ಬ್ಯಾಂಕಾಕ್‌ನಲ್ಲಿ ನಡೆದ ಬಿಮ್‌ಸ್ಟೆಕ್ ಶೃಂಗಸಭೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ರಾಜ್ಯ ಆಡಳಿತ ಮಂಡಳಿಯ ಅಧ್ಯಕ್ಷ ಮತ್ತು ಮ್ಯಾನ್ಮಾರ್ ಪ್ರಧಾನಿ ಸೀನಿಯರ್ ಜನರಲ್ ಮಿನ್ ಆಂಗ್ ಹ್ಲೈಂಗ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.

 

ಮ್ಯಾನ್ಮಾರ್‌ನಲ್ಲಿನ ಭೂಕಂಪದ ನಂತರದ ಪರಿಸ್ಥಿತಿಯ ಬಗ್ಗೆ ಉಭಯ ನಾಯಕರು ಚರ್ಚಿಸಿದರು, ಇದರಲ್ಲಿ ಮ್ಯಾನ್ಮಾರ್‌ಗೆ ಮಾನವೀಯ ನೆರವು, ವಿಪತ್ತು ಪರಿಹಾರ ಮತ್ತು ವೈದ್ಯಕೀಯ ನೆರವು ನೀಡಲು "ಆಪರೇಷನ್ ಬ್ರಹ್ಮ" ಅಡಿಯಲ್ಲಿ ಭಾರತ ನಡೆಸುತ್ತಿರುವ ಪ್ರಯತ್ನಗಳು ಸೇರಿವೆ. 

ಭಾರತದ ಸಹಾಯ ಪ್ರಯತ್ನಗಳಿಗೆ ಜನರಲ್ ಕೃತಜ್ಞತೆ ಸಲ್ಲಿಸಿದರು. ಮೊದಲ ಪ್ರತಿಸ್ಪಂದಕರಾಗಿ, ಈ ಬಿಕ್ಕಟ್ಟಿನ ಸಮಯದಲ್ಲಿ ಮ್ಯಾನ್ಮಾರ್‌ನೊಂದಿಗೆ ಭಾರತ ನಿಂತಿದೆ ಮತ್ತು ಹೆಚ್ಚಿನ ಅಗತ್ಯ ವಸ್ತುಗಳ ನೆರವು ಮತ್ತು ಸಂಪನ್ಮೂಲಗಳನ್ನು ನಿಯೋಜಿಸಲು ಸಿದ್ಧವಾಗಿದೆ ಎಂದು ಪ್ರಧಾನಮಂತ್ರಿ ತಿಳಿಸಿದರು.

 

ಎಲ್ಲರನ್ನೂ ಒಳಗೊಂಡ ಮತ್ತು ವಿಶ್ವಾಸಾರ್ಹ ಚುನಾವಣೆಗಳ ಮೂಲಕ ಪ್ರಜಾಪ್ರಭುತ್ವ ಪ್ರಕ್ರಿಯೆಯ ಆರಂಭಿಕ ಪುನಃಸ್ಥಾಪನೆಯ ಮಹತ್ವದ ಕುರಿತು ಪ್ರಧಾನಮಂತ್ರಿ  ಹೇಳಿದರು, ವಿಶ್ವಾಸವನ್ನು ಬೆಳೆಸುವ ಮತ್ತು ಶಾಂತಿಯುತ, ಸ್ಥಿರ ಮತ್ತು ಪ್ರಜಾಪ್ರಭುತ್ವ ಭವಿಷ್ಯದತ್ತ ಮ್ಯಾನ್ಮಾರ್ ಒಡೆತನದ ಮತ್ತು ಮ್ಯಾನ್ಮಾರ್ ನೇತೃತ್ವದ ಪರಿವರ್ತನೆಯನ್ನು ಮುನ್ನಡೆಸುವ ಗುರಿಯನ್ನು ಹೊಂದಿರುವ ಪ್ರಯತ್ನಗಳನ್ನು ಭಾರತ ಬೆಂಬಲಿಸುತ್ತದೆ ಎಂದು ಹೇಳಿದರು. 

 

ಮ್ಯಾನ್ಮಾರ್‌ನಲ್ಲಿ ನಡೆಯುತ್ತಿರುವ ಜನಾಂಗೀಯ ಹಿಂಸಾಚಾರವನ್ನು ಉಲ್ಲೇಖಿಸಿದ ಪ್ರಧಾನಮಂತ್ರಿ, ಸಂಘರ್ಷಕ್ಕೆ ಯಾವುದೇ ಮಿಲಿಟರಿ ಪರಿಹಾರವಿಲ್ಲ ಎಂದು ಹೇಳಿದರು ಮತ್ತು ಎಲ್ಲರನ್ನೂ ಒಳಗೊಂಡ ಸಂವಾದದ ಮೂಲಕ ಮಾತ್ರ ಶಾಶ್ವತ ಶಾಂತಿಯನ್ನು ಸಾಧಿಸಬಹುದು ಎಂದು ಸ್ಪಷ್ಟಪಡಿಸಿದರು.

ಮ್ಯಾನ್ಮಾರ್-ಥೈಲ್ಯಾಂಡ್ ಗಡಿಯಲ್ಲಿರುವ ಸೈಬರ್-ಹಗರಣ ಕೇಂದ್ರಗಳಿಂದ ಭಾರತೀಯ ಪ್ರಜೆಗಳನ್ನು ರಕ್ಷಿಸಲು ಮತ್ತು ಸ್ವದೇಶಕ್ಕೆ ಕಳುಹಿಸಲು ಮ್ಯಾನ್ಮಾರ್ ನೀಡಿದ ಬೆಂಬಲವನ್ನು ಪ್ರಧಾನಮಂತ್ರಿ ಶ್ಲಾಘಿಸಿದರು. ಭಾರತ-ಮ್ಯಾನ್ಮಾರ್ ಗಡಿಯಲ್ಲಿ ದಂಗೆಕೋರ ಚಟುವಟಿಕೆಗಳು, ಅಂತಾರಾಷ್ಟ್ರೀಯ ಅಪರಾಧಗಳು ಮತ್ತು ಮಾನವ ಕಳ್ಳಸಾಗಣೆಗಳನ್ನು ಪರಿಹರಿಸುವಲ್ಲಿ ಸಹಕರಿಸುವ ಅಗತ್ಯವನ್ನು ಉಭಯ ದೇಶಗಳ ನಾಯಕರು ಒಪ್ಪಿಕೊಂಡರು.

ಮ್ಯಾನ್ಮಾರ್‌ನಲ್ಲಿ ನಡೆಯುತ್ತಿರುವ ಭಾರತ ಬೆಂಬಲಿತ ಮೂಲಸೌಕರ್ಯ ಅಭಿವೃದ್ಧಿ ಯೋಜನೆಗಳ ಬಗ್ಗೆಯೂ ಉಭಯ ನಾಯಕರು ಚರ್ಚಿಸಿದರು. ಮ್ಯಾನ್ಮಾರ್‌ನ ಎಲ್ಲಾ ಸಮುದಾಯಗಳ ಅಭಿವೃದ್ಧಿ ಅಗತ್ಯಗಳನ್ನು ಬೆಂಬಲಿಸಲು ಭಾರತ ಸದಾ ಬದ್ಧವಾಗಿದೆ ಎಂದು ಪ್ರಧಾನಮಂತ್ರಿಗಳು ತಿಳಿಸಿದರು.

 

Met Senior General Min Aung Hlaing of Myanmar on the sidelines of the BIMSTEC Summit in Bangkok. Once again expressed condolences on the loss of lives and damage of property in the wake of the recent earthquake. India is doing whatever is possible to assist our sisters and… pic.twitter.com/Hwwv4VxSpi

— Narendra Modi (@narendramodi) April 4, 2025

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
PM Modi at BRICS summit: Dismantle ‘pyramid of privilege’ to make Global South a ‘rule-shaper’

Media Coverage

PM Modi at BRICS summit: Dismantle ‘pyramid of privilege’ to make Global South a ‘rule-shaper’
NM on the go

Nm on the go

Always be the first to hear from the PM. Get the App Now!
...
Prime Minister extends greetings on the Parkash Purab of Sri Guru Granth Sahib Ji
September 12, 2026

The Prime Minister, Shri Narendra Modi, extended greetings on the occasion of the Parkash Purab of Sri Guru Granth Sahib Ji.

The Prime Minister said that for centuries, Sri Guru Granth Sahib Ji has shown humanity the way of selfless service, human dignity and togetherness.

Shri Modi expressed hope that the sacred occasion would inspire everyone to deepen these values in society and build a more compassionate and harmonious world.

The Prime Minister wrote on X;

“Greetings on the Parkash Purab of Sri Guru Granth Sahib Ji.

For centuries, it has shown humanity the way of selfless service, human dignity and togetherness.

May this sacred occasion inspire us to deepen these values in our society and build a more compassionate and harmonious world.”