ರಾಣಿ ವೇಲು ನಾಚಿಯಾರ್ ಅವರ ಜನ್ಮದಿನದಂದು, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಧೈರ್ಯ ಮತ್ತು ಯುದ್ಧತಂತ್ರದ ಪಾಂಡಿತ್ಯವನ್ನು ಸಾಕಾರಗೊಳಿಸಿದ ಭಾರತದ ಅತ್ಯಂತ ಧೀರ ಯೋಧರಲ್ಲಿ ಒಬ್ಬರೆಂದು ಸ್ಮರಿಸಲ್ಪಡುವ ಪೌರಾಣಿಕ ರಾಣಿಗೆ ಹೃತ್ಪೂರ್ವಕ ಗೌರವ ನಮನ ಸಲ್ಲಿಸಿದರು.

ರಾಣಿ ವೇಲು ನಾಚಿಯಾರ್ ಅವರು ವಸಾಹತುಶಾಹಿ ದಬ್ಬಾಳಿಕೆಯ ವಿರುದ್ಧ ದಂಗೆ ಎದ್ದರು ಮತ್ತು ಭಾರತೀಯರು ತಮ್ಮನ್ನು ತಾವು ಆಳುವ ಹಕ್ಕನ್ನು ಪ್ರತಿಪಾದಿಸಿದರು ಎಂದು ಪ್ರಧಾನಮಂತ್ರಿ ಹೇಳಿದರು. ಉತ್ತಮ ಆಡಳಿತ ಮತ್ತು ಸಾಂಸ್ಕೃತಿಕ ಹೆಮ್ಮೆಗೆ ಅವರ ಅಚಲ ಬದ್ಧತೆಯು ರಾಷ್ಟ್ರಕ್ಕೆ ಸ್ಫೂರ್ತಿ ನೀಡುತ್ತಲೇ ಇದೆ.

ಅವರ ತ್ಯಾಗ ಮತ್ತು ದೂರದೃಷ್ಟಿಯ ನಾಯಕತ್ವವು ತಲೆಮಾರುಗಳನ್ನು ಪ್ರೇರೇಪಿಸುತ್ತದೆ. ಭಾರತದ ಪ್ರಗತಿಯ ಪಯಣದಲ್ಲಿ ಧೈರ್ಯ ಮತ್ತು ದೇಶಭಕ್ತಿಯ ದಾರಿದೀಪವಾಗಿ ಕಾರ್ಯನಿರ್ವಹಿಸುತ್ತದೆ ಎಂದು ಶ್ರೀ ಮೋದಿ ಅವರು ವಿವರಿಸಿದರು.

ಈ ಸಂಬಂಧ ಎಕ್ಸ್ ಖಾತೆಯಲ್ಲಿ ಪ್ರತ್ಯೇಕ ಪೋಸ್ಟ್ ಗಳಲ್ಲಿ ಪ್ರಧಾನಮಂತ್ರಿ ಅವರು ಹೀಗೆ ಹೇಳಿದ್ದಾರೆ:

"ರಾಣಿ ವೇಲು ನಾಚಿಯಾರ್ ಅವರ ಜನ್ಮದಿನದಂದು ಅವರಿಗೆ ಗೌರವ ನಮನಗಳು. ಧೈರ್ಯ ಮತ್ತು ಯುದ್ಧತಂತ್ರದ ಪಾಂಡಿತ್ಯವನ್ನು ಸಾಕಾರಗೊಳಿಸಿದ ಭಾರತದ ಅತ್ಯಂತ ಧೈರ್ಯಶಾಲಿ ಯೋಧರಲ್ಲಿ ಒಬ್ಬರಾಗಿ ಅವರನ್ನು ಸ್ಮರಿಸಲಾಗುತ್ತದೆ. ಅವರು ವಸಾಹತುಶಾಹಿ ದಬ್ಬಾಳಿಕೆಯ ವಿರುದ್ಧ ಎದ್ದು ನಿಂತರು ಮತ್ತು ಭಾರತೀಯರು ತಮ್ಮನ್ನು ತಾವು ಆಳುವ ಹಕ್ಕನ್ನು ಪ್ರತಿಪಾದಿಸಿದರು. ಉತ್ತಮ ಆಡಳಿತ ಮತ್ತು ಸಾಂಸ್ಕೃತಿಕ ಹೆಮ್ಮೆಗೆ ಅವರ ಬದ್ಧತೆಯೂ ಶ್ಲಾಘನೀಯವಾಗಿದೆ. ಅವರ ತ್ಯಾಗ ಮತ್ತು ದೂರದೃಷ್ಟಿಯ ನಾಯಕತ್ವವು ತಲೆಮಾರುಗಳಿಗೆ ಸ್ಫೂರ್ತಿ ನೀಡುತ್ತದೆ." 

 

 

“ராணி வேலு நாச்சியாரின் பிறந்தநாளில் அவருக்கு மரியாதை செலுத்துகிறேன். துணிச்சலையும், வியூகத் திறமையையும் கொண்டிருந்த அவர், இந்தியாவின் துணிச்சல் மிக்க வீராங்கனைகளில் ஒருவராக நினைவுகூரப்படுகிறார். காலனித்துவ ஒடுக்குமுறைக்கு எதிராகக் கிளர்ந்தெழுந்த அவர், இந்தியாவை ஆள இந்தியர்களுக்கே உரிமை உண்டு என்பதை வலியுறுத்தினார். நல்லாட்சி மற்றும் கலாச்சார பெருமைக்கான அவரது உறுதிப்பாடும் போற்றத்தக்கது. அவரது தியாகமும் தொலைநோக்குத் தலைமையும் பல தலைமுறைகளை ஊக்கப்படுத்தும்.”

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
From 'chalta hai' to 'badal sakta hai': Decoding PM Modi's Punctuality narrative

Media Coverage

From 'chalta hai' to 'badal sakta hai': Decoding PM Modi's Punctuality narrative
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 23 ಆಗಸ್ಟ್ 2026
August 23, 2026

From Free Coaching to 400+ Space Startups — India’s Atmanirbhar Leap Under PM Modi