ಸಂಸದರು ಮತ್ತು ಉದ್ಯಮದ ಮುಖಂಡರನ್ನು ಒಳಗೊಂಡ ನಿಯೋಗದೊಂದಿಗೆ ಶ್ರೀ ಎಚ್.ಇ. ಸುಗಾ ಭಾರತಕ್ಕೆ ಭೇಟಿ
ವಿಶೇಷ ಕಾರ್ಯತಂತ್ರ ಮತ್ತು ಜಾಗತಿಕ ಪಾಲುದಾರಿಕೆಯನ್ನು ಹೆಚ್ಚಿಸುವ ಕುರಿತು ಅಭಿಪ್ರಾಯ ವಿನಿಮಯ
ಪ್ರಧಾನಮಂತ್ರಿಯವರು "ಗಣೇಶ ನೋ ಕೈ" ಸಂಸದರ ಗುಂಪು ಮತ್ತು ಕೀಡಾನ್ರೆನ್ ಸದಸ್ಯರೊಂದಿಗೆ ಫಲಪ್ರದ ಸಂವಾದ ನಡೆಸಿದರು

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಜಪಾನ್-ಇಂಡಿಯಾ ಅಸೋಸಿಯೇಷನ್ (JIA) ಅಧ್ಯಕ್ಷರು ಮತ್ತು ಜಪಾನ್ನ ಮಾಜಿ ಪ್ರಧಾನಿ ಹೆಚ್.ಇ. ಶ್ರೀ ಯೋಶಿಹಿಡೆ ಸುಗಾ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.

ಶ್ರೀ ಸುಗಾ ಅವರು ಸರ್ಕಾರಿ ಅಧಿಕಾರಿಗಳು, ಕೀಡಾನ್ರೆನ್ (ಜಪಾನ್ ಬ್ಯುಸಿನೆಸ್ ಫೆಡರೇಶನ್) ಮತ್ತು "ಗಣೇಶ ನೋ ಕೈ" ಸಂಸದರನ್ನು ಒಳಗೊಂಡ 100 ಕ್ಕೂ ಹೆಚ್ಚು ಸದಸ್ಯರ ನಿಯೋಗದೊಂದಿಗೆ ಭಾರತಕ್ಕೆ ಭೇಟಿ ನೀಡಿದ್ದಾರೆ. 

ಜೆಐಎ ಅಧ್ಯಕ್ಷರಾಗಿ ಭಾರತಕ್ಕೆ ಇದೇ ಚೊಚ್ಚಲ ಬಾರಿ ಭೇಟಿ ನೀಡುತ್ತಿರುವ ಶ್ರೀ ಸುಗಾ ಅವರನ್ನು ಪ್ರಧಾನಮಂತ್ರಿಗಳು ಸ್ವಾಗತಿಸಿದರು. ಹೂಡಿಕೆ ಮತ್ತು ಆರ್ಥಿಕ ಸಹಕಾರ, ರೈಲ್ವೆ, ಜನರಿಂದ ಜನರ ನಡುವಿನ ಸಂಪರ್ಕ, ಕೌಶಲ್ಯ ಅಭಿವೃದ್ಧಿ, ಪಾಲುದಾರಿಕೆ ಸೇರಿದಂತೆ ಭಾರತ ಮತ್ತು ಜಪಾನ್ ನಡುವಿನ ವಿಶೇಷ ಕಾರ್ಯತಂತ್ರ ಮತ್ತು ಜಾಗತಿಕ ಪಾಲುದಾರಿಕೆಯನ್ನು ಇನ್ನಷ್ಟು ವೃದ್ಧಿಗೊಳಿಸುವ ಕುರಿತು ನಾಯಕರು ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಂಡರು.

ಉಭಯ ದೇಶಗಳ ನಡುವಿನ ಸಂಸದೀಯ ಸಂಪರ್ಕವನ್ನು ಬಲಪಡಿಸುವ ಕುರಿತು "ಗಣೇಶ ನೋ ಕೈ" ಸಂಸದೀಯ ಗುಂಪಿನಲ್ಲಿರುವ ಸದಸ್ಯರೊಂದಿಗೆ ಪ್ರಧಾನ ಮಂತ್ರಿಗಳು ಫಲಪ್ರದ ಸಂವಾದ ನಡೆಸಿದರು. ಜಪಾನ್ನಲ್ಲಿ ಯೋಗ ಮತ್ತು ಆಯುರ್ವೇದದ ಜನಪ್ರಿಯತೆ ಹೆಚ್ಚಾಗಿರುವುದನ್ನು ಸ್ವಾಗತಾರ್ಹ ಎಂದು ಪ್ರಧಾನಮಂತ್ರಿ ತಿಳಿಸಿದರು. ಭಾರತ ಮತ್ತು ಜಪಾನ್ ನಡುವಿನ ಸಾಂಸ್ಕೃತಿಕ ಸಂಬಂಧಗಳನ್ನು ಮತ್ತಷ್ಟು ಬಲಪಡಿಸುವ ಮಾರ್ಗಗಳ ಕುರಿತು ಚರ್ಚಿಸಿದರು.

ಕೀಡಾನ್ರೆನ್ ಸದಸ್ಯರನ್ನು ಪ್ರಧಾನಮಂತ್ರಿಯವರು ಸ್ವಾಗತಿಸಿದರು. ವ್ಯಾಪಾರ ವ್ಯವಸ್ಥೆಯನ್ನು ಸುಧಾರಿಸಲು ದೇಶದಲ್ಲಿ ಕೈಗೊಂಡ ವ್ಯಾಪಕ ಸುಧಾರಣೆಗಳ ಬಗ್ಗೆ ಹಾಗೂ ಜಪಾನಿನ ಹೂಡಿಕೆದಾರರನ್ನು ಹೂಡಿಕೆಗಳನ್ನು ವಿಸ್ತರಿಸಲು ಮತ್ತು ಸಹಕಾರದ ಹೊಸ ಮಾರ್ಗಗಳನ್ನು ಅನ್ವೇಷಿಸಬೇಕೆಂದು ಪ್ರಧಾನಮಂತ್ರಿಗಳು ತಿಳಿಸಿದರು.

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
Oman, India’s Gulf 'n' West Asia Gateway

Media Coverage

Oman, India’s Gulf 'n' West Asia Gateway
NM on the go

Nm on the go

Always be the first to hear from the PM. Get the App Now!
...
Prime Minister condoles passing of renowned writer Vinod Kumar Shukla ji
December 23, 2025

The Prime Minister, Shri Narendra Modi has condoled passing of renowned writer and Jnanpith Awardee Vinod Kumar Shukla ji. Shri Modi stated that he will always be remembered for his invaluable contribution to the world of Hindi literature.

The Prime Minister posted on X:

"ज्ञानपीठ पुरस्कार से सम्मानित प्रख्यात लेखक विनोद कुमार शुक्ल जी के निधन से अत्यंत दुख हुआ है। हिन्दी साहित्य जगत में अपने अमूल्य योगदान के लिए वे हमेशा स्मरणीय रहेंगे। शोक की इस घड़ी में मेरी संवेदनाएं उनके परिजनों और प्रशंसकों के साथ हैं। ओम शांति।"