ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಟೋಕಿಯೋದಲ್ಲಿಇಂದು ಸಮೃದ್ಧಿಗಾಗಿ ಇಂಡೋ-ಪೆಸಿಫಿಕ್‌ ಆರ್ಥಿಕ ಚೌಕಟ್ಟು (ಐ.ಪಿ.ಇ.ಎಘ್‌)ಗೆ ಚಾಲನೆ ನೀಡುವ ಕಾರ್ಯಕ್ರಮದಲ್ಲಿಭಾಗವಹಿಸಿದ್ದರು. ಈ ಕಾರ್ಯಕ್ರಮದಲ್ಲಿಅಮೆರಿಕದ ಅಧ್ಯಕ್ಷ  ಘನತೆವೆತ್ತ ಶ್ರೀ ಜೋಸೆಫ್‌ ಆರ್‌.ಬೈಡೆನ್‌ ಮತ್ತು ಜಪಾನ್‌ ಪ್ರಧಾನಿ ಗೌರವಾನ್ವಿತ ಶ್ರೀ ಕಿಶಿಡಾ ಫುಮಿಯೊ ಮತ್ತು ಇತರ ಪಾಲುದಾರ ರಾಷ್ಟ್ರಗಳಾದ ಆಸ್ಪ್ರೇಲಿಯಾ, ಬ್ರೂನೈ, ಇಂಡೋನೇಷ್ಯಾ, ಕೊರಿಯಾ ಗಣರಾಜ್ಯ, ಮಲೇಷ್ಯಾ, ನ್ಯೂಜಿಲ್ಯಾಂಡ್‌, ಫಿಲಿಪೈನ್ಸ್‌, ಸಿಂಗಾಪುರ, ಥಾಯ್ಲೆಂಡ್‌  ಮತ್ತು ವಿಯೆಟ್ನಾಂನ ನಾಯಕರು ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿಜಂಟಿ ಹೇಳಿಕೆಯನ್ನು ಬಿಡುಗಡೆ ಮಾಡಲಾಯಿತು. ಇದು ಐ.ಪಿ.ಇ.ಎಫ್‌ ಒಳಗೆ ಕಲ್ಪಿಸಲಾದ ಪ್ರಮುಖ ಅಂಶಗಳನ್ನು ಬಿಂಬಿಸುತ್ತದೆ.
ಇಂಡೋ-ಪೆಸಿಫಿಕ್‌ ವಲಯದಲ್ಲಿಸ್ಥಿತಿಸ್ಥಾಪಕತ್ವ, ಸುಸ್ಥಿರತೆ, ಒಳಗೊಳ್ಳುವಿಕೆ, ಆರ್ಥಿಕ ಬೆಳವಣಿಗೆ, ನ್ಯಾಯಸಮ್ಮತತೆ ಮತ್ತು ಸ್ಪರ್ಧಾತ್ಮಕತೆಯನ್ನು ಹೆಚ್ಚಿಸುವ ಉದ್ದೇಶದಿಂದ ಭಾಗವಹಿಸುವ ದೇಶಗಳ ನಡುವೆ ಆರ್ಥಿಕ ಪಾಲುದಾರಿಕೆಯನ್ನು ಬಲಪಡಿಸಲು ಐ.ಪಿ.ಇ.ಎಫ್‌ ಪ್ರಯತ್ನಿಸುತ್ತದೆ.
ಐ.ಪಿ.ಇ.ಎಫ್‌. ಘೋಷಣೆಯು ಇಂಡೋ-ಪೆಸಿಫಿಕ್‌ ಪ್ರದೇಶವನ್ನು ಜಾಗತಿಕ ಆರ್ಥಿಕ ಬೆಳವಣಿಗೆಯ ಎಂಜಿನ್‌ ಆಗಿ ಮಾಡುವ ಸಾಮೂಹಿಕ ಬಯಕೆಯ ಘೋಷಣೆಯಾಗಿದೆ ಎಂದು ಪ್ರಧಾನಮಂತ್ರಿ ಅವರು ಉದ್ಘಾಟನಾ ಸಮಾರಂಭದಲ್ಲಿತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು. ಐತಿಹಾಸಿಕವಾಗಿ ಭಾರತವು ಇಂಡೋ-ಪೆಸಿಫಿಕ್‌ ಪ್ರದೇಶದಲ್ಲಿವ್ಯಾಪಾರ ಹರಿವಿನ ಕೇಂದ್ರಬಿಂದುವಾಗಿದ್ದು, ಗುಜರಾತ್‌ನ 
ಲೋಹ್ತಾಲ್‌ನಲ್ಲಿ ವಿಶ್ವದ ಅತ್ಯಂತ ಹಳೆಯ ವಾಣಿಜ್ಯ ಬಂದರನ್ನು ಹೊಂದಿದೆ. ಇಂಡೋ- ಪೆಸಿಫಿಕ್‌ ವಲಯದ ಆರ್ಥಿಕ ಸವಾಲುಗಳನ್ನು ಎದುರಿಸಲು ಸಾಮಾನ್ಯ ಮತ್ತು ಸೃಜನಶೀಲ ಪರಿಹಾರಗಳನ್ನು ಕಂಡುಹಿಡಿಯಲು ಪ್ರಧಾನಮಂತ್ರಿ ಅವರ ಕರೆ ನೀಡಿದರು.
ಎಲ್ಲರನ್ನೂ ಒಳಗೊಳ್ಳುವ ಮತ್ತು ಹೊಂದಿಕೊಳ್ಳುವ ಐ.ಪಿ.ಇ.ಎಫ್‌.ಗಾಗಿ ಎಲ್ಲಾ ಇಂಡೋ-ಪೆಸಿಫಿಕ್‌ ರಾಷ್ಟ್ರಗಳೊಂದಿಗೆ ಕೆಲಸ ಮಾಡುವ ಭಾರತದ ಬದ್ಧತೆಯನ್ನು ಅವರು ವ್ಯಕ್ತಪಡಿಸಿದರು. ಸ್ಥಿತಿಸ್ಥಾಪಕ ಪೂರೈಕೆ ಸರಪಳಿಗಳ ಅಡಿಪಾಯವು 3ಟಿ ಗಳಾಗಿರಬೇಕು - ವಿಶ್ವಾಸ, ಪಾರದರ್ಶಕತೆ ಮತ್ತು ಸಮಯೋಚಿತತೆ ಎಂದು ಅವರು ಒತ್ತಿ ಹೇಳಿದರು.
ಭಾರತವು ಮುಕ್ತ, ಮುಕ್ತ ಮತ್ತು ಅಂತರ್ಗತ ಇಂಡೋ-ಪೆಸಿಫಿಕ್‌ ಪ್ರದೇಶಕ್ಕೆ ಬದ್ಧವಾಗಿದೆ ಮತ್ತು ಪಾಲುದಾರರ ನಡುವೆ ಆಳವಾದ ಆರ್ಥಿಕ ಸಂಬಂಧವು ನಿರಂತರ ಬೆಳವಣಿಗೆ, ಶಾಂತಿ ಮತ್ತು ಸಮೃದ್ಧಿಗೆ ನಿರ್ಣಾಯಕವಾಗಿದೆ ಎಂದು ನಂಬಿದೆ. ಭಾರತವು ಐ.ಪಿ.ಇ.ಎಫ್‌ ಅಡಿಯಲ್ಲಿಪಾಲುದಾರ ರಾಷ್ಟ್ರಗಳೊಂದಿಗೆ ಸಹಯೋಗ ಹೊಂದಲು ಉತ್ಸುಕವಾಗಿದೆ ಮತ್ತು ಪ್ರಾದೇಶಿಕ ಆರ್ಥಿಕ ಸಂಪರ್ಕ, ಏಕೀಕರಣ ಮತ್ತು ಈ ವಲಯದಲ್ಲಿವ್ಯಾಪಾರ ಮತ್ತು ಹೂಡಿಕೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿಕೆಲಸ ಮಾಡಲು ಉತ್ಸುಕವಾಗಿದೆ.
ಇಂದಿನ ಉಡಾವಣೆಯೊಂದಿಗೆ, ಪಾಲುದಾರ ರಾಷ್ಟ್ರಗಳು ಆರ್ಥಿಕ ಸಹಕಾರವನ್ನು ಬಲಪಡಿಸುವ ಮತ್ತು ಹಂಚಿಕೆಯ ಗುರಿಗಳನ್ನು ಸಾಧಿಸುವತ್ತ ಗಮನ ಹರಿಸುವ ಚರ್ಚೆಗಳನ್ನು ಪ್ರಾರಂಭಿಸುತ್ತವೆ.

 

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
India's car industry may hit record 59 lakh sales in FY27 on GST boost, UV demand: Crisil Ratings

Media Coverage

India's car industry may hit record 59 lakh sales in FY27 on GST boost, UV demand: Crisil Ratings
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 13 ಮೇ 2026
May 13, 2026

Leadership That Leads by Example: PM Modi's Push for Mindful Growth, Innovation & Infrastructure