22ನೇ ಆಸಿಯಾನ್ ಭಾರತ ಶೃಂಗಸಭೆಯು ಅಕ್ಟೋಬರ್ 26, 2025 ರಂದು ನಡೆಯಿತು. ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶೃಂಗಸಭೆಯಲ್ಲಿ ವರ್ಚುವಲ್ ಮೂಲಕ ಭಾಗವಹಿಸಿದರು. ಪ್ರಧಾನಮಂತ್ರಿ ಮತ್ತು ಆಸಿಯಾನ್ ನಾಯಕರು ಜಂಟಿಯಾಗಿ ಆಸಿಯಾನ್-ಭಾರತ ಸಂಬಂಧಗಳಲ್ಲಿನ ಪ್ರಗತಿಯನ್ನು ಪರಿಶೀಲಿಸಿದರು ಹಾಗು ಸಮಗ್ರ ಕಾರ್ಯತಂತ್ರದ ಪಾಲುದಾರಿಕೆಯನ್ನು ಬಲಪಡಿಸುವ ಉಪಕ್ರಮಗಳ ಕುರಿತು ಚರ್ಚೆ ನಡೆಸಿದರು. ಇದು ಭಾರತ-ಆಸಿಯಾನ್ ಶೃಂಗಸಭೆಯಲ್ಲಿ ಪ್ರಧಾನಮಂತ್ರಿ ಅವರ 12ನೇ ಬಾರಿಗೆ ಭಾಗವಹಿಸಿರುವುದಾಗಿದೆ.

ಶೃಂಗಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ ಅವರು, ಆಸಿಯಾನ್ ನ 11ನೇ ಸದಸ್ಯ ರಾಷ್ಟ್ರವಾಗಿ ಟಿಮೋರ್ ಲೆಸ್ಟೆ ಸೇರ್ಪಡೆಗೊಂಡಿದ್ದಕ್ಕಾಗಿ ಅಭಿನಂದಿಸಿದರು ಮತ್ತು ಆಸಿಯಾನ್-ಭಾರತ ಶೃಂಗಸಭೆಯಲ್ಲಿ ಪೂರ್ಣ ಸದಸ್ಯ ರಾಷ್ಟ್ರವಾಗಿ ಅದರ ನಿಯೋಗವನ್ನು ಸ್ವಾಗತಿಸಿದರು ಮತ್ತು ಅದರ  ಮಾನವ ಅಭಿವೃದ್ಧಿಗೆ ಭಾರತದ ನಿರಂತರ ಬೆಂಬಲವನ್ನು ತಿಳಿಸಿದರು.

 

ಆಸಿಯಾನ್ ಏಕತೆ, ಆಸಿಯಾನ್ ಪ್ರಾಮುಖ್ಯತೆ ಮತ್ತು ಇಂಡೋ-ಪೆಸಿಫಿಕ್ನಲ್ಲಿ ಆಸಿಯಾನ್ ದೃಷ್ಟಿಕೋನಕ್ಕೆ ಭಾರತದ ಬೆಂಬಲವನ್ನು ಪುನರುಚ್ಚರಿಸಿದ ಪ್ರಧಾನಮಂತ್ರಿ ಅವರು, ಆಸಿಯಾನ್ ಸಮುದಾಯ ದೃಷ್ಟಿ 2045 ಅನ್ನು ಅಳವಡಿಸಿಕೊಂಡಿದ್ದಕ್ಕಾಗಿ ಆಸಿಯಾನ್ ಅನ್ನು ಶ್ಲಾಘಿಸಿದರು.

ಆಸಿಯಾನ್-ಭಾರತ ಎಫ್.ಟಿ.ಎ (ಎ.ಐ.ಟಿ.ಐ.ಜಿ.ಎ)ನ ಆರಂಭಿಕ ಪರಿಶೀಲನೆಯು ನಮ್ಮ ಜನರ ಪ್ರಯೋಜನಕ್ಕಾಗಿ ನಮ್ಮ ಸಂಬಂಧದ ಸಂಪೂರ್ಣ ಆರ್ಥಿಕ ಸಾಮರ್ಥ್ಯವನ್ನು ಮತ್ತು ಪ್ರಾದೇಶಿಕ ಸಹಕಾರವನ್ನು ಮತ್ತಷ್ಟು ಬಲಪಡಿಸಲು ಅನುವು ಮಾಡಿಕೊಡುತ್ತದೆ ಎಂದು ಪ್ರಧಾನಮಂತ್ರಿ ಅವರು  ಒತ್ತಿ ಹೇಳಿದರು.

ಭಯೋತ್ಪಾದನೆ ಜಾಗತಿಕ ಶಾಂತಿ ಮತ್ತು ಭದ್ರತೆಗೆ ಗಂಭೀರ ಸವಾಲನ್ನು ಒಡ್ಡುತ್ತದೆ ಎಂದು ಪ್ರಧಾನಮಂತ್ರಿ ಅವರು ಹೇಳಿದರು ಮತ್ತು ಭಯೋತ್ಪಾದನೆಯ ವಿರುದ್ಧದ ಹೋರಾಟದಲ್ಲಿ ಏಕತೆಯ ಮಹತ್ವವನ್ನು ಒತ್ತಿ ಹೇಳಿದರು.

 

ಮಲೇಷಿಯಾದ ಅಧ್ಯಕ್ಷರ "ಒಳಗೊಳ್ಳುವಿಕೆ ಮತ್ತು ಸುಸ್ಥಿರತೆ" ಎಂಬ ಧ್ಯೇಯವಾಕ್ಯವನ್ನು ಬೆಂಬಲಿಸಿ, ಪ್ರಧಾನಮಂತ್ರಿ ಅವರು ಇವುಗಳನ್ನು ಘೋಷಿಸಿದರು:

• ಆಸಿಯಾನ್-ಭಾರತ ಸಮಗ್ರ ಕಾರ್ಯತಂತ್ರದ ಪಾಲುದಾರಿಕೆ (2026-2030) ಅನ್ನು ಕಾರ್ಯಗತಗೊಳಿಸಲು ಆಸಿಯಾನ್-ಭಾರತ ಕ್ರಿಯಾ ಯೋಜನೆಯ ಅನುಷ್ಠಾನಕ್ಕೆ ವಿಸ್ತೃತ ಬೆಂಬಲ

• ನಾವು ಆಸಿಯಾನ್-ಭಾರತ ಪ್ರವಾಸೋದ್ಯಮ ವರ್ಷವನ್ನು ಆಚರಿಸುತ್ತಿರುವಾಗ ಪ್ರವಾಸೋದ್ಯಮ ಸಹಕಾರವನ್ನು ಬಲಪಡಿಸಲು ಆಸಿಯಾನ್-ಭಾರತ ಜಂಟಿ ನಾಯಕರ ಸುಸ್ಥಿರ ಪ್ರವಾಸೋದ್ಯಮದ ಹೇಳಿಕೆಯನ್ನು ಅಳವಡಿಸಿಕೊಳ್ಳುವುದು

• ನೀಲಿ ಆರ್ಥಿಕತೆಯಲ್ಲಿ ಪಾಲುದಾರಿಕೆಗಳನ್ನು ರೂಪಿಸಲು 2026 ಅನ್ನು "ಆಸಿಯಾನ್-ಭಾರತ ಕಡಲ ಸಹಕಾರ ವರ್ಷ" ಎಂದು ಹೆಸರಿಸುವುದು

• ಸುರಕ್ಷಿತ ಕಡಲ ಪರಿಸರಕ್ಕಾಗಿ ಎರಡನೇ ಆಸಿಯಾನ್-ಭಾರತ ರಕ್ಷಣಾ ಮಂತ್ರಿಗಳ ಸಭೆ ಮತ್ತು ಎರಡನೇ ಆಸಿಯಾನ್-ಭಾರತ ಕಡಲ ಸಮರಾಭ್ಯಾಸವನ್ನು ಆಯೋಜಿಸಲು ಪ್ರಸ್ತಾಪಿಸುವುದು

• ನೆರೆಹೊರೆಯಲ್ಲಿ ಬಿಕ್ಕಟ್ಟಿನ ಸಮಯದಲ್ಲಿ ಭಾರತವು ಮೊದಲ ಪ್ರತಿಸ್ಪಂದಕನಾಗಿ ತನ್ನ ಪಾತ್ರವನ್ನು ಮುಂದುವರಿಸುತ್ತದೆ ಮತ್ತು ವಿಪತ್ತು ಸನ್ನದ್ಧತೆ ಮತ್ತು ಎಚ್.ಎ.ಡಿ.ಆರ್ ನಲ್ಲಿ ಸಹಕಾರವನ್ನು ಮತ್ತಷ್ಟು ಬಲಪಡಿಸುತ್ತದೆ

• ಆಸಿಯಾನ್ ಪವರ್ ಗ್ರಿಡ್ ಉಪಕ್ರಮವನ್ನು ಬೆಂಬಲಿಸಲು ನವೀಕರಿಸಬಹುದಾದ ಇಂಧನದಲ್ಲಿ 400 ವೃತ್ತಿಪರರಿಗೆ ತರಬೇತಿ

•ಟಿಮೋರ್ ಲೆಸ್ಟೆ ಗೆ ತ್ವರಿತ ಪರಿಣಾಮ ಯೋಜನೆಗಳನ್ನು (ಕ್ಯೂ.ಐ.ಪಿ ಗಳು) ವಿಸ್ತರಿಸುವುದು. 

• ಪ್ರಾದೇಶಿಕ ಪರಿಣತಿಯನ್ನು ಅಭಿವೃದ್ಧಿಪಡಿಸಲು ನಳಂದ ವಿಶ್ವವಿದ್ಯಾಲಯದಲ್ಲಿ ಆಗ್ನೇಯ ಏಷ್ಯಾ ಅಧ್ಯಯನ ಕೇಂದ್ರವನ್ನು ಸ್ಥಾಪಿಸುವ ಪ್ರಸ್ತಾವನೆ

• ಶಿಕ್ಷಣ, ಇಂಧನ, ವಿಜ್ಞಾನ ಮತ್ತು ತಂತ್ರಜ್ಞಾನ, ಫಿನ್ ಟೆಕ್ ಮತ್ತು ಸಾಂಸ್ಕೃತಿಕ ಸಂರಕ್ಷಣೆಯಲ್ಲಿ ನಡೆಯುತ್ತಿರುವ ಸಹಕಾರವನ್ನು ಬೆಂಬಲಿಸುವುದು ಮತ್ತು ಮೂಲಸೌಕರ್ಯ, ಅರೆವಾಹಕ (ಸೆಮಿ ಕಂಡಕ್ಟರ್), ಉದಯೋನ್ಮುಖ ತಂತ್ರಜ್ಞಾನಗಳು, ವಿರಳ ಲೋಹ ಮತ್ತು ನಿರ್ಣಾಯಕ ಖನಿಜಗಳಲ್ಲಿ ಹೆಚ್ಚುತ್ತಿರುವ ಸಹಕಾರದ ಅಗತ್ಯವನ್ನು ಒತ್ತಿಹೇಳುವುದು

 

• ಗುಜರಾತಿನ ಲೋಥಾಲ್ ನಲ್ಲಿ ಪೂರ್ವ ಏಷ್ಯಾ ಶೃಂಗಸಭೆಯ ಕಡಲ ಪರಂಪರೆ ಉತ್ಸವ ಮತ್ತು ಕಡಲ ಭದ್ರತಾ ಸಹಕಾರದ ಕುರಿತು ಸಮ್ಮೇಳನವನ್ನು ನಡೆಸುವುದು

22ನೇ ಆಸಿಯಾನ್-ಭಾರತ ಶೃಂಗಸಭೆಯನ್ನು ವರ್ಚುವಲ್ ಮೂಲಕ ಆಯೋಜಿಸುವಲ್ಲಿ ಹಾಗು ಸಭೆಗೆ ಅತ್ಯುತ್ತಮ ವ್ಯವಸ್ಥೆಗಳನ್ನು ಒದಗಿಸಿದ್ದಕ್ಕಾಗಿ ಪ್ರಧಾನಮಂತ್ರಿ ಡಾಟೋ'ಸೆರಿ ಅನ್ವರ್ ಇಬ್ರಾಹಿಂ ಅವರಿಗೆ ಗೌರವಾನ್ವಿತ ಪ್ರಧಾನಮಂತ್ರಿ ಅವರು ಕೃತಜ್ಞತೆ ಸಲ್ಲಿಸಿದರು. ದೇಶ-ದೇಶಗಳ ನಡುವಿನ ಪರಿಣಾಮಕಾರಿ ಸಮನ್ವಯಕ್ಕಾಗಿ ಫಿಲಿಪೈನ್ಸ್ ಅಧ್ಯಕ್ಷ ಮಾರ್ಕೋಸ್ ಜೂನಿಯರ್ ಅವರಿಗೆ ಪ್ರಧಾನಮಂತ್ರಿ ಅವರು ಧನ್ಯವಾದ ಅರ್ಪಿಸಿದರು. ಆಸಿಯಾನ್ ಗೆ ಭಾರತದ ದೀರ್ಘಕಾಲದ ಬೆಂಬಲ ಮತ್ತು ಅದರ ʻಆಕ್ಟ್ ಈಸ್ಟ್ ನೀತಿಯʼ ಮೂಲಕ ಈ ಪ್ರದೇಶದೊಂದಿಗೆ ಸಂಬಂಧವನ್ನು ಬಲಪಡಿಸುವ ನಿರಂತರ ಬದ್ಧತೆಯನ್ನು ಆಸಿಯಾನ್ ನಾಯಕರು ಶ್ಲಾಘಿಸಿದರು.

 

ಭಾಷಣದ ಪೂರ್ಣ ಪಠ್ಯವನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
India’s Defence Exports Explode: ₹40,000 Crore Milestone Signals a New Manufacturing Era

Media Coverage

India’s Defence Exports Explode: ₹40,000 Crore Milestone Signals a New Manufacturing Era
NM on the go

Nm on the go

Always be the first to hear from the PM. Get the App Now!
...
Text of PM’s remarks during inauguration of Swaminarayan Hindu Temple in Paris
September 06, 2026

पूज्य महंत स्वामी, फ्रांस सरकार के सम्मानित प्रतिनिधिगण, उपस्थित अतिथिगण, इंडियन कम्युनिटी के मेरे साथी, देश दुनिया से जुड़े सभी हरि भक्त, देवियों और सज्जनों, जय स्वामीनारायण!

आज फ्रांस की राजधानी पेरिस में भव्य स्वामीनारायण मंदिर का लोकार्पण हो रहा है। यह लोकार्पण भारत और फ्रांस के सांस्कृतिक संबंधों का नया युग स्तंभ है। पूज्य संत जनों और सनातन परंपरा के श्रेष्ठ जनों के आशीर्वाद के साथ आज इस लोकार्पण का मंच ‘वसुधैव कुटुम्बकम’ के भाव का मंच बन गया है। भगवान स्वामीनारायण की कृपा और हमारे संतों का स्नेह, संतों का आशीर्वाद, मेरा सौभाग्य है कि मुझे ऐसे पुण्य अवसरों से जुड़ने का अवसर हमेशा मिलता रहता है। आज भी मैं भले ही पेरिस में आप सबके बीच उपस्थित नहीं हूं, लेकिन मन से और हृदय से, मैं स्वयं को आपके बीच ही अनुभव कर रहा हूं।

साथियों,

आज इस अवसर पर मैं परम पूज्य प्रमुख स्वामी जी महाराज का भी श्रद्धापूर्वक स्मरण करता हूं। प्राचीन काल में भारत का जो सांस्कृतिक आध्यात्मिक वैभव था, उन्होंने उसके पुनर्जागरण का एक अभियान शुरू किया था। आज उसका प्रकाश यूरोप समेत पूरी दुनिया में फैल रहा है। 2024 में अबू धाबी में भव्य मंदिर का लोकार्पण हुआ था। आज वहां हजारों लोग दर्शन करने जाते हैं और अब यहां पेरिस में स्वामीनारायण मंदिर का निर्माण सृजन की यह निरंतरता, यह संतों की संकल्प शक्ति का ही प्रमाण है। मैं पुनीत कार्य के लिए पूज्य महंत स्वामी का आभार प्रकट करता हूं, मैं उनके चरणों में प्रणाम करता हूं। मैं BAPS स्वामीनारायण संस्था को और करोड़ों हरि भक्तों को इस अवसर पर हृदय की गहराई से बधाई देता हूं।

साथियों,

BAPS के माध्यम से जब अलग-अलग देश में मंदिरों की प्राण प्रतिष्ठा होती है, तो वहां भारत के प्राचीन विचार और मानवीय मूल्य भी साथ-साथ ही जाते हैं और भारत का विचार कहता है ‘समानं मनः सह चित्तमेषाम्’ अर्थात हमारे मन समान हो, हमारे हृदय साथ जुड़े। इसलिए आज जब फ्रांस में इतना भव्य मंदिर बनकर तैयार हुआ है, यह फ्रांस की विविधता को तो समृद्ध करेगा ही, इससे भारत और फ्रांस के सांस्कृतिक संबंधों को भी ऊर्जा मिलेगी।

साथियों,

बीते वर्षों में भारत और फ्रांस के संबंध नई ऊंचाइयों तक पहुंचे हैं। मेरे मित्र, प्रेसिडेंट मैक्रों के साथ मिलकर दोनों देश एक Special Global Strategic Partnership बना रहे हैं। Technology, AI और Defence से लेकर Space और Climate Action तक हम एक नई गति और नई ऊर्जा के साथ मिलकर के आगे बढ़ रहे हैं। हम 2026 को India-France Year of Innovation के रूप में भी सेलिब्रेट कर रहे हैं। भारत-फ्रांस की ये Strategic Partnership इसलिए भी खास है, क्योंकि ये हमारे पुराने सांस्कृतिक-राजनैतिक सम्बन्धों की मजबूत बुनियाद पर टिकी है। इतिहास गवाह है, फ्रांस में भारतीय सैनिकों के बलिदान का इतिहास आज भी मन-मंदिर में जीवित है। भाषा से जुड़े विषयों में रुचि रखने वाले लोग यह भी जानते हैं कि फ्रेंच स्कॉलर्स ने संस्कृत को लोकप्रिय बनाने में कितनी अहम भूमिका निभाई है। रामकृष्ण परमहंस और स्वामी विवेकानंद पर रोमाँ रोलाँ की की लेखनी हमारी सोसाइटीज़ को और करीब लाई है। पेरिस से पुडुचेरी के अरबिंदो आश्रम तक 'The mother' की spiritual journey, उसने कितने ही भारतीय और फ्रेंच साधकों को inspire किया है।

साथियों,

दशकों पहले श्रील प्रभुपाद स्वामी भी फ्रांस आए थे। इस्कॉन के जरिए भारत फ्रांस के बीच आध्यात्मिक सम्बन्धों का नया अध्याय उन्होंने शुरू किया था। आज योग भी भारत-फ्रांस के people to people कनेक्ट का एक माध्यम बन चुका है। 'इंटरनेशनल योगा डे' पर एफिल टॉवर के सामने से आने वाली तस्वीरें फ्रांस में योग की लोकप्रियता का उदाहरण बनती हैं और अब BAPS के इस भव्य मंदिर के जरिए, हमारे उन सांस्कृतिक सम्बन्धों में एक नया अध्याय जुड़ रहा है।

साथियों,

इन दिनों, भारत फ्रांस Joint Ventures की संभावनाओं पर बातें होती हैं। स्वामीनारायण मंदिर ने इस संभावना में भी एक नया आयाम जोड़ा है। यह मंदिर 'मेड इन इंडिया' है और 'बिल्ट इन फ्रांस' है। इसके काफी पत्थरों को भारत में तराशा गया है। भारत की प्राचीन प्रतिभा यहाँ फ्रांस में आधुनिक इंजीनियरिंग से आकर जुड़ चुकी है। पेरिस में इस भव्य मंदिर ने आकार लिया है। इसलिए, मैं आशा करता हूँ, यह मंदिर सदियों तक भारत और फ्रांस के बीच सहयोग और संभावनाओं का भी प्रतीक बनकर उभरेगा।

साथियों,

स्वामीनारायण मंदिर हमेशा से भक्ति के साथ-साथ सेवा का माध्यम भी रहे हैं। मुझे बताया गया है, यह मंदिर भी सेवा प्रकल्पों का वैसा ही केंद्र बनेगा। मुझे विश्वास है कि यहाँ से भारतीय संस्कृति के जो स्वर निकलेंगे, उनका लाभ पूरे यूरोप में लोगों को मिलेगा। भविष्य में मुझे जब भी समय मिलेगा, मैं इस मंदिर में दर्शन करने का प्रयास अवश्य करूंगा। इन्हीं शब्दों के साथ, एक बार फिर आज के इस लोकार्पण समारोह में सम्मिलित सभी अतिथिगणों को, सभी परिवारों को, सभी हरि भक्तों को और पूरी Indian Diaspora को मेरी ओर से इस शुभारंभ पर्व की ढेरों शुभकामनाएं!

बहुत-बहुत धन्यवाद!

मर्सी बोकू!

जय स्वामीनारायण!