ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ಕುವೈತ್ ನ ಯುವರಾಜರಾದ ಗೌರವಾನ್ವಿತ ಶೇಖ್ ಸಬಾಹ್ ಅಲ್-ಖಾಲಿದ್ ಅಲ್-ಹಮದ್ ಅಲ್-ಮುಬಾರಕ್ ಅಲ್-ಸಬಾಹ್ ಅವರನ್ನು ಭೇಟಿ ಮಾಡಿದರು. 2024ರ ಸೆಪ್ಟೆಂಬರ್ ನಲ್ಲಿ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ ಸಂದರ್ಭದಲ್ಲಿ ಘನತೆವೆತ್ತ ಯುವರಾಜರನ್ನು ತಾವು ಭೇಟಿ ಮಾಡಿದ್ದನ್ನು ಪ್ರಧಾನಮಂತ್ರಿಯವರು ಪ್ರೀತಿಯಿಂದ ಸ್ಮರಿಸಿದರು.

ಕುವೈತ್ ನೊಂದಿಗಿನ ದ್ವಿಪಕ್ಷೀಯ ಸಂಬಂಧಗಳಿಗೆ ಭಾರತ ಅತ್ಯಂತ ಮಹತ್ವ ನೀಡುವುದಾಗಿ ಪ್ರಧಾನಿಯವರು ತಿಳಿಸಿದರು. ದ್ವಿಪಕ್ಷೀಯ ಸಂಬಂಧಗಳು ಉತ್ತಮವಾಗಿ ಪ್ರಗತಿ ಸಾಧಿಸುತ್ತಿವೆ ಎಂದು ಉಭಯ ನಾಯಕರು ಒಪ್ಪಿಕೊಂಡು, ವ್ಯೂಹಾತ್ಮಕ ಪಾಲುದಾರಿಕೆಗೆ ಉಭಯ ದೇಶಗಳ ಉನ್ನತಿಯನ್ನು ಸ್ವಾಗತಿಸಿದರು. ವಿಶ್ವಸಂಸ್ಥೆ ಮತ್ತು ಇತರ ಬಹುಪಕ್ಷೀಯ ವೇದಿಕೆಗಳಲ್ಲಿ ಎರಡೂ ದೇಶಗಳ ನಡುವೆ ನಿಕಟ ಸಮನ್ವಯಕ್ಕೆ ಅವರು ಒತ್ತು ನೀಡಿದರು. ಕುವೈತ್ ಅಧ್ಯಕ್ಷತೆಯ ಅಡಿಯಲ್ಲಿ ಭಾರತ-ಜಿಸಿಸಿ ಸಂಬಂಧಗಳು ಮತ್ತಷ್ಟು ಬಲಗೊಳ್ಳಲಿವೆ ಎಂಬ ವಿಶ್ವಾಸವನ್ನು ಪ್ರಧಾನಿಯವರು ವ್ಯಕ್ತಪಡಿಸಿದರು.

 

ಪ್ರಧಾನಮಂತ್ರಿಯವರು ಪರಸ್ಪರ ಅನುಕೂಲಕರ ದಿನಾಂಕದಂದು ಭಾರತಕ್ಕೆ ಭೇಟಿ ನೀಡುವಂತೆ ಕುವೈತ್ ನ ಯುವರಾಜರಿಗೆ ಆಹ್ವಾನ ನೀಡಿದರು.

ಗೌರವಾನ್ವಿತ ಕುವೈತ್ ನ ಯುವರಾಜರು ಪ್ರಧಾನಮಂತ್ರಿಯವರ ಗೌರವಾರ್ಥವಾಗಿ ಔತಣಕೂಟವನ್ನು ಏರ್ಪಡಿಸಿದ್ದರು.

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
India's 1 Trillion Retail Moment: Dawn of Retail Revenue Intelligence

Media Coverage

India's 1 Trillion Retail Moment: Dawn of Retail Revenue Intelligence
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 27 ಜೂನ್ 2026
June 27, 2026

Appreciation for PM Modi's Development-Focused and People-Centric Governance