ಶ್ರೀ ಶ್ರೀ ಹರಿಚಂದ್ ಠಾಕೂರ್ ಅವರ ಜಯಂತಿ ಅಂಗವಾಗಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಗೌರವ ನಮನ ಸಲ್ಲಿಸಿದರು. ದುರ್ಬಲ ವರ್ಗದವರ ಅಭ್ಯುದಯಕ್ಕಾಗಿ ಹಾಗೂ ಸಮಾನತೆ, ಸಹಾನುಭೂತಿ ಮತ್ತು ನ್ಯಾಯವನ್ನು ಉತ್ತೇಜಿಸಲು ಶ್ರೀ ಠಾಕೂರ್ ಅವರ ಕಾರ್ಯವನ್ನು ಶ್ಲಾಘಿಸಿರುವ ಶ್ರೀ ಮೋದಿ ಅವರು, ಮತುವ ಧರ್ಮ ಮಹಾ ಮೇಳ 2025 ಕ್ಕೆ ಶುಭ ಹಾರೈಸಿದ್ದಾರೆ.

ಎಕ್ಸ್ ಪೋಸ್ಟ್ ನಲ್ಲಿ ಅವರು ಹೀಗೆ ಬರೆದಿದ್ದಾರೆ:

"ಶ್ರೀ ಶ್ರೀ ಹರಿಚಂದ್ ಠಾಕೂರ್ ಅವರ ಜಯಂತಿಯಂದು ಅವರಿಗೆ ಗೌರವ ನಮನಗಳು. ಅವರ ಸೇವೆ ಮತ್ತು ಆಧ್ಯಾತ್ಮಿಕತೆಯೆಡೆಗೆ ಆಧ್ಯತೆಗೆ ವಂದನೆಗಳು, ಇದರಿಂದಾಗಿ ಅವರು ಅಸಂಖ್ಯಾತ ಜನರ ಹೃದಯದಲ್ಲಿ ನೆಲೆಸಿದ್ದಾರೆ. ದುರ್ಬಲವರ್ಗದವರ ಉನ್ನತಿಗೆ ಹಾಗೂ ಸಮಾನತೆ, ಸಹಾನುಭೂತಿ ಮತ್ತು ನ್ಯಾಯಕ್ಕಾಗಿ ಅವರು ತಮ್ಮ ಜೀವನವನ್ನು ಮುಡಿಪಾಗಿಟ್ಟಿದ್ದರು. ಪಶ್ಚಿಮ ಬಂಗಾಳದ ಠಾಕೂರ್ ನಗರ ಮತ್ತು ಬಾಂಗ್ಲಾದೇಶದ ಒರಂಕಡಿಗೆ ಭೇಟಿ ನೀಡಿ ಅವರಿಗೆ ಗೌರವ ನಮನ ಸಲ್ಲಿಸಿದ್ದು, ಆ ಭೇಟಿಯನ್ನು ನಾನು ಎಂದಿಗೂ ಮರೆಯುವುದಿಲ್ಲ.

ಮತುವ ಸಮುದಾಯ ವೈಭವಯುತ ಸಂಸ್ಕೃತಿಯನ್ನು ಪ್ರದರ್ಶಿಸುವ #MatuaDharmaMahaMela2025 ಕ್ಕೆ ನನ್ನ ಶುಭ ಹಾರೈಕೆಗಳು. ನಮ್ಮ ಸರ್ಕಾರವು ಮತುವಾ ಸಮುದಾಯದ ಕಲ್ಯಾಣಕ್ಕಾಗಿ ಅನೇಕ ಉಪಕ್ರಮಗಳನ್ನು ಕೈಗೊಂಡಿದೆ ಮತ್ತು ಮುಂದಿನ ದಿನಗಳಲ್ಲಿ ಅವರ ಯೋಗಕ್ಷೇಮಕ್ಕಾಗಿ ಅವಿರತವಾಗಿ ಶ್ರಮಿಸುವುದನ್ನು ಮುಂದುವರಿಸಲಿದ್ದೇವೆ. ಜೈ ಹರಿಬೋಲ್!

@aimms_org

 

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
Centre launches Bhavya scheme to set up 100 industrial parks across country

Media Coverage

Centre launches Bhavya scheme to set up 100 industrial parks across country
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 24 ಮೇ 2026
May 24, 2026

Strength, Growth & Global Trust: How PM Modi is Transforming India Across Frontiers