ಮಣಿಪುರದಲ್ಲಿ ರೈಲು ಸಂಪರ್ಕ ವಿಸ್ತರಿಸುತ್ತಿದೆ: ಪ್ರಧಾನಮಂತ್ರಿ
ಮಣಿಪುರದಲ್ಲಿ ಬಡವರ ಪರವಾದ ಅಭಿವೃದ್ಧಿ ಉಪಕ್ರಮಗಳನ್ನು ನಾವು ಅನುಷ್ಠಾನಗೊಳಿಸುತ್ತಿದ್ದೇವೆ: ಪ್ರಧಾನಮಂತ್ರಿ
ಮಣಿಪುರದಲ್ಲಿ ಭರವಸೆ ಮತ್ತು ನಂಬಿಕೆಯ ನವೋದಯವಾಗುತ್ತಿದೆ: ಪ್ರಧಾನಮಂತ್ರಿ
ಮಣಿಪುರವನ್ನು ಶಾಂತಿ, ಸಮೃದ್ಧಿ ಮತ್ತು ಪ್ರಗತಿಯ ಸಂಕೇತವನ್ನಾಗಿ ಮಾಡುವ ಗುರಿಯೊಂದಿಗೆ ನಾವು ಕೆಲಸ ಮಾಡುತ್ತಿದ್ದೇವೆ: ಪ್ರಧಾನಮಂತ್ರಿ

ಮಣಿಪುರದ ಚುರಚಂದಪುರದಲ್ಲಿ 7,300 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಹಲವಾರು ಅಭಿವೃದ್ಧಿ ಯೋಜನೆಗಳಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಇಂದು ಶಂಕುಸ್ಥಾಪನೆ ನೆರವೇರಿಸಿದರು. ಈ ಸಂದರ್ಭದಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ, ಮಣಿಪುರ ಧೈರ್ಯ ಮತ್ತು ದೃಢಸಂಕಲ್ಪದ ಭೂಮಿಯಾಗಿದೆ ಮತ್ತು ಮಣಿಪುರದ ಗುಡ್ಡಗಾಡುಗಳು ಪ್ರಕೃತಿಯ ಅಮೂಲ್ಯ ಕೊಡುಗೆಯಾಗಿವೆ ಎಂದು ಒತ್ತಿ ಹೇಳಿದರು. ಈ ಗುಡ್ಡಗಾಡು ಜನರ ನಿರಂತರ ದಣಿವರಿಯದ ಪರಿಶ್ರಮದ ಸಂಕೇತವಾಗಿವೆ ಎಂದು ಅವರು ಹೇಳಿದರು. ಮಣಿಪುರದ ಜನರ ಉತ್ಸಾಹಕ್ಕೆ ನಮನ ಸಲ್ಲಿಸಿದ ಶ್ರೀ ಮೋದಿ, ಇಷ್ಟೊಂದು ಸಂಖ್ಯೆಯಲ್ಲಿ ಬಂದಿದ್ದಕ್ಕಾಗಿ ಜನರಿಗೆ ಕೃತಜ್ಞತೆ ಸಲ್ಲಿಸಿದರು ಮತ್ತು ಅವರ ಪ್ರೀತಿಗೆ ಧನ್ಯವಾದ ತಿಳಿಸಿದರು.

ಈ ಪ್ರದೇಶದ ಸಂಸ್ಕೃತಿ, ಸಂಪ್ರದಾಯಗಳು, ವೈವಿಧ್ಯತೆ ಮತ್ತು ಚೈತನ್ಯವನ್ನು ಭಾರತದ ಪ್ರಮುಖ ಶಕ್ತಿ ಎಂದು ಬಣ್ಣಿಸಿದ ಶ್ರೀ ಮೋದಿ, "ಮಣಿಪುರ" ಎಂಬ ಹೆಸರಿನಲ್ಲೇ "ಮಣಿ" ಎಂಬ ಪದವಿದೆ, ಇದು ಮುಂದಿನ ದಿನಗಳಲ್ಲಿ ಇಡೀ ಈಶಾನ್ಯವನ್ನು ಬೆಳಗಿಸುವ ರತ್ನವನ್ನು ಸಂಕೇತಿಸುತ್ತದೆ ಎಂದು ಹೇಳಿದರು. ಮಣಿಪುರದ ಅಭಿವೃದ್ಧಿ ಪ್ರಯಾಣವನ್ನು ವೇಗಗೊಳಿಸಲು ಭಾರತ ಸರ್ಕಾರ ನಿರಂತರವಾಗಿ ಕೆಲಸ ಮಾಡುತ್ತಿದೆ ಎಂದು ಪ್ರಧಾನಮಂತ್ರಿ ಹೇಳಿದರು. ಈ ಉತ್ಸಾಹದಲ್ಲಿಯೇ ತಾವು ಇಂದು ಮಣಿಪುರದ ಜನರ ನಡುವೆ ಇರುವುದಾಗಿ ಅವರು ಹೇಳಿದರು. ಇಂದು ಸುಮಾರು 7,000 ಕೋಟಿ ರೂ. ಮೌಲ್ಯದ ಯೋಜನೆಗಳನ್ನು ಉದ್ಘಾಟಿಸಲಾಗಿದೆ. ಇವು ಮಣಿಪುರದ ಜನರ, ವಿಶೇಷವಾಗಿ ಗುಡ್ಡಗಾಡುಗಳಲ್ಲಿ ವಾಸಿಸುವ ಬುಡಕಟ್ಟು ಸಮುದಾಯಗಳ ಜೀವನವನ್ನು ಸುಧಾರಿಸುತ್ತವೆ. ಈ ಯೋಜನೆಗಳು ಈ ಪ್ರದೇಶದಲ್ಲಿ ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಹೊಸ ಸೌಲಭ್ಯಗಳನ್ನು ಸೃಷ್ಟಿಸುತ್ತವೆ ಎಂದು ಅವರು ಹೇಳಿದರು ಮತ್ತು ಈ ಹೊಸ ಉಪಕ್ರಮಗಳಿಗಾಗಿ ಮಣಿಪುರ ಮತ್ತು ಚುರಚಂದಪುರದ ಜನರನ್ನು ಅಭಿನಂದಿಸಿದರು.

 

ಮಣಿಪುರ ಗಡಿ ರಾಜ್ಯವಾಗಿರುವುದರಿಂದ ಸಂಪರ್ಕವು ಯಾವಾಗಲೂ ದೊಡ್ಡ ಸವಾಲಾಗಿದೆ ಎಂದು ಅವರು ಹೇಳಿದರು. ಉತ್ತಮ ರಸ್ತೆಗಳ ಕೊರತೆಯಿಂದಾಗಿ ಜನರು ಎದುರಿಸುತ್ತಿರುವ ತೊಂದರೆಗಳು ಮತ್ತು ಸಮಸ್ಯೆಗಳ ಬಗ್ಗೆ ತಮಗೆ ಅರಿವಿದೆ ಎಂದು ಹೇಳಿದರು. ತಮ್ಮ ನಾಯಕತ್ವದ ಕೇಂದ್ರ ಸರ್ಕಾರವು 2014 ರಿಂದ ಮಣಿಪುರದಲ್ಲಿ ಸಂಪರ್ಕವನ್ನು ಸುಧಾರಿಸುವತ್ತ ನಿರಂತರವಾಗಿ ಗಮನಹರಿಸಿದೆ ಎಂದು ಅವರು ಹೇಳಿದರು. ಈ ನಿಟ್ಟಿನಲ್ಲಿ, ಕೇಂದ್ರ ಸರ್ಕಾರವು ಎರಡು ಹಂತಗಳಲ್ಲಿ ಕೆಲಸ ಮಾಡುತ್ತಿದೆ, ಮೊದಲ ಹಂತದಲ್ಲಿ, ಮಣಿಪುರದಲ್ಲಿ ರೈಲ್ವೆ ಮತ್ತು ರಸ್ತೆ ಮೂಲಸೌಕರ್ಯಕ್ಕಾಗಿ ಬಜೆಟ್ ಅನ್ನು ಹಲವು ಪಟ್ಟು ಹೆಚ್ಚಿಸಲಾಗಿದೆ, ಎರಡನೇ ಹಂತದಲ್ಲಿ, ಮಣಿಪುರದ ನಗರಗಳು ಮತ್ತು ಹಳ್ಳಿಗಳ ನಡುವೆ ರಸ್ತೆ ಸಂಪರ್ಕವನ್ನು ವಿಸ್ತರಿಸಲು ಪ್ರಯತ್ನಗಳು ನಡೆದಿವೆ ಎಂದು ಅವರು ಹೇಳಿದರು.

ಕಳೆದ ಕೆಲವು ವರ್ಷಗಳಲ್ಲಿ ಈ ಪ್ರದೇಶದಲ್ಲಿ ರಾಷ್ಟ್ರೀಯ ಹೆದ್ದಾರಿಗಳಿಗೆ 3,700 ಕೋಟಿ ರೂ.ಗಳನ್ನು ಖರ್ಚು ಮಾಡಲಾಗಿದೆ ಮತ್ತು 8,700 ಕೋಟಿ ರೂ.ಗಳ ಹೊಸ ಹೆದ್ದಾರಿ ಯೋಜನೆಗಳು ತ್ವರಿತಗತಿಯಲ್ಲಿ ಪ್ರಗತಿಯಲ್ಲಿವೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಹೇಳಿದರು. ಈ ಹಿಂದೆ, ಈ ಪ್ರದೇಶದ ಹಳ್ಳಿಗಳನ್ನು ತಲುಪುವುದು ಅತ್ಯಂತ ಕಷ್ಟಕರವಾಗಿತ್ತು, ಇದು ಸ್ಥಳೀಯರಿಗೆ ಚೆನ್ನಾಗಿ ತಿಳಿದಿರುವ ಸಂಗತಿ ಎಂದು ಅವರು ಹೇಳಿದರು. ಆದರೆ ಈಗ, ರಸ್ತೆಗಳು ನೂರಾರು ಹಳ್ಳಿಗಳನ್ನು ತಲುಪಿವೆ, ಇದು ಗುಡ್ಡಗಾಡು ಹಳ್ಳಿಗಳು ಮತ್ತು ಬುಡಕಟ್ಟು ಸಮುದಾಯಗಳಿಗೆ ಹೆಚ್ಚಿನ ಪ್ರಯೋಜನವನ್ನು ನೀಡಿದೆ ಎಂದು ಅವರು ಹೇಳಿದರು.

"ನಮ್ಮ ಸರ್ಕಾರದ ಅವಧಿಯಲ್ಲಿ ಮಣಿಪುರದಲ್ಲಿ ರೈಲು ಸಂಪರ್ಕ ವಿಸ್ತರಿಸುತ್ತಿದೆ ಮತ್ತು ರಾಜಧಾನಿ ಇಂಫಾಲ್ ಶೀಘ್ರದಲ್ಲೇ ಜಿರಿಬಮ್-ಇಂಫಾಲ್ ರೈಲು ಮಾರ್ಗದ ಮೂಲಕ ರಾಷ್ಟ್ರೀಯ ರೈಲು ಜಾಲಕ್ಕೆ ಸಂಪರ್ಕಗೊಳ್ಳಲಿದೆ" ಎಂದು ಪ್ರಧಾನಮಂತ್ರಿ ಹೇಳಿದರು, ಈ ಯೋಜನೆಗೆ 22,000 ಕೋಟಿ ರೂ. ಹೂಡಿಕೆ ಮಾಡಲಾಗುತ್ತಿದೆ ಎಂದು ಹೇಳಿದರು. 400 ಕೋಟಿ ರೂ. ವೆಚ್ಚದಲ್ಲಿ ಹೊಸದಾಗಿ ನಿರ್ಮಿಸಲಾದ ಇಂಫಾಲ್ ವಿಮಾನ ನಿಲ್ದಾಣವು ಈ ಪ್ರದೇಶದಲ್ಲಿ ವಾಯು ಸಂಪರ್ಕವನ್ನು ಹೆಚ್ಚಿಸುತ್ತಿದೆ. ಈ ವಿಮಾನ ನಿಲ್ದಾಣದಿಂದ ದೇಶದ ಇತರ ಭಾಗಗಳಿಗೆ ಹೆಲಿಕಾಪ್ಟರ್ ಸೇವೆಗಳು ಸಹ ಪ್ರಾರಂಭವಾಗಿವೆ. ಹೆಚ್ಚಿದ ಸಂಪರ್ಕದಿಂದಾಗಿ, ಮಣಿಪುರದ ಜನರಿಗೆ ಸೌಲಭ್ಯಗಳನ್ನು ಸುಧಾರಿಸಲಾಗುತ್ತಿದೆ ಮತ್ತು ಯುವಕರಿಗೆ ಹೊಸ ಉದ್ಯೋಗಾವಕಾಶಗಳನ್ನು ಸೃಷ್ಟಿಸಲಾಗುತ್ತಿದೆ ಎಂದು ಅವರು ಹೇಳಿದರು.

 

"ಭಾರತವು ವೇಗವಾಗಿ ಬೆಳೆಯುತ್ತಿದೆ ಮತ್ತು ಶೀಘ್ರದಲ್ಲೇ ವಿಶ್ವದ ಮೂರನೇ ಅತಿದೊಡ್ಡ ಆರ್ಥಿಕತೆಯಾಗಲಿದೆ. ಅಭಿವೃದ್ಧಿಯ ಪ್ರಯೋಜನಗಳು ದೇಶದ ಮೂಲೆ ಮೂಲೆಗೂ ತಲುಪುವಂತೆ ನೋಡಿಕೊಳ್ಳುವುದು ನಮ್ಮ ನಿರಂತರ ಪ್ರಯತ್ನವಾಗಿದೆ" ಎಂದು ಪ್ರಧಾನಮಂತ್ರಿ ಹೇಳಿದರು. ಒಂದು ಕಾಲದಲ್ಲಿ, ದೆಹಲಿಯಲ್ಲಿ ಮಾಡಿದ ಘೋಷಣೆಗಳು ಮಣಿಪುರದಂತಹ ಸ್ಥಳಗಳನ್ನು ತಲುಪಲು ದಶಕಗಳೇ ಬೇಕಾಗುತ್ತಿದ್ದವು ಎಂದು ಅವರು ನೆನಪಿಸಿಕೊಂಡರು. ಆದಾಗ್ಯೂ, ಇಂದು, ಚುರಚಂದಪುರ ಮತ್ತು ಮಣಿಪುರವು ದೇಶದ ಉಳಿದ ಭಾಗಗಳೊಂದಿಗೆ ಪ್ರಗತಿ ಸಾಧಿಸುತ್ತಿವೆ ಎಂದು ಅವರು ಹೇಳಿದರು. ಬಡವರಿಗೆ ಪಕ್ಕಾ ಮನೆಗಳನ್ನು ನಿರ್ಮಿಸಲು ಸರ್ಕಾರ ರಾಷ್ಟ್ರೀಯ ಯೋಜನೆಯನ್ನು ಪ್ರಾರಂಭಿಸಿದೆ, ಇದು ಮಣಿಪುರದ ಸಾವಿರಾರು ಕುಟುಂಬಗಳಿಗೆ ಪ್ರಯೋಜನವನ್ನು ನೀಡಿದೆ, ಸುಮಾರು 60,000 ಮನೆಗಳನ್ನು ಈಗಾಗಲೇ ನಿರ್ಮಿಸಲಾಗಿದೆ ಎಂದು ಅವರು ಹೇಳಿದರು. ಹಿಂದೆ, ಈ ಪ್ರದೇಶವು ತೀವ್ರ ವಿದ್ಯುತ್ ಕೊರತೆಯನ್ನು ಎದುರಿಸುತ್ತಿತ್ತು. ಈ ಸಮಸ್ಯೆಯಿಂದ ಜನರನ್ನು ಮುಕ್ತಗೊಳಿಸಲು ಸರ್ಕಾರ ದೃಢನಿಶ್ಚಯವನ್ನು ಮಾಡಿತು ಮತ್ತು ಇದರ ಅಡಿಯಲ್ಲಿ, ಮಣಿಪುರದ 1,00,000 ಕ್ಕೂ ಹೆಚ್ಚು ಕುಟುಂಬಗಳಿಗೆ ಉಚಿತ ವಿದ್ಯುತ್ ಸಂಪರ್ಕಗಳನ್ನು ನೀಡಲಾಗಿದೆ ಎಂದು ಅವರು ಹೇಳಿದರು.

ಮಣಿಪುರದ ತಾಯಂದಿರು ಮತ್ತು ಸಹೋದರಿಯರು ದೀರ್ಘಕಾಲದವರೆಗೆ ನೀರು ಪಡೆಯುವಲ್ಲಿ ತೊಂದರೆಗಳನ್ನು ಎದುರಿಸುತ್ತಿದ್ದರು. ಇದನ್ನು ಗಮನದಲ್ಲಿಟ್ಟುಕೊಂಡು ಸರ್ಕಾರ 'ಹರ್ ಘರ್ ನಲ್ ಸೆ ಜಲ್' ಯೋಜನೆಯನ್ನು ಪ್ರಾರಂಭಿಸಿದೆ ಎಂದು ಪ್ರಧಾನಮಂತ್ರಿ ಹೇಳಿದರು. ಕಳೆದ ಕೆಲವು ವರ್ಷಗಳಲ್ಲಿ, ದೇಶಾದ್ಯಂತ 15 ಕೋಟಿಗೂ ಹೆಚ್ಚು ನಾಗರಿಕರು ನಲ್ಲಿಗಳ ಮೂಲಕ ನೀರು ಪಡೆದಿದ್ದಾರೆ ಎಂದು ಅವರು ಹೇಳಿದರು. 7-8 ವರ್ಷಗಳ ಹಿಂದೆ, ಮಣಿಪುರದಲ್ಲಿ ಕೇವಲ 25,000 ರಿಂದ 30,000 ಮನೆಗಳಿಗೆ ನಲ್ಲಿಗಳ ಮೂಲಕ ನೀರು ಸಿಗುತ್ತಿತ್ತು. ಇಂದು, ರಾಜ್ಯದಲ್ಲಿ ಮೂರೂವರೆ ಲಕ್ಷಕ್ಕೂ ಹೆಚ್ಚು ಮನೆಗಳಿಗೆ ನಲ್ಲಿ ನೀರಿನ ಸಂಪರ್ಕವಿದೆ ಮತ್ತು ಶೀಘ್ರದಲ್ಲೇ ಮಣಿಪುರದ ಪ್ರತಿಯೊಂದು ಮನೆಗೂ ನಲ್ಲಿಗಳ ಮೂಲಕ ನೀರು ತಲುಪಲಿದೆ ಎಂದು ಪ್ರಧಾನಮಂತ್ರಿ ವಿಶ್ವಾಸ ವ್ಯಕ್ತಪಡಿಸಿದರು.

ಸಾಮಾಜಿಕ ಮೂಲಸೌಕರ್ಯಗಳ ಬಗ್ಗೆ ಮಾತನಾಡಿದ ಪ್ರಧಾನಮಂತ್ರಿ, ಗುಡ್ಡಗಾಡು ಮತ್ತು ಬುಡಕಟ್ಟು ಪ್ರದೇಶಗಳಲ್ಲಿ ಹಿಂದೆ ಉತ್ತಮ ಶಾಲೆಗಳು, ಕಾಲೇಜುಗಳು ಮತ್ತು ಆಸ್ಪತ್ರೆಗಳು ಕೇವಲ ಕನಸಾಗಿದ್ದವು. ಯಾರಾದರೂ ಅನಾರೋಗ್ಯಕ್ಕೆ ಒಳಗಾದರೆ, ಆಸ್ಪತ್ರೆಗೆ ತಲುಪಲು ಬಹಳ ಸಮಯ ಹಿಡಿಯುತ್ತಿತ್ತು ಎಂದು ಅವರು ಹೇಳಿದರು. ಭಾರತ ಸರ್ಕಾರದ ಪ್ರಯತ್ನಗಳಿಂದಾಗಿ ಪರಿಸ್ಥಿತಿ ಈಗ ಬದಲಾಗುತ್ತಿದೆ ಮತ್ತು ಚುರಚಂದಪುರದಲ್ಲಿ ವೈದ್ಯಕೀಯ ಕಾಲೇಜು ಸ್ಥಾಪಿಸಲಾಗಿದೆ ಎಂದು ಶ್ರೀ ಮೋದಿ ಒತ್ತಿ ಹೇಳಿದರು. ಈಗ ಅಲ್ಲಿ ಹೊಸ ವೈದ್ಯರಿಗೆ ತರಬೇತಿ ನೀಡಲಾಗುತ್ತಿದೆ ಮತ್ತು ಆರೋಗ್ಯ ಸೇವೆಗಳು ಸುಧಾರಿಸುತ್ತಿವೆ ಎಂದು ಅವರು ಹೇಳಿದರು. ಸ್ವಾತಂತ್ರ್ಯದ ನಂತರ ಹಲವು ದಶಕಗಳಿಂದ ಮಣಿಪುರದ ಗುಡ್ಡಗಾಡು ಪ್ರದೇಶಗಳಲ್ಲಿ ಯಾವುದೇ ವೈದ್ಯಕೀಯ ಕಾಲೇಜು ಇರಲಿಲ್ಲ ಎಂಬ ಅಂಶವನ್ನು ಪ್ರಧಾನಮಂತ್ರಿ ಜನರು ತಿಳಿಯಬೇಕು. ಈ ಸಾಧನೆ ಪ್ರಸ್ತುತ ಸರ್ಕಾರದಿಂದ ಮಾತ್ರ ಸಾಧ್ಯವಾಗಿದೆ ಎಂದು ಅವರು ಹೇಳಿದರು. ಐದು ಗುಡ್ಡಗಾಡು ಜಿಲ್ಲೆಗಳಲ್ಲಿ ಸರ್ಕಾರ ಆಧುನಿಕ ಆರೋಗ್ಯ ಸೇವೆಗಳನ್ನು ಅಭಿವೃದ್ಧಿಪಡಿಸುತ್ತಿದೆ ಎಂದು ಅವರು ಪ್ರಧಾನಮಂತ್ರಿ ಡಿವೈನ್‌ (PM-DIVINE) ಯೋಜನೆಯನ್ನು ಉಲ್ಲೇಖಿಸಿದರು. ಆಯುಷ್ಮಾನ್ ಭಾರತ್ ಯೋಜನೆಯಡಿಯಲ್ಲಿ  ಸರ್ಕಾರ ಬಡ ಕುಟುಂಬಗಳಿಗೆ 5 ಲಕ್ಷ ರೂ.ವರೆಗೆ ಉಚಿತ ಚಿಕಿತ್ಸೆಯನ್ನು ನೀಡುತ್ತಿದೆ ಎಂದು ಶ್ರೀ ಮೋದಿ ಹೇಳಿದರು. ಮಣಿಪುರದಲ್ಲಿ ಸುಮಾರು 2.5 ಲಕ್ಷ ರೋಗಿಗಳು ಈ ಯೋಜನೆಯಡಿ ಉಚಿತ  ಚಿಕಿತ್ಸೆಯನ್ನು ಪಡೆದಿದ್ದಾರೆ ಎಂದು ಅವರು ಹೇಳಿದರು. ಈ ಸೌಲಭ್ಯವಿಲ್ಲದಿದ್ದರೆ ರಾಜ್ಯದ ಬಡ ಕುಟುಂಬಗಳು ತಮ್ಮ ಜೇಬಿನಿಂದ ₹350 ಕೋಟಿ ಖರ್ಚು ಮಾಡಬೇಕಾಗುತ್ತಿತ್ತು. ಈ ಸಂಪೂರ್ಣ ವೆಚ್ಚವನ್ನು ಭಾರತ ಸರ್ಕಾರ ಭರಿಸಿದೆ ಎಂದು ಪ್ರಧಾನಮಂತ್ರಿ ಒತ್ತಿ ಹೇಳಿದರು. ಪ್ರತಿಯೊಬ್ಬ ಬಡ ನಾಗರಿಕನ ಕಾಳಜಿಗಳನ್ನು ನೋಡಿಕೊಳ್ಳುವುದು ಸರ್ಕಾರದ ಪ್ರಮುಖ ಆದ್ಯತೆಯಾಗಿದೆ ಎಂದು ಅವರು ಹೇಳಿದರು.

 

"ಮಣಿಪುರದ ಭೂಮಿ ಮತ್ತು ಪ್ರದೇಶವು ಭರವಸೆ ಮತ್ತು ಆಕಾಂಕ್ಷೆಗಳ ನಾಡು" ಎಂದು ಪ್ರಧಾನಮಂತ್ರಿ ಹೇಳಿದರು. ದುರದೃಷ್ಟವಶಾತ್ ಈ ಅದ್ಭುತವಾದ ಪ್ರದೇಶದಲ್ಲಿ ಹಿಂಸಾಚಾರವು ವ್ಯಾಪಕವಾಗಿದೆ ಎಂದು ಅವರು ಹೇಳಿದರು. ಸ್ವಲ್ಪ ಸಮಯದ ಹಿಂದೆಯಷ್ಟೇ ಶಿಬಿರಗಳಲ್ಲಿ ವಾಸಿಸುತ್ತಿರುವ ಸಂತ್ರಸ್ತ ಜನರನ್ನು ಭೇಟಿಯಾಗಿದ್ದಾಗಿ ಅವರು ಹೇಳಿದರು. ಅವರೊಡನೆ ಸಂವಾದ ನಡೆಸಿದ ನಂತರ, ಮಣಿಪುರದಲ್ಲಿ ಭರವಸೆ ಮತ್ತು ಆತ್ಮವಿಶ್ವಾಸದ ನವೋದಯವಾಗುತ್ತಿದೆ ಎಂದು ಪ್ರಧಾನಮಂತ್ರಿ ವಿಶ್ವಾಸ ವ್ಯಕ್ತಪಡಿಸಿದರು.

"ಯಾವುದೇ ಪ್ರದೇಶದ ಅಭಿವೃದ್ಧಿಗೆ ಶಾಂತಿ ಅತ್ಯಗತ್ಯ ಮತ್ತು ಕಳೆದ ಹನ್ನೊಂದು ವರ್ಷಗಳಲ್ಲಿ ಈಶಾನ್ಯದಲ್ಲಿ ಅನೇಕ ಹಳೆಯ ಸಂಘರ್ಷಗಳು ಮತ್ತು ವಿವಾದಗಳನ್ನು ಪರಿಹರಿಸಲಾಗಿದೆ" ಎಂದು ಪ್ರಧಾನಮಂತ್ರಿ ಹೇಳಿದರು. ಜನರು ಶಾಂತಿಯ ಮಾರ್ಗವನ್ನು ಆರಿಸಿಕೊಂಡಿದ್ದಾರೆ ಮತ್ತು ಅಭಿವೃದ್ಧಿಗೆ ಆದ್ಯತೆ ನೀಡಿದ್ದಾರೆ ಎಂದು ಅವರು ಹೇಳಿದರು. ಗುಡ್ಡಗಾಡು ಮತ್ತು ಕಣಿವೆ ಪ್ರದೇಶಗಳ ವಿವಿಧ ಗುಂಪುಗಳೊಂದಿಗೆ ಇತ್ತೀಚೆಗೆ ಮಾತುಕತೆಗಳು ನಡೆದಿರುವುದಕ್ಕೆ ಶ್ರೀ ಮೋದಿ ತೃಪ್ತಿ ವ್ಯಕ್ತಪಡಿಸಿದರು. ಈ ಪ್ರಯತ್ನಗಳು ಭಾರತ ಸರ್ಕಾರದ ದೃಷ್ಟಿಕೋನದ ಭಾಗವಾಗಿದ್ದು, ಇದು ಶಾಂತಿಯನ್ನು ಸ್ಥಾಪಿಸಲು ಸಂವಾದ, ಗೌರವ ಮತ್ತು ಪರಸ್ಪರ ತಿಳುವಳಿಕೆಗೆ ಒತ್ತು ನೀಡುತ್ತದೆ ಎಂದು ಅವರು ಹೇಳಿದರು. ಎಲ್ಲಾ ಸಂಘಟನೆಗಳು ಶಾಂತಿಯ ಹಾದಿಯಲ್ಲಿ ಮುನ್ನಡೆಯಬೇಕು ಮತ್ತು ತಮ್ಮ ಆಕಾಂಕ್ಷೆಗಳನ್ನು ಈಡೇರಿಸಿಕೊಳ್ಳಬೇಕೆಂದು ಪ್ರಧಾನಮಂತ್ರಿ ಮನವಿ ಮಾಡಿದರು. ತಮ್ಮ ಬೆಂಬಲ ವ್ಯಕ್ತಪಡಿಸಿದ ಅವರು, ನಾನು ಜನರೊಂದಿಗೆ ನಿಲ್ಲುತ್ತೇನೆ ಮತ್ತು ಭಾರತ ಸರ್ಕಾರ ಮಣಿಪುರದೊಂದಿಗೆ ಇದೆ ಎಂದು ಹೇಳಿದರು.

ಮಣಿಪುರದಲ್ಲಿ ಜೀವನವನ್ನು ಮತ್ತೆ ಹಳಿಗೆ ತರಲು ಭಾರತ ಸರ್ಕಾರ ಎಲ್ಲ ಪ್ರಯತ್ನಗಳನ್ನು ಮಾಡುತ್ತಿದೆ ಎಂದು ಶ್ರೀ ಮೋದಿ ಒತ್ತಿ ಹೇಳಿದರು. ಸ್ಥಳಾಂತರಗೊಂಡ ಕುಟುಂಬಗಳಿಗೆ 7,000 ಹೊಸ ಮನೆಗಳನ್ನು ನಿರ್ಮಿಸಲು ಸರ್ಕಾರ ನೆರವು ನೀಡುತ್ತಿದೆ ಎಂದು ಅವರು ಹೇಳಿದರು. ಇತ್ತೀಚೆಗೆ ಸುಮಾರು ₹3,000 ಕೋಟಿ ವಿಶೇಷ ಪ್ಯಾಕೇಜ್ ಅನ್ನು ಅನುಮೋದಿಸಲಾಗಿದೆ ಎಂದು ಪ್ರಧಾನಮಂತ್ರಿ ಘೋಷಿಸಿದರು. ಸ್ಥಳಾಂತರಗೊಂಡ ಜನರಿಗೆ ಸಹಾಯ ಮಾಡಲು ₹500 ಕೋಟಿಯನ್ನು ವಿಶೇಷವಾಗಿ ನಿಗದಿಪಡಿಸಲಾಗಿದೆ ಎಂದು ಅವರು ಮಾಹಿತಿ ನೀಡಿದರು.

 

ಮಣಿಪುರದ ಬುಡಕಟ್ಟು ಯುವಕರ ಕನಸುಗಳು ಮತ್ತು ಹೋರಾಟಗಳ ಬಗ್ಗೆ ತಮಗೆ ಚೆನ್ನಾಗಿ ಅರಿವಿದೆ ಎಂದ ಪ್ರಧಾನಮಂತ್ರಿ, ಅವರ ಕಳವಳಗಳನ್ನು ಪರಿಹರಿಸಲು ಹಲವಾರು ಪರಿಹಾರಗಳನ್ನು ಜಾರಿಗೆ ತರಲಾಗುತ್ತಿದೆ ಎಂದು ಹೇಳಿದರು. ಸ್ಥಳೀಯ ಆಡಳಿತ ಸಂಸ್ಥೆಗಳನ್ನು ಬಲಪಡಿಸಲು ಸರ್ಕಾರ ಕೆಲಸ ಮಾಡುತ್ತಿದೆ ಮತ್ತು ಅವುಗಳ ಅಭಿವೃದ್ಧಿಗೆ ಸೂಕ್ತ ಹಣಕಾಸು ವ್ಯವಸ್ಥೆ ಮಾಡಲಾಗುತ್ತಿದೆ ಎಂದು ಅವರು ಒತ್ತಿ ಹೇಳಿದರು.

"ಪ್ರತಿಯೊಂದು ಬುಡಕಟ್ಟು ಸಮುದಾಯದ ಅಭಿವೃದ್ಧಿಯು ರಾಷ್ಟ್ರೀಯ ಆದ್ಯತೆಯಾಗಿದೆ" ಎಂದು ಪ್ರಧಾನಮಂತ್ರಿ ಹೇಳಿದರು. ಬುಡಕಟ್ಟು ಪ್ರದೇಶಗಳ ಅಭಿವೃದ್ಧಿಗಾಗಿ ಮೊದಲ ಬಾರಿಗೆ ಧರ್ತಿ ಆಬಾ ಜನಜಾತಿ ಗ್ರಾಮ ಉತ್ಕರ್ಷ್ ಅಭಿಯಾನವನ್ನು ಪ್ರಾರಂಭಿಸಲಾಗಿದೆ ಎಂದು ಅವರು ಮಾಹಿತಿ ನೀಡಿದರು. ಈ ಉಪಕ್ರಮದಡಿಯಲ್ಲಿ, ಮಣಿಪುರದ 500 ಕ್ಕೂ ಹೆಚ್ಚು ಹಳ್ಳಿಗಳಲ್ಲಿ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿವೆ. ಬುಡಕಟ್ಟು ಪ್ರದೇಶಗಳಲ್ಲಿ ಏಕಲವ್ಯ ಮಾದರಿ ವಸತಿ ಶಾಲೆಗಳ ಸಂಖ್ಯೆಯನ್ನು ಹೆಚ್ಚಿಸಲಾಗುತ್ತಿದೆ. ಮಣಿಪುರದಲ್ಲಿ 18 ಏಕಲವ್ಯ ಮಾದರಿ ವಸತಿ ಶಾಲೆಗಳನ್ನು ನಿರ್ಮಿಸಲಾಗುತ್ತಿದೆ ಎಂದು ಶ್ರೀ ಮೋದಿ ಹೇಳಿದರು. ಶಾಲೆಗಳು ಮತ್ತು ಕಾಲೇಜುಗಳ ಆಧುನೀಕರಣವು ಗುಡ್ಡಗಾಡು ಜಿಲ್ಲೆಗಳಲ್ಲಿ ಶೈಕ್ಷಣಿಕ ಸೌಲಭ್ಯಗಳನ್ನು ಗಮನಾರ್ಹವಾಗಿ ಹೆಚ್ಚಿಸುತ್ತದೆ ಎಂದು ಅವರು ಒತ್ತಿ ಹೇಳಿದರು.

 

ಮಣಿಪುರದ ಸಂಸ್ಕೃತಿ ಯಾವಾಗಲೂ ಮಹಿಳಾ ಸಬಲೀಕರಣವನ್ನು ಉತ್ತೇಜಿಸಿದೆ ಎಂದು ಒತ್ತಿ ಹೇಳಿದ ಶ್ರೀ ಮೋದಿ, ಸರ್ಕಾರ ಮಹಿಳೆಯರ ಸಬಲೀಕರಣಕ್ಕೆ ಸಕ್ರಿಯವಾಗಿ ಕೆಲಸ ಮಾಡುತ್ತಿದೆ ಎಂದು ಹೇಳಿದರು. ಮಣಿಪುರದ ಹೆಣ್ಣುಮಕ್ಕಳಿಗೆ ಸಹಾಯ ಮಾಡಲು ಸರ್ಕಾರ ದುಡಿಯುವ ಮಹಿಳೆಯರಿಗಾಗಿ ಹಾಸ್ಟೆಲ್‌ ಗಳನ್ನು ನಿರ್ಮಿಸುತ್ತಿದೆ ಎಂದು ಅವರು ಹೇಳಿದರು.

"ಮಣಿಪುರವನ್ನು ಶಾಂತಿ, ಸಮೃದ್ಧಿ ಮತ್ತು ಪ್ರಗತಿಯ ಸಂಕೇತವನ್ನಾಗಿ ಮಾಡುವ ಗುರಿಯೊಂದಿಗೆ ನಾವು ಕೆಲಸ ಮಾಡುತ್ತಿದ್ದೇವೆ" ಎಂದು ಪ್ರಧಾನಮಂತ್ರಿ ಹೇಳಿದರು. ಮಣಿಪುರದ ಅಭಿವೃದ್ಧಿ, ಸ್ಥಳಾಂತರಗೊಂಡ ಕುಟುಂಬಗಳ ಪುನರ್ವಸತಿ ಮತ್ತು ಶಾಂತಿ ನಿರ್ಮಾಣಕ್ಕಾಗಿ ಭಾರತ ಸರ್ಕಾರ ಮಣಿಪುರ ಸರ್ಕಾರಕ್ಕೆ ಸಾಧ್ಯವಿರುವ ಎಲ್ಲ ರೀತಿಯ ಬೆಂಬಲ ನೀಡುವುದನ್ನು ಮುಂದುವರಿಸುತ್ತದೆ ಎಂದು ಜನರಿಗೆ ಭರವಸೆ ನೀಡುವ ಮೂಲಕ ಪ್ರಧಾನಮಂತ್ರಿಯವರು ತಮ್ಮ ಮಾತು ಮುಗಿಸಿದರು.

ಮಣಿಪುರದ ರಾಜ್ಯಪಾಲ ಶ್ರೀ ಅಜಯ್ ಕುಮಾರ್ ಭಲ್ಲಾ ಸೇರಿದಂತೆ ಇತರ ಗಣ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಹಿನ್ನೆಲೆ

ಈ ಯೋಜನೆಗಳಲ್ಲಿ ಮಣಿಪುರ ನಗರ ರಸ್ತೆಗಳು, ಒಳಚರಂಡಿ ಮತ್ತು ಆಸ್ತಿ ನಿರ್ವಹಣಾ ಸುಧಾರಣಾ ಯೋಜನೆಗಳು 3,600 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ್ದಾಗಿವೆ; 2,500 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ 5 ರಾಷ್ಟ್ರೀಯ ಹೆದ್ದಾರಿ ಯೋಜನೆಗಳು; ಮಣಿಪುರ ಇನ್ಫೋಟೆಕ್ ಅಭಿವೃದ್ಧಿ (ಎಂ ಐ  ಎನ್‌ ಡಿ) ಯೋಜನೆ, 9 ಸ್ಥಳಗಳಲ್ಲಿ ದುಡಿಯುವ ಮಹಿಳೆಯರಿಗಾಗಿ ಹಾಸ್ಟೆಲ್‌ ಗಳು ಸೇರಿವೆ.

 

ಭಾಷಣದ ಪೂರ್ಣ ಪಠ್ಯವನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
India auto retail hits record August with 24.23 lakh registrations, up 17.5%

Media Coverage

India auto retail hits record August with 24.23 lakh registrations, up 17.5%
NM on the go

Nm on the go

Always be the first to hear from the PM. Get the App Now!
...
The Dedicated Freight Corridor is the lifeline of a rapidly developing India: PM Modi in Vadodara, Gujarat
September 08, 2026
We are strengthening India's infrastructure to move people and goods faster, create new opportunities and power economic growth: PM
The Dedicated Freight Corridor is the lifeline of a rapidly developing India: PM
From chips to ships, India is now building a new manufacturing future: PM

भारत माता की जय।

भारत माता की जय।

गुजरात के राज्यपाल आचार्य देवव्रत जी, यहां के लोकप्रिय मुख्यमंत्री श्री भूपेंद्र भाई पटेल, इस कार्यक्रम में ऑनलाइन हमारे साथ अनेक राज्यों के महानुभाव जुड़े हैं। महाराष्ट्र के गवर्नर जिष्णु देव वर्मा जी, मुख्यमंत्री देवेंद्र फ़डणवीस जी, डिप्टी सीएम एकनाथ शिंदे जी, डिप्टी सीएम श्रीमती सुनेत्र पवार जी, अन्य मंत्रीगण, सांसदगण, विधायकगण और वहां पर भी इकट्ठे हुए लाखों नागरिक भाई-बहन। यहां मंच पर उपस्थित केंद्रीय मंत्रिमंडल के मेरे साथी अश्विनी वैष्णव, उपमुख्यमंत्री, युवा नेता हर्ष संघवी, गुजरात सरकार के मंत्रीगण, उपस्थित अन्य जनप्रतिनिधिगण, गुजरात के मेरे प्यारे भाइयों और बहनों।

और खास इसलिए के मेरे ब़डौदा के महाराजा सयाजीराव यूनिवर्सिटी का ये मैदान अलग-अलग फील्ड में काम करने वाले सभी साथियों का साथ और विकास का ये उत्सव, यहां सबकुछ एक साथ हो रहा है।

साथियों,

आज मैं विकसित भारत की यात्रा को और गति देने के लिए आपके बीच आया हूं। थोड़ी देर पहले यहां देश के विकास से जुड़े हज़ारों करोड़ रुपए के प्रोजेक्ट्स का शिलान्यास और लोकार्पण हुआ है। मैं देश की जनता को बहुत-बहुत बधाई देता हूं। इस विकास पर्व पर आप सभी ने जिस सेवा भाव से और सेवा भाव के साथ पूरे वडोदरा शहर में स्वच्छता से स्वागत अभियान चलाया है, इसके लिए मैं वड़ोदरा के हर एक नागरिक को ह्दय से बहुत-बहुत बधाई देता हूं, उनकी सराहना करता हूं। और ये जो आपने रंग दिखाया ना, मैं कल एक वीडियो देख रहा था, सीना चौड़ा हो गया, वाह! क्या ये मेरा वडोदरा है? और अब तो गणेशोत्सव की तैयारी, बाद में नवरात्रि। और गणेशोत्सव और नवरात्रि पूरा गुजरात का ध्यान वडोदरा पर होता है। और आज आपने, मैं देख रहा था पिछले एक सप्ताह से हर परिवार में वातावरण बन गया है स्वच्छता का। मुझे लगता है कि इस बार जब गणेश जी पधारेंगे ना, सारे आशीर्वाद वड़ोदरा पर बरसने वाले हैं।

साथियों,

इस वर्ष लाल किले से मैंने विकसित भारत के लिए संकल्प की सप्तधारा का आह्वान किया है। इस सप्तधारा में एक धारा गतिशक्ति की भी है। विकसित भारत के लिए हमें ऐसी कनेक्टिविटी चाहिए, जो सुगम भी हो और जमाने के हिसाब से जरा तेज भी हो। वड़ोदरा तो गतिशक्ति यूनिवर्सिटी का शहर है। आज यहां से डेडिकेटेड फ्रेट कॉरिडोर की आखिरी कड़ियां भी जुड़ गई हैं। आज 2800 किलोमीटर से अधिक का डेडिकेटेड फ्रेट कॉरिडोर प्रोजेक्ट पूरा हो गया। ये 21वीं सदी के भारत के लिए बहुत ऐतिहासिक कार्य संपन्न हुआ है।

साथियों,

ये डेडिकेटेड फ्रेट कॉरिडोर, इस बात का साक्षी है कि बीते 12 साल में देश की काम करने की संस्कृति कैसे बदली है। इस डेडिकेटेड फ्रेट कॉरिडोर पर 2004 में विचार शुरू हुआ था। यानी, यहां मैं सारे नौजवान देख रहा हूं, जब इसका विचार शुरू हुआ, आप में से बहुत लोग होंगे जिनका जन्म भी नहीं हुआ होगा, उस समय शुरू हुआ था। 2006 में एक विशेष कंपनी बनाई गई इस काम को करने के लिए और फिर 2014 तक फाइलें ही यहां से वहां होती रहीं। फाइलें टेबल पर यात्रा कर रही थी और दुर्भाग्य देखिए, इन फाइलों को भी कोई डेडिकेटेड कॉरिडोर नसीब नहीं हुआ, फाइल को भी नहीं नसीब हुआ। फाइलें अटकती थीं, लटकती थीं, भटकती थीं। और 2014 में वड़ोदरा के और गुजरात के और देश के लोगों ने मुझे गुजरात से निकाल करके दिल्ली भेज दिया। पहले वाली सरकार 2000 तक रही। आपने मुझे भेजा और उनकी विदाई हुई, और सच्चाई ये थी कि सात-आठ वर्ष में, जरा मेरे नौजवान सुन लीजिए, ये याद रखिए, सात-आठ वर्ष में एक किलोमीटर फ्रेट कॉरिडोर पर भी काम पूरा नहीं हो पाया था। अगर उनके हिसाब से देश चलाते, तो पता नहीं आपके बाद तीन-चार पीढ़ियां आती, तो भी नहीं होता। भारत के लॉजिस्टिक्स इकोसिस्टम को ट्रांसफॉर्म करने वाले प्रोजेक्ट की ये हालत करके रखी थी।

साथियों,

2014 के बाद आपने जो मुझे शिक्षा-दीक्षा दी थी, इस धरती ने मुझे जो सिखाया था, आपके पास से जो लेसन लेके मैं दिल्ली पहुंचा था, हमने वहां पहुंचते ही इसको गति देने का काम प्रारंभ कर दिया। 2800 किलोमीटर के कॉरिडोर का काम आज पूरा करके दिखाया। और आज ईस्टर्न और वेस्टर्न डेडिकेटेड फ्रेट कॉरिडोर, देश के व्यापार-कारोबार का मुख्य आधार बन रहा है।

साथियों,

डेडिकेटेड फ्रेट कॉरिडोर, तेजी से विकसित होते भारत की जीवन रेखा है। इसने भारत के ट्रांसपोर्टेशन सेक्टर का कायाकल्प कर दिया है। पहले पैसेंजर ट्रेन जिस ट्रैक पर चलती थी, उसी ट्रैक पर मालगाड़ी भी चलती थी। यानि ट्रैवल और ट्रांसपोर्ट, दोनों धीमा था। लेकिन, डेडिकेटेड फ्रेट कॉरिडोर ने इस स्थिति को बदल दिया है। आज पूर्वी और पश्चिमी फ्रेट कॉरिडोर्स पर हर रोज़ 430 से ज्यादा मालगाड़ियां चलती हैं, प्रतिदिन 430 मालगाड़ी। और पहले जो मालगाड़ी, साढ़े 6 घंटे में 100 किलोमीटर का सफऱ तय करती थी और अब वही मालगाड़ी आधे से भी कम समय में 100 किलोमीटर का सफर तय कर लेगी। जिस जगह पर ट्रक से सामान भेजने में सामान्य तौर पर 30 घंटे लगते हैं, डेडिकेटेड फ्रेट कॉरिडोर पर यही दूरी 10-12 घंटे में पूरी हो जाती है। यानि, इस कॉरिडोर पर मालगाड़ी के चलने से ट्रक और ट्रेन में लगने वाला फ्यूल बचता है, किराया-भाड़ा का खर्च कम हुआ है, समय बचा है, पर्यावरण को फायदा हुआ है। यानि, इन्वेस्टमेंट एक ट्रैक पर किया और फायदे अनेक सारे हुए हैं।

साथियों,

इस फ्रेट कॉरिडोर से पूर्वी और पश्चिमी भारत के किसानों की उपज अब तेज़ी से बड़े बाज़ार तक पहुंच पा रही है। कई तरह के फूल, कई तरह की सब्जियां, कई तरह के फल, यानि जो चीजें मौसम के हिसाब से जल्दी खराब होती हैं, उनके लिए भी सही समय पर मंडियों और लोगों के बीच पहुंचने का रास्ता बना है। इससे किसान का बहुत बड़ा फायदा हुआ है।

साथियों,

ये फ्रेट कॉरिडोर एक और वजह से कमाल का है। हाल ही में JNPT मुंबई, JNPT पोर्ट से वड़ोदरा तक Double स्टैक Container मालगाड़ी का संचालन किया गया है। यानि डिब्बे के ऊपर एक और डिब्बा लगाकर मालगाड़ी को चलाया गया। इस मालगाड़ी के चलने से एक बार में ही 250 से अधिक ट्रकों के बराबर का सामान मुंबई से वड़ोदरा चला आया, 250 ट्रक। अब ये जो नाराज फूफा जी है, वो चिल्लाएंगे कि ट्रक वालों का क्या होगा? ट्रक कहां जाएंगे? जिन्होंने ट्रक खरीदा है, उनका क्या होगा? अब फूफा जी को काम मिल गया। यानि अब बड़ी मात्रा में सामान तेजी से देश के एक कोने से दूसरे कोने तक पहुंच पाएगा।

साथियों,

फ्रेट कॉरिडोर के साथ-साथ अब भारत में रेल वहां भी पहुंच रही है, जहां इतने दशकों तक नहीं पहुंची थी। गुजरात हो, मध्य प्रदेश हो, महाराष्ट्र हो, यहां जो आदिवासी क्षेत्र हैं, वो भी इस प्रोजेक्ट के द्वारा रेल से जुड़ रहे हैं। पहले की सरकार में बजट में एक-दो ट्रेनों की घोषणा होती थी और उसके भी साल भर ढोल पीटे जाते थे। जबकि आज देश में साल भर एक के बाद एक नई ट्रेनें चलाई जा रही हैं। आज भी इस कार्यक्रम में कई नई ट्रेन शुरु हुई हैं। नई ट्रेन से वड़ोदरा, छोटा उदयपुर और अलीराजपुर के लोगों को बहुत सुविधा होगी।

साथियों,

रोड, रेल, मेट्रो, एयरपोर्ट, गैस पाइपलाइन, गरीबों का घर, जब देश में करोड़ों लोगों के लिए ये चीजें बनती हैं, तो इससे लोगों का जीवन आसान होता है और साथ ही छोटे से बड़े कामगार को रोजगार के लाखों-लाख अवसर मिलते हैं। आप रेलवे का ही देखिए, इस वर्ष का रेल बजट पौने तीन लाख करोड़ रुपए से अधिक रहा है। जो 12 वर्ष पहले की तुलना में कई गुणा अधिक है। यानि रेलवे के आधुनिकीकरण पर हो रहा खर्च, हज़ारों हज़ार नए रोजगार बना रहा है। और ये रोजगार कंस्ट्रक्शन के दौरान तो बनता ही है। एक बार रोड, रेल, पाइपलाइन, पोर्ट, एयरपोर्ट बन गया, तो फिर उसके आसपास नए उद्योग लगना शुरू हो जाते हैं, नए बिजनेस आते हैं, ये फिर नए रोजगार बनाते हैं। वहां कुछ लोग, वो बेटी चित्र लेकर कब से खड़ी है, वो सज्जन भी कुछ कला लेकर के आए हैं। जरा हमारे साथी उसको कलेक्ट कर लें। ये आगे पहुंचा दीजिए, हां। एक और भी है कोई, हां, ले लीजिए। आपका बहुत-बहुत धन्यवाद।

साथियों,

मैंने देश के सामने विकसित भारत की जिन सप्तधाराओं का विजन रखा है, उनमें एक धारा मैन्युफैक्चरिंग की भी है। और वड़ोदरा शहर, इसकी ताकत अच्छे से जानता भी है, समझता भी है। एजुकेशन, स्किल और इंडस्ट्री का कोलैब कैसे होता है, ये वड़ोदरा करीब डेढ़ सौ साल से इसका प्रतिबिंब है। दशकों पहले, यहां टेक्स्टाइल और टाइल्स के निर्माण से एक यात्रा शुरु हुई थी, जो बाद में ऑयल और पेट्रोकेमिकल्स के साथ आगे बढ़ी। पिछले दो-ढाई दशक में वड़ोदरा MSMEs का एक बड़ा हब बन गया है। और मुझे याद है, जब मैं नया-नया मुख्यमंत्री बना था, तो वड़ोदरा का मेरे पर स्पेशल अधिकार रहा है हमेशा, तो हर हफ्ते कोई ना कोई डेलीगेशन आता था। बस हमारे वड़ोदरा में कुछ मैन्युफैक्चरिंग का हो, मैन्युफैक्चरिंग का हो, क्योंकि यहां पर आते थे, तो या तो ज्योति या एलएमबी या तो जीएसएफसी, यही सब दिखता था और कुछ सुनता नहीं देता। आज कहां से कहां बदल गया है। अब तो ये शहर देश के पहले मेड इन इंडिया मिलिट्री ट्रांसपोर्ट एयरक्राफ्ट के लिए भी जाना जा रहा है। C-295 एयरक्राफ्ट की पहली फ्लाइट यहां आसमान देख चुकी है। मैं वड़ोदरा के लोगों को ये गौरव पाने के लिए बहुत-बहुत बधाई देता हूं।

साथियों,

जब देश की मैन्युफैक्चरिंग की बात हो रही है, तो मैं एक और आंकड़ा बताना चाहता हूं। बीते एक दशक में भारत रेल कोच-मेट्रो कोच बनाने का, रेल इंजन बनाने का भी एक बड़ा निर्माता बना है। 2014 के बाद से अब तक, भारत ने करीब 50 हज़ार, ये आंकड़ा सुनिए, 2014 के बाद भारत ने अब तक 50 हज़ार आधुनिक रेलवे कोच बनाए हैं। पुरानी सरकार 10 साल में 50 हजार टॉयलेट नहीं बना सकती थी। 50 हजार आधुनिक कोच तो किए ही हैं, करीब ढाई लाख वेगन, मालगाड़ी के लिए जो वेगन होते हैं, भारतीय रेल में जोड़े गए हैं, ढाई लाख।

साथियों,

अब भारत चिप से लेकर शिप तक, निर्माण की एक नई गाथा लिख रहा है। यानि पुर्जे भी हमारे और प्रोडक्ट भी हमारा, आत्मनिर्भरता की एक पूरी चेन भारत में ही बनेगी। और ये हम सोलर पावर के मामले में देख रहे हैं। जैसे कडाणा डैम पर जो फ्लोटिंग सोलर प्लांट का प्रोजेक्ट है, कुछ साल पहले तक देश में सोलर प्रोजेक्ट्स लगाने बहुत महंगे पड़ते थे। क्योंकि पीवी मॉड्यूल से लेकर, हर प्रकार का हार्डवेयर इंपोर्ट करना पड़ता था। लेकिन बीते वर्षों में हमने भारत में ही पीवी मॉड्यूल बनाने शुरु किए। और आज हम इसमें 200 गीगावॉट से ज्यादा की कैपेसिटी विकसित कर चुके हैं। और ऐसी ही आत्मनिर्भरता के कारण आज पीएम सूर्यघर मुफ्त बिजली योजना का विस्तार हो रहा है। अब तक देश में 55 लाख परिवार अपने छत पर, टेरेस पर सोलर प्लांट लगा चुके हैं। और इसमें 11 लाख परिवार हमारे गुजरात के हैं। यहां इतने सारे परिवार, बिजली उत्पादक बन चुके हैं और इसके कारण, प्रोडक्शन से लेकर इंस्टॉलेशन और सर्विस तक, कितने ही युवाओं को रोजगार मिला है, कितने नए वेंडर्स आए हैं।

साथियों,

‘झूठ की गूंज’ से भरमाने वाले तो हर चौराहे पर मिल जाएंगे, लेकिन भारत का नौजवान सच की हुंकार से चलता है, सच की हुंकार के साथ चलता है, सच की हुंकार के लिए चलता है। हमारे युवा साथी ये देख रहे हैं कि आज देश में सोलर हो, विंड हो, हाइड्रो हो, न्यूक्लियर हो, सारे सेक्टर्स पर सरकार कितना फोकस से काम कर रही है।

साथियों,

आने वाले दौर में हर आधुनिक सेक्टर बिजली से ही चलेगा, इलेक्ट्रिक इकोसिस्टम पर निर्भर होगा। जैसे चिप इंडस्ट्री है, डेटा सेंटर और AI से जुड़ी इंडस्ट्री है, इनका खाद पानी बिजली ही है। इसलिए अगर हमें AI में दुनिया के सामने सुपर पावर बनना है, तो देश को उसकी तैयारी, उसका इकोसिस्टम भी बनाना होगा। यही काम भारत ग्राउंड पर कर रहा है। तभी किसी देश से यूरेनियम के लिए समझौते हो रहे हैं, किसी से क्रिटिकल मिनरल्स और रेयर अर्थ मिनरल्स को लेकर समझौते किए जा रहे हैं। ये सारी मेहनत देश के युवाओं का फ्यूचर सुरक्षित करने के लिए दिन-रात मेहनत करके की जा रही है, आपके भविष्य के लिए किया जा रहा है।

साथियों,

दुनिया तेज़ी से बदल रही है, तो दुनिया की ज़रूरतें भी बदल रही हैं और इसी प्रकार हमारी पढ़ाई-लिखाई के तौर-तरीके भी बदल रहे हैं। पहले फोकस सिर्फ डिग्री पर होता था, लेकिन अब डिग्री के साथ-साथ स्किल पर भी फोकस है, स्किल का महत्मय बढ़ रहा है। नौजवानों के पास स्किल हो और वो स्किल समय-समय पर अपग्रेड हो, एक बड़ी जरूरत बन गई है। और इसीलिए, आज हम अपनी शिक्षा नीति को, शिक्षण और ट्रेनिंग के संस्थानों को नए रूप में ढाल रहे हैं। और इसी भाव के साथ ही मैंने लाल किले से भी युवाशक्ति के लिए दो बड़ी घोषणाएं की हैं। पहली घोषणा, देश की पारंपरिक ज़रूरत से जुड़ी है। आप सब जानते हैं कि हमारे यहां लाखों नौजवान ऐसे हैं, जो प्रतियोगी परीक्षाओं की तैयारी करते हैं। हर साल, हमारे मिडिल क्लास परिवारों की कमाई का एक बड़ा हिस्सा इन बच्चों की कोचिंग पर खर्च हो जाता है। हमारी कोशिश है कि गरीब और मिडिल क्लास के ऐसे बच्चों की, परिवारों के पैसे की बचत हो। और इसीलिए अब सरकार स्टूडेंट्स को ऑनलाइन फ्री-कोचिंग व्यवस्था देने की दिशा में आगे बढ़ रही है। और हिंदुस्तान के बेस्ट टीचर के द्वारा उनके कोचिंग हो। हमारे जो नौजवान, अपनी तैयारी कर रहे हैं, उनकी कोचिंग का ध्यान सरकार खुद रखेगी।

साथियों,

भारत के नौजवानों को AI में पारंगत होना उतना ही जरूरी है। हम चाहते हैं कि हमारे नौजवानों की पीढ़ी AI के लिए तैयार हो। ऐसा नहीं है, AI सीखने वालों की जरूरत सिर्फ आईटी सेक्टर में है, अगर कोई इस स्किल को जानता है, तो वो खेती के लिए नया AI solution बना सकता है। आरोग्य के क्षेत्र में technology विकसित कर सकता है। Manufacturing की productivity बढ़ा सकता है। Robotics में अपना startup शुरू कर सकता है। इसलिए जरूरी है कि हमारे पास देश और दुनिया की इंडस्ट्री के लिए AI को समझने वाले और AI का इस्तेमाल करने वाले युवा हों। सरकार इसके लिए एक बड़ा अभियान शुरू करने जा रही है।

साथियों,

भारत का ये कालखंड अभूतपूर्व है। ये भारत की युवाशक्ति का उत्कर्ष काल है, ये समय फिर भारत के जीवन में लौटकर नहीं आएगा। और इसलिए, हमें 2047 में विकसित भारत के लक्ष्य को सर्वोपरि रखना है। हमें भारत को विकसित बनाकर ही रहना है। इसी आह्वान के साथ, एक बार फिर आप सभी को विकास कार्यों की बहुत शुभकामनाएं।

अब मेरा एक काम करना पड़ेगा वडोदरा वालों को, करेंगे? पक्के तौर पर? आप सबने वड़ोदरा को इतना स्वच्छ बना दिया, कितनी मेहनत करनी पड़ी। मैं देख रहा था, हमारे नौजवान दिन-रात सफाई में लगे हुए थे। लेकिन एक बार हम तय करें कि अब हम वडोदरा को गंदा होने ही नहीं देंगे। मैं खुद गंदगी नहीं करूँगा, ये संकल्प लें, तो वडोदरा गंदा होगा? वडोदरा गंदा होगा? तो दिवाली ऐसी चकाचक जाएगी या नहीं, नवरात्रि शानदार जाएगी या नहीं, गणेशोत्सव में चार चाँद लगेंगे या नहीं, तो इतना काम तो हो जाएगा।

शाबाश।

धन्यवाद।

भारत माता की जय!

भारत माता की जय!

वंदे मातरम्!

वंदे मातरम्!

वंदे मातरम्!

वंदे मातरम्!

वंदे मातरम्!

वंदे मातरम्!

वंदे मातरम्!

वंदे मातरम्!

वंदे मातरम्!

वंदे मातरम्!

वंदे मातरम्!