ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಅರ್ಜೆಂಟೀನಾದ ಅಧ್ಯಕ್ಷ ಘನತೆವೆತ್ತ ಜೇವಿಯರ್ ಮಿಲೀ ಅವರನ್ನು ಭೇಟಿ ಮಾಡಿದರು. ಕಾಸಾ ರೊಸಾಡಾಗೆ ಆಗಮಿಸಿದಾಗ ಅಧ್ಯಕ್ಷ ಮಿಲೀ ಅವರನ್ನು ಆತ್ಮೀಯವಾಗಿ ಸ್ವಾಗತಿಸಿದರು. ನಿನ್ನೆ ಬ್ಯೂನಸ್ ಐರಿಸ್ ಗೆ ಆಗಮಿಸಿದ ಪ್ರಧಾನಮಂತ್ರಿ ಅವರಿಗೆ ಔಪಚಾರಿಕ ಸ್ವಾಗತ ನೀಡಲಾಯಿತು. 57 ವರ್ಷಗಳ ನಂತರ ಭಾರತದ ಪ್ರಧಾನಿಯೊಬ್ಬರು ಅರ್ಜೆಂಟೀನಾಕ್ಕೆ ನೀಡುತ್ತಿರುವ ಮೊದಲ ದ್ವಿಪಕ್ಷೀಯ ಭೇಟಿ ಇದಾಗಿರುವುದರಿಂದ ಈ ಭೇಟಿ ಮಹತ್ವ ಪಡೆದುಕೊಂಡಿದೆ. ಉಭಯ ದೇಶಗಳು ರಾಜತಾಂತ್ರಿಕ ಸಂಬಂಧಗಳ ಸ್ಥಾಪನೆಯ 75 ವರ್ಷಗಳನ್ನು ಆಚರಿಸುತ್ತಿರುವುದರಿಂದ ಇದು ಭಾರತ-ಅರ್ಜೆಂಟೀನಾ ಸಂಬಂಧಗಳಿಗೆ ಮಹತ್ವದ ವರ್ಷವಾಗಿದೆ. ತಮಗೆ ಮತ್ತು ತಮ್ಮ ನಿಯೋಗಕ್ಕೆ ನೀಡಿದ ಆತ್ಮೀಯ ಆತಿಥ್ಯಕ್ಕಾಗಿ ಪ್ರಧಾನಮಂತ್ರಿ ಅವರು ಅಧ್ಯಕ್ಷ ಮಿಲೀ ಅವರಿಗೆ ಧನ್ಯವಾದ ಅರ್ಪಿಸಿದರು.

 

ಉಭಯ ನಾಯಕರು ನಿರ್ಬಂಧಿತ ಮತ್ತು ನಿಯೋಗ ಮಟ್ಟದ ಸ್ವರೂಪಗಳಲ್ಲಿ ಭೇಟಿಯಾದರು. ಅವರು ವ್ಯಾಪಕ ಚರ್ಚೆಗಳನ್ನು ನಡೆಸಿದರು ಮತ್ತು ದ್ವಿಪಕ್ಷೀಯ ಸಂಬಂಧಗಳ ಸಂಪೂರ್ಣ ವ್ಯಾಪ್ತಿಯನ್ನು ಪರಿಶೀಲಿಸಿದರು. ನಿರ್ಣಾಯಕ ಖನಿಜಗಳು, ತೈಲ ಮತ್ತು ಅನಿಲ, ರಕ್ಷಣೆ, ಪರಮಾಣು ಶಕ್ತಿ, ಕೃಷಿ, ವಿಜ್ಞಾನ ಮತ್ತು ತಂತ್ರಜ್ಞಾನ, ಕೃಷಿಯಲ್ಲಿ ಡ್ರೋನ್ ಗಳ ಬಳಕೆ, ಮೀನುಗಾರಿಕೆ ಮತ್ತು ವಿದ್ಯುತ್ ಪ್ರಸರಣ ಮಾರ್ಗಗಳ ಮೇಲ್ವಿಚಾರಣೆ, ಐಸಿಟಿ, ಡಿಜಿಟಲ್ ಸಾರ್ವಜನಿಕ ಮೂಲಸೌಕರ್ಯ, ಯುಪಿಐ, ಬಾಹ್ಯಾಕಾಶ, ರೈಲ್ವೆ, ಫಾರ್ಮಾ, ಕ್ರೀಡೆ ಮತ್ತು ಜನರ ನಡುವಿನ ಸಂಬಂಧಗಳ ಕ್ಷೇತ್ರಗಳಲ್ಲಿ ಸಹಕಾರವನ್ನು ಹೆಚ್ಚಿಸಲು ಅವರು ಕರೆ ನೀಡಿದರು. ನಾಯಕರು ನಡೆಯುತ್ತಿರುವ ಆರ್ಥಿಕ ಸಹಯೋಗದ ಬಗ್ಗೆ ಮಾಹಿತಿ ಪಡೆದರು. ದ್ವಿಪಕ್ಷೀಯ ವ್ಯಾಪಾರವು ಸ್ಥಿರ ಪಥದಲ್ಲಿದ್ದರೂ, ವಾಣಿಜ್ಯ ಕಾರ್ಯಕ್ರಮಗಳ ಸಂಪೂರ್ಣ ಸಾಮರ್ಥ್ಯವನ್ನು ಬಳಸಿಕೊಳ್ಳಲು ಎರಡೂ ಕಡೆಯವರು ವ್ಯಾಪಾರ ಬುಟ್ಟಿಯ ವೈವಿಧ್ಯೀಕರಣದ ಬಗ್ಗೆ ಕೆಲಸ ಮಾಡುವ ಅಗತ್ಯವಿದೆ ಎಂದು ಪ್ರಧಾನಮಂತ್ರಿ ಹೇಳಿದರು. ಈ ನಿಟ್ಟಿನಲ್ಲಿ, ಅವರು ಭಾರತ-ಮೆರ್ಕೋಸುರ್ ಆದ್ಯತಾ ವ್ಯಾಪಾರ ಒಪ್ಪಂದದ ವಿಸ್ತರಣೆಯ ಬಗ್ಗೆಯೂ ಚರ್ಚಿಸಿದರು.

 

ಪಹಲ್ಗಾಮ್ ನಲ್ಲಿ ನಡೆದ ಅನಾಗರಿಕ ಭಯೋತ್ಪಾದಕ ದಾಳಿಯನ್ನು ಬಲವಾಗಿ ಖಂಡಿಸಿದ್ದಕ್ಕಾಗಿ ಅಧ್ಯಕ್ಷ ಮಿಲೀ ಅವರಿಗೆ ಧನ್ಯವಾದ ಅರ್ಪಿಸಿದ ಪ್ರಧಾನಮಂತ್ರಿ ಅವರು, ಭಯೋತ್ಪಾದನೆ ವಿರುದ್ಧದ ಹೋರಾಟದಲ್ಲಿ ಭಾರತಕ್ಕೆ ಅರ್ಜೆಂಟೀನಾದ ಒಗ್ಗಟ್ಟನ್ನು ಶ್ಲಾಘಿಸಿದರು. ಭಯೋತ್ಪಾದನೆಯು ಮಾನವೀಯತೆಗೆ ಗಂಭೀರ ಬೆದರಿಕೆಯಾಗಿದೆ ಎಂದು ಇಬ್ಬರೂ ನಾಯಕರು ಒಪ್ಪಿಕೊಂಡರು ಮತ್ತು ಪಿಡುಗಿನ ವಿರುದ್ಧದ ಜಾಗತಿಕ ಹೋರಾಟವನ್ನು ಬಲಪಡಿಸುವ ಬದ್ಧತೆಯನ್ನು ಪುನರುಚ್ಚರಿಸಿದರು.

ವ್ಯೂಹಾತ್ಮಕ ಪಾಲುದಾರಿಕೆಯನ್ನು ಬಲಪಡಿಸಲು ನಿಕಟವಾಗಿ ಕೆಲಸ ಮಾಡುವುದನ್ನು ಮುಂದುವರಿಸಲು ಉಭಯ ನಾಯಕರು ಒಪ್ಪಿಕೊಂಡರು. ಜಾಗತಿಕ ದಕ್ಷಿಣದ ಕಾಳಜಿಗಳಿಗೆ ಹೆಚ್ಚಿನ ಧ್ವನಿ ನೀಡುವಂತೆ ಅವರು ಕರೆ ನೀಡಿದರು.

 

ಪ್ರಧಾನಮಂತ್ರಿ ಅವರು ತಮ್ಮ ಭೇಟಿಯನ್ನು ಮುಕ್ತಾಯಗೊಳಿಸುವ ಮುನ್ನ ಬ್ಯೂನಸ್ ಐರಿಸ್ ನಲ್ಲಿರುವ ಮಹಾತ್ಮ ಗಾಂಧಿ ಮತ್ತು ರವೀಂದ್ರನಾಥ ಟ್ಯಾಗೋರ್ ಅವರ ಪ್ರತಿಮೆಗಳಿಗೆ ಪುಷ್ಪ ನಮನ ಸಲ್ಲಿಸಿದರು.

ಅರ್ಜೆಂಟೀನಾಕ್ಕೆ ಐತಿಹಾಸಿಕ ಭೇಟಿ ನೀಡಿದ್ದಕ್ಕಾಗಿ ಅಧ್ಯಕ್ಷ ಮೈಲಿ ಅವರು ಪ್ರಧಾನಮಂತ್ರಿ ಅವರಿಗೆ ಧನ್ಯವಾದ ಅರ್ಪಿಸಿದರು. ಪ್ರಧಾನಮಂತ್ರಿ ಅವರು ಪರಸ್ಪರ ಅನುಕೂಲಕರ ಸಮಯದಲ್ಲಿ ಭಾರತಕ್ಕೆ ಭೇಟಿ ನೀಡುವಂತೆ ಅಧ್ಯಕ್ಷ ಮಿಲೀ ಅವರನ್ನು ಆಹ್ವಾನಿಸಿದರು.

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
21% YoY rise in engineering exports in June shows sector's resilience amid global challenges: EEPC India Chairman

Media Coverage

21% YoY rise in engineering exports in June shows sector's resilience amid global challenges: EEPC India Chairman
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 14 ಜುಲೈ 2026
July 14, 2026

From Local Fields to Global Recognition: PM Modi’s ‘Vocal for Local’ is Now Delivering Real Global Respect