ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಬ್ರೆಜಿಲ್ ಗೆ ಅಧಿಕೃತ ಭೇಟಿ ನೀಡಿದ್ದಾರೆ. ಅವರು ಇಂದು ಬ್ರೆಜಿಲ್ ನ ಅಧ್ಯಕ್ಷ ಘನತೆವೆತ್ತ ಲೂಯಿಜ್ ಇನಾಸಿಯೊ ಲುಲಾ ಡ ಸಿಲ್ವಾ ಅವರನ್ನು ಬ್ರೆಜಿಲ್ ನ ಅಲ್ವೊರಾಡಾ ಅರಮನೆಯಲ್ಲಿ ಭೇಟಿಯಾದರು. ಪ್ರಧಾನಿಯವರನ್ನು ಅಧ್ಯಕ್ಷ ಲುಲಾ ಅವರು ಆತ್ಮೀಯವಾಗಿ ಬರಮಾಡಿಕೊಂಡರು ಮತ್ತು ಭವ್ಯ ಮತ್ತು ವರ್ಣರಂಜಿತ ವಿಧ್ಯುಕ್ತ ಸ್ವಾಗತವನ್ನು ನೀಡಿದರು.

ಪ್ರಧಾನಮಂತ್ರಿ ಮತ್ತು ಅಧ್ಯಕ್ಷ ಲುಲಾ ಅವರು ಸೀಮಿತ ಮತ್ತು ನಿಯೋಗ ಮಟ್ಟದ ಮಾತುಕತೆಗಳನ್ನು ನಡೆಸಿದರು ಮತ್ತು ಭಾರತ ಮತ್ತು ಬ್ರೆಜಿಲ್ ನಡುವಿನ ಬಹುಮುಖಿ ಕಾರ್ಯತಂತ್ರದ ಪಾಲುದಾರಿಕೆಯ ಎಲ್ಲಾ ಅಂಶಗಳನ್ನು ಚರ್ಚಿಸಿದರು. ಭಾರತ-ಬ್ರೆಜಿಲ್ ನಡುವಿನ ಆತ್ಮೀಯ ಮತ್ತು ಸ್ನೇಹಪರ ಸಂಬಂಧಗಳ ಆಧಾರವಾಗಿರುವ ಸಮಾನ ಮೌಲ್ಯಗಳನ್ನು ಅವರು ಪುನರುಚ್ಚರಿಸಿದರು. ವ್ಯಾಪಾರ ಮತ್ತು ಹೂಡಿಕೆ, ರಕ್ಷಣೆ ಮತ್ತು ಭದ್ರತೆ, ಆರೋಗ್ಯ ಮತ್ತು ಔಷಧಗಳು, ಬಾಹ್ಯಾಕಾಶ, ನವೀಕರಿಸಬಹುದಾದ ಇಂಧನ, ಕೃಷಿ ಮತ್ತು ಆಹಾರ ಸಂಸ್ಕರಣೆ, ಇಂಧನ ಭದ್ರತೆ, ಮೂಲಸೌಕರ್ಯ ಅಭಿವೃದ್ಧಿ, ಡಿಜಿಟಲ್ ಸಾರ್ವಜನಿಕ ಮೂಲಸೌಕರ್ಯ ಮತ್ತು ಯುಪಿಐ, ಸಾಂಪ್ರದಾಯಿಕ ಔಷಧ, ಯೋಗ, ಕ್ರೀಡಾ ಸಂಬಂಧಗಳು, ಸಂಸ್ಕೃತಿ ಮತ್ತು ಜನರು ಜನರ ನಡುವಿನ ಸಂಬಂಧಗಳ ಕ್ಷೇತ್ರಗಳಲ್ಲಿ ಸಹಕಾರದ ಬಗ್ಗೆ ನಾಯಕರು ಚರ್ಚಿಸಿದರು. ನಿರ್ಣಾಯಕ ಖನಿಜಗಳು, ಹೊಸ ಮತ್ತು ಉದಯೋನ್ಮುಖ ತಂತ್ರಜ್ಞಾನಗಳು, ಎಐ ಮತ್ತು ಸೂಪರ್ ಕಂಪ್ಯೂಟರ್ ಗಳು, ಡಿಜಿಟಲ್ ಸಹಕಾರ ಮತ್ತು ಚಲನಶೀಲತೆಯಂತಹ ಹೊಸ ಕ್ಷೇತ್ರಗಳಲ್ಲಿ ಸಹಕಾರದ ಅವಕಾಶಗಳನ್ನು ಅವರು ಅನ್ವೇಷಿಸಿದರು.

 

ವ್ಯಾಪಾರ ಮತ್ತು ವಾಣಿಜ್ಯ ವಿಷಯಗಳ ಬಗ್ಗೆ ಚರ್ಚಿಸಲು ಸಚಿವ ಮಟ್ಟದ ವ್ಯವಸ್ಥೆಯ ಸ್ಥಾಪನೆಯನ್ನು ಇಬ್ಬರೂ ನಾಯಕರು ಸ್ವಾಗತಿಸಿದರು. ಭಾರತ-ಮೆರ್ಕೋಸರ್ ಆದ್ಯತೆಯ ವ್ಯಾಪಾರ ಒಪ್ಪಂದದ ವಿಸ್ತರಣೆ ಸೇರಿದಂತೆ ದ್ವಿಪಕ್ಷೀಯ ವ್ಯಾಪಾರವನ್ನು ಬಲಪಡಿಸುವ ಬಗ್ಗೆ ಅವರು ಚರ್ಚಿಸಿದರು. ಮುಂದಿನ ಐದು ವರ್ಷಗಳಲ್ಲಿ ದ್ವಿಪಕ್ಷೀಯ ವ್ಯಾಪಾರವನ್ನು 20 ಬಿಲಿಯನ್ ಅಮೆರಿಕನ್ ಡಾಲರ್ ಗಳಿಗೆ ಹೆಚ್ಚಿಸುವ ಗುರಿಯನ್ನು ನಾಯಕರು ನಿಗದಿಪಡಿಸಿದರು. ಇಂಧನ ಕ್ಷೇತ್ರದಲ್ಲಿ ನಡೆಯುತ್ತಿರುವ ಸಹಕಾರವನ್ನು ಪರಿಗಣಿಸಿ, ಎರಡೂ ದೇಶಗಳು ಹೈಡ್ರೋಕಾರ್ಬನ್ ಮತ್ತು ನವೀಕರಿಸಬಹುದಾದ ಇಂಧನ ಕ್ಷೇತ್ರಗಳಲ್ಲಿ ಅಪಾರ ಸಾಮರ್ಥ್ಯವನ್ನು ಹೊಂದಿರುವುದರಿಂದ ಹೂಡಿಕೆ ಅವಕಾಶಗಳನ್ನು ಅನ್ವೇಷಿಸಲು ಇಬ್ಬರು ನಾಯಕರು ಸಮ್ಮತಿಸಿದರು.

ಏಪ್ರಿಲ್ 2025 ರಲ್ಲಿ ಪಹಲ್ಗಾಮ್ ನಲ್ಲಿ ನಡೆದ ಬರ್ಬರ ಭಯೋತ್ಪಾದಕ ದಾಳಿಯ ನಂತರ ಭಾರತಕ್ಕೆ ಬ್ರೆಜಿಲ್ ನೀಡಿದ ಬೆಂಬಲಕ್ಕಾಗಿ ಪ್ರಧಾನಿಯವರು ಕೃತಜ್ಞತೆಗಳನ್ನು ವ್ಯಕ್ತಪಡಿಸಿದರು. ಇದು ಎಲ್ಲಾ ರೂಪದ ಮತ್ತು ಅಭಿವ್ಯಕ್ತಿಗಳ ಭಯೋತ್ಪಾದನೆಯನ್ನು ಎದುರಿಸಲು ಎರಡೂ ದೇಶಗಳ ದೃಢ ಬದ್ಧತೆಯನ್ನು ಒತ್ತಿಹೇಳುತ್ತದೆ. ಭಯೋತ್ಪಾದನೆಯ ಬಗ್ಗೆ ಶೂನ್ಯ ಸಹಿಷ್ಣುತೆ ಇರಬೇಕು ಮತ್ತು ಅಂತಹ ಅಮಾನವೀಯ ಕೃತ್ಯಗಳನ್ನು ಉತ್ತೇಜಿಸುವವರನ್ನು ದೃಢವಾಗಿ ಎದುರಿಸಬೇಕು ಎಂದು ಪ್ರಧಾನಿ ಒತ್ತಿ ಹೇಳಿದರು. ಭಯೋತ್ಪಾದನೆಯ ವಿರುದ್ಧ ಹೋರಾಡಲು ಮತ್ತು ಅದನ್ನು ಸೋಲಿಸಲು ಎರಡೂ ದೇಶಗಳು ಜಾಗತಿಕ ಸಮುದಾಯದೊಂದಿಗೆ ಒಟ್ಟಾಗಿ ಕೆಲಸ ಮಾಡಬೇಕು ಎಂದು ಅಧ್ಯಕ್ಷ ಲುಲಾ ಒಪ್ಪಿಕೊಂಡರು.

 

ಪರಸ್ಪರ ಆಸಕ್ತಿಯ ಪ್ರಾದೇಶಿಕ ಮತ್ತು ಜಾಗತಿಕ ವಿಷಯಗಳ ಕುರಿತು ಇಬ್ಬರೂ ನಾಯಕರು ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಂಡರು. ವಿಶ್ವಸಂಸ್ಥೆಯ ಭದ್ರತಾ ಮಂಡಳಿ ಸೇರಿದಂತೆ ಜಾಗತಿಕ ಆಡಳಿತ ಸಂಸ್ಥೆಗಳ ಬಹುಪಕ್ಷೀಯತೆ ಮತ್ತು ಸುಧಾರಣೆಗೆ ತಮ್ಮ ಬದ್ಧತೆಯನ್ನು ಅವರು ಪುನರುಚ್ಚರಿಸಿದರು. ಹವಾಮಾನ ಬದಲಾವಣೆಯನ್ನು ಎದುರಿಸಲು ಜಾಗತಿಕ ಕ್ರಮವನ್ನು ಬಲಪಡಿಸಲು ಒಟ್ಟಾಗಿ ಕೆಲಸ ಮಾಡಲು ಅವರು ಒಪ್ಪಿಕೊಂಡರು. ಮುಂಬರುವ ಸಿಒಪಿ-30 ಹವಾಮಾನ ಬದಲಾವಣೆ ಸಮ್ಮೇಳನ ಆಯೋಜಿಸುವ ಬ್ರೆಜಿಲ್ ಗೆ ಪ್ರಧಾನಿ ತಮ್ಮ ಶುಭಾಶಯಗಳನ್ನು ತಿಳಿಸಿದರು. ಜಾಗತಿಕ ದಕ್ಷಿಣದ ಹಿತಾಸಕ್ತಿಗಳನ್ನು ಮುನ್ನಡೆಸಲು ಒಟ್ಟಾಗಿ ಕೆಲಸ ಮಾಡುವುದನ್ನು ಮುಂದುವರಿಸಲು ಅವರು ಸಮ್ಮತಿಸಿದರು.

ಮಾತುಕತೆಯ ನಂತರ, ಭಯೋತ್ಪಾದನೆ ನಿಗ್ರಹ, ಭದ್ರತಾ ವಲಯದಲ್ಲಿ ಮಾಹಿತಿ ಹಂಚಿಕೆ, ಕೃಷಿ ಸಂಶೋಧನೆ, ನವೀಕರಿಸಬಹುದಾದ ಇಂಧನ, ಬೌದ್ಧಿಕ ಆಸ್ತಿ ಹಕ್ಕುಗಳು ಮತ್ತು ಡಿಜಿಟಲ್ ಸಹಕಾರ (ಇಂಡಿಯಾ ಸ್ಟಾಕ್) ಕ್ಷೇತ್ರಗಳಲ್ಲಿ ಆರು ಒಪ್ಪಂದಗಳನ್ನು (ವಿವರಗಳನ್ನು ಇಲ್ಲಿ ನೋಡಬಹುದು) ಅಂತಿಮಗೊಳಿಸಲಾಯಿತು. ಅಧಿಕೃತ ಭೇಟಿಯ ಸಂದರ್ಭದಲ್ಲಿ ಜಂಟಿ ಹೇಳಿಕೆ (Link) ನೀಡಲಾಯಿತು.

ಪ್ರಧಾನಮಂತ್ರಿ ಅವರ ಗೌರವಾರ್ಥವಾಗಿ ಅಧ್ಯಕ್ಷ ಲುಲಾ ಅವರು ಭೋಜನ ಕೂಟವನ್ನು ಆಯೋಜಿಸಿದ್ದರು. ಪ್ರಧಾನಮಂತ್ರಿ ಅವರು ಅಧ್ಯಕ್ಷ ಲುಲಾ ಅವರ ಆತ್ಮೀಯ ಆತಿಥ್ಯಕ್ಕೆ ಧನ್ಯವಾದ ಅರ್ಪಿಸಿದರು ಮತ್ತು ಭಾರತಕ್ಕೆ ಭೇಟಿ ನೀಡುವಂತೆ ಅವರನ್ನು ಆಹ್ವಾನಿಸಿದರು.

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
Khichdi To Moringa Paratha: 7 Traditional Foods PM Modi Loves

Media Coverage

Khichdi To Moringa Paratha: 7 Traditional Foods PM Modi Loves
NM on the go

Nm on the go

Always be the first to hear from the PM. Get the App Now!
...
ಆಗಸ್ಟ್ 27ರಂದು 'ಖೇಲೋ ಇಂಡಿಯಾ' ಸಂವಾದದಲ್ಲಿ ಯುವಜನರನ್ನುದ್ದೇಶಿಸಿ ಮಾತನಾಡಲಿರುವ ಪ್ರಧಾನಮಂತ್ರಿ
August 26, 2026
'ಖೇಲೋ ಇಂಡಿಯಾ' ಸಂವಾದವು ಕ್ರೀಡೆ, ಯುವ ನಾಯಕತ್ವ, ನಾಗರಿಕ ಜವಾಬ್ದಾರಿ, ಸ್ವಯಂಸೇವೆ, ಫಿಟ್‌ನೆಸ್‌ ಮತ್ತು ರಾಷ್ಟ್ರ ನಿರ್ಮಾಣವನ್ನು ಒಂದೇ ವೇದಿಕೆಯಲ್ಲಿ ಒಟ್ಟುಗೂಡಿಸಲಿದೆ
'ಖೇಲೋ ಇಂಡಿಯಾ' ಸಂವಾದದ ಅಡಿಯಲ್ಲಿ ನಡೆಯುವ 'ಯುವ ಸಂವಾದ'ವು ಐದು ಪ್ರಮುಖ ವಿಷಯಗಳ ಮೇಲೆ ಕೇಂದ್ರೀಕರಿಸಲಿದೆ: ಕ್ರೀಡೆ, ಒಲಿಂಪಿಕ್ ಆಕಾಂಕ್ಷೆಗಳು, ಯುವ ನಾಯಕತ್ವ, 'ವಿಕಸಿತ ಭಾರತ' ಮತ್ತು 'ನಶಾ ಮುಕ್ತ ಯುವ' ಅಭಿಯಾನ

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಆಗಸ್ಟ್ 27ರಂದು ಬೆಳಿಗ್ಗೆ 11 ಗಂಟೆಗೆ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ 'ಖೇಲೋ ಇಂಡಿಯಾ' ಸಂವಾದವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಈ ಕಾರ್ಯಕ್ರಮವು ಯುವಕರಿಗೆ ಭಾರತದ ಕ್ರೀಡಾ ಪ್ರಯಾಣದಲ್ಲಿ ತೊಡಗಿಸಿಕೊಳ್ಳಲು, ಅವರ ಆಕಾಂಕ್ಷೆಗಳನ್ನು ಹಂಚಿಕೊಳ್ಳಲು ಮತ್ತು ಬಲವಾದ ಯುವಕರ ನೇತೃತ್ವದ 'ವಿಕಸಿತ ಭಾರತ'ಕ್ಕಾಗಿ ತಮ್ಮ ವಿಚಾರಗಳನ್ನು ನೀಡಲು ಸಹಾಯ ಮಾಡುವುದು ಕಾರ್ಯಕ್ರಮದ ಉದ್ದೇಶವಾಗಿದೆ.

2026ರ ರಾಷ್ಟ್ರೀಯ ಕ್ರೀಡಾ ದಿನಾಚರಣೆಯ ಅಂಗವಾಗಿ 'ಮೇರಾ ಯುವ ಭಾರತ್' (ಮೈ ಭಾರತ್‌) ಆಯೋಜಿಸಿರುವ ಈ ಕಾರ್ಯಕ್ರಮವು, ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಾದ್ಯಂತ ಪ್ರತಿಯೊಂದು ಜಿಲ್ಲೆಯ ಎರಡು ಕಾಲೇಜುಗಳಲ್ಲಿ ಯುವಕರ ಭಾಗವಹಿಸುವಿಕೆಯೊಂದಿಗೆ ದೇಶಾದ್ಯಂತ ನಡೆಯಲಿದೆ. ಯುವಕರ ಆಕಾಂಕ್ಷೆಗಳನ್ನು ರಾಷ್ಟ್ರೀಯ ಅಭಿವೃದ್ಧಿ ಕಾರ್ಯಸೂಚಿಯ ಕೇಂದ್ರಭಾಗದಲ್ಲಿ ಇರಿಸಿಕೊಂಡು ಸದೃಢ, ಶಿಸ್ತುಬದ್ಧ ಮತ್ತು ಕ್ರೀಡಾ ರಾಷ್ಟ್ರವನ್ನು ನಿರ್ಮಿಸುವ ಪ್ರಧಾನಮಂತ್ರಿಯವರ ದೃಷ್ಟಿಕೋನಕ್ಕೆ ಅನುಗುಣವಾಗಿ ಈ ಕಾರ್ಯಕ್ರಮವನ್ನು ನಡೆಸಲಾಗುತ್ತಿದೆ.

ರಾಷ್ಟ್ರವ್ಯಾಪಿ ನಡೆಯುವ 'ಖೇಲೋ ಇಂಡಿಯಾ ಸಂವಾದ'ವು ಕ್ರೀಡೆ, ಯುವ ನಾಯಕತ್ವ, ನಾಗರಿಕ ಜವಾಬ್ದಾರಿ, ಸ್ವಯಂ ಸೇವೆ, ಫಿಟ್ನೆಸ್ ಮತ್ತು ರಾಷ್ಟ್ರ ನಿರ್ಮಾಣವನ್ನು ಒಂದೇ ವೇದಿಕೆಯಲ್ಲಿ ಒಟ್ಟುಗೂಡಿಸಲಿದೆ. ಭಾರತದ ಯುವ ಮತ್ತು ಕ್ರೀಡಾ ಪರಿಸರ ವ್ಯವಸ್ಥೆಯ ಕುರಿತಾದ ನಿರಂತರ ಸಂವಾದದಲ್ಲಿ ಯುವಕರ ಆಲೋಚನೆಗಳು ಮತ್ತು ದೃಷ್ಟಿಕೋನಗಳಿಗೆ ಸ್ಥಾನವನ್ನು ಖಚಿತಪಡಿಸಿಕೊಳ್ಳುವ ಜೊತೆಗೆ, ದೇಶದ ಕ್ರೀಡಾ ಮಹತ್ವಾಕಾಂಕ್ಷೆಗಳೊಂದಿಗೆ ಯುವಕರು ತೊಡಗಿಸಿಕೊಳ್ಳಲು ಇದು ನೇರ ಮಾರ್ಗವನ್ನು ಒದಗಿಸುತ್ತದೆ.

ರಾಷ್ಟ್ರೀಯ ಕಾರ್ಯಕ್ರಮದ ನಂತರ ಯುವ ಭಾಗಿದಾರರು, 'ಮೈ ಭಾರತ್' ಸ್ವಯಂಸೇವಕರು, ಸ್ಥಳೀಯ ಕ್ರೀಡಾಪಟುಗಳು ಮತ್ತು ಜನಪ್ರತಿನಿಧಿಗಳನ್ನು ಒಳಗೊಂಡ ಸ್ಥಳೀಯ ಸಂವಾದಗಳು ನಡೆಯಲಿವೆ. ಕ್ರೀಡೆಯಲ್ಲಿ ಆಸಕ್ತಿ ಹೊಂದಿರುವ ಯುವಕರು ಮತ್ತು ಪ್ರಮುಖ ಭಾರತೀಯ ಅಥ್ಲೀಟ್‌ಗಳು ಹಾಗೂ ಪದಕ ವಿಜೇತರ ನಡುವಿನ ನೇರ ಸಂವಾದವು ಈ ಉಪಕ್ರಮದ ಪ್ರಮುಖ ಲಕ್ಷಣವಾಗಿದೆ. 'ಯುವ ಸಂವಾದ'ವು ಈ ಕಾರ್ಯಕ್ರಮದ ಕೇಂದ್ರ ಬಿಂದುವಾಗಿದ್ದು, ಇದರಲ್ಲಿ ಯುವ ಭಾಗಿದಾರರನ್ನು ತಮ್ಮ ಸ್ವಂತ ಆಲೋಚನೆಗಳು, ದೃಷ್ಟಿಕೋನಗಳು ಮತ್ತು ಆಕಾಂಕ್ಷೆಗಳನ್ನು ವ್ಯಕ್ತಪಡಿಸಲು ಆಹ್ವಾನಿಸಲಾಗುತ್ತದೆ. ಈ ಸಂವಾದವನ್ನು ಐದು ವಿಷಯಗಳ ಸುತ್ತ ರಚಿಸಲಾಗಿದೆ:

  • ಉತ್ತಮ ಸೌಲಭ್ಯಗಳು, ತರಬೇತಿ, ಕ್ರೀಡಾ ವಿಜ್ಞಾನ ಮತ್ತು ಎಲ್ಲರನ್ನೂ ಒಳಗೊಂ ಭಾಗವಹಿಸುವಿಕೆಯ ಮೂಲಕ ಭಾರತದ ಕ್ರೀಡಾ ಪರಿಸರ ವ್ಯವಸ್ಥೆಯನ್ನು ಸುಧಾರಿಸುವುದು;
  • ವೈಜ್ಞಾನಿಕ ಪ್ರತಿಭಾ ಶೋಧನೆ, ಪಾರದರ್ಶಕ ಆಯ್ಕೆ ಮತ್ತು ದೀರ್ಘಕಾಲೀನ ಕ್ರೀಡಾಪಟು ಅಭಿವೃದ್ಧಿಯ ಮೂಲಕ 2036ರ ಒಲಿಂಪಿಕ್ಸ್‌ ಕ್ರೀಡಾಕೂಟಕ್ಕೆ ಗೆ ಪ್ರತಿಭೆಗಳನ್ನು ಪೋಷಿಸುವುದು;
  • ಆಡಳಿತ ವೇದಿಕೆಗಳು ಮತ್ತು 'ಮೈ ಭಾರತ್' ನೇತೃತ್ವದ ಸ್ವಯಂಸೇವಕ ಸೇವೆಯ ಮೂಲಕ ಯುವ ನಾಯಕರನ್ನು ಸೃಷ್ಟಿಸುವುದು;
  • ನಾಗರಿಕ ಪ್ರಜ್ಞೆ, ಭವಿಷ್ಯಕ್ಕೆ ಸಿದ್ಧವಾದ ಕೌಶಲ್ಯಗಳು ಮತ್ತು ರಚನಾತ್ಮಕ ಸ್ವಯಂಸೇವಕ ಸೇವೆಯನ್ನು ಬೆಳೆಸುವ ಮೂಲಕ ವಿಕಸಿತ ಭಾರತಕ್ಕಾಗಿ ಯುವಕರನ್ನು ಸಬಲೀಕರಣಗೊಳಿಸುವುದು;
  • ಮಾದಕ ವ್ಯಸನದ ವಿರುದ್ಧ ಹೋರಾಡಲು ಕ್ರೀಡೆ ಮತ್ತು ಸಮಾನಮನಸ್ಕ ಜಾಲಗಳನ್ನು ಬಳಸಿಕೊಳ್ಳುವ 'ನಶಾ ಮುಕ್ತ ಯುವ ಆಂದೋಲ'ನವನ್ನು ಉತ್ತೇಜಿಸುವುದು. ಇದು 2026ರ ಆಗಸ್ಟ್ 2ರಂದು ಪ್ರಾರಂಭಿಸಲಾದ ಪ್ರಧಾನಮಂತ್ರಿಯವರ 100 ವಾರಗಳ ರಾಷ್ಟ್ರವ್ಯಾಪಿ ಅಭಿಯಾನದ ಅಡಿಯಲ್ಲಿ ಸಾಪ್ತಾಹಿಕ 'ಜನ ಭಾಗೀದಾರಿ' ಚಟುವಟಿಕೆಗಳಿಂದ ಬೆಂಬಲಿತವಾಗಿದೆ.