ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಪ್ರಧಾನಮಂತ್ರಿ ಭಾರತೀಯ ಜನೌಷಧಿ ಪರಿಯೋಜನೆ ಫಲಾನುಭವಿಗಳು ಮತ್ತು ಜನೌಷಧಿ ಕೇಂದ್ರಗಳ ಮಳಿಗೆ ಮಾಲೀಕರುಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಂವಾದ ನಡೆಸಿದರು.

ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರಗಳು ಕರೋನಾ ವೈರಾಣು ಭೀತಿಯನ್ನು ಹತ್ತಿಕ್ಕಲು ಎಲ್ಲ ಅಗತ್ಯ ಕ್ರಮಗಳನ್ನು ಕೈಗೊಂಡಿವೆ ಎಂದು ಪ್ರಧಾನಮಂತ್ರಿ ತಿಳಿಸಿದರು. ಭಾರತದಲ್ಲಿ ನುರಿತ ವೈದ್ಯರುಗಳು, ವೈದ್ಯಕೀಯ ಶ್ರೇಷ್ಠ ಸಂಪನ್ಮೂಲ ಹೊಂದಿದ್ದು, ಈ ಬಗ್ಗೆ ನಾಗರಿಕರಲ್ಲಿ ಸಂಪೂರ್ಣ ಅರಿವಿದೆ ಎಂದರು. ಕರೋನಾ ವೈರಾಣು ಪಸರಿಸದಂತೆ ತಡೆಯುವಲ್ಲಿ ಜಾಗೃತ ನಾಗರಿಕರ ಜವಾಬ್ದಾರಿ ಮಹತ್ವದ್ದು ಎಂದು ಪ್ರತಿಪಾದಿಸಿದರು.

ಪದೇ ಪದೇ ಕೈತೊಳೆದುಕೊಳ್ಳುವ ಬಗ್ಗೆ ಹೆಚ್ಚು ಒತ್ತು ನೀಡಿ ಹೇಳುವ ಅಗತ್ಯವಿಲ್ಲ. ಸೀನುವಾಗ ಮತ್ತು ಕೆಮ್ಮುವಾಗ ಮತ್ತೊಬ್ಬರಿಗೆ ಸೋಂಕು ತಾಗದಂತೆ ಮೂಗು ಮತ್ತು ಬಾಯಿ ಮುಚ್ಚಿಕೊಳ್ಳಿ ಎಂದು ಪ್ರಧಾನಮಂತ್ರಿ ಅವರು ಹೇಳಿದರು. “ಕರೋನಾ ವೈರಾಣು ಸೋಂಕು ತಗುಲಿರುವುದು ದೃಢಪಟ್ಟಿರುವ ಎಲ್ಲ ಪ್ರಕರಣಗಳಲ್ಲಿ ಅಗತ್ಯ ನಿಗಾದಲ್ಲಿ ಇರಿಸಲಾಗಿದೆ. ಆದರೆ ಯಾರಿಗಾದರೂ ತಾವು ಸೋಂಕು ತಗುಲಿರುವವರೊಂದಿಗೆ ಸಂಪರ್ಕಕ್ಕೆ ಬಂದಿದ್ದೇವೆ ಎನಿಸಿದರೆ ಅವರು ಆತಂಕಗೊಳ್ಳುವ ಅಗತ್ಯವಿಲ್ಲ ಬದಲಾಗಿ ಅವರು ಹತ್ತಿರದ ಆಸ್ಪತ್ರೆಯಲ್ಲಿ ಚಿಕಿತ್ಸೆ ತಪಾಸಣೆ ಮಾಡಿಸಿಕೊಳ್ಳಬೇಕು. ಕುಟುಂಬದ ಇತರ ಸದಸ್ಯರು ಕೂಡ ಸೋಂಕಿಕೆ ತೆರೆದುಕೊಳ್ಳುತ್ತಾರೆ, ಇಂಥ ಪ್ರಕರಣಗಳಲ್ಲಿ ಅವರುಗಳು ಕೂಡ ಅಗತ್ಯ ಪರೀಕ್ಷೆಗಳನ್ನು ಮಾಡಿಸಿಕೊಳ್ಳಬೇಕಾಗುತ್ತದೆ”, ಎಂದು ಪ್ರಧಾನಮಂತ್ರಿ ಹೇಳಿದರು.

ಸಾಂಕ್ರಾಮಿಕ ಕರೋನಾ ವೈರಾಣುವಿನ ಬಗ್ಗೆ ಯಾವುದೇ ರೀತಿಯ ವದಂತಿಗಳಿಗೆ ಕಿವಿಗೊಡದಂತೆ ಮನವಿ ಮಾಡಿದ ಪ್ರಧಾನಮಂತ್ರಿಯವರು ಕೇವಲ ವೈದ್ಯರ ಸಲಹೆಯನ್ನಷ್ಟೇ ಪಾಲಿಸುವಂತೆ ತಿಳಿಸಿದರು.

“ಹೌದು ಈಗ ಇಡೀ ವಿಶ್ವ ನಮಸ್ತೆ ಎಂಬ ಹವ್ಯಾಸ ರೂಢಿಸಿಕೊಳ್ಳುತ್ತಿದೆ. ಕೆಲವೊಂದು ಕಾರಣಗಳಿಗಾಗಿ ನಾವು ಇದನ್ನು ಬಿಟ್ಟು ಬಿಟ್ಟಿದ್ದೆವು, ಈಗ ನಮಸ್ತೆ ಹೇಳಲು ನಮ್ಮ ಎರಡು ಕೈಗಳನ್ನು ಜೋಡಿಸುವ ಅಭ್ಯಾಸ ಮತ್ತೆ ಪರಿಚಯಿಸಲು ಇದು ಸಕಾಲವಾಗಿದೆ’’ ಎಂದು ಪ್ರಧಾನಮಂತ್ರ ಹೇಳಿದರು.

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

Click here to read PM's speech

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
India's first digital census begins; President, PM participate in exercise

Media Coverage

India's first digital census begins; President, PM participate in exercise
NM on the go

Nm on the go

Always be the first to hear from the PM. Get the App Now!
...
Prime Minister shares Sanskrit Subhashitam, prays to Lord Hanuman
April 02, 2026

The Prime Minister, Shri Narendra Modi stated that Lord Hanuman Ji is the unparalleled symbols of devotion, strength, and unwavering dedication. “May the grace of the mighty one infuse courage and positivity into all his devotees”, Shri Modi said.

The Prime Minister shared a Sanskrit verse-

“मनोजवं मारुततुल्यवेगं जितेन्द्रियं बुद्धिमतां वरिष्ठम्।

वातात्मजं वानरयूथमुख्यं श्रीरामदूतं शिरसा नमामि॥”

The Prime Minister wrote on X;

“भगवान हनुमान जी भक्ति, शक्ति और अटूट समर्पण के अद्वितीय प्रतीक हैं। महाबली की कृपा से उनके सभी भक्तों में साहस और सकारात्मकता का संचार हो।

मनोजवं मारुततुल्यवेगं जितेन्द्रियं बुद्धिमतां वरिष्ठम्।

वातात्मजं वानरयूथमुख्यं श्रीरामदूतं शिरसा नमामि॥”