ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಟಾನಗರದಲ್ಲಿ ಇಂದು ವಿವಿಧ ಉತ್ಪನ್ನಗಳನ್ನು ಪ್ರದರ್ಶಿಸಿರುವ ಸ್ಥಳೀಯ ವ್ಯಾಪಾರಿಗಳು ಮತ್ತು ಚಿಲ್ಲರೆ ವರ್ತಕರನ್ನು ಭೇಟಿಯಾದರು. "ಸರಕು ಮತ್ತು ಸೇವಾ ತೆರಿಗೆ (ಜಿ.ಎಸ್.ಟಿ) ಸುಧಾರಣೆಗಳ ಬಗ್ಗೆ ವರ್ತಕರು ಸಂತೋಷ ವ್ಯಕ್ತಪಡಿಸಿದ್ದಾರೆ. ‘ಹೆಮ್ಮೆಯಿಂದ ಸ್ವದೇಶಿ ಎಂದು ಹೇಳಿ' ಎಂಬ ಪೋಸ್ಟರ್‌ಗಳನ್ನು ಅವರಿಗೆ ನೀಡಿದೆ. ಇದನ್ನು ತಮ್ಮ ಅಂಗಡಿಗಳಲ್ಲಿ ಪ್ರದರ್ಶಿಸುವುದಾಗಿ ಅವರು ಉತ್ಸಾಹದಿಂದ ಹೇಳಿದರು" ಎಂದು ಶ್ರೀ ಮೋದಿ ಅವರು ತಿಳಿಸಿದ್ದಾರೆ.

 

ಪ್ರಧಾನಮಂತ್ರಿ ಅವರ ಎಕ್ಸ್ ಪೋಸ್ಟ್ ನಾಲ್ಲಿ ಹೀಗೆ ಹೇಲಿದ್ದಾರೆ: 

"ಇಂದಿನ ಸೂರ್ಯೋದಯದೊಂದಿಗೆ ಜಿ.ಎಸ್‌.ಟಿ ಉಳಿತಾಯ ಉತ್ಸವ ಆರಂಭವಾಗಿದ್ದು, ಭಾರತದ ಆರ್ಥಿಕ ಪಯಣದಲ್ಲಿ ಹೊಸ ಅಧ್ಯಾಯವೂ ಪ್ರಾರಂಭವಾಗಿದೆ. ಭಾರತದ ಸೂರ್ಯೋದಯದ ಸುಂದರ ಭೂಮಿ ಅರುಣಾಚಲ ಪ್ರದೇಶಕ್ಕಿಂತ ಉತ್ತಮ ಸ್ಥಳ ಇನ್ನೊಂದಿಲ್ಲ. 

 

ಇಟಾನಗರದಲ್ಲಿ, ನಾನು ಸ್ಥಳೀಯ ವ್ಯಾಪಾರಿಗಳು ಮತ್ತು ಚಿಲ್ಲರೆ ವರ್ತಕರನ್ನು ಭೇಟಿ ಮಾಡಿದೆ, ಅವರು ಪರಿಮಳಯುಕ್ತ ಚಹಾಗಳು, ರುಚಿಕರ ಉಪ್ಪಿನಕಾಯಿ, ಅರಿಶಿನ, ಬೇಕರಿ ಪದಾರ್ಥಗಳು, ಕರಕುಶಲ ವಸ್ತುಗಳು ಮೊದಲಾದ ವೈವಿಧ್ಯಮಯ ಉತ್ಪನ್ನಗಳನ್ನು ಪ್ರದರ್ಶಿಸಿದರು.

 

ಜಿ.ಎಸ್.ಟಿ ಸುಧಾರಣೆಗಳ ಬಗ್ಗೆ ಅವರು ಸಂತೋಷ ವ್ಯಕ್ತಪಡಿಸಿದರು. ಅವರಿಗೆ ‘ಹೆಮ್ಮೆಯಿಂದ ಸ್ವದೇಶಿ ಎಂದು ಹೇಳಿರಿ’ ಎಂಬ ಘೋಷವಾಕ್ಯದ ಪೋಸ್ಟರ್‌ಗಳನ್ನು ನೀಡಿದೆ. ಈ ಪೋಸ್ಟರ್ ಅನ್ನು ತಮ್ಮ ಅಂಗಡಿಗಳ ಮೇಲೆ ಉತ್ಸಾಹದಿಂದ ಪ್ರದರ್ಶಿಸುವುದಾಗಿ ಅವರು ಹೇಳಿದರು.”

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
In Photos: PM Narendra Modi Prays At Kashi Vishwanath, Holds Trishul-Damru

Media Coverage

In Photos: PM Narendra Modi Prays At Kashi Vishwanath, Holds Trishul-Damru
NM on the go

Nm on the go

Always be the first to hear from the PM. Get the App Now!
...
ಉತ್ಸಾಹ ಮತ್ತು ಸಕಾರಾತ್ಮಕ ಶಕ್ತಿಯು ಯಶಸ್ಸಿಗೆ ಹೇಗೆ ಕಾರಣವಾಗುತ್ತದೆ ಎಂಬುದನ್ನು ಬಿಂಬಿಸುವ ಸಂಸ್ಕೃತ ಸುಭಾಷಿತಂವನ್ನು ಹಂಚಿಕೊಂಡಿರುವ ಪ್ರಧಾನಮಂತ್ರಿ
April 30, 2026

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಸಂಸ್ಕೃತ ಸುಭಾಷಿತಂ ಪುಸ್ತಕವನ್ನು ಹಂಚಿಕೊಂಡಿದ್ದು, ಉತ್ಸಾಹ ಮತ್ತು ಸಕಾರಾತ್ಮಕ ಶಕ್ತಿಯು ವ್ಯಕ್ತಿಯು ತಮ್ಮ ಕಾರ್ಯಗಳಲ್ಲಿ ನಿರಂತರವಾಗಿ ಸಕ್ರಿಯವಾಗಿರಲು ಪ್ರೇರೇಪಿಸುತ್ತದೆ ಎಂದು ಹೇಳಿದ್ದಾರೆ.

ಈ ಅಚಲ ಉತ್ಸಾಹವು ಒಬ್ಬ ವ್ಯಕ್ತಿಯು ಸಾಧಿಸಲು ನಿರ್ಧರಿಸುವ ಎಲ್ಲಾ ಪ್ರಯತ್ನಗಳನ್ನು ಯಶಸ್ಸಿನತ್ತ ಕೊಂಡೊಯ್ಯುತ್ತದೆ ಎಂದು ಪ್ರಧಾನಿ ಹೇಳಿದರು.

ಪ್ರಧಾನಮಂತ್ರಿ ಅವರು ಈ ಬಗ್ಗೆ ಎಕ್ಸ್ ನಲ್ಲಿ ಹಂಚಿಕೊಂಡಿದ್ದಾರೆ;

"कर्मशील और ऊर्जावान देशवासी ही राष्ट्र की सबसे बड़ी शक्ति हैं, जिनके परिश्रम से विकास की नई राहें तय होती हैं। इनके प्रयासों से देश समृद्धि, आत्मनिर्भरता और उन्नति के शिखर को छूता है।

अनिर्वेदो हि सततं सर्वार्थेषु प्रवर्तकः।

करोति सफलं जन्तोः कर्म यच्च करोति सः॥"

ಉತ್ಸಾಹ ಮತ್ತು ಸಕಾರಾತ್ಮಕ ಶಕ್ತಿಯು ವ್ಯಕ್ತಿಯನ್ನು ತಮ್ಮ ಕ್ರಿಯೆಗಳಲ್ಲಿ ನಿರಂತರವಾಗಿ ಸಕ್ರಿಯವಾಗಿರಲು ಪ್ರೇರೇಪಿಸುತ್ತದೆ. ಈ ಅಚಲ ಉತ್ಸಾಹವು ಒಬ್ಬ ವ್ಯಕ್ತಿಯು ಸಾಧಿಸಲು ನಿರ್ಧರಿಸುವ ಎಲ್ಲಾ ಪ್ರಯತ್ನಗಳನ್ನು ಯಶಸ್ಸಿನತ್ತ ಕರೆದೊಯ್ಯುತ್ತದೆ.