ಸುಮಾರು 10,000 ಕೋಟಿ ವೆಚ್ಚದ ಹಲವಾರು ನೈರ್ಮಲ್ಯ ಮತ್ತು ನೈರ್ಮಲ್ಯ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು ಮತ್ತು ಉದ್ಘಾಟಿಸಿದರು
"ಸ್ವಚ್ಛ ಭಾರತ ಅಭಿಯಾನ ಹತ್ತು ವರ್ಷಗಳನ್ನು ಪೂರೈಸಿದ ಸಂದರ್ಭದಲ್ಲಿ, ಸ್ವಚ್ಛತೆಯನ್ನು 'ಜನಾಂದೋಲನ'ವನ್ನಾಗಿ ಮಾಡಿದ 140 ಕೋಟಿ ಭಾರತೀಯರ ಅಚಲವಾದ ಮನೋಭಾವಕ್ಕೆ ನಾನು ವಂದಿಸುತ್ತೇನೆ"
"ಸ್ವಚ್ಛ ಭಾರತವು ಈ ಶತಮಾನದ ವಿಶ್ವದ ಅತಿದೊಡ್ಡ ಮತ್ತು ಅತ್ಯಂತ ಯಶಸ್ವಿ ಜನಾಂದೋಲನವಾಗಿದೆ"
"ಸ್ವಚ್ಛ ಭಾರತ ಅಭಿಯಾನ ದೇಶದ ಜನಸಾಮಾನ್ಯರ ಜೀವನದ ಮೇಲೆ ಬೀರಿದ ಪ್ರಭಾವವು ಅಮೂಲ್ಯವಾಗಿದೆ"
"ಸ್ವಚ್ಛ ಭಾರತ ಅಭಿಯಾನದಿಂದಾಗಿ ಮಹಿಳೆಯರಲ್ಲಿ ಸಾಂಕ್ರಾಮಿಕ ರೋಗಗಳು ಗಣನೀಯವಾಗಿ ಕಡಿಮೆಯಾಗಿವೆ"
"ಹೆಚ್ಚುತ್ತಿರುವ ಸ್ವಚ್ಛತೆಯ ಪ್ರತಿಷ್ಠೆಯಿಂದಾಗಿ ದೇಶದಲ್ಲಿ ಭಾರೀ ಮಾನಸಿಕ ಬದಲಾವಣೆಯಾಗಿದೆ"
"ಈಗ ಸ್ವಚ್ಛತೆಯು ಸಮೃದ್ಧಿಯ ಹೊಸ ಮಾರ್ಗವಾಗಿದೆ"
"ಸ್ವಚ್ಛ ಭಾರತ ಅಭಿಯಾನವು ಮರುಬಳಕೆ ಆರ್ಥಿಕತೆಗೆ ಹೊಸ ಉತ್ತೇಜನವನ್ನು ನೀಡಿದೆ"
"ಸ್ವಚ್ಛತೆಯ ಅಭಿಯಾನವು ಒಂದು ದಿನದ ಆಚರಣೆಯಲ್ಲ, ಜೀವನಪೂರ್ತಿ ಆಚರಣೆಯಾಗಿದೆ"
"ಕೊಳಕು ನಿವಾರಣೆಯು ನಮ್ಮನ್ನು ಹೆಚ್ಚು ಹುರುಪುಗೊಳಿಸುತ್ತದೆ ಮತ್ತು ಶುಚಿತ್ವದ ಕಡೆಗೆ ಸಬಲರನ್ನಾಗಿಸುತ್ತದೆ."
"ನಾವು ಎಲ್ಲಿ ವಾಸಿಸುತ್ತೇವೆಯೋ, ಅದು ನಮ್ಮ ಮನೆಯಾಗಿರಲಿ, ನಮ್ಮ ನೆರೆಹೊರೆಯಾಗಿರಲಿ ಅಥವಾ ನಮ್ಮ ಕೆಲಸದ ಸ್ಥಳವಾಗಿರಲಿ, ನಾವು ಸ್ವಚ್ಛತೆಯನ್ನು ಕಾಪಾಡಿಕೊಳ್ಳುತ್ತೇವೆ ಎಂದು ಪ್ರತಿಜ್ಞೆ ಮಾಡೋಣ."

ಸ್ವಚ್ಛತೆಗಾಗಿ ಅತ್ಯಂತ ಮಹತ್ವದ ಜನಾಂದೋಲನಗಳಲ್ಲಿ ಒಂದಾದ ಸ್ವಚ್ಛ ಭಾರತ ಅಭಿಯಾನ ಪ್ರಾರಂಭವಾಗಿ 10 ವರ್ಷಗಳನ್ನು ಪೂರೈಸಿದ ಸಂದರ್ಭದಲ್ಲಿ, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಅಕ್ಟೋಬರ್ 2 ರಂದು 155 ನೇ ಗಾಂಧಿ ಜಯಂತಿಯ ಸಂದರ್ಭದಲ್ಲಿ ಸ್ವಚ್ಛ ಭಾರತ ದಿವಸ್ 2024 ಕಾರ್ಯಕ್ರಮದಲ್ಲಿ ಭಾಗವಹಿಸಿದರು. ನವದೆಹಲಿಯ ವಿಜ್ಞಾನ ಭವನದಲ್ಲಿ. ಅಮೃತ್ ಮತ್ತು ಅಮೃತ್ 2.0, ಸ್ವಚ್ಛ ಗಂಗಾ ರಾಷ್ಟ್ರೀಯ ಮಿಷನ್ ಮತ್ತು ಗೋಬರ್ಧನ್ ಯೋಜನೆ ಸೇರಿದಂತೆ 9600 ಕೋಟಿ ರೂಪಾಯಿಗೂ ಹೆಚ್ಚು ಮೌಲ್ಯದ ಹಲವಾರು ನೈರ್ಮಲ್ಯ ಮತ್ತು ಸ್ವಚ್ಛತೆ ಯೋಜನೆಗಳಿಗೆ ಶ್ರೀ ಮೋದಿ ಅವರು ಚಾಲನೆ ನೀಡಿದರು ಮತ್ತು ಅಡಿಪಾಯ ಹಾಕಿದರು. ಸ್ವಚ್ಛತಾ ಹಿ ಸೇವಾ 2024 ರ ಧ್ಯೇಯ 'ಸ್ವಭಾವ ಸ್ವಚ್ಛತಾ, ಸಂಸ್ಕಾರ ಸ್ವಚ್ಛತಾ' ಆಗಿದೆ.

ಈ ಸಂದರ್ಭದಲ್ಲಿ ಪ್ರಧಾನಮಂತ್ರಿಯವರು ಪೂಜ್ಯ ಬಾಪು ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜನ್ಮ ದಿನಾಚರಣೆಗಳನ್ನು ಪ್ರಸ್ತಾಪಿಸಿದರು ಮತ್ತು ಭಾರತಮಾತೆಯ ಪುತ್ರರಿಗೆ ಗೌರವ ಸಲ್ಲಿಸಿದರು. ಮಹಾತ್ಮ ಗಾಂಧಿ ಮತ್ತು ಇತರ ಮಹಾನ್ ವ್ಯಕ್ತಿಗಳ ಕನಸುಗಳನ್ನು ಸಾಮೂಹಿಕ ರೀತಿಯಲ್ಲಿ ನನಸಾಗಿಸಲು ಇಂದಿನ ಸಂದರ್ಭವು ಸ್ಫೂರ್ತಿಯ ಮೂಲವಾಗಿದೆ ಎಂದು ಶ್ರೀ ಮೋದಿ ಒತ್ತಿ ಹೇಳಿದರು.

 

ಅಕ್ಟೋಬರ್ 2 ರಂದು ತಾನು ಕರ್ತವ್ಯ ಪ್ರಜ್ಞೆಯಿಂದ ತುಂಬಿರುತ್ತೇನೆ, ಹಾಗೆಯೇ ಭಾವುಕನಾಗುತ್ತೇನೆ ಎಂದು ಪ್ರಧಾನಿ ಹೇಳಿದರು. ಸ್ವಚ್ಛ ಭಾರತ ಅಭಿಯಾನದ 10 ವರ್ಷಗಳನ್ನು ಪೂರೈಸಿದ ಸಂದರ್ಭದಲ್ಲಿ ಪ್ರಧಾನಮಂತ್ರಿಯವರು, "ಸ್ವಚ್ಛ ಭಾರತ ಅಭಿಯಾನದ ಪ್ರಯಾಣವು ಕೋಟ್ಯಂತರ ಭಾರತೀಯರ ಅಚಲ ಬದ್ಧತೆಯ ಸಂಕೇತವಾಗಿದೆ" ಎಂದು ಹೇಳಿದರು. ಕಳೆದ 10 ವರ್ಷಗಳಲ್ಲಿ ಈ ಆಂದೋಲನಕ್ಕೆ ಸಿಕ್ಕಿರುವ ಅಪಾರ ಜನಬೆಂಬಲವನ್ನು ಪ್ರಸ್ತಾಪಿಸಿದ ಅವರು ದೇಶದ ಪ್ರತಿಯೊಬ್ಬ ನಾಗರಿಕರು ಇದನ್ನು ತಮ್ಮ ಧ್ಯೇಯವನ್ನಾಗಿ ಮಾಡಿಕೊಂಡಿದ್ದಾರೆ, ತಮ್ಮ ಜೀವನದ ಭಾಗವಾಗಿ ಮಾಡಿಕೊಂಡಿದ್ದಾರೆ ಎಂದು ಹೇಳಿದರು. ಸ್ವಚ್ಛ ಭಾರತಕ್ಕೆ 10 ವರ್ಷಗಳು ಪೂರ್ಣಗೊಂಡಿರುವ ಸಂದರ್ಭದಲ್ಲಿ, ಸ್ವಚ್ಛ ಭಾರತ ಅಭಿಯಾನವನ್ನು ಜನಾಂದೋಲನವಾಗಿ ಪರಿವರ್ತಿಸಲು ಸಫಾಯಿ ಕರ್ಮಚಾರಿಗಳು, ಧಾರ್ಮಿಕ ಮುಖಂಡರು, ಕ್ರೀಡಾಪಟುಗಳು, ಸೆಲೆಬ್ರಿಟಿಗಳು, ಎನ್‌ ಜಿ ಒ ಗಳು ಮತ್ತು ಮಾಧ್ಯಮಗಳ ಪ್ರಯತ್ನಗಳನ್ನು ಪ್ರಧಾನಮಂತ್ರಿ ಶ್ಲಾಘಿಸಿದರು. ಶ್ರಮದಾನದ ರೂಪದಲ್ಲಿ ಸ್ವಚ್ಛ ಭಾರತಕ್ಕಾಗಿ ಭಾರತದ ಮಾಜಿ ಮತ್ತು ಪ್ರಸ್ತುತ ರಾಷ್ಟ್ರಪತಿ ಮತ್ತು ಉಪ ರಾಷ್ಟ್ರಪತಿಯವರ ಕೊಡುಗೆಯನ್ನು ಪ್ರಧಾನಿಯವರು ಪ್ರಸ್ತಾಪಿಸಿದರು ಮತ್ತು ರಾಷ್ಟ್ರವನ್ನು ಪ್ರೇರೇಪಿಸಿದ್ದಕ್ಕಾಗಿ ಅವರಿಗೆ ಧನ್ಯವಾದ ಅರ್ಪಿಸಿದರು. ಹಳ್ಳಿಗಳು, ನಗರಗಳು ಮತ್ತು ಕಾಲೋನಿಗಳಲ್ಲಿ ಇಂದು ನಡೆಯುತ್ತಿರುವ ಅನೇಕ ಸ್ವಚ್ಛತೆ ಸಂಬಂಧಿತ ಚಟುವಟಿಕೆಗಳನ್ನು ಮತ್ತು ರಾಜ್ಯ ಸಚಿವರು, ನಾಯಕರು ಮತ್ತು ಪ್ರತಿನಿಧಿಗಳ ಸಕ್ರಿಯ ಭಾಗವಹಿಸುವಿಕೆಯನ್ನು ಪ್ರಧಾನಿಯವರು ಪ್ರಸ್ತಾಪಿಸಿದರು. ಸ್ವಚ್ಛತಾ ಪಾಕ್ಷಿಕದ ಈ ಆವೃತ್ತಿಯಲ್ಲಿ ಕೋಟಿಗಟ್ಟಲೆ ಜನರು ಸ್ವಚ್ಛತಾ ಹಿ ಸೇವಾ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದಾರೆ ಎಂದರು. ಸೇವಾ ಪಾಕ್ಷಿಕದ 15 ದಿನಗಳಲ್ಲಿ ದೇಶಾದ್ಯಂತ 27 ಲಕ್ಷಕ್ಕೂ ಹೆಚ್ಚು ಕಾರ್ಯಕ್ರಮಗಳನ್ನು ಆಯೋಜಿಸಲಾಗಿದ್ದು, 28 ಕೋಟಿ ಜನರು ಭಾಗವಹಿಸಿದ್ದಾರೆ ಎಂದು ಹೇಳಿದರು. ಭಾರತವನ್ನು ಸ್ವಚ್ಛವಾಗಿಡಲು ನಿರಂತರ ಪ್ರಯತ್ನಗಳ ಅಗತ್ಯವನ್ನು ಒತ್ತಿ ಹೇಳಿದ ಪ್ರಧಾನಮಂತ್ರಿಯವರು, ಭಾರತದ ಪ್ರತಿಯೊಬ್ಬ ನಾಗರಿಕರಿಗೂ ತಮ್ಮ ಕೃತಜ್ಞತೆಯನ್ನು ಸಲ್ಲಿಸಿದರು.

ಇಂದಿನ ಮಹತ್ವದ ಮೈಲಿಗಲ್ಲನ್ನು ಪ್ರಸ್ತಾಪಿಸಿದ ಪ್ರಧಾನಿ, ಸ್ವಚ್ಛತೆಗೆ ಸಂಬಂಧಿಸಿದ ಸುಮಾರು 10,000 ಕೋಟಿ ರೂ.ಗಳ ಯೋಜನೆಗಳನ್ನು ಆರಂಭಿಸಲಾಗಿದೆ ಎಂದು ತಿಳಿಸಿದರು. ‘ಮಿಷನ್ ಅಮೃತ್’ಭಾಗವಾಗಿ ಅನೇಕ ನಗರಗಳಲ್ಲಿ ನೀರು ಮತ್ತು ಒಳಚರಂಡಿ ಸಂಸ್ಕರಣಾ ಘಟಕಗಳನ್ನು ಸ್ಥಾಪಿಸಲಾಗುವುದು ಎಂದು ಅವರು ಹೇಳಿದರು. ನಮಾಮಿ ಗಂಗೆಯಾಗಲಿ ಅಥವಾ ಸಾವಯವ ತ್ಯಾಜ್ಯವನ್ನು ಜೈವಿಕ ಅನಿಲಕ್ಕೆ ಪರಿವರ್ತಿಸುವ ಗೋಬರ್‌ಧನ್ ಯೋಜನೆಯಾಗಲಿ ಸ್ವಚ್ಛ ಭಾರತ ಅಭಿಯಾನವನ್ನು ಹೊಸ ಎತ್ತರಕ್ಕೆ ಕೊಂಡೊಯ್ಯುತ್ತವೆ ಎಂದು ಪ್ರಧಾನಿ ಒತ್ತಿ ಹೇಳಿದರು. "ಸ್ವಚ್ಛ ಭಾರತ ಅಭಿಯಾನ ಹೆಚ್ಚು ಯಶಸ್ವಿಯಾಗುತ್ತದೆ, ನಮ್ಮ ದೇಶವು ಹೆಚ್ಚು ಪ್ರಕಾಶಿಸುತ್ತದೆ" ಎಂದು ಶ್ರೀ ಮೋದಿ ಹೇಳಿದರು.

 

1000 ವರ್ಷಗಳ ನಂತರವೂ ಭಾರತದ ಕುರಿತು ಅಧ್ಯಯನ ನಡೆಸಿದಾಗ ಸ್ವಚ್ಛ ಭಾರತ ಅಭಿಯಾನವನ್ನು ನೆನಪಿಸಿಕೊಳ್ಳಲಾಗುತ್ತದೆ ಎಂದು ಪ್ರಧಾನಿ ಒತ್ತಿ ಹೇಳಿದರು. "ಸ್ವಚ್ಛ ಭಾರತ ಅಭಿಯಾನವು ಜನರ ಸಹಭಾಗಿತ್ವ ಮತ್ತು ಜನರ ನಾಯಕತ್ವದೊಂದಿಗೆ ಈ ಶತಮಾನದ ಅತಿದೊಡ್ಡ ಮತ್ತು ಅತ್ಯಂತ ಯಶಸ್ವಿ ಜನಾಂದೋಲನವಾಗಿದೆ" ಎಂದು ಶ್ರೀ ಮೋದಿ ಹೇಳಿದರು. ಈ ಅಭಿಯಾನವು ಜನರ ನಿಜವಾದ ಶಕ್ತಿ ಮತ್ತು ಸಾಮರ್ಥ್ಯವನ್ನು ಬಹಿರಂಗಪಡಿಸಿದೆ ಎಂದು ಅವರು ಹೇಳಿದರು. ತಮಗೆ ಸ್ವಚ್ಛತೆ ಎಂಬುದು ಜನಶಕ್ತಿಯ ಸಾಕ್ಷಾತ್ಕಾರದ ಹಬ್ಬವಾಗಿದೆ ಎಂದು ಶ್ರೀ ಮೋದಿ ಹೇಳಿದರು. ಸ್ವಚ್ಛತಾ ಅಭಿಯಾನವನ್ನು ಪ್ರಾರಂಭಿಸಿದಾಗ ಲಕ್ಷಾಂತರ ಜನರು ಕೈಜೋಡಿಸಿದರು, ಅದು ಮದುವೆಯಾಗಿರಲಿ ಅಥವಾ ಸಾರ್ವಜನಿಕ ಕಾರ್ಯಕ್ರಮ ಅಥವಾ ಯಾವುದೇ ಸ್ಥಳವಾಗಿರಲಿ, ಸ್ವಚ್ಛತೆಯ ಸಂದೇಶವನ್ನು ಪರಿಣಾಮಕಾರಿಯಾಗಿ ಹರಡಲಾಯಿತು ಎಂಬುದನ್ನು ಪ್ರಧಾನಿ ಸ್ಮರಿಸಿದರು. ವಯಸ್ಸಾದ ತಾಯಂದಿರು ಶೌಚಾಲಯ ನಿರ್ಮಿಸಿಕೊಳ್ಳಲು ತಮ್ಮ ಜಾನುವಾರುಗಳನ್ನು ಮಾರಿದ ನಿದರ್ಶನಗಳಿವೆ, ಕೆಲವು ಮಹಿಳೆಯರು ತಮ್ಮ ಮಂಗಳಸೂತ್ರವನ್ನು ಮಾರಿದ್ದಾರೆ, ಕೆಲವರು ತಮ್ಮ ಭೂಮಿಯನ್ನು ಮಾರಾಟ ಮಾಡಿದ್ದಾರೆ, ಸ್ವಚ್ಚತಾ ಅಭಿಯಾನಕ್ಕಾಗಿ ಕೆಲವು ನಿವೃತ್ತ ಶಿಕ್ಷಕರು ತಮ್ಮ ಪಿಂಚಣಿಯನ್ನು ದೇಣಿಗೆಯಾಗಿ ನೀಡಿದ್ದಾರೆ, ಕೆಲವು ನಿವೃತ್ತ ಸೇನಾ ಸಿಬ್ಬಂದಿ ತಮ್ಮ ನಿವೃತ್ತಿ ಪ್ರಯೋಜನಗಳನ್ನು ದಾನ ಮಾಡಿದ್ದಾರೆ. ಅದೇ ದೇಣಿಗೆಯನ್ನು ದೇವಸ್ಥಾನ ಅಥವಾ ಯಾವುದೇ ಸಮಾರಂಭದಲ್ಲಿ ನೀಡಿದ್ದರೆ, ಅದು ಪತ್ರಿಕೆಗಳಲ್ಲಿ ಪ್ರಮುಖ ಶೀರ್ಷಿಕೆಯಾಗುತ್ತಿತ್ತು ಎಂದು ಪ್ರಧಾನಿ ಹೇಳಿದರು. ಈ ಅಭಿಯಾನ ಯಶಸ್ವಿಯಾಗಲು ತಮ್ಮ ಹಣ ಮತ್ತು ಅಮೂಲ್ಯ ಸಮಯವನ್ನು ದಾನ ಮಾಡಿದ ಲಕ್ಷಾಂತರ ಜನರಿದ್ದಾರೆ, ಅವರ ಮುಖವನ್ನು ಟಿವಿಯಲ್ಲಿ ತೋರಿಸಲಿಲ್ಲ ಅಥವಾ ಅವರ ಹೆಸರನ್ನು ಪತ್ರಿಕೆಯಲ್ಲಿ ಎಂದಿಗೂ ಪ್ರಕಟಿಸಲಿಲ್ಲ ಎಂಬುದನ್ನು ದೇಶವು ತಿಳಿದುಕೊಳ್ಳಬೇಕು ಎಂದು ಅವರು ಹೇಳಿದರು. ಈ ಎಲ್ಲಾ ನಿದರ್ಶನಗಳು ಭಾರತದ ಸ್ವರೂಪವನ್ನು ಪ್ರತಿಬಿಂಬಿಸುತ್ತವೆ ಎಂದು ಶ್ರೀ ಮೋದಿ ಹೇಳಿದರು. ಏಕ-ಬಳಕೆಯ ಪ್ಲಾಸ್ಟಿಕ್ ಬಳಕೆಯನ್ನು ನಿಲ್ಲಿಸಲು ಕರೆಯನ್ನು ನೀಡಿದಾಗ ಅನೇಕ ಜನರು ಅಂಗಡಿಗೆ ಹೋಗುವಾಗ ಸೆಣಬು ಮತ್ತು ಬಟ್ಟೆಯ ಚೀಲಗಳನ್ನು ಬಳಸುವ ಸಂಪ್ರದಾಯವನ್ನು ಪುನರಾರಂಭಿಸಿದರು ಎಂದು ಶ್ರೀ ಮೋದಿ ಹೇಳಿದರು. ಉಪಕ್ರಮವನ್ನು ಬೆಂಬಲಿಸಿದ್ದಕ್ಕಾಗಿ ಏಕ-ಬಳಕೆಯ ಪ್ಲಾಸ್ಟಿಕ್ ಉತ್ಪಾದನೆಯಲ್ಲಿ ತೊಡಗಿದ್ದ ಕೈಗಾರಿಕೆಗಳು ಹಾಗೂ ಜನರಿಗೆ ಧನ್ಯವಾದಗಳನ್ನು ಅರ್ಪಿಸುತ್ತೇನೆ ಎಂದು ಅವರು ಹೇಳಿದರು. ಈ ಉಪಕ್ರಮಕ್ಕೆ ಬೆಂಬಲ ನೀಡಿದ ರಾಜಕೀಯ ಪಕ್ಷಗಳಿಗೂ ಅವರು ಧನ್ಯವಾದ ಅರ್ಪಿಸಿದರು.

 

ಚಲನಚಿತ್ರಗಳ ರೂಪದಲ್ಲಿ ಸ್ವಚ್ಛತೆಯ ಸಂದೇಶವನ್ನು ಪ್ರಚಾರ ಮಾಡುವಲ್ಲಿ ಕಳೆದ 10 ವರ್ಷಗಳಲ್ಲಿ ಭಾರತದ ಚಲನಚಿತ್ರೋದ್ಯಮದ ಕೊಡುಗೆಗಳನ್ನು ಗಮನಿಸಿದ ಪ್ರಧಾನಮಂತ್ರಿಯವರು ಅಂತಹ ಕೆಲಸವನ್ನು ಒಮ್ಮೆ ಮಾತ್ರವಲ್ಲದೆ ಒಂದು ಪೀಳಿಗೆಯಿಂದ ಇನ್ನೊಂದು ಪೀಳಿಗೆಗೆ ನಡೆಸಬೇಕು ಎಂದು ಒತ್ತಿ ಹೇಳಿದರು. ಅವರು ತಮ್ಮ ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಸುಮಾರು 800 ಬಾರಿ ಸ್ವಚ್ಛತೆಯ ಸಮಸ್ಯೆಗಳನ್ನು ಜನರ ಮುಂದಿಟ್ಟ ಉದಾಹರಣೆಯನ್ನು ನೀಡಿದರು.

ಇಂದು ಸ್ವಚ್ಛತೆಯೆಡೆಗಿನ ಜನರ ಪ್ರಯತ್ನಗಳನ್ನು ಗಮನಿಸಿದ ಪ್ರಧಾನಮಂತ್ರಿಯವರು, "ಸ್ವಾತಂತ್ರ್ಯ ಹೋರಾಟದ ಸಮಯದಲ್ಲಿ ಮಹಾತ್ಮ ಗಾಂಧೀಜಿಯವರು ಸ್ವಚ್ಛತೆಯ ಹಾದಿಯನ್ನು  ತೋರಿಸಿದರು" ಎಂದು ಹೇಳಿದರು, ಭಾರತಕ್ಕೆ ಸ್ವಾತಂತ್ರ್ಯ ಬಂದಾಗಿನಿಂದ ಹಿಂದಿನ ಸರ್ಕಾರಗಳು ಸ್ವಚ್ಛತೆಯ ಬಗ್ಗೆ ತೋರಿದ ನಿರ್ಲಕ್ಷ್ಯವನ್ನು ಪ್ರಸ್ತಾಪಿಸಿದರು. ಮಹಾತ್ಮ ಗಾಂಧೀಜಿಯವರನ್ನು ತಮ್ಮ ರಾಜಕೀಯ ಲಾಭ ಮತ್ತು ಮತಬ್ಯಾಂಕ್‌ ಗಾಗಿ ಬಳಸಿಕೊಂಡವರು ಅವರ ಆಸಕ್ತಿಯ ವಿಷಯವನ್ನು ಮರೆತರು ಎಂದರು. ಕೊಳಚೆ ಮತ್ತು ಶೌಚಾಲಯದ ಕೊರತೆಯನ್ನು ರಾಷ್ಟ್ರೀಯ ಸಮಸ್ಯೆಯಾಗಿ ಪರಿಗಣಿಸಲೇ ಇಲ್ಲ ಎಂದರು. ಇದರಿಂದಾಗಿ ಸಮಾಜದಲ್ಲಿ ಅದರ ಬಗ್ಗೆ ಚರ್ಚೆಗಳು ನಡೆಯಲಿಲ್ಲ ಮತ್ತು ಕೊಳಕು ಜೀವನದ ಭಾಗವಾಯಿತು ಎಂದು ಪ್ರಧಾನಿ ಹೇಳಿದರು. ಈ ವಿಷಯವನ್ನು ಕೆಂಪು ಕೋಟೆಯ ಆವರಣದಿಂದ ತಾವು ಎತ್ತಿದ ನಂತರ ಟೀಕೆಗಳನ್ನು ಎದುರಿಸಿದ್ದನ್ನು ಅವರು ನೆನಪಿಸಿಕೊಂಡರು. ಶೌಚಾಲಯಗಳು ಮತ್ತು ಸ್ಯಾನಿಟರಿ ಪ್ಯಾಡ್‌ ಗಳ ಬಗ್ಗೆ ಮಾತನಾಡುವ ತಮ್ಮ ಜವಾಬ್ದಾರಿಯನ್ನು ಒತ್ತಿಹೇಳಿದ ಅವರು, "ಸಾಮಾನ್ಯ ನಾಗರಿಕರ ಜೀವನವನ್ನು ಸುಲಭಗೊಳಿಸುವುದು ಪ್ರಧಾನ ಮಂತ್ರಿಯ ಮೊದಲ ಆದ್ಯತೆಯಾಗಿದೆ" ಎಂದು ಹೇಳಿದರು. ಅದರ ಫಲಿತಾಂಶವನ್ನು ಇಂದು ನೋಡಬಹುದಾಗಿದೆ ಎಂದು ಅವರು ಹೇಳಿದರು.

ಹತ್ತು ವರ್ಷಗಳ ಹಿಂದೆ ಭಾರತದ ಜನಸಂಖ್ಯೆಯ ಶೇ.60 ಕ್ಕಿಂತ ಹೆಚ್ಚು ಜನರು ಶೌಚಾಲಯದ ಕೊರತೆಯಿಂದ ಬಯಲಿನಲ್ಲಿ ಮಲವಿಸರ್ಜನೆ ಮಾಡಬೇಕಾಗಿತ್ತು ಎಂದು ಹೇಳಿದ ಪ್ರಧಾನಿ, ಇದು ಮಾನವ ಘನತೆಗೆ ವಿರುದ್ಧವಾದುದು ಮತ್ತು ದೇಶದ ಬಡವರು, ದಲಿತರು, ಬುಡಕಟ್ಟುಗಳು ಮತ್ತು ಹಿಂದುಳಿದ ಜನರಿಗೆ ತೋರುವ ಅಗೌರವವಾಗಿದೆ ಎಂದು ಹೇಳಿದರು. ಶೌಚಾಲಯಗಳ ಕೊರತೆಯಿಂದ ತಾಯಂದಿರು, ಸಹೋದರಿಯರು ಮತ್ತು ಹೆಣ್ಣುಮಕ್ಕಳು ಅನುಭವಿಸಿದ ನೋವನ್ನು ಗಮನಿಸಿದ ಶ್ರೀ ಮೋದಿ ಇದು ಅವರ ಆರೋಗ್ಯ ಮತ್ತು ಸುರಕ್ಷತೆಗೆ ಬೆದರಿಕೆಯಾಗಿತ್ತು ಎಂದರು. ಬಯಲು ಶೌಚದಿಂದ ಉಂಟಾಗುವ ಕೊಳಕು ಮಕ್ಕಳ ಜೀವಕ್ಕೆ ಅಪಾಯ ತಂದೊಡ್ಡುತ್ತಿದ್ದು, ಮಕ್ಕಳ ಸಾವಿಗೆ ಪ್ರಮುಖ ಕಾರಣವಾಗಿತ್ತು ಎಂದರು.

 

ರಾಷ್ಟ್ರವು ಇಂತಹ ಶೋಚನೀಯ ಸ್ಥಿತಿಯಲ್ಲಿ ಮುಂದುವರಿಯುವುದು ಕಷ್ಟ ಎಂದು ಹೇಳಿದ ಮೋದಿಯವರು, ಪರಿಸ್ಥಿತಿ ಈ ರೀತಿ ಮುಂದುವರಿಯಲು ಬಿಡುವುದಿಲ್ಲ ಎಂದು ನಿರ್ಧರಿಸಿದ್ದಾಗಿ ಅವರು ಹೇಳಿದರು. ಈ ಸರ್ಕಾರ ಇದನ್ನು ರಾಷ್ಟ್ರೀಯ ಮತ್ತು ಮಾನವೀಯ ಸವಾಲು ಎಂದು ಪರಿಗಣಿಸಿ ಅದನ್ನು ಪರಿಹರಿಸುವ ಅಭಿಯಾನವನ್ನು ಪ್ರಾರಂಭಿಸಿತು ಮತ್ತು ಇಲ್ಲಿಂದ ಸ್ವಚ್ಛ ಭಾರತ ಅಭಿಯಾನವನ್ನು ಆರಂಭಿಸಲಾಯಿತು ಎಂದು ಹೇಳಿದರು. ಅಲ್ಪಾವಧಿಯಲ್ಲಿ ಕೋಟ್ಯಂತರ ಭಾರತೀಯರು ಪವಾಡಗಳನ್ನು ಮಾಡಿದ್ದಾರೆ ಎಂದು ಅವರು ಹೇಳಿದರು. ದೇಶದಲ್ಲಿ 12 ಕೋಟಿಗೂ ಹೆಚ್ಚು ಶೌಚಾಲಯಗಳನ್ನು ನಿರ್ಮಿಸಲಾಗಿದೆ ಮತ್ತು ಶೌಚಾಲಯದ ವ್ಯಾಪ್ತಿಯು ಹಿಂದಿನ ಶೇಕಡಾ 40 ರಿಂದ ಶೇಕಡಾ 100 ಕ್ಕೆ ಏರಿದೆ ಎಂದು ಪ್ರಧಾನಿ ಹೇಳಿದರು.

ದೇಶದ ಸಾಮಾನ್ಯ ಜನರ ಜೀವನದ ಮೇಲೆ ಸ್ವಚ್ಛ ಭಾರತ ಅಭಿಯಾನದ ಪ್ರಭಾವವು ಅಮೂಲ್ಯವಾದುದು ಎಂದು ಪ್ರಧಾನಿ ಒತ್ತಿ ಹೇಳಿದರು. ವಾಷಿಂಗ್ಟನ್, ಕ್ಯಾಲಿಫೋರ್ನಿಯಾ ವಿಶ್ವವಿದ್ಯಾನಿಲಯ ಮತ್ತು ಓಹಿಯೋ ಸ್ಟೇಟ್ ವಿಶ್ವವಿದ್ಯಾಲಯದ ವಿಜ್ಞಾನಿಗಳು ಜಂಟಿಯಾಗಿ ನಡೆಸಿದ ಪ್ರಸಿದ್ಧ ಅಂತರರಾಷ್ಟ್ರೀಯ ನಿಯತಕಾಲಿಕದ ಇತ್ತೀಚಿನ ಅಧ್ಯಯನವನ್ನು ಉಲ್ಲೇಖಿಸಿದ ಶ್ರೀ ಮೋದಿ, ಸ್ವಚ್ಛ ಭಾರತ ಮಿಷನ್ ಪ್ರತಿ ವರ್ಷ 60 ರಿಂದ 70 ಸಾವಿರ ಮಕ್ಕಳ ಜೀವಗಳನ್ನು ಉಳಿಸುತ್ತಿದೆ ಎಂಬುದು ಬೆಳಕಿಗೆ ಬಂದಿದೆ ಎಂದರು. ಡಬ್ಲ್ಯು ಎಚ್‌ ಒ ಪ್ರಕಾರ, 2014 ಮತ್ತು 2019 ರ ನಡುವೆ, ಅತಿಸಾರದಿಂದ 3 ಲಕ್ಷ ಜೀವಗಳನ್ನು ಉಳಿಸಲಾಗಿದೆ ಎಂದು ಅವರು ಹೇಳಿದರು. ಯುನಿಸೆಫ್ ವರದಿಗಳನ್ನು ಉಲ್ಲೇಖಿಸಿ, ಮನೆಯಲ್ಲಿ ಶೌಚಾಲಯಗಳ ನಿರ್ಮಾಣದಿಂದಾಗಿ, ಈಗ 90 ಪ್ರತಿಶತಕ್ಕೂ ಹೆಚ್ಚು ಮಹಿಳೆಯರು ಸುರಕ್ಷಿತರಾಗಿದ್ದಾರೆ ಮತ್ತು ಮಹಿಳೆಯರಲ್ಲಿ ಸೋಂಕಿನಿಂದ ಉಂಟಾಗುವ ಕಾಯಿಲೆಗಳು ಸ್ವಚ್ಛ ಭಾರತ ಅಭಿಯಾನದಿಂದ ಗಣನೀಯವಾಗಿ ಕಡಿಮೆಯಾಗಿವೆ ಎಂದು ಒತ್ತಿ ಹೇಳಿದರು. ಲಕ್ಷಾಂತರ ಶಾಲೆಗಳಲ್ಲಿ ಹೆಣ್ಣು ಮಕ್ಕಳಿಗಾಗಿ ಪ್ರತ್ಯೇಕ ಶೌಚಾಲಯಗಳನ್ನು ನಿರ್ಮಿಸಿದ್ದರಿಂದ ಶಾಲೆ ಬಿಡುವವರ ಪ್ರಮಾಣ ಕಡಿಮೆಯಾಗಿದೆ ಎಂದು ಶ್ರೀ ಮೋದಿ ಹೇಳಿದರು. ಯುನಿಸೆಫ್‌ ನ ಮತ್ತೊಂದು ಅಧ್ಯಯನವನ್ನು ಉಲ್ಲೇಖಿಸಿದ ಅವರು, ಸ್ವಚ್ಛತೆಯಿಂದಾಗಿ ಪ್ರತಿ ವರ್ಷ ಸರಾಸರಿ 50 ಸಾವಿರ ರೂಪಾಯಿಗಳನ್ನು ಹಳ್ಳಿಗಳಲ್ಲಿನ ಕುಟುಂಬಗಳು ಉಳಿಸುತ್ತಿವೆ, ಇದನ್ನು ಮೊದಲು ರೋಗಗಳನ್ನು ಗುಣಪಡಿಸಲು ಜೇಬಿನಿಂದ ಖರ್ಚು ಮಾಡಲಾಗುತ್ತಿತ್ತು ಎಂದು ಹೇಳಿದರು.

ಸ್ವಚ್ಛ ಭಾರತ ಅಭಿಯಾನವು ತಂದ ಸಾರ್ವಜನಿಕ ಜಾಗೃತಿಯನ್ನು ಎತ್ತಿ ಹಿಡಿದ ಪ್ರಧಾನಮಂತ್ರಿಯವರು, ಗೋರಖಪುರದಲ್ಲಿ ಮೆದುಳು ಜ್ವರದಿಂದಾಗಿ ಮಕ್ಕಳ ಮರಣವನ್ನಪುತ್ತಿದ್ದ ಉದಾಹರಣೆಯನ್ನು ನೀಡಿದರು, ಇದನ್ನು ಸ್ವಚ್ಛತೆಗೆ ಒತ್ತು ನೀಡುವ ಮೂಲಕ ಪರಿಹರಿಸಲಾಯಿತು ಎಂದು ಹೇಳಿದರು.

 

ಸ್ವಚ್ಛತೆಯ ಪ್ರತಿಷ್ಠೆಯ ಹೆಚ್ಚಳವು ದೇಶದಲ್ಲಿ ಬಹುದೊಡ್ಡ ಮಾನಸಿಕ ಬದಲಾವಣೆಯನ್ನು ತಂದಿದೆ ಎಂದು ಪ್ರಧಾನಿ ಒತ್ತಿ ಹೇಳಿದರು. ಸ್ವಚ್ಛ ಭಾರತ ಅಭಿಯಾನ ತಂದಿರುವ ಚಿಂತನೆಯ ಬದಲಾವಣೆಯನ್ನು ಪ್ರಸ್ತಾಪಿಸಿದ ಅವರು, ಸ್ವಚ್ಛತಾ ಕಾರ್ಯದಲ್ಲಿ ತೊಡಗಿರುವ ಜನರನ್ನು ಮೊದಲು ಕೀಳಾಗಿ ಕಾಣುತ್ತಿದ್ದುದನ್ನು ಉದಾಹರಣೆ ನೀಡಿದರು. "ಸ್ವಚ್ಛತಾ ಕಾರ್ಮಿಕರಿಗೆ ಗೌರವ ಸಿಕ್ಕಾಗ, ಅವರೂ ದೇಶವನ್ನು ಬದಲಾಯಿಸುವಲ್ಲಿ ತಮ್ಮ ಪಾತ್ರದ ಬಗ್ಗೆ ಹೆಮ್ಮೆಪಡುತ್ತಾರೆ. ಸ್ವಚ್ಛ ಭಾರತ ಅಭಿಯಾನವು ಲಕ್ಷಾಂತರ ಸಫಾಯಿ ಮಿತ್ರರಿಗೆ ಹೆಮ್ಮೆ ತಂದಿದೆ” ಎಂದರು. ಸಫಾಯಿ ಕರ್ಮಚಾರಿಗಳಿಗೆ ಗೌರವಯುತ ಜೀವನ ಮತ್ತು ಸುರಕ್ಷತೆಗೆ ಸರ್ಕಾರದ ಬದ್ಧತೆಯನ್ನು ಪ್ರಧಾನಿ ಪುನರುಚ್ಚರಿಸಿದರು. ಸೆಪ್ಟಿಕ್‌ ಟ್ಯಾಂಕ್‌ ಗಳನ್ನು ಕೈಯಾರೆ ಸ್ವಚ್ಛಗೊಳಿಸುವುದರಿಂದ ಉಂಟಾಗುವ ಸಮಸ್ಯೆಗಳನ್ನು ನಿವಾರಿಸಲು ಪ್ರಯತ್ನಿಸಲಾಗುತ್ತಿದೆ ಮತ್ತು ಈ ನಿಟ್ಟಿನಲ್ಲಿ ಸರ್ಕಾರವು ಖಾಸಗಿ ಮತ್ತು ಸಾರ್ವಜನಿಕ ವಲಯಗಳೊಂದಿಗೆ ಒಟ್ಟಾಗಿ ಕೆಲಸ ಮಾಡುತ್ತಿದೆ ಎಂದು ತಿಳಿಸಿದರು. "ನಾವು ವೃತ್ತಿಪರರು ಮತ್ತು ಸ್ಟಾರ್ಟ್‌ಅಪ್‌ ಗಳನ್ನು ಸಹ ಪ್ರೋತ್ಸಾಹಿಸುತ್ತಿದ್ದೇವೆ" ಎಂದು ಅವರು ಹೇಳಿದರು.

ವ್ಯಾಪಕವಾಗಿ ವಿಸ್ತರಿಸುತ್ತಿರುವ ಸ್ವಚ್ಛ ಭಾರತ ಅಭಿಯಾನದ ವ್ಯಾಪ್ತಿಯನ್ನು ಪ್ರಸ್ತಾಪಿಸಿದ ಶ್ರೀ ಮೋದಿ, ಇದು ಕೇವಲ ಸ್ವಚ್ಛತಾ ಕಾರ್ಯಕ್ರಮವಲ್ಲ ಮತ್ತು ಇಂದು ಸ್ವಚ್ಛತೆಯು ಸಮೃದ್ಧಿಯ ಹೊಸ ಹಾದಿಯನ್ನು ಸೃಷ್ಟಿಸುತ್ತಿದೆ ಎಂದು ಹೇಳಿದರು.

ಸ್ವಚ್ಛ ಭಾರತ ಅಭಿಯಾನದಿಂದ ದೇಶದಲ್ಲಿ ದೊಡ್ಡ ಮಟ್ಟದಲ್ಲಿ ಉದ್ಯೋಗ ಸೃಷ್ಟಿಯಾಗುತ್ತಿದ್ದು, ಹಲವು ವರ್ಷಗಳಿಂದ ಕೋಟಿಗಟ್ಟಲೆ ಶೌಚಾಲಯ ನಿರ್ಮಾಣದಿಂದ ಹಲವು ಕ್ಷೇತ್ರಗಳಿಗೆ ಅನುಕೂಲವಾಗಿದ್ದು, ಅನೇಕರಿಗೆ ಉದ್ಯೋಗಾವಕಾಶ ಕಲ್ಪಿಸಿದೆ ಎಂದರು. ಇನ್ನು ಗ್ರಾಮಗಳಲ್ಲಿ ಮೇಸ್ತ್ರಿ, ಪ್ಲಂಬರ್, ಕೂಲಿ ಕಾರ್ಮಿಕರು ಹೀಗೆ ಅನೇಕರಿಗೆ ಉದ್ಯೋಗ ಸಿಕ್ಕಿದೆ ಎಂದರು. ಈ ಅಭಿಯಾನದಿಂದಾಗಿ ಸುಮಾರು 1.25 ಕೋಟಿ ಜನರು ಯಾವುದಾದರೂ ರೂಪದಲ್ಲಿ ಉದ್ಯೋಗವನ್ನು ಪಡೆದಿದ್ದಾರೆ ಎಂದು ಯುನಿಸೆಫ್ ಅಂದಾಜಿಸಿದೆ ಎಂದು ಶ್ರೀ ಮೋದಿ ಹೇಳಿದರು. ಹೊಸ ತಲೆಮಾರಿನ ಮಹಿಳಾ ಮೇಸ್ತ್ರಿಗಳು ಸ್ವಚ್ಛ ಭಾರತ ಅಭಿಯಾನದ ಪ್ರಮುಖ ಫಲಿತಾಂಶವಾಗಿದೆ ಮತ್ತು ನಮ್ಮ ಯುವಕರು ಕೂಡ ಉತ್ತಮ ಉದ್ಯೋಗ ಮತ್ತು ಸ್ವಚ್ಛ ತಂತ್ರಜ್ಞಾನದ ಮೂಲಕ ಉತ್ತಮ ಅವಕಾಶಗಳನ್ನು ಪಡೆಯುತ್ತಿದ್ದಾರೆ ಎಂದು ಅವರು ಹೇಳಿದರು. ಪ್ರಸ್ತುತ ಸ್ವಚ್ಛ ತಂತ್ರಜ್ಞಾನಕ್ಕೆ ಸಂಬಂಧಿಸಿದ ಸುಮಾರು 5 ಸಾವಿರ ಸ್ಟಾರ್ಟ್ ಅಪ್ ಗಳು ನೋಂದಣಿಯಾಗಿವೆ ಎಂದರು. ನೀರು ಮತ್ತು ನೈರ್ಮಲ್ಯ ಕ್ಷೇತ್ರದಲ್ಲಿ ತ್ಯಾಜ್ಯದಿಂದ ಸಂಪತ್ತು, ತ್ಯಾಜ್ಯ ಸಂಗ್ರಹಣೆ ಮತ್ತು ಸಾಗಣೆ, ನೀರಿನ ಮರುಬಳಕೆಯಂತಹ ಅನೇಕ ಹೊಸ ಅವಕಾಶಗಳನ್ನು ಸೃಷ್ಟಿಸಲಾಗುತ್ತಿದೆ ಎಂದು ಶ್ರೀ ಮೋದಿ ಒತ್ತಿ ಹೇಳಿದರು. ಈ ದಶಕದ ಅಂತ್ಯದ ವೇಳೆಗೆ ಈ ವಲಯದಲ್ಲಿ 65 ಲಕ್ಷ ಹೊಸ ಉದ್ಯೋಗಗಳು ಸೃಷ್ಟಿಯಾಗಲಿವೆ ಎಂದು ಅಂದಾಜಿಸಲಾಗಿದೆ ಮತ್ತು ಸ್ವಚ್ಛ ಭಾರತ ಅಭಿಯಾನ ಖಂಡಿತವಾಗಿಯೂ ಇದರಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ ಎಂದು ಅವರು ಹೇಳಿದರು.

 

ಸ್ವಚ್ಛ ಭಾರತ ಅಭಿಯಾನವು ಭಾರತದಲ್ಲಿ ಮರುಬಳಕೆ ಆರ್ಥಿಕತೆಗೆ ಗಮನಾರ್ಹವಾದ ಉತ್ತೇಜನವನ್ನು ನೀಡಿದೆ, ಮನೆಗಳಿಂದ ಉತ್ಪತ್ತಿಯಾಗುವ ತ್ಯಾಜ್ಯವನ್ನು ಈಗ ಅಮೂಲ್ಯವಾದ ಸಂಪನ್ಮೂಲಗಳಾಗಿ ಪರಿವರ್ತಿಸಲಾಗುತ್ತಿದೆ ಎಂದು ಪ್ರಧಾನಮಂತ್ರಿ ಹೇಳಿದರು. ಮನೆಯ ತ್ಯಾಜ್ಯದಿಂದ ಗೊಬ್ಬರ, ಜೈವಿಕ ಅನಿಲ, ವಿದ್ಯುತ್, ರಸ್ತೆ ನಿರ್ಮಾಣಕ್ಕೆ ಬಳಸುವ ಇದ್ದಿಲು ಮುಂತಾದ ವಸ್ತುಗಳನ್ನು ಉತ್ಪಾದಿಸಲಾಗುತ್ತಿದೆ ಎಂದರು. ಪ್ರಧಾನಮಂತ್ರಿ ಅವರು ಗೋಬರ್ಧನ್ ಯೋಜನೆಯ ಯಶಸ್ಸಿನ ಕುರಿತು ಮಾತನಾಡಿದರು, ಇದು ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ಬದಲಾವಣೆಗೆ ಪ್ರಮುಖ ಚಾಲಕವಾಗಿದೆ ಮತ್ತು ಪ್ರಾಣಿಗಳ ತ್ಯಾಜ್ಯವನ್ನು ಜೈವಿಕ ಅನಿಲವಾಗಿ ಪರಿವರ್ತಿಸುವ ಗೋಬರ್ಧನ್ ಯೋಜನೆಯಡಿ ಗ್ರಾಮಗಳಲ್ಲಿ ನೂರಾರು ಜೈವಿಕ ಅನಿಲ ಘಟಕಗಳನ್ನು ಸ್ಥಾಪಿಸಲಾಗಿದೆ ಎಂದು ತಿಳಿಸಿದರು. ದೇಶಾದ್ಯಂತ ನೂರಾರು ಕಂಪ್ರೆಸ್ಡ್ ಜೈವಿಕ ಅನಿಲ ಘಟಕಗಳನ್ನು ಸ್ಥಾಪಿಸಲಾಗಿದೆ ಎಂದು ಅವರು ಹೇಳಿದರು. ಇಂದು, ಹಲವಾರು ಹೊಸ ಕಂಪ್ರೆಸ್ಡ್ ಜೈವಿಕ ಅನಿಲ ಘಟಕಗಳನ್ನು ಉದ್ಘಾಟಿಸಲಾಯಿತು ಮತ್ತು ಈ ಉಪಕ್ರಮವನ್ನು ಇನ್ನಷ್ಟು ವಿಸ್ತರಿಸಲು ಹೊಸ ಯೋಜನೆಗಳನ್ನು ಸಹ ಪ್ರಾರಂಭಿಸಲಾಯಿತು.‌

ಭವಿಷ್ಯದ ಸವಾಲುಗಳನ್ನು ಕುರಿತು ಮಾತನಾಡಿದ ಪ್ರಧಾನಿ ಮೋದಿ, ಆರ್ಥಿಕತೆ ಮತ್ತು ನಗರೀಕರಣದಲ್ಲಿನ ವೇಗದ ಬದಲಾವಣೆಗಳಿಗೆ ಹೊಂದಿಕೊಳ್ಳುವ ಮಹತ್ವವನ್ನು ಒತ್ತಿ ಹೇಳಿದರು. ತ್ವರಿತ ನಗರೀಕರಣ ಮತ್ತು ತ್ಯಾಜ್ಯ ಉತ್ಪಾದನೆಯನ್ನು ಎದುರಿಸಲು ಸಮರ್ಥ ತ್ಯಾಜ್ಯ ನಿರ್ವಹಣೆಯನ್ನು ಖಚಿತಪಡಿಸಿಕೊಳ್ಳಲು ಹೆಚ್ಚಿನ ಕಾರ್ಯತಂತ್ರಗಳ ಬಗ್ಗೆ ಅವರು ಒತ್ತಿ ಹೇಳಿದರು. ಶೂನ್ಯ ಅಥವಾ ಕನಿಷ್ಠ ತ್ಯಾಜ್ಯ ವಿಸರ್ಜನೆಯನ್ನು ಖಾತ್ರಿಪಡಿಸುವ ವಸತಿ ಸಂಕೀರ್ಣಗಳಿಗೆ ಮರುಬಳಕೆಯ ವಸ್ತುಗಳು ಮತ್ತು ವಿನ್ಯಾಸಗಳ ಬಳಕೆಯನ್ನು ಉತ್ತೇಜಿಸುವ ತಂತ್ರಜ್ಞಾನಗಳ ಅಭಿವೃದ್ಧಿಯ ಅಗತ್ಯವನ್ನು ಅವರು ಒತ್ತಿ ಹೇಳಿದರು. ನೀರನ್ನು ದುರುಪಯೋಗಪಡಿಸಿಕೊಳ್ಳದಂತೆ ಮತ್ತು ಬಳಕೆಗೆ ಮೊದಲು ತ್ಯಾಜ್ಯ ನೀರನ್ನು ಸಂಸ್ಕರಿಸುವುದನ್ನು ಶ್ರೀ ಮೋದಿಯವರು ಒತ್ತಿ ಹೇಳಿದರು. ನಮಾಮಿ ಗಂಗಾ ಮಿಷನ್ ನದಿ ಸ್ವಚ್ಛತೆಗೆ ಮಾದರಿಯಾಗಿದೆ ಎಂದು ಹೇಳಿದ ಪ್ರಧಾನಿಯವರು, ಗಂಗಾ ನದಿ ಇಂದು ಗಣನೀಯವಾಗಿ ಸ್ವಚ್ಛವಾಗಿದೆ ಎಂದು ಹೇಳಿದರು. ಅಮೃತ್ ಮಿಷನ್ ಮತ್ತು ಅಮೃತ್ ಸರೋವರ ಉಪಕ್ರಮಗಳು ಗಮನಾರ್ಹ ಬದಲಾವಣೆಯನ್ನು ತರುತ್ತಿವೆ ಮತ್ತು ನೀರಿನ ಸಂರಕ್ಷಣೆ, ರಕ್ಷಣೆ ಮತ್ತು ನದಿ ಸ್ವಚ್ಛತೆಗಾಗಿ ಹೊಸ ತಂತ್ರಜ್ಞಾನಗಳಲ್ಲಿ ನಿರಂತರ ಹೂಡಿಕೆಯ ಪ್ರಾಮುಖ್ಯತೆಯನ್ನು ಒತ್ತಿಹೇಳಿದರು. ಸ್ವಚ್ಛತೆ ಮತ್ತು ಪ್ರವಾಸೋದ್ಯಮದ ನಡುವಿನ ಸಂಬಂಧವನ್ನು ಎತ್ತಿ ಹಿಡಿದ ಪ್ರಧಾನಿ ಮೋದಿ, ಸ್ವಚ್ಛ ಪ್ರವಾಸಿ ತಾಣಗಳು ಮತ್ತು ಪಾರಂಪರಿಕ ತಾಣಗಳು ಪ್ರವಾಸಿಗರ ಅನುಭವವನ್ನು ಹೆಚ್ಚಿಸುತ್ತವೆ ಎಂದು ತಿಳಿಸಿದರು. ನಮ್ಮ ಪ್ರವಾಸಿ ತಾಣಗಳು, ಶ್ರದ್ಧಾ ಕೇಂದ್ರಗಳು ಮತ್ತು ಪಾರಂಪರಿಕ ಸ್ಥಳಗಳನ್ನು ಸ್ವಚ್ಛವಾಗಿ ಮತ್ತು ಉತ್ತಮವಾಗಿ ನಿರ್ವಹಿಸುವುದು ಅತ್ಯಗತ್ಯ ಎಂದು ಅವರು ಹೇಳಿದರು.

ಕಳೆದ ದಶಕದಲ್ಲಿ ಸಾಧಿಸಿದ ಪ್ರಗತಿಯನ್ನು ವಿವರಿಸಿದ ಪ್ರಧಾನಮಂತ್ರಿಯವರು, “ಈ ಹತ್ತು ವರ್ಷಗಳ ಸ್ವಚ್ಛ ಭಾರತ ಅಭಿಯಾನದಲ್ಲಿ ನಾವು ಸಾಕಷ್ಟು ಸಾಧಿಸಿದ್ದೇವೆ, ಆದರೆ ನಮ್ಮ ಧ್ಯೇಯವು ಇನ್ನೂ ಪೂರ್ಣಗೊಂಡಿಲ್ಲ. ಪ್ರತಿಯೊಬ್ಬ ನಾಗರಿಕನು ಸ್ವಚ್ಛತೆಯನ್ನು ತಮ್ಮ ಕರ್ತವ್ಯ ಮತ್ತು ಜವಾಬ್ದಾರಿಯಾಗಿ ಸ್ವೀಕರಿಸಿದಾಗ ನಿಜವಾದ ಬದಲಾವಣೆ ಸಂಭವಿಸುತ್ತದೆ ಎಂದರು. ಪ್ರಧಾನಿ ಮೋದಿ ಅವರು ಸ್ವಚ್ಛ ಭಾರತ ಅಭಿಯಾನಕ್ಕೆ ಸರ್ಕಾರದ ಅಚಲ ಬದ್ಧತೆಯನ್ನು ಪುನರುಚ್ಚರಿಸಿದರು ಮತ್ತು ಸ್ವಚ್ಛ ಭಾರತವನ್ನು ಸಾಧಿಸಲು ಪ್ರತಿಯೊಬ್ಬ ನಾಗರಿಕರ ನಿರಂತರ ಭಾಗವಹಿಸುವಿಕೆಗೆ ಕರೆ ನೀಡಿದರು. ಸ್ವಚ್ಛತೆಯ ಧ್ಯೇಯವು ಒಂದು ದಿನದ ಆಚರಣೆಯಾಗಿರದೆ ಜೀವನಪೂರ್ತಿ ಆಚರಣೆಯಾಗಿದ್ದು, ತಲೆಮಾರಿನಿಂದ ತಲೆಮಾರಿಗೆ ಮುನ್ನಡೆಯಬೇಕು ಎಂದರು. ಶುಚಿತ್ವವು ಪ್ರತಿಯೊಬ್ಬ ನಾಗರಿಕನ ಪ್ರವೃತ್ತಿಯಾಗಬೇಕು ಮತ್ತು ಅದನ್ನು ಪ್ರತಿದಿನ ಮಾಡಬೇಕು ಎಂದು ಪ್ರಧಾನಮಂತ್ರಿ ಹೇಳಿದರು. ಭಾರತವು ನಿಜವಾಗಿ ಸ್ವಚ್ಛವಾಗುವವರೆಗೂ ಮುಂದಿನ ಪೀಳಿಗೆಯ ಮಕ್ಕಳು ವಿಶ್ರಮಿಸಬಾರದು ಎಂದು ಅವರು ಸಲಹೆ ನೀಡಿದರು.

 

ಜಿಲ್ಲೆ, ತಾಲ್ಲೂಕು, ಗ್ರಾಮ ಮತ್ತು ಸ್ಥಳೀಯ ಮಟ್ಟದಲ್ಲಿ ಸ್ವಚ್ಛತಾ ಉಪಕ್ರಮಗಳನ್ನು ಅನುಷ್ಠಾನಗೊಳಿಸುವ ಮೂಲಕ ರಾಜ್ಯ ಸರ್ಕಾರಗಳು ತಮ್ಮ ಪ್ರಯತ್ನಗಳನ್ನು ತೀವ್ರಗೊಳಿಸುವಂತೆ ಪ್ರಧಾನಮಂತ್ರಿ ಕರೆ ನೀಡಿದರು. ಜಿಲ್ಲೆಗಳು ಮತ್ತು ತಾಲ್ಲೂಕುಗಳಲ್ಲಿ ಸ್ವಚ್ಛ ಶಾಲೆಗಳು, ಆಸ್ಪತ್ರೆಗಳು ಮತ್ತು ಕಚೇರಿಗಳಿಗೆ ಸ್ಪರ್ಧೆಗಳನ್ನು ಆಯೋಜಿಸುವಂತೆ ಸಲಹೆ ನೀಡಿದರು. ಪುರಸಭೆಗಳು ಸಾರ್ವಜನಿಕ ಶೌಚಾಲಯಗಳನ್ನು ಉತ್ತಮವಾಗಿ ನಿರ್ವಹಿಸುವುದನ್ನು ಖಚಿತಪಡಿಸಿಕೊಳ್ಳಬೇಕು ಮತ್ತು ನೈರ್ಮಲ್ಯ ವ್ಯವಸ್ಥೆಗಳು ಹಳೆಯ ವಿಧಾನಕ್ಕೆ ಹಿಂತಿರುಗಬಾರದು ಎಂದು ಅವರು ಹೇಳಿದರು. ಸ್ಥಳೀಯ ಸಂಸ್ಥೆಗಳು ನೈರ್ಮಲ್ಯ ಮೂಲಸೌಕರ್ಯ ಮತ್ತು ಅದರ ನಿರ್ವಹಣೆಗೆ ಆದ್ಯತೆ ನೀಡಬೇಕು ಎಂದು ಅವರು ಹೇಳಿದರು. ಮನೆ, ನೆರೆಹೊರೆ ಅಥವಾ ಕೆಲಸದ ಸ್ಥಳ ಯಾವುದೇ ಆಗಿರಲಿ ಅವರು ಎಲ್ಲಿದ್ದರೂ ಸ್ವಚ್ಛತೆಯನ್ನು ಕಾಪಾಡಿಕೊಳ್ಳುವ ಪ್ರತಿಜ್ಞೆಯನ್ನು ತೆಗೆದುಕೊಳ್ಳುವಂತೆ ಪ್ರಧಾನಿ ಮೋದಿ ಎಲ್ಲಾ ನಾಗರಿಕರಿಗೆ ಕರೆ ನೀಡಿದರು. "ನಾವು ನಮ್ಮ ಆರಾಧನಾ ಸ್ಥಳಗಳನ್ನು ಸ್ವಚ್ಛವಾಗಿಟ್ಟುಕೊಳ್ಳುವಂತೆಯೇ, ನಮ್ಮ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸ್ವಚ್ಛತೆಯ ಕಡೆಗೆ ಸಮರ್ಪಣಾ ಭಾವವನ್ನು ಬೆಳೆಸಿಕೊಳ್ಳಬೇಕು" ಎಂದು ಅವರು ಹೇಳಿದರು, ವಿಕಸಿತ ಭಾರತದ ಪ್ರಯಾಣದಲ್ಲಿ ಸ್ವಚ್ಛತೆಯ ಪಾತ್ರವನ್ನು ಅವರು ಎತ್ತಿ ತೋರಿಸಿದರು. ಉದ್ದೇಶಗಳನ್ನು ಸಾಧಿಸುವ ವಿಶ್ವಾಸವನ್ನು ವ್ಯಕ್ತಪಡಿಸಿದ ಪ್ರಧಾನಿಯವರು, ಹೊಸ ಶಕ್ತಿ ಮತ್ತು ಉತ್ಸಾಹದಿಂದ ಅವರ ತತ್ವಗಳನ್ನು ಅನುಸರಿಸುವ ಮೂಲಕ ಮಹಾತ್ಮ ಗಾಂಧಿ ಅವರಿಗೆ ಗೌರವ ಸಲ್ಲಿಸುವಂತೆ ನಾಗರಿಕರಿಗೆ ಕರೆ ತಮ್ಮ ಭಾಷಣವನ್ನು ಮುಕ್ತಾಯಗೊಳಿಸಿದರು.

ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವ ಶ್ರೀ ಮನೋಹರ್ ಲಾಲ್ ಖಟ್ಟರ್, ಕೇಂದ್ರ ಜಲಶಕ್ತಿ ಸಚಿವ ಶ್ರೀ ಸಿ ಆರ್ ಪಾಟೀಲ್, ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ರಾಜ್ಯ ಸಚಿವ ಶ್ರೀ ತೋಖಾನ್ ಸಾಹು ಮತ್ತು ಕೇಂದ್ರ ಜಲಶಕ್ತಿ ರಾಜ್ಯ ಸಚಿವ ಡಾ. ರಾಜ್ ಭೂಷಣ್ ಚೌಧರಿ. ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಹಿನ್ನೆಲೆ

ಕಾರ್ಯಕ್ರಮದಲ್ಲಿ 9600 ಕೋಟಿ ರೂ.ಗೂ ಹೆಚ್ಚು ವೆಚ್ಚದ ಸ್ವಚ್ಛತೆ ಮತ್ತು ನೈರ್ಮಲ್ಯಕ್ಕೆ ಸಂಬಂಧಿಸಿದ ಹಲವು ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆಯನ್ನು ಪ್ರಧಾನಮಂತ್ರಿಯವರು ನೆರವೇರಿಸಿದರು. ಇದು ಅಮೃತ್ ಮತ್ತು ಅಮೃತ್ 2.0 ಅಡಿಯಲ್ಲಿ ನಗರ ನೀರು ಮತ್ತು ಒಳಚರಂಡಿ ವ್ಯವಸ್ಥೆಯನ್ನು ಸುಧಾರಿಸುವ ಗುರಿಯನ್ನು ಹೊಂದಿರುವ ರೂ 6,800 ಕೋಟಿ ಮೌಲ್ಯದ ಯೋಜನೆಗಳನ್ನು ಒಳಗೊಂಡಿದೆ, ರೂ. 1550 ಕೋಟಿಗೂ ಹೆಚ್ಚು ಮೌಲ್ಯದ 10 ಯೋಜನೆಗಳು ರಾಷ್ಟ್ರೀಯ ಮಿಷನ್ ಫಾರ್ ಕ್ಲೀನ್ ಗಂಗಾ ಅಡಿಯಲ್ಲಿ ಗಂಗಾ ಜಲಾನಯನ ಪ್ರದೇಶಗಳಲ್ಲಿ ನೀರಿನ ಗುಣಮಟ್ಟ ಮತ್ತು ತ್ಯಾಜ್ಯ ನಿರ್ವಹಣೆಯನ್ನು ಸುಧಾರಿಸುವತ್ತ ಗಮನಹರಿಸುತ್ತವೆ ಮತ್ತು 15 ಸಂಕುಚಿತ ಜೈವಿಕ ಅನಿಲ (ಸಿಬಿಜಿ) ಘಟಕ ಯೋಜನೆಗಳು 1332 ಕೋಟಿ ರೂ. ಮೌಲ್ಯದ ಗೋಬರ್ಧನ್ ಯೋಜನೆಯಡಿಯಲ್ಲಿವೆ.

ಸ್ವಚ್ಛ ಭಾರತ ದಿವಸ್ ಕಾರ್ಯಕ್ರಮವು ಭಾರತದ ಒಂದು ದಶಕದ ಸುದೀರ್ಘ ಸ್ವಚ್ಛತೆಯ ಸಾಧನೆಗಳನ್ನು ಮತ್ತು ಇತ್ತೀಚೆಗೆ ಮುಕ್ತಾಯಗೊಂಡ ಸ್ವಚ್ಛತಾ ಹಿ ಸೇವಾ ಅಭಿಯಾನವನ್ನು ಪ್ರದರ್ಶಿಸುತ್ತದೆ. ಇದು ಈ ರಾಷ್ಟ್ರೀಯ ಪ್ರಯತ್ನದ ಮುಂದಿನ ಹಂತಕ್ಕೂ ವೇದಿಕೆಯನ್ನು ಸಿದ್ಧಪಡಿಸುತ್ತದೆ. ಇದು ಸಂಪೂರ್ಣ ಸ್ವಚ್ಛತೆಯ ಚೈತನ್ಯವು ಭಾರತದ ಮೂಲೆ ಮೂಲೆಯನ್ನು ತಲುಪುವುದನ್ನು ಖಚಿತಪಡಿಸಿಕೊಳ್ಳಲು ಸ್ಥಳೀಯ ಸರ್ಕಾರಿ ಸಂಸ್ಥೆಗಳು, ಮಹಿಳಾ ಗುಂಪುಗಳು, ಯುವ ಸಂಘಟನೆಗಳು ಮತ್ತು ಸಮುದಾಯದ ಮುಖಂಡರ ರಾಷ್ಟ್ರವ್ಯಾಪಿ ಭಾಗವಹಿಸುವಿಕೆಯನ್ನು ಒಳಗೊಂಡಿರುತ್ತದೆ.

ಸ್ವಚ್ಛತಾ ಹಿ ಸೇವಾ 2024 ರ ಧ್ಯೇಯವು 'ಸ್ವಭಾವ ಸ್ವಚ್ಛತಾ, ಸಂಸ್ಕಾರ ಸ್ವಚ್ಛತಾ' ಆಗಿದೆ, ಸ್ವಚ್ಛತೆಯು ಸಾರ್ವಜನಿಕ ಆರೋಗ್ಯ ಮತ್ತು ಪರಿಸರ ಸುಸ್ಥಿರತೆಯ ಬದ್ಧತೆಯಲ್ಲಿ ಮತ್ತೊಮ್ಮೆ ರಾಷ್ಟ್ರವನ್ನು ಒಂದುಗೂಡಿಸಿದೆ. ಸ್ವಚ್ಛತಾ ಹಿ ಸೇವಾ 2024 ರ ಅಡಿಯಲ್ಲಿ, 17 ಕೋಟಿಗೂ ಹೆಚ್ಚು ಜನರ ಭಾಗವಹಿಸುವಿಕೆಯೊಂದಿಗೆ 19.70 ಲಕ್ಷ ಕಾರ್ಯಕ್ರಮಗಳನ್ನು ಪೂರ್ಣಗೊಳಿಸಲಾಗಿದೆ. ಸುಮಾರು 6.5 ಲಕ್ಷ ಸ್ವಚ್ಛತೆ ಗುರಿ ಘಟಕಗಳ ಪರಿವರ್ತನೆಯನ್ನು ಸಾಧಿಸಲಾಗಿದೆ. ಸುಮಾರು 1 ಲಕ್ಷ ಸಫಾಯಿ ಮಿತ್ರ ಸುರಕ್ಷಾ ಶಿಬಿರಗಳನ್ನು ಸಹ ಆಯೋಜಿಸಲಾಗಿದ್ದು, 30 ಲಕ್ಷಕ್ಕೂ ಹೆಚ್ಚು ಸಫಾಯಿ ಕರ್ಮಚಾರಿಗಳು ಪ್ರಯೋಜನ ಪಡೆಯುತ್ತಿದ್ದಾರೆ. ಇದಲ್ಲದೆ, ಏಕ್ ಪೇಡ್ ಮಾ ಕೆ ನಾಮ್ ಅಭಿಯಾನದ ಅಡಿಯಲ್ಲಿ 45 ಲಕ್ಷಕ್ಕೂ ಹೆಚ್ಚು ಗಿಡಗಳನ್ನು ನೆಡಲಾಗಿದೆ.

 

Click here to read full text speech

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
From welfare to opportunity: How DPI 2.0 and AI will unlock India’s productivity

Media Coverage

From welfare to opportunity: How DPI 2.0 and AI will unlock India’s productivity
NM on the go

Nm on the go

Always be the first to hear from the PM. Get the App Now!
...
State Visit of Prime Minister to Seychelles
June 28, 2026

As part of Prime Minister Shri Narendra Modi’s State Visit to Seychelles from 27-29 June 2026, Prime Minister and the President of Seychelles, H.E. Dr. Patrick Herminie today held official talks at the State House in Victoria, Mahe.

The talks covered the full spectrum of bilateral relations, with the leaders agreeing to further strengthen cooperation in health, education, capacity building, digital transformation, sustainable development, social infrastructure, renewable energy, maritime security and defence. They also exchanged views on regional and global developments, including challenges in the Indian Ocean region, such as illegal fishing, drug trafficking and piracy. Both leaders expressed satisfaction at the progress made in the implementation of projects and initiatives under the Special Economic Package announced by India. Prime Minister reaffirmed India’s commitment to supporting the development priorities of Seychelles and to further deepen the close and enduring partnership between the two countries.

Following the official talks, both leaders released a joint commemorative logo marking 50 years of the establishment of diplomatic relations between the two countries. Several MoUs/agreements in the fields of Capacity Building, UPI, Health, Agriculture, Shipping, Space, Extradition and Line of Credit were exchanged thereafter. The amount of the Line of Credit stands at INR 1250 crores. The full list of MoUs/agreements may be seen here [link]. In addition, several announcements in the fields of food security, infrastructure, health, vocational training, maritime security and defence were made in support of the development needs of Seychelles. The details of these announcements may be seen here [link]. Seychelles also announced that it is joining the Coalition for Disaster Resilient Infrastructure [CDRI].

Later in the day, Prime Minister addressed an Extraordinary Sitting of the National Assembly of Seychelles, becoming the first Indian Prime Minister to do so. In his address, he highlighted the historical bonds of friendship between India and Seychelles and underscored the shared values of democracy, rule of law and people-centric governance that guide the two countries. He noted that mutual trust and close cooperation have shaped a robust partnership spanning development cooperation, maritime security, technology, innovation, health and capacity building. Prime Minister also called for enhanced parliamentary exchanges between the two democracies. The full address of Prime Minister may be seen here [link]

The Leader of Opposition of Seychelles, H.E. Mr. Bernard Georges, also called on Prime Minister. The two leaders discussed India-Seychelles bilateral ties and conveyed their strong support to further build the special friendship between the two countries.