5,550 ಕೋಟಿಗೂ ಅಧಿಕ ಮೊತ್ತದ 176 ಕಿಮೀ ಉದ್ದದ ರಾಷ್ಟ್ರೀಯ ಹೆದ್ದಾರಿ ಯೋಜನೆಗಳಿಗೆ ಶಂಕುಸ್ಥಾಪನೆ
500 ಕೋಟಿಗೂ ಅಧಿಕ ಮೌಲ್ಯದ ಕಾಜಿಪೇಟೆ ರೈಲ್ವೆ ಉತ್ಪಾದನಾ ಘಟಕಕ್ಕೆ ಶಂಕುಸ್ಥಾಪನೆ
ಭದ್ರಕಾಳಿ ದೇವಸ್ಥಾನದಲ್ಲಿ ದರ್ಶನ ಮತ್ತು ಪೂಜೆ ನೆರವೇರಿಸಿದ ಪ್ರಧಾನಿ
"ತೆಲುಗಿನ ಜನರ ಸಾಮರ್ಥ್ಯಗಳು ಯಾವಾಗಲೂ ಭಾರತದ ಸಾಮರ್ಥ್ಯವನ್ನು ಹೆಚ್ಚಿಸಿವೆ"
"ಇಂದಿನ ಹೊಸ ಯುವ ಭಾರತವು ಶಕ್ತಿಯಿಂದ ತುಂಬಿದೆ"
ಬಳಕೆಯಲ್ಲಿಲ್ಲದ ಮೂಲಸೌಕರ್ಯದಿಂದ ಭಾರತದಲ್ಲಿ ವೇಗದ ಅಭಿವೃದ್ಧಿ ಅಸಾಧ್ಯ
"ತೆಲಂಗಾಣವು ಸುತ್ತಮುತ್ತಲಿನ ಆರ್ಥಿಕ ಕೇಂದ್ರಗಳನ್ನು ಸಂಪರ್ಕಿಸುತ್ತಿದೆ ಮತ್ತು ಆರ್ಥಿಕ ಚಟುವಟಿಕೆಯ ಕೇಂದ್ರವಾಗುತ್ತಿದೆ"
"ಉತ್ಪಾದನಾ ಕ್ಷೇತ್ರವು ಯುವಕರಿಗೆ ಉದ್ಯೋಗದ ದೊಡ್ಡ ಮೂಲವಾಗುತ್ತಿದೆ"

ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತೆಲಂಗಾಣದ ವಾರಂಗಲ್‌ನಲ್ಲಿಂದು ಸುಮಾರು 6,100 ಕೋಟಿ ರೂಪಾಯಿ ಮೊತ್ತದ ಹಲವಾರು ನಿರ್ಣಾಯಕ ಮೂಲಸೌಕರ್ಯ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು. ಅಭಿವೃದ್ಧಿ ಕಾಮಗಾರಿಗಳಲ್ಲಿ 5,550 ಕೋಟಿ ರೂ. ಮೌಲ್ಯದ 176 ಕಿಮೀ ಉದ್ದದ ರಾಷ್ಟ್ರೀಯ ಹೆದ್ದಾರಿ ಯೋಜನೆಗಳು ಮತ್ತು 500 ಕೋಟಿ ರೂ. ವೆಚ್ಚದಲ್ಲಿ ಕಾಜಿಪೇಟೆ ರೈಲ್ವೆ ಉತ್ಪಾದನಾ ಘಟಕ ಅಭಿವೃದ್ಧಿ ಸೇರಿದೆ. ಇದೇ ವೇಳೆ ಪ್ರಧಾನಿ ಅವರು ಭದ್ರಕಾಳಿ ದೇವಸ್ಥಾನದಲ್ಲಿ ದರ್ಶನ ಮತ್ತು ಪೂಜೆ ನೆರವೇರಿಸಿದರು.
 

ನಂತರ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ, ತೆಲಂಗಾಣವು ತುಲನಾತ್ಮಕವಾಗಿ ಹೊಸ ರಾಜ್ಯವಾಗಿ, ಅದರ ಅಸ್ತಿತ್ವಕ್ಕೆ ಕೇವಲ 9 ವರ್ಷ ತುಂಬಿದ್ದರೂ, ತೆಲಂಗಾಣ ಜನರ ಕೊಡುಗೆಗಳು ಭಾರತದ ಇತಿಹಾಸದಲ್ಲಿ ಬಹಳ ಮಹತ್ವದ್ದಾಗಿದೆ. "ತೆಲುಗಿನ ಜನರ ಸಾಮರ್ಥ್ಯಗಳು ಯಾವಾಗಲೂ ಭಾರತದ ಸಾಮರ್ಥ್ಯವನ್ನು ಹೆಚ್ಚಿಸಿವೆ". ಭಾರತವನ್ನು ವಿಶ್ವದ 5 ನೇ ಅತಿದೊಡ್ಡ ಆರ್ಥಿಕತೆಯಾಗಿ ಮಾಡುವಲ್ಲಿ ತೆಲಂಗಾಣದ ನಾಗರಿಕರ ಮಹತ್ವದ ಪಾತ್ರವಿದೆ. ವಿಶ್ವವು ಭಾರತವನ್ನು ಹೂಡಿಕೆಯ ತಾಣವಾಗಿ ನೋಡುತ್ತಿರುವಾಗ ವಿಫುಲ ಅವಕಾಶಗಳ ಬೆಳವಣಿಗೆಗೆ ಇಲ್ಲಿ ಜಾಗವಿದೆ. "ವಿಕ್ಷಿತ್ ಭಾರತ್‌ಗಾಗಿ ಸಾಕಷ್ಟು ನಿರೀಕ್ಷೆಯಿದೆ" ಎಂದು ಪ್ರಧಾನಿ ಹೇಳಿದರು.
 
"ಇಂದಿನ ಹೊಸ ಯುವ ಭಾರತವು ಅಪಾರ ಶಕ್ತಿಯಿಂದ ತುಂಬಿದೆ". 21ನೇ ಶತಮಾನದ 3ನೇ ದಶಕವು ಸುವರ್ಣ ಅವಧಿಯಾಗಿದೆ. ಈ ಅವಧಿಯನ್ನು ಸಂಪೂರ್ಣವಾಗಿ ಬಳಸಿಕೊಳ್ಳಲು ಪ್ರತಿಯೊಬ್ಬರು ಮುಂದೆ ಬರಬೇಕು. ವೇಗದ ಅಭಿವೃದ್ಧಿಯ ವಿಷಯದಲ್ಲಿ ಭಾರತದ ಯಾವುದೇ ಭಾಗವು ಹಿಂದೆ ಉಳಿಯಬಾರದು. ಕಳೆದ 9 ವರ್ಷಗಳಲ್ಲಿ ತೆಲಂಗಾಣದ ಮೂಲಸೌಕರ್ಯ ಮತ್ತು ಸಂಪರ್ಕ ಸುಧಾರಿಸುತ್ತಾ ಬಂದಿದೆ. 6,000 ಕೋಟಿ ರೂ.ಗಿಂತ ಹೆಚ್ಚಿನ ಮೌಲ್ಯದ ಇಂದಿನ ಅಭಿವೃದ್ಧಿ ಯೋಜನೆಗಳಿಗಾಗಿ ಪ್ರಧಾನಿ ಅವರು ತೆಲಂಗಾಣದ ಜನರನ್ನು ಅಭಿನಂದಿಸಿದರು.
 
ಬಳಕೆಯಲ್ಲಿಲ್ಲದ ಮೂಲಸೌಕರ್ಯದಿಂದ ಭಾರತದಲ್ಲಿ ವೇಗದ ಅಭಿವೃದ್ಧಿ ಅಸಾಧ್ಯ. ಹೊಸ ಗುರಿಗಳನ್ನು ಸಾಧಿಸಲು ಹೊಸ ಮಾರ್ಗಗಳನ್ನು ಕಂಡುಕೊಳ್ಳುವ ಅಗತ್ಯವಿದೆ.  ಕಳಪೆ ಸಂಪರ್ಕ ಮತ್ತು ದುಬಾರಿ ಸಾಗಣೆ ವೆಚ್ಚಗಳು ವ್ಯವಹಾರಗಳ ಪ್ರಗತಿಗೆ ಅಡ್ಡಿಯಾಗುತ್ತವೆ. ಈ ನಿಟ್ಟಿನಲ್ಲಿ ಸರ್ಕಾರದ ಅಭಿವೃದ್ಧಿಯ ವೇಗ ಮತ್ತು ಪ್ರಮಾಣದಲ್ಲಿ ಬಹುಪಟ್ಟು ಹೆಚ್ಚಳವಾಗಿದೆ. ಹೆದ್ದಾರಿಗಳು, ಎಕ್ಸ್‌ಪ್ರೆಸ್‌ವೇಗಳು, ಆರ್ಥಿಕ ಕಾರಿಡಾರ್‌ಗಳು ಮತ್ತು ಕೈಗಾರಿಕಾ ಕಾರಿಡಾರ್‌ಗಳ ಜಾಲವನ್ನು ಸೃಷ್ಟಿಸಲಾಗುತ್ತಿದೆ.  ದ್ವಿಪಥ ಮತ್ತು ಚತುಷ್ಪಥ ಹೆದ್ದಾರಿಗಳನ್ನು ಕ್ರಮವಾಗಿ 4 ಮತ್ತು 6 ಪಥಗಳ ಹೆದ್ದಾರಿಗಳಾಗಿ ಪರಿವರ್ತಿಸಲಾಗುತ್ತಿದೆ. ತೆಲಂಗಾಣದ ಹೆದ್ದಾರಿ ಜಾಲವು 2,500 ಕಿಮೀನಿಂದ 5,000 ಕಿಮೀಗೆ 2 ಪಟ್ಟು ಏರಿಕೆ ಕಂಡಿದೆ. 2,500 ಕಿಲೋ ಮೀಟರ್ ರಾಷ್ಟ್ರೀಯ ಹೆದ್ದಾರಿಗಳ ನಿರ್ಮಾಣವು ಅಭಿವೃದ್ಧಿಯ ವಿವಿಧ ಹಂತಗಳಲ್ಲಿದೆ.  ಭಾರತಮಾಲಾ ಯೋಜನೆಯ ಭಾಗವಾಗಿ ನಿರ್ಮಾಣವಾಗುತ್ತಿರುವ ಹತ್ತಾರು ಕಾರಿಡಾರ್‌ಗಳು ತೆಲಂಗಾಣದ ಮೂಲಕ ಹಾದು ಹೋಗುತ್ತವೆ. ಹೈದರಾಬಾದ್ - ಇಂದೋರ್ ಆರ್ಥಿಕ ಕಾರಿಡಾರ್, ಚೆನ್ನೈ - ಸೂರತ್ ಆರ್ಥಿಕ ಕಾರಿಡಾರ್, ಹೈದರಾಬಾದ್ - ಪಂಜಿ ಆರ್ಥಿಕ ಕಾರಿಡಾರ್ ಮತ್ತು ಹೈದರಾಬಾದ್ - ವಿಶಾಖಪಟ್ಟಣಂ ಇಂಟರ್ ಕಾರಿಡಾರ್‌ಗಳ ನಿರ್ಮಾಣ ಕಾರ್ಯ ಪ್ರಗತಿಯಲ್ಲಿದೆ. ತೆಲಂಗಾಣವು ಸುತ್ತಮುತ್ತಲಿನ ಆರ್ಥಿಕ ಕೇಂದ್ರಗಳನ್ನು ಸಂಪರ್ಕಿಸುತ್ತಿದೆ ಮತ್ತು ಆರ್ಥಿಕ ಚಟುವಟಿಕೆಯ ಕೇಂದ್ರವಾಗುತ್ತಿದೆ ಎಂದು ಪ್ರಧಾನಿ ಮೋದಿ ತಿಳಿಸಿದರು.
 

ಇಂದು ಶಂಕುಸ್ಥಾಪನೆಯಾದ ನಾಗ್ಪುರ-ವಿಜಯವಾಡ ಕಾರಿಡಾರ್‌ನ ಮಂಚೇರಿಯಲ್ - ವಾರಂಗಲ್ ವಿಭಾಗವು ಮಹಾರಾಷ್ಟ್ರ ಮತ್ತು ಆಂಧ್ರ ಪ್ರದೇಶದೊಂದಿಗೆ ತೆಲಂಗಾಣಕ್ಕೆ ಆಧುನಿಕ ಸಂಪರ್ಕ ಒದಗಿಸುತ್ತದೆ, ಮಂಚೇರಿಯಲ್ ಮತ್ತು ವಾರಂಗಲ್ ನಡುವಿನ ಅಂತರವನ್ನು ಕಡಿಮೆ ಮಾಡುತ್ತದೆ, ವಿಶಏಷವಾಗಿ ಸಂಚಾರ ತೊಂದರೆಗಳನ್ನು ಕೊನೆಗೊಳಿಸಲಿದೆ. "ಈ ಪ್ರದೇಶವು ಅನೇಕ ಬುಡಕಟ್ಟು ಸಮುದಾಯಗಳಿಗೆ ನೆಲೆಯಾಗಿದೆ. ಆದರೆ ಇದು ದೀರ್ಘಕಾಲದಿಂದ ನಿರ್ಲಕ್ಷಿಸಲ್ಪಟ್ಟಿದೆ". ಈ ಕಾರಿಡಾರ್ ರಾಜ್ಯದಲ್ಲಿ ಬಹುಮಾದರಿ ಸಂಪರ್ಕ ಕಲ್ಪಿಸುತ್ತದೆ. ಕರೀಂನಗರ-ವಾರಂಗಲ್ ವಿಭಾಗದ ಚತುಷ್ಪಥವು ಹೈದರಾಬಾದ್-ವಾರಂಗಲ್ ಇಂಡಸ್ಟ್ರಿಯಲ್ ಕಾರಿಡಾರ್, ಕಾಕತೀಯ ಮೆಗಾ ಟೆಕ್ಸ್‌ಟೈಲ್ ಪಾರ್ಕ್ ಮತ್ತು ವಾರಂಗಲ್ ವಿಶೇಷ ಆರ್ಥಿಕ ವಲಯ(ಎಸ್‌ಇಜೆಡ್‌)ಕ್ಕೆ ಸಂಪರ್ಕ ಬಲಪಡಿಸುತ್ತದೆ ಎಂದು ಶ್ರೀ ಮೋದಿ ಹೇಳಿದರು.
 
ತೆಲಂಗಾಣದಲ್ಲಿ ಹೆಚ್ಚಿದ ಸಂಪರ್ಕವು ರಾಜ್ಯದ ಉದ್ಯಮ ಮತ್ತು ಪ್ರವಾಸೋದ್ಯಮಕ್ಕೆ ನೇರವಾಗಿ ಪ್ರಯೋಜನ ನೀಡುತ್ತಿದೆ. ಏಕೆಂದರೆ ತೆಲಂಗಾಣದ ಪಾರಂಪರಿಕ ಕೇಂದ್ರಗಳು ಮತ್ತು ಧಾರ್ಮಿಕ ಸ್ಥಳಗಳಿಗೆ ಪ್ರಯಾಣಿಸಲು ಈಗ ಹೆಚ್ಚು ಅನುಕೂಲಕರವಾಗಿದೆ. ಕರೀಂನಗರದ ಕೃಷಿ ಉದ್ಯಮ ಮತ್ತು ಗ್ರಾನೈಟ್ ಉದ್ಯಮಗಳಿಗೆ ಸರ್ಕಾರದ ಪ್ರಯತ್ನಗಳು ನೇರವಾಗಿ ಸಹಾಯ ಮಾಡುತ್ತಿವೆ. ರೈತರು ಅಥವಾ ಕಾರ್ಮಿಕರು, ವಿದ್ಯಾರ್ಥಿಗಳು ಅಥವಾ ವೃತ್ತಿಪರರು ಸೇರಿದಂತೆ ಪ್ರತಿಯೊಬ್ಬರೂ ಪ್ರಯೋಜನ ಪಡೆಯುತ್ತಿದ್ದಾರೆ. ಯುವಕರು ತಮ್ಮ ಮನೆಗಳ ಬಳಿ ಹೊಸ ಉದ್ಯೋಗ ಮತ್ತು ಸ್ವಯಂ-ಉದ್ಯೋಗ ಅವಕಾಶಗಳನ್ನು ಪಡೆಯುತ್ತಿದ್ದಾರೆ” ಎಂದು ಅವರು ಹೇಳಿದರು.

ಮೇಕ್ ಇನ್ ಇಂಡಿಯಾ ಅಭಿಯಾನದ ಮೇಲೆ ಬೆಳಕು ಚೆಲ್ಲಿದ ಪ್ರಧಾನಿ, ಉತ್ಪಾದನಾ ವಲಯವು ದೇಶದಲ್ಲಿ ಯುವಕರಿಗೆ ಹೇಗೆ ಉದ್ಯೋಗದ ದೊಡ್ಡ ಮೂಲವಾಗುತ್ತಿದೆ ಎಂಬುದನ್ನು ಪ್ರಸ್ತಾಪಿಸಿದರು. ದೇಶದಲ್ಲಿ ಉತ್ಪಾದನೆ ಅಥವಾ ತಯಾರಿಕೆ ಉತ್ತೇಜಿಸಲು ಉತ್ಪಾದನೆ ಸಂಪರ್ಕಿತ ಉತ್ತೇಜನಾ(ಪಿಎಲ್‌ಐ) ಯೋಜನೆ ಜಾರಿಗೆ ತರಲಾಗಿದೆ. "ಹೆಚ್ಚು ಉತ್ಪಾದನೆ ಮಾಡುತ್ತಿರುವವರು ಸರ್ಕಾರದಿಂದ ವಿಶೇಷ ನೆರವು ಪಡೆಯುತ್ತಿದ್ದಾರೆ". ಈ ಯೋಜನೆಯಡಿ, ತೆಲಂಗಾಣದಲ್ಲಿ 50ಕ್ಕೂ ಹೆಚ್ಚು ದೊಡ್ಡ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗಿದೆ. ಈ ವರ್ಷ ರಕ್ಷಣಾ ರಫ್ತಿನಲ್ಲಿ ಭಾರತ ಹೊಸ ದಾಖಲೆ ಸೃಷ್ಟಿಸಿದೆ. 9 ವರ್ಷಗಳ ಹಿಂದೆ ಸುಮಾರು 1,000 ಕೋಟಿ ರೂ.ಗಳಷ್ಟಿದ್ದ ಭಾರತದ ರಕ್ಷಣಾ ರಫ್ತು ಇಂದು 16,000 ಕೋಟಿ ರೂ.ಗಳನ್ನು ದಾಟಿದೆ ಎಂದು ಮಾಹಿತಿ ನೀಡಿದರು. ಹೈದರಾಬಾದ್ ಮೂಲದ ಭಾರತ್ ಡೈನಾಮಿಕ್ಸ್ ಲಿಮಿಟೆಡ್ ಸಹ ಪಿಎಲ್‌ಐ  ಯೋಜನೆಯ ಲಾಭ ಪಡೆಯುತ್ತಿದೆ ಎಂದು ಹೇಳಿದರು.

 

ಉತ್ಪಾದನೆಯ ವಿಷಯದಲ್ಲಿ ಭಾರತೀಯ ರೈಲ್ವೆ ಹೊಸ ದಾಖಲೆ ಮತ್ತು ಹೊಸ ಮೈಲಿಗಲ್ಲು ಸ್ಥಾಪಿಸುತ್ತಿದೆ. ‘ಮೇಡ್ ಇನ್ ಇಂಡಿಯಾ’ ಮೂಲಕ ವಂದೇ ಭಾರತ್ ರೈಲುಗಳನ್ನು ಅಭಿವೃದ್ಧಿಪಡಿಸಲಾಗುತ್ತಿದೆ. ಭಾರತೀಯ ರೈಲ್ವೆಯು ಹಲವು ವರ್ಷಗಳಿಂದ ಸಾವಿರಾರು ಆಧುನಿಕ ಕೋಚ್‌ಗಳು ಮತ್ತು ಇಂಜಿನ್‌ಗಳನ್ನು ತಯಾರಿಸಿದೆ. ಇಂದು ಶಂಕುಸ್ಥಾಪನೆಯಾದ ಕಾಜಿಪೇಟೆಯ ರೈಲ್ವೆ ಉತ್ಪಾದನಾ ಘಟಕವನ್ನು ಉಲ್ಲೇಖಿಸಿದ ಪ್ರಧಾನಿ, ಇದು ಭಾರತೀಯ ರೈಲ್ವೆಯ ಪುನಶ್ಚೇತನವಾಗಿದೆ ಮತ್ತು ಕಾಜಿಪೇಟೆಯು ಮೇಕ್ ಇನ್ ಇಂಡಿಯಾದ ಹೊಸ ಶಕ್ತಿಯ ಭಾಗವಾಗಲಿದೆ. ಇದರಿಂದಾಗಿ ಈ ಪ್ರದೇಶದಲ್ಲಿ ಹೊಸ ಉದ್ಯೋಗಾವಕಾಶಗಳು ಸೃಷ್ಟಿಯಾಗಲಿವೆ. ಪ್ರತಿಯೊಂದು ಕುಟುಂಬವೂ ಒಂದಲ್ಲ ಒಂದು ರೀತಿಯಲ್ಲಿ ಪ್ರಯೋಜನ ಪಡೆಯಲಿದೆ. "ಇದು ಸಬ್ಕಾ ಸಾಥ್, ಸಬ್ಕಾ ವಿಕಾಸ್" ಆಗಿದೆ. ಈ ನಿಟ್ಟಿನಲ್ಲಿ ತೆಲಂಗಾಣವನ್ನು ಅಭಿವೃದ್ಧಿಯ ಮಂತ್ರದಲ್ಲಿ ಮುಂದಕ್ಕೆ ಕೊಂಡೊಯ್ಯಬೇಕು ಒತ್ತಾಯಿಸಿದ ಪ್ರಧಾನಿ, ತಮ್ಮ ಭಾಷಣ ಮುಕ್ತಾಯಗೊಳಿಸಿದರು.

ಈ ಸಂದರ್ಭದಲ್ಲಿ ತೆಲಂಗಾಣ ರಾಜ್ಯಪಾಲರಾದ ಡಾ ತಮಿಳಿಸೈ ಸೌಂದರರಾಜನ್, ಕೇಂದ್ರ ರಸ್ತೆ, ಸಾರಿಗೆ ಮತ್ತು ಹೆದ್ದಾರಿ ಸಚಿವ ಶ್ರೀ ನಿತಿನ್ ಗಡ್ಕರಿ, ಕೇಂದ್ರ ಪ್ರವಾಸೋದ್ಯಮ ಸಚಿವ ಶ್ರೀ ಜಿ ಕಿಶನ್ ರೆಡ್ಡಿ ಮತ್ತು ಸಂಸದ ಶ್ರೀ ಸಂಜಯ್ ಬಂಡಿ ಮತ್ತಿತರರು ಉಪಸ್ಥಿತರಿದ್ದರು.
 
ಹಿನ್ನೆಲೆ
5,550 ಕೋಟಿ ರೂ.ಗಿಂತ ಅಧಿಕ ಮೊತ್ತದ 176 ಕಿಮೀ ಉದ್ದದ ರಾಷ್ಟ್ರೀಯ ಹೆದ್ದಾರಿ ಯೋಜನೆಗಳಿಗೆ ಪ್ರಧಾನಿ ಶಂಕುಸ್ಥಾಪನೆ ನೆರವೇರಿಸಿದರು. ಯೋಜನೆಗಳು 108 ಕಿಮೀ ಉದ್ದದ ಮಂಚೇರಿಯಲ್ - ನಾಗ್ಪುರ - ವಿಜಯವಾಡ ಕಾರಿಡಾರ್‌ನ ವಾರಂಗಲ್ ವಿಭಾಗವನ್ನು ಒಳಗೊಂಡಿವೆ. ಈ ವಿಭಾಗವು ಮಂಚೇರಿಯಲ್ ಮತ್ತು ವಾರಂಗಲ್ ನಡುವಿನ ಅಂತರವನ್ನು ಸುಮಾರು 34 ಕಿ.ಮೀ. ಕಡಿಮೆ ಮಾಡುತ್ತದೆ. ಅಲ್ಲದೆ,  ಪ್ರಯಾಣ ಸಮಯವನ್ನು ಕಡಿಮೆ ಮಾಡುತ್ತದೆ. ರಾಷ್ಟ್ರೀಯ ಹೆದ್ದಾರಿ 44 ಮತ್ತು ಎನ್ಎಚ್ 65ರಲ್ಲಿ ಸಂಚಾರ ದಟ್ಟಣೆಯನ್ನು ಕಡಿಮೆ ಮಾಡುತ್ತದೆ.  ಎನ್ಎಚ್ 563ರ 68 ಕಿಮೀ ಉದ್ದದ ಕರೀಂನಗರ - ವಾರಂಗಲ್ ವಿಭಾಗವನ್ನು ಈಗಿರುವ 2 ಪಥದಿಂದ 4 ಪಥ ರಸ್ತೆಗೆ ಮೇಲ್ದರ್ಜೆಗೆ ಏರಿಸಲು ಪ್ರಧಾನಿ ಶಂಕುಸ್ಥಾಪನೆ ನೆರವೇರಿಸಿದರು.  ಇದು ಹೈದರಾಬಾದ್-ವಾರಂಗಲ್ ಕೈಗಾರಿಕಾ ಕಾರಿಡಾರ್, ಕಾಕತೀಯ ಮೆಗಾ ಟೆಕ್ಸ್‌ಟೈಲ್ ಪಾರ್ಕ್ ಮತ್ತು ವಾರಂಗಲ್‌ನಲ್ಲಿರುವ ವಿಶೇಷ ಆರ್ಥಿಕ ವಲಯಕ್ಕೆ ಸಂಪರ್ಕ ಸುಧಾರಿಸಲು ಸಹಾಯ ಮಾಡುತ್ತದೆ.

ಪ್ರಧಾನ ಮಂತ್ರಿಅವರು ಕಾಜಿಪೇಟೆಯ ರೈಲ್ವೇ ಉತ್ಪಾದನಾ ಘಟಕಕ್ಕೆ ಶಂಕುಸ್ಥಾಪನೆ ನೆರವೇರಿಸಿದರು. 500 ಕೋಟಿ ರೂ.ಗಿಂತ ಅಧಿಕ ವೆಚ್ಚದಲ್ಲಿ ಅಭಿವೃದ್ಧಿಪಡಿಸಲಿರುವ ಆಧುನಿಕ ಉತ್ಪಾದನಾ ಘಟಕವು ರೋಲಿಂಗ್ ಸ್ಟಾಕ್ ಉತ್ಪಾದನಾ ಸಾಮರ್ಥ್ಯವನ್ನು ಹೆಚ್ಚಿಸಲಿದೆ. ಇದು ಇತ್ತೀಚಿನ ತಂತ್ರಜ್ಞಾನದ ಮಾನದಂಡಗಳು ಮತ್ತು ವ್ಯಾಗನ್‌ಗಳ ರೋಬೋಟಿಕ್ ಪೇಂಟಿಂಗ್, ಅತ್ಯಾಧುನಿಕ ಯಂತ್ರೋಪಕರಣಗಳು ಮತ್ತು ಆಧುನಿಕ ವಸ್ತು ಸಂಗ್ರಹಣೆ ಮತ್ತು ನಿರ್ವಹಣೆಯೊಂದಿಗೆ ಸ್ಥಾವರದಂತಹ ಸೌಲಭ್ಯಗಳನ್ನು ಹೊಂದಿದೆ. ಇದು ಸ್ಥಳೀಯ ಉದ್ಯೋಗ ಸೃಷ್ಟಿಗೆ ಮತ್ತು ಹತ್ತಿರದ ಪ್ರದೇಶಗಳಲ್ಲಿ ಪೂರಕ ಘಟಕಗಳ ಅಭಿವೃದ್ಧಿಗೆ ಸಹಾಯ ಮಾಡುತ್ತದೆ.

 

ಭಾಷಣದ ಪೂರ್ಣ ಪಠ್ಯವನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
Exclusive: Just two friends in a car, says Putin on viral carpool with PM Modi

Media Coverage

Exclusive: Just two friends in a car, says Putin on viral carpool with PM Modi
NM on the go

Nm on the go

Always be the first to hear from the PM. Get the App Now!
...
India–Russia friendship has remained steadfast like the Pole Star: PM Modi during the joint press meet with Russian President Putin
December 05, 2025

Your Excellency, My Friend, राष्ट्रपति पुतिन,
दोनों देशों के delegates,
मीडिया के साथियों,
नमस्कार!
"दोबरी देन"!

आज भारत और रूस के तेईसवें शिखर सम्मेलन में राष्ट्रपति पुतिन का स्वागत करते हुए मुझे बहुत खुशी हो रही है। उनकी यात्रा ऐसे समय हो रही है जब हमारे द्विपक्षीय संबंध कई ऐतिहासिक milestones के दौर से गुजर रहे हैं। ठीक 25 वर्ष पहले राष्ट्रपति पुतिन ने हमारी Strategic Partnership की नींव रखी थी। 15 वर्ष पहले 2010 में हमारी साझेदारी को "Special and Privileged Strategic Partnership” का दर्जा मिला।

पिछले ढाई दशक से उन्होंने अपने नेतृत्व और दूरदृष्टि से इन संबंधों को निरंतर सींचा है। हर परिस्थिति में उनके नेतृत्व ने आपसी संबंधों को नई ऊंचाई दी है। भारत के प्रति इस गहरी मित्रता और अटूट प्रतिबद्धता के लिए मैं राष्ट्रपति पुतिन का, मेरे मित्र का, हृदय से आभार व्यक्त करता हूँ।

Friends,

पिछले आठ दशकों में विश्व में अनेक उतार चढ़ाव आए हैं। मानवता को अनेक चुनौतियों और संकटों से गुज़रना पड़ा है। और इन सबके बीच भी भारत–रूस मित्रता एक ध्रुव तारे की तरह बनी रही है।परस्पर सम्मान और गहरे विश्वास पर टिके ये संबंध समय की हर कसौटी पर हमेशा खरे उतरे हैं। आज हमने इस नींव को और मजबूत करने के लिए सहयोग के सभी पहलुओं पर चर्चा की। आर्थिक सहयोग को नई ऊँचाइयों पर ले जाना हमारी साझा प्राथमिकता है। इसे साकार करने के लिए आज हमने 2030 तक के लिए एक Economic Cooperation प्रोग्राम पर सहमति बनाई है। इससे हमारा व्यापार और निवेश diversified, balanced, और sustainable बनेगा, और सहयोग के क्षेत्रों में नए आयाम भी जुड़ेंगे।

आज राष्ट्रपति पुतिन और मुझे India–Russia Business Forum में शामिल होने का अवसर मिलेगा। मुझे पूरा विश्वास है कि ये मंच हमारे business संबंधों को नई ताकत देगा। इससे export, co-production और co-innovation के नए दरवाजे भी खुलेंगे।

दोनों पक्ष यूरेशियन इकॉनॉमिक यूनियन के साथ FTA के शीघ्र समापन के लिए प्रयास कर रहे हैं। कृषि और Fertilisers के क्षेत्र में हमारा करीबी सहयोग,food सिक्युरिटी और किसान कल्याण के लिए महत्वपूर्ण है। मुझे खुशी है कि इसे आगे बढ़ाते हुए अब दोनों पक्ष साथ मिलकर यूरिया उत्पादन के प्रयास कर रहे हैं।

Friends,

दोनों देशों के बीच connectivity बढ़ाना हमारी मुख्य प्राथमिकता है। हम INSTC, Northern Sea Route, चेन्नई - व्लादिवोस्टोक Corridors पर नई ऊर्जा के साथ आगे बढ़ेंगे। मुजे खुशी है कि अब हम भारत के seafarersकी polar waters में ट्रेनिंग के लिए सहयोग करेंगे। यह आर्कटिक में हमारे सहयोग को नई ताकत तो देगा ही, साथ ही इससे भारत के युवाओं के लिए रोजगार के नए अवसर बनेंगे।

उसी प्रकार से Shipbuilding में हमारा गहरा सहयोग Make in India को सशक्त बनाने का सामर्थ्य रखता है। यह हमारेwin-win सहयोग का एक और उत्तम उदाहरण है, जिससे jobs, skills और regional connectivity – सभी को बल मिलेगा।

ऊर्जा सुरक्षा भारत–रूस साझेदारी का मजबूत और महत्वपूर्ण स्तंभ रहा है। Civil Nuclear Energy के क्षेत्र में हमारा दशकों पुराना सहयोग, Clean Energy की हमारी साझा प्राथमिकताओं को सार्थक बनाने में महत्वपूर्ण रहा है। हम इस win-win सहयोग को जारी रखेंगे।

Critical Minerals में हमारा सहयोग पूरे विश्व में secure और diversified supply chains सुनिश्चित करने के लिए महत्वपूर्ण है। इससे clean energy, high-tech manufacturing और new age industries में हमारी साझेदारी को ठोस समर्थन मिलेगा।

Friends,

भारत और रूस के संबंधों में हमारे सांस्कृतिक सहयोग और people-to-people ties का विशेष महत्व रहा है। दशकों से दोनों देशों के लोगों में एक-दूसरे के प्रति स्नेह, सम्मान, और आत्मीयताका भाव रहा है। इन संबंधों को और मजबूत करने के लिए हमने कई नए कदम उठाए हैं।

हाल ही में रूस में भारत के दो नए Consulates खोले गए हैं। इससे दोनों देशों के नागरिकों के बीच संपर्क और सुगम होगा, और आपसी नज़दीकियाँ बढ़ेंगी। इस वर्ष अक्टूबर में लाखों श्रद्धालुओं को "काल्मिकिया” में International Buddhist Forum मे भगवान बुद्ध के पवित्र अवशेषों का आशीर्वाद मिला।

मुझे खुशी है कि शीघ्र ही हम रूसी नागरिकों के लिए निशुल्क 30 day e-tourist visa और 30-day Group Tourist Visa की शुरुआत करने जा रहे हैं।

Manpower Mobility हमारे लोगों को जोड़ने के साथ-साथ दोनों देशों के लिए नई ताकत और नए अवसर create करेगी। मुझे खुशी है इसे बढ़ावा देने के लिए आज दो समझौतेकिए गए हैं। हम मिलकर vocational education, skilling और training पर भी काम करेंगे। हम दोनों देशों के students, scholars और खिलाड़ियों का आदान-प्रदान भी बढ़ाएंगे।

Friends,

आज हमने क्षेत्रीय और वैश्विक मुद्दों पर भी चर्चा की। यूक्रेन के संबंध में भारत ने शुरुआत से शांति का पक्ष रखा है। हम इस विषय के शांतिपूर्ण और स्थाई समाधान के लिए किए जा रहे सभी प्रयासों का स्वागत करते हैं। भारत सदैव अपना योगदान देने के लिए तैयार रहा है और आगे भी रहेगा।

आतंकवाद के विरुद्ध लड़ाई में भारत और रूस ने लंबे समय से कंधे से कंधा मिलाकर सहयोग किया है। पहलगाम में हुआ आतंकी हमला हो या क्रोकस City Hall पर किया गया कायरतापूर्ण आघात — इन सभी घटनाओं की जड़ एक ही है। भारत का अटल विश्वास है कि आतंकवाद मानवता के मूल्यों पर सीधा प्रहार है और इसके विरुद्ध वैश्विक एकता ही हमारी सबसे बड़ी ताक़त है।

भारत और रूस के बीच UN, G20, BRICS, SCO तथा अन्य मंचों पर करीबी सहयोग रहा है। करीबी तालमेल के साथ आगे बढ़ते हुए, हम इन सभी मंचों पर अपना संवाद और सहयोग जारी रखेंगे।

Excellency,

मुझे पूरा विश्वास है कि आने वाले समय में हमारी मित्रता हमें global challenges का सामना करने की शक्ति देगी — और यही भरोसा हमारे साझा भविष्य को और समृद्ध करेगा।

मैं एक बार फिर आपको और आपके पूरे delegation को भारत यात्रा के लिए बहुत बहुत धन्यवाद देता हूँ।