ಮಣಿಪುರದಲ್ಲಿ ರೈಲು ಸಂಪರ್ಕ ವಿಸ್ತರಿಸುತ್ತಿದೆ: ಪ್ರಧಾನಮಂತ್ರಿ
ಮಣಿಪುರದಲ್ಲಿ ಬಡವರ ಪರವಾದ ಅಭಿವೃದ್ಧಿ ಉಪಕ್ರಮಗಳನ್ನು ನಾವು ಅನುಷ್ಠಾನಗೊಳಿಸುತ್ತಿದ್ದೇವೆ: ಪ್ರಧಾನಮಂತ್ರಿ
ಮಣಿಪುರದಲ್ಲಿ ಭರವಸೆ ಮತ್ತು ನಂಬಿಕೆಯ ನವೋದಯವಾಗುತ್ತಿದೆ: ಪ್ರಧಾನಮಂತ್ರಿ
ಮಣಿಪುರವನ್ನು ಶಾಂತಿ, ಸಮೃದ್ಧಿ ಮತ್ತು ಪ್ರಗತಿಯ ಸಂಕೇತವನ್ನಾಗಿ ಮಾಡುವ ಗುರಿಯೊಂದಿಗೆ ನಾವು ಕೆಲಸ ಮಾಡುತ್ತಿದ್ದೇವೆ: ಪ್ರಧಾನಮಂತ್ರಿ

ಮಣಿಪುರದ ಚುರಚಂದಪುರದಲ್ಲಿ 7,300 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಹಲವಾರು ಅಭಿವೃದ್ಧಿ ಯೋಜನೆಗಳಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಇಂದು ಶಂಕುಸ್ಥಾಪನೆ ನೆರವೇರಿಸಿದರು. ಈ ಸಂದರ್ಭದಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ, ಮಣಿಪುರ ಧೈರ್ಯ ಮತ್ತು ದೃಢಸಂಕಲ್ಪದ ಭೂಮಿಯಾಗಿದೆ ಮತ್ತು ಮಣಿಪುರದ ಗುಡ್ಡಗಾಡುಗಳು ಪ್ರಕೃತಿಯ ಅಮೂಲ್ಯ ಕೊಡುಗೆಯಾಗಿವೆ ಎಂದು ಒತ್ತಿ ಹೇಳಿದರು. ಈ ಗುಡ್ಡಗಾಡು ಜನರ ನಿರಂತರ ದಣಿವರಿಯದ ಪರಿಶ್ರಮದ ಸಂಕೇತವಾಗಿವೆ ಎಂದು ಅವರು ಹೇಳಿದರು. ಮಣಿಪುರದ ಜನರ ಉತ್ಸಾಹಕ್ಕೆ ನಮನ ಸಲ್ಲಿಸಿದ ಶ್ರೀ ಮೋದಿ, ಇಷ್ಟೊಂದು ಸಂಖ್ಯೆಯಲ್ಲಿ ಬಂದಿದ್ದಕ್ಕಾಗಿ ಜನರಿಗೆ ಕೃತಜ್ಞತೆ ಸಲ್ಲಿಸಿದರು ಮತ್ತು ಅವರ ಪ್ರೀತಿಗೆ ಧನ್ಯವಾದ ತಿಳಿಸಿದರು.

ಈ ಪ್ರದೇಶದ ಸಂಸ್ಕೃತಿ, ಸಂಪ್ರದಾಯಗಳು, ವೈವಿಧ್ಯತೆ ಮತ್ತು ಚೈತನ್ಯವನ್ನು ಭಾರತದ ಪ್ರಮುಖ ಶಕ್ತಿ ಎಂದು ಬಣ್ಣಿಸಿದ ಶ್ರೀ ಮೋದಿ, "ಮಣಿಪುರ" ಎಂಬ ಹೆಸರಿನಲ್ಲೇ "ಮಣಿ" ಎಂಬ ಪದವಿದೆ, ಇದು ಮುಂದಿನ ದಿನಗಳಲ್ಲಿ ಇಡೀ ಈಶಾನ್ಯವನ್ನು ಬೆಳಗಿಸುವ ರತ್ನವನ್ನು ಸಂಕೇತಿಸುತ್ತದೆ ಎಂದು ಹೇಳಿದರು. ಮಣಿಪುರದ ಅಭಿವೃದ್ಧಿ ಪ್ರಯಾಣವನ್ನು ವೇಗಗೊಳಿಸಲು ಭಾರತ ಸರ್ಕಾರ ನಿರಂತರವಾಗಿ ಕೆಲಸ ಮಾಡುತ್ತಿದೆ ಎಂದು ಪ್ರಧಾನಮಂತ್ರಿ ಹೇಳಿದರು. ಈ ಉತ್ಸಾಹದಲ್ಲಿಯೇ ತಾವು ಇಂದು ಮಣಿಪುರದ ಜನರ ನಡುವೆ ಇರುವುದಾಗಿ ಅವರು ಹೇಳಿದರು. ಇಂದು ಸುಮಾರು 7,000 ಕೋಟಿ ರೂ. ಮೌಲ್ಯದ ಯೋಜನೆಗಳನ್ನು ಉದ್ಘಾಟಿಸಲಾಗಿದೆ. ಇವು ಮಣಿಪುರದ ಜನರ, ವಿಶೇಷವಾಗಿ ಗುಡ್ಡಗಾಡುಗಳಲ್ಲಿ ವಾಸಿಸುವ ಬುಡಕಟ್ಟು ಸಮುದಾಯಗಳ ಜೀವನವನ್ನು ಸುಧಾರಿಸುತ್ತವೆ. ಈ ಯೋಜನೆಗಳು ಈ ಪ್ರದೇಶದಲ್ಲಿ ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಹೊಸ ಸೌಲಭ್ಯಗಳನ್ನು ಸೃಷ್ಟಿಸುತ್ತವೆ ಎಂದು ಅವರು ಹೇಳಿದರು ಮತ್ತು ಈ ಹೊಸ ಉಪಕ್ರಮಗಳಿಗಾಗಿ ಮಣಿಪುರ ಮತ್ತು ಚುರಚಂದಪುರದ ಜನರನ್ನು ಅಭಿನಂದಿಸಿದರು.

 

ಮಣಿಪುರ ಗಡಿ ರಾಜ್ಯವಾಗಿರುವುದರಿಂದ ಸಂಪರ್ಕವು ಯಾವಾಗಲೂ ದೊಡ್ಡ ಸವಾಲಾಗಿದೆ ಎಂದು ಅವರು ಹೇಳಿದರು. ಉತ್ತಮ ರಸ್ತೆಗಳ ಕೊರತೆಯಿಂದಾಗಿ ಜನರು ಎದುರಿಸುತ್ತಿರುವ ತೊಂದರೆಗಳು ಮತ್ತು ಸಮಸ್ಯೆಗಳ ಬಗ್ಗೆ ತಮಗೆ ಅರಿವಿದೆ ಎಂದು ಹೇಳಿದರು. ತಮ್ಮ ನಾಯಕತ್ವದ ಕೇಂದ್ರ ಸರ್ಕಾರವು 2014 ರಿಂದ ಮಣಿಪುರದಲ್ಲಿ ಸಂಪರ್ಕವನ್ನು ಸುಧಾರಿಸುವತ್ತ ನಿರಂತರವಾಗಿ ಗಮನಹರಿಸಿದೆ ಎಂದು ಅವರು ಹೇಳಿದರು. ಈ ನಿಟ್ಟಿನಲ್ಲಿ, ಕೇಂದ್ರ ಸರ್ಕಾರವು ಎರಡು ಹಂತಗಳಲ್ಲಿ ಕೆಲಸ ಮಾಡುತ್ತಿದೆ, ಮೊದಲ ಹಂತದಲ್ಲಿ, ಮಣಿಪುರದಲ್ಲಿ ರೈಲ್ವೆ ಮತ್ತು ರಸ್ತೆ ಮೂಲಸೌಕರ್ಯಕ್ಕಾಗಿ ಬಜೆಟ್ ಅನ್ನು ಹಲವು ಪಟ್ಟು ಹೆಚ್ಚಿಸಲಾಗಿದೆ, ಎರಡನೇ ಹಂತದಲ್ಲಿ, ಮಣಿಪುರದ ನಗರಗಳು ಮತ್ತು ಹಳ್ಳಿಗಳ ನಡುವೆ ರಸ್ತೆ ಸಂಪರ್ಕವನ್ನು ವಿಸ್ತರಿಸಲು ಪ್ರಯತ್ನಗಳು ನಡೆದಿವೆ ಎಂದು ಅವರು ಹೇಳಿದರು.

ಕಳೆದ ಕೆಲವು ವರ್ಷಗಳಲ್ಲಿ ಈ ಪ್ರದೇಶದಲ್ಲಿ ರಾಷ್ಟ್ರೀಯ ಹೆದ್ದಾರಿಗಳಿಗೆ 3,700 ಕೋಟಿ ರೂ.ಗಳನ್ನು ಖರ್ಚು ಮಾಡಲಾಗಿದೆ ಮತ್ತು 8,700 ಕೋಟಿ ರೂ.ಗಳ ಹೊಸ ಹೆದ್ದಾರಿ ಯೋಜನೆಗಳು ತ್ವರಿತಗತಿಯಲ್ಲಿ ಪ್ರಗತಿಯಲ್ಲಿವೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಹೇಳಿದರು. ಈ ಹಿಂದೆ, ಈ ಪ್ರದೇಶದ ಹಳ್ಳಿಗಳನ್ನು ತಲುಪುವುದು ಅತ್ಯಂತ ಕಷ್ಟಕರವಾಗಿತ್ತು, ಇದು ಸ್ಥಳೀಯರಿಗೆ ಚೆನ್ನಾಗಿ ತಿಳಿದಿರುವ ಸಂಗತಿ ಎಂದು ಅವರು ಹೇಳಿದರು. ಆದರೆ ಈಗ, ರಸ್ತೆಗಳು ನೂರಾರು ಹಳ್ಳಿಗಳನ್ನು ತಲುಪಿವೆ, ಇದು ಗುಡ್ಡಗಾಡು ಹಳ್ಳಿಗಳು ಮತ್ತು ಬುಡಕಟ್ಟು ಸಮುದಾಯಗಳಿಗೆ ಹೆಚ್ಚಿನ ಪ್ರಯೋಜನವನ್ನು ನೀಡಿದೆ ಎಂದು ಅವರು ಹೇಳಿದರು.

"ನಮ್ಮ ಸರ್ಕಾರದ ಅವಧಿಯಲ್ಲಿ ಮಣಿಪುರದಲ್ಲಿ ರೈಲು ಸಂಪರ್ಕ ವಿಸ್ತರಿಸುತ್ತಿದೆ ಮತ್ತು ರಾಜಧಾನಿ ಇಂಫಾಲ್ ಶೀಘ್ರದಲ್ಲೇ ಜಿರಿಬಮ್-ಇಂಫಾಲ್ ರೈಲು ಮಾರ್ಗದ ಮೂಲಕ ರಾಷ್ಟ್ರೀಯ ರೈಲು ಜಾಲಕ್ಕೆ ಸಂಪರ್ಕಗೊಳ್ಳಲಿದೆ" ಎಂದು ಪ್ರಧಾನಮಂತ್ರಿ ಹೇಳಿದರು, ಈ ಯೋಜನೆಗೆ 22,000 ಕೋಟಿ ರೂ. ಹೂಡಿಕೆ ಮಾಡಲಾಗುತ್ತಿದೆ ಎಂದು ಹೇಳಿದರು. 400 ಕೋಟಿ ರೂ. ವೆಚ್ಚದಲ್ಲಿ ಹೊಸದಾಗಿ ನಿರ್ಮಿಸಲಾದ ಇಂಫಾಲ್ ವಿಮಾನ ನಿಲ್ದಾಣವು ಈ ಪ್ರದೇಶದಲ್ಲಿ ವಾಯು ಸಂಪರ್ಕವನ್ನು ಹೆಚ್ಚಿಸುತ್ತಿದೆ. ಈ ವಿಮಾನ ನಿಲ್ದಾಣದಿಂದ ದೇಶದ ಇತರ ಭಾಗಗಳಿಗೆ ಹೆಲಿಕಾಪ್ಟರ್ ಸೇವೆಗಳು ಸಹ ಪ್ರಾರಂಭವಾಗಿವೆ. ಹೆಚ್ಚಿದ ಸಂಪರ್ಕದಿಂದಾಗಿ, ಮಣಿಪುರದ ಜನರಿಗೆ ಸೌಲಭ್ಯಗಳನ್ನು ಸುಧಾರಿಸಲಾಗುತ್ತಿದೆ ಮತ್ತು ಯುವಕರಿಗೆ ಹೊಸ ಉದ್ಯೋಗಾವಕಾಶಗಳನ್ನು ಸೃಷ್ಟಿಸಲಾಗುತ್ತಿದೆ ಎಂದು ಅವರು ಹೇಳಿದರು.

 

"ಭಾರತವು ವೇಗವಾಗಿ ಬೆಳೆಯುತ್ತಿದೆ ಮತ್ತು ಶೀಘ್ರದಲ್ಲೇ ವಿಶ್ವದ ಮೂರನೇ ಅತಿದೊಡ್ಡ ಆರ್ಥಿಕತೆಯಾಗಲಿದೆ. ಅಭಿವೃದ್ಧಿಯ ಪ್ರಯೋಜನಗಳು ದೇಶದ ಮೂಲೆ ಮೂಲೆಗೂ ತಲುಪುವಂತೆ ನೋಡಿಕೊಳ್ಳುವುದು ನಮ್ಮ ನಿರಂತರ ಪ್ರಯತ್ನವಾಗಿದೆ" ಎಂದು ಪ್ರಧಾನಮಂತ್ರಿ ಹೇಳಿದರು. ಒಂದು ಕಾಲದಲ್ಲಿ, ದೆಹಲಿಯಲ್ಲಿ ಮಾಡಿದ ಘೋಷಣೆಗಳು ಮಣಿಪುರದಂತಹ ಸ್ಥಳಗಳನ್ನು ತಲುಪಲು ದಶಕಗಳೇ ಬೇಕಾಗುತ್ತಿದ್ದವು ಎಂದು ಅವರು ನೆನಪಿಸಿಕೊಂಡರು. ಆದಾಗ್ಯೂ, ಇಂದು, ಚುರಚಂದಪುರ ಮತ್ತು ಮಣಿಪುರವು ದೇಶದ ಉಳಿದ ಭಾಗಗಳೊಂದಿಗೆ ಪ್ರಗತಿ ಸಾಧಿಸುತ್ತಿವೆ ಎಂದು ಅವರು ಹೇಳಿದರು. ಬಡವರಿಗೆ ಪಕ್ಕಾ ಮನೆಗಳನ್ನು ನಿರ್ಮಿಸಲು ಸರ್ಕಾರ ರಾಷ್ಟ್ರೀಯ ಯೋಜನೆಯನ್ನು ಪ್ರಾರಂಭಿಸಿದೆ, ಇದು ಮಣಿಪುರದ ಸಾವಿರಾರು ಕುಟುಂಬಗಳಿಗೆ ಪ್ರಯೋಜನವನ್ನು ನೀಡಿದೆ, ಸುಮಾರು 60,000 ಮನೆಗಳನ್ನು ಈಗಾಗಲೇ ನಿರ್ಮಿಸಲಾಗಿದೆ ಎಂದು ಅವರು ಹೇಳಿದರು. ಹಿಂದೆ, ಈ ಪ್ರದೇಶವು ತೀವ್ರ ವಿದ್ಯುತ್ ಕೊರತೆಯನ್ನು ಎದುರಿಸುತ್ತಿತ್ತು. ಈ ಸಮಸ್ಯೆಯಿಂದ ಜನರನ್ನು ಮುಕ್ತಗೊಳಿಸಲು ಸರ್ಕಾರ ದೃಢನಿಶ್ಚಯವನ್ನು ಮಾಡಿತು ಮತ್ತು ಇದರ ಅಡಿಯಲ್ಲಿ, ಮಣಿಪುರದ 1,00,000 ಕ್ಕೂ ಹೆಚ್ಚು ಕುಟುಂಬಗಳಿಗೆ ಉಚಿತ ವಿದ್ಯುತ್ ಸಂಪರ್ಕಗಳನ್ನು ನೀಡಲಾಗಿದೆ ಎಂದು ಅವರು ಹೇಳಿದರು.

ಮಣಿಪುರದ ತಾಯಂದಿರು ಮತ್ತು ಸಹೋದರಿಯರು ದೀರ್ಘಕಾಲದವರೆಗೆ ನೀರು ಪಡೆಯುವಲ್ಲಿ ತೊಂದರೆಗಳನ್ನು ಎದುರಿಸುತ್ತಿದ್ದರು. ಇದನ್ನು ಗಮನದಲ್ಲಿಟ್ಟುಕೊಂಡು ಸರ್ಕಾರ 'ಹರ್ ಘರ್ ನಲ್ ಸೆ ಜಲ್' ಯೋಜನೆಯನ್ನು ಪ್ರಾರಂಭಿಸಿದೆ ಎಂದು ಪ್ರಧಾನಮಂತ್ರಿ ಹೇಳಿದರು. ಕಳೆದ ಕೆಲವು ವರ್ಷಗಳಲ್ಲಿ, ದೇಶಾದ್ಯಂತ 15 ಕೋಟಿಗೂ ಹೆಚ್ಚು ನಾಗರಿಕರು ನಲ್ಲಿಗಳ ಮೂಲಕ ನೀರು ಪಡೆದಿದ್ದಾರೆ ಎಂದು ಅವರು ಹೇಳಿದರು. 7-8 ವರ್ಷಗಳ ಹಿಂದೆ, ಮಣಿಪುರದಲ್ಲಿ ಕೇವಲ 25,000 ರಿಂದ 30,000 ಮನೆಗಳಿಗೆ ನಲ್ಲಿಗಳ ಮೂಲಕ ನೀರು ಸಿಗುತ್ತಿತ್ತು. ಇಂದು, ರಾಜ್ಯದಲ್ಲಿ ಮೂರೂವರೆ ಲಕ್ಷಕ್ಕೂ ಹೆಚ್ಚು ಮನೆಗಳಿಗೆ ನಲ್ಲಿ ನೀರಿನ ಸಂಪರ್ಕವಿದೆ ಮತ್ತು ಶೀಘ್ರದಲ್ಲೇ ಮಣಿಪುರದ ಪ್ರತಿಯೊಂದು ಮನೆಗೂ ನಲ್ಲಿಗಳ ಮೂಲಕ ನೀರು ತಲುಪಲಿದೆ ಎಂದು ಪ್ರಧಾನಮಂತ್ರಿ ವಿಶ್ವಾಸ ವ್ಯಕ್ತಪಡಿಸಿದರು.

ಸಾಮಾಜಿಕ ಮೂಲಸೌಕರ್ಯಗಳ ಬಗ್ಗೆ ಮಾತನಾಡಿದ ಪ್ರಧಾನಮಂತ್ರಿ, ಗುಡ್ಡಗಾಡು ಮತ್ತು ಬುಡಕಟ್ಟು ಪ್ರದೇಶಗಳಲ್ಲಿ ಹಿಂದೆ ಉತ್ತಮ ಶಾಲೆಗಳು, ಕಾಲೇಜುಗಳು ಮತ್ತು ಆಸ್ಪತ್ರೆಗಳು ಕೇವಲ ಕನಸಾಗಿದ್ದವು. ಯಾರಾದರೂ ಅನಾರೋಗ್ಯಕ್ಕೆ ಒಳಗಾದರೆ, ಆಸ್ಪತ್ರೆಗೆ ತಲುಪಲು ಬಹಳ ಸಮಯ ಹಿಡಿಯುತ್ತಿತ್ತು ಎಂದು ಅವರು ಹೇಳಿದರು. ಭಾರತ ಸರ್ಕಾರದ ಪ್ರಯತ್ನಗಳಿಂದಾಗಿ ಪರಿಸ್ಥಿತಿ ಈಗ ಬದಲಾಗುತ್ತಿದೆ ಮತ್ತು ಚುರಚಂದಪುರದಲ್ಲಿ ವೈದ್ಯಕೀಯ ಕಾಲೇಜು ಸ್ಥಾಪಿಸಲಾಗಿದೆ ಎಂದು ಶ್ರೀ ಮೋದಿ ಒತ್ತಿ ಹೇಳಿದರು. ಈಗ ಅಲ್ಲಿ ಹೊಸ ವೈದ್ಯರಿಗೆ ತರಬೇತಿ ನೀಡಲಾಗುತ್ತಿದೆ ಮತ್ತು ಆರೋಗ್ಯ ಸೇವೆಗಳು ಸುಧಾರಿಸುತ್ತಿವೆ ಎಂದು ಅವರು ಹೇಳಿದರು. ಸ್ವಾತಂತ್ರ್ಯದ ನಂತರ ಹಲವು ದಶಕಗಳಿಂದ ಮಣಿಪುರದ ಗುಡ್ಡಗಾಡು ಪ್ರದೇಶಗಳಲ್ಲಿ ಯಾವುದೇ ವೈದ್ಯಕೀಯ ಕಾಲೇಜು ಇರಲಿಲ್ಲ ಎಂಬ ಅಂಶವನ್ನು ಪ್ರಧಾನಮಂತ್ರಿ ಜನರು ತಿಳಿಯಬೇಕು. ಈ ಸಾಧನೆ ಪ್ರಸ್ತುತ ಸರ್ಕಾರದಿಂದ ಮಾತ್ರ ಸಾಧ್ಯವಾಗಿದೆ ಎಂದು ಅವರು ಹೇಳಿದರು. ಐದು ಗುಡ್ಡಗಾಡು ಜಿಲ್ಲೆಗಳಲ್ಲಿ ಸರ್ಕಾರ ಆಧುನಿಕ ಆರೋಗ್ಯ ಸೇವೆಗಳನ್ನು ಅಭಿವೃದ್ಧಿಪಡಿಸುತ್ತಿದೆ ಎಂದು ಅವರು ಪ್ರಧಾನಮಂತ್ರಿ ಡಿವೈನ್‌ (PM-DIVINE) ಯೋಜನೆಯನ್ನು ಉಲ್ಲೇಖಿಸಿದರು. ಆಯುಷ್ಮಾನ್ ಭಾರತ್ ಯೋಜನೆಯಡಿಯಲ್ಲಿ  ಸರ್ಕಾರ ಬಡ ಕುಟುಂಬಗಳಿಗೆ 5 ಲಕ್ಷ ರೂ.ವರೆಗೆ ಉಚಿತ ಚಿಕಿತ್ಸೆಯನ್ನು ನೀಡುತ್ತಿದೆ ಎಂದು ಶ್ರೀ ಮೋದಿ ಹೇಳಿದರು. ಮಣಿಪುರದಲ್ಲಿ ಸುಮಾರು 2.5 ಲಕ್ಷ ರೋಗಿಗಳು ಈ ಯೋಜನೆಯಡಿ ಉಚಿತ  ಚಿಕಿತ್ಸೆಯನ್ನು ಪಡೆದಿದ್ದಾರೆ ಎಂದು ಅವರು ಹೇಳಿದರು. ಈ ಸೌಲಭ್ಯವಿಲ್ಲದಿದ್ದರೆ ರಾಜ್ಯದ ಬಡ ಕುಟುಂಬಗಳು ತಮ್ಮ ಜೇಬಿನಿಂದ ₹350 ಕೋಟಿ ಖರ್ಚು ಮಾಡಬೇಕಾಗುತ್ತಿತ್ತು. ಈ ಸಂಪೂರ್ಣ ವೆಚ್ಚವನ್ನು ಭಾರತ ಸರ್ಕಾರ ಭರಿಸಿದೆ ಎಂದು ಪ್ರಧಾನಮಂತ್ರಿ ಒತ್ತಿ ಹೇಳಿದರು. ಪ್ರತಿಯೊಬ್ಬ ಬಡ ನಾಗರಿಕನ ಕಾಳಜಿಗಳನ್ನು ನೋಡಿಕೊಳ್ಳುವುದು ಸರ್ಕಾರದ ಪ್ರಮುಖ ಆದ್ಯತೆಯಾಗಿದೆ ಎಂದು ಅವರು ಹೇಳಿದರು.

 

"ಮಣಿಪುರದ ಭೂಮಿ ಮತ್ತು ಪ್ರದೇಶವು ಭರವಸೆ ಮತ್ತು ಆಕಾಂಕ್ಷೆಗಳ ನಾಡು" ಎಂದು ಪ್ರಧಾನಮಂತ್ರಿ ಹೇಳಿದರು. ದುರದೃಷ್ಟವಶಾತ್ ಈ ಅದ್ಭುತವಾದ ಪ್ರದೇಶದಲ್ಲಿ ಹಿಂಸಾಚಾರವು ವ್ಯಾಪಕವಾಗಿದೆ ಎಂದು ಅವರು ಹೇಳಿದರು. ಸ್ವಲ್ಪ ಸಮಯದ ಹಿಂದೆಯಷ್ಟೇ ಶಿಬಿರಗಳಲ್ಲಿ ವಾಸಿಸುತ್ತಿರುವ ಸಂತ್ರಸ್ತ ಜನರನ್ನು ಭೇಟಿಯಾಗಿದ್ದಾಗಿ ಅವರು ಹೇಳಿದರು. ಅವರೊಡನೆ ಸಂವಾದ ನಡೆಸಿದ ನಂತರ, ಮಣಿಪುರದಲ್ಲಿ ಭರವಸೆ ಮತ್ತು ಆತ್ಮವಿಶ್ವಾಸದ ನವೋದಯವಾಗುತ್ತಿದೆ ಎಂದು ಪ್ರಧಾನಮಂತ್ರಿ ವಿಶ್ವಾಸ ವ್ಯಕ್ತಪಡಿಸಿದರು.

"ಯಾವುದೇ ಪ್ರದೇಶದ ಅಭಿವೃದ್ಧಿಗೆ ಶಾಂತಿ ಅತ್ಯಗತ್ಯ ಮತ್ತು ಕಳೆದ ಹನ್ನೊಂದು ವರ್ಷಗಳಲ್ಲಿ ಈಶಾನ್ಯದಲ್ಲಿ ಅನೇಕ ಹಳೆಯ ಸಂಘರ್ಷಗಳು ಮತ್ತು ವಿವಾದಗಳನ್ನು ಪರಿಹರಿಸಲಾಗಿದೆ" ಎಂದು ಪ್ರಧಾನಮಂತ್ರಿ ಹೇಳಿದರು. ಜನರು ಶಾಂತಿಯ ಮಾರ್ಗವನ್ನು ಆರಿಸಿಕೊಂಡಿದ್ದಾರೆ ಮತ್ತು ಅಭಿವೃದ್ಧಿಗೆ ಆದ್ಯತೆ ನೀಡಿದ್ದಾರೆ ಎಂದು ಅವರು ಹೇಳಿದರು. ಗುಡ್ಡಗಾಡು ಮತ್ತು ಕಣಿವೆ ಪ್ರದೇಶಗಳ ವಿವಿಧ ಗುಂಪುಗಳೊಂದಿಗೆ ಇತ್ತೀಚೆಗೆ ಮಾತುಕತೆಗಳು ನಡೆದಿರುವುದಕ್ಕೆ ಶ್ರೀ ಮೋದಿ ತೃಪ್ತಿ ವ್ಯಕ್ತಪಡಿಸಿದರು. ಈ ಪ್ರಯತ್ನಗಳು ಭಾರತ ಸರ್ಕಾರದ ದೃಷ್ಟಿಕೋನದ ಭಾಗವಾಗಿದ್ದು, ಇದು ಶಾಂತಿಯನ್ನು ಸ್ಥಾಪಿಸಲು ಸಂವಾದ, ಗೌರವ ಮತ್ತು ಪರಸ್ಪರ ತಿಳುವಳಿಕೆಗೆ ಒತ್ತು ನೀಡುತ್ತದೆ ಎಂದು ಅವರು ಹೇಳಿದರು. ಎಲ್ಲಾ ಸಂಘಟನೆಗಳು ಶಾಂತಿಯ ಹಾದಿಯಲ್ಲಿ ಮುನ್ನಡೆಯಬೇಕು ಮತ್ತು ತಮ್ಮ ಆಕಾಂಕ್ಷೆಗಳನ್ನು ಈಡೇರಿಸಿಕೊಳ್ಳಬೇಕೆಂದು ಪ್ರಧಾನಮಂತ್ರಿ ಮನವಿ ಮಾಡಿದರು. ತಮ್ಮ ಬೆಂಬಲ ವ್ಯಕ್ತಪಡಿಸಿದ ಅವರು, ನಾನು ಜನರೊಂದಿಗೆ ನಿಲ್ಲುತ್ತೇನೆ ಮತ್ತು ಭಾರತ ಸರ್ಕಾರ ಮಣಿಪುರದೊಂದಿಗೆ ಇದೆ ಎಂದು ಹೇಳಿದರು.

ಮಣಿಪುರದಲ್ಲಿ ಜೀವನವನ್ನು ಮತ್ತೆ ಹಳಿಗೆ ತರಲು ಭಾರತ ಸರ್ಕಾರ ಎಲ್ಲ ಪ್ರಯತ್ನಗಳನ್ನು ಮಾಡುತ್ತಿದೆ ಎಂದು ಶ್ರೀ ಮೋದಿ ಒತ್ತಿ ಹೇಳಿದರು. ಸ್ಥಳಾಂತರಗೊಂಡ ಕುಟುಂಬಗಳಿಗೆ 7,000 ಹೊಸ ಮನೆಗಳನ್ನು ನಿರ್ಮಿಸಲು ಸರ್ಕಾರ ನೆರವು ನೀಡುತ್ತಿದೆ ಎಂದು ಅವರು ಹೇಳಿದರು. ಇತ್ತೀಚೆಗೆ ಸುಮಾರು ₹3,000 ಕೋಟಿ ವಿಶೇಷ ಪ್ಯಾಕೇಜ್ ಅನ್ನು ಅನುಮೋದಿಸಲಾಗಿದೆ ಎಂದು ಪ್ರಧಾನಮಂತ್ರಿ ಘೋಷಿಸಿದರು. ಸ್ಥಳಾಂತರಗೊಂಡ ಜನರಿಗೆ ಸಹಾಯ ಮಾಡಲು ₹500 ಕೋಟಿಯನ್ನು ವಿಶೇಷವಾಗಿ ನಿಗದಿಪಡಿಸಲಾಗಿದೆ ಎಂದು ಅವರು ಮಾಹಿತಿ ನೀಡಿದರು.

 

ಮಣಿಪುರದ ಬುಡಕಟ್ಟು ಯುವಕರ ಕನಸುಗಳು ಮತ್ತು ಹೋರಾಟಗಳ ಬಗ್ಗೆ ತಮಗೆ ಚೆನ್ನಾಗಿ ಅರಿವಿದೆ ಎಂದ ಪ್ರಧಾನಮಂತ್ರಿ, ಅವರ ಕಳವಳಗಳನ್ನು ಪರಿಹರಿಸಲು ಹಲವಾರು ಪರಿಹಾರಗಳನ್ನು ಜಾರಿಗೆ ತರಲಾಗುತ್ತಿದೆ ಎಂದು ಹೇಳಿದರು. ಸ್ಥಳೀಯ ಆಡಳಿತ ಸಂಸ್ಥೆಗಳನ್ನು ಬಲಪಡಿಸಲು ಸರ್ಕಾರ ಕೆಲಸ ಮಾಡುತ್ತಿದೆ ಮತ್ತು ಅವುಗಳ ಅಭಿವೃದ್ಧಿಗೆ ಸೂಕ್ತ ಹಣಕಾಸು ವ್ಯವಸ್ಥೆ ಮಾಡಲಾಗುತ್ತಿದೆ ಎಂದು ಅವರು ಒತ್ತಿ ಹೇಳಿದರು.

"ಪ್ರತಿಯೊಂದು ಬುಡಕಟ್ಟು ಸಮುದಾಯದ ಅಭಿವೃದ್ಧಿಯು ರಾಷ್ಟ್ರೀಯ ಆದ್ಯತೆಯಾಗಿದೆ" ಎಂದು ಪ್ರಧಾನಮಂತ್ರಿ ಹೇಳಿದರು. ಬುಡಕಟ್ಟು ಪ್ರದೇಶಗಳ ಅಭಿವೃದ್ಧಿಗಾಗಿ ಮೊದಲ ಬಾರಿಗೆ ಧರ್ತಿ ಆಬಾ ಜನಜಾತಿ ಗ್ರಾಮ ಉತ್ಕರ್ಷ್ ಅಭಿಯಾನವನ್ನು ಪ್ರಾರಂಭಿಸಲಾಗಿದೆ ಎಂದು ಅವರು ಮಾಹಿತಿ ನೀಡಿದರು. ಈ ಉಪಕ್ರಮದಡಿಯಲ್ಲಿ, ಮಣಿಪುರದ 500 ಕ್ಕೂ ಹೆಚ್ಚು ಹಳ್ಳಿಗಳಲ್ಲಿ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿವೆ. ಬುಡಕಟ್ಟು ಪ್ರದೇಶಗಳಲ್ಲಿ ಏಕಲವ್ಯ ಮಾದರಿ ವಸತಿ ಶಾಲೆಗಳ ಸಂಖ್ಯೆಯನ್ನು ಹೆಚ್ಚಿಸಲಾಗುತ್ತಿದೆ. ಮಣಿಪುರದಲ್ಲಿ 18 ಏಕಲವ್ಯ ಮಾದರಿ ವಸತಿ ಶಾಲೆಗಳನ್ನು ನಿರ್ಮಿಸಲಾಗುತ್ತಿದೆ ಎಂದು ಶ್ರೀ ಮೋದಿ ಹೇಳಿದರು. ಶಾಲೆಗಳು ಮತ್ತು ಕಾಲೇಜುಗಳ ಆಧುನೀಕರಣವು ಗುಡ್ಡಗಾಡು ಜಿಲ್ಲೆಗಳಲ್ಲಿ ಶೈಕ್ಷಣಿಕ ಸೌಲಭ್ಯಗಳನ್ನು ಗಮನಾರ್ಹವಾಗಿ ಹೆಚ್ಚಿಸುತ್ತದೆ ಎಂದು ಅವರು ಒತ್ತಿ ಹೇಳಿದರು.

 

ಮಣಿಪುರದ ಸಂಸ್ಕೃತಿ ಯಾವಾಗಲೂ ಮಹಿಳಾ ಸಬಲೀಕರಣವನ್ನು ಉತ್ತೇಜಿಸಿದೆ ಎಂದು ಒತ್ತಿ ಹೇಳಿದ ಶ್ರೀ ಮೋದಿ, ಸರ್ಕಾರ ಮಹಿಳೆಯರ ಸಬಲೀಕರಣಕ್ಕೆ ಸಕ್ರಿಯವಾಗಿ ಕೆಲಸ ಮಾಡುತ್ತಿದೆ ಎಂದು ಹೇಳಿದರು. ಮಣಿಪುರದ ಹೆಣ್ಣುಮಕ್ಕಳಿಗೆ ಸಹಾಯ ಮಾಡಲು ಸರ್ಕಾರ ದುಡಿಯುವ ಮಹಿಳೆಯರಿಗಾಗಿ ಹಾಸ್ಟೆಲ್‌ ಗಳನ್ನು ನಿರ್ಮಿಸುತ್ತಿದೆ ಎಂದು ಅವರು ಹೇಳಿದರು.

"ಮಣಿಪುರವನ್ನು ಶಾಂತಿ, ಸಮೃದ್ಧಿ ಮತ್ತು ಪ್ರಗತಿಯ ಸಂಕೇತವನ್ನಾಗಿ ಮಾಡುವ ಗುರಿಯೊಂದಿಗೆ ನಾವು ಕೆಲಸ ಮಾಡುತ್ತಿದ್ದೇವೆ" ಎಂದು ಪ್ರಧಾನಮಂತ್ರಿ ಹೇಳಿದರು. ಮಣಿಪುರದ ಅಭಿವೃದ್ಧಿ, ಸ್ಥಳಾಂತರಗೊಂಡ ಕುಟುಂಬಗಳ ಪುನರ್ವಸತಿ ಮತ್ತು ಶಾಂತಿ ನಿರ್ಮಾಣಕ್ಕಾಗಿ ಭಾರತ ಸರ್ಕಾರ ಮಣಿಪುರ ಸರ್ಕಾರಕ್ಕೆ ಸಾಧ್ಯವಿರುವ ಎಲ್ಲ ರೀತಿಯ ಬೆಂಬಲ ನೀಡುವುದನ್ನು ಮುಂದುವರಿಸುತ್ತದೆ ಎಂದು ಜನರಿಗೆ ಭರವಸೆ ನೀಡುವ ಮೂಲಕ ಪ್ರಧಾನಮಂತ್ರಿಯವರು ತಮ್ಮ ಮಾತು ಮುಗಿಸಿದರು.

ಮಣಿಪುರದ ರಾಜ್ಯಪಾಲ ಶ್ರೀ ಅಜಯ್ ಕುಮಾರ್ ಭಲ್ಲಾ ಸೇರಿದಂತೆ ಇತರ ಗಣ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಹಿನ್ನೆಲೆ

ಈ ಯೋಜನೆಗಳಲ್ಲಿ ಮಣಿಪುರ ನಗರ ರಸ್ತೆಗಳು, ಒಳಚರಂಡಿ ಮತ್ತು ಆಸ್ತಿ ನಿರ್ವಹಣಾ ಸುಧಾರಣಾ ಯೋಜನೆಗಳು 3,600 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ್ದಾಗಿವೆ; 2,500 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ 5 ರಾಷ್ಟ್ರೀಯ ಹೆದ್ದಾರಿ ಯೋಜನೆಗಳು; ಮಣಿಪುರ ಇನ್ಫೋಟೆಕ್ ಅಭಿವೃದ್ಧಿ (ಎಂ ಐ  ಎನ್‌ ಡಿ) ಯೋಜನೆ, 9 ಸ್ಥಳಗಳಲ್ಲಿ ದುಡಿಯುವ ಮಹಿಳೆಯರಿಗಾಗಿ ಹಾಸ್ಟೆಲ್‌ ಗಳು ಸೇರಿವೆ.

 

ಭಾಷಣದ ಪೂರ್ಣ ಪಠ್ಯವನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
38 Per Cent Women In Rural And Semi-Urban Use UPI Weekly For Daily Essentials: Survey

Media Coverage

38 Per Cent Women In Rural And Semi-Urban Use UPI Weekly For Daily Essentials: Survey
NM on the go

Nm on the go

Always be the first to hear from the PM. Get the App Now!
...
The government places great emphasis on bringing a 'technology culture' to agriculture: PM Modi
March 06, 2026
This year’s Union Budget gives a strong push to agriculture and rural transformation : PM
Government has continuously strengthened the agriculture sector ,major efforts have reduced the risks for farmers and provided them with basic economic security: PM
If we scale high-value agriculture together, it will transform agriculture into a globally competitive sector: PM
As export-oriented production increases, employment will be created in rural areas through processing and value addition: PM
Fisheries can become a major platform for export growth, a high-value, high-impact sector of rural prosperity: PM
The government is developing digital public infrastructure for agriculture through AgriStack: PM
Technology delivers results when systems adopt it, institutions integrate it, and entrepreneurs build innovations on it: PM

नमस्कार !

बजट वेबिनार सीरीज के तीसरे वेबिनार में, मैं आप सभी का अभिनंदन करता हूं। इससे पहले, टेक्नोलॉजी, रिफॉर्म्स और इकोनॉमिक ग्रोथ जैसे अहम विषयों पर दो वेबिनार हो चुके हैं। आज, Rural Economy और Agriculture जैसे अहम सेक्टर पर चर्चा हो रही है। आप सभी ने बजट निर्माण में अपने मूल्यवान सुझावों से बहुत सहयोग दिया, और आपने देखा होगा बजट में आप सबके सुझाव रिफ्लेक्ट हो रहे हैं, बहुत काम आए हैं। लेकिन अब बजट आ चुका है, अब बजट के बाद उसके full potential का लाभ देश को मिले, इस दिशा में भी आपका अनुभव, आपके सुझाव और सरल तरीके से बजट का सर्वाधिक लोगों को लाभ हो। बजट का पाई-पाई पैसा जिस हेतु से दिया गया है, उसको परिपूर्ण कैसे करें? जल्द से जल्द कैसे करें? आपके सुझाव ये वेबिनार के लिए बहुत अहम है।

साथियों,

आप सभी जानते हैं, कृषि, एग्रीकल्चर, विश्वकर्मा, ये सब हमारी अर्थव्यवस्था का मुख्य आधार है। एग्रीकल्चर, भारत की लॉन्ग टर्म डेवलपमेंट जर्नी का Strategic Pillar भी है, और इसी सोच के साथ हमारी सरकार ने कृषि सेक्टर को लगातार मजबूत किया है। करीब 10 करोड़ किसानों को 4 लाख करोड़ रुपए से अधिक की पीएम किसान सम्मान निधि मिली है। MSP में हुए Reforms से अब किसानों को डेढ़ गुना तक रिटर्न मिल रहा है। इंस्टिट्यूशनल क्रेडिट कवरेज 75 प्रतिशत से अधिक हो चुका है। पीएम फसल बीमा योजना के तहत लगभग 2 लाख करोड़ रुपए के क्लेम सेटल किए गए हैं। ऐसे अनेक प्रयासों से किसानों का रिस्क बहुत कम हुआ है, और उन्हें एक बेसिक इकोनॉमिक सिक्योरिटी मिली है। इससे कृषि क्षेत्र का आत्मविश्वास भी बढ़ा है। आज खाद्यान्न और दालों से लेकर तिलहन तक देश रिकॉर्ड उत्पादन कर रहा है। लेकिन अब, जब 21वीं सदी का दूसरा क्वार्टर शुरू हो चुका है, 25 साल बीत चुके हैं, तब कृषि क्षेत्र को नई ऊर्जा से भरना भी उतना ही आवश्यक है। इस साल के बजट में इस दिशा में नए प्रयास हुए हैं। मुझे विश्वास है, इस वेबिनार में आप सभी के बीच हुई चर्चा, इससे निकले सुझाव, बजट प्रावधानों को जल्द से जल्द जमीन पर उतारने में मदद करेंगे।

साथियों,

आज दुनिया के बाजार खुल रहे हैं, ग्लोबल डिमांड बदल रही है। इस वेबिनार में अपनी खेती को एक्सपोर्ट ओरिएंटेड बनाने पर भी ज्यादा से ज्यादा चर्चा आवश्य़क है। हमारे पास Diverse Climate है, हमें इसका पूरा फायदा उठाना है। एग्रो क्लाइमेटिक जोन, उस विषय में हम बहुत समृद्ध है। इस साल का बजट इन सब बातों के लिए अनगिनत नए अवसर देने वाला बजट है। प्रोडक्टिविटी बढ़ाने की दिशा तय करता है, और एक्सपोर्ट स्ट्रेंथ को बढ़ावा देता है। बजट में हमने high value agriculture पर फोकस किया है। नारियल, काजू, कोको, चंदन, ऐसे उत्पादों के regional-specific promotion की बात कही है, और आपको मालूम है, दक्षिण के हमारे जो राज्य हैं खासकर केरल है, तमिलनाडु है, नारियल की पैदावार बहुत करते हैं। लेकिन अब वो क्रॉप, वो सारे पेड़ इतने पुराने हो चुके हैं कि उसकी वो क्षमता नहीं रही है। केरल के किसानों को अतिरिक्त लाभ हो, तमिलनाडु के किसानों को अतिरिक्त लाभ हो। इसलिए इस बार कोकोनट पर एक विशेष बल दिया गया है, जिसका फायदा आने वाले दिनों में हमारे इन किसानों को मिलेगा।

साथियों,

नॉर्थ ईस्ट की तरफ देखें, अगरवुड बहुत कम लोगों को मालूम है, जो ये अगरबत्ती शब्द है ना, वो अगरवुड से आया हुआ है। अब हिमालयन राज्यों में टेम्परेट नट क्रॉप्स, और इन्हें बढ़ावा देने का प्रस्ताव बजट में रखा गया है। जब एक्सपोर्ट ओरिएंटेड प्रोडक्शन बढ़ेगा, तो ग्रामीण क्षेत्रों में प्रोसेसिंग और वैल्यू एडिशन के जरिए रोजगार सृजन होगा। इस दिशा में एक coordinated action कैसे हो, आप सभी स्टेकहोल्डर्स मिलकर जरूर मंथन करें। अगर हम मिलकर High Value Agriculture को स्केल करते हैं, तो ये एग्रीकल्चर को ग्लोबली कंपेटिटिव सेक्टर में बदल सकता है। एग्री experts, इंडस्ट्री और किसान एक साथ कैसे आएं, किसानों को ग्लोबल मार्केट से जोड़ने के लिए किस तरह से गोल्स सेट किए जाएं, क्वालिटी, ब्रांडिंग और स्टैंडर्ड्स, ऐसे हर पहलू, इन सबको कैसे प्रमोट किया जाए, इन सारे विषयों पर चर्चा, इस वेबिनार को, इसके महत्व को बढ़ाएंगे। मैं एक और बात आपसे कहना चाहूंगा। आज दुनिया हेल्थ के संबंध में ज्यादा कॉनशियस है। होलिस्टिक हेल्थ केयर और उसमें ऑर्गेनिक डाइट, ऑर्गेनिक फूड, इस पर बहुत रुचि है। भारत में हमें केमिकल फ्री खेती पर बल देना ही होगा, हमें नेचुरल फार्मिंग पर बल देना होगा। नेचुरल फार्मिंग से, केमिकल फ्री प्रोडक्ट से दुनिया के बाजार तक पहुंचने में हमारे लिए एक राजमार्ग बन जाता है। उसके लिए सर्टिफिकेशन, लेबोरेटरी ये सारी व्यवस्थाएं सरकार सोच रही है। लेकिन आप लोग इसमें भी जरूर अपने विचार रखिए।

साथियों,

एक्सपोर्ट बढ़ाने में एक बहुत बड़ा फैक्टर फिशरीज सेक्टर का पोटेंशियल भी है। भारत दुनिया का दूसरा सबसे बड़ा मछली उत्पादक देश भी है। आज हमारे अलग-अलग तरह के जलाशय, तालाब, ये सब मिलाकर लगभग 4 लाख टन मछली उत्पादन होता है। जबकि इसमें 20 लाख टन अतिरिक्त उत्पादन की संभावना मौजूद है। अब विचार कीजिए आप, 4 लाख टन से हम अतिरिक्त 20 लाख टन जोड़ दें, तो हमारे गरीब मछुआरे भाई-बहन हैं, उनकी जिंदगी कैसी बदल जाएगी। हमारे पास Rural Income को डायवर्सिफाई करने का अवसर है। फिशरीज एक्सपोर्ट ग्रोथ का बड़ा प्लेटफॉर्म बन सकता है, दुनिया में इसकी मांग है। इस वेबिनार से अगर बहुत ही प्रैक्टिकल सुझाव निकलते हैं, तो कैसे रिज़रवॉयर, उसकी पोटेंशियल की सटीक मैपिंग की जाए, कैसे क्लस्टर प्लानिंग की जाए, कैसे फिशरीज डिपार्टमेंट और लोकल कम्युनिटी के बीच मजबूत कोऑर्डिनेशन हो, तो बहुत ही उत्तम होगा। हैचरी, फीड, प्रोसेसिंग, ब्रांडिंग, एक्सपोर्ट, उसके लिए आवश्यक लॉजिस्टिक्स, हर स्तर पर हमें नए बिजनेस मॉडल विकसित करने ही होंगे। ये Rural Prosperity, ग्रामीण समृद्धि के लिए, वहां की हाई वैल्यू, हाई इम्पैक्ट सेक्टर के रूप में परिवर्तित करने का एक अवसर है हमारे लिए, और इस दिशा में भी हम सबको मिलकर काम करना है, और आप आज जो मंथन करेंगे, उसके लिए, उस कार्य के लिए रास्ता बनेगा।

साथियों,

पशुपालन सेक्टर, ग्रामीण इकोनॉमी का हाई ग्रोथ पिलर है। भारत आज दुनिया का सबसे बड़ा मिल्क प्रोड्यूसर है, Egg प्रोडक्शन में हम दूसरे स्थान पर है। हमें इसे और आगे ले जाने के लिए ब्रीडिंग क्वालिटी, डिजीज प्रिवेंशन और साइंटिफिक मैनेजमेंट पर फोकस करना होगा। एक और अहम विषय पशुधन के स्वास्थ्य का भी है। मैं जब One Earth One Health की बात करता हूं, तो उसमें पौधा हो या पशु, सबके स्वास्थ्य की बात शामिल है। भारत अब वैक्सीन उत्पादन में आत्मनिर्भर है। फुट एंड माउथ डिजीज, उससे पशुओं को बचाने के लिए सवा सौ करोड़ से अधिक डोज पशुओं को लगाई जा चुकी है। राष्ट्रीय गोकुल मिशन के तहत टेक्नोलॉजी का विस्तार किया जा रहा है। हमारी सरकार में अब पशुपालन क्षेत्र के किसानों को किसान क्रेडिट कार्ड का भी लाभ मिल रहा है। निजी निवेश को प्रोत्साहित करने के लिए एनिमल हसबेंड्री इंफ्रास्ट्रक्चर डेवलपमेंट फंड की शुरुआत भी की गई है, और आपको ये पता है हम लोगों ने गोबरधन योजना लागू की है। गांव के पशुओं के निकलने वाला मलमूत्र है, गांव का जो वेस्ट है, कूड़ा-कचरा है। हम गोबरधन योजना में इसका उपयोग करके गांव भी स्वच्छ रख सकते हैं, दूध से आय होती है, तो गोबर से भी आय हो सकती है, और एनर्जी सिक्योरिटी की दिशा में गैस सप्लाई में भी ये गोबरधन बहुत बड़ा योगदान दे सकता है। ये मल्टीपर्पज बेनिफिट वाला काम है, और गांव के लिए बहुत उपयोगी है। मैं चाहूंगा कि सभी राज्य सरकारें इसको प्राथमिकता दें, इसको आगे बढ़ाएं।

साथियों,

हमने पिछले अनुभवों से समझा है कि केवल एक ही फसल पर टिके रहना किसान के लिए जोखिम भरा है। इससे आय के विकल्प भी सीमित हो जाते हैं। इसलिए, हम crop diversification पर फोकस कर रहे हैं। इसके अलावा, National Mission on Edible Oils And Pulses, National Mission on Natural Farming, ये सभी एग्रीकल्चर सेक्टर की ताकत बढ़ा रहे हैं।

साथियों,

आप भी जानते हैं एग्रीकल्चर स्टेट सब्जेक्ट है, राज्यों का भी एक बड़ा एग्रीकल्चर बजट होता है, हमें राज्यों को भी निरंतर प्रेरित करना है कि वो अपना दायित्व निभाने में, हम उनको कैसे मदद दें, हमारे सुझाव उनको कैसे काम आएं। राज्य का भी एक-एक पैसा जो गांव के लिए, किसान के लिए तय हुआ है, वो सही उपयोग हो। हमें बजट प्रावधानों को जिला स्तर तक मजबूत करना होगा। तभी नई पॉलिसीज का ज्यादा से ज्यादा फायदा उठाया जा सकता है।

साथियों,

ये टेक्नोलॉजी की सदी है और सरकार का बहुत जोर एग्रीकल्चर में टेक्नोलॉजी कल्चर लाने पर भी है। आज e-NAM के माध्यम से मार्केट एक्सेस का डेमोक्रेटाइजेशन हुआ है। सरकार एग्रीस्टैक के जरिए, एग्रीकल्चर के लिए डिजिटल पब्लिक इंफ्रास्ट्रक्चर विकसित कर रही है। इसके तहत डिजिटल पहचान, यानी किसान आईडी बनाई जा रही है। अब तक लगभग 9 करोड़ किसानों की किसान आईडी बन चुकी है, और लगभग 30 करोड़ भूमि पार्सलों का डिजिटल सर्वे किया गया है। भारत-विस्तार जैसे AI आधारित प्लेटफॉर्म, रिसर्च इंस्टीट्यूशंस और किसानों के बीच की दूरी कम कर रहे हैं।

लेकिन साथियों,

टेक्नोलॉजी तभी परिणाम देती है, जब सिस्टम उसे अपनाएं, संस्थाएं उसे इंटीग्रेट करें और एंटरप्रेन्योर्स उस पर इनोवेशन खड़ा करें। इस वेबिनार में आपको इससे जुड़े सुझावों को मजबूती से सामने लाना होगा। हम टेक्नोलॉजी को कैसे सही तरीके से इंटीग्रेट करें, इस दिशा में इस वेबिनार से निकले सुझावों की बहुत बड़ी भूमिका होगी।

साथियों,

हमारी सरकार ग्रामीण समृद्धि के निर्माण के लिए प्रतिबद्ध है। प्रधानमंत्री आवास योजना, स्वामित्व योजना, पीएम ग्रामीण सड़क योजना, स्वयं सहायता समूहों को आर्थिक मदद, इसने रूरल इकोनॉमी को निरंतर मजबूत किया है। लखपति दीदी अभियान की सफलता को भी हमें नई ऊंचाई देनी है। अभी तक गांव की 3 करोड़ महिलाओं को लखपति दीदी बनाने में हम सफल हो चुके हैं। अब 2029 तक, 2029 तक 3 करोड़ में और 3 करोड़ जोड़ना है, और 3 करोड़ और लखपति दीदियां बनाने का लक्ष्य तय किया गया है। ये लक्ष्य और तेजी से कैसे प्राप्त किया जाए, इसे लेकर भी आपके सुझाव महत्वपूर्ण होंगे।

साथियों,

देश में स्टोरेज का बहुत बड़ा अभियान चल रहा है। लाखों गोदाम बनाए जा रहे हैं। स्टोरेज के अलावा एग्री एंटरप्रेन्योर्स प्रोसेसिंग, सप्लाई चैन, एग्री-टेक, एग्री-फिनटेक, एक्सपोर्ट, इन सब में इनोवेशन और निवेश बढ़ाना आज समय की मांग है। मुझे विश्वास है आज जो आप मंथन करेंगे, उससे निकले अमृत से ग्रामीण अर्थव्यवस्था को नई ऊर्जा मिलेगी। आप सबको इस वेबिनार के लिए मेरी बहुत-बहुत शुभकामनाएं हैं, और मुझे पूरा विश्वास है कि जमीन से जुड़े हुए विचार, जड़ों से जुड़े हुए विचार, इस बजट को सफल बनाने के लिए, गांव-गांव तक पहुंचाने के लिए बहुत काम आएंगे। आपको बहुत-बहुत शुभकामनाएं।

बहुत-बहुत धन्यवाद। नमस्कार।