ವಿಕಸಿತ ಭಾರತದ ಕನಸಿಗಾಗಿ, ಪೂರ್ವ ಭಾರತದ ಅಭಿವೃದ್ಧಿಯು ಆದ್ಯತೆಯಾಗಿ ಮುಂದುವರಿಯಲಿದೆ ಮತ್ತು ಈ ಗುರಿಯೊಂದಿಗೆ ಕೇಂದ್ರ ಸರ್ಕಾರವು ನಿರಂತರವಾಗಿ ಶ್ರಮಿಸುತ್ತಿದೆ: ಪ್ರಧಾನಮಂತ್ರಿ
ನಿನ್ನೆ, ದೇಶದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪಶ್ಚಿಮ ಬಂಗಾಳದಿಂದ ಚಾಲನೆ ನೀಡಲಾಯಿತು; ರಾಜ್ಯವು ಈಗಾಗಲೇ ಸುಮಾರು ಅರ್ಧ ಡಜನ್ ಹೊಸ ಅಮೃತ್ ಭಾರತ್ ಎಕ್ಸ್‌ ಪ್ರೆಸ್ ರೈಲುಗಳನ್ನು ಪಡೆದಿದೆ ಮತ್ತು ಇಂದು ಇನ್ನೂ ಮೂರು ಅಮೃತ್ ಭಾರತ್ ಎಕ್ಸ್‌ಪ್ರೆಸ್ ರೈಲುಗಳ ಕಾರ್ಯಾಚರಣೆ ಆರಂಭವಾಗಿದೆ: ಪ್ರಧಾನಮಂತ್ರಿ
ಬಾಲಗಢದಲ್ಲಿ ನಿರ್ಮಾಣವಾಗುತ್ತಿರುವ ವಿಸ್ತೃತ ಬಂದರು ಗೇಟ್ ವ್ಯವಸ್ಥೆಯು ಹೂಗ್ಲಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಿಗೆ ಹೊಸ ಅವಕಾಶಗಳ ಬಾಗಿಲು ತೆರೆಯಲಿದೆ: ಪ್ರಧಾನಮಂತ್ರಿ
ಇಂದು ಭಾರತವು ಮಲ್ಟಿ-ಮೋಡಲ್ ಕನೆಕ್ಟಿವಿಟಿ (ಬಹು-ಮಾದರಿ ಸಂಪರ್ಕ) ಮತ್ತು ಗ್ರೀನ್ ಮೊಬಿಲಿಟಿ (ಹಸಿರು ಚಲನಶೀಲತೆ) ಮೇಲೆ ಹೆಚ್ಚಿನ ಒತ್ತು ನೀಡುತ್ತಿದೆ; ತಡೆರಹಿತ ಸಾರಿಗೆಯನ್ನು ಖಚಿತಪಡಿಸಿಕೊಳ್ಳಲು ಬಂದರುಗಳು, ನದಿ ಜಲಮಾರ್ಗಗಳು, ಹೆದ್ದಾರಿಗಳು ಮತ್ತು ವಿಮಾನ ನಿಲ್ದಾಣಗಳನ್ನು ಪರಸ್ಪರ ಸಂಪರ್ಕಿಸಲಾಗುತ್ತಿದೆ: ಪ್ರಧಾನಮಂತ್ರಿ

ಪಶ್ಚಿಮ ಬಂಗಾಳದ ಹೂಗ್ಲಿ ಜಿಲ್ಲೆಯ ಸಿಂಗೂರಿನಲ್ಲಿ ಇಂದು ನಡೆದ ಸಮಾರಂಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ₹830 ಕೋಟಿಗೂ ಅಧಿಕ ಮೌಲ್ಯದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು ಹಾಗೂ ಹಲವು ಯೋಜನೆಗಳನ್ನು ದೇಶಕ್ಕೆ ಸಮರ್ಪಿಸಿದರು. ಈ ಸಂದರ್ಭದಲ್ಲಿ ನೆರೆದಿದ್ದ ಸಭಿಕರನ್ನುದ್ದೇಶಿಸಿ ಮಾತನಾಡಿದ ಶ್ರೀ ಮೋದಿಯವರು, ನಿನ್ನೆ ತಾನು ಮಾಲ್ಡಾದಲ್ಲಿದ್ದೆ ಮತ್ತು ಇಂದು ಹೂಗ್ಲಿಯ ಜನರ ನಡುವೆ ಇರುವ ಭಾಗ್ಯ ನನಗೆ ಲಭಿಸಿದೆ ಎಂದು ಹರ್ಷ ವ್ಯಕ್ತಪಡಿಸಿದರು. ವಿಕಸಿತ ಭಾರತಕ್ಕಾಗಿ ಪೂರ್ವ ಭಾರತದ ಅಭಿವೃದ್ಧಿ ಅತ್ಯಗತ್ಯ ಎಂದು ಪ್ರತಿಪಾದಿಸಿದ ಅವರು, ಇದೇ ಗುರಿಯೊಂದಿಗೆ ಕೇಂದ್ರ ಸರ್ಕಾರವು ನಿರಂತರವಾಗಿ ಶ್ರಮಿಸುತ್ತಿದೆ ಎಂದು ಒತ್ತಿ ಹೇಳಿದರು. ನಿನ್ನೆಯ ಮತ್ತು ಇಂದಿನ ಕಾರ್ಯಕ್ರಮಗಳು ಈ ಸಂಕಲ್ಪವನ್ನು ಮತ್ತಷ್ಟು ಬಲಪಡಿಸುತ್ತವೆ ಎಂದು ಅವರು ತಿಳಿಸಿದರು. ಪಶ್ಚಿಮ ಬಂಗಾಳದ ಅಭಿವೃದ್ಧಿಗೆ ಸಂಬಂಧಿಸಿದ ನೂರಾರು ಕೋಟಿ ರೂಪಾಯಿಗಳ ಯೋಜನೆಗಳಿಗೆ ಶಂಕುಸ್ಥಾಪನೆ ಮಾಡುವ ಮತ್ತು ಉದ್ಘಾಟಿಸುವ ಅವಕಾಶ ಈ ಅವಧಿಯಲ್ಲಿ ತಮಗೆ ದೊರೆತಿದೆ ಎಂದು ಪ್ರಧಾನಮಂತ್ರಿಯವರು ಇದೇ ವೇಳೆ ಉಲ್ಲೇಖಿಸಿದರು.

ಶ್ರೀ ಮೋದಿಯವರು ನಿನ್ನೆ ದೇಶದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪಶ್ಚಿಮ ಬಂಗಾಳದಿಂದ ಚಾಲನೆ ನೀಡಲಾಗಿದೆ ಎಂದು ಹೇಳಿದರು. ಇದರೊಂದಿಗೆ ಬಂಗಾಳವು ಸುಮಾರು ಅರ್ಧ ಡಜನ್ ಹೊಸ ಅಮೃತ್ ಭಾರತ್ ಎಕ್ಸ್‌ ಪ್ರೆಸ್ ರೈಲುಗಳನ್ನು ಪಡೆದುಕೊಂಡಿದೆ ಎಂದು ಅವರು ಸೇರಿಸಿದರು. ಇಂದು ಇನ್ನೂ ಮೂರು ಅಮೃತ್ ಭಾರತ್ ಎಕ್ಸ್‌ ಪ್ರೆಸ್ ರೈಲುಗಳಿಗೆ ಚಾಲನೆ ನೀಡಲಾಗಿದೆ ಎಂದು ಅವರು ತಿಳಿಸಿದರು. ಈ ರೈಲುಗಳ ಪೈಕಿ ಒಂದು ರೈಲು ತಮ್ಮ ಸಂಸದೀಯ ಕ್ಷೇತ್ರವಾದ ವಾರಣಾಸಿ ಮತ್ತು ಬಂಗಾಳದ ನಡುವಿನ ಸಂಪರ್ಕವನ್ನು ಮತ್ತಷ್ಟು ಬಲಪಡಿಸಲಿದೆ ಎಂದು ಅವರು ಸೂಚಿಸಿದರು. ಇದಲ್ಲದೆ, ದೆಹಲಿ ಮತ್ತು ತಮಿಳುನಾಡಿಗೂ ಅಮೃತ್ ಭಾರತ್ ಎಕ್ಸ್‌ ಪ್ರೆಸ್ ರೈಲುಗಳನ್ನು ಪ್ರಾರಂಭಿಸಲಾಗಿದೆ ಎಂದು ಅವರು ತಿಳಿಸಿದರು. ಕಳೆದ 24 ಗಂಟೆಗಳು ಪಶ್ಚಿಮ ಬಂಗಾಳದ ರೈಲು ಸಂಪರ್ಕದ ಇತಿಹಾಸದಲ್ಲಿ ಅಭೂತಪೂರ್ವವಾಗಿವೆ ಎಂದರು.

 

ಪಶ್ಚಿಮ ಬಂಗಾಳವು ಜಲಮಾರ್ಗಗಳಿಗೆ ಅಪಾರವಾದ ಸಾಮರ್ಥ್ಯವನ್ನು ಹೊಂದಿದೆ ಮತ್ತು ಕೇಂದ್ರ ಸರ್ಕಾರವು ಈ ನಿಟ್ಟಿನಲ್ಲಿ ಕೆಲಸ ಮಾಡುತ್ತಿದೆ ಎಂದು ಪ್ರಧಾನಮಂತ್ರಿ ಮೋದಿ ಅವರು ತಿಳಿಸಿದರು. ಬಂದರು ಆಧಾರಿತ ಅಭಿವೃದ್ಧಿಗೆ (Port-led development) ಅಗತ್ಯವಾದ ಮೂಲಸೌಕರ್ಯಗಳನ್ನು ನಿರ್ಮಿಸಲು ನೆರವು ನೀಡಲಾಗುತ್ತಿದೆ ಎಂದು ಅವರು ಹೇಳಿದರು. ಸ್ವಲ್ಪ ಸಮಯದ ಹಿಂದೆ, ಬಂದರುಗಳು ಮತ್ತು ನದಿ ಜಲಮಾರ್ಗಗಳಿಗೆ ಸಂಬಂಧಿಸಿದ ಪ್ರಮುಖ ಯೋಜನೆಗಳನ್ನು ಉದ್ಘಾಟಿಸಲಾಗಿದೆ ಮತ್ತು ಹೊಸ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಲಾಗಿದೆ ಎಂದು ಅವರು ಹೇಳಿದರು. ಪಶ್ಚಿಮ ಬಂಗಾಳ ಮತ್ತು ಭಾರತದ ಅಭಿವೃದ್ಧಿಗೆ ಇವು ಬಹಳ ಮುಖ್ಯ ಎಂದು ಅವರು ಒತ್ತಿ ಹೇಳಿದರು. ಪಶ್ಚಿಮ ಬಂಗಾಳವನ್ನು ಉತ್ಪಾದನೆ, ವ್ಯಾಪಾರ ಮತ್ತು ಲಾಜಿಸ್ಟಿಕ್ಸ್‌ ನ ಪ್ರಮುಖ ಕೇಂದ್ರವನ್ನಾಗಿ ಅಭಿವೃದ್ಧಿಪಡಿಸಲು ಇವು ಭದ್ರಬುನಾದಿಯಾಗಿವೆ ಎಂದು ಅವರು ಅಭಿಪ್ರಾಯಪಟ್ಟರು. ಈ ಎಲ್ಲಾ ಯೋಜನೆಗಳಿಗಾಗಿ ಪ್ರಧಾನಮಂತ್ರಿಯವರು ಪ್ರತಿಯೊಬ್ಬರಿಗೂ ಅಭಿನಂದನೆಗಳನ್ನು ಸಲ್ಲಿಸಿದರು.

ಬಂದರುಗಳು ಮತ್ತು ಅದಕ್ಕೆ ಸಂಬಂಧಿಸಿದ ಪರಿಸರ ವ್ಯವಸ್ಥೆಯ (Ecosystem) ಮೇಲೆ ಎಷ್ಟು ಹೆಚ್ಚಿನ ಒತ್ತು ನೀಡಲಾಗುತ್ತದೆಯೋ, ಅಷ್ಟು ಹೆಚ್ಚು ಉದ್ಯೋಗಾವಕಾಶಗಳು ಇಲ್ಲಿ ಸೃಷ್ಟಿಯಾಗುತ್ತವೆ ಎಂದು ಶ್ರೀ ಮೋದಿಯವರು ಒತ್ತಿ ಹೇಳಿದರು. ಕಳೆದ 11 ವರ್ಷಗಳಲ್ಲಿ, ಕೇಂದ್ರ ಸರ್ಕಾರವು ಶ್ಯಾಮ ಪ್ರಸಾದ್ ಮುಖರ್ಜಿ ಬಂದರಿನ ಸಾಮರ್ಥ್ಯ ವಿಸ್ತರಣೆಗಾಗಿ ಪ್ರಮುಖ ಹೂಡಿಕೆಗಳನ್ನು ಮಾಡಿದೆ ಎಂದು ಅವರು ತಿಳಿಸಿದರು. ಸಾಗರಮಾಲಾ ಯೋಜನೆಯಡಿ, ಈ ಬಂದರಿನ ಸಂಪರ್ಕವನ್ನು ಸುಧಾರಿಸಲು ರಸ್ತೆಗಳನ್ನು ಸಹ ನಿರ್ಮಿಸಲಾಗಿದೆ ಎಂದು ಅವರು ಹೇಳಿದರು. ಈ ಪ್ರಯತ್ನಗಳ ಫಲಿತಾಂಶಗಳು ಈಗ ಸ್ಪಷ್ಟವಾಗಿ ಗೋಚರಿಸುತ್ತಿವೆ ಎಂದು ಅವರು ಅಭಿಪ್ರಾಯಪಟ್ಟರು. ಕಳೆದ ವರ್ಷ ಕೋಲ್ಕತ್ತಾ ಬಂದರು ಸರಕು ನಿರ್ವಹಣೆಯಲ್ಲಿ ಹೊಸ ದಾಖಲೆಗಳನ್ನು ನಿರ್ಮಿಸಿದೆ ಎಂದು ಪ್ರಧಾನಮಂತ್ರಿಯವರು ಇದೇ ಸಂದರ್ಭದಲ್ಲಿ ಹೇಳಿದರು.

 

ಬಾಲಗಢದಲ್ಲಿ ಅಭಿವೃದ್ಧಿಪಡಿಸಲಾಗುತ್ತಿರುವ ವಿಸ್ತರಿತ ಬಂದರು ಗೇಟ್ ವ್ಯವಸ್ಥೆಯು (Extended Port Gate System) ಹೂಗ್ಲಿ ಮತ್ತು ಅದರ ಸುತ್ತಮುತ್ತಲಿನ ಪ್ರದೇಶಗಳಿಗೆ ಹೊಸ ಅವಕಾಶಗಳನ್ನು ತೆರೆಯಲಿದೆ ಎಂದು ಪ್ರಧಾನಮಂತ್ರಿ ಮೋದಿ ತಿಳಿಸಿದರು. ಇದು ಕೋಲ್ಕತ್ತಾ ನಗರದಲ್ಲಿನ ಸಂಚಾರ ಮತ್ತು ಲಾಜಿಸ್ಟಿಕ್ಸ್ ಒತ್ತಡವನ್ನು ಕಡಿಮೆ ಮಾಡುತ್ತದೆ ಎಂದು ಅವರು ಒತ್ತಿ ಹೇಳಿದರು. ಗಂಗಾ ನದಿಯ ಮೇಲೆ ನಿರ್ಮಿಸಲಾದ ಜಲಮಾರ್ಗದ ಮೂಲಕ ಸರಕು ಸಾಗಣೆ ಮತ್ತಷ್ಟು ಹೆಚ್ಚಾಗಲಿದೆ ಎಂದು ಅವರು ಹೇಳಿದರು. ಈ ಸಂಪೂರ್ಣ ಮೂಲಸೌಕರ್ಯವು ಹೂಗ್ಲಿಯನ್ನು ದಾಸ್ತಾನು ಮತ್ತು ವ್ಯಾಪಾರ ಕೇಂದ್ರವಾಗಿ ಪರಿವರ್ತಿಸಲು ಸಹಾಯ ಮಾಡುತ್ತದೆ ಎಂದು ಪ್ರಧಾನಮಂತ್ರಿ ಒತ್ತಿ ಹೇಳಿದರು. ಇದು ನೂರಾರು ಕೋಟಿಗಳ ಹೊಸ ಹೂಡಿಕೆಯನ್ನು ತರುತ್ತದೆ, ಸಾವಿರಾರು ಉದ್ಯೋಗಗಳನ್ನು ಸೃಷ್ಟಿಸುತ್ತದೆ, ಸಣ್ಣ ವ್ಯಾಪಾರಿಗಳು ಮತ್ತು ಸಾಗಣೆದಾರರಿಗೆ ಪ್ರಯೋಜನವನ್ನು ನೀಡುತ್ತದೆ ಮತ್ತು ರೈತರು ಹಾಗೂ ಉತ್ಪಾದಕರಿಗೆ ಹೊಸ ಮಾರುಕಟ್ಟೆಗಳನ್ನು ಒದಗಿಸುತ್ತದೆ ಎಂದು ಅವರು ಅಭಿಪ್ರಾಯಪಟ್ಟರು.

ಭಾರತವು ಇಂದು ಮಲ್ಟಿ-ಮೋಡಲ್ ಕನೆಕ್ಟಿವಿಟಿ (ಬಹು-ಮಾದರಿಯ ಸಂಪರ್ಕ) ಮತ್ತು ಹಸಿರು ಚಲನಶೀಲತೆಗೆ (Green Mobility) ಹೆಚ್ಚಿನ ಒತ್ತು ನೀಡುತ್ತಿದೆ ಎಂದು ಶ್ರೀ ಮೋದಿಯವರು ಒತ್ತಿ ಹೇಳಿದರು. ತಡೆರಹಿತ ಸಾರಿಗೆಯನ್ನು ಸಕ್ರಿಯಗೊಳಿಸಲು ಬಂದರುಗಳು, ನದಿ ಜಲಮಾರ್ಗಗಳು, ಹೆದ್ದಾರಿಗಳು ಮತ್ತು ವಿಮಾನ ನಿಲ್ದಾಣಗಳನ್ನು ಪರಸ್ಪರ ಸಂಪರ್ಕಿಸಲಾಗುತ್ತಿದೆ ಎಂದು ಅವರು ತಿಳಿಸಿದರು. ಇದರಿಂದ ಲಾಜಿಸ್ಟಿಕ್ಸ್ ವೆಚ್ಚ ಮತ್ತು ಸಾರಿಗೆ ಸಮಯ ಎರಡೂ ಕಡಿಮೆಯಾಗುತ್ತಿದೆ ಎಂದು ಅವರು ಅಭಿಪ್ರಾಯಪಟ್ಟರು. ಸಾರಿಗೆ ವಿಧಾನಗಳು ಪ್ರಕೃತಿ ಸ್ನೇಹಿಯಾಗಿರುವುದನ್ನು ಖಚಿತಪಡಿಸಿಕೊಳ್ಳಲು ಪ್ರಯತ್ನಿಸಲಾಗುತ್ತಿದೆ ಎಂದು ಪ್ರಧಾನಮಂತ್ರಿ ಹೇಳಿದರು. ಹೈಬ್ರಿಡ್ ಎಲೆಕ್ಟ್ರಿಕ್ ಬೋಟ್‌ ಗಳು ನದಿ ಸಾರಿಗೆ ಮತ್ತು ಹಸಿರು ಚಲನಶೀಲತೆಯನ್ನು ಬಲಪಡಿಸುತ್ತವೆ, ಹೂಗ್ಲಿಯಲ್ಲಿ ಪ್ರಯಾಣವನ್ನು ಸುಲಭಗೊಳಿಸುತ್ತವೆ, ಮಾಲಿನ್ಯವನ್ನು ಕಡಿಮೆ ಮಾಡುತ್ತವೆ ಮತ್ತು ನದಿ ಆಧಾರಿತ ಪ್ರವಾಸೋದ್ಯಮವನ್ನು ಉತ್ತೇಜಿಸುತ್ತವೆ ಎಂದು ಅವರು ಹೇಳಿದರು.

 

ಭಾರತವು ಮೀನುಗಾರಿಕೆ ಮತ್ತು ಸಮುದ್ರಾಹಾರ ಉತ್ಪಾದನೆ ಹಾಗೂ ರಫ್ತಿನಲ್ಲಿ ವೇಗವಾಗಿ ಮುನ್ನಡೆಯುತ್ತಿದೆ ಎಂದು ಪ್ರಧಾನಮಂತ್ರಿಯವರು ಹೇಳಿದರು. ಈ ಕ್ಷೇತ್ರದಲ್ಲಿ ಪಶ್ಚಿಮ ಬಂಗಾಳವು ದೇಶವನ್ನೇ ಮುನ್ನಡೆಸಬೇಕು ಎಂಬುದು ತಮ್ಮ ಕನಸಾಗಿದೆ ಎಂದು ಅವರು ಹರ್ಷ ವ್ಯಕ್ತಪಡಿಸಿದರು. ನದಿ ಜಲಮಾರ್ಗಗಳ ದೃಷ್ಟಿಕೋನದಲ್ಲಿ ಕೇಂದ್ರ ಸರ್ಕಾರವು ಬಂಗಾಳಕ್ಕೆ ಪ್ರಮುಖವಾಗಿ ಬೆಂಬಲ ನೀಡುತ್ತಿದೆ ಮತ್ತು ಇದರಿಂದ ರೈತರು ಹಾಗೂ ಮೀನುಗಾರರು ಈಗಾಗಲೇ ಪ್ರಯೋಜನ ಪಡೆಯುತ್ತಿದ್ದಾರೆ ಎಂದು ಅವರು ಹೈಲೈಟ್ ಮಾಡಿದರು. ಕೇಂದ್ರ ಸರ್ಕಾರವು ಪ್ರಾರಂಭಿಸುತ್ತಿರುವ ಈ ಎಲ್ಲಾ ಯೋಜನೆಗಳು ಪಶ್ಚಿಮ ಬಂಗಾಳದ ಅಭಿವೃದ್ಧಿ ಪಯಣವನ್ನು ವೇಗಗೊಳಿಸಲಿವೆ ಎಂದು ಶ್ರೀ ಮೋದಿಯವರು ತಿಳಿಸಿದರು ಮತ್ತು ಎಲ್ಲರಿಗೂ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಪಶ್ಚಿಮ ಬಂಗಾಳದ ರಾಜ್ಯಪಾಲರಾದ ಶ್ರೀ ಸಿ.ವಿ. ಆನಂದ ಬೋಸ್, ಕೇಂದ್ರ ಸಚಿವರಾದ ಶ್ರೀ ಸರ್ಬಾನಂದ ಸೋನೋವಾಲ್, ಶ್ರೀ ಶಾಂತನು ಠಾಕೂರ್, ಶ್ರೀ ಸುಕಾಂತ ಮಜುಂದಾರ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

ಹಿನ್ನೆಲೆ 

ಪ್ರಧಾನಮಂತ್ರಿಯವರು ಹೂಗ್ಲಿಯ ಸಿಂಗೂರಿನಲ್ಲಿ ₹830 ಕೋಟಿಗೂ ಅಧಿಕ ಮೌಲ್ಯದ ವಿವಿಧ ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿದರು, ಶಂಕುಸ್ಥಾಪನೆ ನೆರವೇರಿಸಿದರು ಮತ್ತು ಹಸಿರು ನಿಶಾನೆ ತೋರಿಸಿದರು.

ಪ್ರಧಾನಮಂತ್ರಿಯವರು ಬಾಲಗಢದಲ್ಲಿ ಒಳನಾಡು ಜಲಸಾರಿಗೆ (IWT) ಟರ್ಮಿನಲ್ ಮತ್ತು ರಸ್ತೆ ಮೇಲ್ಸೇತುವೆ ಸೇರಿದಂತೆ ವಿಸ್ತರಿತ ಬಂದರು ಗೇಟ್ ವ್ಯವಸ್ಥೆಗೆ (Extended Port Gate System) ಶಂಕುಸ್ಥಾಪನೆ ನೆರವೇರಿಸಿದರು.

ಸುಮಾರು 900 ಎಕರೆ ವಿಸ್ತೀರ್ಣದಲ್ಲಿ ಹರಡಿರುವ ಬಾಲಗಢವನ್ನು ವಾರ್ಷಿಕ ಸುಮಾರು 2.7 ಮಿಲಿಯನ್ ಟನ್ (MTPA) ಸಾಮರ್ಥ್ಯದ ಆಧುನಿಕ ಸರಕು ನಿರ್ವಹಣಾ ಟರ್ಮಿನಲ್ ಆಗಿ ಅಭಿವೃದ್ಧಿಪಡಿಸಲಾಗುತ್ತಿದೆ. ಈ ಯೋಜನೆಯು ಎರಡು ಪ್ರತ್ಯೇಕ ಸರಕು ನಿರ್ವಹಣಾ ಜೆಟ್ಟಿಗಳ ನಿರ್ಮಾಣವನ್ನು ಒಳಗೊಂಡಿದೆ - ಒಂದು ಕಂಟೈನರ್ ಸರಕುಗಳಿಗಾಗಿ ಮತ್ತು ಇನ್ನೊಂದು ಡ್ರೈ ಬಲ್ಕ್ ಸರಕುಗಳಿಗಾಗಿ.

ಬಾಲಗಢ ಯೋಜನೆಯು ಭಾರೀ ಸರಕುಗಳ ಸಾಗಣೆಯನ್ನು ದಟ್ಟಣೆಯಿಂದ ಕೂಡಿದ ನಗರ ಪ್ರದೇಶಗಳಿಂದ ಬೇರೆಡೆಗೆ ತಿರುಗಿಸುವ ಮೂಲಕ, ಸರಕು ವಿಲೇವಾರಿ ದಕ್ಷತೆಯನ್ನು ಗಣನೀಯವಾಗಿ ಸುಧಾರಿಸುವ ಗುರಿಯನ್ನು ಹೊಂದಿದೆ. ಇದು ರಸ್ತೆ ಸುರಕ್ಷತೆಯನ್ನು ಹೆಚ್ಚಿಸಲಿದೆ, ಕೋಲ್ಕತ್ತಾ ನಗರದಲ್ಲಿ ವಾಹನ ದಟ್ಟಣೆ ಮತ್ತು ಮಾಲಿನ್ಯವನ್ನು ಕಡಿಮೆ ಮಾಡಲಿದೆ ಮತ್ತು ನಿವಾಸಿಗಳ ಜೀವನದ ಗುಣಮಟ್ಟವನ್ನು ಸುಧಾರಿಸಲು ಕೊಡುಗೆ ನೀಡಲಿದೆ. ಸುಧಾರಿತ ಮಲ್ಟಿ-ಮೋಡಲ್ ಕನೆಕ್ಟಿವಿಟಿ (ಬಹು-ಮಾದರಿಯ ಸಂಪರ್ಕ) ಮತ್ತು ಲಾಜಿಸ್ಟಿಕ್ಸ್ ದಕ್ಷತೆಯು ಪ್ರಾದೇಶಿಕ ಕೈಗಾರಿಕೆಗಳು, MSMEಗಳು ಮತ್ತು ಕೃಷಿ ಉತ್ಪಾದಕರಿಗೆ ವೆಚ್ಚ-ಪರಿಣಾಮಕಾರಿ ಮಾರುಕಟ್ಟೆ ಪ್ರವೇಶವನ್ನು ಒದಗಿಸುತ್ತದೆ. ಈ ಯೋಜನೆಯು ಲಾಜಿಸ್ಟಿಕ್ಸ್, ಟರ್ಮಿನಲ್ ಕಾರ್ಯಾಚರಣೆಗಳು, ಸಾರಿಗೆ ಸೇವೆಗಳು, ನಿರ್ವಹಣೆ ಮತ್ತು ಸಂಬಂಧಿತ ಚಟುವಟಿಕೆಗಳಲ್ಲಿ ಉದ್ಯೋಗ ಸೃಷ್ಟಿಸುವ ಮೂಲಕ ಸ್ಥಳೀಯ ಸಮುದಾಯಗಳಿಗೆ ಪ್ರಯೋಜನವನ್ನು ನೀಡುತ್ತದೆ ಮತ್ತು ಗಣನೀಯ ಪ್ರಮಾಣದ ನೇರ ಮತ್ತು ಪರೋಕ್ಷ ಉದ್ಯೋಗವನ್ನು ಸೃಷ್ಟಿಸುವ ನಿರೀಕ್ಷೆಯಿದೆ.

 

ಪ್ರಧಾನಮಂತ್ರಿಯವರು ಕೋಲ್ಕತ್ತಾದಲ್ಲಿ ಅತ್ಯಾಧುನಿಕ ಎಲೆಕ್ಟ್ರಿಕ್ ಕ್ಯಾಟಮರಾನ್ (Electric Catamaran) ಅನ್ನು ಸಹ ಲೋಕಾರ್ಪಣೆ ಮಾಡಿದರು. ಕೊಚ್ಚಿನ್ ಶಿಪ್‌ ಯಾರ್ಡ್ ಲಿಮಿಟೆಡ್‌ ನಿಂದ ಒಳನಾಡು ಜಲಸಾರಿಗೆಗಾಗಿ ದೇಶೀಯವಾಗಿ ನಿರ್ಮಿಸಲಾದ 6 ಎಲೆಕ್ಟ್ರಿಕ್ ಕ್ಯಾಟಮರಾನ್‌ ಗಳಲ್ಲಿ ಇದು ಒಂದಾಗಿದೆ. ಸುಧಾರಿತ ಎಲೆಕ್ಟ್ರಿಕ್ ಪ್ರೊಪಲ್ಷನ್ ಸಿಸ್ಟಮ್‌ ಗಳು ಮತ್ತು ಲಿಥಿಯಂ-ಟೈಟನೇಟ್ ಬ್ಯಾಟರಿ ತಂತ್ರಜ್ಞಾನವನ್ನು ಹೊಂದಿರುವ, 50 ಪ್ರಯಾಣಿಕರ ಸಾಮರ್ಥ್ಯದ ಈ ಹೈಬ್ರಿಡ್ ಎಲೆಕ್ಟ್ರಿಕ್ ಅಲ್ಯೂಮಿನಿಯಂ ಕ್ಯಾಟಮರಾನ್, ಸಂಪೂರ್ಣ ಎಲೆಕ್ಟ್ರಿಕ್ ಶೂನ್ಯ-ಹೊರಸೂಸುವಿಕೆ (Zero-emission) ಮೋಡ್‌ ನಲ್ಲಿ ಹಾಗೂ ಹೆಚ್ಚಿನ ಅವಧಿಯ ಪ್ರಯಾಣಕ್ಕಾಗಿ ಹೈಬ್ರಿಡ್ ಮೋಡ್‌ ನಲ್ಲಿ ಕಾರ್ಯನಿರ್ವಹಿಸುವ ಸಾಮರ್ಥ್ಯವನ್ನು ಹೊಂದಿದೆ. ಈ ನೌಕೆಯು ಹೂಗ್ಲಿ ನದಿಯ ಉದ್ದಕ್ಕೂ ನಗರ ನದಿ ಚಲನಶೀಲತೆ, ಪರಿಸರ-ಪ್ರವಾಸೋದ್ಯಮ ಮತ್ತು ಪ್ರಯಾಣಿಕರ ಕೊನೆಯ ಮೈಲಿ ಸಂಪರ್ಕಕ್ಕೆ (Last-mile connectivity) ಬೆಂಬಲ ನೀಡಲಿದೆ.

ಪ್ರಧಾನಮಂತ್ರಿಯವರು ಜಯರಾಂಬಾಟಿ–ಬರೋಗೋಪಿನಾಥ್‌ ಪುರ–ಮಯನಾಪುರ ನಡುವಿನ ಹೊಸ ರೈಲು ಮಾರ್ಗವನ್ನು ಸಹ ಉದ್ಘಾಟಿಸಿದರು. ಈ ಮಾರ್ಗವು ತಾರಕೇಶ್ವರ–ಬಿಷ್ಣುಪುರ ಹೊಸ ರೈಲು ಮಾರ್ಗ ಯೋಜನೆಯ ಪ್ರಮುಖ ಭಾಗವಾಗಿದೆ. ಹೊಸ ರೈಲು ಮಾರ್ಗದ ಜೊತೆಗೆ, ಮಯನಾಪುರ ಮತ್ತು ಜಯರಾಂಬಾಟಿ ನಡುವೆ ಬರೋಗೋಪಿನಾಥ್‌ಪುರದಲ್ಲಿ ನಿಲುಗಡೆ ಹೊಂದಿರುವ ಹೊಸ ರೈಲು ಸೇವೆಗೂ ಚಾಲನೆ ನೀಡಲಾಗುವುದು. ಇದು ಬಂಕುರಾ ಜಿಲ್ಲೆಯ ನಿವಾಸಿಗಳಿಗೆ ನೇರ ರೈಲು ಸಂಪರ್ಕವನ್ನು ಒದಗಿಸಲಿದ್ದು, ದೈನಂದಿನ ಪ್ರಯಾಣಿಕರು, ವಿದ್ಯಾರ್ಥಿಗಳು ಮತ್ತು ಯಾತ್ರಾರ್ಥಿಗಳಿಗೆ ಪ್ರಯಾಣವನ್ನು ಹೆಚ್ಚು ಕೈಗೆಟುಕುವಂತೆ ಮತ್ತು ಅನುಕೂಲಕರವಾಗಿಸಲಿದೆ.

ಪ್ರಧಾನಮಂತ್ರಿಯವರು ಮೂರು ಅಮೃತ್ ಭಾರತ್ ಎಕ್ಸ್‌ ಪ್ರೆಸ್ ರೈಲುಗಳಿಗೆ ಹಸಿರು ನಿಶಾನೆ ತೋರಿಸಿದರು: ಕೋಲ್ಕತ್ತಾ (ಹೌರಾ) - ಆನಂದ್ ವಿಹಾರ್ ಟರ್ಮಿನಲ್ ಅಮೃತ್ ಭಾರತ್ ಎಕ್ಸ್‌ ಪ್ರೆಸ್, ಕೋಲ್ಕತ್ತಾ (ಸೀಲ್ದಾ) - ಬನಾರಸ್ ಅಮೃತ್ ಭಾರತ್ ಎಕ್ಸ್‌ ಪ್ರೆಸ್, ಕೋಲ್ಕತ್ತಾ (ಸಂತ್ರಗಾಚಿ) - ತಾಂಬರಂ ಅಮೃತ್ ಭಾರತ್ ಎಕ್ಸ್‌ ಪ್ರೆಸ್.

 

ಭಾಷಣದ ಪೂರ್ಣ ಪಠ್ಯವನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
PM Modi apologises to women after Lok Sabha rejects 33% quota bill, vows to ‘remove every obstacle’ to ensure representation

Media Coverage

PM Modi apologises to women after Lok Sabha rejects 33% quota bill, vows to ‘remove every obstacle’ to ensure representation
NM on the go

Nm on the go

Always be the first to hear from the PM. Get the App Now!
...
Prime Minister condoles the passing of prolific writer, thinker and public intellectual, Shri Balbir Punj
April 19, 2026

The Prime Minister, Shri Narendra Modi has expressed grief over the demise of prolific writer, thinker and public intellectual Shri Balbir Punj.

Shri Modi said that Shri Balbir Punj Ji was a prolific writer, thinker and public intellectual who made a rich contribution to the world of media. His writings were widely read and reflected his strong passion towards national regeneration. He noted that Shri Punj’s Parliamentary interventions were rich in facts and theory.

The Prime Minister wrote on X;

“Shri Balbir Punj Ji was a prolific writer, thinker and public intellectual. He made a rich contribution to the world of media. His writings were widely read, reflecting his strong passion towards national regeneration. His Parliamentary interventions were rich in facts and theory.

Shri Balbir Punj Ji worked tirelessly to strengthen the BJP, especially among students, professionals, scholars and intellectuals. He was in-charge of various states, including Gujarat. Fondly remember our interactions from those times. Pained by his passing. Condolences to his family and friends. Om Shanti.”

“बलबीर पुंज जी एक प्रसिद्ध लेखक होने के साथ-साथ प्रखर विचारक और सम्मानित बुद्धिजीवी थे। मीडिया के क्षेत्र में उनका योगदान बहुत सराहनीय रहा है। लोग उनकी लेखनी के कायल थे, जिससे राष्ट्र निर्माण के प्रति उनकी गहरी प्रतिबद्धता परिलक्षित होती थी । उनके संसदीय भाषणों में तथ्यों और मानवीय मूल्यों का भरपूर समावेश रहता था।

बलबीर पुंज जी ने भाजपा को सशक्त बनाने के लिए अथक प्रयास किए। विद्यार्थियों, पेशेवरों, विद्वतजनों और बुद्धिजीवियों को उन्होंने पार्टी से जोड़ने में उल्लेखनीय भूमिका निभाई। वे गुजरात सहित कई राज्यों के प्रभारी रहे। उस दौर में उनसे हुए संवाद मेरे लिए अविस्मरणीय रहेंगे। उनके निधन से अत्यंत दुख हुआ है। शोक की इस घड़ी में उनके परिजनों और मित्रों के प्रति मेरी हार्दिक संवेदनाएं। ओम शांति!”