ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದು ಹಿಮಾಚಲ ಪ್ರದೇಶದ ಕುಲುವಿನ ಧಲ್ಪುರ್ ಮೈದಾನದಲ್ಲಿ ನಡೆದ ಕುಲು  ದಸರಾ ಹಬ್ಬ ಆಚರಣೆಯಲ್ಲಿ ಪಾಲ್ಗೊಂಡರು.

ಪ್ರಧಾನಮಂತ್ರಿಯವರು ಆಗಮಿಸುತ್ತಿದ್ದಂತೆ ಅವರನ್ನು ಸ್ವಾಗತಿಸಲಾಯಿತು. ಉತ್ಸವ ಮೂರ್ತಿ ಭಗವಾನ್ ರಘುನಾಥ್ ಜೀ ಅವರ ಆಗಮನದ ಬಳಿಕ ರಥಯಾತ್ರೆಯ ಪ್ರಾರಂಭವನ್ನು ಘೋಷಿಸಲಾಯಿತು.. ಈ ಸಂದರ್ಭದಲ್ಲಿ ಪ್ರಧಾನ ಮಂತ್ರಿಯವರನ್ನು ಸ್ವಾಗತಿಸಲು ಬೃಹತ್ ಜನಸಮೂಹ ನೆರೆದಿತ್ತು. ಇತರ ಲಕ್ಷಾಂತರ ಭಕ್ತರೊಂದಿಗೆ ಪ್ರಧಾನಮಂತ್ರಿಯವರು ಮುಖ್ಯ ಆಕರ್ಷಣೆಯಾದ ಭಗವಾನ್ ರಘುನಾಥ ಜೀಯತ್ತ  ನಡೆದರು ಮತ್ತು ನಮನ ಸಲ್ಲಿಸಿದರು. ಈ ಸಂದರ್ಭದಲ್ಲಿ ಉಪಸ್ಥಿತರಿದ್ದ ಪ್ರತಿಯೊಬ್ಬರಿಗೂ ಕೈಮುಗಿದು ಶುಭಾಶಯಗಳನ್ನು ಹೇಳಿದ  ಪ್ರಧಾನಮಂತ್ರಿಯವರು, ಐತಿಹಾಸಿಕ ಕುಲು  ದಸರಾ ಆಚರಣೆಯಲ್ಲಿ ದೇವತೆಗಳ ಭವ್ಯ ಮಹಾಸಭೆಯನ್ನೊಳಗೊಂಡ  ದೈವಿಕ ರಥಯಾತ್ರೆಯನ್ನು ಸಾಕ್ಷೀಕರಿಸಿದರು. ಕುಲು ದಸರಾ ಆಚರಣೆಯಲ್ಲಿ ಇದೇ ಮೊದಲ ಬಾರಿಗೆ ಭಾರತದ ಪ್ರಧಾನ ಮಂತ್ರಿಯವರು ಭಾಗವಹಿಸಿದ್ದು ಇದೊಂದು ಐತಿಹಾಸಿಕ ಘಟನೆಯಾಗಿದೆ.

ಅಂತಾರಾಷ್ಟ್ರೀಯ ಕುಲು ದಸರಾ ಉತ್ಸವವನ್ನು 2022 ರ ಅಕ್ಟೋಬರ್ 5 ರಿಂದ 11 ರವರೆಗೆ ಕುಲುವಿನ ಧಲ್ಪುರ್ ಮೈದಾನದಲ್ಲಿ ಆಚರಿಸಲಾಗುತ್ತದೆ. ಈ ಉತ್ಸವವು ಕಣಿವೆಯ 300 ಕ್ಕೂ ಹೆಚ್ಚು ದೇವತೆಗಳ ಸಭೆ ಎಂಬ ಅರ್ಥದಲ್ಲಿ ವಿಶಿಷ್ಟ ಹಾಗು ಅನನ್ಯವಾಗಿದೆ. ಉತ್ಸವದ ಮೊದಲ ದಿನದಂದು, ಅದ್ಭುತವಾಗಿ  ಅಲಂಕರಿಸಿದ ಪಲ್ಲಕ್ಕಿಗಳನ್ನು ಏರಿ ದೇವತೆಗಳು  ಮುಖ್ಯ ದೇವತೆಯಾದ  ಭಗವಾನ್ ರಘುನಾಥ್ ಜೀ ಅವರ ದೇವಾಲಯಕ್ಕೆ ತೆರಳಿ ನಮನಗಳನ್ನು ಸಲ್ಲಿಸಿ  ನಂತರ ಧಲ್ಪುರ್ ಮೈದಾನಕ್ಕೆ ತೆರಳುತ್ತಾರೆ.

ಪ್ರಧಾನಮಂತ್ರಿಯವರೊಂದಿಗೆ ಹಿಮಾಚಲ ಪ್ರದೇಶದ ಮುಖ್ಯಮಂತ್ರಿ ಶ್ರೀ ಜೈ ರಾಮ್ ಠಾಕೂರ್, ಹಿಮಾಚಲ ಪ್ರದೇಶದ ರಾಜ್ಯಪಾಲ ಶ್ರೀ ರಾಜೇಂದ್ರ ವಿಶ್ವನಾಥ ಅರ್ಲೇಕರ್, ಕೇಂದ್ರ ವಾರ್ತಾ ಮತ್ತು ಪ್ರಸಾರ ಖಾತೆ ಸಚಿವ ಶ್ರೀ ಅನುರಾಗ್ ಠಾಕೂರ್ ಮತ್ತು ಬಿಜೆಪಿ ರಾಜ್ಯ ಅಧ್ಯಕ್ಷ ಶ್ರೀ ಸುರೇಶ್ ಕುಮಾರ್ ಕಶ್ಯಪ್ ಸೇರಿದಂತೆ ಇತರರು ಪಾಲ್ಗೊಂಡಿದ್ದರು.

ಇದಕ್ಕೂ ಮುನ್ನ ಪ್ರಧಾನಮಂತ್ರಿಯವರು ಬಿಲಾಸ್ ಪುರದ ಎ.ಐ.ಐ.ಎಂ.ಎಸ್. ಅನ್ನು ರಾಷ್ಟ್ರಕ್ಕೆ ಸಮರ್ಪಿಸಿದ್ದರು. ಅವರು ಹಿಮಾಚಲ ಪ್ರದೇಶದ ಬಿಲಾಸ್ಪುರದ ಲುಹ್ನುವಿನಲ್ಲಿ ಅನೇಕ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿದ್ದರು.

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
Vikas Bhi, Virasat Bhi: How JATAN, AI and Digital Archives are revolutionising India’s cultural heritage preservation

Media Coverage

Vikas Bhi, Virasat Bhi: How JATAN, AI and Digital Archives are revolutionising India’s cultural heritage preservation
NM on the go

Nm on the go

Always be the first to hear from the PM. Get the App Now!
...
ಭಾರತ ಬಿಟ್ಟು ತೊಲಗಿ ಚಳವಳಿಯಲ್ಲಿ ಭಾಗವಹಿಸಿದ ಶೂರರಿಗೆ ಪ್ರಧಾನಮಂತ್ರಿ ಗೌರವ ನಮನ
August 09, 2026

ಭಾರತ ಬಿಟ್ಟು ತೊಲಗಿ ಐತಿಹಾಸಿಕ ಚಳವಳಿಯಲ್ಲಿ ಭಾಗವಹಿಸಿದ ಎಲ್ಲರನ್ನೂ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸ್ಮರಿಸಿದ್ದಾರೆ ಮತ್ತು ಭಾರತದ ಸ್ವಾತಂತ್ರ್ಯ ಹೋರಾಟದಲ್ಲಿ ಅವರ ಶೌರ್ಯ ಮತ್ತು ದೃಢಸಂಕಲ್ಪಕ್ಕೆ ಗೌರವ ಸಮರ್ಪಿಸಿದ್ದಾರೆ. ಮಹಾತ್ಮಾ ಗಾಂಧಿಯವರ ನಾಯಕತ್ವದಿಂದ ಪ್ರೇರಿತವಾದ ಭಾರತ ಬಿಟ್ಟು ತೊಲಗಿ ಚಳವಳಿಯ ಕರೆಯು ಸ್ವಾತಂತ್ರ್ಯ ಹೋರಾಟಕ್ಕೆ ಹೊಸ ಚೈತನ್ಯ ತುಂಬಿತು ಮತ್ತು ವಸಾಹತುಶಾಹಿ ಆಳ್ವಿಕೆಯನ್ನು ತೊಡೆದು ಹಾಕಲು ಭಾರತದ ಜನರ ಅಚಲ ಸಂಕಲ್ಪವನ್ನು ಪ್ರತಿಬಿಂಬಿಸಿತ್ತು ಎಂದು ಶ್ರೀ ಮೋದಿ ಅವರು ಹೇಳಿದ್ದಾರೆ.

ಪ್ರಧಾನಮಂತ್ರಿಗಳು ಎಕ್ಸ್ ನಲ್ಲಿ ಹೀಗೆ ಪೋಸ್ಟ್ ಮಾಡಿದ್ದಾರೆ:

ಐತಿಹಾಸಿಕ ಭಾರತ ಬಿಟ್ಟು ತೊಲಗಿ ಚಳವಳಿಯಲ್ಲಿ ಭಾಗವಹಿಸಿದ ಎಲ್ಲರನ್ನು ಸ್ಮರಿಸುತ್ತಿದ್ದೇನೆ. ಅವರ ಸ್ಥೈರ್ಯ ಪ್ರತಿಯೊಬ್ಬ ಭಾರತೀಯನಿಗೂ ಸದಾ ಸ್ಫೂರ್ತಿಯ ಸೆಲೆಯಾಗಿರಲಿದೆ. ಮಹಾತ್ಮಾ ಗಾಂಧಿಯವರ ನಾಯಕತ್ವದಿಂದ ಪ್ರೇರಿತವಾದ ಭಾರತ ಬಿಟ್ಟು ತೊಲಗಿ ಎಂಬ ಘೋಷಣೆಯು ನಮ್ಮ ಸ್ವಾತಂತ್ರ್ಯ ಹೋರಾಟಕ್ಕೆ ಹೊಸ ಚೈತನ್ಯವನ್ನು ತುಂಬಿತು ಮತ್ತು ವಸಾಹತುಶಾಹಿ ಆಳ್ವಿಕೆಯಿಂದ ಮುಕ್ತರಾಗಲು ನಮ್ಮ ಜನರ ಅಚಲ ದೃಢಸಂಕಲ್ಪವನ್ನು ಪ್ರತಿಬಿಂಬಿಸಿತು.