ್ಲದೆ, ಏಕಲವ್ಯ ವಸತಿ ಶಾಲೆಗಳ ಆರಂಭ, ಬುಡಕಟ್ಟು ಯುವಜನರಿಗೆ ಭಾರೀ ಅನುಕೂಲಗಳನ್ನು ಸೃಷ್ಟಿಸಿದೆ ಎಂದು ಹೇಳಿದರು.

“ಕನಸುಗಳು ದೊಡ್ಡದಾದಾಗ ಮಾತ್ರ ಯಶಸ್ಸು ದೊಡ್ಡದಾಗುತ್ತದೆ’’ ಎಂದು ಪ್ರಧಾನಿ ಹೇಳಿದರು. ರಾಜಸ್ಥಾನವು ಶತಮಾನಗಳಿಂದ ಜಗತ್ತನ್ನು ಮಂತ್ರಮುಗ್ಧಗೊಳಿಸಿರುವ ರಾಜ್ಯವಾಗಿದೆ ಎಂದ ಪ್ರಧಾನಿ, ರಾಜಸ್ಥಾನವನ್ನು ಆಧುನಿಕ ಅಭಿವೃದ್ಧಿಯ ಉತ್ತುಂಗಕ್ಕೆ ಕೊಂಡೊಯ್ಯುವ ಸಂದರ್ಭದಲ್ಲಿ ನೆಲದ ಪರಂಪರೆಯನ್ನು ಸಂರಕ್ಷಿಸಲು ಒತ್ತು ನೀಡಿದರು. ಅದಕ್ಕಾಗಿಯೇ ರಾಜಸ್ಥಾನದಲ್ಲಿ ಆಧುನಿಕ ಮೂಲಸೌಕರ್ಯಗಳನ್ನು ಸೃಷ್ಟಿಸುವುದು ನಮ್ಮ ಆದ್ಯತೆಯಾಗಿದೆ ಎಂದು ಪ್ರಧಾನಮಂತ್ರಿ  ಹೇಳಿದರು. ಕಳೆದ ಕೆಲವು ತಿಂಗಳುಗಳಲ್ಲಿ ಎರಡು ಹೈಟೆಕ್ ಎಕ್ಸ್‌ಪ್ರೆಸ್‌ವೇಗಳ ಉದ್ಘಾಟನೆ ನೆರವೇರಿಸಿದ್ದನ್ನು ಅವರು ಪ್ರಸ್ತಾಪಿಸಿದರು ಮತ್ತು ದೆಹಲಿ-ಮುಂಬೈ ಎಕ್ಸ್‌ಪ್ರೆಸ್‌ವೇ ಮತ್ತು ಅಮೃತಸರ-ಜಾಮ್‌ನಗರ ಎಕ್ಸ್‌ಪ್ರೆಸ್‌ವೇಯ ಪ್ರಮುಖ ವಿಭಾಗದ ಮೂಲಕ ರಾಜಸ್ಥಾನವು ಅಭಿವೃದ್ಧಿಯ ಹೊಸ ಗಾಥೆಯನ್ನು ಬರೆಯುತ್ತಿದೆ ಎಂದು ಹೇಳಿದರು. ರಾಜ್ಯದಿಂದ ಓಡುತ್ತಿರುವ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನ ಬಗ್ಗೆಯೂ ಅವರು ಪ್ರಸ್ತಾಪಿಸಿದರು. ಸರ್ಕಾರವು ಮೂಲಸೌಕರ್ಯದಲ್ಲಿ ಹೂಡಿಕೆ ಮಾಡುತ್ತಿದೆ ಮತ್ತು ಪ್ರವಾಸೋದ್ಯಮಕ್ಕೆ ಸಂಬಂಧಿಸಿದ ಸೌಲಭ್ಯಗಳನ್ನು ಅಭಿವೃದ್ಧಿಪಡಿಸುತ್ತಿದೆ. ಇದು ರಾಜಸ್ಥಾನಕ್ಕೂ ಹೊಸ ಅವಕಾಶಗಳನ್ನು ತೆರೆಯುತ್ತದೆ ಎಂದು ಶ್ರೀ ನರೇಂದ್ರ ಮೋದಿ ಹೇಳಿದರು. “ಎಕ್ಸ್‌ಪ್ರೆಸ್‌ವೇಗಳು ಮತ್ತು ಉತ್ತಮ ರೈಲು ಸೌಲಭ್ಯಗಳು ರಾಜಸ್ಥಾನವು 'ಪಧರೋ ಮಹಾರೆ ದೇಶ್' ಎಂದು ಕರೆದಾಗ ಪ್ರವಾಸಿಗರನ್ನು ಸ್ವಾಗತಿಸುತ್ತದೆ" ಎಂದು ಅವರು ಹೇಳಿದರು. ಸ್ವದೇಶ್ ದರ್ಶನ್ ಯೋಜನೆಯಡಿ ಖಾತು ಶ್ಯಾಮ್ ಜಿ ದೇವಸ್ಥಾನದಲ್ಲಿ ಸೌಲಭ್ಯಗಳ ವಿಸ್ತರಣೆಯ ಬಗ್ಗೆಯೂ ಪ್ರಧಾನಿ ಪ್ರಸ್ತಾಪಿಸಿದರು ಮತ್ತು ಶ್ರೀ ಖಾತು ಶ್ಯಾಮ್ ಅವರ ಆಶೀರ್ವಾದದಿಂದ ರಾಜಸ್ಥಾನದ ಅಭಿವೃದ್ಧಿಯು ಹೆಚ್ಚಿನ ವೇಗವನ್ನು ಪಡೆಯುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. "ನಾವೆಲ್ಲರೂ ಇಡೀ ವಿಶ್ವದಲ್ಲಿ ರಾಜಸ್ಥಾನದ ಹೆಮ್ಮೆ ಮತ್ತು ಪರಂಪರೆಗೆ ಹೊಸ ಗುರುತನ್ನು ನೀಡುತ್ತೇವೆ" ಎಂದು ಶ್ರೀ ನರೇಂದ್ರ  ಮೋದಿ ಹೇಳಿದರು.

 

ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿರುವ ರಾಜಸ್ಥಾನದ ಮುಖ್ಯಮಂತ್ರಿ ಶ್ರೀ ಅಶೋಕ್ ಗೆಹ್ಲೋಟ್ ಅವರು ಕಾರ್ಯಕ್ರಮಕ್ಕೆ ಬರಲು ಸಾಧ್ಯವಾಗದೆ ಇರುವುದಕ್ಕಾಗಿ ಅವರಿಗೆ ಉತ್ತಮ ಆರೋಗ್ಯ ನೀಡಲಿ ಎಂದು ಹಾರೈಸುವ ಮೂಲಕ ಪ್ರಧಾನಮಂತ್ರಿ ತಮ್ಮ ಭಾಷಣವನ್ನು ಮುಕ್ತಾಯಗೊಳಿಸಿದರು.

ರಾಜಸ್ಥಾನದ ರಾಜ್ಯಪಾಲರಾದ ಶ್ರೀ ಕಲ್ರಾಜ್ ಮಿಶ್ರಾ, ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವ, ಶ್ರೀ ನರೇಂದ್ರ ಸಿಂಗ್ ತೋಮರ್, ಕೇಂದ್ರ ಜಲ ಶಕ್ತಿ ಸಚಿವ, ಶ್ರೀ ಗಜೇಂದ್ರ ಸಿಂಗ್ ಶೇಖಾವತ್,  ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ, ಶ್ರೀ ಮನ್ಸುಖ್ ಮಾಂಡವಿಯಾ, ಕೇಂದ್ರ ಕಾನೂನು ಸಚಿವ ಮತ್ತು ನ್ಯಾಯ ಸಚಿವ ಶ್ರೀ ಅರ್ಜುನ್ ರಾಮ್ ಮೇಘವಾಲ್ ಮತ್ತು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ಶ್ರೀ ಕೈಲಾಶ್ ಚೌಧರಿ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಹಿನ್ನೆಲೆ

ರೈತರಿಗೆ ಪ್ರಯೋಜನಕಾರಿಯಾದ ಮಹತ್ವದ ಕ್ರಮದಲ್ಲಿ, ಪ್ರಧಾನಮಂತ್ರಿ ಅವರು 1.25 ಲಕ್ಷಕ್ಕೂ ಅಧಿಕ ಪಿಎಂ ಕಿಸಾನ್ ಸಮೃದ್ಧಿ ಕೇಂದ್ರಗಳನ್ನು (ಪಿಎಂಕೆಎಸ್‌ಕೆ) ರಾಷ್ಟ್ರಕ್ಕೆ ಸಮರ್ಪಿಸಿದರು. ಎಲ್ಲಾ ರೈತರ ಅಗತ್ಯಗಳಿಗೆ ಒಂದು ಸ್ಥಳದಲ್ಲಿ ಪರಿಹಾರವನ್ನು ಒದಗಿಸಲು ಪಿಎಂಕೆಎಸ್ ಕೆ  ಗಳನ್ನು ಅಭಿವೃದ್ಧಿಪಡಿಸಲಾಗುತ್ತಿದೆ. ಕೃಷಿ-ಇನ್‌ಪುಟ್‌ (ಗೊಬ್ಬರಗಳು, ಬೀಜಗಳು, ಉಪಕರಣಗಳು)ಗಳ ಮಾಹಿತಿಯಿಂದ ಮಣ್ಣು, ಬೀಜಗಳು ಮತ್ತು ರಸಗೊಬ್ಬರಗಳ ಪರೀಕ್ಷಾ ಸೌಲಭ್ಯಗಳು, ವಿವಿಧ ಸರ್ಕಾರಿ ಯೋಜನೆಗಳ ಬಗ್ಗೆ ಮಾಹಿತಿ, ಪಿಎಂಕೆಎಸ್ ಕೆ ಗಳು ದೇಶದ ರೈತರಿಗೆ ವಿಶ್ವಾಸಾರ್ಹ ಬೆಂಬಲ ವ್ಯವಸ್ಥೆ ಕಲ್ಪಿಸಲು ಉದ್ದೇಶಿಸಲಾಗಿದೆ. ಬ್ಲಾಕ್/ಜಿಲ್ಲಾ ಮಟ್ಟದ ಮಳಿಗೆಗಳಲ್ಲಿ ರಸಗೊಬ್ಬರ ಚಿಲ್ಲರೆ ವ್ಯಾಪಾರಿಗಳ ನಿಗದಿತ ಸಾಮರ್ಥ್ಯದ ನಿರ್ಮಾಣವನ್ನು ಇದು ಖಾತ್ರಿಪಡಿಸುತ್ತವೆ..

ಪ್ರಧಾನಿ ಮಂತ್ರಿ-ಸಲ್ಫರ್ ಲೇಪಿತ ಯೂರಿಯಾದ ಹೊಸ ಬಗೆಯ-ಯೂರಿಯಾ ಗೋಲ್ಡ್ ಅನ್ನು ಬಿಡುಗಡೆ ಮಾಡಿದರು. ಸಲ್ಫರ್ ಲೇಪಿತ ಯೂರಿಯಾದ ಪರಿಚಯವು ಮಣ್ಣಿನಲ್ಲಿ ಗಂಧಕದ ಕೊರತೆಯನ್ನು ಪರಿಹರಿಸುತ್ತದೆ. ಈ ನವೀನ ರಸಗೊಬ್ಬರವು ಬೇವಿನ ಲೇಪಿತ ಯೂರಿಯಾಕ್ಕಿಂತ ಹೆಚ್ಚು ಆರ್ಥಿಕ ಮತ್ತು ಪರಿಣಾಮಕಾರಿಯಾಗಿದೆ, ಸಸ್ಯಗಳಲ್ಲಿ ಸಾರಜನಕದ ಬಳಕೆಯ ದಕ್ಷತೆಯನ್ನು ಸುಧಾರಿಸುತ್ತದೆ, ರಸಗೊಬ್ಬರದ ಬಳಕೆಯನ್ನು ಕಡಿಮೆ ಮಾಡುತ್ತದೆ ಮತ್ತು ಬೆಳೆ ಗುಣಮಟ್ಟವನ್ನು ಹೆಚ್ಚಿಸುತ್ತದೆ.

ಕಾರ್ಯಕ್ರಮದ ವೇಳೆ, ಡಿಜಿಟಲ್ ವಹಿವಾಟಿಗಾಗಿ ಮುಕ್ತ ಜಾಲ (ಒಎನ್ ಡಿಸಿ)ಯಡಿ  1600 ರೈತ ಉತ್ಪಾದಕ ಸಂಸ್ಥೆಗಳ (ಎಫ್ ಪಿಒ)ಗಳನ್ನು ವೇದಿಕೆಗೆ ತರುವುದಕ್ಕೆ ಪ್ರಧಾನಿ ಚಾಲನೆ ನೀಡಿದರು. ಒಎನ್ ಡಿಸಿ-ಡಿಜಿಟಲ್ ಮಾರ್ಕೆಟಿಂಗ್, ಆನ್‌ಲೈನ್ ಪಾವತಿ, ವ್ಯಾಪಾರ-ವ್ಯವಹಾರ (ಬಿ2ಬಿ) ಮತ್ತು ವ್ಯಾಪಾರದಿಂದ ಗ್ರಾಹಕ ವಹಿವಾಟುಗಳಿಗೆ ನೇರ ಪ್ರವೇಶದೊಂದಿಗೆ ಎಫ್ ಪಿಒ ಗಳಿಗೆ ಅಧಿಕಾರ ನೀಡುತ್ತದೆ ಮತ್ತು ಸ್ಥಳೀಯ ಮೌಲ್ಯವರ್ಧನೆಯನ್ನು ಉತ್ತೇಜಿಸುತ್ತದೆ, ಗ್ರಾಮೀಣ ಪ್ರದೇಶಗಳಲ್ಲಿ ಸರಕು ಸಾಗಾಣೆ ವ್ಯವಸ್ಥೆಯ ಅಭಿವೃದ್ಧಿಯನ್ನು ವೇಗಗೊಳಿಸುತ್ತದೆ.

ರೈತರ ಕಲ್ಯಾಣಕ್ಕಾಗಿ ಪ್ರಧಾನಿ ಅವರ ಬದ್ಧತೆಯ ಮತ್ತೊಂದು ಉದಾಹರಣೆಯನ್ನು ಪ್ರದರ್ಶಿಸುವ ಒಂದು ಭಾಗವಾಗಿ, . ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ  (ಪಿಎಂ-ಕಿಸಾನ್) ಅಡಿಯಲ್ಲಿ 14ನೇ ಕಂತಿನ ಮೊತ್ತದ ಸುಮಾರು ರೂ 17,000 ಕೋಟಿಗಳನ್ನು 8.5 ಕೋಟಿಗೂ ಅಧಿಕ ಫಲಾನುಭವಿಗಳಿಗೆ ನೇರ ನಗದು ವರ್ಗಾವಣೆಯ ಮೂಲಕ ಬಿಡುಗಡೆ ಮಾಡಲಾಗಿದೆ.

ಚಿತ್ತೋರ್‌ಗಡ್, ಧೋಲ್‌ಪುರ್, ಸಿರೋಹಿ, ಸಿಕಾರ್ ಮತ್ತು ಶ್ರೀಗಂಗಾನಗರದಲ್ಲಿ ಐದು ಹೊಸ ವೈದ್ಯಕೀಯ ಕಾಲೇಜುಗಳನ್ನು ಉದ್ಘಾಟಿಸಿದ ಪ್ರಧಾನಿ ಮತ್ತು ಬರನ್, ಬುಂಡಿ, ಕರೌಲಿ, ಜುಂಜುನು, ಸವಾಯಿ ಮಾಧೋಪುರ್, ಜೈಸಲ್ಮೇರ್‌ ಮತ್ತು ಟೋಂಕ್ ನಲ್ಲಿ ಏಳು ವೈದ್ಯಕೀಯ ಕಾಲೇಜುಗಳ ನಿರ್ಮಾಣಕ್ಕೆ ಶಂಕುಸ್ಥಾಪನೆ ಮಾಡಿರುವುದರಿಂದ ರಾಜಸ್ಥಾನವು ಆರೋಗ್ಯ ಮೂಲಸೌಕರ್ಯದಲ್ಲಿ ಪ್ರಮುಖ ವಿಸ್ತರಣೆಗೆ ಸಾಕ್ಷಿಯಾಗಲಿದೆ. ವೈದ್ಯಕೀಯ ಕಾಲೇಜುಗಳನ್ನು ಕೇಂದ್ರ ಪ್ರಾಯೋಜಿತ ಯೋಜನೆಯಡಿಯಲ್ಲಿ "ಹಾಲಿ ಅಸ್ತಿತ್ವದಲ್ಲಿರುವ ಜಿಲ್ಲಾ/ರೆಫರಲ್ ಆಸ್ಪತ್ರೆಗಳೊಂದಿಗೆ ಹೊಸ ವೈದ್ಯಕೀಯ ಕಾಲೇಜುಗಳ ಸ್ಥಾಪನೆಯನ್ನು ಸಂಯೋಜಿಸಲಾಗುತ್ತಿದೆ’’. ಪ್ರಧಾನಮಂತ್ರಿ ಅವರು ಉದ್ಘಾಟಿಸಿದ ಐದು ವೈದ್ಯಕೀಯ ಕಾಲೇಜುಗಳನ್ನು 1400 ಕೋಟಿ ರೂ.ಗೂ ಹೆಚ್ಚು ಸಂಚಿತ ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗಿದೆ, ಶಂಕುಸ್ಥಾಪನೆ ನೆರವೇರಿಸಿದ ಏಳು ವೈದ್ಯಕೀಯ ಕಾಲೇಜುಗಳನ್ನು 2275 ಕೋಟಿ ರೂ.ಗಳ ಒಟ್ಟು ವೆಚ್ಚದಲ್ಲಿ ನಿರ್ಮಿಸಲಾಗುವುದು. 2014 ರವರೆಗೆ ರಾಜಸ್ಥಾನ ರಾಜ್ಯದಲ್ಲಿ ಕೇವಲ 10 ವೈದ್ಯಕೀಯ ಕಾಲೇಜುಗಳು ಇದ್ದವು. ಕೇಂದ್ರ ಸರ್ಕಾರದ ನಿರಂತರ ಪ್ರಯತ್ನದಿಂದ ರಾಜ್ಯದಲ್ಲಿ ವೈದ್ಯಕೀಯ ಕಾಲೇಜುಗಳ ಸಂಖ್ಯೆ 35 ಕ್ಕೆ ಏರಿದೆ, ಇದು ಶೇ. 250ರಷ್ಟು ಹೆಚ್ಚಳವಾಗಿದೆ. ಈ 12 ಹೊಸ ವೈದ್ಯಕೀಯ ಕಾಲೇಜುಗಳ ಸ್ಥಾಪನೆಯಿಂದ ರಾಜ್ಯದಲ್ಲಿ ಎಂಬಿಬಿಎಸ್ ಸೀಟುಗಳ ಸಂಖ್ಯೆ 2013-14ರಲ್ಲಿ 1750 ಸೀಟುಗಳಿಂದ 6275ಕ್ಕೆ  ಏರಿಕೆಯಾಗಲಿದೆ, ಇದು ಶೇ. 258ರಷ್ಟು ಹೆಚ್ಚಳವಾಗಲಿದೆ.

ಅಲ್ಲದೆ, ಉದಯ್‌ ಪುರ, ಬನ್ಸಾವಾರ, ಪ್ರತಾಪ್ ಗಢ ಮತ್ತು ದುಂಗಾರ್ ಪುರ್ ಜಿಲ್ಲೆಗಳಲ್ಲಿ ಹೆಚ್ಚಿನ ಸಂಖ್ಯೆಯ ಬುಡಕಟ್ಟು ಜನಸಂಖ್ಯೆ ವಾಸಿಸುತ್ತಿರುವ ಹಿನ್ನೆಲೆಯಲ್ಲಿ ಅಲ್ಲಿ ಆರಂಭಿಸಿರುವ ಆರು ಏಕಲವ್ಯ ಮಾದರಿ ಶಾಲೆಗಳನ್ನು ಪ್ರಧಾನಮಂತ್ರಿ ಉದ್ಘಾಟಿಸಿದರು. ಜೋಧ್ ಪುರದ ತಿವ್ರಿಯಲ್ಲಿ ಕೇಂದ್ರೀಯ ವಿದ್ಯಾಲಯವನ್ನೂ ಸಹ ಅವರು ಉದ್ಘಾಟಿಸಿದರು.

 

ಭಾಷಣದ ಪೂರ್ಣ ಪಠ್ಯವನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
India’s 5G traffic surges 70% Y-o-Y: Nokia report

Media Coverage

India’s 5G traffic surges 70% Y-o-Y: Nokia report
NM on the go

Nm on the go

Always be the first to hear from the PM. Get the App Now!
...
PM chairs CCS Meeting to review measures being taken in the context of ongoing West Asia Conflict
April 01, 2026
Interventions across agriculture, fertilizers, shipping, aviation, logistics and MSMEs to mitigate emerging challenges discussed
Supply diversification for LPG and LNG, fuel duty reduction and power sector measures reviewed to ensure stability of essential supplies
Steps being taken to ensure stable prices of essential commodities and strict action against hoarding and black-marketing
Control Rooms set up for constant monitoring and interaction with States/UTs on prices and enforcement of Essential Commodities Act
Various efforts being taken to ensure fertilizer supply such as maintaining Urea Production and coordination with overseas suppliers for DAP/NPKS supplies
PM assesses availability of critical needs for the common man
PM discusses availability of fertilisers in the country and steps being taken to ensure its availability in the Kharif and Rabi seasons
PM directs that all efforts must be made to safeguard the citizens from the impact of this conflict
PM underlines the need for timely & smooth flow of authentic information to the public to prevent misinformation and rumour mongering
Enough coal stock exists which shall serve power needs adequately in coming months

Prime Minister Shri Narendra Modi a special of the Cabinet Committee on Security (CCS) to review measures taken by various Ministries/Departments and also discussed further initiatives to be taken in the context of the ongoing West Asia conflict, at 7 Lok Kalyan Marg today. This was the second special CCS meeting on this issue.

Cabinet Secretary briefed about the action taken to ensure supply of petroleum products, particularly LNG/LPG, and sufficient power availability. Sources are being diversified for procurement of LPG with new inflows from different countries. Similarly, Liquefied Natural Gas (LNG) is being sourced from different countries. He further briefed that LPG prices for domestic consumers have remained the same and Anti-diversion enforcement to curb hoarding and black marketing of LPG is being conducted regularly.

Initiatives have also been taken to expand Piped Natural Gas connections. Measures like exempting the gas-based power plants with a capacity of 7-8 GW from gas pooling mechanism and increasing of rake for positioning more coal at thermal power stations etc. have also been taken to ensure availability of power during the peak summer months.

Further, interventions proposed to be taken for emerging challenges in various other sectors such as agriculture, civil aviation, shipping and logistics were also discussed.

Various efforts like maintaining urea production to meet requirements, coordinating with overseas supplies for DAP/NPKS suppliers are being taken to ensure fertilizer supply. State governments are being requested to curb black marketing, hoarding, and diversion of fertilizers through daily monitoring, raids, and strict action.

The retail prices of food commodities have been stable over the past one month. Control Rooms have been set up for constant monitoring and interaction with States/UTs on prices and enforcement of Essential Commodities Act. The prices of agricultural products , vegetables and fruits are also being monitored.

Efforts to globally diversify our sources for energy, fertilizers and other supply chains, and international initiatives for securing safe passage of vessels through the strait of Hormuz and ongoing diplomatic efforts are being taken.

Enhanced coordination, real-time communication, and proactive measures across central, state, and district levels to drive effective information dissemination and public awareness amid the evolving crisis is being undertaken.

Prime Minister assessed the availability of critical needs for the common man. He discussed availability of fertilisers in the country and steps being taken to ensure its availability in the Kharif and Rabi seasons. He said that all efforts must be made to safeguard the citizens from the impact of this conflict. Prime Minister also emphasised smooth flow of authentic information to the public to prevent misinformation and rumour mongering.

Prime Minister directed all concerned departments to take all possible measures to ameliorate the problems of citizens and sectors affected by the ongoing global situation.