Launches Acharya Chanakya Kaushalya Vikas Scheme and Punyashlok Ahilyabai Holkar Women Start-Up Scheme
Lays foundation stone of PM MITRA Park in Amravati
Releases certificates and loans to PM Vishwakarma beneficiaries
Unveils commemorative stamp marking one year of progress under PM Vishwakarma
“PM Vishwakarma has positively impacted countless artisans, preserving their skills and fostering economic growth”
“With Vishwakarma Yojna, we have resolved for prosperity and a better tomorrow through labour and skill development”
“Vishwakarma Yojana is a roadmap to utilize thousands of years old skills of India for a developed India”
“Basic spirit of Vishwakarma Yojna is ‘Samman Samarthya, Samridhi’”
“Today's India is working to take its textile industry to the top in the global market”
“Government is setting up 7 PM Mitra Parks across the country. Our vision is Farm to Fibre, Fiber to Fabric, Fabric to Fashion and Fashion to Foreign”

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮಹಾರಾಷ್ಟ್ರದ ವಾರ್ಧಾದಲ್ಲಿ ರಾಷ್ಟ್ರೀಯ ಪ್ರಧಾನಮಂತ್ರಿ ವಿಶ್ವಕರ್ಮ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ಪ್ರಧಾನಮಂತ್ರಿಯವರು ‘ಆಚಾರ್ಯ ಚಾಣಕ್ಯ ಕೌಶಲ್ಯ ಅಭಿವೃದ್ಧಿ’ಯೋಜನೆ ಮತ್ತು ‘ಪುಣ್ಯಶ್ಲೋಕ ಅಹಲ್ಯಾದೇವಿ ಹೋಳ್ಕರ್ ಮಹಿಳಾ ಸ್ಟಾರ್ಟಪ್ ಯೋಜನೆʼಗೆ ಚಾಲನೆ ನೀಡಿದರು. ಪ್ರಧಾನಮಂತ್ರಿ ವಿಶ್ವಕರ್ಮ ಫಲಾನುಭವಿಗಳಿಗೆ ಪ್ರಮಾಣಪತ್ರಗಳು ಮತ್ತು ಸಾಲಗಳನ್ನು ಬಿಡುಗಡೆ ಮಾಡಿದರು ಮತ್ತು ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆಯ ಒಂದು ವರ್ಷದ ಪ್ರಗತಿಯನ್ನು ಗುರುತಿಸುವ ಸ್ಮರಣಾರ್ಥ ಅಂಚೆಚೀಟಿಯನ್ನು ಬಿಡುಗಡೆ ಮಾಡಿದರು. ಮಹಾರಾಷ್ಟ್ರದ ಅಮರಾವತಿಯಲ್ಲಿ ಪ್ರಧಾನಮಂತ್ರಿ ಮೆಗಾ ಇಂಟಿಗ್ರೇಟೆಡ್ ಟೆಕ್ಸ್‌ಟೈಲ್ ರೀಜನ್‌ ಅಂಡ್‌ ಅಪಾರಲ್ (ಪಿಎಂ ಮಿತ್ರಾ) ಪಾರ್ಕ್‌ ಗೆ ಶ್ರೀ ಮೋದಿಯವರು ಶಂಕುಸ್ಥಾಪನೆ ಮಾಡಿದರು. ಈ ಸಂದರ್ಭದಲ್ಲಿ ಆಯೋಜಿಸಲಾದ ವಸ್ತುಪ್ರದರ್ಶನವನ್ನು ಪ್ರಧಾನಿಯವರು ವೀಕ್ಷಿಸಿದರು.

ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿಯವರು ಎರಡು ದಿನಗಳ ಹಿಂದೆ ನಡೆದ ವಿಶ್ವಕರ್ಮ ಪೂಜೆಯ ಆಚರಣೆಯನ್ನು ಸ್ಮರಿಸಿದರು ಮತ್ತು ಇಂದು ವಾರ್ಧಾದಲ್ಲಿ ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆಯು ಒಂದು ವರ್ಷವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ ಉತ್ಸವವು ನಡೆಯುತ್ತಿದೆ ಎಂದು ಹೇಳಿದರು ಮಹಾತ್ಮ ಗಾಂಧೀಜಿಯವರು 1932ರಲ್ಲಿ ಇದೇ ದಿನದಂದು ಅಸ್ಪೃಶ್ಯತೆ ವಿರುದ್ಧ ಅಭಿಯಾನ ಆರಂಭಿಸಿದ್ದರಿಂದ ಇಂದು ವಿಶೇಷ ದಿನವಾಗಿದೆ ಎಂದರು. ಶ್ರೀ ವಿನೋಬಾ ಭಾವೆ ಅವರ ಆಧ್ಯಾತ್ಮಿಕ ಸ್ಥಳ ಮತ್ತು ಮಹಾತ್ಮ ಗಾಂಧೀಜಿಯವರ ಕರ್ಮಭೂಮಿಯಾದ ವಾರ್ಧಾದಲ್ಲಿ ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆಯು ಒಂದು ವರ್ಷವನ್ನು ಇಂದು ಆಚರಿಸುತ್ತಿದ್ದು, ಈ ಸಂದರ್ಭವು ಅಭಿವೃದ್ಧಿ ಹೊಂದಿದ ಭಾರತದ ಸಂಕಲ್ಪಕ್ಕೆ ಸಾಧನೆ ಮತ್ತು ಸ್ಫೂರ್ತಿಯ ಸಂಗಮವಾಗಿದೆ ಎಂದು ಅವರು ಹೇಳಿದರು. ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆ ಮೂಲಕ ಕೌಶಲ್ಯಾಭಿವೃದ್ಧಿ ಮತ್ತು ‘ಶ್ರಮದಿಂದ ಅಭ್ಯುದಯ’ದ ಮೂಲಕ ಉತ್ತಮ ಭವಿಷ್ಯವನ್ನು ಸೃಷ್ಟಿಸಲು ಸರಕಾರ ಸಂಕಲ್ಪ ಮಾಡಿದ್ದು, ಮಹಾತ್ಮ ಗಾಂಧೀಜಿಯವರ ಆದರ್ಶಗಳು ಇದನ್ನು ನಿಜವಾಗಿಸಲು ಮಾಧ್ಯಮವಾಗಲಿದವೆ ಎಂದರು. ಈ ಸಂದರ್ಭದಲ್ಲಿ ಪ್ರಧಾನಮಂತ್ರಿಯವರು ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆಗೆ ಸಂಬಂಧಿಸಿದ ಪ್ರತಿಯೊಬ್ಬರನ್ನೂ ಅಭಿನಂದಿಸಿದರು.

 

ಇಂದು ಪಿಎಂ ಮಿತ್ರಾ ಪಾರ್ಕ್‌ ಗೆ ಶಂಕುಸ್ಥಾಪನೆ ಮಾಡಲಾಗಿದೆ ಎಂದು ಪ್ರಧಾನಿ ಹೇಳಿದರು. ಇಂದಿನ ಭಾರತವು ತನ್ನ ಜವಳಿ ಉದ್ಯಮವನ್ನು ವಿಶ್ವ ಮಾರುಕಟ್ಟೆಯ ಉತ್ತುಂಗಕ್ಕೆ ಕೊಂಡೊಯ್ಯಲು ಕೆಲಸ ಮಾಡುತ್ತಿದೆ ಎಂದು ಅವರು ಒತ್ತಿ ಹೇಳಿದರು. ಭಾರತದ ಜವಳಿ ಉದ್ಯಮಗಳ ಶತಮಾನಗಳಷ್ಟು ಹಳೆಯ ಖ್ಯಾತಿ ಮತ್ತು ಗುರುತನ್ನು ಮರುಸ್ಥಾಪಿಸುವ ಗುರಿಯನ್ನು ಭಾರತ ಹೊಂದಿದೆ ಎಂದು ಅವರು ಹೇಳಿದರು. ಅಮರಾವತಿಯಲ್ಲಿರುವ ಪಿಎಂ ಮಿತ್ರಾ ಪಾರ್ಕ್ ಈ ದಿಸೆಯಲ್ಲಿ ಮತ್ತೊಂದು ದೊಡ್ಡ ಹೆಜ್ಜೆಯಾಗಿದೆ ಎಂದು ಶ್ರೀ ಮೋದಿ ಹೇಳಿದರು. ಈ ಸಾಧನೆಗಾಗಿ ಅಮರಾವತಿ ಜನತೆಗೆ ಅಭಿನಂದನೆ ಸಲ್ಲಿಸಿದರು.

ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆಯ ಮೊದಲ ವರ್ಷದ ವಾರ್ಷಿಕೋತ್ಸವಕ್ಕೆ ಮಹಾರಾಷ್ಟ್ರದ ವಾರ್ಧಾವನ್ನು ಆಯ್ಕೆ ಮಾಡಲಾಗಿದೆ ಎಂದು ಪ್ರಧಾನಮಂತ್ರಿ ಅವರು ಎತ್ತಿ ತೋರಿಸಿದರು, ಏಕೆಂದರೆ ಇದು ಮತ್ತೊಂದು ಸರ್ಕಾರಿ ಕಾರ್ಯಕ್ರಮವಲ್ಲ, ಬದಲಿಗೆ ಇದು ಭಾರತವನ್ನು ಒಂದು ಅಭಿವೃದ್ಧಿ ಹೊಂದಿದ ದೇಶವನ್ನಾಗಿ ಮುನ್ನಡೆಸುವ ಮಾರ್ಗಸೂಚಿಯಾಗಿ ಹಳೆಯ ಸಾಂಪ್ರದಾಯಿಕ ಕೌಶಲ್ಯಗಳನ್ನು ಬಳಸಿಕೊಳ್ಳುವ ಯೋಜನೆಯಾಗಿದೆ. ನಮ್ಮ ಸನಾತನ ಸಾಂಪ್ರದಾಯಿಕ ಕೌಶಲ್ಯಗಳು ಭಾರತದ ಏಳಿಗೆಯ ಅನೇಕ ಅದ್ಭುತ ಅಧ್ಯಾಯಗಳಿಗೆ ಆಧಾರವಾಗಿವೆ ಎಂದು ಹೇಳಿದ ಅವರು, ನಮ್ಮ ಕಲೆ, ಎಂಜಿನಿಯರಿಂಗ್, ವಿಜ್ಞಾನ ಮತ್ತು ಲೋಹಶಾಸ್ತ್ರಕ್ಕೆ ಇಡೀ ಜಗತ್ತಿನಲ್ಲಿ ಸರಿಸಾಟಿಯಿಲ್ಲ ಎಂದು ಹೇಳಿದರು. "ನಾವು ವಿಶ್ವದ ಅತಿ ದೊಡ್ಡ ಜವಳಿ ತಯಾರಕರಾಗಿದ್ದೇವೆ" ಎಂದು ಶ್ರೀ ಮೋದಿಯವರು ಎತ್ತಿ ತೋರಿಸಿದರು. ಕುಂಬಾರಿಕೆ ಮತ್ತು ಆ ಕಾಲದಲ್ಲಿ ವಿನ್ಯಾಸಗೊಳಿಸಿದ ಕಟ್ಟಡಗಳಿಗೆ ಯಾವುದೇ ಸರಿಸಾಟಿ ಇಲ್ಲ ಎಂದು ಪ್ರಧಾನಮಂತ್ರಿ ಹೇಳಿದರು. ಬಡಗಿ, ಕಮ್ಮಾರ, ಅಕ್ಕಸಾಲಿಗ, ಕುಂಬಾರ, ಶಿಲ್ಪಿ, ಚಮ್ಮಾರ, ಬಡಗಿ-ಮೇಸ್ತ್ರಿ ಹೀಗೆ ಅನೇಕ ವೃತ್ತಿಪರರು ಭಾರತದ ಏಳಿಗೆಯ ಬುನಾದಿಯಾಗಿದ್ದಾರೆ ಮತ್ತು ಅವರು ಈ ಜ್ಞಾನ ಮತ್ತು ವಿಜ್ಞಾನವನ್ನು ಪ್ರತಿ ಮನೆಗೂ ಹರಡಿದರು ಎಂದು ಶ್ರೀ ಮೋದಿ ಹೇಳಿದರು. ಈ ಸ್ವದೇಶಿ ಕೌಶಲಗಳನ್ನು ನಾಶಪಡಿಸಲು ಬ್ರಿಟಿಷರು ಅನೇಕ ಸಂಚುಗಳನ್ನು ರೂಪಿಸಿದ್ದರು ಎಂದು ಶ್ರೀ ಮೋದಿ ಹೇಳಿದರು. ಗಾಂಧೀಜಿಯವರು ಗ್ರಾಮೀಣ ಕೈಗಾರಿಕೆಗಳಿಗೆ ಉತ್ತೇಜನ ನೀಡಿದ್ದು ಈ ವಾರ್ಧಾ ನೆಲದಿಂದಲೇ ಎಂದರು. ಸ್ವಾತಂತ್ರ್ಯಾನಂತರ ಬಂದ ಸರಕಾರಗಳು ಈ ಕೌಶಲ್ಯಕ್ಕೆ ಸಲ್ಲಬೇಕಾದ ಗೌರವ ನೀಡದಿರುವುದು ದೇಶದ ದೌರ್ಭಾಗ್ಯ ಎಂದು ಅವರು ವಿಷಾದ ವ್ಯಕ್ತಪಡಿಸಿದರು. ಹಿಂದಿನ ಸರ್ಕಾರಗಳು ವಿಶ್ವಕರ್ಮ ಸಮುದಾಯವನ್ನು ನಿರಂತರವಾಗಿ ನಿರ್ಲಕ್ಷಿಸಿ ಕಸುಬು ಮತ್ತು ಕೌಶಲ್ಯವನ್ನು ಗೌರವಿಸುವುದನ್ನು ಮರೆತಿದ್ದರಿಂದ ಭಾರತವು ಪ್ರಗತಿ ಮತ್ತು ಆಧುನಿಕತೆಯ ಓಟದಲ್ಲಿ ಹಿಂದುಳಿಯಿತು ಎಂದು ಹೇಳಿದರು.

 

ಸ್ವಾತಂತ್ರ್ಯದ 70 ವರ್ಷಗಳ ನಂತರ ಸಾಂಪ್ರದಾಯಿಕ ಕೌಶಲ್ಯಗಳಿಗೆ ಹೊಸ ಶಕ್ತಿಯನ್ನು ತರಲು ಪ್ರಸ್ತುತ ಸರ್ಕಾರವು ಸಂಕಲ್ಪ ಮಾಡಿದೆ ಎಂದು ಪ್ರಧಾನಮಂತ್ರಿಯವರು ಹೇಳಿದರು. ‘ಸಮ್ಮಾನ್, ಸಾಮರ್ಥ್ಯ, ಸಮೃದ್ಧಿ’ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆಯ ಚೈತನ್ಯವಾಗಿದೆ ಎಂದು ಅವರು ಹೇಳಿದರು. ಸಾಂಪ್ರದಾಯಿಕ ಕಸುಬುಗಳಿಗೆ ಗೌರವ, ಕುಶಲಕರ್ಮಿಗಳ ಸಬಲೀಕರಣ ಮತ್ತು ವಿಶ್ವಕರ್ಮರ ಏಳಿಗೆ ನಮ್ಮ ಗುರಿಯಾಗಿದೆ ಎಂದು ಪ್ರಧಾನಿ ಹೇಳಿದರು.

 

ಪಿಎಂ ವಿಶ್ವಕರ್ಮ ಯೋಜನೆಯನ್ನು ಯಶಸ್ವಿಯಾಗಲು ವಿವಿಧ ಇಲಾಖೆಗಳ ದೊಡ್ಡ ಪ್ರಮಾಣದ ಮತ್ತು ಅಭೂತಪೂರ್ವ ಸಹಯೋಗದ ಬಗ್ಗೆ ಪ್ರಧಾನಿ ಗಮನ ಸೆಳೆದರು ಮತ್ತು 700 ಕ್ಕೂ ಹೆಚ್ಚು ಜಿಲ್ಲೆಗಳು, 2.5 ಲಕ್ಷ ಗ್ರಾಮ ಪಂಚಾಯಿತಿಗಳು, 5000 ನಗರ ಸ್ಥಳೀಯ ಘಟಕಗಳು ಯೋಜನೆಗೆ ವೇಗ ನೀಡುತ್ತಿವೆ ಎಂದು ತಿಳಿಸಿದರು. ಕಳೆದ ವರ್ಷದಲ್ಲಿ, 18 ವಿಭಿನ್ನ ಸಾಂಪ್ರದಾಯಿಕ ಕೌಶಲ್ಯಗಳನ್ನು ಹೊಂದಿರುವ 20 ಲಕ್ಷಕ್ಕೂ ಹೆಚ್ಚು ಜನರು ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆಯೊಂದಿಗೆ ಸಂಪರ್ಕ ಹೊಂದಿದ್ದಾರೆ ಎಂದು ಶ್ರೀ ಮೋದಿ ಹೇಳಿದರು. ಆಧುನಿಕ ಯಂತ್ರೋಪಕರಣಗಳು ಮತ್ತು ಡಿಜಿಟಲ್ ಉಪಕರಣಗಳ ಪರಿಚಯದೊಂದಿಗೆ 8 ಲಕ್ಷಕ್ಕೂ ಹೆಚ್ಚು ಕುಶಲಕರ್ಮಿಗಳು ಮತ್ತು ಕರಕುಶಲಿಗಳಿಗೆ ಕೌಶಲ್ಯ ತರಬೇತಿ ಮತ್ತು ಉನ್ನತೀಕರಣವನ್ನು ಒದಗಿಸಲಾಗಿದೆ. ಮಹಾರಾಷ್ಟ್ರವೊಂದರಲ್ಲೇ 60,000ಕ್ಕೂ ಹೆಚ್ಚು ಮಂದಿ ಕೌಶಲ್ಯ ತರಬೇತಿ ಪಡೆದಿದ್ದಾರೆ. 6 ಲಕ್ಷಕ್ಕೂ ಹೆಚ್ಚು ವಿಶ್ವಕರ್ಮರಿಗೆ ಉತ್ಪಾದಕತೆ ಮತ್ತು ಉತ್ಪನ್ನದ ಗುಣಮಟ್ಟವನ್ನು ಹೆಚ್ಚಿಸಲು ಆಧುನಿಕ ಉಪಕರಣಗಳನ್ನು ಒದಗಿಸಲಾಗಿದೆ, 15,000 ರೂಪಾಯಿಗಳ ಇ-ವೋಚರ್ ಮತ್ತು ಅವರ ವ್ಯವಹಾರಗಳನ್ನು ವಿಸ್ತರಿಸಲು ಖಾತರಿಯಿಲ್ಲದೆ 3 ಲಕ್ಷ ರೂಪಾಯಿವರೆಗೆ ಸಾಲವನ್ನು ನೀಡಲಾಗಿದೆ ಎಂದು ಪ್ರಧಾನಿ ಮೋದಿ ತಿಳಿಸಿದರು. ಒಂದು ವರ್ಷದೊಳಗೆ ವಿಶ್ವಕರ್ಮರಿಗೆ 1400 ಕೋಟಿ ರೂಪಾಯಿ ಸಾಲ ನೀಡಲಾಗಿರುವ ಬಗ್ಗೆ ಪ್ರಧಾನಿ ಸಂತಸ ವ್ಯಕ್ತಪಡಿಸಿದರು.

 

ಸಾಂಪ್ರದಾಯಿಕ ಕೌಶಲ್ಯಗಳಿಗೆ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಇತರ ಹಿಂದುಳಿದ ವರ್ಗಗಳ ಕೊಡುಗೆಗಳನ್ನು ಗಮನಿಸಿದ ಪ್ರಧಾನಿ, ಹಿಂದಿನ ಸರ್ಕಾರಗಳ ಅವಧಿಯಲ್ಲಿ ಅವರು ಎದುರಿಸುತ್ತಿದ್ದ ನಿರ್ಲಕ್ಷ್ಯದ ಬಗ್ಗೆ ವಿಷಾದಿಸಿದರು ಮತ್ತು ಪ್ರಸ್ತುತ ಸರ್ಕಾರವು ಹಿಂದುಳಿದ ವಿರೋಧಿ ಮನಸ್ಥಿತಿಯನ್ನು ಕೊನೆಗೊಳಿಸಿದೆ ಎಂದು ಹೇಳಿದರು. ಹಿಂದಿನ ವರ್ಷಗಳ ಅಂಕಿಅಂಶಗಳ ಮೇಲೆ ಬೆಳಕು ಚೆಲ್ಲಿದ ಅವರು ಕೌಶಲ್ಯಗಳಿಗೆ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಇತರ ಹಿಂದುಳಿದ ವರ್ಗಗಳು ವಿಶ್ವಕರ್ಮ ಯೋಜನೆಯ ಗರಿಷ್ಠ ಪ್ರಯೋಜನವನ್ನು ಪಡೆಯುತ್ತಿವೆ ಎಂದರು. ವಿಶ್ವಕರ್ಮ ಸಮುದಾಯದ ಜನರು ಕೇವಲ ಕುಶಲಕರ್ಮಿಗಳಾಗಿ ಉಳಿಯದೆ ಉದ್ಯಮಿಗಳು ಮತ್ತು ವ್ಯವಹಾರಗಳ ಮಾಲೀಕರಾಗಬೇಕು ಎಂಬ ಆಶಯವನ್ನು ಪ್ರಧಾನಿ ವ್ಯಕ್ತಪಡಿಸಿದರು. ವಿಶ್ವಕರ್ಮರು ಮಾಡಿದ ಕೆಲಸಗಳಿಗೆ ಎಂಎಸ್‌ಎಂಇ ಸ್ಥಾನಮಾನ ನೀಡುವ ಕುರಿತು ಪ್ರಧಾನಿ ಪ್ರಸ್ತಾಪಿಸಿದರು. ವಿಶ್ವಕರ್ಮರನ್ನು ದೊಡ್ಡ ಕಂಪನಿಗಳ ಪೂರೈಕೆ ಸರಪಳಿಯ ಭಾಗವಾಗಿಸಲು ಸಾಂಪ್ರದಾಯಿಕ ಉತ್ಪನ್ನಗಳನ್ನು ಮಾರಾಟ ಮಾಡಲಾಗುತ್ತಿರುವ ಒಂದು ಜಿಲ್ಲೆ ಒಂದು ಉತ್ಪನ್ನ ಮತ್ತು ಏಕತಾ ಮಾಲ್‌ ನಂತಹ ಪ್ರಯತ್ನಗಳ ಕುರಿತು ಅವರು ಮಾತನಾಡಿದರು.

 

ಕುಶಲಕರ್ಮಿಗಳು ಮತ್ತು ಕುಶಲಕರ್ಮಿಗಳು ತಮ್ಮ ವ್ಯವಹಾರವನ್ನು ವಿಸ್ತರಿಸಲು ಮಾಧ್ಯಮವಾಗಿ ಮಾರ್ಪಟ್ಟಿರುವ ಒ ಎನ್‌ ಡಿ ಸಿ ಮತ್ತು ಜಿಇಎಂ ಕುರಿತು ಪ್ರಧಾನಿ ಮೋದಿ ಪ್ರಸ್ತಾಪಿಸಿದರು. ಆರ್ಥಿಕ ಪ್ರಗತಿಯಲ್ಲಿ ಹಿಂದುಳಿದಿದ್ದ ಸಾಮಾಜಿಕ ವರ್ಗ ಈಗ ವಿಶ್ವದ ಮೂರನೇ ಅತಿದೊಡ್ಡ ಆರ್ಥಿಕತೆಯಲ್ಲಿ ಪ್ರಮುಖ ಪಾತ್ರ ವಹಿಸಲಿದೆ ಎಂದು ಅವರು ಒತ್ತಿ ಹೇಳಿದರು. ಸ್ಕಿಲ್ ಇಂಡಿಯಾ ಮಿಷನ್ ಇದನ್ನು ಮತ್ತಷ್ಟು ಬಲಪಡಿಸುತ್ತಿದೆ ಎಂದು ಅವರು ಹೇಳಿದರು. ಕೌಶಲ್ಯ ಅಭಿವೃದ್ಧಿ ಕಾರ್ಯಕ್ರಮದಡಿಯಲ್ಲಿ, ಇಂದಿನ ಅಗತ್ಯಗಳಿಗೆ ಅನುಗುಣವಾಗಿ ದೇಶದ ಕೋಟಿಗಟ್ಟಲೆ ಯುವಕರು ತರಬೇತಿ ಪಡೆದಿದ್ದಾರೆ ಎಂದು ಶ್ರೀ ಮೋದಿ ಹೇಳಿದರು. ಸ್ಕಿಲ್ ಇಂಡಿಯಾದಂತಹ ಕಾರ್ಯಕ್ರಮಗಳ ಮೂಲಕ ಭಾರತದ ಕೌಶಲ್ಯಗಳನ್ನು ವಿಶ್ವದಾದ್ಯಂತ ಗುರುತಿಸಲಾಗುತ್ತಿದೆ ಎಂದು ಒತ್ತಿ ಹೇಳಿದ ಶ್ರೀ ಮೋದಿ, ಈ ವರ್ಷದ ಆರಂಭದಲ್ಲಿ ಫ್ರಾನ್ಸ್‌ ನಲ್ಲಿ ನಡೆದ ವಿಶ್ವ ಕೌಶಲ್ಯಗಳ ಕುರಿತು ನಡೆದ ಬೃಹತ್‌ ಕಾರ್ಯಕ್ರಮದಲ್ಲಿ ಭಾರತವು ಅನೇಕ ವಿಜೇತ ಬಹುಮಾನಗಳನ್ನು ಗೆದ್ದಿದೆ ಎಂದು ಹೆಮ್ಮೆಯಿಂದ ಹೇಳಿದರು.

 

"ಮಹಾರಾಷ್ಟ್ರದಲ್ಲಿ ಜವಳಿ ಉದ್ಯಮವು ಅಪಾರ ಕೈಗಾರಿಕಾ ಸಾಮರ್ಥ್ಯವನ್ನು ಹೊಂದಿರುವ ಕ್ಷೇತ್ರವಾಗಿದೆ" ಎಂದು ಪ್ರಧಾನಿ ಒತ್ತಿ ಹೇಳಿದರು. ವಿದರ್ಭ ಪ್ರದೇಶವು ಉತ್ತಮ ಗುಣಮಟ್ಟದ ಹತ್ತಿ ಉತ್ಪಾದನೆಯ ಪ್ರಮುಖ ಕೇಂದ್ರವಾಗಿದೆ ಎಂದು ಅವರು ಹೇಳಿದರು, ಆದರೆ ನಂತರದ ಸರ್ಕಾರಗಳು ರೈತರ ಹೆಸರಿನಲ್ಲಿ ಕ್ಷುಲ್ಲಕ ರಾಜಕೀಯ ಮತ್ತು ಭ್ರಷ್ಟಾಚಾರದಲ್ಲಿ ತೊಡಗಿದ್ದರಿಂದ ಹತ್ತಿ ರೈತರನ್ನು ದುಃಖಕ್ಕೆ ತಳ್ಳಿದವು ಎಂದು ಅವರು ಹೇಳಿದರು. 2014 ರಲ್ಲಿ ದೇವೇಂದ್ರ ಫಡ್ನವೀಸ್ ಸರ್ಕಾರ ರಚನೆಯಾದಾಗ, ಈ ಸಮಸ್ಯೆಯನ್ನು ಪರಿಹರಿಸಲು ವೇಗವಾಗಿ ಪ್ರಗತಿ ಸಾಧಿಸಲಾಯಿತು ಯಲ್ಲಿದೆ ಎಂದು ಶ್ರೀ ಮೋದಿ ಎತ್ತಿ ತೋರಿಸಿದರು. ಅಮರಾವತಿಯ ನಂದಗಾಂವ್ ಖಂಡೇಶ್ವರದಲ್ಲಿ ಜವಳಿ ಪಾರ್ಕ್ ಅನ್ನು ನಿರ್ಮಿಸಲಾಗಿದೆ, ಅಲ್ಲಿ ಯಾವುದೇ ಉದ್ಯಮವು ಹೂಡಿಕೆ ಮಾಡಲು ಸಿದ್ಧವಿರಲಿಲ್ಲ, ಆದರೆ, ಇಂದು ಅದು ಯಶಸ್ವಿಯಾಗಿ ಮಹಾರಾಷ್ಟ್ರದ ದೊಡ್ಡ ಕೈಗಾರಿಕಾ ಕೇಂದ್ರವಾಗಿ ಅಭಿವೃದ್ಧಿ ಹೊಂದುತ್ತಿದೆ ಎಂದು ಹೇಳಿದರು.

ಪಿಎಂ ಮಿತ್ರಾ ಪಾರ್ಕ್‌ ನಲ್ಲಿ ನಡೆಯುತ್ತಿರುವ ಕೆಲಸದ ವೇಗವನ್ನು ಪ್ರಸ್ತಾಪಿಸಿದ ಮೋದಿ, ಇದು  ಡಬಲ್ ಎಂಜಿನ್ ಸರ್ಕಾರದ ಇಚ್ಛಾಶಕ್ತಿಯನ್ನು ತೋರಿಸುತ್ತದೆ ಎಂದು ಹೇಳಿದರು. "ಪ್ರಧಾನಮಂತ್ರಿ ಮಿತ್ರಾ ಪಾರ್ಕ್‌ ಗಳನ್ನು ಭಾರತದಾದ್ಯಂತ ಸ್ಥಾಪಿಸಲಾಗುವುದು" ಎಂದು ಮೋದಿ ಹೇಳಿದರು. ಈ ದೃಷ್ಟಿಯಲ್ಲಿ ಫಾರ್ಮ್ ಟು ಫೈಬರ್, ಫೈಬರ್ ಟು ಫ್ಯಾಬ್ರಿಕ್, ಫ್ಯಾಬ್ರಿಕ್ ಟು ಫ್ಯಾಶನ್, ಫ್ಯಾಶನ್ ಟು ಫಾರಿನ್, ಅಂದರೆ ವಿದರ್ಭದ ಹತ್ತಿಯಿಂದ ಉತ್ತಮ ಗುಣಮಟ್ಟದ ಬಟ್ಟೆಗಳನ್ನು ತಯಾರಿಸಲಾಗುವುದು ಮತ್ತು ಫ್ಯಾಷನ್ ಪ್ರಕಾರ ಹತ್ತಿಯಿಂದ ಮಾಡಿದ ಬಟ್ಟೆಗಳನ್ನು ರಫ್ತು ಮಾಡಲಾಗುವುದು ಎಂದು ಅವರು ಹೇಳಿದರು. ವಿದೇಶಗಳಿಗೆ ರಫ್ತು ಮಾಡುವುದರಿಂದ  ರೈತರಿಗೆ ಆಗುವ ನಷ್ಟವನ್ನು ತಪ್ಪಿಸಬಹುದು ಮತ್ತು ಮೌಲ್ಯವರ್ಧನೆಯಾಗುವುದರಿಂದ ಬೆಳೆಗಳಿಗೆ ಉತ್ತಮ ಬೆಲೆ ಸಿಗುತ್ತದೆ ಎಂದರು. ಪಿಎಂ ಮಿತ್ರಾ ಪಾರ್ಕ್‌ ಒಂದರಿಂದಲೇ 8-10 ಸಾವಿರ ಕೋಟಿ ರೂಪಾಯಿಗಳ ಹೂಡಿಕೆಯ ಸಾಧ್ಯತೆಯಿದೆ ಎಂದು ತಿಳಿಸಿದ ಶ್ರೀ ಮೋದಿ, ಇದು ವಿದರ್ಭ ಮತ್ತು ಮಹಾರಾಷ್ಟ್ರದ ಯುವಕರಿಗೆ ಒಂದು ಲಕ್ಷಕ್ಕೂ ಹೆಚ್ಚು ಹೊಸ ಉದ್ಯೋಗಾವಕಾಶಗಳನ್ನು ಸೃಷ್ಟಿಸುತ್ತದೆ ಮತ್ತು ಇತರ ಕೈಗಾರಿಕೆಗಳಿಗೆ ಉತ್ತೇಜನವನ್ನು ನೀಡುತ್ತದೆ ಎಂದು ಹೇಳಿದರು . ಆದಾಯವನ್ನು ಹೆಚ್ಚಿಸುವ ದೇಶದ ರಫ್ತಿಗೆ ಸಹಾಯ ಮಾಡುವ ಹೊಸ ಪೂರೈಕೆ ಸರಪಳಿಗಳನ್ನು ರಚಿಸಲಾಗುವುದು ಎಂದು ಅವರು ಹೇಳಿದರು. ಈ ಕೈಗಾರಿಕಾ ಪ್ರಗತಿಗೆ ಅಗತ್ಯವಾದ ಆಧುನಿಕ ಮೂಲಸೌಕರ್ಯ ಮತ್ತು ಸಂಪರ್ಕವನ್ನು ಹೊಂದಲು ಮಹಾರಾಷ್ಟ್ರ ಸಜ್ಜಾಗುತ್ತಿದೆ ಎಂದು ಮೋದಿ ಒತ್ತಿ ಹೇಳಿದರು. ಇದು ಹೊಸ ಹೆದ್ದಾರಿಗಳು, ಎಕ್ಸ್‌ಪ್ರೆಸ್‌ವೇಗಳು, ಸಮೃದ್ಧಿ ಮಹಾಮಾರ್ಗ್ ಜೊತೆಗೆ ಜಲ ಮತ್ತು ವಾಯು ಸಂಪರ್ಕದ ವಿಸ್ತರಣೆಯನ್ನು ಒಳಗೊಂಡಿದೆ ಎಂದು ಅವರು ಹೇಳಿದರು. "ಮಹಾರಾಷ್ಟ್ರವು ಹೊಸ ಕೈಗಾರಿಕಾ ಕ್ರಾಂತಿಗೆ ಸಜ್ಜಾಗುತ್ತಿದೆ" ಎಂದು ಶ್ರೀ ಮೋದಿ ಹೇಳಿದರು.

 

ಮಹಾರಾಷ್ಟ್ರದ ಬಹು ಆಯಾಮದ ಅಭಿವೃದ್ಧಿಯಲ್ಲಿ ರಾಜ್ಯದ ರೈತರ ಪಾತ್ರವನ್ನು ಗುರುತಿಸಿದ ಅವರು, ರಾಷ್ಟ್ರದ ಸಮೃದ್ಧಿಯು ರೈತರ ಸಂತೋಷದೊಂದಿಗೆ ಸಂಬಂಧ ಹೊಂದಿದೆ ಎಂದು ಒತ್ತಿ ಹೇಳಿದರು. ರೈತರ ಸಮೃದ್ಧಿಯನ್ನು ಹೆಚ್ಚಿಸಲು ಡಬಲ್ ಇಂಜಿನ್ ಸರ್ಕಾರವು ಒಟ್ಟಾಗಿ ಕೆಲಸ ಮಾಡಲು ಬದ್ಧವಾಗಿದೆ ಎಂದು ಹೇಳಿದರು. ಪ್ರಧಾನ ಮಂತ್ರಿ-ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ಕೇಂದ್ರ ಸರ್ಕಾರವು ರೈತರಿಗೆ ವಾರ್ಷಿಕವಾಗಿ 6,000 ರೂಪಾಯಿಗಳನ್ನು ನೀಡುತ್ತದೆ ಮತ್ತು ಮಹಾರಾಷ್ಟ್ರ ಸರ್ಕಾರವು ಸಹ ಅದೇ ಮೊತ್ತವನ್ನು ಸೇರಿಸುವ ಮೂಲಕ ರೈತರ ಆದಾಯವು ವಾರ್ಷಿಕವಾಗಿ 12,000 ರೂಪಾಯಿಗಳಷ್ಟು ಹೆಚ್ಚಿಸಲಾಗಿದೆ. ಕೇವಲ 1 ರೂಪಾಯಿಗೆ ಬೆಳೆ ವಿಮೆಯನ್ನು ಒದಗಿಸುವ ಮತ್ತು ರೈತರ ವಿದ್ಯುತ್ ಬಿಲ್‌ ಗಳನ್ನು ಮನ್ನಾ ಮಾಡುವ ಉಪಕ್ರಮದ ಕುರಿತು ಪ್ರಧಾನ ಮಂತ್ರಿ ಮಾತನಾಡಿದರು. ಈ ಪ್ರದೇಶದ ನೀರಾವರಿ ಸವಾಲುಗಳ ಮೇಲೆ ಕೇಂದ್ರೀಕರಿಸಿದ ಪ್ರಧಾನಿ ಮೋದಿ, ರಾಜ್ಯದಲ್ಲಿ ಪ್ರಸ್ತುತ ಸರ್ಕಾರದ ಹಿಂದಿನ ಅವಧಿಯಲ್ಲಿ ಪ್ರಾರಂಭಿಸಿದ ಪ್ರಯತ್ನಗಳು ನಂತರ ಬಂದ ಸರ್ಕಾರ ಅವಧಿಯಲ್ಲಿ ವಿಳಂಬವಾಗಿವೆ ಎಂದು ಹೇಳಿದರು. ಇಂದಿನ ರಾಜ್ಯ ಸರ್ಕಾರವು ಈ ಯೋಜನೆಗಳಿಗೆ ಮರುಜೀವ ನೀಡಿ ಚಾಲನೆ ನೀಡಿದೆ ಎಂದು ಪ್ರಧಾನಮಂತ್ರಿಯವರು ಮಾಹಿತಿ ನೀಡಿದರು. ನಾಗ್ಪುರ, ವಾರ್ಧಾ, ಅಮರಾವತಿ, ಯವತ್ಮಾಲ್, ಅಕೋಲಾ ಮತ್ತು ಬುಲ್ಧಾನಾ ಜಿಲ್ಲೆಗಳಲ್ಲಿ 10 ಲಕ್ಷ ಎಕರೆ ಭೂಮಿಗೆ ನೀರಾವರಿ ಒದಗಿಸುವ ಗುರಿಯನ್ನು ಹೊಂದಿರುವ 85,000 ಕೋಟಿ ರೂಪಾಯಿ ವೆಚ್ಚದ ವನ್-ಗಂಗಾ ಮತ್ತು ನಲ್-ಗಂಗಾ ನದಿ ಜೋಡಣೆ ಯೋಜನೆಯನ್ನು ಅವರು ಉಲ್ಲೇಖಿಸಿದರು.‌

ಮಹಾರಾಷ್ಟ್ರದ ರೈತರ ಬೇಡಿಕೆಗಳನ್ನು ಈಡೇರಿಸಲು ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಪ್ರಧಾನಿ ಹೇಳಿದರು. ಈರುಳ್ಳಿ ಮೇಲಿನ ರಫ್ತು ತೆರಿಗೆಯನ್ನು ಶೇ.40 ರಿಂದ ಶೇ.20 ಕ್ಕೆ ಇಳಿಸಿರುವುದನ್ನು ಪ್ರಸ್ತಾಪಿಸಿದ ಅವರು, ಈ ಪ್ರದೇಶದ ಈರುಳ್ಳಿ ರೈತರಿಗೆ ತಕ್ಷಣದ ಪರಿಹಾರವನ್ನು ಒದಗಿಸುವ ಗುರಿಯನ್ನು ಹೊಂದಿದೆ ಎಂದರು. ಆಮದು ಮಾಡಿಕೊಳ್ಳುವ ಖಾದ್ಯ ತೈಲಗಳ ಪರಿಣಾಮದಿಂದ ದೇಶೀಯ ರೈತರನ್ನು ರಕ್ಷಿಸಲು ತೆಗೆದುಕೊಂಡ ಕ್ರಮಗಳ ಬಗ್ಗೆಯೂ ಪ್ರಸ್ತಾಪಿಸಿದ ಮೋದಿ, "ನಾವು ಖಾದ್ಯ ತೈಲಗಳ ಆಮದಿನ ಮೇಲೆ ಶೇ.20 ತೆರಿಗೆಯನ್ನು ವಿಧಿಸಿದ್ದೇವೆ ಮತ್ತು ಸಂಸ್ಕರಿಸಿದ ಸೋಯಾಬೀನ್, ಸೂರ್ಯಕಾಂತಿ ಮತ್ತು ತಾಳೆ ಎಣ್ಣೆಯ ಮೇಲೆ ಕಸ್ಟಮ್ಸ್‌ ಸುಂಕವನ್ನು ಶೇ.12.5 ರಿಂದ ಶೇ.32.5ಕ್ಕೆ ಹೆಚ್ಚಿಸಲಾಗಿದೆ. ಈ ಕ್ರಮವು ವಿಶೇಷವಾಗಿ ಮಹಾರಾಷ್ಟ್ರದಾದ್ಯಂತ ಸೋಯಾಬೀನ್ ರೈತರಿಗೆ ಪ್ರಯೋಜನವನ್ನು ನೀಡುತ್ತದೆ ಎಂದು ಅವರು ಹೇಳಿದರು. ಈ ಪ್ರಯತ್ನಗಳು ಶೀಘ್ರದಲ್ಲೇ ಕೃಷಿ ಕ್ಷೇತ್ರಕ್ಕೆ ಸಕಾರಾತ್ಮಕ ಫಲಿತಾಂಶಗಳನ್ನು ನೀಡುತ್ತವೆ ಎಂದು ಅವರು ಭರವಸೆ ವ್ಯಕ್ತಪಡಿಸಿದರು. ಪ್ರಧಾನಿ ಮೋದಿ ಅವರು ಸುಳ್ಳು ಭರವಸೆಗಳಿಗೆ ಬಲಿಯಾಗದಂತೆ ಎಚ್ಚರಿಕೆ ನೀಡಿದರು ಮತ್ತು ಇಂದಿಗೂ ಸಾಲ ಮನ್ನಾಕ್ಕಾಗಿ ಹೋರಾಡುತ್ತಿರುವ ತೆಲಂಗಾಣದ ರೈತರನ್ನು ಪ್ರಸ್ತಾಪಿಸಿದರು. ಮಹಾರಾಷ್ಟ್ರದ ರೈತರು ಜಾಗರೂಕರಾಗಿರಬೇಕು ಮತ್ತು ದಾರಿತಪ್ಪಿಸುವ ಭರವಸೆಗಳಿಂದ ಎಚ್ಚರವಾಗಿರಬೇಕು ಎಂದು ಕರೆ ನೀಡಿದರು.

ಸಮಾಜದಲ್ಲಿ ಒಡಕು ಮೂಡಿಸುವ ಶಕ್ತಿಗಳು ಮತ್ತು ವಿದೇಶಿ ನೆಲದಲ್ಲಿ ಭಾರತೀಯ ಸಂಪ್ರದಾಯ ಮತ್ತು ಸಂಸ್ಕೃತಿಯನ್ನು ಅವಮಾನಿಸುವ ಶಕ್ತಿಗಳ ವಿರುದ್ಧ ಪ್ರಧಾನಿ ಮೋದಿ ಎಚ್ಚರಿಕೆ ನೀಡಿದರು. ಲೋಕಮಾನ್ಯ ತಿಲಕರ ನೇತೃತ್ವದಲ್ಲಿ ನಡೆದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಗಣೇಶ ಉತ್ಸವವು ಭಾರತದಲ್ಲಿ ಏಕತೆಯ ಹಬ್ಬವಾಗಿ ಮಾರ್ಪಟ್ಟಿದ್ದು, ಎಲ್ಲ ಸಮಾಜ ಮತ್ತು ವರ್ಗದ ಜನರು ಒಟ್ಟಾಗಿ ಆಚರಿಸುತ್ತಿದ್ದರು ಎಂದು ಅವರು ನೆನಪಿಸಿದರು. ನಾಗರಿಕರು ಸಂಪ್ರದಾಯ ಮತ್ತು ಪ್ರಗತಿ ಮತ್ತು ಗೌರವ ಮತ್ತು ಅಭಿವೃದ್ಧಿಯ ಕಾರ್ಯಸೂಚಿಯೊಂದಿಗೆ ನಿಲ್ಲಬೇಕು ಎಂದು ಅವರು ಒತ್ತಾಯಿಸಿದರು. "ನಾವು ಒಟ್ಟಾಗಿ ಮಹಾರಾಷ್ಟ್ರದ ಅಸ್ಮಿತೆಯನ್ನು ರಕ್ಷಿಸುತ್ತೇವೆ ಮತ್ತು ಅದರ ಹೆಮ್ಮೆಯನ್ನು ಹೆಚ್ಚಿಸುತ್ತೇವೆ. ನಾವು ಮಹಾರಾಷ್ಟ್ರದ ಕನಸುಗಳನ್ನು ಈಡೇರಿಸುತ್ತೇವೆ" ಎಂದು ಹೇಳಿದ ಶ್ರೀ ಮೋದಿ ಮಾತು ಮುಗಿಸಿದರು.

 

ಈ ಸಂದರ್ಭದಲ್ಲಿ ಮಹಾರಾಷ್ಟ್ರದ ರಾಜ್ಯಪಾಲ ಶ್ರೀ ಸಿ.ಪಿ. ರಾಧಾಕೃಷ್ಣನ್, ಮಹಾರಾಷ್ಟ್ರದ ಮುಖ್ಯಮಂತ್ರಿ ಶ್ರೀ ಏಕನಾಥ್ ಶಿಂಧೆ, ಕೇಂದ್ರ ಮಧ್ಯಮ, ಸಣ್ಣ ಮತ್ತು ಸೂಕ್ಷ್ಮ ಉದ್ಯಮಗಳ ಸಚಿವ ಶ್ರೀ ಜಿತನ್ ರಾಮ್ ಮಾಂಝಿ, ಕೇಂದ್ರ ಕೌಶಲ್ಯಾಭಿವೃದ್ಧಿ ಮತ್ತು ಉದ್ಯಮಶೀಲತೆಯ ರಾಜ್ಯ ಸಚಿವ ಶ್ರೀ ಜಯಂತ್ ಚೌಧರಿ ಮತ್ತು ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಗಳಾದ ಶ್ರೀ ದೇವೇಂದ್ರ ಫಡ್ನವೀಸ್ ಮತ್ತು ಶ್ರೀ ಅಜಿತ್ ಪವಾರ್ ಮತ್ತು ಇತರ ಗಣ್ಯರು ಉಪಸ್ಥಿತರಿದ್ದರು. ಹಿನ್ನೆಲೆ

ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿಯವರು ಪಿ.ಎಂ.ವಿಶ್ವಕರ್ಮ ಫಲಾನುಭವಿಗಳಿಗೆ ಪ್ರಮಾಣ ಪತ್ರ ಮತ್ತು ಸಾಲವನ್ನು ಬಿಡುಗಡೆ ಮಾಡಿದರು. ಯೋಜನೆಯಡಿಯಲ್ಲಿ ಕುಶಲಕರ್ಮಿಗಳಿಗೆ ನೀಡಿದ ದೃಢವಾದ ಬೆಂಬಲಕ್ಕೆ ಸಾಂಕೇತಿಕವಾಗಿ, ಅವರು 18 ವೃತ್ತಿಗಳ 18 ಫಲಾನುಭವಿಗಳಿಗೆ ಪಿಎಂ ವಿಶ್ವಕರ್ಮ ಯೋಜನೆಯ ಸಾಲವನ್ನು ವಿತರಿಸಿದರು. ಪರಂಪರೆ ಮತ್ತು ಸಮಾಜಕ್ಕೆ ಅವರ ನಿರಂತರ ಕೊಡುಗೆಯ ಗೌರವಾರ್ಥವಾಗಿ, ಪಿಎಂ ವಿಶ್ವಕರ್ಮ ಯೋಜನೆಯ ಒಂದು ವರ್ಷದ ಪ್ರಗತಿಯನ್ನು ಗುರುತಿಸಲು ಸ್ಮರಣಾರ್ಥ ಅಂಚೆ ಚೀಟಿಯನ್ನು ಬಿಡುಗಡೆ ಮಾಡಿದರು.

ಪ್ರಧಾನಮಂತ್ರಿಯವರು ಮಹಾರಾಷ್ಟ್ರದ ಅಮರಾವತಿಯಲ್ಲಿ ಪಿಎಂ ಮೆಗಾ ಇಂಟಿಗ್ರೇಟೆಡ್ ಟೆಕ್ಸ್‌ಟೈಲ್ ರೀಜನ್ಸ್ ಅಂಡ್‌ ಅಪರೆಲ್ (ಪಿಎಂ ಮಿತ್ರಾ) ಪಾರ್ಕ್‌ ಗೆ ಶಂಕುಸ್ಥಾಪನೆ ಮಾಡಿದರು. 1000 ಎಕರೆಗಳಷ್ಟು ವಿಸ್ತಾರವಾಗಿರುವ ಈ  ಪಾರ್ಕ್‌ ಅನ್ನು ಮಹಾರಾಷ್ಟ್ರ ಕೈಗಾರಿಕಾ ಅಭಿವೃದ್ಧಿ ನಿಗಮ (MIDC) ರಾಜ್ಯ ಅನುಷ್ಠಾನ ಸಂಸ್ಥೆಯಾಗಿ ಅಭಿವೃದ್ಧಿಪಡಿಸುತ್ತಿದೆ. ಜವಳಿ ಉದ್ಯಮಕ್ಕಾಗಿ 7 ಪ್ರಧಾನಮಂತ್ರಿ ಮಿತ್ರಾ ಪಾರ್ಕ್‌ ಗಳನ್ನು ಸ್ಥಾಪಿಸಲು ಭಾರತ ಸರ್ಕಾರವು ಅನುಮೋದನೆ ನೀಡಿತ್ತು. ಪಿಎಂ ಮಿತ್ರಾ ಪಾರ್ಕ್ ಭಾರತವನ್ನು ಜವಳಿ ಉತ್ಪಾದನೆ ಮತ್ತು ರಫ್ತಿನಲ್ಲಿ ಜಾಗತಿಕ ಕೇಂದ್ರವನ್ನಾಗಿ ಮಾಡುವ ದೃಷ್ಟಿಯನ್ನು ಸಾಕಾರಗೊಳಿಸುವ ಪ್ರಮುಖ ಹೆಜ್ಜೆಯಾಗಿದೆ. ವಿದೇಶಿ ನೇರ ಹೂಡಿಕೆ (ಎಫ್‌ ಡಿ ಐ) ಸೇರಿದಂತೆ ದೊಡ್ಡ ಪ್ರಮಾಣದ ಹೂಡಿಕೆಯನ್ನು ಆಕರ್ಷಿಸುವ ಮತ್ತು ಈ ಪ್ರದೇಶದಲ್ಲಿ ನಾವೀನ್ಯತೆ ಮತ್ತು ಉದ್ಯೋಗ ಸೃಷ್ಟಿಯನ್ನು ಉತ್ತೇಜಿಸುವ ವಿಶ್ವದರ್ಜೆಯ ಕೈಗಾರಿಕಾ ಮೂಲಸೌಕರ್ಯವನ್ನು ರಚಿಸಲು ಇದು ಸಹಾಯ ಮಾಡುತ್ತದೆ.

 

ಪ್ರಧಾನಮಂತ್ರಿಯವರು ಮಹಾರಾಷ್ಟ್ರ ಸರ್ಕಾರದ ‘ಆಚಾರ್ಯ ಚಾಣಕ್ಯ ಕೌಶಲ್ಯ ಅಭಿವೃದ್ಧಿ’ಯೋಜನೆಗೆ ಚಾಲನೆ ನೀಡಿದರು. 15 ರಿಂದ 45 ವಯೋಮಾನದ ಯುವಕರಿಗೆ ತರಬೇತಿ ನೀಡಲು ರಾಜ್ಯದಾದ್ಯಂತ ಪ್ರತಿಷ್ಠಿತ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿ ಕೇಂದ್ರಗಳನ್ನು ಸ್ಥಾಪಿಸಲಾಗುವುದು. ಇದು ಯುವಕರು ಸ್ವಾವಲಂಬಿಗಳಾಗಲು ಮತ್ತು ವಿವಿಧ ಉದ್ಯೋಗಾವಕಾಶಗಳನ್ನು ಪಡೆಯಲು ಅನುವು ಮಾಡಿಕೊಡುತ್ತದೆ. ರಾಜ್ಯಾದ್ಯಂತ ಸುಮಾರು 1,50,000 ಯುವಕರು ಪ್ರತಿ ವರ್ಷ ಉಚಿತ ಕೌಶಲ್ಯ ಅಭಿವೃದ್ಧಿ ತರಬೇತಿಯನ್ನು ಪಡೆಯುತ್ತಾರೆ.

 

ಪ್ರಧಾನಮಂತ್ರಿಯವರು ‘ಪುಣ್ಯಶ್ಲೋಕ ಅಹಲ್ಯಾ ದೇವಿ ಹೋಳ್ಕರ್ ಮಹಿಳಾ ಸ್ಟಾರ್ಟಪ್ ಯೋಜನೆʼಗೆ ಚಾಲನೆ ನೀಡಿದರು. ಈ ಯೋಜನೆಯಡಿಯಲ್ಲಿ, ಮಹಾರಾಷ್ಟ್ರದಲ್ಲಿ ಮಹಿಳೆಯರ ನೇತೃತ್ವದ ಸ್ಟಾರ್ಟ್‌ಅಪ್‌ ಗಳಿಗೆ ಆರಂಭಿಕ ಹಂತದಲ್ಲಿ ನೆರವು ನೀಡಲಾಗುತ್ತದೆ. 25 ಲಕ್ಷ ರೂಪಾಯಿಯವರೆಗೆ ಆರ್ಥಿಕ ನೆರವು ನೀಡಲಾಗುವುದು. ಈ ಯೋಜನೆಯಡಿಯಲ್ಲಿ ಒಟ್ಟು ನಿಬಂಧನೆಗಳ ಶೇ.25 ರಷ್ಟನ್ನು ಹಿಂದುಳಿದ ವರ್ಗಗಳ ಮಹಿಳೆಯರಿಗೆ ಮತ್ತು ಆರ್ಥಿಕವಾಗಿ ದುರ್ಬಲ ವರ್ಗಗಳಿಗೆ ಮೀಸಲಿಡಲಾಗುತ್ತದೆ. ಇದು ಮಹಿಳೆಯರ ನೇತೃತ್ವದ ಸ್ಟಾರ್ಟ್‌ಅಪ್‌ ಗಳು ಸ್ವಾವಲಂಬಿ ಮತ್ತು ಸ್ವತಂತ್ರವಾಗಲು ಸಹಾಯ ಮಾಡುತ್ತದೆ.

 

Click here to read full text speech

Explore More
78ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಕೆಂಪು ಕೋಟೆಯಿಂದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಡಿದ ಭಾಷಣದ ಕನ್ನಡ ಅನುವಾದ

ಜನಪ್ರಿಯ ಭಾಷಣಗಳು

78ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಕೆಂಪು ಕೋಟೆಯಿಂದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಡಿದ ಭಾಷಣದ ಕನ್ನಡ ಅನುವಾದ
Positive consumer sentiments drive automobile dispatches up 12% in 2024: SIAM

Media Coverage

Positive consumer sentiments drive automobile dispatches up 12% in 2024: SIAM
NM on the go

Nm on the go

Always be the first to hear from the PM. Get the App Now!
...
Text of PM's speech at inauguration of Sri Sri Radha Madanmohanji Temple of ISKCON in Navi Mumbai
January 15, 2025
The followers of ISKCON spread across the world are tied by the thread of devotion to Lord Krishna which keeps them all connected to each other, which keeps guiding every devotee 24 hours a day, the formula of thoughts of Srila Prabhupada Swami: PM
India is not just a piece of land bounded by geographical boundaries, its a living land, a living culture, the consciousness of this culture is spirituality, if we want to understand India, we have to first imbibe spirituality: PM
The main foundation of our spiritual culture is the spirit of service: PM

हरे कृष्णा – हरे कृष्णा !

हरे कृष्णा – हरे कृष्णा !

महाराष्ट्र के गवर्नर सी. पी. राधाकृष्णन जी, यहां के लोकप्रिय मुख्यमंत्री श्री देवा भाऊ, उप-मुख्यमंत्री एकनाथ शिंदे जी, श्रद्धेय गुरु प्रसाद स्वामी जी, हेमा मालिनी जी, सभी सम्मानित अतिथि, भक्तगण, भाइयों और बहनों।

आज ज्ञान और भक्ति की इस महान धरती पर इस्कॉन के प्रयासों से श्री श्री राधा मदनमोहनजी मंदिर का उद्घाटन हो रहा है। मेरा सौभाग्य है कि मुझे ऐसे अलौकिक अनुष्ठान में अपनी भूमिका निभाने का पुण्य प्राप्त हुआ है। ये इस्कॉन के संतों का अपार स्नेह और अपनापन है, श्रील प्रभुपाद स्वामी का आशीर्वाद है, मैं सभी पूज्य संतों का आभार करता हूँ, उनके चरणों में प्रणाम करता हूँ। मैं अभी देख रहा था, श्री राधा मदनमोहनजी मंदिर परिसर की जो रूपरेखा है, इस मंदिर के पीछे जो विचार है, इसका जो स्वरूप है, उसमें आध्यात्म और ज्ञान की सम्पूर्ण परंपरा के दर्शन होते हैं। मंदिर में ईश्वर के विविध स्वरूपों के दर्शन होते हैं, जो ‘एको अहम् बहु स्याम’ ये हमारे विचार को भी अभिव्यक्त करते हैं। नई पीढ़ी की रुचि और आकर्षण के अनुरूप यहाँ रामायण, महाभारत, उसको समेटे हुए, उस पर आधारित म्यूजियम भी बनाया जा रहा है। यहां वृंदावन के 12 जंगलों पर आधारित एक उद्यान भी विकसित किया गया है। मुझे विश्वास है, ये मंदिर परिसर, आस्था के साथ-साथ भारत की चेतना को भी समृद्ध करने का एक पुण्य केंद्र बनेगा। मैं इस पुनीत कार्य के लिए इस्कॉन के सभी संतों और सदस्यों को, और महाराष्ट्र के लोगों को बहुत-बहुत बधाई देता हूँ।

साथियों,

आज इस मौके पर मुझे परम श्रद्धेय गोपाल कृष्ण गोस्वामी महाराज का भावुक स्मरण भी हो रहा है। इस प्रोजेक्ट में उनका विज़न जुड़ा हुआ है, भगवान श्रीकृष्ण के प्रति उनकी अगाध भक्ति का आशीर्वाद जुड़ा हुआ है। आज वो भौतिक शरीर से भले ही यहाँ न हों, लेकिन उनकी आध्यात्मिक उपस्थिति हम सब महसूस कर रहे हैं। मेरे जीवन में तो उनके स्नेह का, उनकी स्मृतियों का एक अलग ही स्थान है। उन्होंने जब विश्व की सबसे बड़ी गीता का लोकार्पण करवाया, तो उसके लिए मुझे आमंत्रित किया और मुझे भी वो पुण्य प्रसाद मिला। श्रील प्रभुपाद जी की 125वीं जन्मजयंती के अवसर पर भी मुझे उनका सानिध्य प्राप्त हुआ था। मुझे संतोष है कि आज मैं उनके एक और सपने को पूरा होते देख रहा हूँ, उसका साक्षी बन रहा हूँ।

साथियों,

दुनियाभर में फैले इस्कॉन के अनुयायी भगवान श्रीकृष्ण की भक्ति के डोर से बंधे हैं। उन सबको एक-दूसरे से कनेक्ट रखने वाला एक और सूत्र है, जो चौबीसों घंटे हर भक्त को दिशा दिखाता रहता है। ये श्रील प्रभुपाद स्वामी के विचारों का सूत्र है। उन्होंने उस समय वेद-वेदांत और गीता के महत्व को आगे बढ़ाया, जब देश गुलामी की बेड़ियों में जकड़ा था। उन्होंने भक्ति वेदांत को जन सामान्य की चेतना से जोड़ने का अनुष्ठान किया। 70 वर्ष की आयु में जब लोग अपने कर्तव्यों को पूरा मान चुके होते हैं, उस समय उन्होंने इस्कॉन जैसा मिशन शुरू किया। इसके बाद उन्होंने लगातार दुनियाभर का भ्रमण किया, श्रीकृष्ण के संदेश को दुनिया के कोने-कोने में ले गए। आज दुनिया के हर कोने में करोड़ों लोगों को उनकी तपस्या का प्रसाद मिल रहा है। श्रील प्रभुपाद स्वामी की सक्रियता, उनके प्रयास आज भी हमें प्रेरित करते हैं।

साथियों,

हमारा भारत एक असाधारण और अद्भुत भूमि है। भारत केवल भौगोलिक सीमाओं में बंधा भूमि का एक टुकड़ा मात्र नहीं है। भारत एक जीवंत धरती है, एक जीवंत संस्कृति है, जीवंत परंपरा है। और, इस संस्कृति की चेतना है- यहाँ का आध्यात्म! इसलिए, यदि भारत को समझना है, तो हमें पहले आध्यात्म को आत्मसात करना होता है। जो लोग दुनिया को केवल भौतिक दृष्टि से देखते हैं, उन्हें भारत भी अलग-अलग भाषा और प्रांतों का समूह नजर आता है। लेकिन, जब आप इस सांस्कृतिक चेतना से अपनी आत्मा को जोड़ते हैं, तब आपको भारत के विराट रूप के दर्शन होते हैं। तब आप देख पाते हैं, सुदूर पूरब में बंगाल की धरती पर चैतन्य महाप्रभु जैसे संत अवतरित होते हैं। पश्चिम में महाराष्ट्र में संत नामदेव, तुकाराम, और ज्ञानदेव जैसे संतों का अवतरण होता है। चैतन्य महाप्रभु ने महावाक्य मंत्र जन-जन तक पहुंचाया। महाराष्ट्र के संतों ने ‘रामकृष्ण हरी’, रामकृष्ण हरी के मंत्र से आध्यात्मिक अमृत बांटा। संत ज्ञानेश्वर ने ज्ञानेश्वरी गीता के जरिए भगवान कृष्ण के गूढ ज्ञान को जनसुलभ बनाया। इसी तरह, श्रील प्रभुपाद जी ने इस्कॉन के माध्यम से गीता को लोकप्रिय बनाया। गीता की टीकाएं प्रकाशित कर उसकी भावना से लोगों को जोड़ा। अलग-अलग स्थानों पर जन्में ये सभी संत अपने-अपने तरीके से कृष्ण भक्ति की धारा को गति देते रहे हैं। इन संतों के जन्मकाल में वर्षों का अंतर है, अलग-अलग भाषा, अलग-अलग पद्धति है, लेकिन, बोध एक है, विचार एक है, चेतना एक है। सभी ने भक्ति के प्रकाश से समाज में नए प्राण फूंके, उसे नई दिशा दी, अविरत ऊर्जा दी।

साथियों,

आप सभी परिचित हैं, हमारी आध्यात्मिक संस्कृति की नींव का प्रमुख आधार सेवा भाव है। आध्यात्मिकता में जनार्दन-सेवा और जन-सेवा, एक हो जाते हैं। हमारी आध्यात्मिक संस्कृति साधकों को समाज से जोड़ती है, उनमें करुणा की भावना पैदा करती है। ये भक्ति-भाव उन्हें सेवा-भाव की ओर ले जाता है।

दातव्यम् इति यत् दानम दीयते अनुपकारिणे देशे काले च पात्रे च तत् दानं सात्त्विकं स्मृतम्।।

श्री कृष्ण ने हमें इस श्लोक में सच्ची सेवा का मतलब बताया है। उन्होंने बहुत सुंदर तरीके से समझाया है कि सच्ची सेवा वही है, जिसमें आपका कोई स्वार्थ न हो। हमारे सभी धार्मिक ग्रंथों और शास्त्रों के मूल में भी सेवा भावना है। इस्कॉन जैसी इतनी विराट संस्था भी, इसी सेवा भावना से काम करती है। शिक्षा, स्वास्थ्य, और पर्यावरण से जुड़े कितने ही काम आपके प्रयासों से होते हैं। कुम्भ में इस्कॉन सेवा के कई बड़े कार्य कर रहा है।

साथियों,

मुझे संतोष है कि हमारी सरकार भी इसी सेवा भावना के साथ पूरे समर्पण से लगातार देशवासियों के हित में काम कर रही है। हर घर में शौचालय बनवाना, हर गरीब महिला को उज्ज्वला का गैस कनेक्शन देना, हर घर तक नल से जल की सुविधा पहुंचाना, हर गरीब को 5 लाख रुपए तक मुफ्त इलाज की सुविधा देना, 70 वर्ष की आयु से ऊपर के हर बुजुर्ग को इस सुविधा के दायरे में लाना, हर बेघर को पक्के घर देना, ये इसी सेवा भावना के साथ, इसी समर्पण भाव के साथ किए गए कार्य हैं, जो मेरे लिए हमारी महान सांस्कृतिक परंपरा का प्रसाद है। सेवा की यही भावना, सच्चा सामाजिक न्याय लाती है, सच्चे सेक्यूलरिज्म का प्रतीक है।

साथियों,

हमारी सरकार कृष्ण सर्किट के माध्यम से देश के अलग-अलग तीर्थों, धार्मिक स्थानों को जोड़ रही है। इस सर्किट का विस्तार गुजरात, राजस्थान, हरियाणा, उत्तर प्रदेश और ओडिशा तक है। स्वदेश दर्शन और प्रसाद योजना के द्वारा इन स्थानों को विकसित किया जा रहा है। इन मंदिरों में भगवान श्रीकृष्ण के अलग-अलग रूपों के दर्शन होते हैं। कहीं वो बाल रूप में दिखते हैं, तो कहीं उनके साथ राधा रानी की भी पूजा होती है। किसी मंदिर में उनका कर्मयोगी स्वरूप दिखाई देता है, तो कहीं राजा के रूप में उनकी पूजा की जाती है। हमारा प्रयास है कि भगवान श्री कृष्ण के जीवन से जुड़े अलग-अलग स्थलों तक पहुंचना और मंदिरों के दर्शन करना आसान हो। इसके लिए विशेष ट्रेनें भी चलाई जा रही हैं। इस्कॉन भी कृष्ण सर्किट से जुड़े आस्था के इन केंद्रों पर श्रद्धालुओं को लाने में जरूर सहयोग कर सकता है। मेरा आपसे आग्रह है कि आप अपने सेंटर से जुड़ने वाले सभी भक्तों को भारत में कम से कम 5 ऐसे स्थानों पर जरूर भेजें।

साथियों,

पिछले एक दशक में देश में विकास और विरासत को एक साथ गति मिली है। विरासत से विकास के इस मिशन को इस्कॉन जैसी संस्थाओं का महत्वपूर्ण सहयोग मिल रहा है। हमारे मंदिर या धार्मिक स्थल तो सदियों से सामाजिक चेतना के केंद्र रहे हैं। हमारे गुरुकुलों का शिक्षा और कौशल विकास को बढ़ावा देने में अहम योगदान रहा है। इस्कॉन भी अपने कार्यक्रमों के जरिए युवाओं को प्रेरित करता है कि वो आध्यात्म को अपने जीवन का हिस्सा बनाएं। और अपनी परंपरा पर चलते हुए, इस्कॉन के युवा साधक कैसे आधुनिक टेक्नोलॉजी को आत्मसात करते हैं, ये देखना और अद्भुत होता है। और आपका इन्फॉरमेशन नेटवर्क तो दूसरों के लिए सीखने योग्य है। मुझे विश्वास है, इस्कॉन के सानिध्य में युवा सेवा और समर्पण की भावना से राष्ट्रहित में काम करेंगे। इस परिसर में भक्तिवेदांत आयुर्वेदिक हीलिंग सेंटर की सुविधा भी लोगों को मिलेगी। और मेरा तो मत है, दुनिया के लिए मैंने हमेशा संदेश दिया है- ‘हील इन इंडिया’। शुश्रूषा के लिए, और सर्वांगीण रूप से स्वस्थ होने के लिए, well being के लिए ‘हील इन इंडिया’। यहाँ भक्ति वेदान्त कॉलेज फॉर वेदिक एजुकेशन की स्थापना भी की गई है। इनका लाभ हर समाज को होगा, पूरे देश को होगा।

साथियों,

हम सब देख रहे हैं कि वर्तमान समाज जितना आधुनिक हो रहा है, उतनी ही उसे संवेदनशीलता की भी जरूरत है। हमें संवदेनशील इंसानों का समाज तैयार करना है। एक ऐसा समाज जो मानवीय गुणों के साथ आगे बढ़े। एक ऐसा समाज जहां अपनेपन की भावना का विस्तार हो। इस्कॉन जैसी संस्था अपने भक्ति वेदांत के माध्यम से दुनिया की संवेदनशीलता को नया प्राण दे सकती है। आपकी संस्था अपनी क्षमताओं का उपयोग कर, पूरी दुनिया में मानवीय मूल्यों का विस्तार कर सकती है। मुझे विश्वास है कि प्रभुपाद स्वामी के आदर्शों को जीवंत बनाए रखने के लिए इस्कॉन के महानुभाव इसी तरह हमेशा तत्पर रहेंगे। मैं एक बार फिर राधा मदनमोहनजी मंदिर के लिए पूरे इस्कॉन परिवार को, सभी देशवासियों को बहुत-बहुत बधाई देता हूं।

आप सबका बहुत-बहुत धन्यवाद।

हरे कृष्णा – हरे कृष्णा !

हरे कृष्णा – हरे कृष्णा !

हरे कृष्णा – हरे कृष्णा !