ಮರಾಠಿಯನ್ನು ಶಾಸ್ತ್ರೀಯ(ಅಭಿಜಾತ) ಭಾಷೆಯಾಗಿ ಗುರುತಿಸಿರುವುದು ಎಲ್ಲರಿಗೂ ಹೆಮ್ಮೆಯ ಕ್ಷಣ: ಪ್ರಧಾನಮಂತ್ರಿ
ಮರಾಠಿ, ಬಂಗಾಳಿ, ಪಾಲಿ, ಪ್ರಾಕೃತ ಮತ್ತು ಅಸ್ಸಾಮಿ ಭಾಷೆಗಳಿಗೂ ಶಾಸ್ತ್ರೀಯ ಭಾಷೆಗಳ ಸ್ಥಾನಮಾನ ನೀಡಲಾಗಿದೆ, ಈ ಭಾಷೆಗಳಿಗೆ ಸಂಬಂಧಿಸಿದ ಜನತೆಯ ನಾನು ಅಭಿನಂದಿಸುತ್ತೇನೆ: ಪ್ರಧಾನಮಂತ್ರಿ
ಮರಾಠಿ ಭಾಷೆಯ ಇತಿಹಾಸ ಬಹಳ ಶ್ರೀಮಂತವಾಗಿದೆ: ಪ್ರಧಾನಮಂತ್ರಿ
ಮಹಾರಾಷ್ಟ್ರದ ಅನೇಕ ಕ್ರಾಂತಿಕಾರಿ ನಾಯಕರು ಮತ್ತು ಚಿಂತಕರು ಜನರಿಗೆ ಅರಿವು ಮೂಡಿಸಲು ಮತ್ತು ಒಗ್ಗೂಡಿಸಲು ಮರಾಠಿ ಭಾಷೆಯನ್ನು ಮಾಧ್ಯಮವಾಗಿ ಬಳಸಿದರು: ಪ್ರಧಾನಮಂತ್ರಿ
ಭಾಷೆ ಕೇವಲ ಸಂವಹನ ಮಾಧ್ಯಮವಲ್ಲ, ಅದು ಸಂಸ್ಕೃತಿ, ಇತಿಹಾಸ, ಸಂಪ್ರದಾಯ ಮತ್ತು ಸಾಹಿತ್ಯದೊಂದಿಗೆ ಆಳವಾಗಿ ಸಂಪರ್ಕ ಹೊಂದಿದೆ: ಪ್ರಧಾನಮಂತ್ರಿ

ಸಭಿಕರನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿಯವರು, ಮರಾಠಿ ಭಾಷೆಗೆ ಕೇಂದ್ರ ಸರ್ಕಾರವು ಅಧಿಕೃತವಾಗಿ ಶಾಸ್ತ್ರೀಯ (ಅಭಿಜಾತ)  ಭಾಷೆಯ ಸ್ಥಾನಮಾನವನ್ನು ನೀಡಿದೆ ಎಂದರು. ಶ್ರೀ ಮೋದಿ ಅವರು ಈ ಕ್ಷಣದ ಮಹತ್ವವನ್ನು ಒತ್ತಿ ಹೇಳಿದರು, ಇದು ಮರಾಠಿ ಭಾಷೆಯ ಇತಿಹಾಸದಲ್ಲಿ ಸುವರ್ಣ ಮೈಲಿಗಲ್ಲು ಎಂದು ಬಣ್ಣಿಸಿದರು, ಏಕೆಂದರೆ ಮರಾಠಿ ಮಾತನಾಡುವ ಜನರ ದೀರ್ಘಕಾಲದ ಆಕಾಂಕ್ಷೆಗಳನ್ನು ಅವರು ಉಲ್ಲೇಖಿಸಿದರು  ಮತ್ತು ಮಹಾರಾಷ್ಟ್ರದ ಕನಸನ್ನು ಈಡೇರಿಸಲು ಕೊಡುಗೆ ನೀಡುತ್ತಿರುವುದಕ್ಕೆ ಸಂತೋಷ ವ್ಯಕ್ತಪಡಿಸಿದರು. ಪ್ರಧಾನಮಂತ್ರಿಯವರು ಮಹಾರಾಷ್ಟ್ರದ ಜನರನ್ನು ಅಭಿನಂದಿಸಿದರು ಮತ್ತು ಈ ಐತಿಹಾಸಿಕ ಸಾಧನೆಯ ಭಾಗವಾಗಿರುವುದಕ್ಕೆ ಹೆಮ್ಮೆ ವ್ಯಕ್ತಪಡಿಸಿದರು. ಇದಲ್ಲದೆ, ಬಂಗಾಳಿ, ಪಾಲಿ, ಪ್ರಾಕೃತ ಮತ್ತು ಅಸ್ಸಾಮಿ ಭಾಷೆಗಳಿಗೂ ಶಾಸ್ತ್ರೀಯ ಭಾಷೆಗಳ ಸ್ಥಾನಮಾನವನ್ನು ನೀಡಲಾಗಿದೆ ಎಂದು ಪ್ರಧಾನಿ ಘೋಷಿಸಿದರು ಮತ್ತು ಈ ಭಾಷೆಗಳಿಗೆ ಸಂಬಂಧಿಸಿದ ಜನತೆಗೆ  ಅಭಿನಂದನೆ ಸಲ್ಲಿಸಿದರು.

 

ಮರಾಠಿ ಭಾಷೆಯ ಇತಿಹಾಸವು ಬಹಳ ಶ್ರೀಮಂತವಾಗಿದೆ ಮತ್ತು ಈ ಭಾಷೆಯಿಂದ ಹೊರಹೊಮ್ಮಿದ ಜ್ಞಾನದ ಹೊಳೆಗಳು ಅನೇಕ ತಲೆಮಾರುಗಳಿಗೆ ಮಾರ್ಗದರ್ಶನ ನೀಡಿವೆ ಹಾಗು  ಅವು ಇಂದಿಗೂ ನಮಗೆ ಮಾರ್ಗದರ್ಶನ ನೀಡುತ್ತಿವೆ ಎಂದು ಪ್ರಧಾನಿ ಒತ್ತಿ ಹೇಳಿದರು. ಮರಾಠಿಯನ್ನು ಬಳಸಿಕೊಂಡು, ಸಂತ ಜ್ಞಾನೇಶ್ವರರು ವೇದಾಂತದ ಚರ್ಚೆಯೊಂದಿಗೆ ಜನರನ್ನು ಸಂಪರ್ಕಿಸಿದರು ಮತ್ತು ಜ್ಞಾನೇಶ್ವರ ಅವರು  ಗೀತೆಯ ಅರಿವಿನೊಂದಿಗೆ ಭಾರತದ ಆಧ್ಯಾತ್ಮಿಕ ಜ್ಞಾನವನ್ನು ಪುನರುಜ್ಜೀವನಗೊಳಿಸಿದರು ಎಂದು ಅವರು ಹೇಳಿದರು. ಸಂತ ನಾಮದೇವ ಮರಾಠಿಯನ್ನು ಬಳಸಿಕೊಂಡು ಭಕ್ತಿ ಮಾರ್ಗದ ಪ್ರಜ್ಞೆಯನ್ನು ಬಲಪಡಿಸಿದರು, ಅದೇ ರೀತಿ, ಸಂತ ತುಕಾರಾಮ್ ಮರಾಠಿ ಭಾಷೆಯಲ್ಲಿ ಧಾರ್ಮಿಕ ಜಾಗೃತಿ ಅಭಿಯಾನವನ್ನು ಪ್ರಾರಂಭಿಸಿದರು ಮತ್ತು ಸಂತ ಚೋಖಮೇಲಾ ಸಾಮಾಜಿಕ ಬದಲಾವಣೆಯ ಚಳುವಳಿಗಳನ್ನು ಸಶಕ್ತಗೊಳಿಸಿದರು ಎಂದು ಶ್ರೀ ಮೋದಿ ಒತ್ತಿ ಹೇಳಿದರು. "ಮಹಾರಾಷ್ಟ್ರ ಮತ್ತು ಮರಾಠಿ ಭಾಷೆಯ ಮಹಾನ್ ಸಂತರಿಗೆ ನಾನು ನಮಿಸುತ್ತೇನೆ" ಎಂದು ಶ್ರೀ ಮೋದಿ ಹೇಳಿದರು. ಮರಾಠಿ ಭಾಷೆಗೆ ಶಾಸ್ತ್ರೀಯ ಸ್ಥಾನಮಾನ ನೀಡಿರುವುದರಿಂದ ಛತ್ರಪತಿ ಶಿವಾಜಿ ಮಹಾರಾಜ್ ಅವರ ಪಟ್ಟಾಭಿಷೇಕದ 350 ನೇ ವರ್ಷದಲ್ಲಿ ಇಡೀ ದೇಶವು ಅವರನ್ನು ಗೌರವಿಸುತ್ತದೆ ಎಂದರ್ಥ ಎಂದೂ ಅವರು ನುಡಿದರು.

ಭಾರತದ ಸ್ವಾತಂತ್ರ್ಯ ಹೋರಾಟದಲ್ಲಿ ಮರಾಠಿ ಭಾಷೆಯ ಅಮೂಲ್ಯ ಕೊಡುಗೆಯನ್ನು ಎತ್ತಿ ತೋರಿಸಿದ ಪ್ರಧಾನ ಮಂತ್ರಿ, ಮಹಾರಾಷ್ಟ್ರದ ಹಲವಾರು ಕ್ರಾಂತಿಕಾರಿ ನಾಯಕರು ಮತ್ತು ಚಿಂತಕರು ಜಾಗೃತಿ ಮೂಡಿಸಲು ಮತ್ತು ಜನಸಾಮಾನ್ಯರನ್ನು ಒಗ್ಗೂಡಿಸಲು ಮರಾಠಿಯನ್ನು ಮಾಧ್ಯಮವಾಗಿ ಹೇಗೆ ಬಳಸಿದರು ಎಂಬುದನ್ನು ವಿವರಿಸಿದರು. ಲೋಕಮಾನ್ಯ ತಿಲಕರು ತಮ್ಮ ಮರಾಠಿ ದಿನಪತ್ರಿಕೆ 'ಕೇಸರಿ'ಯೊಂದಿಗೆ ವಿದೇಶಿ ಆಡಳಿತದ ಅಡಿಪಾಯವನ್ನೇ ಅಲುಗಾಡಿಸಿದರು ಮತ್ತು ಮರಾಠಿಯಲ್ಲಿ ಅವರ ಭಾಷಣಗಳು ಪ್ರತಿಯೊಬ್ಬ ಭಾರತೀಯನ ಹೃದಯದಲ್ಲಿ ಸ್ವರಾಜ್ಯದ ಬಯಕೆಯನ್ನು ಪ್ರಚೋದಿಸಿದವು ಎಂದು ಅವರು ಹೇಳಿದರು. ನ್ಯಾಯ ಮತ್ತು ಸಮಾನತೆಯ ಹೋರಾಟವನ್ನು ಮುನ್ನಡೆಸುವಲ್ಲಿ ಮರಾಠಿ ಭಾಷೆ ಪ್ರಮುಖ ಪಾತ್ರ ವಹಿಸಿದೆ ಎಂದು ಒತ್ತಿಹೇಳಿದ ಅವರು, ಗೋಪಾಲ್ ಗಣೇಶ್ ಅಗರ್ಕರ್ ಅವರಂತಹ ಇತರ ಗಣ್ಯರ ಕೊಡುಗೆಗಳನ್ನು ಸ್ಮರಿಸಿದರು, ಅವರು ತಮ್ಮ ಮರಾಠಿ ಪತ್ರಿಕೆ ಸುಧಾರಕ್ ಮೂಲಕ ಸಾಮಾಜಿಕ ಸುಧಾರಣೆಗಳಿಗಾಗಿ ಅಭಿಯಾನವನ್ನು ಮುನ್ನಡೆಸಿದರು, ಪ್ರತಿ ಮನೆಯನ್ನು ತಲುಪಿದರು. ಸ್ವಾತಂತ್ರ್ಯ ಹೋರಾಟವನ್ನು ಅದರ ಗುರಿಯತ್ತ ಕೊಂಡೊಯ್ಯಲು ಮರಾಠಿಯನ್ನು ಅವಲಂಬಿಸಿದ ಇನ್ನೊಬ್ಬ ಧೀಮಂತ ವ್ಯಕ್ತಿ ಗೋಪಾಲಕೃಷ್ಣ ಗೋಖಲೆ ಎಂದೂ ಪ್ರಧಾನ ಮಂತ್ರಿ ಅವರು ಹೇಳಿದರು.

 

ಮರಾಠಿ ಸಾಹಿತ್ಯವು ನಮ್ಮ ನಾಗರಿಕತೆಯ ಬೆಳವಣಿಗೆ ಮತ್ತು ಸಾಂಸ್ಕೃತಿಕ ಪ್ರಗತಿಯ ಕಥೆಗಳನ್ನು ಸಂರಕ್ಷಿಸುವ ಭಾರತದ ಅಮೂಲ್ಯ ಪರಂಪರೆಯಾಗಿದೆ ಎಂದು ಶ್ರೀ ಮೋದಿ ಒತ್ತಿ ಹೇಳಿದರು. ಸ್ವರಾಜ್ಯ, ಸ್ವದೇಶಿ, ಮಾತೃಭಾಷೆ ಮತ್ತು ಸಾಂಸ್ಕೃತಿಕ ಹೆಮ್ಮೆಯ ಆದರ್ಶಗಳನ್ನು ಹರಡುವಲ್ಲಿ ಮರಾಠಿ ಸಾಹಿತ್ಯವು ಪ್ರಮುಖ ಪಾತ್ರ ವಹಿಸಿದೆ ಎಂದು ಅವರು ಹೇಳಿದರು. ಸ್ವಾತಂತ್ರ್ಯ ಚಳವಳಿಯ ಸಮಯದಲ್ಲಿ, ಗಣೇಶ ಉತ್ಸವ ಮತ್ತು ಶಿವ ಜಯಂತಿ ಆಚರಣೆಗಳು, ವೀರ್ ಸಾವರ್ಕರ್ ಅವರ ಕ್ರಾಂತಿಕಾರಿ ಚಿಂತನೆಗಳು, ಬಾಬಾ ಸಾಹೇಬ್ ಅಂಬೇಡ್ಕರ್ ನೇತೃತ್ವದ ಸಾಮಾಜಿಕ ಸಮಾನತೆ ಚಳವಳಿ, ಮಹರ್ಷಿ ಕರ್ವೆ ಅವರ ಮಹಿಳಾ ಸಬಲೀಕರಣ ಅಭಿಯಾನ ಮತ್ತು ಮಹಾರಾಷ್ಟ್ರದಲ್ಲಿ ಕೈಗಾರಿಕೀಕರಣ ಹಾಗು ಕೃಷಿ ಸುಧಾರಣೆಗಳಂತಹ ಪ್ರಯತ್ನಗಳು ಮರಾಠಿ ಭಾಷೆಯಲ್ಲಿ ತಮ್ಮ ಶಕ್ತಿಯನ್ನು ಕಂಡುಕೊಂಡವು ಎಂದು ಅವರು ಒತ್ತಿ ಹೇಳಿದರು. ಮರಾಠಿ ಭಾಷೆಯೊಂದಿಗೆ ಸಂಪರ್ಕ ಸಾಧಿಸುವ ಮೂಲಕ ನಮ್ಮ ದೇಶದ ಸಾಂಸ್ಕೃತಿಕ ವೈವಿಧ್ಯತೆಯು ಮತ್ತಷ್ಟು ಶ್ರೀಮಂತಗೊಳ್ಳುತ್ತದೆ ಎಂದು ಅವರು ಹೇಳಿದರು.

"ಭಾಷೆ ಕೇವಲ ಸಂವಹನ ಮಾಧ್ಯಮವಲ್ಲ, ಅದು ಸಂಸ್ಕೃತಿ, ಇತಿಹಾಸ, ಸಂಪ್ರದಾಯ ಮತ್ತು ಸಾಹಿತ್ಯದೊಂದಿಗೆ ಆಳವಾಗಿ ಸಂಪರ್ಕ ಹೊಂದಿದೆ" ಎಂದು ಪ್ರಧಾನಿ ಉದ್ಗರಿಸಿದರು. ಪೊವಾಡಾ ಎಂಬ ಜಾನಪದ ಗೀತೆಯ ಬಗ್ಗೆ ಮಾತನಾಡಿದ ಶ್ರೀ ಮೋದಿ, ಛತ್ರಪತಿ ಶಿವಾಜಿ ಮಹಾರಾಜ್ ಮತ್ತು ಇತರ ವೀರರ ಶೌರ್ಯದ ಕಥೆಗಳು ಹಲವಾರು ಶತಮಾನಗಳ ನಂತರವೂ ನಮ್ಮನ್ನು ತಲುಪಿವೆ ಎಂದರು. ಪೊವಾಡಾ ಇಂದಿನ ಪೀಳಿಗೆಗೆ ಮರಾಠಿ ಭಾಷೆಯ ಅದ್ಭುತ ಕೊಡುಗೆಯಾಗಿದೆ ಎಂದು ಅವರು ಹೇಳಿದರು. ಇಂದು ನಾವು ಗಣಪತಿಯನ್ನು ಪೂಜಿಸುವಾಗ, 'ಗಣಪತಿ ಬಪ್ಪಾ ಮೋರ್ಯ' ಎಂಬ ಪದಗಳು ಸ್ವಾಭಾವಿಕವಾಗಿ ನಮ್ಮ ಮನಸ್ಸಿನಲ್ಲಿ ಪ್ರತಿಧ್ವನಿಸುತ್ತವೆ ಮತ್ತು ಇದು ಕೇವಲ ಕೆಲವು ಪದಗಳ ಸಂಯೋಜನೆಯಲ್ಲ, ಬದಲು ಅದು ಭಕ್ತಿಯ ನಿರಂತರ ಚಿಲುಮೆ, ಹರಿವು ಎಂದು ಪ್ರಧಾನಿ ಒತ್ತಿ ಹೇಳಿದರು. ಈ ಭಕ್ತಿಯು ಇಡೀ ದೇಶವನ್ನು ಮರಾಠಿ ಭಾಷೆಯೊಂದಿಗೆ ಸಂಪರ್ಕಿಸುತ್ತದೆ ಎಂದು ಅವರು ಹೇಳಿದರು. ಅದೇ ರೀತಿ, ಶ್ರೀ ವಿಠ್ಠಲರ ಅಭಾಂಗ್ ಕೇಳುವವರು ಕೂಡಾ ತಮ್ಮಿಂದ ತಾವೇ  ಮರಾಠಿಯೊಂದಿಗೆ ಸಂಪರ್ಕ ಸಾಧಿಸುತ್ತಾರೆ ಎಂದು ಶ್ರೀ ಮೋದಿ ಒತ್ತಿ ಹೇಳಿದರು.

 

ಮರಾಠಿ ಸಾಹಿತಿಗಳು, ಬರಹಗಾರರು, ಕವಿಗಳು ಮತ್ತು ಅಸಂಖ್ಯಾತ ಮರಾಠಿ ಪ್ರೇಮಿಗಳು ಮರಾಠಿ ಭಾಷೆಗೆ ನೀಡಿದ ಕೊಡುಗೆಗಳು ಮತ್ತು ಪ್ರಯತ್ನಗಳನ್ನು ಎತ್ತಿ ತೋರಿಸಿದ ಶ್ರೀ ಮೋದಿ, ಭಾಷೆಗೆ ಶಾಸ್ತ್ರೀಯ ಸ್ಥಾನಮಾನದ ಮಾನ್ಯತೆಯು ಅನೇಕ ಪ್ರತಿಭಾವಂತ ಸಾಹಿತಿಗಳ ಸೇವೆಯ ಫಲವಾಗಿದೆ ಎಂದರು. ಬಾಲಶಾಸ್ತ್ರಿ ಜಂಭೇಕರ್, ಮಹಾತ್ಮಾ ಜ್ಯೋತಿಬಾ ಫುಲೆ, ಸಾವಿತ್ರಿಬಾಯಿ ಫುಲೆ, ಕೃಷ್ಣಜಿ ಪ್ರಭಾಕರ್ ಖಾಡಿಲ್ಕರ್, ಕೇಶವಸುತ್, ಶ್ರೀಪಾದ್ ಮಹಾದೇವ್ ಮಾತೆ, ಆಚಾರ್ಯ ಅತ್ರೆ, ಅಣ್ಣಾ ಭಾವು ಸಾಥೆ, ಶಾಂತಾಬಾಯಿ ಶೆಲ್ಕೆ, ಗಜಾನನ್ ದಿಗಂಬರ ಮಡ್ಗುಲ್ಕರ್, ಕುಸುಮಾಗ್ರಜ್ ಅವರಂತಹ ವ್ಯಕ್ತಿಗಳ ಕೊಡುಗೆಗೆ ಸಾಟಿಯಿಲ್ಲ ಎಂದೂ  ಪ್ರಧಾನ ಮಂತ್ರಿ  ಹೇಳಿದರು. ಮರಾಠಿ ಸಾಹಿತ್ಯದ ಪರಂಪರೆ ಪ್ರಾಚೀನ ಮಾತ್ರವಲ್ಲ, ಬಹುಮುಖಿಯೂ ಆಗಿದೆ ಎಂದು ಪ್ರಧಾನಿ ನುಡಿದರು. ವಿನೋಬಾ ಭಾವೆ, ಶ್ರೀಪಾದ್ ಅಮೃತ್ ಡಾಂಗೆ, ದುರ್ಗಾಬಾಯಿ ಭಾಗವತ್, ಬಾಬಾ ಆಮ್ಟೆ, ದಲಿತ ಸಾಹಿತಿ ದಯಾ ಪವಾರ್, ಬಾಬಾ ಸಾಹೇಬ್ ಪುರಂದರೆ ಅವರಂತಹ ಅನೇಕ ವ್ಯಕ್ತಿಗಳು ಮರಾಠಿ ಸಾಹಿತ್ಯಕ್ಕೆ ಮಹತ್ವದ ಕೊಡುಗೆ ನೀಡಿದ್ದಾರೆ ಎಂದು ಅವರು ಹೇಳಿದರು. ಪುರುಷೋತ್ತಮ ಲಕ್ಷ್ಮಣ ದೇಶಪಾಂಡೆ, ಡಾ. ಅರುಣಾ ಧರೆ, ಡಾ. ಸದಾನಂದ ಮೋರೆ, ಮಹೇಶ್ ಎಲ್ಕುಂಚ್ವಾರ್, ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ನಾಮದೇವ್ ಕಾಂಬ್ಳೆ ಸೇರಿದಂತೆ ಮರಾಠಿಗೆ ಸೇವೆ ಸಲ್ಲಿಸಿದ ಎಲ್ಲ ಸಾಹಿತಿಗಳ ಕೊಡುಗೆಯನ್ನು ಶ್ರೀ ಮೋದಿ ಸ್ಮರಿಸಿದರು. ಆಶಾ ಬಾಗೆ, ವಿಜಯ ರಾಜಾಧ್ಯಾಕ್ಷ, ಡಾ.ಶರಣಕುಮಾರ ಲಿಂಬಳೆ, ರಂಗ ನಿರ್ದೇಶಕ ಚಂದ್ರಕಾಂತ ಕುಲಕರ್ಣಿ ಅವರಂತಹ ಅನೇಕ ದಿಗ್ಗಜರು ಬಹಳ ವರ್ಷಗಳಿಂದ ಮರಾಠಿಗೆ ಶಾಸ್ತ್ರೀಯ ಭಾಷೆಯ ಸ್ಥಾನಮಾನದ ಕನಸು ಕಂಡಿದ್ದರು ಎಂದೂ ಪ್ರಧಾನ ಮಂತ್ರಿ ಹೇಳಿದರು.

ಮರಾಠಿ ಚಿತ್ರರಂಗ, ಸಾಹಿತ್ಯ ಮತ್ತು ಸಂಸ್ಕೃತಿಯ ಕೊಡುಗೆಯನ್ನು ಶ್ಲಾಘಿಸಿದ ಪ್ರಧಾನಿ, ವಿ.ಶಾಂತಾರಾಮ್ ಮತ್ತು ದಾದಾಸಾಹೇಬ್ ಫಾಲ್ಕೆ ಅವರಂತಹ ದಂತಕಥೆಗಳ ರೀತಿಯ ವ್ಯಕ್ತಿಗಳು  ಭಾರತೀಯ ಚಿತ್ರರಂಗಕ್ಕೆ ಅಡಿಪಾಯ ಹಾಕಿದರು ಎಂದರು. ತುಳಿತಕ್ಕೊಳಗಾದವರಿಗೆ  ಮತ್ತು ಪ್ರಸಿದ್ಧ ಮರಾಠಿ ಸಂಗೀತ ಸಂಪ್ರದಾಯಗಳಿಗೆ ಧ್ವನಿ ನೀಡಿದ್ದಕ್ಕಾಗಿ ಮರಾಠಿ ರಂಗಭೂಮಿಯನ್ನು ಶ್ಲಾಘಿಸಿದ ಅವರು, ಬಾಲ ಗಂಧರ್ವ, ಭೀಮಸೇನ್ ಜೋಶಿ ಮತ್ತು ಲತಾ ಮಂಗೇಶ್ಕರ್ ಅವರಂತಹ ಐಕಾನ್ ಗಳನ್ನು ಅವರ ಕೊಡುಗೆಗಳಿಗಾಗಿ ಗುರುತಿಸಿದರು.

ಅಹ್ಮದಾಬಾದ್ ನ ಮರಾಠಿ ಕುಟುಂಬವೊಂದು ಭಾಷೆ ಕಲಿಯಲು ಸಹಾಯ ಮಾಡಿದ ವೈಯಕ್ತಿಕ ನೆನಪುಗಳನ್ನು ಶ್ರೀ ಮೋದಿ ಹಂಚಿಕೊಂಡರು. ಮರಾಠಿಯನ್ನು ಶಾಸ್ತ್ರೀಯ ಭಾಷೆಯಾಗಿ ಗುರುತಿಸುವುದರಿಂದ ಭಾರತದಾದ್ಯಂತದ ವಿಶ್ವವಿದ್ಯಾಲಯಗಳಲ್ಲಿ ಭಾಷಾ ಸಂಶೋಧನೆಯನ್ನು ಉತ್ತೇಜಿಸುತ್ತದೆ ಮತ್ತು ಸಾಹಿತ್ಯ ಸಂಗ್ರಹವನ್ನು ಉತ್ತೇಜಿಸುತ್ತದೆ ಎಂದು ಪ್ರಧಾನಿ ಒತ್ತಿ ಹೇಳಿದರು. ಈ ನಿರ್ಧಾರವು ಮರಾಠಿ ಭಾಷೆಯ ಅಭಿವೃದ್ಧಿಗಾಗಿ ಕೆಲಸ ಮಾಡುವ ಸಂಸ್ಥೆಗಳು, ವ್ಯಕ್ತಿಗಳು ಮತ್ತು ವಿದ್ಯಾರ್ಥಿಗಳಿಗೆ ಗಮನಾರ್ಹ ಉತ್ತೇಜನವನ್ನು ನೀಡುತ್ತದೆ ಎಂದು ಶ್ರೀ ಮೋದಿ ನುಡಿದರು. ಈ ಉಪಕ್ರಮವು ಶಿಕ್ಷಣ ಮತ್ತು ಸಂಶೋಧನೆಯಲ್ಲಿ ಹೊಸ ಮಾರ್ಗಗಳನ್ನು ತೆರೆಯುತ್ತದೆ ಮತ್ತು ಈ ಕ್ಷೇತ್ರಗಳಲ್ಲಿ ಉದ್ಯೋಗಾವಕಾಶಗಳನ್ನು ಉತ್ತೇಜಿಸುತ್ತದೆ ಎಂದು ಅವರು ಆಶಾವಾದ ವ್ಯಕ್ತಪಡಿಸಿದರು.

 

ಸ್ವಾತಂತ್ರ್ಯದ ನಂತರ ಮೊದಲ ಬಾರಿಗೆ ಪ್ರಾದೇಶಿಕ ಭಾಷೆಗಳಲ್ಲಿ ಶಿಕ್ಷಣಕ್ಕೆ ಆದ್ಯತೆ ನೀಡುವ ಸರ್ಕಾರವನ್ನು ದೇಶ ಹೊಂದಿದೆ ಎಂದು ಒತ್ತಿ ಹೇಳಿದ ಪ್ರಧಾನಿ, ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯಡಿ ವೈದ್ಯಕೀಯ ಮತ್ತು ಎಂಜಿನಿಯರಿಂಗ್ ಕೋರ್ಸ್ ಗಳನ್ನು ಮರಾಠಿಯಲ್ಲಿ ಅಧ್ಯಯನ ಮಾಡುವ ಸಾಧ್ಯತೆಯನ್ನು ಪ್ರಮುಖವಾಗಿ ಉಲ್ಲೇಖಿಸಿದರು. ವಿಜ್ಞಾನ, ಅರ್ಥಶಾಸ್ತ್ರ ಮತ್ತು ಕಲೆಗಳಂತಹ ವಿವಿಧ ವಿಷಯಗಳಲ್ಲಿ ಮರಾಠಿಯಲ್ಲಿ ಪುಸ್ತಕಗಳ ಲಭ್ಯತೆಯು ಹೆಚ್ಚುತ್ತಿದೆ ಮತ್ತು ಮರಾಠಿಯನ್ನು ಆಲೋಚನೆಗಳ/ಚಿಂತನೆಗಳ ವಾಹನವನ್ನಾಗಿ ಮಾಡುವ ಕೆಲಸ  ನಡೆಯಬೇಕು, ಇದರಿಂದ ಅದು ರೋಮಾಂಚಕವಾಗಿ ಉಳಿಯುತ್ತದೆ ಎಂದು ಅವರು ಒತ್ತಿ ಹೇಳಿದರು. ಮರಾಠಿ ಸಾಹಿತ್ಯವನ್ನು ಜಾಗತಿಕ ಪ್ರೇಕ್ಷಕರಿಗೆ ತಲುಪಿಸುವ ಪ್ರಯತ್ನಗಳನ್ನು ಅವರು ಪ್ರೋತ್ಸಾಹಿಸಿದರು ಮತ್ತು ಭಾಷಿನಿ ಅಪ್ಲಿಕೇಶನ್ ಬಗ್ಗೆ ಪ್ರಸ್ತಾಪಿಸಿದರು, ಇದು ಅದರ ಅನುವಾದ ವೈಶಿಷ್ಟ್ಯದ ಮೂಲಕ ಭಾಷಾ ಅಡೆತಡೆಗಳನ್ನು ತೊಡೆದು ಹಾಕಲು  ಸಹಾಯ ಮಾಡುತ್ತದೆ ಎಂದರು.

ಈ ಐತಿಹಾಸಿಕ ಸಂದರ್ಭದ ಆಚರಣೆಗಳು ಜವಾಬ್ದಾರಿಯನ್ನೂ ತರುತ್ತವೆ ಎಂದು ಪ್ರಧಾನಿ ಎಲ್ಲರಿಗೂ ನೆನಪಿಸಿದರು. ಪ್ರತಿಯೊಬ್ಬ ಮರಾಠಿ ಭಾಷಿಕನೂ ಈ ಭಾಷೆಯ ಬೆಳವಣಿಗೆಗೆ ಕೊಡುಗೆ ನೀಡಬೇಕು ಎಂದು ಅವರು ಒತ್ತಿ ಹೇಳಿದರು. ಭವಿಷ್ಯದ ಪೀಳಿಗೆಯಲ್ಲಿ ಹೆಮ್ಮೆಯ ಭಾವನೆಯನ್ನು ಮೂಡಿಸುವ ಮೂಲಕ ಮರಾಠಿಯ ವ್ಯಾಪ್ತಿಯನ್ನು ವಿಸ್ತರಿಸುವ ಪ್ರಯತ್ನಗಳನ್ನು ಮಾಡಬೇಕು ಎಂದೂ ಶ್ರೀ ಮೋದಿ ಆಗ್ರಹಿಸಿದರು. ಮರಾಠಿಯನ್ನು ಶಾಸ್ತ್ರೀಯ ಭಾಷೆಯಾಗಿ ಗುರುತಿಸಿರುವುದಕ್ಕೆ  ಎಲ್ಲರಿಗೂ ಅಭಿನಂದನೆಗಳನ್ನು ಸಲ್ಲಿಸುವ ಮೂಲಕ ಅವರು ಮಾತುಗಳನ್ನು ಮುಕ್ತಾಯಗೊಳಿಸಿದರು.

 

Click here to read full text speech

 

 

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
Why PM Modi Visited The Afsluitdijk: The Dutch Water Model India Is Studying

Media Coverage

Why PM Modi Visited The Afsluitdijk: The Dutch Water Model India Is Studying
NM on the go

Nm on the go

Always be the first to hear from the PM. Get the App Now!
...
India-Europe partnership can deliver world-class outcomes: PM Modi at the European Round Table for the Industry
May 18, 2026

Your Excellency, Prime Minister क्रिस्टर्सन,
Your Excellency उर्सुला जी,
Your Royal Highness,
वॉल्वो ग्रुप के President and CEO,
European Round Table के अध्यक्ष,
यहाँ उपस्थित Europe के प्रमुख business leaders,
देवियों और सज्जनों,

नमस्कार!

सबसे पहले मैं Prime Minister क्रिस्टर्सन का इस Round Table में मुझे आमंत्रित करने के लिए हृदय से आभार व्यक्त करता हूँ। मुझे खुशी है कि यह बैठक "गोथनबर्ग” में आयोजित की जा रही है। एक ऐसा शहर जो innovation के साथ-साथ यूरोप की manufacturing spirit का एक जीवंत प्रतीक है।

Friends,

European Round Table for Industry जैसे प्रतिष्ठित मंच को संबोधित करना मेरे लिए सम्मान की बात है।

आप में से कुछ मित्रों से मेरी पहले मुलाकात हुई है। कुछ से आज पहली बार मिल रहा हूँ। लेकिन एक बात निश्चित है, आप सभी किसी न किसी रूप में भारत से जुड़े हुए हैं।

किसी की manufacturing भारत में है। किसी का R&D भारत में है। किसी का talent base भारत में है। किसी की supply chain भारत से जुड़ी है। और कोई भारत में बड़ा इन्वेस्टमेंट कर रहा है। आज की यह बैठक इस साझेदारी को और मजबूत करने का अवसर है।

Friends,

आज भारत और यूरोप के संबंध एक नए turning point पर हैं। सरकारों के स्तर पर हमने एक ambitious और strategic agenda तय किया है।

India-EU Free Trade Agreement पर सहमति बन चुकी है। जैसे उर्सुला जी ने कहा था, यह वाकई "Mother of all Deals” है। हमारा प्रयास है कि इसे जल्द से जल्द implement किया जाए।

Security and Defence Partnership तथा Mobility Agreement ने भी हमारे सहयोग को नई दिशा दी है। India-EU Trade and Technology Council ने हमारी साझेदारी को नई institutional strength दी है। Digital technologies, supply chains और innovation, इन सभी क्षेत्रों में भारत और यूरोप साथ मिलकर काम कर रहे हैं।

India-Middle East-Europe Economic Corridor जैसे ऐतिहासिक initiatives connectivity और economic integration को नई गति दे रहे हैं। Green transition और sustainable growth को लेकर भी हमारी सोच और प्राथमिकताएँ समान हैं।

यानि, Big Picture देखें तो हमारे बीच गहरा political, economic और strategic कन्वर्जन्स है। India and Europe are strategic partners for a balanced, secure and sustainable world.

लेकिन friends,

सरकारें केवल framework, framework support और policy direction दे सकती हैं। ज़मीनी स्तर पर असली बदलाव आप सभी के प्रयासों से ही संभव रहेगा। इसलिए आज मैं आपको भारत के साथ मिलकर काम करने के लिए आमंत्रित करने आया हूँ।

Fastest-growing major economy के रूप में भारत आज एक नए आत्मविश्वास के साथ आगे बढ़ रहा है। भारत 140 करोड़ लोगों की आकांक्षाओं का देश है। हमारी young population, expanding middle class और infrastructure expansion भारत की growth को नई गति दे रहे हैं।

पिछले बारह वर्ष में भारत reform, perform और transform के मूलमंत्र पर चला है। और सरकार की पोलिटिकल विल से यह रिफॉर्म एक्स्प्रेस full speed पर आगे बढ़ रही है।

Goods and Services Tax ने भारत को one nation, one tax, one market की दिशा में आगे बढ़ाया। Insolvency and Bankruptcy Code से business culture में accountability आई। Corporate tax reforms ने manufacturing को competitive बनाया। Labour codes ने compliance को सरल और transparent बनाने की दिशा दी।

FDI reforms ने अनेक sectors को global capital के लिए खोला। PLI schemes ने electronics, pharma, auto components, solar modules, telecom, textiles जैसे कई sectors में manufacturing momentum बनाया।

हमने compliances का बोझ कम किया है। हजारों outdated regulations समाप्त किए हैं। Ease of Doing Business को governance का हिस्सा बनाया है। Digital India ने public services को अधिक transparent, efficient और accessible बनाया है।

भारत में आज दुनिया का तीसरा सबसे बड़ा startup ecosystem है। हमारे startups AI, fintech, space, drones, biotech, climate tech, और mobility में global solutions बना रहे हैं।

आज भारत में talent है, scale है, demand है, stability है, और सबसे बड़ी बात, भारत में 140 करोड़ भारतीयों की इच्छा-शक्ति है। इसीलिए अब समय है कि हम intent से investment की ओर बढ़ें।

इस विषय में मैं आपके सामने पाँच सुझाव रखना चाहता हूँ।

पहला: Telecom और digital इन्फ्रास्ट्रक्चर। Vodafone, Ericsson, Nokia, Orange, जैसी कंपनियों का भारत में विशाल अनुभव है। भारत 5G से 6G ट्रैन्ज़िशन, AI-enabled networks, secure connectivity, और digital inclusion में बड़ा partner बन सकता है। आप सभी भारत को global R&D hub बनाने में योगदान दे सकते हैं।

दूसरा: AI, semiconductors, electronics और deep-tech manufacturing. ASML, NXP, SAP, Capgemini जैसे leaders आज यहाँ मौजूद हैं। मैं आपको भारत के तेजी से विकसित हो रहे end-to-end technology ecosystem का भागीदार बनने के लिए आमंत्रित करता हूँ।

भारत का विज़न स्पष्ट है: technology innovation की अगली wave भारत में co-create होनी चाहिए।

तीसरा: green transition और क्लीन एनर्जी। अनिश्चित global environment में भारत energy security और clean energy capacity को मजबूत करने पर focus कर रहा है। ENGIE, Total Energies, Shell, Umicore जैसी कंपनियां clean energy, हाइड्रोजन, energy storage, EV और decarbonisation में लीडर्स हैं। आप भारत में बड़े पैमाने पर निवेश कर सकते हैं।

चौथा: infrastructure, mobility और urban transformation. Volvo, Maersk, Airbus, Saab, ArcelorMittal, और Heidelberg। इन सबकी expertise भारत के transformation से सीधे जुड़ती है। Sustainable cement, green steel, mobility, logistics, aerospace, defence, इन क्षेत्रों में भारत और यूरोप की पार्ट्नर्शिप world-class outcomes दे सकती है।

पाँचवां: healthcare और life-sciences। AstraZeneca, Roche, Merck, Philips, Nestlé और Unilever जैसी कंपनियों का भारत से पुराना संबंध रहा हैं। अब हमें इस पार्ट्नर्शिप को next level पर ले जाना चाहिए।

Vaccines, cancer care, digital health, nutrition और medical devices में बहुत बड़ा scope है। आप design for India, make in India, and export from India के मॉडल पर आगे बढ़ सकते हैं।

समय की सीमा के कारण मैं यहाँ उपस्थित सभी कंपनियों का नाम नहीं ले सका, लेकिन भारत के अवसर सभी के लिए हैं, और मेरा निमंत्रण भी आप सभी के लिए है।

Friends,

इन सुझावों के बाद मैं आपके सामने एक challenge भी रखना चाहता हूँ। क्या यहाँ मौजूद हर company भारत के लिए एक नया बड़ा commitment कर सकती है? क्या हम अगले पाँच वर्षों में भारत में शुरू किए जाने वाले flagship projects की पहचान कर सकते हैं?

भारत सरकार इन सभी प्रोजेक्ट्स को समयबद्ध तरीके पूरा करने में आपकी पूरी मदद करेगी। हम इन सभी प्रोजेक्ट्स की नियमित समीक्षा करने की एक institutional व्यवस्था भी बना सकते है।

Friends,

हम साल में एक बार भारत-यूरोप CEO Roundtable का आयोजन कर सकते हैं। इसमें भारत और यूरोप की industry bodies को जोड़ा जा सकता है। Sector-specific working groups भी बनाए जा सकते हैं।

मैं यह भी सुझाव दूँगा कि ERT एक India Desk या India Action Group भी बनाए। इसका mandate simple हो: जो companies भारत में हैं, उनके expansion को support करना; जो नई कंपनियाँ भारत आना चाहती हैं, उनके entry को facilitate करना; और business concerns का proactive समाधान करना।

Friends,

भारत और यूरोप की partnership केवल आर्थिक आंकड़ों तक सीमित नहीं है। यह साझा मूल्यों की partnership है। यह लोकतंत्र और विविधता की partnership है। यह trust और transparency की partnership है। यह innovation और inclusion की partnership है।

आज के विश्व में जहां अनिश्चितता है, Supply chains दबाव में हैं, टेक्नॉलजी में competition बढ़ रहा है, ऊर्जा सुरक्षा और climate action दोनों को चुनौती दी जा रही है, ऐसे समय में भारत और यूरोप मिलकर stability, sustainability और shared prosperity के मजबूत स्तंभ बन सकते हैं।

इसी भावना के साथ मैं आप सभी को भारत की विकास यात्रा से जुड़ने के लिए आमंत्रित करता हूँ। मुझे विश्वास है कि आज "गोथनबर्ग” से जो संवाद शुरू हो रहा है, वह आने वाले वर्षों में भारत और यूरोप की industrial partnership का एक नया अध्याय लिखेगा।

आप इतनी बड़ी संख्या में आये। इस समिट में मुझे आपके बीच अपने बात रखने का अवसर दिया। इसके लिए में आप सब का विशेष रूप से बहुत बहुत आभार व्यक्त करता हूँ।

बहुत-बहुत धन्यवाद।
Thank you.