ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಆಚಾರ್ಯ ವಿನೋಬಾ ಭಾವೆ ಅವರ ಜಯಂತಿ ಅಂಗವಾಗಿ ಅವರಿಗೆ ಗೌರವ ನಮನ ಸಲ್ಲಿಸಿದ್ದಾರೆ.

ಆಚಾರ್ಯ ವಿನೋಬಾ ಭಾವೆ ಅವರ ಸ್ಫೂರ್ತಿದಾಯಕ 'ಜೈ ಜಗತ್' ಕರೆ ಎಲ್ಲ ಎಲ್ಲೆಗಳನ್ನು ಮೀರಿ, ಮಾನವೀಯತೆಗೆ ಎಲ್ಲಕ್ಕಿಂತ ಮಿಗಿಲಾದ ಸ್ಥಾನ ನೀಡಿತು ಎಂದು ಪ್ರಧಾನಮಂತ್ರಿಗಳು ಉದ್ಗರಿಸಿದ್ದಾರೆ.

ಆಚಾರ್ಯ ವಿನೋಬಾ ಭಾವೆ ಅವರು ಎಲ್ಲರ ಕಲ್ಯಾಣ ಮತ್ತು ಸಬಲೀಕರಣಕ್ಕಾಗಿ ವಿವಿಧ ಬಗೆಯ ಪ್ರಯತ್ನ ಮಾಡಿದ್ದರು ಎಂದು ಶ್ರೀ ಮೋದಿ ಅವರು ಹೇಳಿದ್ದಾರೆ.

ಸಮಾನತೆ, ಘನತೆ ಮತ್ತು ಸೇವೆಯ ಬಗೆಗಿನ ಅವರ ಅಚಲ ನಂಬಿಕೆಯು ಅತ್ಯಂತ ತಳಮಟ್ಟದ ಹಾಗೂ ಅವಕಾಶ ವಂಚಿತ ವರ್ಗಗಳಿಗೆ ಬಲ ನೀಡಿತು ಎಂದು ಪ್ರಧಾನಮಂತ್ರಿಗಳು ಹೇಳಿದ್ದಾರೆ.

ಶ್ರೀ ಮೋದಿ ಅವರ ಎಕ್ಸ್ ಪೋಸ್ಟ್ ಹೀಗಿದೆ:

ಆಚಾರ್ಯ ವಿನೋಬಾ ಭಾವೆ ಅವರ ಜಯಂತಿಯಂದು ಅವರಿಗೆ ಗೌರವಪೂರ್ವಕ ನಮನಗಳು.

'ಜೈ ಜಗತ್' ಎಂಬ ಅವರ ಸ್ಫೂರ್ತಿದಾಯಕ ಕರೆಯು ಪ್ರತಿ ಗಡಿಯನ್ನೂ ಮೀರಿ ಮಾನವೀಯತೆಗೆ ಎಲ್ಲಕ್ಕಿಂತ ಮಿಗಿಲಾದ ಸ್ಥಾನವನ್ನು ನೀಡಿತು.

ತಮ್ಮ ವಿವಿಧ ಪ್ರಯತ್ನಗಳ ಮೂಲಕ ಅವರು ಎಲ್ಲರ ಕಲ್ಯಾಣ ಮತ್ತು ಸಬಲೀಕರಣಕ್ಕಾಗಿ ಶ್ರಮಿಸಿದರು.

ಸಮಾನತೆ, ಘನತೆ ಮತ್ತು ಸೇವೆಯ ಮೇಲಿನ ಅವರ ಅಚಲ ನಂಬಿಕೆಯು ಅತ್ಯಂತ ದುರ್ಬಲ ವರ್ಗದವರಲ್ಲಿ ಬಲ ತುಂಬಿತು.”

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
Mapping the subsurface: How ICAR’s ‘Soil Intelligence’ is reshaping India’s mega infrastructure boom

Media Coverage

Mapping the subsurface: How ICAR’s ‘Soil Intelligence’ is reshaping India’s mega infrastructure boom
NM on the go

Nm on the go

Always be the first to hear from the PM. Get the App Now!
...
9/11 ದಾಳಿಯ ಸಂತ್ರಸ್ತರನ್ನು ಸ್ಮರಿಸಿದ ಪ್ರಧಾನಮಂತ್ರಿ, ಭಯೋತ್ಪಾದನೆ ವಿರುದ್ಧ ಹೋರಾಡುವ ದೃಢ ಸಂಕಲ್ಪ ಪುನರುಚ್ಚಾರ
September 11, 2026

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭೀಕರ 9/11 ದಾಳಿಯ 25ನೇ ವಾರ್ಷಿಕೋತ್ಸವದಂದು ಸಂತ್ರಸ್ತರನ್ನು ಸ್ಮರಿಸಿ ಗೌರವ ನಮನ ಸಲ್ಲಿಸಿದರು ಹಾಗೂ ಆ ಘಟನೆಯಿಂದಾಗಿ ತಮ್ಮ ಜೀವನವನ್ನೇ ಶಾಶ್ವತವಾಗಿ ಬದಲಾಯಿಸಿಕೊಂಡ ಕುಟುಂಬಗಳಿಗೆ ಒಗ್ಗಟ್ಟನ್ನು ಸೂಚಿಸಿದರು.

ಭಯೋತ್ಪಾದನೆಯು ವಿಶ್ವದಾದ್ಯಂತ ಅಸಂಖ್ಯಾತ ಜೀವಗಳನ್ನು ಬಲಿ ತೆಗೆದುಕೊಂಡಿದೆ ಎಂದು ಹೇಳಿದ ಶ್ರೀ ನರೇಂದ್ರ ಮೋದಿ, ಗಡಿಯಾಚೆಗಿನ ಭಯೋತ್ಪಾದನೆಯ ಸಂತ್ರಸ್ತ ರಾಷ್ಟ್ರವಾಗಿರುವ ಭಾರತವು, ಕಳೆದ ಹಲವು ದಶಕಗಳಿಂದ ಭಯೋತ್ಪಾದನೆ ವಿರುದ್ಧದ ಹೋರಾಟದಲ್ಲಿ ಮುಂಚೂಣಿಯಲ್ಲಿದೆ ಎಂದು ಪ್ರತಿಪಾದಿಸಿದರು.

ಭಯೋತ್ಪಾದನೆಯ ಬೆದರಿಕೆಯ ಸ್ವರೂಪ ಬದಲಾಗುತ್ತಲೇ ಇದ್ದರೂ, ಭಯೋತ್ಪಾದನೆಯ ಎಲ್ಲಾ ರೂಪಗಳು ಮತ್ತು ಅಭಿವ್ಯಕ್ತಿಗಳ ವಿರುದ್ಧ ಭಾರತದ ದೃಢ ಸಂಕಲ್ಪ ಮತ್ತು ವಿರೋಧವು ಅಚಲವಾಗಿದೆ ಎಂದು ಅವರು ಹೇಳಿದರು. ಈ ಪಿಡುಗಿನ ವಿರುದ್ಧದ ಹೋರಾಟದ ಎಲ್ಲಾ ಪ್ರಯತ್ನಗಳೊಂದಿಗೆ ತಾವು ಒಗ್ಗಟ್ಟಿನಿಂದ ನಿಲ್ಲುವುದಾಗಿ ಅವರು ತಿಳಿಸಿದರು.

2014ರಲ್ಲಿ ತಾವು '9/11 ಸ್ಮಾರಕ ಮತ್ತು ವಸ್ತುಸಂಗ್ರಹಾಲಯ'ಕ್ಕೆ ಭೇಟಿ ನೀಡಿದ್ದ ಕ್ಷಣಗಳನ್ನೂ ಪ್ರಧಾನಮಂತ್ರಿ ಹಂಚಿಕೊಂಡಿದ್ದಾರೆ.

ಶ್ರೀ ನರೇಂದ್ರ ಮೋದಿ ತಮ್ಮ 'ಎಕ್ಸ್' ಪೋಸ್ಟ್‌ನಲ್ಲಿ ಹೀಗೆ ಹೇಳಿದ್ದಾರೆ:

"ಭೀಕರ 9/11 ದಾಳಿ ನಡೆದು 25 ವರ್ಷಗಳು ಕಳೆದಿವೆ; ಈ ಸಂದರ್ಭದಲ್ಲಿ ನಾವು ಸಂತ್ರಸ್ತರನ್ನು ಸ್ಮರಿಸಿ ಗೌರವಿಸುತ್ತೇವೆ ಮತ್ತು ಆ ಘಟನೆಯಿಂದಾಗಿ ತಮ್ಮ ಜೀವನವನ್ನೇ ಶಾಶ್ವತವಾಗಿ ಬದಲಾಯಿಸಿಕೊಂಡ ಕುಟುಂಬಗಳೊಂದಿಗೆ ಒಗ್ಗಟ್ಟಿನಿಂದ ನಿಲ್ಲುತ್ತೇವೆ.

ಭಯೋತ್ಪಾದನೆಯು ವಿಶ್ವದಾದ್ಯಂತ ಅಸಂಖ್ಯಾತ ಜೀವಗಳನ್ನು ಬಲಿ ತೆಗೆದುಕೊಳ್ಳುತ್ತಿದೆ. ಗಡಿಯಾಚೆಗಿನ ಭಯೋತ್ಪಾದನೆಯ ಸಂತ್ರಸ್ತ ರಾಷ್ಟ್ರವಾಗಿರುವ ಭಾರತವು, ಕಳೆದ ಹಲವು ದಶಕಗಳಿಂದ ಈ ಹೋರಾಟದಲ್ಲಿ ಮುಂಚೂಣಿಯಲ್ಲಿದೆ.

ಭಯೋತ್ಪಾದನೆಯ ಬೆದರಿಕೆಯ ಸ್ವರೂಪ ಬದಲಾಗುತ್ತಲೇ ಇದ್ದರೂ, ಭಯೋತ್ಪಾದನೆಯ ಎಲ್ಲಾ ರೂಪಗಳು ಮತ್ತು ಅಭಿವ್ಯಕ್ತಿಗಳ ವಿರುದ್ಧ ನಮ್ಮ ದೃಢ ಸಂಕಲ್ಪ ಮತ್ತು ವಿರೋಧವು ಅಚಲವಾಗಿದೆ. ಈ ಪಿಡುಗಿನ ವಿರುದ್ಧದ ಹೋರಾಟದ ಎಲ್ಲಾ ಪ್ರಯತ್ನಗಳೊಂದಿಗೆ ನಾವು ಒಗ್ಗಟ್ಟಿನಿಂದ ನಿಲ್ಲುತ್ತೇವೆ.

2014ರಲ್ಲಿ ನಾನು '9/11 ಸ್ಮಾರಕ ಮತ್ತು ವಸ್ತುಸಂಗ್ರಹಾಲಯ'ಕ್ಕೆ ಭೇಟಿ ನೀಡಿದ್ದ ಕ್ಷಣಗಳು ಇಲ್ಲಿವೆ."