ಭಗವಾನ್ ಬಿರ್ಸಾ ಮುಂಡಾ ಅವರ ಗೌರವ ಸ್ಮರಣಾರ್ಥ ನಾಣ್ಯ ಮತ್ತು ಅಂಚೆ ಚೀಟಿ ಅನಾವರಣ
ಬಿಹಾರದಲ್ಲಿ 6,640 ಕೋಟಿ ರೂ. ಮೊತ್ತದ ವಿವಿಧ ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ
ಬುಡಕಟ್ಟು ಸಮುದಾಯವೇ ರಾಜಕುಮಾರ ರಾಮನನ್ನು ಶ್ರೀರಾಮನನ್ನಾಗಿ ಮಾಡಿದೆ; ಬುಡಕಟ್ಟು ಸಮುದಾಯವು ಭಾರತದ ಸಂಸ್ಕೃತಿ ಮತ್ತು ಸ್ವಾತಂತ್ರ್ಯ ರಕ್ಷಿಸಲು ಶತಮಾನಗಳ ಹೋರಾಟವನ್ನು ಮುನ್ನಡೆಸಿದೆ: ಪ್ರಧಾನಮಂತ್ರಿ
ಪ್ರಧಾನಮಂತ್ರಿ ಜನ್ಮನ್ ಯೋಜನೆಯು ದೇಶದ ಅತ್ಯಂತ ಹಿಂದುಳಿದ ಬುಡಕಟ್ಟು ಸಮುದಾಯಗಳ ವಾಸಸ್ಥಳಗಳ ಅಭಿವೃದ್ಧಿಯನ್ನು ಖಾತ್ರಿಪಡಿಸುತ್ತಿದೆ: ಪ್ರಧಾನಮಂತ್ರಿ
ಭಾರತದ ಪ್ರಾಚೀನ ವೈದ್ಯಕೀಯ ವ್ಯವಸ್ಥೆಗೆ ಬುಡಕಟ್ಟು ಸಮುದಾಯ ಬಹುದೊಡ್ಡ ಕೊಡುಗೆ ನೀಡಿದೆ: ಪ್ರಧಾನಮಂತ್ರಿ
ನಮ್ಮ ಸರ್ಕಾರ ಬುಡಕಟ್ಟು ಸಮುದಾಯದ ಶಿಕ್ಷಣ, ಆದಾಯ ಮತ್ತು ವೈದ್ಯಕೀಯ ಆರೋಗ್ಯಕ್ಕೆ ಹೆಚ್ಚಿನ ಒತ್ತು ನೀಡಿದೆ: ಪ್ರಧಾನಮಂತ್ರಿ
ಲಾರ್ಡ್ ಬಿರ್ಸಾ ಮುಂಡಾ ಅವರ 150ನೇ ಜನ್ಮ ವಾರ್ಷಿಕೋತ್ಸವ ನೆನಪಿಗಾಗಿ, ದೇಶದ ಬುಡಕಟ್ಟು ಪ್ರಾಬಲ್ಯವಿರುವ ಜಿಲ್ಲೆಗಳಲ್ಲಿ ಬಿರ್ಸಾ ಮುಂಡಾ ಬುಡಕಟ್ಟು ಗೌರವ್ ಉಪವನಗಳನ್ನು ನಿರ್ಮಿಸಲಾಗುವುದು: ಪ್ರಧಾನಮಂತ್ರಿ

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಬಿಹಾರದ ಜಮುಯಿಯಲ್ಲಿಂದು ಜನಜಾತಿಯ ಗೌರವ್ ದಿವಸ್ ಅಂಗವಾಗಿ ಭಗವಾನ್ ಬಿರ್ಸಾ ಮುಂಡಾ ಅವರ 150ನೇ ಜನ್ಮ ವಾರ್ಷಿಕೋತ್ಸವಕ್ಕೆ ಚಾಲನೆ ನೀಡಿ, ಸುಮಾರು 6,640 ಕೋಟಿ ರೂಪಾಯಿ ಮೊತ್ತದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆ ನೆರವೇರಿಸಿದರು.

ಭಾರತದ ವಿವಿಧ ಜಿಲ್ಲೆಗಳಲ್ಲಿ ಆಯೋಜಿತವಾಗಿದ್ದ ಬುಡಕಟ್ಟು ದಿನಾಚರಣೆ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದ ವಿವಿಧ ರಾಜ್ಯಗಳ ರಾಜ್ಯಪಾಲರು, ಮುಖ್ಯಮಂತ್ರಿಗಳು, ಕೇಂದ್ರ ಸಚಿವರನ್ನು ಪ್ರಧಾನಮಂತ್ರಿ ಸ್ವಾಗತಿಸಿದರು. ಭಾರತದಾದ್ಯಂತ ಕಾರ್ಯಕ್ರಮಕ್ಕೆ ವಾಸ್ತವಿಕ(ವರ್ಚುವಲ್)ವಾಗಿ ಭಾಗವಹಿಸಿರುವ ಅಸಂಖ್ಯಾತ ಬುಡಕಟ್ಟು ಸಹೋದರರು ಮತ್ತು ಸಹೋದರಿಯರನ್ನು ಅವರು ಸ್ವಾಗತಿಸಿದರು. ಇಂದು ಅತ್ಯಂತ ಪವಿತ್ರ ದಿನ. ಕಾರ್ತಿಕ ಪೂರ್ಣಿಮೆ, ದೀಪಾವಳಿ ಮತ್ತು ಶ್ರೀ ಗುರುನಾನಕ್ ದೇವ್ ಜಿ ಅವರ 555ನೇ ಜನ್ಮದಿನವನ್ನು ಆಚರಿಸಲಾಗುತ್ತಿದೆ. ಅದಕ್ಕಾಗಿ ಭಾರತದ ನಾಗರಿಕರಿಗೆ ಶುಭಾಶಯಗಳನ್ನು ಕೋರುತ್ತೇನೆ. ಭಗವಾನ್ ಬಿರ್ಸಾ ಮುಂಡಾ ಅವರ ಜನ್ಮದಿನವನ್ನು ಜನಜಾತಿಯ ಗೌರವ್ ದಿವಸ್ ಎಂದು ಆಚರಿಸಲಾಗುತ್ತಿದ್ದು, ಇಂದು ನಾಗರಿಕರಿಗೆ ಐತಿಹಾಸಿಕ ದಿನವಾಗಿದೆ. ಭಾರತದ ನಾಗರಿಕರಿಗೆ ಮತ್ತು ಬುಡಕಟ್ಟು ಸಹೋದರ ಸಹೋದರಿಯರಿಗೆ ವಿಶೇಷವಾಗಿ ಶುಭಾಶಯಗಳನ್ನು ಕೋರುತ್ತೇನೆ. ಇಂದಿನ ಜನಜಾತಿಯ ಗೌರವ್ ದಿವಸ್‌ಗೆ ಪೂರ್ವಭಾವಿಯಾಗಿ ಜಮುಯಿಯಲ್ಲಿ ಕಳೆದ 3 ದಿನಗಳಿಂದ ಸ್ವಚ್ಛತಾ ಅಭಿಯಾನ ಹಮ್ಮಿಕೊಳ್ಳಲಾಗಿದೆ. ಸ್ವಚ್ಛತಾ ಅಭಿಯಾನದಲ್ಲಿ ಪಾಲ್ಗೊಂಡಿರುವ ಆಡಳಿತದ ವಿವಿಧ ಪಾಲುದಾರರು, ಜಮುಯಿ ನಾಗರಿಕರು ಮತ್ತು ವಿಶೇಷವಾಗಿ ಮಹಿಳಾ ಕಾರ್ಯಕರ್ತರನ್ನು ಪ್ರಧಾನಿ ಅಭಿನಂದಿಸಿದರು.

 

ಕಳೆದ ವರ್ಷದ ಜನಜಾತಿಯ ಗೌರವ್ ದಿವಸ್‌ ಕಾರ್ಯಕ್ರಮದಲ್ಲಿ ತಾವು ಧರ್ತಿ ಅಭಾ ಬಿರ್ಸಾ ಮುಂಡಾ ಅವರ ಜನ್ಮ ಗ್ರಾಮ ಉಲಿಹಾತುದಲ್ಲಿ ಇದ್ದುದ್ದನ್ನು ಸ್ಮರಿಸಿದ ಶ್ರೀ ಮೋದಿ, ಹುತಾತ್ಮ ಯೋಧ ತಿಲ್ಕಾ ಮಾಂಝಿ ಅವರ ಶೌರ್ಯಕ್ಕೆ ಸಾಕ್ಷಿಯಾದ ಈ ನೆಲದಲ್ಲಿ ತಾವು ಈ ವರ್ಷವೂ ಇಲ್ಲಿರುವ ಈ ಸಂದರ್ಭವು ದೇಶಕ್ಕೆ ಇನ್ನಷ್ಟು ವಿಶೇಷವಾಗಿದೆ. ಭಗವಾನ್ ಬಿರ್ಸಾ ಮುಂಡಾ ಅವರ 150ನೇ ಜನ್ಮ ವಾರ್ಷಿಕೋತ್ಸವ ಆರಂಭವನ್ನು ಇದು ಗುರುತಿಸುತ್ತಿದೆ. ಮುಂಬರುವ ವರ್ಷವೂ ಈ ಆಚರಣೆಗಳು ನಡೆಯಲಿವೆ. ಬಿಹಾರದ ಜಮುಯಿಯಲ್ಲಿ ನಡೆದ ಇಂದಿನ ಕಾರ್ಯಕ್ರಮದಲ್ಲಿ ಭಾಗವಹಿಸಿದ ವಿವಿಧ ಗ್ರಾಮಗಳ 1 ಕೋಟಿ ಜನರನ್ನು ಪ್ರಧಾನಿ ಅಭಿನಂದಿಸಿದರು. ಬಿರ್ಸಾ ಮುಂಡಾ ಅವರ ವಂಶಸ್ಥ ಶ್ರೀ ಬುಧಾರಾಮ್ ಮುಂಡಾ ಮತ್ತು ಸಿಧು ಕನ್ಹು ಅವರ ವಂಶಸ್ಥ ಶ್ರೀ ಮಂಡಲ್ ಮುರ್ಮು ಅವರನ್ನು ಇಂದು ಸ್ವಾಗತಿಸಲು ಸಂತೋಷವಾಗಿದೆ ಎಂದು ಮೋದಿ ಹೇಳಿದರು.

6,640 ಕೋಟಿ ರೂ.ಗಿಂತ ಹೆಚ್ಚಿನ ಮೊತ್ತದ ವಿವಿಧ ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಇಂದು ನೆರವೇರಿಸಲಾಗಿದೆ. ಆದಿವಾಸಿಗಳಿಗೆ ಪಕ್ಕಾ ಮನೆಗಳನ್ನು ಒದಗಿಸಲು ಸುಮಾರು 1.5 ಲಕ್ಷ ಅನುಮೋದನೆ ಪತ್ರಗಳನ್ನು ನೀಡಲಾಗಿದೆ. ಬುಡಕಟ್ಟು ಮಕ್ಕಳ ಭವಿಷ್ಯಕ್ಕಾಗಿ ಶಾಲೆಗಳು ಮತ್ತು ಹಾಸ್ಟೆಲ್‌ಗಳು, ಬುಡಕಟ್ಟು ಮಹಿಳೆಯರಿಗೆ ಆರೋಗ್ಯ ಸೌಲಭ್ಯಗಳು, ಬುಡಕಟ್ಟು ಪ್ರದೇಶಗಳನ್ನು ಸಂಪರ್ಕಿಸುವ ರಸ್ತೆ ಯೋಜನೆಗಳು, ಬುಡಕಟ್ಟು ಸಂಸ್ಕೃತಿ ಸಂರಕ್ಷಿಸಲು ಬುಡಕಟ್ಟು ವಸ್ತುಸಂಗ್ರಹಾಲಯಗಳು ಮತ್ತು ಸಂಶೋಧನಾ ಕೇಂದ್ರಗಳು ಈ ಯೋಜನೆಗಳಲ್ಲಿ ಸೇರಿವೆ. ದೇವ್ ದೀಪಾವಳಿಯ ಶುಭ ಸಂದರ್ಭದಲ್ಲಿ ಆದಿವಾಸಿಗಳಿಗಾಗಿ ನಿರ್ಮಿಸಲಾದ 11,000 ಮನೆಗಳಿಗೆ ಗೃಹ ಪ್ರವೇಶ ನೆರವೇರಿಸಲಾಗಿದೆ. ಇವೆಲ್ಲಾ ಯೋಜನೆಗಳಿಗಾಗಿ ಈ ಸಂದರ್ಭದಲ್ಲಿ ಎಲ್ಲ ಬುಡಕಟ್ಟು ಸಮುದಾಯಗಳನ್ನು ಪ್ರಧಾನಿ ಅಭಿನಂದಿಸಿದರು.

ಇಂದಿನ ಜನಜಾತಿಯ ಗೌರವ್ ದಿವಸ್ ಆಚರಣೆ ಮತ್ತು ಜನಜಾತಿಯ ಗೌರವ್ ವರ್ಷಕ್ಕೆ ಚಾಲನೆ ನೀಡಿದ ಶ್ರೀ ಮೋದಿ ಅವರು, ಈ ಆಚರಣೆಗಳು ಪ್ರಮುಖ ಐತಿಹಾಸಿಕ ಅನ್ಯಾಯವನ್ನು ಸರಿಪಡಿಸುವ ಪ್ರಾಮಾಣಿಕ ಪ್ರಯತ್ನವನ್ನು ಗುರುತಿಸಿವೆ. ಸ್ವಾತಂತ್ರ್ಯಾ ನಂತರದ ಅವಧಿಯಲ್ಲಿ ಆದಿವಾಸಿಗಳಿಗೆ ಸಮಾಜದಲ್ಲಿ ಸೂಕ್ತ ಮನ್ನಣೆ ದೊರೆತಿಲ್ಲ. ಬುಡಕಟ್ಟು ಸಮುದಾಯದ ಕೊಡುಗೆಗಳನ್ನು ಎತ್ತಿ ಹಿಡಿದ ಪ್ರಧಾನಮಂತ್ರಿ, ಬುಡಕಟ್ಟು ಸಮುದಾಯವೇ ರಾಜಕುಮಾರ ರಾಮನನ್ನು ಶ್ರೀರಾಮನನ್ನಾಗಿ ಪರಿವರ್ತಿಸಿವೆ. ಭಾರತದ ಸಂಸ್ಕೃತಿ ಮತ್ತು ಸ್ವಾತಂತ್ರ್ಯ ರಕ್ಷಿಸಲು ಶತಮಾನಗಳ ಹೋರಾಟವನ್ನು ಮುನ್ನಡೆಸಿವೆ. ಆದಾಗ್ಯೂ, ಸ್ವಾತಂತ್ರ್ಯದ ನಂತರದ ದಶಕಗಳಲ್ಲಿ ಸ್ವಾರ್ಥ ರಾಜಕಾರಣದಿಂದ ಉತ್ತೇಜಿತವಾದ ಜನರು, ಬುಡಕಟ್ಟು ಸಮುದಾಯದ ಇಂತಹ ಪ್ರಮುಖ ಕೊಡುಗೆಗಳನ್ನು ಅಳಿಸಿಹಾಕುವ ಪ್ರಯತ್ನಗಳನ್ನು ಮಾಡಿದರು. ಉಲ್ಗುಲನ್ ಚಳವಳಿ, ಕೋಲ್ ಬಂಡಾಯ, ಸಂತಾಲ್ ದಂಗೆ, ಭಿಲ್ ಚಳವಳಿಯಂತಹ ಭಾರತದ ಸ್ವಾತಂತ್ರ್ಯಕ್ಕಾಗಿ ಆದಿವಾಸಿಗಳು(ಬುಡಕಟ್ಟು ಜನಾಂಗ) ನೀಡಿರುವ  ವಿವಿಧ ಕೊಡುಗೆಗಳನ್ನು ಪಟ್ಟಿ ಮಾಡಿದ ಮೋದಿ, ಆದಿವಾಸಿಗಳ ಕೊಡುಗೆ ಅಪಾರವಾಗಿದೆ. ಅಲ್ಲೂರಿ ಸೀತಾರಾಮ ರಾಜು, ತಿಲ್ಕಾ ಮಾಂಝಿ, ಸಿಧು ಕನ್ಹು, ಬುಧು ಭಗತ್, ತೆಲಂಗ್ ಖರಿಯಾ, ಗೋವಿಂದ ಗುರು, ತೆಲಂಗಾಣದ ರಾಮ್‌ಜಿ ಗೊಂಡ್, ಮಧ್ಯಪ್ರದೇಶದ ಬಾದಲ್ ಭೋಯ್, ರಾಜಾ ಶಂಕರ್ ಶಾ, ಕುವರ್ ರಘುನಾಥ್ ಷಾ, ತಾಂತ್ಯ ಭಿಲ್, ಜಾತ್ರಾ ಅವರಂತಹ ಭಾರತದ ವಿವಿಧ ಬುಡಕಟ್ಟು ನಾಯಕರು, ಭಗತ್, ಲಕ್ಷ್ಮಣ್ ನಾಯ್ಕ್, ಮಿಜೋರಾಂನ ರೊಪುಲಿಯಾನಿ, ರಾಜ್ ಮೋಹಿನಿದೇವಿ, ರಾಣಿ ಗೈಡಿನ್ಲಿಯು, ಕಾಳಿಬಾಯಿ, ಗೊಂಡ್ವಾನಾದ ರಾಣಿ ದುರ್ಗಾವತಿ ದೇವಿ ಮತ್ತು ಇತರೆ ಹಲವಾರು ನಾಯಕರನ್ನು ಎಂದಿಗೂ ಮರೆಯಲು ಸಾಧ್ಯವಿಲ್ಲ. ಬ್ರಿಟಿಷರು ಸಾವಿರಾರು ಆದಿವಾಸಿಗಳನ್ನು ಕೊಂದ ಮಂಗರ್ ಹತ್ಯಾಕಾಂಡವನ್ನು ಮರೆಯಲು ಸಾಧ್ಯವಿಲ್ಲ ಎಂದು ಮೋದಿ ಹೇಳಿದರು.

 

ತಮ್ಮ ಸರ್ಕಾರದ ಮನಸ್ಥಿತಿಯು ಸಂಸ್ಕೃತಿ ಅಥವಾ ಸಾಮಾಜಿಕ ನ್ಯಾಯ ಕ್ಷೇತ್ರದಲ್ಲಿ ವಿಭಿನ್ನವಾಗಿದೆ. ಶ್ರೀಮತಿ ದ್ರೌಪದಿ ಮುರ್ಮು ಅವರನ್ನು ಭಾರತದ ರಾಷ್ಟ್ರಪತಿಯಾಗಿ ಆಯ್ಕೆ ಮಾಡಿದ್ದು ತಮ್ಮ ಅದೃಷ್ಟ. ಅವರು ಭಾರತದ ಮೊದಲ ಬುಡಕಟ್ಟು ಸಮುದಾಯ(ಆದಿವಾಸಿ)ದ ರಾಷ್ಟ್ರಪತಿ ಆಗಿದ್ದಾರೆ. ಪಿಎಂ-ಜನ್ಮನ್ ಯೋಜನೆಯಡಿ ಪ್ರಾರಂಭಿಸಿದ ಎಲ್ಲಾ ಕಾರ್ಯಗಳ ಶ್ರೇಯಸ್ಸು ರಾಷ್ಟ್ರಪತಿ ಅವರಿಗೆ ಸಲ್ಲುತ್ತದೆ. ವಿಶೇಷವಾಗಿ ದುರ್ಬಲ ಬುಡಕಟ್ಟು ಗುಂಪುಗಳ(ಪಿವಿಟಿಜಿ) ಸಬಲೀಕರಣಕ್ಕಾಗಿ 24,000 ಕೋಟಿ ರೂ. ಮೊತ್ತದ ಪ್ರಧಾನಮಂತ್ರಿ ಜನ್ಮನ್ ಯೋಜನೆ ಪ್ರಾರಂಭಿಸಲಾಗಿದೆ. ಈ ಯೋಜನೆಯಡಿ, ದೇಶದ ಅತ್ಯಂತ ಹಿಂದುಳಿದ ಬುಡಕಟ್ಟುಗಳ ವಾಸಸ್ಥಳಗಳ ಅಭಿವೃದ್ಧಿಯನ್ನು ಖಾತ್ರಿಪಡಿಸಲಾಗುತ್ತಿದೆ. ಈ ಯೋಜನೆ ಇಂದಿಗೆ ಒಂದು ವರ್ಷ ಪೂರೈಸಿದ್ದು, ಈ ಯೋಜನೆಯಡಿ ಸಾವಿರಾರು ಪಕ್ಕಾ ಮನೆಗಳನ್ನು ಪಿವಿಟಿಜಿಗಳಿಗೆ ನೀಡಲಾಗಿದೆ. ಪಿವಿಟಿಜಿ ವಾಸಸ್ಥಲಗಳ ನಡುವೆ ಸಂಪರ್ಕ ಖಚಿತಪಡಿಸಿಕೊಳ್ಳಲು ರಸ್ತೆ ಅಭಿವೃದ್ಧಿ ಯೋಜನೆಗಳು ಪ್ರಗತಿಯಲ್ಲಿವೆ,  ದುರ್ಬಲ ಬುಡಕಟ್ಟು ಗುಂಪುಗಳ ಅನೇಕ ಮನೆಗಳಲ್ಲಿ ಹರ್ ಘರ್ ಜಲ್ ಯೋಜನೆಯಡಿ ಕುಡಿಯುವ ನೀರು ಖಾತ್ರಿಪಡಿಸಲಾಗಿದೆ ಎಂದು ಪ್ರಧಾನಿ ತಿಳಿಸಿದರು.

ಸಂಪೂರ್ಣವಾಗಿ ನಿರ್ಲಕ್ಷಿಸಲ್ಪಟ್ಟವರನ್ನು ತಾನು ಆರಾಧಿಸುತ್ತೇನೆ ಎಂದು ತಿಳಿಸಿದ ಶ್ರೀ ಮೋದಿ, ಹಿಂದಿನ ಸರ್ಕಾರಗಳ ಧೋರಣೆಗಳಿಂದಾಗಿ ಬುಡಕಟ್ಟು ಸಮುದಾಯಗಳು ದಶಕಗಳಿಂದ ಮೂಲಸೌಕರ್ಯಗಳ ಕೊರತೆ ಎದುರಿಸುತ್ತಿವೆ. ದೇಶದಲ್ಲಿ ಬುಡಕಟ್ಟು ಸಮುದಾಯಗಳ ಪ್ರಾಬಲ್ಯವಿರುವ ಹತ್ತಾರು ಜಿಲ್ಲೆಗಳು ಅಭಿವೃದ್ಧಿಯ ವೇಗದಲ್ಲಿ ಹಿಂದುಳಿದಿವೆ. ತಮ್ಮ ಸರ್ಕಾರವು ಚಿಂತನೆಯ ಪ್ರಕ್ರಿಯೆಯನ್ನು ಬದಲಾಯಿಸಿ, ಅವುಗಳನ್ನು 'ಆಕಾಂಕ್ಷೆಯ ಜಿಲ್ಲೆಗಳು' ಎಂದು ಘೋಷಿಸಿದೆ, ಅವುಗಳ ಅಭಿವೃದ್ಧಿಗಾಗಿ ದಕ್ಷ ಅಧಿಕಾರಿಗಳನ್ನು ನಿಯೋಜಿಸಿದೆ. ಇಂದು ಇಂತಹ ಅನೇಕ ಮಹತ್ವಾಕಾಂಕ್ಷೆಯ ಜಿಲ್ಲೆಗಳು ವಿವಿಧ ಅಭಿವೃದ್ಧಿಯ ಮಾನದಂಡಗಳಲ್ಲಿ ಅಭಿವೃದ್ಧಿ ಹೊಂದಿದ ಹಲವು ಜಿಲ್ಲೆಗಳಿಗಿಂತ ಉತ್ತಮವಾಗಿದೆ, ಇದರ ಲಾಭ ಆದಿವಾಸಿಗಳಿಗೆ ಲಭಿಸಿದೆ ಎಂದು ಅವರು ಸಂತಸ ವ್ಯಕ್ತಪಡಿಸಿದರು.

 

"ಬುಡಕಟ್ಟು ಸಮುದಾಯಗಳ ಕಲ್ಯಾಣ ಯಾವಾಗಲೂ ನಮ್ಮ ಸರ್ಕಾರದ ಆದ್ಯತೆಯಾಗಿದೆ". ಬುಡಕಟ್ಟು ವ್ಯವಹಾರಗಳಿಗಾಗಿ ಪ್ರತ್ಯೇಕ ಸಚಿವಾಲಯ ಸ್ಥಾಪಿಸಿದ್ದು ಅಟಲ್ ಜಿ ಅವರ ಸರ್ಕಾರ. ಕಳೆದ 10 ವರ್ಷಗಳಲ್ಲಿ ಬಜೆಟ್ ಹಂಚಿಕೆಯನ್ನು 25,000 ಕೋಟಿ ರೂ.ಗಳಿಂದ 1.25 ಲಕ್ಷ ಕೋಟಿ ರೂ.ಗಳಿಗೆ 5 ಪಟ್ಟು ಹೆಚ್ಚಿಸಲಾಗಿದೆ. 60,000 ಕ್ಕೂ ಹೆಚ್ಚು ಬುಡಕಟ್ಟು ಹಳ್ಳಿಗಳಿಗೆ ಅನುಕೂಲವಾಗುವಂತೆ ಧರ್ತಿ ಅಭಾ ಜನಜಾತಿಯ ಗ್ರಾಮ ಉತ್ಕರ್ಷ್ ಅಭಿಯಾನ(ಡಿಎಜೆಜಿಯುಎ) ಎಂಬ ವಿಶೇಷ ಯೋಜನೆಯನ್ನು ಇತ್ತೀಚೆಗೆ ಪ್ರಾರಂಭಿಸಲಾಗಿದೆ. 80,000 ಕೋಟಿ ರೂ. ಗಳನ್ನು ಈ ಯೋಜನೆ ಮೂಲಕ ಹೂಡಿಕೆ ಮಾಡಲಾಗುತ್ತಿದೆ, ಇದು ಬುಡಕಟ್ಟು ಸಮುದಾಯಗಳಿರುವ ಹಳ್ಳಿಗಳಲ್ಲಿ ಮೂಲ ಸೌಕರ್ಯ ಲಭ್ಯತೆಯನ್ನು ಖಾತರಿಪಡಿಸುವುದರ ಜತೆಗೆ, ಉದ್ಯೋಗಾವಕಾಶಗಳನ್ನು ಸೃಷ್ಟಿಸುವುದು ಮತ್ತು ಬುಡಕಟ್ಟು ಸಮುದಾಯದ ಯುವಕರಿಗೆ ತರಬೇತಿ ನೀಡುವ ಗುರಿ ಹೊಂದಿದೆ. ಯೋಜನೆಯ ಭಾಗವಾಗಿ ಹೋಂಸ್ಟೇಗಳನ್ನು ರಚಿಸಲು ತರಬೇತಿ ಮತ್ತು ಬೆಂಬಲದೊಂದಿಗೆ ಬುಡಕಟ್ಟು ಮಾರುಕಟ್ಟೆ ಕೇಂದ್ರಗಳನ್ನು ಸ್ಥಾಪಿಸಲಾಗುವುದು. ಇದು ಪ್ರವಾಸೋದ್ಯಮವನ್ನು ಬಲಪಡಿಸುತ್ತದೆ ಮತ್ತು ಬುಡಕಟ್ಟು ಸಮುದಾಯಗಳು ಪ್ರಾಬಲ್ಯವಿರುವ ಪ್ರದೇಶಗಳಲ್ಲಿ ಪರಿಸರ ಪ್ರವಾಸೋದ್ಯಮವನ್ನು ಒಂದು ಸಾಧ್ಯತೆಯನ್ನಾಗಿ ಮಾಡುತ್ತದೆ, ಇದು ಆದಿವಾಸಿಗಳ ವಲಸೆಯನ್ನು ತಡೆಯುತ್ತದೆ.

ಬುಡಕಟ್ಟು ಜನಾಂಗದ ಪರಂಪರೆ ಸಂರಕ್ಷಿಸಲು ಸರ್ಕಾರ ಕೈಗೊಂಡಿರುವ ಪ್ರಯತ್ನಗಳನ್ನು ಪ್ರಸ್ತಾಪಿಸಿದ ಮೋದಿ, ಅನೇಕ ಬುಡಕಟ್ಟು ಕಲಾವಿದರಿಗೆ ಪದ್ಮ ಪ್ರಶಸ್ತಿಗಳನ್ನು ನೀಡಲಾಗಿದೆ. ಭಗವಾನ್ ಬಿರ್ಸಾ ಮುಂಡಾ ಅವರ ಹೆಸರಿನಲ್ಲಿ ಬುಡಕಟ್ಟು ವಸ್ತುಸಂಗ್ರಹಾಲಯವನ್ನು ರಾಂಚಿಯಲ್ಲಿ ಪ್ರಾರಂಭಿಸಲಾಗಿದೆ. ಎಲ್ಲಾ ಶಾಲಾ ಮಕ್ಕಳು ಅಲ್ಲಿಗೆ ಭೇಟಿ ನೀಡಿ ಅಧ್ಯಯನ ಮಾಡಬೇಕು ಎಂದು ಒತ್ತಾಯಿಸಿದರು. ಮಧ್ಯಪ್ರದೇಶದ ಚಿಂದ್ವಾರದಲ್ಲಿ ಬಾದಲ್ ಭೋಯ್ ಅವರ ಹೆಸರಿನಲ್ಲಿ ಬುಡಕಟ್ಟು ವಸ್ತುಸಂಗ್ರಹಾಲಯ ಮತ್ತು ಮಧ್ಯಪ್ರದೇಶದ ಜಬಲ್‌ಪುರದಲ್ಲಿ ರಾಜಾ ಶಂಕರ್ ಶಾ ಮತ್ತು ಕುವರ್ ರಘುನಾಥ್ ಶಾ ಅವರ ಹೆಸರಿನಲ್ಲಿ ಬುಡಕಟ್ಟು ವಸ್ತುಸಂಗ್ರಹಾಲಯಗಳನ್ನು ಇಂದು ಉದ್ಘಾಟಿಸಲಾಗಿದೆ. ಶ್ರೀನಗರ ಮತ್ತು ಸಿಕ್ಕಿಂನಲ್ಲಿ ಇಂದು ಭಗವಾನ್ ಬಿರ್ಸಾ ಮುಂಡಾ ಅವರ ಗೌರವ ಸ್ಮರಣಾರ್ಥ ನಾಣ್ಯ ಮತ್ತು ಅಂಚೆ ಚೀಟಿ ಅನಾವರಣಗೊಳಿಸುವುದರೊಂದಿಗೆ 2 ಬುಡಕಟ್ಟು ಸಂಶೋಧನಾ ಕೇಂದ್ರಗಳನ್ನು ಇಂದು ಉದ್ಘಾಟಿಸಲಾಗಿದೆ. ಈ ಎಲ್ಲಾ ಪ್ರಯತ್ನಗಳು ಬುಡಕಟ್ಟು ಜನಾಂಗದವರ ಶೌರ್ಯ ಮತ್ತು ಗೌರವದ ಬಗ್ಗೆ ಭಾರತದ ಜನರಿಗೆ ನಿರಂತರವಾಗಿ ನೆನಪಿಸುತ್ತವೆ ಎಂದರು.

ಭಾರತದ ಪ್ರಾಚೀನ ವೈದ್ಯಕೀಯ ವ್ಯವಸ್ಥೆಯಲ್ಲಿ ಬುಡಕಟ್ಟು ಸಮಾಜದ ಮಹತ್ತರ ಕೊಡುಗೆ ಪ್ರಸ್ತಾಪಿಸಿದ ಮೋದಿ, ಮುಂದಿನ ಪೀಳಿಗೆಗೆ ಹೊಸ ಆಯಾಮಗಳನ್ನು ಸೇರಿಸುವುದರೊಂದಿಗೆ ಈ ಪರಂಪರೆಯನ್ನು ಸಹ ರಕ್ಷಿಸಲಾಗುತ್ತಿದೆ. ಸರ್ಕಾರವು ಲೇಹ್‌ನಲ್ಲಿ ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಸೋವಾ-ರಿಗ್ಪಾ ಸ್ಥಾಪಿಸಿದೆ, ಅರುಣಾಚಲ ಪ್ರದೇಶದಲ್ಲಿ ಆಯುರ್ವೇದ ಮತ್ತು ಜಾನಪದ ಔಷಧ ಸಂಶೋಧನೆಯ ಈಶಾನ್ಯ ಸಂಸ್ಥೆಯನ್ನು ಮೇಲ್ದರ್ಜೆಗೇರಿಸಿದೆ. ವಿಶ್ವ ಆರೋಗ್ಯ ಸಂಘಟನೆ ಆಶ್ರಯದಲ್ಲಿ ಸಾಂಪ್ರದಾಯಿಕ ಔಷಧಗಳ ಜಾಗತಿಕ ಕೇಂದ್ರವನ್ನು ಸರ್ಕಾರ ಸ್ಥಾಪಿಸುತ್ತಿದೆ. ಇದು ಪ್ರಪಂಚದಾದ್ಯಂತ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಔಷಧ ವ್ಯವಸ್ಥೆಯನ್ನು ಮತ್ತಷ್ಟು ಪ್ರಚಾರ ಮಾಡಲು ಇದುಸಹಾಯ ಮಾಡುತ್ತದೆ.

 

"ನಮ್ಮ ಸರ್ಕಾರದ ಗಮನವು ಬುಡಕಟ್ಟು ಸಮಾಜದ ಶಿಕ್ಷಣ, ಆದಾಯ ಮತ್ತು ಔಷಧದ ಮೇಲೆ ಕೇಂದ್ರೀಕೃತವಾಗಿದೆ". ಬುಡಕಟ್ಟು ಜನಾಂಗದ ಮಕ್ಕಳು ವೈದ್ಯಕೀಯ, ಎಂಜಿನಿಯರಿಂಗ್, ಸಶಸ್ತ್ರ ಪಡೆ ಅಥವಾ ವಾಯುಯಾನದಂತಹ ವಿವಿಧ ಕ್ಷೇತ್ರಗಳಲ್ಲಿ ಮುಂದೆ ಬರುತ್ತಿದ್ದಾರೆ. ಇದು, ಬುಡಕಟ್ಟು ಪ್ರದೇಶಗಳಲ್ಲಿ ಕಳೆದ ದಶಕದಲ್ಲಿ ಶಾಲೆಯಿಂದ ಉನ್ನತ ಶಿಕ್ಷಣದವರೆಗೆ ಉತ್ತಮ ಭವಿಷ್ಯ ಸೃಷ್ಟಿಸಿದ ಪರಿಣಾಮವಾಗಿದೆ.  ಸ್ವಾತಂತ್ರ್ಯಾನಂತರದ 6 ದಶಕಗಳ ಅವಧಿಯಲ್ಲಿ ಸ್ಥಾಪಿಸಿದ ಏಕೈಕ ಕೇಂದ್ರೀಯ ಬುಡಕಟ್ಟು ವಿಶ್ವವಿದ್ಯಾಲಯಕ್ಕೆ ಬದಲಾಗಿ, ಕಳೆದ ದಶಕದಲ್ಲಿ ತಮ್ಮ ಸರ್ಕಾರವು 2 ಹೊಸ ಬುಡಕಟ್ಟು ವಿಶ್ವವಿದ್ಯಾಲಯಗಳನ್ನು ಸೇರಿಸಿದೆ. ಕಳೆದ ದಶಕದಲ್ಲಿ ಬುಡಕಟ್ಟು ಪ್ರಾಬಲ್ಯವಿರುವ ಪ್ರದೇಶಗಳಲ್ಲಿ ಕೈಗಾರಿಕಾ ತರಬೇತಿ ಸಂಸ್ಥೆಗಳೊಂದಿಗೆ(ಐಟಿಐ) ಅನೇಕ ಪದವಿ ಮತ್ತು ಎಂಜಿನಿಯರಿಂಗ್ ಕಾಲೇಜುಗಳನ್ನು ಪ್ರಾರಂಭಿಸಲಾಗಿದೆ. ಕಳೆದ ದಶಕದಲ್ಲಿ ಬಿಹಾರದ ಜಮುಯಿ ಸೇರಿದಂತೆ ಹಲವು ಹೊಸ ವೈದ್ಯಕೀಯ ಕಾಲೇಜುಗಳಲ್ಲಿ ನಡೆಯುತ್ತಿರುವ ಕಾಮಗಾರಿಗಳ ಜೊತೆಗೆ ಬುಡಕಟ್ಟು ಪ್ರದೇಶಗಳಲ್ಲಿ 30 ಹೊಸ ವೈದ್ಯಕೀಯ ಕಾಲೇಜುಗಳನ್ನು ಪ್ರಾರಂಭಿಸಲಾಗಿದೆ. ದೇಶಾದ್ಯಂತ 7,000 ಏಕಲವ್ಯ ಶಾಲೆಗಳ ಪ್ರಬಲ ಜಾಲವನ್ನು ಅಭಿವೃದ್ಧಿಪಡಿಸಲಾಗುತ್ತಿದೆ ಎಂದು ಪ್ರಧಾನಿ ಹೇಳಿದರು.

ವೈದ್ಯಕೀಯ, ಎಂಜಿನಿಯರಿಂಗ್ ಮತ್ತು ತಾಂತ್ರಿಕ ಶಿಕ್ಷಣದಲ್ಲಿ ಬುಡಕಟ್ಟು ಸಮುದಾಯದ ವಿದ್ಯಾರ್ಥಿಗಳಿಗೆ ಭಾಷೆ ಅಡ್ಡಿಯಾಗಿರುವುದನ್ನು ಮನಗಂಡು, ನಮ್ಮ ಸರ್ಕಾರವು ಮಾತೃಭಾಷೆಯಲ್ಲಿ ಪರೀಕ್ಷೆಗಳನ್ನು ತೆಗೆದುಕೊಳ್ಳುವ ಆಯ್ಕೆಯನ್ನು ಒದಗಿಸಿದೆ. ಈ ನಿರ್ಧಾರಗಳು ಬುಡಕಟ್ಟು ಸಮುದಾಯದ ವಿದ್ಯಾರ್ಥಿಗಳಲ್ಲಿ ಹೊಸ ಭರವಸೆ ಮೂಡಿಸಿವೆ ಎಂದರು.

ಕಳೆದ ದಶಕದಲ್ಲಿ ಬುಡಕಟ್ಟು ಸಮುದಾಯಗಳ ಯುವಕರು ಅಂತಾರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ಪದಕಗಳನ್ನು ಗೆದ್ದ ಸಾಧನೆಗಳನ್ನು ಮಾಡಿದ್ದಾರೆ. ಈ ನಿಟ್ಟಿನಲ್ಲಿ ಬುಡಕಟ್ಟು ಪ್ರದೇಶಗಳಲ್ಲಿ ಕ್ರೀಡಾ ಮೂಲಸೌಕರ್ಯ ಸುಧಾರಿಸಲು ಸರ್ಕಾರವು ಪ್ರಯತ್ನಗಳನ್ನು ಕೈಗೊಂಡಿದೆ. ಆದಿವಾಸಿಗಳ ಪ್ರಾಬಲ್ಯವಿರುವ ಪ್ರದೇಶಗಳಲ್ಲಿ ಖೇಲೋ ಇಂಡಿಯಾ ಅಭಿಯಾನದ ಭಾಗವಾಗಿ ಆಧುನಿಕ ಆಟದ ಮೈದಾನಗಳು, ಕ್ರೀಡಾ ಸಂಕೀರ್ಣಗಳನ್ನು ಅಭಿವೃದ್ಧಿಪಡಿಸಲಾಗುತ್ತಿದೆ. ಭಾರತದ ಮೊದಲ ರಾಷ್ಟ್ರೀಯ ಕ್ರೀಡಾ ವಿಶ್ವವಿದ್ಯಾಲಯವನ್ನು ಮಣಿಪುರದಲ್ಲಿ ಪ್ರಾರಂಭಿಸಲಾಗಿದೆ ಎಂದರು.

ಸ್ವಾತಂತ್ರ್ಯದ 70 ವರ್ಷಗಳ ನಂತರವೂ ಬಿದಿರಿಗೆ ಸಂಬಂಧಿಸಿದ ಬಿಗಿ ಕಾನೂನುಗಳು ಬುಡಕಟ್ಟು ಸಮಾಜಕ್ಕೆ ಭಾರಿ ತೊಂದರೆಗಳನ್ನು ಉಂಟುಮಾಡಿದವು. ಈ ನಿಟ್ಟಿನಲ್ಲಿ ತಮ್ಮ ಸರ್ಕಾರವು ಬಿದಿರು ಕೃಷಿಗೆ ಸಂಬಂಧಿಸಿದ ಕಾನೂನುಗಳನ್ನು ಸರಾಗಗೊಳಿಸಿದೆ. ಈ ಹಿಂದೆ 8-10 ಅರಣ್ಯ ಉತ್ಪನ್ನಗಳಿಗೆ ಹೋಲಿಸಿದರೆ ಸುಮಾರು 90 ಅರಣ್ಯ ಉತ್ಪನ್ನಗಳನ್ನು ಕನಿಷ್ಠ ಬೆಂಬಲ ಬೆಲೆ(ಎಂಎಸ್ಪಿ) ಅಡಿ ತರಲಾಗಿದೆ. ಭಾರತದಲ್ಲಿ ಇಂದು 4,000ಕ್ಕೂ ಹೆಚ್ಚು ವನ್ ಧನ್ ಕೇಂದ್ರಗಳು ಕಾರ್ಯ ನಿರ್ವಹಿಸುತ್ತಿದ್ದು, ಸುಮಾರು 12 ಲಕ್ಷ ಬುಡಕಟ್ಟು ರೈತರಿಗೆ ಸಹಾಯ ಮಾಡುತ್ತಿವೆ ಎಂದರು.

 

"ಯೋಜನೆಯ ಪ್ರಾರಂಭದಿಂದ ಸುಮಾರು 20 ಲಕ್ಷ ಬುಡಕಟ್ಟು ಮಹಿಳೆಯರು ಲಖ್ಪತಿ ದೀದಿಗಳಾಗಿದ್ದಾರೆ". ಬುಟ್ಟಿಗಳು, ಆಟಿಕೆಗಳು ಮತ್ತು ಇತರ ಕರಕುಶಲ ವಸ್ತುಗಳಂತಹ ಬುಡಕಟ್ಟು ಉತ್ಪನ್ನಗಳ ಮಾರಾಟಕ್ಕೆ ಪ್ರಮುಖ ನಗರಗಳಲ್ಲಿ ಟ್ರೈಬಲ್ ಹಾಟ್‌ಗಳನ್ನು ಸ್ಥಾಪಿಸಲಾಗುತ್ತಿದೆ. ಬುಡಕಟ್ಟು ಕರಕುಶಲ ಉತ್ಪನ್ನಗಳಿಗೆ ಅಂತರ್ಜಾಲದಲ್ಲಿ ಜಾಗತಿಕ ಮಾರುಕಟ್ಟೆ ರೂಪಿಸಲಾಗುತ್ತಿದೆ. ನಾನು ಅಂತಾರಾಷ್ಟ್ರೀಯ ನಾಯಕರು ಮತ್ತು ಗಣ್ಯರನ್ನು ಭೇಟಿಯಾದಾಗ ಸೊಹ್ರಾಯ್ ಪೇಂಟಿಂಗ್, ವಾರ್ಲಿ ಪೇಂಟಿಂಗ್, ಗೊಂಡ್ ಪೇಂಟಿಂಗ್‌ನಂತಹ ಬುಡಕಟ್ಟು ಉತ್ಪನ್ನಗಳು ಮತ್ತು ಕಲಾಕೃತಿಗಳನ್ನು ನೀಡುತ್ತೇನೆ ಎಂದು ಅವರು ಹೇಳಿದರು.

ಬುಡಕಟ್ಟು ಸಮುದಾಯಗಳಿಗೆ ಕುಡುಗೋಲು ಜೀವಕೋಶದ ರಕ್ತಹೀನತೆ(ಸಿಕಲ್ ಸೆಲ್ ಅನೀಮಿಯಾ) ದೊಡ್ಡ ಸವಾಲಾಗಿದೆ. ಇದಕ್ಕಾಗಿಸರ್ಕಾರವು ರಾಷ್ಟ್ರೀಯ ಸಿಕಲ್ ಸೆಲ್ ಅನೀಮಿಯಾ ಮಿಷನ್ ಪ್ರಾರಂಭಿಸಿದೆ. ಕಾರ್ಯಾಚರಣೆಯ ಒಂದು ವರ್ಷದಲ್ಲಿ, 4.5 ಕೋಟಿ ಬುಡಕಟ್ಟು ಜನಾಂಗದವರನ್ನು ಪರೀಕ್ಷಿಸಲಾಯಿತು. ಆಯುಷ್ಮಾನ್ ಆರೋಗ್ಯ ಮಂದಿರಗಳನ್ನು ಅಭಿವೃದ್ಧಿಪಡಿಸಲಾಗಿದೆ. ಆದ್ದರಿಂದ ಆದಿವಾಸಿಗಳು ತಪಾಸಣೆಗೆ ಹೆಚ್ಚು ದೂರ ಹೋಗಬೇಕಾಗಿಲ್, ದುರ್ಗಮ ಬುಡಕಟ್ಟು ಪ್ರದೇಶಗಳಲ್ಲಿ ಸಂಚಾರಿ ವೈದ್ಯಕೀಯ ಘಟಕಗಳನ್ನು ಸ್ಥಾಪಿಸಲಾಗಿದೆ ಎಂದರು.

ಹವಾಮಾನ ಬದಲಾವಣೆ ವಿರುದ್ಧದ ಹೋರಾಟದಲ್ಲಿ ವಿಶ್ವದಲ್ಲೇ ಭಾರತದ ಪ್ರಮುಖ ಪಾತ್ರ ವಹಿಸಿದೆ. ಇದು ನಮ್ಮ ಆಲೋಚನೆಗಳ ಮೂಲವಾದ ಬುಡಕಟ್ಟು ಸಮುದಾಯಗಳು ಕಲಿಸಿದ ಮೌಲ್ಯಗಳೇ ಕಾರಣ. ಬುಡಕಟ್ಟು ಸಮಾಜಗಳು ಪ್ರಕೃತಿಯನ್ನು ಪೂಜಿಸುತ್ತವೆ. ಭಗವಾನ್ ಬಿರ್ಸಾ ಮುಂಡಾ ಅವರ 150ನೇ ಜನ್ಮ ವಾರ್ಷಿಕೋತ್ಸವ ವೀಕ್ಷಿಸಲು ಬುಡಕಟ್ಟು ಜನರು ಪ್ರಾಬಲ್ಯವಿರುವ ಪ್ರದೇಶಗಳಲ್ಲಿ ಬಿರ್ಸಾ ಮುಂಡಾ ಜನಜಾತಿಯ ಉಪವನಗಳನ್ನು ಬೆಳೆಸುವುದಾಗಿ ಮೋದಿ ಘೋಷಿಸಿದರು. ಉಪವನಗಳಲ್ಲಿ 500 ಸಾವಿರ ಗಿಡಗಳನ್ನು ನೆಡಲಾಗುವುದು ಎಂದರು.

 

ಭಗವಾನ್ ಬಿರ್ಸಾ ಮುಂಡಾ ಅವರ ಜನ್ಮದಿನವು ದೊಡ್ಡ ಸಂಕಲ್ಪಗಳನ್ನು ಮಾಡಲು ನಮಗೆ ಸ್ಫೂರ್ತಿ ನೀಡುತ್ತದೆ. ನವ ಭಾರತ ನಿರ್ಮಾಣಕ್ಕೆ ಬುಡಕಟ್ಟು ಸಮುದಾಯಗಳ ವಿಚಾರಗಳನ್ನು ಆಧಾರವಾಗಿಸಲು, ಬುಡಕಟ್ಟು ಪರಂಪರೆ ಸಂರಕ್ಷಿಸಲು, ಬುಡಕಟ್ಟು ಸಮಾಜವು ಶತಮಾನಗಳಿಂದ ಸಂರಕ್ಷಿಸಲ್ಪಟ್ಟಿರುವುದನ್ನು ಕಲಿಯಲು, ಬಲಿಷ್ಠ, ಸಮೃದ್ಧ ಮತ್ತು ಶಕ್ತಿಯುತ ಭಾರತದ ನಿರ್ಮಾಣವನ್ನು ಖಚಿತಪಡಿಸಿಕೊಳ್ಳಲು ಜನರು ಒಟ್ಟಾಗಿ ಕೆಲಸ ಮಾಡಬೇಕು ಎಂದು ಕರೆ ನೀಡಿ, ತಮ್ಮ ಭಾಷಣ ಮುಕ್ತಾಯಗೊಳಿಸಿದರು.

ಬಿಹಾರದ ರಾಜ್ಯಪಾಲ ಶ್ರೀ ರಾಜೇಂದ್ರ ಅರ್ಲೇಕರ್, ಬಿಹಾರದ ಮುಖ್ಯಮಂತ್ರಿ, ಶ್ರೀ ನಿತೀಶ್ ಕುಮಾರ್, ಬುಡಕಟ್ಟು ವ್ಯವಹಾರಗಳ ಕೇಂದ್ರ ಸಚಿವ ಶ್ರೀ ಜುಯಲ್ ಓರಂ, ಕೇಂದ್ರ ಎಂಎಸ್ಎಂಇ ಸಚಿವ ಶ್ರೀ ಜಿತನ್ ರಾಮ್ ಮಾಂಝಿ, ಕೇಂದ್ರ ಜವಳಿ ಸಚಿವ ಶ್ರೀ ಗಿರಿರಾಜ್ ಸಿಂಗ್, ಕೇಂದ್ರ ಆಹಾರ ಸಂಸ್ಕರಣಾ ಕೈಗಾರಿಕೆಗಳು ಸಚಿವ ಶ್ರೀ ದುರ್ಗಾ ದಾಸ್ ಉಯಿಕೆ, ಕೇಂದ್ರ ಬುಡಕಟ್ಟು ವ್ಯವಹಾರಗಳ ರಾಜ್ಯ ಸಚಿವ ಶ್ರೀ ಚಿರಾಗ್ ಪಾಸ್ವಾನ್ ಮತ್ತು ಇತರೆ ಗಣ್ಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಹಿನ್ನೆಲೆ

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಧರ್ತಿ ಆಬಾ ಭಗವಾನ್ ಬಿರ್ಸಾ ಮುಂಡಾ ಅವರ 150ನೇ ಜನ್ಮ ವಾರ್ಷಿಕೋತ್ಸವ ಆಚರಿಸಲು ಜನಜಾತಿಯ ಗೌರವ್ ದಿವಸ್ ಸ್ಮರಣಾರ್ಥ ಬಿಹಾರದ ಜಮುಯಿಗೆ ಭೇಟಿ ನೀಡಿದರು. ಭಗವಾನ್ ಬಿರ್ಸಾ ಮುಂಡಾ ಅವರ ಗೌರವ ಸ್ಮರಣಾರ್ಥ ನಾಣ್ಯ ಮತ್ತು ಅಂಚೆ ಚೀಟಿ ಅನಾವರಣಗೊಳಿಸಿದರು. ಬುಡಕಟ್ಟು ಸಮುದಾಯಗಳನ್ನು ಉನ್ನತೀಕರಿಸುವ ಮತ್ತು ಆ ಪ್ರದೇಶದ ಗ್ರಾಮೀಣ ಮತ್ತು ದೂರದ ಪ್ರದೇಶಗಳಲ್ಲಿ ಮೂಲಸೌಕರ್ಯಗಳನ್ನು ಸುಧಾರಿಸುವ ಗುರಿ ಹೊಂದಿರುವ 6,640 ಕೋಟಿ ರೂಪಾಯಿ ಮೊತ್ತದ ಬಹುವಿಧದ ಅಭಿವೃದ್ಧಿ ಯೋಜನೆಗಳಿಗೆ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿದರು.

ಪ್ರಧಾನ ಮಂತ್ರಿ ಜನಜಾತಿ ಆದಿವಾಸಿ ನ್ಯಾಯ ಮಹಾಅಭಿಯಾನ(ಪಿಎಂ-ಜನ್ಮನ್) ಅಡಿ ನಿರ್ಮಿಸಲಾದ 11,000 ಪಕ್ಕಾ ಮನೆಗಳ ಗೃಹ ಪ್ರವೇಶದಲ್ಲಿ ಪ್ರಧಾನ ಮಂತ್ರಿ ಭಾಗವಹಿಸಿದರು. ಅವರು ಪಿಎಂ-ಜನ್ಮನ್ ಅಡಿ ಪ್ರಾರಂಭಿಸಲಾದ 23 ಮೊಬೈಲ್ ವೈದ್ಯಕೀಯ ಘಟಕ(ಎಂಎಂಯುಗಳು)ಗಳನ್ನು ಮತ್ತು ಬುಡಕಟ್ಟು ಪ್ರದೇಶಗಳಲ್ಲಿ ಆರೋಗ್ಯ ಸೇವೆ ಹೆಚ್ಚಿಸಲು ಧರ್ತಿ ಆಬಾ ಜನಜಾತಿಯ ಗ್ರಾಮ ಉತ್ಕರ್ಷ್ ಅಭಿಯಾನ(ಡಿಎಜೆಜಿಯುಎ) ಅಡಿ, ಹೆಚ್ಚುವರಿ 30 ಎಂಎಂಯುಗಳನ್ನು ಉದ್ಘಾಟಿಸಿದರು.

 

ಬುಡಕಟ್ಟು ಉದ್ಯಮಶೀಲತೆ ಉತ್ತೇಜಿಸಲು ಮತ್ತು ಜೀವನೋಪಾಯಕ್ಕೆ ಬೆಂಬಲ ನೀಡಲು 300 ವನ್ ಧನ್ ವಿಕಾಸ ಕೇಂದ್ರ (ವಿಡಿವಿಕೆ)ಗಳನ್ನು ಪ್ರಧಾನ ಮಂತ್ರಿ ಉದ್ಘಾಟಿಸಿದರು. ಬುಡಕಟ್ಟು ವಿದ್ಯಾರ್ಥಿಗಳಿಗೆ ಮೀಸಲಾಗಿರುವ ಸುಮಾರು 450 ಕೋಟಿ ರೂ. ಮೌಲ್ಯದ 10 ಏಕಲವ್ಯ ಮಾದರಿ ವಸತಿ ಶಾಲೆಗಳನ್ನು ಉದ್ಘಾಟಿಸಿದರು. ಬುಡಕಟ್ಟು ಸಮುದಾಯಗಳ ಶ್ರೀಮಂತ ಇತಿಹಾಸ ಮತ್ತು ಪರಂಪರೆ ದಾಖಲಿಸಲು ಮತ್ತು ಸಂರಕ್ಷಿಸಲು ಮಧ್ಯಪ್ರದೇಶದ ಚಿಂದ್ವಾರ ಮತ್ತು ಜಬಲ್ಪುರದಲ್ಲಿ ಬುಡಕಟ್ಟು ಸ್ವಾತಂತ್ರ್ಯ ಹೋರಾಟಗಾರರ 2 ವಸ್ತುಸಂಗ್ರಹಾಲಯ, ಜಮ್ಮು-ಕಾಶ್ಮೀರದ ಶ್ರೀನಗರ ಮತ್ತು ಸಿಕ್ಕಿಂನ ಗ್ಯಾಂಗ್ಟಾಕ್ ನಲ್ಲಿ 2 ಬುಡಕಟ್ಟು ಸಂಶೋಧನಾ ಸಂಸ್ಥೆಗಳನ್ನು ಉದ್ಘಾಟಿಸಿದರು.

ಪ್ರಧಾನ ಮಂತ್ರಿ ಅವರು ಬುಡಕಟ್ಟು ಪ್ರದೇಶಗಳಲ್ಲಿ ಸಂಪರ್ಕ ಸುಧಾರಿಸಲು 500 ಕಿಲೋಮೀಟರ್ ಹೊಸ ರಸ್ತೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು. ಪಿಎಂ-ಜನ್ಮನ್ ಅಡಿ, ಸಮುದಾಯ ಕೇಂದ್ರಗಳಾಗಿ ಕಾರ್ಯ ನಿರ್ವಹಿಸಲು 100 ಬಹುಪಯೋಗಿ ಕೇಂದ್ರಗಳು(ಎಂಪಿಸಿಗಳು), 1,110 ಕೋಟಿ ರೂ. ಮೌಲ್ಯದ 25 ಹೆಚ್ಚುವರಿ ಏಕಲವ್ಯ ಮಾದರಿ ವಸತಿ ಶಾಲೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು. ಇವು ಬುಡಕಟ್ಟು ಮಕ್ಕಳಿಗೆ ಗುಣಮಟ್ಟದ ಶಿಕ್ಷಣವನ್ನು ಒದಗಿಸಲಿವೆ.

ಪ್ರಧಾನ ಮಂತ್ರಿ ಅವರು ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಮಂಜೂರಾತಿ ನೀಡಿದರು. ಇದರಲ್ಲಿ ಪಿಎಂ-ಜನ್ಮನ್ ಅಡಿ, ಸುಮಾರು 500 ಕೋಟಿ ರೂಪಾಯಿ ಮೌಲ್ಯದ 25,000 ಹೊಸ ಮನೆಗಳು ಮತ್ತು ಧರ್ತಿ ಆಬಾ ಜನಜಾತಿಯ ಗ್ರಾಮ ಉತ್ಕರ್ಷ್ ಅಭಿಯಾನ (ಡಿಎಜೆಜಿಯುಎ) ಅಡಿ 1960 ಕೋಟಿ ರೂ. ಮೌಲ್ಯದ 1.16 ಲಕ್ಷ ಮನೆಗಳು, 1100 ಕೋಟಿ ರೂ. ಮೌಲ್ಯದಲ್ಲಿ ಪಿಎಂ ಜನ್ಮನ್ ಅಡಿ 66 ಹಾಸ್ಟೆಲ್‌ಗಳು ಮತ್ತು ಡಿಎಜೆಜಿಯುಎ ಅಡಿ, 304 ಹಾಸ್ಟೆಲ್‌ಗಳು, ಪಿಎಂ-ಜನ್ಮನ್ ಅಡಿ 50 ಹೊಸ ಬಹುಪಯೋಗಿ ಕೇಂದ್ರಗಳು, 55 ಮೊಬೈಲ್ ವೈದ್ಯಕೀಯ ಘಟಕಗಳು ಮತ್ತು 65 ಅಂಗನವಾಡಿ ಕೇಂದ್ರಗಳು, ಕುಡುಗೋಲು ಜೀವಕೋಶ ರಕ್ತಹೀನತೆ ನಿರ್ಮೂಲನೆಗೆ 6 ಶ್ರೇಷ್ಠತಾ ಕೇಂದ್ರಗಳ ಸ್ಥಾಪನೆ, ಡಿಎಜೆಜಿಯುಎ ಅಡಿ ಸುಮಾರು 500 ಕೋಟಿ ರೂ. ವೆಚ್ಚದಲ್ಲಿ ಆಶ್ರಮ ಶಾಲೆಗಳು, ಹಾಸ್ಟೆಲ್ ಗಳು, ಸರಕಾರಿ ವಸತಿ ಶಾಲೆಗಳ 330 ಯೋಜನೆಗಳ ಮೇಲ್ದರ್ಜೆಗೇರಿಸುವ ಪ್ರಸ್ತಾವನೆಗಳು ಸೇರಿವೆ.

 

Click here to read full text speech

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
Exclusive: Just two friends in a car, says Putin on viral carpool with PM Modi

Media Coverage

Exclusive: Just two friends in a car, says Putin on viral carpool with PM Modi
NM on the go

Nm on the go

Always be the first to hear from the PM. Get the App Now!
...
India–Russia friendship has remained steadfast like the Pole Star: PM Modi during the joint press meet with Russian President Putin
December 05, 2025

Your Excellency, My Friend, राष्ट्रपति पुतिन,
दोनों देशों के delegates,
मीडिया के साथियों,
नमस्कार!
"दोबरी देन"!

आज भारत और रूस के तेईसवें शिखर सम्मेलन में राष्ट्रपति पुतिन का स्वागत करते हुए मुझे बहुत खुशी हो रही है। उनकी यात्रा ऐसे समय हो रही है जब हमारे द्विपक्षीय संबंध कई ऐतिहासिक milestones के दौर से गुजर रहे हैं। ठीक 25 वर्ष पहले राष्ट्रपति पुतिन ने हमारी Strategic Partnership की नींव रखी थी। 15 वर्ष पहले 2010 में हमारी साझेदारी को "Special and Privileged Strategic Partnership” का दर्जा मिला।

पिछले ढाई दशक से उन्होंने अपने नेतृत्व और दूरदृष्टि से इन संबंधों को निरंतर सींचा है। हर परिस्थिति में उनके नेतृत्व ने आपसी संबंधों को नई ऊंचाई दी है। भारत के प्रति इस गहरी मित्रता और अटूट प्रतिबद्धता के लिए मैं राष्ट्रपति पुतिन का, मेरे मित्र का, हृदय से आभार व्यक्त करता हूँ।

Friends,

पिछले आठ दशकों में विश्व में अनेक उतार चढ़ाव आए हैं। मानवता को अनेक चुनौतियों और संकटों से गुज़रना पड़ा है। और इन सबके बीच भी भारत–रूस मित्रता एक ध्रुव तारे की तरह बनी रही है।परस्पर सम्मान और गहरे विश्वास पर टिके ये संबंध समय की हर कसौटी पर हमेशा खरे उतरे हैं। आज हमने इस नींव को और मजबूत करने के लिए सहयोग के सभी पहलुओं पर चर्चा की। आर्थिक सहयोग को नई ऊँचाइयों पर ले जाना हमारी साझा प्राथमिकता है। इसे साकार करने के लिए आज हमने 2030 तक के लिए एक Economic Cooperation प्रोग्राम पर सहमति बनाई है। इससे हमारा व्यापार और निवेश diversified, balanced, और sustainable बनेगा, और सहयोग के क्षेत्रों में नए आयाम भी जुड़ेंगे।

आज राष्ट्रपति पुतिन और मुझे India–Russia Business Forum में शामिल होने का अवसर मिलेगा। मुझे पूरा विश्वास है कि ये मंच हमारे business संबंधों को नई ताकत देगा। इससे export, co-production और co-innovation के नए दरवाजे भी खुलेंगे।

दोनों पक्ष यूरेशियन इकॉनॉमिक यूनियन के साथ FTA के शीघ्र समापन के लिए प्रयास कर रहे हैं। कृषि और Fertilisers के क्षेत्र में हमारा करीबी सहयोग,food सिक्युरिटी और किसान कल्याण के लिए महत्वपूर्ण है। मुझे खुशी है कि इसे आगे बढ़ाते हुए अब दोनों पक्ष साथ मिलकर यूरिया उत्पादन के प्रयास कर रहे हैं।

Friends,

दोनों देशों के बीच connectivity बढ़ाना हमारी मुख्य प्राथमिकता है। हम INSTC, Northern Sea Route, चेन्नई - व्लादिवोस्टोक Corridors पर नई ऊर्जा के साथ आगे बढ़ेंगे। मुजे खुशी है कि अब हम भारत के seafarersकी polar waters में ट्रेनिंग के लिए सहयोग करेंगे। यह आर्कटिक में हमारे सहयोग को नई ताकत तो देगा ही, साथ ही इससे भारत के युवाओं के लिए रोजगार के नए अवसर बनेंगे।

उसी प्रकार से Shipbuilding में हमारा गहरा सहयोग Make in India को सशक्त बनाने का सामर्थ्य रखता है। यह हमारेwin-win सहयोग का एक और उत्तम उदाहरण है, जिससे jobs, skills और regional connectivity – सभी को बल मिलेगा।

ऊर्जा सुरक्षा भारत–रूस साझेदारी का मजबूत और महत्वपूर्ण स्तंभ रहा है। Civil Nuclear Energy के क्षेत्र में हमारा दशकों पुराना सहयोग, Clean Energy की हमारी साझा प्राथमिकताओं को सार्थक बनाने में महत्वपूर्ण रहा है। हम इस win-win सहयोग को जारी रखेंगे।

Critical Minerals में हमारा सहयोग पूरे विश्व में secure और diversified supply chains सुनिश्चित करने के लिए महत्वपूर्ण है। इससे clean energy, high-tech manufacturing और new age industries में हमारी साझेदारी को ठोस समर्थन मिलेगा।

Friends,

भारत और रूस के संबंधों में हमारे सांस्कृतिक सहयोग और people-to-people ties का विशेष महत्व रहा है। दशकों से दोनों देशों के लोगों में एक-दूसरे के प्रति स्नेह, सम्मान, और आत्मीयताका भाव रहा है। इन संबंधों को और मजबूत करने के लिए हमने कई नए कदम उठाए हैं।

हाल ही में रूस में भारत के दो नए Consulates खोले गए हैं। इससे दोनों देशों के नागरिकों के बीच संपर्क और सुगम होगा, और आपसी नज़दीकियाँ बढ़ेंगी। इस वर्ष अक्टूबर में लाखों श्रद्धालुओं को "काल्मिकिया” में International Buddhist Forum मे भगवान बुद्ध के पवित्र अवशेषों का आशीर्वाद मिला।

मुझे खुशी है कि शीघ्र ही हम रूसी नागरिकों के लिए निशुल्क 30 day e-tourist visa और 30-day Group Tourist Visa की शुरुआत करने जा रहे हैं।

Manpower Mobility हमारे लोगों को जोड़ने के साथ-साथ दोनों देशों के लिए नई ताकत और नए अवसर create करेगी। मुझे खुशी है इसे बढ़ावा देने के लिए आज दो समझौतेकिए गए हैं। हम मिलकर vocational education, skilling और training पर भी काम करेंगे। हम दोनों देशों के students, scholars और खिलाड़ियों का आदान-प्रदान भी बढ़ाएंगे।

Friends,

आज हमने क्षेत्रीय और वैश्विक मुद्दों पर भी चर्चा की। यूक्रेन के संबंध में भारत ने शुरुआत से शांति का पक्ष रखा है। हम इस विषय के शांतिपूर्ण और स्थाई समाधान के लिए किए जा रहे सभी प्रयासों का स्वागत करते हैं। भारत सदैव अपना योगदान देने के लिए तैयार रहा है और आगे भी रहेगा।

आतंकवाद के विरुद्ध लड़ाई में भारत और रूस ने लंबे समय से कंधे से कंधा मिलाकर सहयोग किया है। पहलगाम में हुआ आतंकी हमला हो या क्रोकस City Hall पर किया गया कायरतापूर्ण आघात — इन सभी घटनाओं की जड़ एक ही है। भारत का अटल विश्वास है कि आतंकवाद मानवता के मूल्यों पर सीधा प्रहार है और इसके विरुद्ध वैश्विक एकता ही हमारी सबसे बड़ी ताक़त है।

भारत और रूस के बीच UN, G20, BRICS, SCO तथा अन्य मंचों पर करीबी सहयोग रहा है। करीबी तालमेल के साथ आगे बढ़ते हुए, हम इन सभी मंचों पर अपना संवाद और सहयोग जारी रखेंगे।

Excellency,

मुझे पूरा विश्वास है कि आने वाले समय में हमारी मित्रता हमें global challenges का सामना करने की शक्ति देगी — और यही भरोसा हमारे साझा भविष्य को और समृद्ध करेगा।

मैं एक बार फिर आपको और आपके पूरे delegation को भारत यात्रा के लिए बहुत बहुत धन्यवाद देता हूँ।