ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಆಚಾರ್ಯ ವಿನೋಬಾ ಭಾವೆ ಅವರ ಜಯಂತಿ ಅಂಗವಾಗಿ ಅವರಿಗೆ ಗೌರವ ನಮನ ಸಲ್ಲಿಸಿದ್ದಾರೆ.
ಆಚಾರ್ಯ ವಿನೋಬಾ ಭಾವೆ ಅವರ ಸ್ಫೂರ್ತಿದಾಯಕ 'ಜೈ ಜಗತ್' ಕರೆ ಎಲ್ಲ ಎಲ್ಲೆಗಳನ್ನು ಮೀರಿ, ಮಾನವೀಯತೆಗೆ ಎಲ್ಲಕ್ಕಿಂತ ಮಿಗಿಲಾದ ಸ್ಥಾನ ನೀಡಿತು ಎಂದು ಪ್ರಧಾನಮಂತ್ರಿಗಳು ಉದ್ಗರಿಸಿದ್ದಾರೆ.
ಆಚಾರ್ಯ ವಿನೋಬಾ ಭಾವೆ ಅವರು ಎಲ್ಲರ ಕಲ್ಯಾಣ ಮತ್ತು ಸಬಲೀಕರಣಕ್ಕಾಗಿ ವಿವಿಧ ಬಗೆಯ ಪ್ರಯತ್ನ ಮಾಡಿದ್ದರು ಎಂದು ಶ್ರೀ ಮೋದಿ ಅವರು ಹೇಳಿದ್ದಾರೆ.
ಸಮಾನತೆ, ಘನತೆ ಮತ್ತು ಸೇವೆಯ ಬಗೆಗಿನ ಅವರ ಅಚಲ ನಂಬಿಕೆಯು ಅತ್ಯಂತ ತಳಮಟ್ಟದ ಹಾಗೂ ಅವಕಾಶ ವಂಚಿತ ವರ್ಗಗಳಿಗೆ ಬಲ ನೀಡಿತು ಎಂದು ಪ್ರಧಾನಮಂತ್ರಿಗಳು ಹೇಳಿದ್ದಾರೆ.
ಶ್ರೀ ಮೋದಿ ಅವರ ಎಕ್ಸ್ ಪೋಸ್ಟ್ ಹೀಗಿದೆ:
ಆಚಾರ್ಯ ವಿನೋಬಾ ಭಾವೆ ಅವರ ಜಯಂತಿಯಂದು ಅವರಿಗೆ ಗೌರವಪೂರ್ವಕ ನಮನಗಳು.
'ಜೈ ಜಗತ್' ಎಂಬ ಅವರ ಸ್ಫೂರ್ತಿದಾಯಕ ಕರೆಯು ಪ್ರತಿ ಗಡಿಯನ್ನೂ ಮೀರಿ ಮಾನವೀಯತೆಗೆ ಎಲ್ಲಕ್ಕಿಂತ ಮಿಗಿಲಾದ ಸ್ಥಾನವನ್ನು ನೀಡಿತು.
ತಮ್ಮ ವಿವಿಧ ಪ್ರಯತ್ನಗಳ ಮೂಲಕ ಅವರು ಎಲ್ಲರ ಕಲ್ಯಾಣ ಮತ್ತು ಸಬಲೀಕರಣಕ್ಕಾಗಿ ಶ್ರಮಿಸಿದರು.
ಸಮಾನತೆ, ಘನತೆ ಮತ್ತು ಸೇವೆಯ ಮೇಲಿನ ಅವರ ಅಚಲ ನಂಬಿಕೆಯು ಅತ್ಯಂತ ದುರ್ಬಲ ವರ್ಗದವರಲ್ಲಿ ಬಲ ತುಂಬಿತು.”
Tributes to Acharya Vinoba Bhave on his Jayanti.
— Narendra Modi (@narendramodi) September 11, 2026
His stirring call of ‘Jai Jagat’ transcended every boundary and placed humanity above all.
Through his various efforts, he worked towards the welfare and empowerment of all.
His unwavering faith in equality, dignity and…


