ಜಲ ಜೀವನ ಅಭಿಯಾನದ ಅಡಿಯಲ್ಲಿ ಯಾದಗಿರಿ ಬಹುಗ್ರಾಮ ಕುಡಿಯುವ ನೀರು ಸರಬರಾಜು ಯೋಜನೆಗೆ ಶಂಕುಸ್ಥಾಪನೆ
ನಾರಾಯಣಪುರ ಎಡದಂಡೆ ಕಾಲುವೆ - ವಿಸ್ತರಣೆ ನವೀಕರಣ ಮತ್ತು ಆಧುನೀಕರಣ ಯೋಜನೆಯ ಉದ್ಘಾಟನೆ
ರಾಷ್ಟ್ರೀಯ ಹೆದ್ದಾರಿ 150 ಸಿ ಯಲ್ಲಿ ಬಡದಲ್ ದಿಂದ ಮರಡಗಿ ಎಸ್ ಆಂದೋಲಾವರೆಗಿನ ಷಟ್ಪಥದ ಪ್ರವೇಶ ನಿಯಂತ್ರಿತ ಹಸಿರು ವಲಯ ಹೆದ್ದಾರಿಯ 65.5 ಕಿ.ಮೀ ವಿಭಾಗಕ್ಕೆ ಶಂಕುಸ್ಥಾಪನೆ
ಈ ಅಮೃತ ಕಾಲದಲ್ಲಿ ನಾವು ವಿಕಸಿತ ಭಾರತವನ್ನು ನಿರ್ಮಿಸಬೇಕಾಗಿದೆ
ಅಭಿವೃದ್ಧಿಯ ಮಾನದಂಡಗಳಲ್ಲಿ ದೇಶದ ಒಂದು ಜಿಲ್ಲೆ ಹಿಂದುಳಿದರೂ, ವಿಕಸಿತ ದೇಶವಾಗಲು ಸಾಧ್ಯವಿಲ್ಲ"
ಅದು ಶಿಕ್ಷಣವೇ ಇರಲಿ, ಆರೋಗ್ಯವೇ ಆಗಿರಲಿ ಅಥವಾ ಸಂಪರ್ಕವಾಗಿರಲಿ, ಅಭಿವೃದ್ಧಿ ಆಕಾಂಕ್ಷೆಯ ಜಿಲ್ಲೆಗಳ ಕಾರ್ಯಕ್ರಮದ ಅಗ್ರ 10 ಕಾರ್ಯ ನಿರ್ವಹಣೆದಾರರಲ್ಲಿ ಯಾದಗಿರಿ ಒಂದಾಗಿದೆ"
ಡಬಲ್ ಎಂಜಿನ್ ಸರ್ಕಾರವು ಮನ್ನಣೆ ಮತ್ತು ಕ್ರೋಡೀಕರಣದ ವಿಧಾನದೊಂದಿಗೆ ಕಾರ್ಯನಿರ್ವಹಿಸುತ್ತಿದೆ"
“ಯಾದಗಿರಿಯ ಸುಮಾರು 1.25 ಲಕ್ಷ ರೈತ ಕುಟುಂಬಗಳು ಪಿಎಂ ಕಿಸಾನ್ ನಿಧಿಯಿಂದ ಸುಮಾರು 250 ಕೋಟಿ ರೂ. ಪಡೆದಿದ್ದಾರೆ”
"ದೇಶದ ಕೃಷಿ ನೀತಿಯಲ್ಲಿ ಸಣ್ಣ ರೈತರು ಅತಿದೊಡ್ಡ ಆದ್ಯತೆಯಾಗಿದ್ದಾರೆ"
ಡಬಲ್ ಇಂಜಿನ್ ಸರ್ಕಾರ ಮೂಲಸೌಕರ್ಯ ಮತ್ತು ಸುಧಾರಣೆಗಳ ಮೇಲೆ ಗಮನ ಹರಿಸಿದ್ದು, ಕರ್ನಾಟಕವನ್ನು ಹೂಡಿಕೆದಾರರ ಆಯ್ಕೆಯನ್ನಾಗಿ ಪರಿವರ್ತಿಸುತ್ತಿದೆ"

ಕರ್ನಾಟಕದ ಯಾದಗಿರಿ ಜಿಲ್ಲೆಯ ಕೊಡೇಕಲ್ ನಲ್ಲಿ ಪ್ರಧಾನಮಂತ್ರಿಯವರಿಂದು ನೀರಾವರಿ, ಕುಡಿಯುವ ನೀರು ಮತ್ತು ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಯೋಜನೆಗೆ ಸಂಬಂಧಿಸಿದ ವಿವಿಧ ಅಭಿವೃದ್ಧಿ ಯೋಜನೆಗಳ ಲೋಕಾರ್ಪಣೆ ಮತ್ತು  ಶಂಕುಸ್ಥಾಪನೆ ನೆರವೇರಿಸಿದರು. ಇದರಲ್ಲಿ ಜಲ ಜೀವನ ಅಭಿಯಾನದ ಅಡಿಯಲ್ಲಿ ಯಾದಗಿರಿ ಬಹುಗ್ರಾಮ ಕುಡಿಯುವ ನೀರು ಸರಬರಾಜು ಯೋಜನೆ ಮತ್ತು ಸೂರತ್ -ಚೆನ್ನೈ ಎಕ್ಸ್ ಪ್ರೆಸ್ ಮಾರ್ಗ ರಾ.ಹೆ. -150 ಸಿ ಯ 65.5 ಕಿ.ಮೀ ವಿಭಾಗಕ್ಕೆ (ಬಡದಲ್ ನಿಂದ ಮರಡಗಿ ಎಸ್ ಆಂದೋಲಾ) ಶಂಕುಸ್ಥಾಪನೆ ನೆರವೇರಿಸಿ, ನಾರಾಯಣಪುರ ಎಡದಂಡೆ ಕಾಲುವೆ - ವಿಸ್ತರಣೆ ನವೀಕರಣ ಮತ್ತು ಆಧುನೀಕರಣ ಯೋಜನೆ (ಎನ್ ಎಲ್ ಬಿಸಿ - ಇಆರ್ ಎಂ) ಉದ್ಘಾಟನೆಯೂ ಸೇರಿದೆ.

ಸಭಿಕರನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿಯವರು, ಕರ್ನಾಟಕದ ಜನತೆಯ ಪ್ರೀತಿ ಮತ್ತು ಬೆಂಬಲದ ಬಗ್ಗೆ ಪ್ರಸ್ತಾಪಿಸಿ, ಅದು ದೊಡ್ಡ ಶಕ್ತಿಯ ಮೂಲವಾಗಿ ಮಾರ್ಪಟ್ಟಿದೆ ಎಂದರು. ಯಾದಗಿರಿಯ ಶ್ರೀಮಂತ ಇತಿಹಾಸದ ಮೇಲೆ ಬೆಳಕು ಚೆಲ್ಲಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು, ರಟ್ಟೀಹಳ್ಳಿಯ ಪ್ರಾಚೀನ ಕೋಟೆಯು ನಮ್ಮ ಪೂರ್ವಜರ ಸಾಮರ್ಥ್ಯಗಳ ಸಂಕೇತವಾಗಿದ್ದು, ನಮ್ಮ ಸಂಸ್ಕೃತಿ ಮತ್ತು ಸಂಪ್ರದಾಯಗಳನ್ನು ಪ್ರತಿಬಿಂಬಿಸುತ್ತದೆ ಎಂದರು. ಮಹಾರಾಜ ವೆಂಕಟಪ್ಪ ನಾಯಕ ಅವರ ಪರಂಪರೆಯನ್ನು ಅವರು ಉಲ್ಲೇಖಿಸಿ, ಸ್ವರಾಜ್ಯ ಮತ್ತು ಉತ್ತಮ ಆಡಳಿತದ ಅವರ ಕಲ್ಪನೆ ದೇಶಾದ್ಯಂತ ಖ್ಯಾತವಾಗಿದೆ ಎಂದರು. "ಈ ಪರಂಪರೆಯ ಬಗ್ಗೆ ನಾವೆಲ್ಲರೂ ಹೆಮ್ಮೆ ಪಡುತ್ತೇವೆ" ಎಂದು ಪ್ರಧಾನಮಂತ್ರಿ ಹೇಳಿದರು.

 

ಇಂದು ಲೋಕಾರ್ಪಣೆಯಾದ ಅಥವಾ ಶಂಕುಸ್ಥಾಪನೆ ನೆರವೇರಿದ ರಸ್ತೆಗಳು ಮತ್ತು ನೀರಿಗೆ ಸಂಬಂಧಿಸಿದ ಯೋಜನೆಗಳ ಬಗ್ಗೆ ಉಲ್ಲೇಖಿಸಿದ ಪ್ರಧಾನಮಂತ್ರಿಯವರು, ಈ ಯೋಜನೆಗಳು ಈ ಪ್ರದೇಶದ ಜನರಿಗೆ ಭಾರಿ ಪ್ರಯೋಜನಗಳನ್ನು ತರಲಿವೆ ಎಂದರು. ಸೂರತ್ - ಚೆನ್ನೈ ಕಾರಿಡಾರ್ ನ ಕರ್ನಾಟಕ ಭಾಗದ ಕಾಮಗಾರಿ  ಇಂದು ಪ್ರಾರಂಭವಾಯಿತು, ಇದು ಯಾದಗಿರಿ, ರಾಯಚೂರು ಮತ್ತು ಕಲ್ಬುರ್ಗಿ ಸೇರಿದಂತೆ ಈ ಪ್ರದೇಶದಲ್ಲಿ ಸುಗಮ ಜೀವನವನ್ನು ಕಲ್ಪಿಸುತ್ತದೆ ಮತ್ತು ಉದ್ಯೋಗ ಹಾಗೂ ಆರ್ಥಿಕ ಚಟುವಟಿಕೆಗೆ ಸಹಾಯ ಮಾಡುತ್ತದೆ. ಉತ್ತರ ಕರ್ನಾಟಕದ ಅಭಿವೃದ್ಧಿ ಕಾರ್ಯಗಳಿಗಾಗಿ ರಾಜ್ಯ ಸರ್ಕಾರವನ್ನು ಪ್ರಧಾನಮಂತ್ರಿ ಶ್ಲಾಘಿಸಿದರು.

ಮುಂಬರುವ 25 ವರ್ಷಗಳು ದೇಶಕ್ಕೆ ಮತ್ತು ಪ್ರತಿ ರಾಜ್ಯಕ್ಕೂ 'ಅಮೃತ ಕಾಲ'ವಾಗಿದೆ ಎಂದು ಪ್ರಧಾನಮಂತ್ರಿ ನೆನಪಿಸಿದರು. "ಈ ಅಮೃತ ಕಾಲದ ಸಮಯದಲ್ಲಿ ನಾವು ವಿಕಸಿತ ಭಾರತವನ್ನು ರೂಪಿಸಬೇಕಾಗಿದೆ. ಪ್ರತಿಯೊಬ್ಬ ವ್ಯಕ್ತಿ, ಕುಟುಂಬ ಮತ್ತು ರಾಜ್ಯವು ಈ ಅಭಿಯಾನದೊಂದಿಗೆ ಸಂಬಂಧ ಹೊಂದಿದಾಗ ಮಾತ್ರ ಇದು ಸಂಭವಿಸುತ್ತದೆ. ಕ್ಷೇತ್ರದಲ್ಲಿ ರೈತ ಮತ್ತು ಉದ್ಯಮಿಯ ಜೀವನ ಸುಧಾರಿಸಿದಾಗ ಭಾರತ ಅಭಿವೃದ್ಧಿಹೊಂದುತ್ತದೆ. ಉತ್ತಮ ಇಳುವರಿ ಇದ್ದಾಗ ಭಾರತ ಅಭಿವೃದ್ಧಿಯಾಗುತ್ತದೆ, ಮತ್ತು ಕಾರ್ಖಾನೆಯ ಉತ್ಪಾದನೆಯೂ ವಿಸ್ತರಣೆಯಾಗುತ್ತದೆ. ಇದಕ್ಕೆ ಹಿಂದಿನ ನಕಾರಾತ್ಮಕ ಅನುಭವಗಳು ಮತ್ತು ಕೆಟ್ಟ ನೀತಿಗಳಿಂದ ಪಾಠ ಕಲಿಯುವ ಅಗತ್ಯವಿದೆ" ಎಂದು ಅವರು ಹೇಳಿದರು. ಉತ್ತರ ಕರ್ನಾಟಕದ ಯಾದಗಿರಿಯ ಉದಾಹರಣೆಯನ್ನು ನೀಡಿದ ಪ್ರಧಾನಮಂತ್ರಿಯವರು, ಅಭಿವೃದ್ಧಿಯ ಪಥದಲ್ಲಿ ಈ ಪ್ರದೇಶವು ಹಿಂದುಳಿದಿದೆ ಎಂದು ವಿಷಾದಿಸಿದರು.

 

ಈ ಪ್ರದೇಶವು ಸಾಮರ್ಥ್ಯವನ್ನು ಹೊಂದಿದ್ದರೂ, ಹಿಂದಿನ ಸರ್ಕಾರಗಳು ಯಾದಗಿರಿ ಮತ್ತು ಅಂತಹ ಇತರ ಜಿಲ್ಲೆಗಳನ್ನು ಹಿಂದುಳಿದ ಜಿಲ್ಲೆ ಎಂದು ಘೋಷಿಸುವ ಮೂಲಕ ತಮ್ಮನ್ನು ಮುಕ್ತಗೊಳಿಸಿಕೊಂಡವು ಎಂದು ಪ್ರಧಾನಮಂತ್ರಿ ಹೇಳಿದರು. ಹಿಂದಿನ ಆಡಳಿತಾರೂಢ ಸರ್ಕಾರಗಳು ವೋಟ್ ಬ್ಯಾಂಕ್ ರಾಜಕೀಯದಲ್ಲಿ ತೊಡಗಿದ್ದ ಸಮಯವನ್ನು ಅವರು ಸ್ಮರಿಸಿ, ವಿದ್ಯುತ್, ರಸ್ತೆ ಮತ್ತು ನೀರಿನಂತಹ ಮೂಲಭೂತ ಸೌಕರ್ಯಗಳ ಬಗ್ಗೆ ಗಮನ ಹರಿಸಲಿಲ್ಲ ಎಂದರು. ಪ್ರಸ್ತುತ ಸರ್ಕಾರದ ಆದ್ಯತೆಗಳನ್ನು ಒತ್ತಿ ಹೇಳಿದ ಪ್ರಧಾನಮಂತ್ರಿಯವರು, ಅದರ ಗಮನ ಕೇವಲ ಅಭಿವೃದ್ಧಿಯ ಮೇಲಿದೆಯೇ ಹೊರತು ವೋಟ್ ಬ್ಯಾಂಕ್ ರಾಜಕೀಯದ ಮೇಲಲ್ಲ ಎಂದರು. "ಅಭಿವೃದ್ಧಿಯ ಮಾನದಂಡಗಳಲ್ಲಿ ದೇಶದ ಒಂದು ಜಿಲ್ಲೆ ಹಿಂದುಳಿದರೂ, ದೇಶವು ಅಭಿವೃದ್ಧಿ ಹೊಂದಲು ಸಾಧ್ಯವಿಲ್ಲ" ಎಂದು ಪ್ರಧಾನಮಂತ್ರಿ ಹೇಳಿದರು. ಪ್ರಸ್ತುತ ಸರ್ಕಾರವು ಅತ್ಯಂತ ಹಿಂದುಳಿದ ಪ್ರದೇಶಗಳಿಗೆ ಆದ್ಯತೆ ನೀಡಿದ್ದು, ಯಾದಗಿರಿ ಸೇರಿದಂತೆ ನೂರು ಅಭಿವೃದ್ಧಿ ಆಕಾಂಕ್ಷೆಯ ಗ್ರಾಮಗಳ ಅಭಿಯಾನವನ್ನು ಪ್ರಾರಂಭಿಸಿದೆ ಎಂದು ಅವರು ಉಲ್ಲೇಖಿಸಿದರು. ಯಾದಗಿರಿ ಜಿಲ್ಲೆಯಲ್ಲಿ ಶೇ.100ರಷ್ಟು ಮಕ್ಕಳಿಗೆ ಲಸಿಕೆ ಹಾಕಲಾಗಿದೆ, ಅಪೌಷ್ಟಿಕತೆಯಿಂದ ಬಳಲುತ್ತಿರುವ ಮಕ್ಕಳ ಸಂಖ್ಯೆ ಗಣನೀಯವಾಗಿ ತಗ್ಗಿದೆ, ಜಿಲ್ಲೆಯ ಎಲ್ಲ ಗ್ರಾಮಗಳು ರಸ್ತೆಗಳ ಮೂಲಕ ಸಂಪರ್ಕ ಹೊಂದಿವೆ ಮತ್ತು ಡಿಜಿಟಲ್ ಸೇವೆಗಳನ್ನು ಒದಗಿಸಲು ಗ್ರಾಮ ಪಂಚಾಯಿತಿಗಳಲ್ಲಿ ಸಾಮಾನ್ಯ ಸೇವಾ ಕೇಂದ್ರಗಳ ಸೇವೆ ಲಭ್ಯವಿದೆ ಎಂದು ಪ್ರಧಾನಮಂತ್ರಿ ತಿಳಿಸಿದರು. "ಶಿಕ್ಷಣವೇ ಇರಲಿ, ಆರೋಗ್ಯವೇ ಆಗಿರಲಿ ಅಥವಾ ಸಂಪರ್ಕ ಯಾವುದೇ ಇರಲಿ, ಅಭಿವೃದ್ಧಿ ಆಕಾಂಕ್ಷೆಯ ಜಿಲ್ಲೆಗಳ ಕಾರ್ಯಕ್ರಮದ ಅಗ್ರ 10 ಕಾರ್ಯ ನಿರ್ವಹಣೆದಾರರಲ್ಲಿ ಯಾದಗಿರಿ ಕೂಡ ಒಂದಾಗಿದೆ" ಎಂದು ಪ್ರಧಾನಮಂತ್ರಿ ಹೇಳಿದರು. ಜನ ಪ್ರತಿನಿಧಿಗಳು ಮತ್ತು ಜಿಲ್ಲಾಡಳಿತದ ಗಮನಾರ್ಹ ಸಾಧನೆಗಳನ್ನು ಪ್ರಧಾನಮಂತ್ರಿಯವರು ಅಭಿನಂದಿಸಿದರು.

21 ನೇ ಶತಮಾನದ ಭಾರತದ ಅಭಿವೃದ್ಧಿಗೆ ಜಲ ಭದ್ರತೆಯ ಮಹತ್ವವನ್ನು ಪ್ರತಿಪಾದಿಸಿದ ಪ್ರಧಾನಮಂತ್ರಿ, ಇದು ಗಡಿ, ಕರಾವಳಿ ಮತ್ತು ಆಂತರಿಕ ಭದ್ರತೆಗೆ ಸಮನಾಗಿ ನಿಂತಿದೆ ಎಂದು ಹೇಳಿದರು. ಡಬಲ್ ಎಂಜಿನ್ ಸರ್ಕಾರ ಮನ್ನಣೆ ಮತ್ತು ಕ್ರೋಡೀಕರಣದ ವಿಧಾನದೊಂದಿಗೆ ಕಾರ್ಯ ನಿರ್ವಹಿಸುತ್ತಿದ್ದು, 2014ರಲ್ಲಿ ಬಾಕಿ ಉಳಿದಿದ್ದ 99 ನೀರಾವರಿ ಯೋಜನೆಗಳ ಪೈಕಿ ಈಗಾಗಲೇ 50 ಪೂರ್ಣಗೊಂಡಿದ್ದು, ಯೋಜನೆಗಳನ್ನು ವಿಸ್ತರಿಸಲಾಗಿದೆ ಎಂದು ತಿಳಿಸಿದರು. ಕರ್ನಾಟಕದಲ್ಲೂ ಇಂತಹ ಅನೇಕ ಯೋಜನೆಗಳು ನಡೆಯುತ್ತಿವೆ. ನಾರಾಯಣಪುರ ಎಡದಂಡೆ ಕಾಲುವೆ - ವಿಸ್ತರಣೆ ನವೀಕರಣ ಮತ್ತು ಆಧುನೀಕರಣ ಯೋಜನೆ (ಎನ್ಎಲ್ಬಿಸಿ- ಇಆರ್.ಎಂ) 10,000 ಕ್ಯೂಸೆಕ್ ನೀರು ಸಾಗಿಸುವ ಸಾಮರ್ಥ್ಯದ ಕಾಲುವೆಯಾಗಿದ್ದು, 4.5 ಲಕ್ಷ ಹೆಕ್ಟೇರ್ ಜಲಾನಯನ ಪ್ರದೇಶಕ್ಕೆ ನೀರಾವರಿ ಸೌಕರ್ಯ ಕಲ್ಪಿಸುತ್ತದೆ ಎಂದು ಅವರು ಮಾಹಿತಿ ನೀಡಿದರು. ಕಳೆದ 7-8 ವರ್ಷಗಳಲ್ಲಿ 70 ಲಕ್ಷ ಹೆಕ್ಟೇರ್ ಗಿಂತಲೂ ಹೆಚ್ಚು ಭೂಮಿಯನ್ನು ಸೂಕ್ಷ್ಮ ನೀರಾವರಿ ವ್ಯಾಪ್ತಿಗೆ ತಂದಿರುವ, ಸೂಕ್ಷ್ಮ ನೀರಾವರಿ ಮತ್ತು 'ಪ್ರತಿ ಹನಿ ಹೆಚ್ಚು ಬೆಳೆ'ಯ ಮೇಲೆ ಅಭೂತಪೂರ್ವ ಗಮನ ಹರಿಸಿರುವ ಬಗ್ಗೆಯೂ ಶ್ರೀ ಮೋದಿ ಮಾತನಾಡಿದರು. ಇಂದಿನ ಯೋಜನೆಯು ಕರ್ನಾಟಕದ 5 ಲಕ್ಷ ಹೆಕ್ಟೇರ್ ಭೂಮಿಗೆ ಪ್ರಯೋಜನವನ್ನು ನೀಡುತ್ತದೆ ಮತ್ತು ಅಂತರ್ಜಲ ಮಟ್ಟವನ್ನು ಹೆಚ್ಚಿಸುವ ಕೆಲಸ ನಡೆಯುತ್ತಿದೆ ಎಂದು ಅವರು ಮಾಹಿತಿ ನೀಡಿದರು. 

ಡಬಲ್ ಇಂಜಿನ್ ಸರ್ಕಾರದಲ್ಲಿ ಸಾಧಿಸಲಾದ ಕಾರ್ಯಗಳ ಉದಾಹರಣೆ ನೀಡಿದ ಪ್ರಧಾನಮಂತ್ರಿಯವರು, ಮೂರೂವರೆ ವರ್ಷಗಳ ಹಿಂದೆ ಜಲ ಜೀವನ ಅಭಿಯಾನ ಪ್ರಾರಂಭವಾದಾಗ, ಹದಿನೆಂಟು ಕೋಟಿ ಗ್ರಾಮೀಣ ಕುಟುಂಬಗಳ ಪೈಕಿ ಕೇವಲ ಮೂರು ಕೋಟಿ ಗ್ರಾಮೀಣ ಕುಟುಂಬಗಳು ಮಾತ್ರ ಕೊಳವೆ ನೀರಿನ ಸಂಪರ್ಕವನ್ನು ಹೊಂದಿದ್ದವು. "ಇಂದು ಆ ಸಂಖ್ಯೆ ಹನ್ನೊಂದು ಕೋಟಿ ಗ್ರಾಮೀಣ ಕುಟುಂಬಗಳಿಗೆ ಏರಿದೆ", "ಈ ಪೈಕಿ ಮೂವತ್ತೈದು ಲಕ್ಷ ಕುಟುಂಬಗಳು ಕರ್ನಾಟಕದಲ್ಲಿವೆ" ಎಂದು ಪ್ರಧಾನಮಂತ್ರಿ ಹೇಳಿದರು. ಯಾದಗಿರಿ ಮತ್ತು ರಾಯಚೂರಿನಲ್ಲಿ ಪ್ರತಿ ಮನೆಗೆ ನೀರಿನ ಪೂರೈಕೆ ವ್ಯಾಪ್ತಿಯು ಕರ್ನಾಟಕ ಮತ್ತು ದೇಶದ ಒಟ್ಟಾರೆ ಸರಾಸರಿಗಿಂತ ಹೆಚ್ಚಾಗಿದೆ ಎಂದು ಅವರು ಉಲ್ಲೇಖಿಸಿದರು.

 

ಇಂದು ಉದ್ಘಾಟಿಸಲಾದ ಯೋಜನೆಗಳ ಬಗ್ಗೆ ಬೆಳಕು ಚೆಲ್ಲಿದ ಪ್ರಧಾನಮಂತ್ರಿಯವರು, ಯಾದಗಿರಿಯ ಪ್ರತಿಯೊಂದು ಮನೆಗೂ ನಲ್ಲಿ ನೀರು  ಒದಗಿಸುವ ಗುರಿಗೆ ಉತ್ತೇಜನ ದೊರೆಯಲಿದೆ ಎಂದು ಒತ್ತಿ ಹೇಳಿದರು. ಭಾರತದ ಜಲ ಜೀವನ ಅಭಿಯಾನದ ಪರಿಣಾಮದಿಂದಾಗಿ ಪ್ರತಿವರ್ಷ 1.25 ಲಕ್ಷಕ್ಕೂ ಹೆಚ್ಚು ಮಕ್ಕಳ ಜೀವಗಳನ್ನು ಉಳಿಸಲಾಗುತ್ತಿದೆ ಎಂದು ಅಧ್ಯಯನವು ಬಹಿರಂಗಪಡಿಸಿದೆ ಎಂದು ಅವರು ಮಾಹಿತಿ ನೀಡಿದರು. ಹರ್ ಘರ್ ಜಲ್ ಅಭಿಯಾನದ ಪ್ರಯೋಜನಗಳನ್ನು ಉಲ್ಲೇಖಿಸಿದ ಪ್ರಧಾನಮಂತ್ರಿಯವರು, ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ಕೇಂದ್ರ ಸರ್ಕಾರವು ರೈತರಿಗೆ ವಾರ್ಷಿಕ 6,000 ರೂ.ಗಳನ್ನು ನೀಡುತ್ತದೆ ಮತ್ತು ಕರ್ನಾಟಕ ಸರ್ಕಾರವು ಇನ್ನೂ 4,000 ರೂ.ಗಳನ್ನು ಇದಕ್ಕೆ ಸೇರಿಸಿದೆ, ಇದು ರೈತರಿಗೆ ಪ್ರಯೋಜನಗಳನ್ನು ದುಪ್ಪಟ್ಟುಗೊಳಿಸುತ್ತದೆ ಎಂದು ಒತ್ತಿ ಹೇಳಿದರು. "ಯಾದಗಿರಿಯ ಸುಮಾರು 1.25 ಲಕ್ಷ ರೈತ ಕುಟುಂಬಗಳು ಪಿಎಂ ಕಿಸಾನ್ ನಿಧಿಯಿಂದ ಸುಮಾರು 250 ಕೋಟಿ ರೂ.ಗಳನ್ನು ಪಡೆದಿವೆ" ಎಂದು ಪ್ರಧಾನಮಂತ್ರಿ ಹೇಳಿದರು.

ಡಬಲ್ ಇಂಜಿನ್ ಸರ್ಕಾರದ ಲಯವನ್ನು ಮತ್ತಷ್ಟು ವಿವರಿಸಿದ ಪ್ರಧಾನಮಂತ್ರಿಯವರು, ಕೇಂದ್ರವು ಹೊಸ ಶಿಕ್ಷಣ ನೀತಿಯನ್ನು ಪ್ರಾರಂಭಿಸುತ್ತಿದ್ದಂತೆ, ಕರ್ನಾಟಕ ಸರ್ಕಾರವು ವಿದ್ಯಾ ನಿಧಿ ಯೋಜನೆಗಳ ಮೂಲಕ ಬಡ ವಿದ್ಯಾರ್ಥಿಗಳಿಗೆ ಸಹಾಯ ಮಾಡುತ್ತಿದೆ, ಏಕೆಂದರೆ ಕೇಂದ್ರವು ಪ್ರಗತಿಯ ಚಕ್ರವನ್ನು ಉರುಳಿಸುತ್ತಿದೆ, ಕರ್ನಾಟಕವು ಹೂಡಿಕೆದಾರರಿಗೆ ರಾಜ್ಯವನ್ನು ಆಕರ್ಷಕವಾಗಿಸುತ್ತಿದೆ ಎಂದರು. ಕರ್ನಾಟಕ ಸರ್ಕಾರವು ಮುದ್ರಾ ಯೋಜನೆಯಡಿ ನೇಕಾರರಿಗೆ ಹೆಚ್ಚಿನ ನೆರವು ನೀಡುವ ಮೂಲಕ ಕೇಂದ್ರದ ನೆರವನ್ನು ಹೆಚ್ಚಿಸುತ್ತದೆ ಎಂದು ಅವರು ಹೇಳಿದರು.

 

ಸ್ವಾತಂತ್ರ್ಯ ಬಂದು ಇಷ್ಟು ವರ್ಷಗಳ ನಂತರವೂ ಯಾವುದೇ ವ್ಯಕ್ತಿ, ವರ್ಗ ಅಥವಾ ಪ್ರದೇಶವು ವಂಚಿತವಾಗಿದ್ದರೆ, ಪ್ರಸ್ತುತ ಸರ್ಕಾರ ಅವರಿಗೆ ಗರಿಷ್ಠ ಆದ್ಯತೆ ನೀಡುತ್ತದೆ ಎಂದು ಪ್ರಧಾನಮಂತ್ರಿ ಒತ್ತಿ ಹೇಳಿದರು. ನಮ್ಮ ದೇಶದ ಕೋಟ್ಯಂತರ ಸಣ್ಣ ರೈತರು ದಶಕಗಳಿಂದ ಪ್ರತಿಯೊಂದು ಸೌಕರ್ಯದಿಂದ ವಂಚಿತರಾಗಿದ್ದರು ಆದರೆ ಸರ್ಕಾರದ ನೀತಿಗಳಲ್ಲಿಯೂ ಯಾವುದೇ ಪ್ರಯತ್ನವನ್ನು ಮಾಡಲಾಗಲಿಲ್ಲ ಎಂದು ಅವರು ಉಲ್ಲೇಖಿಸಿದರು. ಇಂದು ಈ ಸಣ್ಣ ರೈತರು ದೇಶದ ಕೃಷಿ ನೀತಿಯ ಅತಿ ದೊಡ್ಡ ಆದ್ಯತೆಯಾಗಿದ್ದಾರೆ ಎಂದು ಪ್ರಧಾನಮಂತ್ರಿ ಪ್ರತಿಪಾದಿಸಿದರು. ಯಂತ್ರೋಪಕರಣಗಳಿಗಾಗಿ ರೈತರಿಗೆ ಸಹಾಯ ಮಾಡುವುದು, ಡ್ರೋನ್ ಗಳಂತಹ ಆಧುನಿಕ ತಂತ್ರಜ್ಞಾನದತ್ತ ಅವರನ್ನು ಕರೆದೊಯ್ಯುವುದು, ನ್ಯಾನೊ ಯೂರಿಯಾದಂತಹ ರಾಸಾಯನಿಕ ಗೊಬ್ಬರಗಳನ್ನು ಒದಗಿಸುವುದು, ನೈಸರ್ಗಿಕ ಕೃಷಿಗೆ ಪ್ರೋತ್ಸಾಹ, ಸಣ್ಣ ರೈತರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್ ಗಳನ್ನು ನೀಡುವುದು ಮತ್ತು ಪಶುಸಂಗೋಪನೆ, ಮೀನುಗಾರಿಕೆ ಮತ್ತು ಜೇನು ಸಾಕಾಣಿಕೆಯನ್ನು ಬೆಂಬಲಿಸುತ್ತಿರುವ ಉದಾಹರಣೆಗಳನ್ನು ಪ್ರಧಾನಮಂತ್ರಿ ನೀಡಿದರು.

 

ಈ ಪ್ರದೇಶವನ್ನು ದ್ವಿದಳ ಧಾನ್ಯದ ಕಣಜವನ್ನಾಗಿ ಮಾಡಿದ್ದಕ್ಕಾಗಿ ಮತ್ತು ಈ ವಲಯದಲ್ಲಿ ವಿದೇಶಿ ಅವಲಂಬನೆಯನ್ನು ಕಡಿಮೆ ಮಾಡಲು ದೇಶಕ್ಕೆ ನೆರವಾಗಿದ್ದಕ್ಕಾಗಿ ಸ್ಥಳೀಯ ರೈತರನ್ನು ಪ್ರಧಾನಮಂತ್ರಿ ಶ್ಲಾಘಿಸಿದರು. ಕಳೆದ 8 ವರ್ಷಗಳಲ್ಲಿ ಎಂಎಸ್.ಪಿ. ಅಡಿಯಲ್ಲಿ 80 ಪಟ್ಟು ಹೆಚ್ಚು ಬೇಳೆಕಾಳುಗಳನ್ನು ಖರೀದಿಸಲಾಗಿದೆ ಎಂದು ಅವರು ಮಾಹಿತಿ ನೀಡಿದರು. 2014ಕ್ಕೆ ಮೊದಲು ಕೆಲವೇ ನೂರು ಕೋಟಿ ರೂ. ಪಡೆದಿದ್ದ  ದ್ವಿದಳ ಧಾನ್ಯ ಬೆಳೆಯುವ ರೈತರು ಕಳೆದ 8 ವರ್ಷಗಳಲ್ಲಿ 60 ಸಾವಿರ ಕೋಟಿ ರೂಪಾಯಿಗೂ ಅಧಿಕ ಹಣ ಪಡೆದಿದ್ದಾರೆ ಎಂದರು. 

ವಿಶ್ವಸಂಸ್ಥೆಯು 2023ನ್ನು ಅಂತಾರಾಷ್ಟ್ರೀಯ ಸಿರಿಧಾನ್ಯಗಳ ವರ್ಷವೆಂದು ಘೋಷಿಸಿದೆ ಎಂದು ತಿಳಿಸಿದ ಪ್ರಧಾನಮಂತ್ರಿಯವರು, ಕರ್ನಾಟಕದಲ್ಲಿ ಜೋಳ ಮತ್ತು ರಾಗಿಯಂತಹ ಸಿರಿ ಧಾನ್ಯಗಳನ್ನು ಹೇರಳವಾಗಿ ಬೆಳೆಯಲಾಗುತ್ತಿದೆ ಎಂದರು. ಈ ಪೌಷ್ಟಿಕ ಸಿರಿ ಧಾನ್ಯದ ಉತ್ಪಾದನೆಯನ್ನು ಹೆಚ್ಚಿಸಲು ಮತ್ತು ಅದನ್ನು ವಿಶ್ವಾದ್ಯಂತ ಉತ್ತೇಜಿಸಲು ಡಬಲ್ ಎಂಜಿನ್ ಸರ್ಕಾರ ಬದ್ಧವಾಗಿದೆ ಎಂದು ಅವರು ಒತ್ತಿ ಹೇಳಿದರು. ಈ ಉಪಕ್ರಮವನ್ನು ಮುನ್ನಡೆಸುವಲ್ಲಿ ಕರ್ನಾಟಕದ ರೈತರು ಪ್ರಮುಖ ಪಾತ್ರ ವಹಿಸುತ್ತಾರೆ ಎಂಬ ವಿಶ್ವಾಸವನ್ನು ಪ್ರಧಾನಮಂತ್ರಿ ವ್ಯಕ್ತಪಡಿಸಿದರು.

ಕರ್ನಾಟಕದಲ್ಲಿ ಸಂಪರ್ಕದ ವಿಷಯಕ್ಕೆ ಬಂದಾಗ ಡಬಲ್ ಎಂಜಿನ್ ಸರ್ಕಾರದ ಪ್ರಯೋಜನಗಳನ್ನು ಉಲ್ಲೇಖಿಸಿದ ಪ್ರಧಾನಮಂತ್ರಿಯವರು, ಇದು ಕೃಷಿ, ಕೈಗಾರಿಕೆ ಮತ್ತು ಪ್ರವಾಸೋದ್ಯಮ ವಲಯಕ್ಕೆ ಸಮಾನವಾಗಿ ಮುಖ್ಯವಾಗಿದೆ ಮತ್ತು ಸೂರತ್-ಚೆನ್ನೈ ಆರ್ಥಿಕ ಕಾರಿಡಾರ್ ಪೂರ್ಣಗೊಂಡ ನಂತರ ಉತ್ತರ ಕರ್ನಾಟಕದ ಹೆಚ್ಚಿನ ಭಾಗಗಳಿಗೆ ಆಗುವ ಪ್ರಯೋಜನಗಳನ್ನು ಪ್ರತಿಪಾದಿಸಿದರು. ಆಗ ದೇಶವಾಸಿಗಳಿಗೆ ಉತ್ತರ ಕರ್ನಾಟಕದ ಪ್ರವಾಸಿ ತಾಣಗಳು ಮತ್ತು ಯಾತ್ರಾ ಸ್ಥಳಗಳನ್ನು ಸುಲಭವಾಗಿ ತಲುಪಲು ಸಾಧ್ಯವಾಗುತ್ತದೆ, ಇದರಿಂದಾಗಿ ಯುವಕರಿಗೆ ಸಾವಿರಾರು ಹೊಸ ಉದ್ಯೋಗ ಮತ್ತು ಸ್ವಯಂ ಉದ್ಯೋಗಾವಕಾಶಗಳು ಸೃಷ್ಟಿಯಾಗುತ್ತವೆ ಎಂದು ಪ್ರಧಾನಮಂತ್ರಿ ತಿಳಿಸಿದರು. "ಮೂಲಸೌಕರ್ಯ ಮತ್ತು ಸುಧಾರಣೆಗಳ ಮೇಲಿನ ಡಬಲ್ ಇಂಜಿನ್ ಸರ್ಕಾರದ ಗಮನ ಕರ್ನಾಟಕವನ್ನು ಹೂಡಿಕೆದಾರರ ಆಯ್ಕೆಯನ್ನಾಗಿ ಮಾಡುತ್ತಿದೆ" ಎಂದು ಪ್ರಧಾನಮಂತ್ರಿ ಹೇಳಿದರು.  ಭಾರತದಲ್ಲಿ ಹೂಡಿಕೆ ಮಾಡಲು ವಿಶ್ವದಾದ್ಯಂತದ ಇರುವ ಉತ್ಸಾಹದಿಂದಾಗಿ ಭವಿಷ್ಯದಲ್ಲಿ ಇಂತಹ ಹೂಡಿಕೆಗಳು ಮತ್ತಷ್ಟು ಹೆಚ್ಚಾಗಲಿವೆ ಎಂದು ಹೇಳಿದರು.

ಕರ್ನಾಟಕದ ರಾಜ್ಯಪಾಲ ಶ್ರೀ ಥಾವರ್ ಚಂದ್ ಗೆಹ್ಲೋಟ್, ಕರ್ನಾಟಕದ ಮುಖ್ಯಮಂತ್ರಿ ಶ್ರೀ ಬಸವರಾಜ ಬೊಮ್ಮಾಯಿ, ಕೇಂದ್ರದ ಸಹಾಯಕ ಸಚಿವ ಶ್ರೀ ಭಗವಂತ ಖೂಬಾ ಮತ್ತು ಕರ್ನಾಟಕ ಸರ್ಕಾರದ ಸಚಿವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

 

ಹಿನ್ನೆಲೆ

ಎಲ್ಲ ಮನೆಗಳಿಗೆ ವೈಯಕ್ತಿಕ ನಲ್ಲಿ/ಕೊಳಾಯಿ ಸಂಪರ್ಕಗಳ ಮೂಲಕ ಸುರಕ್ಷಿತ ಮತ್ತು ಸಮರ್ಪಕ ಕುಡಿಯುವ ನೀರನ್ನು ಒದಗಿಸುವ ಪ್ರಧಾನಮಂತ್ರಿಯವರ ದೃಷ್ಟಿಕೋನವನ್ನು ಸಾಕಾರಗೊಳಿಸುವ ಮತ್ತೊಂದು ಹೆಜ್ಜೆಯಾಗಿ, ಜಲ ಜೀವನ ಅಭಿಯಾನದ ಅಡಿಯಲ್ಲಿ ಯಾದಗಿರಿ ಬಹುಗ್ರಾಮ ಕುಡಿಯುವ ನೀರು ಸರಬರಾಜು ಯೋಜನೆಗೆ ಯಾದಗಿರಿ ಜಿಲ್ಲೆಯ ಕೊಡೇಕಲ್ ನಲ್ಲಿ ಶಂಕುಸ್ಥಾಪನೆ ನೆರವೇರಿಸಲಾಯಿತು. ಈ ಯೋಜನೆಯಡಿ 117 ಎಂಎಲ್.ಡಿ ನೀರು ಸಂಸ್ಕರಣಾ ಘಟಕವನ್ನು ನಿರ್ಮಿಸಲಾಗುವುದು. 2050 ಕೋಟಿ ರೂ.ಗೂ ಹೆಚ್ಚು ವೆಚ್ಚದ ಈ ಯೋಜನೆಯು ಯಾದಗಿರಿ ಜಿಲ್ಲೆಯ 700 ಕ್ಕೂ ಹೆಚ್ಚು ಗ್ರಾಮೀಣ ಜನವಸತಿಗಳು ಮತ್ತು ಮೂರು ಪಟ್ಟಣಗಳ ಸುಮಾರು 2.3 ಲಕ್ಷ ಮನೆಗಳಿಗೆ ಕುಡಿಯುವ ನೀರನ್ನು ಒದಗಿಸುತ್ತದೆ.

ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿಯವರು ನಾರಾಯಣಪುರ ಎಡದಂಡೆ ಕಾಲುವೆ – ವಿಸ್ತರಣಾ ನವೀಕರಣ ಮತ್ತು ಆಧುನೀಕರಣ ಯೋಜನೆ (ಎನ್ ಎಲ್ ಬಿಸಿ – ಇಆರ್ ಎಂ) ಉದ್ಘಾಟಿಸಿದರು. 10,000 ಕ್ಯುಸೆಕ್ ನೀರು ಸಾಗಿಸುವ ಸಾಮರ್ಥ್ಯ ಹೊಂದಿರುವ ಕಾಲುವೆಯ ಈ ಯೋಜನೆಯು 4.5 ಲಕ್ಷ ಹೆಕ್ಟೇರ್ ಜಲಾನಯನ ಪ್ರದೇಶಕ್ಕೆ ನೀರಾವರಿ ಸೌಲಭ್ಯ ಕಲ್ಪಿಸುತ್ತದೆ. ಕಲಬುರಗಿ, ಯಾದಗಿರಿ ಮತ್ತು ವಿಜಯಪುರ ಜಿಲ್ಲೆಗಳ 560 ಗ್ರಾಮಗಳ 3 ಲಕ್ಷಕ್ಕೂ ಹೆಚ್ಚು ರೈತರಿಗೆ ಇದರಿಂದ ಪ್ರಯೋಜನವಾಗಲಿದೆ. ಯೋಜನೆಯ ಒಟ್ಟು ವೆಚ್ಚ ಸುಮಾರು 47೦೦ ಕೋಟಿ ರೂ. ಆಗಿದೆ.

ರಾಷ್ಟ್ರೀಯ ಹೆದ್ದಾರಿ 150ಸಿಯ 65.5 ಕಿ.ಮೀ ವಿಭಾಗಕ್ಕೂ ಅವರು ಶಂಕುಸ್ಥಾಪನೆ ನೆರವೇರಿಸಿದರು. ಈ 6 ಪಥದ ಹಸಿರು ವಲಯ ರಸ್ತೆ ಯೋಜನೆಯು ಸೂರತ್ - ಚೆನ್ನೈ ಎಕ್ಸ್ ಪ್ರೆಸ್ ಮಾರ್ಗದ ಭಾಗವಾಗಿದೆ. ಇದನ್ನು ಸುಮಾರು 2೦೦೦ ಕೋಟಿ ರೂ.ಗಳ ವೆಚ್ಚದಲ್ಲಿ ನಿರ್ಮಿಸಲಾಗುತ್ತಿದೆ.

 

ಭಾಷಣದ ಪೂರ್ಣ ಪಠ್ಯವನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
Exclusive: Just two friends in a car, says Putin on viral carpool with PM Modi

Media Coverage

Exclusive: Just two friends in a car, says Putin on viral carpool with PM Modi
NM on the go

Nm on the go

Always be the first to hear from the PM. Get the App Now!
...
India–Russia friendship has remained steadfast like the Pole Star: PM Modi during the joint press meet with Russian President Putin
December 05, 2025

Your Excellency, My Friend, राष्ट्रपति पुतिन,
दोनों देशों के delegates,
मीडिया के साथियों,
नमस्कार!
"दोबरी देन"!

आज भारत और रूस के तेईसवें शिखर सम्मेलन में राष्ट्रपति पुतिन का स्वागत करते हुए मुझे बहुत खुशी हो रही है। उनकी यात्रा ऐसे समय हो रही है जब हमारे द्विपक्षीय संबंध कई ऐतिहासिक milestones के दौर से गुजर रहे हैं। ठीक 25 वर्ष पहले राष्ट्रपति पुतिन ने हमारी Strategic Partnership की नींव रखी थी। 15 वर्ष पहले 2010 में हमारी साझेदारी को "Special and Privileged Strategic Partnership” का दर्जा मिला।

पिछले ढाई दशक से उन्होंने अपने नेतृत्व और दूरदृष्टि से इन संबंधों को निरंतर सींचा है। हर परिस्थिति में उनके नेतृत्व ने आपसी संबंधों को नई ऊंचाई दी है। भारत के प्रति इस गहरी मित्रता और अटूट प्रतिबद्धता के लिए मैं राष्ट्रपति पुतिन का, मेरे मित्र का, हृदय से आभार व्यक्त करता हूँ।

Friends,

पिछले आठ दशकों में विश्व में अनेक उतार चढ़ाव आए हैं। मानवता को अनेक चुनौतियों और संकटों से गुज़रना पड़ा है। और इन सबके बीच भी भारत–रूस मित्रता एक ध्रुव तारे की तरह बनी रही है।परस्पर सम्मान और गहरे विश्वास पर टिके ये संबंध समय की हर कसौटी पर हमेशा खरे उतरे हैं। आज हमने इस नींव को और मजबूत करने के लिए सहयोग के सभी पहलुओं पर चर्चा की। आर्थिक सहयोग को नई ऊँचाइयों पर ले जाना हमारी साझा प्राथमिकता है। इसे साकार करने के लिए आज हमने 2030 तक के लिए एक Economic Cooperation प्रोग्राम पर सहमति बनाई है। इससे हमारा व्यापार और निवेश diversified, balanced, और sustainable बनेगा, और सहयोग के क्षेत्रों में नए आयाम भी जुड़ेंगे।

आज राष्ट्रपति पुतिन और मुझे India–Russia Business Forum में शामिल होने का अवसर मिलेगा। मुझे पूरा विश्वास है कि ये मंच हमारे business संबंधों को नई ताकत देगा। इससे export, co-production और co-innovation के नए दरवाजे भी खुलेंगे।

दोनों पक्ष यूरेशियन इकॉनॉमिक यूनियन के साथ FTA के शीघ्र समापन के लिए प्रयास कर रहे हैं। कृषि और Fertilisers के क्षेत्र में हमारा करीबी सहयोग,food सिक्युरिटी और किसान कल्याण के लिए महत्वपूर्ण है। मुझे खुशी है कि इसे आगे बढ़ाते हुए अब दोनों पक्ष साथ मिलकर यूरिया उत्पादन के प्रयास कर रहे हैं।

Friends,

दोनों देशों के बीच connectivity बढ़ाना हमारी मुख्य प्राथमिकता है। हम INSTC, Northern Sea Route, चेन्नई - व्लादिवोस्टोक Corridors पर नई ऊर्जा के साथ आगे बढ़ेंगे। मुजे खुशी है कि अब हम भारत के seafarersकी polar waters में ट्रेनिंग के लिए सहयोग करेंगे। यह आर्कटिक में हमारे सहयोग को नई ताकत तो देगा ही, साथ ही इससे भारत के युवाओं के लिए रोजगार के नए अवसर बनेंगे।

उसी प्रकार से Shipbuilding में हमारा गहरा सहयोग Make in India को सशक्त बनाने का सामर्थ्य रखता है। यह हमारेwin-win सहयोग का एक और उत्तम उदाहरण है, जिससे jobs, skills और regional connectivity – सभी को बल मिलेगा।

ऊर्जा सुरक्षा भारत–रूस साझेदारी का मजबूत और महत्वपूर्ण स्तंभ रहा है। Civil Nuclear Energy के क्षेत्र में हमारा दशकों पुराना सहयोग, Clean Energy की हमारी साझा प्राथमिकताओं को सार्थक बनाने में महत्वपूर्ण रहा है। हम इस win-win सहयोग को जारी रखेंगे।

Critical Minerals में हमारा सहयोग पूरे विश्व में secure और diversified supply chains सुनिश्चित करने के लिए महत्वपूर्ण है। इससे clean energy, high-tech manufacturing और new age industries में हमारी साझेदारी को ठोस समर्थन मिलेगा।

Friends,

भारत और रूस के संबंधों में हमारे सांस्कृतिक सहयोग और people-to-people ties का विशेष महत्व रहा है। दशकों से दोनों देशों के लोगों में एक-दूसरे के प्रति स्नेह, सम्मान, और आत्मीयताका भाव रहा है। इन संबंधों को और मजबूत करने के लिए हमने कई नए कदम उठाए हैं।

हाल ही में रूस में भारत के दो नए Consulates खोले गए हैं। इससे दोनों देशों के नागरिकों के बीच संपर्क और सुगम होगा, और आपसी नज़दीकियाँ बढ़ेंगी। इस वर्ष अक्टूबर में लाखों श्रद्धालुओं को "काल्मिकिया” में International Buddhist Forum मे भगवान बुद्ध के पवित्र अवशेषों का आशीर्वाद मिला।

मुझे खुशी है कि शीघ्र ही हम रूसी नागरिकों के लिए निशुल्क 30 day e-tourist visa और 30-day Group Tourist Visa की शुरुआत करने जा रहे हैं।

Manpower Mobility हमारे लोगों को जोड़ने के साथ-साथ दोनों देशों के लिए नई ताकत और नए अवसर create करेगी। मुझे खुशी है इसे बढ़ावा देने के लिए आज दो समझौतेकिए गए हैं। हम मिलकर vocational education, skilling और training पर भी काम करेंगे। हम दोनों देशों के students, scholars और खिलाड़ियों का आदान-प्रदान भी बढ़ाएंगे।

Friends,

आज हमने क्षेत्रीय और वैश्विक मुद्दों पर भी चर्चा की। यूक्रेन के संबंध में भारत ने शुरुआत से शांति का पक्ष रखा है। हम इस विषय के शांतिपूर्ण और स्थाई समाधान के लिए किए जा रहे सभी प्रयासों का स्वागत करते हैं। भारत सदैव अपना योगदान देने के लिए तैयार रहा है और आगे भी रहेगा।

आतंकवाद के विरुद्ध लड़ाई में भारत और रूस ने लंबे समय से कंधे से कंधा मिलाकर सहयोग किया है। पहलगाम में हुआ आतंकी हमला हो या क्रोकस City Hall पर किया गया कायरतापूर्ण आघात — इन सभी घटनाओं की जड़ एक ही है। भारत का अटल विश्वास है कि आतंकवाद मानवता के मूल्यों पर सीधा प्रहार है और इसके विरुद्ध वैश्विक एकता ही हमारी सबसे बड़ी ताक़त है।

भारत और रूस के बीच UN, G20, BRICS, SCO तथा अन्य मंचों पर करीबी सहयोग रहा है। करीबी तालमेल के साथ आगे बढ़ते हुए, हम इन सभी मंचों पर अपना संवाद और सहयोग जारी रखेंगे।

Excellency,

मुझे पूरा विश्वास है कि आने वाले समय में हमारी मित्रता हमें global challenges का सामना करने की शक्ति देगी — और यही भरोसा हमारे साझा भविष्य को और समृद्ध करेगा।

मैं एक बार फिर आपको और आपके पूरे delegation को भारत यात्रा के लिए बहुत बहुत धन्यवाद देता हूँ।