ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಗುಜರಾತ್ ನ ಸೋಮನಾಥದಲ್ಲಿ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರಿಗೆ ಹೃತ್ಪೂರ್ವಕ ಗೌರವ ನಮನ ಸಲ್ಲಿಸಿದರು.

ಸೋಮನಾಥ ದೇವಾಲಯದ ಮರುನಿರ್ಮಾಣದಲ್ಲಿ ಸರ್ದಾರ್ ಪಟೇಲ್ ಅವರ ದೂರದೃಷ್ಟಿ ಮತ್ತು ಸಂಕಲ್ಪ ನಿರ್ಣಾಯಕ ಪಾತ್ರ ವಹಿಸಿದೆ ಎಂದು ಪ್ರಧಾನಮಂತ್ರಿಯವರು ತಿಳಿಸಿದರು. ಭಾರತದ ನಾಗರಿಕತೆಯ ಹೆಮ್ಮೆ ಮತ್ತು ಆಧ್ಯಾತ್ಮಿಕ ನಿರಂತರತೆಯ ಸಂಕೇತವಾಗಿ ಸೋಮನಾಥವು ತನ್ನ ಎಲ್ಲಾ ವೈಭವದಿಂದ ಮತ್ತೆ ಉದಯಿಸುವುದನ್ನು ನೋಡುವುದು ಸರ್ದಾರ್ ಪಟೇಲ್ ಅವರ ಕನಸಾಗಿತ್ತು ಎಂದು ಶ್ರೀ ಮೋದಿ ಅವರು ಹೇಳಿದರು. ದೇಶಕ್ಕಾಗಿ ಸರ್ದಾರ್ ಪಟೇಲ್ ಅವರ ದೃಷ್ಟಿಕೋನವನ್ನು ಈಡೇರಿಸಲು ರಾಷ್ಟ್ರವು ಯಾವಾಗಲೂ ಬದ್ಧವಾಗಿರುತ್ತದೆ ಎಂದು ಅವರು ಹೇಳಿದರು.

ಈ ಕುರಿತ ಎಕ್ಸ್‌ ತಾಣದ ಸರಣಿ ಸಂದೇಶಗಳಲ್ಲಿ  ಪ್ರಧಾನಮಂತ್ರಿಯವರು ಹೀಗೆ ಬರೆದಿದ್ದಾರೆ:

"ಸೋಮನಾಥದಲ್ಲಿ, ಸರ್ದಾರ್ ವಲ್ಲಭಭಾಯಿ ಪಟೇಲ್ ಅವರಿಗೆ ಹೃತ್ಪೂರ್ವಕ ಗೌರವ ನಮನ ಸಲ್ಲಿಸಲಾಯಿತು, ಅವರ ದೃಷ್ಟಿಕೋನ ಮತ್ತು ಸಂಕಲ್ಪವು ದೇವಾಲಯದ ಮರುನಿರ್ಮಾಣದಲ್ಲಿ ನಿರ್ಣಾಯಕ ಪಾತ್ರ ವಹಿಸಿತು. ಭಾರತದ ನಾಗರಿಕತೆಯ ಹೆಮ್ಮೆ ಮತ್ತು ಆಧ್ಯಾತ್ಮಿಕ ನಿರಂತರತೆಯ ಸಂಕೇತವಾಗಿ ಸೋಮನಾಥವು ಅದರ ಎಲ್ಲಾ ವೈಭವದೊಂದಿಗೆ ಮತ್ತೆ ಉದಯಿಸುವುದನ್ನು ನೋಡುವ ಕನಸು ಕಂಡಿದ್ದರು.

ನಮ್ಮ ರಾಷ್ಟ್ರಕ್ಕಾಗಿ ಅವರ ದೃಷ್ಟಿಕೋನವನ್ನು ಈಡೇರಿಸಲು ನಾವು ಯಾವಾಗಲೂ ಬದ್ಧರಾಗಿರುತ್ತೇವೆ."

 

"सोमनाथ में सरदार वल्लभभाई पटेल को भावभीनी श्रद्धांजलि अर्पित की। उनकी दूरदृष्टि और दृढ़ संकल्प ने मंदिर के पुनर्निर्माण में निर्णायक भूमिका निभाई थी। सरदार पटेल का सपना था कि भारत की सांस्कृतिक गौरवगाथा और आध्यात्मिक निरंतरता का प्रतीक सोमनाथ अपनी पूरी दिव्यता और भव्यता के साथ फिर से स्थापित हो।

हम राष्ट्र के लिए उनके विजन को साकार करने के प्रति सदैव प्रतिबद्ध रहेंगे।"

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
Second consignment of 37.5 tonnes HADR aid reaches flood-hit Nepal; India sends 47.5 tonnes of relief material in total

Media Coverage

Second consignment of 37.5 tonnes HADR aid reaches flood-hit Nepal; India sends 47.5 tonnes of relief material in total
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 28 ಆಗಸ್ಟ್ 2026
August 28, 2026

India’s Growth Story, Grounded: Inclusion, Exports, and Infrastructure Under One Vision of PM Modi