ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮಾಜಿ ಪ್ರಧಾನಮಂತ್ರಿ ಶ್ರೀ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜನ್ಮ ವಾರ್ಷಿಕೋತ್ಸವವಾದ ಇಂದು ಅವರ ಪ್ರಾಮಾಣಿಕತೆ, ವಿನಮ್ರತೆ ಮತ್ತು ನಿರ್ಣಾಯಕ ನಾಯಕತ್ವದ ಪರಂಪರೆಯನ್ನು ಸ್ಮರಿಸುತ್ತಾ ಅವರಿಗೆ ಗೌರವ ನಮನ ಸಲ್ಲಿಸಿದರು.
ಇತಿಹಾಸದ ನಿರ್ಣಾಯಕ ಕ್ಷಣಗಳಲ್ಲಿ ಭಾರತದ ರಾಷ್ಟ್ರೀಯ ಪಾತ್ರವನ್ನು ರೂಪಿಸುವಲ್ಲಿ ಶಾಸ್ತ್ರಿ ಜಿ ಅವರ ಪ್ರಮುಖ ಪಾತ್ರವನ್ನು ಪ್ರಧಾನಮಂತ್ರಿ ಪ್ರಮುಖವಾಗಿ ಪ್ರಸ್ತಾಪಿಸಿದ್ದಾರೆ. ಅವರ ಪ್ರತಿಭಾನ್ವಿತ ಘೋಷಣೆ 'ಜೈ ಜವಾನ್ ಜೈ ಕಿಸಾನ್' ಭಾರತದ ಸೈನಿಕರು ಮತ್ತು ರೈತರ ಬಗೆಗಿನ ಬದ್ಧತೆಯ ಪ್ರಬಲ ಸಂಕೇತವಾಗಿದೆ.
ಶ್ರೀ ಲಾಲ್ ಬಹದ್ದೂರ್ ಶಾಸ್ತ್ರಿ ಜಿ ಅವರ ಜೀವನ ಮತ್ತು ನಾಯಕತ್ವವು, ಸ್ಥಿತಿಸ್ಥಾಪಕತ್ವ ಮತ್ತು ಸ್ವಾವಲಂಬಿ ರಾಷ್ಟ್ರದ ಸಾಮೂಹಿಕ ಸಂಕಲ್ಪದಲ್ಲಿ ಭಾರತದ ಹಲವು ಪೀಳಿಗೆಗಳಿಗೆ ಸ್ಫೂರ್ತಿ ನೀಡುತ್ತಲೇ ಇದೆ ಎಂದು ಶ್ರೀ ನರೇಂದ್ರ ಮೋದಿ ಹೇಳಿದರು.
ಪ್ರಧಾನಮಂತ್ರಿ ತಮ್ಮ ಸಾಮಾಜಿಕ ಜಾಲತಾಣ X ನಲ್ಲಿ ಹಂಚಿಕೊಂಡ ಸಂದೇಶದಲ್ಲಿ ಹೀಗೆ ಹೇಳಿದ್ದಾರೆ:
“ಶ್ರೀ ಲಾಲ್ ಬಹದ್ದೂರ್ ಶಾಸ್ತ್ರಿ ಅವರು ಅಸಾಧಾರಣ ಮುತ್ಸದ್ಧಿ ರಾಜಕಾರಣಿಯಾಗಿದ್ದು, ಅವರ ಪ್ರಮಾಣಿಕತೆ, ನಮ್ರತೆ ಮತ್ತು ದೃಢಸಂಕಲ್ಪವು ಸವಾಲಿನ ಸಮಯ ಸೇರಿ ಎಲ್ಲಾ ಸಂದರ್ಭಗಳಲ್ಲೂ ಭಾರತವನ್ನು ಬಲವರ್ಧನೆಗೊಳಿಸಿತು. ಅವರು ಅನುಕರಣೀಯ ನಾಯಕತ್ವ, ಶಕ್ತಿ ಮತ್ತು ನಿರ್ಣಾಯಕ ಕ್ರಮವನ್ನು ನಿರೂಪಿಸಿದರು. ಅವರ 'ಜೈ ಜವಾನ್ ಜೈ ಕಿಸಾನ್' ಎಂಬ ಸ್ಪಷ್ಟ ಕರೆ ನಮ್ಮ ಜನರಲ್ಲಿ ದೇಶಭಕ್ತಿಯ ಮನೋಭಾವವನ್ನು ಹುಟ್ಟುಹಾಕಿತು. ಬಲಿಷ್ಠ ಮತ್ತು ಸ್ವಾವಲಂಬಿ ಭಾರತವನ್ನು ನಿರ್ಮಿಸುವ ಪ್ರಯತ್ನದಲ್ಲಿ ಅವರು ನಮ್ಮನ್ನು ಸದಾ ಪ್ರೇರೇಪಿಸುತ್ತಲೇ ಇದ್ದಾರೆ’’.
Shri Lal Bahadur Shastri Ji was an extraordinary statesman whose integrity, humility and determination strengthened India, including during challenging times. He personified exemplary leadership, strength and decisive action. His clarion call of ‘Jai Jawan Jai Kisan’ ignited a… pic.twitter.com/p9zaMRh3xC
— Narendra Modi (@narendramodi) October 2, 2025


