ಜಬಲ್‌ಪುರದಲ್ಲಿ 'ವೀರಾಂಗನಾ ರಾಣಿ ದುರ್ಗಾವತಿ ಸ್ಮಾರಕ ಮತ್ತು ಉದ್ಯಾನ'ಕ್ಕೆ ಭೂಮಿ ಪೂಜೆ ನೆರವೇರಿಸಿದರು
ವೀರಾಂಗಣ ರಾಣಿ ದುರ್ಗಾವತಿ ಅವರ 500ನೇ ಜನ್ಮ ದಿನಾಚರಣೆಯ ಸ್ಮರಣಾರ್ಥ ನಾಣ್ಯ ಮತ್ತು ಅಂಚೆ ಚೀಟಿ ಬಿಡುಗಡೆ ಮಾಡಿದರು
ʻಪಿಎಂಎವೈʼ ಅಡಿಯಲ್ಲಿ ಇಂದೋರ್‌ನಲ್ಲಿ ಲೈಟ್‌ಹೌಸ್ ಯೋಜನೆಯಡಿ ನಿರ್ಮಿಸಲಾದ 1000ಕ್ಕೂ ಹೆಚ್ಚು ಮನೆಗಳನ್ನು ಉದ್ಘಾಟಿಸಿದರು
ಮಾಂಡ್ಲಾ, ಜಬಲ್‌ಪುರ ಮತ್ತು ದಿಂಡೋರಿ ಜಿಲ್ಲೆಗಳಲ್ಲಿಹಲವು ʻಜಲ ಜೀವನ್ ಮಿಷನ್ʼ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು ಮತ್ತು ಸಿಯೋನಿ ಜಿಲ್ಲೆಯಲ್ಲಿ ʻಜಲ ಜೀವನ್ ಮಿಷನ್ʼ ಯೋಜನೆಯ ಕಾಮಗಾರಿಗಳನ್ನು ಲೋಕಾರ್ಪಣೆ ಮಾಡಿದರು
ಮಧ್ಯಪ್ರದೇಶದಲ್ಲಿ ರಸ್ತೆ ಮೂಲಸೌಕರ್ಯ ಸುಧಾರಣೆಗಾಗಿ 4800 ಕೋಟಿ ರೂ.ಗೂ ಅಧಿಕ ಮೌಲ್ಯದ ಹಲವು ಯೋಜನೆಗಳ ಶಂಕುಸ್ಥಾಪನೆ ಮತ್ತು ಲೋಕಾರ್ಪಣೆ ಮಾಡಿದರು
1850 ಕೋಟಿ ರೂ.ಗೂ ಅಧಿಕ ಮೌಲ್ಯದ ರೈಲು ಯೋಜನೆಗಳನ್ನು ರಾಷ್ಟ್ರಕ್ಕೆ ಸಮರ್ಪಿಸಿದರು
ವಜೈಪುರ - ಔರೈಯಾನ್-ಫೂಲ್‌ಪುರ ಪೈಪ್‌ಲೈನ್ ಯೋಜನೆಯ ಲೋಕಾರ್ಪಣೆ ನೆರವೇರಿಸಿದರು
ಮುಂಬೈ-ನಾಗ್‌ಪುರ -ಜಾರ್ಸುಗುಡ ಪೈಪ್‌ಲೈನ್ʼ ಯೋಜನೆಯ ʻನಾಗ್‌ಪುರ -ಜಬಲ್‌ಪುರʼ ವಿಭಾಗಕ್ಕೆ (317 ಕಿ.ಮೀ.) ಶಂಕುಸ್ಥಾಪನೆ ನೆರವೇರಿಸಿದರು ಮತ್ತು ಜಬಲ್‌ಪುರದಲ್ಲಿ ಹೊಸ ಬಾಟ್ಲಿಂಗ್ ಘಟಕವನ್ನು ಸಮರ್ಪಿಸಿದರು
"ರಾಣಿ ದುರ್ಗಾವತಿ ಇತರರ ಪ್ರಯೋಜನಕ್ಕಾಗಿ ಬದುಕಲು ನಮಗೆ ಕಲಿಸಿದ್ದಾಳೆ ಮತ್ತು ತಾಯ್ನಾಡಿಗಾಗಿ ಏನನ್ನಾದರೂ ಮಾಡಲು ನಮ್ಮನ್ನು ಪ್ರೇರೇಪಿಸುತ್ತಾಳೆ"
"ಕಳೆದ ಕೆಲವು ವಾರಗಳಲ್ಲಿ, ʻಉಜ್ವಲʼ ಯೋಜನೆಯ ಫಲಾನುಭವಿಗಳಿಗೆ ಗ್ಯಾಸ್ ಸಿಲಿಂಡರ್ಗಳ ಬೆಲೆಯನ್ನು 500 ರೂ.ಗಳಷ್ಟು ಕಡಿಮೆ ಮಾಡಲಾಗಿದೆ"
"ಜನ್ ಧನ್, ಆಧಾರ್ ಮತ್ತು ಮೊಬೈಲ್ ತ್ರಿವಳಿ ವ್ಯವಸ್ಥೆಗಳು ಭ್ರಷ್ಟ ವ್ಯವಸ್ಥೆಯನ್ನು ಅಳಿಸಿಹಾಕಲು ಸಹಾಯ ಮಾಡಿವೆ"
"ಮುಂದಿನ 25 ವರ್ಷಗಳಲ್ಲಿ ಅಭಿವೃದ್ಧಿ ಹೊಂದಿದ ಮಧ್ಯಪ್ರದೇಶವನ್ನು ನೋಡಲು ತಮ್ಮ ಮಕ್ಕಳು ಬೆಳೆಯುವಂತೆ ಖಚಿತಪಡಿಸಿಕೊಳ್ಳುವುದು 25 ವರ್ಷಕ್ಕಿಂತ ಕಡಿಮೆ ವಯಸ್ಸಿನವರ ಜವಾಬ್ದಾರಿಯಾಗಿದೆ"
"ಇಂದು ಭಾರತದ ಆತ್ಮವಿಶ್ವಾಸ ಹೊಸ ಎತ್ತರದಲ್ಲಿದೆ. ಆಟದ ಮೈದಾನದಿಂದ ಹೊಲಗಳು ಮತ್ತು ಕಣಜಗಳವರೆಗೆ ಎಲ್ಲೆಲ್ಲೂ ಭಾರತದ ಧ್ವಜ ಹಾರಾಡುತ್ತಿದೆ
"ಸ್ವದೇಶಿ ಭಾವನೆ, ದೇಶವನ್ನು ಮುಂದೆ ಕೊಂಡೊಯ್ಯುವ ಭಾವನೆ ಇಂದು ಎಲ್ಲೆಡೆ ಹೆಚ್ಚುತ್ತಿದೆ"
"ಡಬಲ್ ಇಂಜಿನ್ ಸರ್ಕಾರವು ದೀನದಲಿತರಿಗೆ ಆದ್ಯತೆ ನೀಡುತ್ತದೆ"

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮಧ್ಯಪ್ರದೇಶದ ಜಬಲ್‌ಪುರದಲ್ಲಿ 12,600 ಕೋಟಿ ರೂ.ಗಳಿಗೂ ಅಧಿಕ ಮೌಲ್ಯದ ರಸ್ತೆ, ರೈಲು, ಅನಿಲ ಕೊಳವೆ ಮಾರ್ಗ, ವಸತಿ ಹಾಗೂ ಶುದ್ಧ ಕುಡಿಯುವ ನೀರಿನಂತಹ ವಿವಿಧ ವಲಯಗಳ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ಹಾಗೂ ಲೋಕಾರ್ಪಣೆ ನೆರವೇರಿಸಿದರು. ರಾಣಿ ದುರ್ಗಾವತಿ ಅವರ 500ನೇ ಜನ್ಮ ಶತಮಾನೋತ್ಸವದ ಅಂಗವಾಗಿ ಜಬಲ್‌ಪುರದಲ್ಲಿ 'ವೀರಾಂಗನ ರಾಣಿ ದುರ್ಗಾವತಿ ಸ್ಮಾರಕ ಮತ್ತು ಉದ್ಯಾನ'ಕ್ಕೆ ಶ್ರೀ ಮೋದಿ ಭೂಮಿ ಪೂಜೆ ನೆರವೇರಿಸಿದರು. ಇಂದೋರ್‌ನಲ್ಲಿ ʻಲೈಟ್ ಹೌಸ್ʼ ಯೋಜನೆಯಡಿ ನಿರ್ಮಿಸಲಾದ 1000ಕ್ಕೂ ಹೆಚ್ಚು ಮನೆಗಳ ಉದ್ಘಾಟನೆ; ಮಾಂಡ್ಲಾ, ಜಬಲ್‌ಪುರ ಮತ್ತು ದಿಂಡೋರಿ ಜಿಲ್ಲೆಗಳಲ್ಲಿ ಅನೇಕ ʻಜಲ ಜೀವನ್ ಮಿಷನ್ʼ ಯೋಜನೆಗಳಿಗೆ ಶಂಕುಸ್ಥಾಪನೆ ಹಾಗೂ ಸಿಯೋನಿ ಜಿಲ್ಲೆಯಲ್ಲಿ ಜಲ ಜೀವನ್ ಮಿಷನ್ ಯೋಜನೆ ಕಾಮಗಾರಿಗಳ ಲೋಕಾರ್ಪಣೆ; ಮಧ್ಯಪ್ರದೇಶದಲ್ಲಿ ರಸ್ತೆ ಮೂಲಸೌಕರ್ಯವನ್ನು ಸುಧಾರಿಸಲು 4,800 ಕೋಟಿ ರೂ.ಗಿಂತ ಹೆಚ್ಚು ಮೌಲ್ಯದ ಅನೇಕ ಯೋಜನೆಗಳಿಗೆ ಶಂಕುಸ್ಥಾಪನೆ ಮತ್ತು ಲೋಕಾರ್ಪಣೆ; 1,850 ಕೋಟಿ ರೂ.ಗೂ ಅಧಿಕ ಮೌಲ್ಯದ ರೈಲು ಯೋಜನೆಗಳ ಸಮರ್ಪಣೆ, ವಿಜೈಪುರ-ಔರೈಯಾನ್-ಫೂಲ್‌ಪುರ ಪೈಪ್‌ಲೈನ್‌ ಯೋಜನೆ ಮತ್ತು ಜಬಲ್‌ಪುರದಲ್ಲಿ ಹೊಸ ಬಾಟ್ಲಿಂಗ್ ಘಟಕ ಹಾಗೂ ಮುಂಬೈ- ನಾಗ್‌ಪುರ -ಜಾರ್ಸುಗುಡ ಪೈಪ್‌ಲೈನ್‌ ಯೋಜನೆಯ ನಾಗ್‌ಪುರ ಜಬಲ್‌ಪುರ ವಿಭಾಗಕ್ಕೆ (317 ಕಿ.ಮೀ) ಶಂಕುಸ್ಥಾಪನೆ ಈ ಯೋಜನೆಗಳಲ್ಲಿ ಸೇರಿವೆ. 

ಈ ಸಂದರ್ಭದಲ್ಲಿ ಪ್ರದರ್ಶಿಸಲಾದ ವಸ್ತುಪ್ರದರ್ಶನದಲ್ಲಿ ಹೆಜ್ಜೆ ಹಾಕಿದ ಪ್ರಧಾನಮಂತ್ರಿಯವರು ವೀರಾಂಗಣ ರಾಣಿ ದುರ್ಗಾವತಿ ಪ್ರತಿಮೆಗೆ ಪುಷ್ಪ ನಮನ ಸಲ್ಲಿಸಿದರು.

ಸಭಿಕರನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿಯವರು, ನರ್ಮದಾ ಮಾತೆಯ ಪುಣ್ಯಭೂಮಿಯತ್ತ ನಮಸ್ಕರಿಸಿರು. ಜಬಲ್‌ಪುರವು ಉತ್ಸಾಹ, ಹುಮ್ಮಸ್ಸು ಮತ್ತು ನವಚೈತನ್ಯದಿಂದ ತುಂಬಿ ತುಳುಕುತ್ತಿರುವುದರಿಂದ ನಾನು ಈ ನಗರನವನ್ನು ಸಂಪೂರ್ಣವಾಗಿ ಹೊಸ ರೂಪದಲ್ಲಿ ನೋಡುತ್ತಿದ್ದೇನೆ, ಇದು ನಗರದ ಉತ್ಸಾಹವನ್ನು ಪ್ರತಿಬಿಂಬಿಸುತ್ತದೆ ಎಂದರು. ಇಡೀ ರಾಷ್ಟ್ರವು ವೀರಾಂಗಣ ರಾಣಿ ದುರ್ಗಾವತಿ ಅವರ 500ನೇ ಜನ್ಮ ದಿನಾಚರಣೆಯನ್ನು ಉತ್ಸಾಹ ಮತ್ತು ಹುಮ್ಮಸ್ಸಿನಿಂದ ಆಚರಿಸುತ್ತಿದೆ ಎಂದು ಪ್ರಧಾನಿ ಹೇಳಿದರು. ʻರಾಣಿ ದುರ್ಗಾವತಿ ಗೌರವ್ ಯಾತ್ರೆʼಯ ಸಮಾರೋಪದಲ್ಲಿ ಮಾತನಾಡಿದ ಪ್ರಧಾನಮಂತ್ರಿಯವರು, ಅವರ ಜಯಂತಿಯನ್ನು ರಾಷ್ಟ್ರಮಟ್ಟದಲ್ಲಿ ಆಚರಿಸಲು ಕರೆ ನೀಡಿರುವುದಾಗಿ ತಿಳಿಸಿದರು. "ಭಾರತದ ಪೂರ್ವಜರಿಗೆ ನಮ್ಮ ಋಣವನ್ನು ತೀರಿಸಲು ನಾವು ಇಲ್ಲಿ ಸೇರಿದ್ದೇವೆ," ಎಂದು ಪ್ರಧಾನಿ ಹೇಳಿದರು. ವೀರಾಂಗನಾ ರಾಣಿ ದುರ್ಗಾವತಿ ಸ್ಮಾರಕ ಮತ್ತು ಉದ್ಯಾನ ಯೋಜನೆಯ ಬಗ್ಗೆ ಮಾತನಾಡಿದ ಪ್ರಧಾನಮಂತ್ರಿಯವರು, ದೇಶದ ಪ್ರತಿಯೊಬ್ಬ ತಾಯಿ ಮತ್ತು ಯುವಕರು ಈ ಸ್ಥಳಕ್ಕೆ ಭೇಟಿ ನೀಡಲು ಬಯಸುತ್ತಾರೆ ಮತ್ತು ಇದು ಮುಂದೆ ತೀರ್ಥಯಾತ್ರೆ ಕ್ಷೇತ್ರವಾಗಿ ಬದಲಾಗುತ್ತದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು. ರಾಣಿ ದುರ್ಗಾವತಿಯ ಜೀವನವು ಇತರರ ಪ್ರಯೋಜನಕ್ಕಾಗಿ ಬದುಕುವುದನ್ನು ನಮಗೆ ಕಲಿಸುತ್ತದೆ ಮತ್ತು ತಾಯ್ನಾಡಿಗಾಗಿ ಏನನ್ನಾದರೂ ಮಾಡಲು ನಮಗೆ ಸ್ಫೂರ್ತಿ ನೀಡುತ್ತದೆ ಎಂದು ಅವರು ಒತ್ತಿ ಹೇಳಿದರು. ರಾಣಿ ದುರ್ಗಾವತಿ ಅವರ 500ನೇ ಜನ್ಮ ದಿನಾಚರಣೆಯ ಸಂದರ್ಭದಲ್ಲಿ ಇಡೀ ಬುಡಕಟ್ಟು ಸಮಾಜ, ಮಧ್ಯಪ್ರದೇಶದ ಜನರು ಮತ್ತು ದೇಶದ 140 ಕೋಟಿ ನಾಗರಿಕರಿಗೆ ಪ್ರಧಾನಿ ಶುಭಾಶಯಗಳನ್ನು ತಿಳಿಸಿದರು. ಭಾರತದ ಸ್ವಾತಂತ್ರ್ಯದ ನಂತರ ಈ ನೆಲದ ಪೂರ್ವಜರಿಗೆ ಸ್ಥಳಾವಕಾಶದ ಕೊರತೆಯ ಬಗ್ಗೆ ವಿಷಾದಿಸಿದ ಪ್ರಧಾನಿ, ಈ ನಾಡಿನ ವೀರರನ್ನು ಮರೆಯಲಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.

ಸುಮಾರು 12,000 ಕೋಟಿ ರೂಪಾಯಿ ಮೌಲ್ಯದ ಇಂದಿನ ಯೋಜನೆಯ ಬಗ್ಗೆ ಮಾತನಾಡಿದ ಪ್ರಧಾನಮಂತ್ರಿಯವರು, ಇದು ರೈತರು ಮತ್ತು ಯುವಕರು ಸೇರಿದಂತೆ ಲಕ್ಷಾಂತರ ಜನರ ಜೀವನವನ್ನು ಪರಿವರ್ತಿಸಲಿದೆ ಎಂದರು. "ಈ ಪ್ರದೇಶದಲ್ಲಿ ಹೊಸ ಕೈಗಾರಿಕೆಗಳ ಆಗಮನದೊಂದಿಗೆ, ಯುವಕರು ಈಗ ಇಲ್ಲಿ ಉದ್ಯೋಗಗಳನ್ನು ಪಡೆಯಲಿದ್ದಾರೆ," ಎಂದು ಅವರು ಹೇಳಿದರು.

ತಾಯಂದಿರು ಮತ್ತು ಸಹೋದರಿಯರಿಗೆ ಅಡುಗೆಮನೆಯಲ್ಲಿ ಹೊಗೆ ಮುಕ್ತ ವಾತಾವರಣವನ್ನು ಒದಗಿಸುವುದು ಪ್ರಸ್ತುತ ಸರ್ಕಾರದ ಉನ್ನತ ಆದ್ಯತೆಯಾಗಿದೆ ಎಂದು ಪ್ರಧಾನಿ ಒತ್ತಿ ಹೇಳಿದರು. ಸಂಶೋಧನಾ ಅಧ್ಯಯನವನ್ನು ಉಲ್ಲೇಖಿಸಿದ ಪ್ರಧಾನಮಂತ್ರಿಯವರು, ಹೊಗೆ ಹೊರಸೂಸುವ ಒಲೆಯು 24 ಗಂಟೆಗಳಲ್ಲಿ 400 ಸಿಗರೇಟುಗಳನ್ನು ಸೇದುವುದಕ್ಕೆ ಸಮನಾಗಿದೆ ಎಂದು ಮಾಹಿತಿ ನೀಡಿದರು. ಮಹಿಳೆಯರಿಗೆ ಸುರಕ್ಷಿತ ವಾತಾವರಣವನ್ನು ಒದಗಿಸಲು ಹಿಂದಿನ ಸರ್ಕಾರಗಳ ಪ್ರಯತ್ನದ ಕೊರತೆ ಬಗ್ಗೆ ಅವರು ವಿಷಾದಿಸಿದರು.

ಉಜ್ವಲ ಯೋಜನೆಯ ಬಗ್ಗೆ ಮಾತನಾಡಿದ ಪ್ರಧಾನಮಂತ್ರಿಯವರು, ಈ ಹಿಂದೆ ಅನಿಲ ಸಂಪರ್ಕ ಪಡೆಯುವಲ್ಲಿ ಆಗುತ್ತಿದ್ದ ತೊಂದರೆಗಳನ್ನು ಸ್ಮರಿಸಿದರು. ಪ್ರಸ್ತುತ ಸರ್ಕಾರವು ʻರಕ್ಷಾ ಬಂಧನʼದ ಹಬ್ಬದ ಅವಧಿಯಲ್ಲಿ ಅನಿಲ ಬೆಲೆಯನ್ನು ಕಡಿಮೆ ಮಾಡಿದೆ, ಇದು ಉಜ್ವಲ ಫಲಾನುಭವಿಗಳಿಗೆ ಗ್ಯಾಸ್ ಸಿಲಿಂಡರ್‌ಗಳ ಬೆಲೆಯನ್ನು 400 ರೂ.ಗಳಷ್ಟು ಅಗ್ಗವಾಗಿಸಿದೆ ಎಂದು ಅವರು ಒತ್ತಿ ಹೇಳಿದರು. ಮುಂಬರುವ ಹಬ್ಬದ ಋತುವಿನ ಪ್ರಾರಂಭದ ಹಿನ್ನೆಲೆಯಲ್ಲಿ ಗ್ಯಾಸ್ ಸಿಲಿಂಡರ್ ಬೆಲೆಯನ್ನು ಇನ್ನೂ 100 ರೂ.ಗಳಷ್ಟು ಕಡಿಮೆ ಮಾಡಲು ಸರ್ಕಾರ ಕೈಗೊಂಡ ನಿರ್ಧಾರದ ಬಗ್ಗೆ ಅವರು ಮಾಹಿತಿ ನೀಡಿದರು. "ಕಳೆದ ಕೆಲವು ವಾರಗಳಲ್ಲಿ, ಉಜ್ವಲ ಫಲಾನುಭವಿಗಳಿಗೆ ಗ್ಯಾಸ್ ಸಿಲಿಂಡರ್‌ಗಳ ಬೆಲೆಯನ್ನು ಒಟ್ಟು 500 ರೂ.ಗಳಷ್ಟು ಕಡಿಮೆ ಮಾಡಲಾಗಿದೆ" ಎಂದು ಪ್ರಧಾನಿ ಹೇಳಿದರು. ರಾಜ್ಯದಲ್ಲಿ ಅನಿಲ ಕೊಳವೆ ಮಾರ್ಗಗಳನ್ನು ಹಾಕಿರುವುದನ್ನು ಉಲ್ಲೇಖಿಸಿದ ಪ್ರಧಾನಮಂತ್ರಿಯವರು, ಪೈಪ್‌ಲೈನ್‌ಗಳ ಮೂಲಕ ಅಗ್ಗದ ಅಡುಗೆ ಅನಿಲ ಪೂರೈಕೆಯಲ್ಲಿ ಕೇಂದ್ರ ಸರ್ಕಾರ ದಾಪುಗಾಲು ಹಾಕುತ್ತಿದೆ ಎಂದು ಒತ್ತಿ ಹೇಳಿದರು.

ಹಿಂದಿನ ಸರ್ಕಾರಗಳ ಅವಧಿಯಲ್ಲಿ ನಡೆದ ಹಗರಣಗಳ ಬಗ್ಗೆ ಬೆಳಕು ಚೆಲ್ಲಿದ ಪ್ರಧಾನಮಂತ್ರಿಯವರು, ಬಡವರಿಗಾಗಿ ಮೀಸಲಿಟ್ಟಿರುವ ಹಣವು ಭ್ರಷ್ಟರ ಬೊಕ್ಕಸವನ್ನು ತುಂಬುತ್ತಿತ್ತು ಎಂದು ಒತ್ತಿ ಹೇಳಿದರು. ಹತ್ತು ವರ್ಷಗಳ ಹಿಂದೆ ನಡೆದ ವಿವಿಧ ಹಗರಣಗಳ ಬಗ್ಗೆಯೇ ಹೆಚ್ಚು ಸುದ್ದಿಗಳಾಗುತ್ತಿದ್ದನ್ನು ಆನ್‌ಲೈನ್‌ನಲ್ಲಿ ಪರಿಶೀಲಿಸುವಂತೆ ಅವರು ಸಲಹೆ ನೀಡಿದರು.

2014ರ ನಂತರ, ಪ್ರಸ್ತುತ ಸರ್ಕಾರವು ಭ್ರಷ್ಟಾಚಾರದ ಅಭ್ಯಾಸಗಳನ್ನು ತೊಡೆದುಹಾಕಲು 'ಸ್ವಚ್ಚ' ಅಭಿಯಾನವನ್ನು ಕೈಗೊಂಡಿದೆ ಎಂದು ಪ್ರಧಾನಿ ಒತ್ತಿ ಹೇಳಿದರು. "ಎಂದಿಗೂ ಅಸ್ತಿತ್ವದಲ್ಲಿಲ್ಲದ 11 ಕೋಟಿ ನಕಲಿ ಫಲಾನುಭವಿಗಳನ್ನು ತಂತ್ರಜ್ಞಾನದ ಬಳಕೆಯೊಂದಿಗೆ ಸರ್ಕಾರದ ಪಟ್ಟಿಯಿಂದ ತೆಗೆದುಹಾಕಲಾಗಿದೆ," ಎಂದು ಪ್ರಧಾನಿ ಒತ್ತಿ ಹೇಳಿದರು, "2014ರ ನಂತರ, ಬಡವರಿಗಾಗಿ ಮೀಸಲಾದ ಹಣವನ್ನು ಯಾರೂ ಲೂಟಿ ಮಾಡದಂತೆ ಮೋದಿ ನೋಡಿಕೊಂಡರು," ಎಂದು ಪ್ರಧಾನಿ ಒತ್ತಿ ಹೇಳಿದರು. ʻಜನ್‌ಧನ್, ಆಧಾರ್ ಮತ್ತು ಮೊಬೈಲ್ʼ ಎಂಬ ತ್ರಿವಗಳಿಗಳ ಸೃಷ್ಟಿಯು ಅಸ್ತಿತ್ವದಲ್ಲಿದ್ದ ಭ್ರಷ್ಟ ವ್ಯವಸ್ಥೆಯನ್ನು ಅಳಿಸಿಹಾಕಲು ನೆರವಾಯಿತು ಎಂದು ಅವರು ಹೇಳಿದರು. "ಇಂದು, ಈ ತ್ರಿಶಕ್ತಿಯಿಂದಾಗಿ, 2.5 ಲಕ್ಷ ಕೋಟಿ ರೂ.ಗಿಂತ ಹೆಚ್ಚು ಹಣವನ್ನು ಅನರ್ಹರ ಕೈಗಳಿಗೆ ಸೇರದಂತೆ ಉಳಿಸಲಾಗಿದೆ," ಎಂದು ಪ್ರಧಾನಿ ಪುನರುಚ್ಚರಿಸಿದರು. ಕೇವಲ 500 ರೂ.ಗೆ ಉಜ್ವಲ ಸಿಲಿಂಡರ್ ಒದಗಿಸಲು ಕೇಂದ್ರ ಸರ್ಕಾರ ಕೋಟ್ಯಂತರ ರೂಪಾಯಿಗಳನ್ನು ಖರ್ಚು ಮಾಡುತ್ತಿದೆ, ಕೋಟ್ಯಂತರ ಕುಟುಂಬಗಳಿಗೆ ಉಚಿತ ಪಡಿತರವನ್ನು ಒದಗಿಸಲು 3 ಲಕ್ಷ ಕೋಟಿ ರೂ.ಗಳನ್ನು ಖರ್ಚು ಮಾಡಲಾಗುತ್ತಿದೆ, ʻಆಯುಷ್ಮಾನ್ʼ ಯೋಜನೆಯಡಿ ದೇಶದ ಸುಮಾರು 5 ಕೋಟಿ ಕುಟುಂಬಗಳಿಗೆ ಉಚಿತ ಚಿಕಿತ್ಸೆಗಾಗಿ 70,000 ಕೋಟಿ ರೂ.ಗಳನ್ನು ಖರ್ಚು ಮಾಡಲಾಗುತ್ತಿದೆ, ರೈತರಿಗೆ ಅಗ್ಗದ ಯೂರಿಯಾ ಸಿಗುವಂತೆ ನೋಡಿಕೊಳ್ಳಲು 8 ಲಕ್ಷ ಕೋಟಿ ರೂ. ವೆಚ್ಚ ಮಾಡಲಾಗುತ್ತಿದೆ ಎಂದು ಮಾಹಿತಿ ನೀಡಿದರು.  ʻಪಿಎಂ ಕಿಸಾನ್ ಸಮ್ಮಾನ್ ನಿಧಿʼ ಅಡಿಯಲ್ಲಿ ಸಣ್ಣ ರೈತರ ಬ್ಯಾಂಕ್ ಖಾತೆಗಳಿಗೆ ಒಟ್ಟು 2.5 ಲಕ್ಷ ಕೋಟಿ ರೂ.ಗಿಂತ ಹೆಚ್ಚು ಠೇವಣಿ ಮಾಡಲಾಗಿದೆ. ಬಡ ಕುಟುಂಬಗಳಿಗೆ ಶಾಶ್ವತ ಮನೆಗಳನ್ನು ಒದಗಿಸಲು 4 ಲಕ್ಷ ಕೋಟಿ ರೂ. ವೆಚ್ಚಿಸಲಾಗಿದೆ. ಇಂದೋರ್‌ನ ಬಡ ಕುಟುಂಬಗಳು ಆಧುನಿಕ ತಂತ್ರಜ್ಞಾನದೊಂದಿಗೆ ನಿರ್ಮಿಸಲಾದ 1,000 ಶಾಶ್ವತ ಮನೆಗಳನ್ನು ಪಡೆದಿವೆ ಎಂದು ಅವರು ಉಲ್ಲೇಖಿಸಿದರು.

ಮಧ್ಯಪ್ರದೇಶಕ್ಕೆ ಇದು ನಿರ್ಣಾಯಕ ಸಮಯ ಎಂದು ಒತ್ತಿ ಹೇಳಿದ ಪ್ರಧಾನಮಂತ್ರಿಯವರು, ಅಭಿವೃದ್ಧಿಯಲ್ಲಿ ಯಾವುದೇ ಅಡೆತಡೆಯು ಎದುರಾದಲ್ಲಿ ಅದು ಕಳೆದ ಎರಡು ದಶಕಗಳ ಕಠಿಣ ಪರಿಶ್ರಮವನ್ನು ಹಾಳು ಮಾಡುತ್ತದೆ ಎಂದು ಹೇಳಿದರು. 25 ವರ್ಷಕ್ಕಿಂತ ಕಡಿಮೆ ವಯಸ್ಸಿನವರನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ, ಮುಂದಿನ 25 ವರ್ಷಗಳಲ್ಲಿ ಅಭಿವೃದ್ಧಿ ಹೊಂದಿದ ಮಧ್ಯಪ್ರದೇಶವನ್ನು ನೋಡಲು ತಮ್ಮ ಮಕ್ಕಳು ಬೆಳೆಯುವಂತೆ ಖಚಿತಪಡಿಸಿಕೊಳ್ಳುವುದು ಅವರ ಜವಾಬ್ದಾರಿಯಾಗಿದೆ ಎಂದು ಹೇಳಿದರು. ಪ್ರಸ್ತುತ ಸರ್ಕಾರವು ಕಳೆದ ವರ್ಷಗಳಲ್ಲಿ ಕೃಷಿ ರಫ್ತಿನಲ್ಲಿ ಮಧ್ಯಪ್ರದೇಶವನ್ನು ಅಗ್ರಸ್ಥಾನಕ್ಕೆ ಕೊಂಡೊಯ್ದಿದೆ ಎಂದು ಮಾಹಿತಿ ನೀಡಿದ ಅವರು, ಕೈಗಾರಿಕಾ ಅಭಿವೃದ್ಧಿಯಲ್ಲಿ ರಾಜ್ಯವು ಮುಂಚೂಣಿಯಲ್ಲಿರುವ ಮಹತ್ವವನ್ನು ಒತ್ತಿ ಹೇಳಿದರು. ಕಳೆದ ಹಲವು ವರ್ಷಗಳಿಂದ ಭಾರತದ ರಕ್ಷಣಾ ಸಾಮಗ್ರಿ ರಫ್ತಿನಲ್ಲಿ ಹಲವು ಪಟ್ಟು ಹೆಚ್ಚಳವನ್ನು ಉಲ್ಲೇಖಿಸಿದ ಪ್ರಧಾನಮಂತ್ರಿಯವರು, ರಕ್ಷಣಾ ಸಂಬಂಧಿತ ಸರಕುಗಳನ್ನು ತಯಾರಿಸುವ 4 ಕಾರ್ಖಾನೆಗಳನ್ನು ಹೊಂದಿರುವ ಜಬಲ್‌ಪುರವು ಇದಕ್ಕೆ ದೊಡ್ಡ ಕೊಡುಗೆ ನೀಡಿದೆ ಎಂದರು. ಕೇಂದ್ರ ಸರ್ಕಾರವು ತನ್ನ ಸೈನ್ಯಕ್ಕೆ 'ಮೇಡ್ ಇನ್ ಇಂಡಿಯಾ' ಶಸ್ತ್ರಾಸ್ತ್ರಗಳನ್ನು ಒದಗಿಸುತ್ತಿದೆ ಮತ್ತು ಭಾರತದ ರಕ್ಷಣಾ ಸರಕುಗಳಿಗೆ ವಿಶ್ವದಲ್ಲಿ ಬೇಡಿಕೆ ಹೆಚ್ಚುತ್ತಿದೆ ಎಂದರು. "ಮಧ್ಯಪ್ರದೇಶವೂ ಇದರಿಂದ ಸಾಕಷ್ಟು ಪ್ರಯೋಜನ ಪಡೆಯಲಿದೆ, ಇಲ್ಲಿ ಸಾವಿರಾರು ಹೊಸ ಉದ್ಯೋಗಾವಕಾಶಗಳು ಸೃಷ್ಟಿಯಾಗಲಿವೆ," ಎಂದು ಅವರು ಹೇಳಿದರು.

"ಇಂದು ಭಾರತದ ಆತ್ಮವಿಶ್ವಾಸ ಹೊಸ ಎತ್ತರದಲ್ಲಿದೆ. ಆಟದ ಮೈದಾನದಿಂದ ಹಿಡಿದು ಹೊಲಗಳು ಮತ್ತು ಕಣಜಗಳವರೆಗೆ ಭಾರತದ ಧ್ವಜ ಹಾರಾಡುತ್ತಿದೆ,", ಎಂದು ಪ್ರಧಾನಿ ಹೇಳಿದರು. ಪ್ರಸ್ತುತ ನಡೆಯುತ್ತಿರುವ ಏಷ್ಯನ್ ಕ್ರೀಡಾಕೂಟದಲ್ಲಿ ಭಾರತದ ಅದ್ಭುತ ಪ್ರದರ್ಶನದ ಬಗ್ಗೆ ವಿಶೇಷವಾಗಿ ಉಲ್ಲೇಖಿಸಿದ ಅವರು, ಈ ʻಸಮಯವು ಭಾರತದ ಸಮಯವಾಗಿದೆʼ ಎಂದು ಭಾರತದ ಪ್ರತಿಯೊಬ್ಬ ಯುವಕರು ಭಾವಿಸುತ್ತಾರೆ ಎಂದರು. ಯುವಕರಿಗೆ ಇಂತಹ ಅವಕಾಶಗಳು ದೊರೆತಾಗ, ಅಭಿವೃದ್ಧಿ ಹೊಂದಿದ ಭಾರತವನ್ನು ನಿರ್ಮಿಸುವ ಅವರ ಉತ್ಸಾಹಕ್ಕೂ ಉತ್ತೇಜನ ಸಿಗುತ್ತದೆ ಎಂದು ಅವರು ಒತ್ತಿ ಹೇಳಿದರು. ʻಜಿ-20ʼಯಂತಹ ಭವ್ಯ ಜಾಗತಿಕ ಕಾರ್ಯಕ್ರಮವನ್ನು ಆಯೋಜಿಸಿದ ಉದಾಹರಣೆಗಳನ್ನು ಮತ್ತು ಭಾರತದ ಚಂದ್ರಯಾನದ ಯಶಸ್ಸನ್ನು ಉಲ್ಲೇಖಿಸಿದ ಅವರು, ʻವೋಕಲ್‌ ಫಾರ್‌ ಲೋಕಲ್‌ʼ ಮಂತ್ರವು ಅಂತಹ ಯಶಸ್ಸಿನೊಂದಿಗೆ ಎಲ್ಲೆಡೆ ಪ್ರತಿಧ್ವನಿಸಲು ಪ್ರಾರಂಭಿಸುತ್ತದೆ ಎಂದು ಹೇಳಿದರು. ಗಾಂಧಿ ಜಯಂತಿಯ ಸಂದರ್ಭದಲ್ಲಿ ದೆಹಲಿಯ ಅಂಗಡಿಯೊಂದರಲ್ಲಿ 1.5 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಖಾದಿ ಉತ್ಪನ್ನಗಳನ್ನು ಮಾರಾಟ ಮಾಡಲಾಗಿದೆ ಎಂದು ಪ್ರಧಾನಿ ಮಾಹಿತಿ ನೀಡಿದರು. "ಸ್ವದೇಶಿ ಭಾವನೆ, ದೇಶವನ್ನು ಮುಂದೆ ಕೊಂಡೊಯ್ಯುವ ಭಾವನೆ ಇಂದು ಎಲ್ಲೆಡೆ ಹೆಚ್ಚುತ್ತಿದೆ," ಎಂದು ಶ್ರೀ ಮೋದಿ ಒತ್ತಿ ಹೇಳಿದರು. ನವೋದ್ಯಮಗಳ ಜಗತ್ತಿನಲ್ಲಿ ಯಶಸ್ಸನ್ನು ಸಾಧಿಸುವಲ್ಲಿ ಭಾರತದ ಯುವಕರ ಪಾತ್ರದ ಬಗ್ಗೆಯೂ ಅವರು ಮಾತನಾಡಿದರು. ಅ.1ರಂದು ದೇಶವು ಪ್ರಾರಂಭಿಸಿದ ಸ್ವಚ್ಛತಾ ಅಭಿಯಾನದಲ್ಲಿ, ಸುಮಾರು 9 ಕೋಟಿ ನಾಗರಿಕರ ಭಾಗವಹಿಸುವಿಕೆಯೊಂದಿಗೆ 9 ಲಕ್ಷಕ್ಕೂ ಹೆಚ್ಚು ಸ್ಥಳಗಳಲ್ಲಿ ಸ್ವಚ್ಚತಾ ಕಾರ್ಯಕ್ರಮಗಳನ್ನು ನಡೆಸಲಾಗಿದೆ ಎಂದು ಪ್ರಧಾನಿ ಮಾಹಿತಿ ನೀಡಿದರು. ಸ್ವಚ್ಛತೆಯ ವಿಷಯದಲ್ಲಿ ರಾಜ್ಯವನ್ನು ಅಗ್ರಸ್ಥಾನಕ್ಕೆ ಕೊಂಡೊಯ್ದ ಕೀರ್ತಿ ಮಧ್ಯಪ್ರದೇಶದ ಜನರಿಗೆ ಸಲ್ಲುತ್ತದೆ ಎಂದು ಅವರು ಶ್ಲಾಘಿಸಿದರು.

ದೇಶದ ಸಾಧನೆಗಳು ವಿಶ್ವದಾದ್ಯಂತ ಚರ್ಚೆಯಾಗುತ್ತಿರುವ ಸಮಯದಲ್ಲಿ ಕೆಲವು ರಾಜಕೀಯ ಪಕ್ಷಗಳ ಭಾರತವನ್ನು ದೂಷಿಸುವ ವಿಧಾನದ ವಿರುದ್ಧ ಪ್ರಧಾನಿ ಎಚ್ಚರಿಕೆ ನೀಡಿದರು. ʻಡಿಜಿಟಲ್ ಇಂಡಿಯಾʼ ಅಭಿಯಾನ ಮತ್ತು ಭಾರತದ ಕೋವಿಡ್ ಲಸಿಕೆಗೆ ಸಂಬಂಧಿಸಿದಂತೆ ಅಂತಹ ಪಕ್ಷಗಳು ಎತ್ತಿರುವ ಪ್ರಶ್ನೆಗಳ ಅವರು ಇದಕ್ಕೆ ಉದಾಹರಣೆಯಾಗಿ ನೀಡಿದರು. ಅಂತಹ ರಾಜಕೀಯ ಪಕ್ಷಗಳು ದೇಶದ ಶತ್ರುಗಳ ಮಾತುಗಳನ್ನು ನಂಬುತ್ತವೆ ಮತ್ತು ಭಾರತೀಯ ಸೇನೆಯನ್ನು ಪ್ರಶ್ನಿಸುವ ಮಟ್ಟಕ್ಕೆ ಹೋಗುತ್ತವೆ ಎಂದು ಅವರು ಉಲ್ಲೇಖಿಸಿದರು. ʻಅಮೃತ ಮಹೋತ್ಸವʼ ಆಚರಣೆ ಮತ್ತು ʻಅಮೃತ ಸರೋವರʼಗಳ ಸೃಷ್ಟಿಯ ಬಗ್ಗೆಯೂ ಅವರು ಪ್ರಸ್ತಾಪಿಸಿದರು.

ಸ್ವಾತಂತ್ರ್ಯದಿಂದ ಸಾಂಸ್ಕೃತಿಕ ಪರಂಪರೆಯ ಶ್ರೀಮಂತಿಕೆಯವರೆಗೆ ಭಾರತದ ಬುಡಕಟ್ಟು ಸಮಾಜದ ಪಾತ್ರವನ್ನು ಶ್ರೀ ಮೋದಿ ಒತ್ತಿ ಹೇಳಿದರು. ಸ್ವಾತಂತ್ರ್ಯದ ನಂತರ ದಶಕಗಳ ಕಾಲ ಆಳಿದವರು ಬುಡಕಟ್ಟು ಸಮಾಜವನ್ನು ನಿರ್ಲಕ್ಷಿಸಿದ ಬಗ್ಗೆ ಪ್ರಶ್ನಿಸಿದರು. ಅಟಲ್ ಜಿ ಅವರ ಸರ್ಕಾರವು ಪ್ರತ್ಯೇಕ ಸಚಿವಾಲಯವನ್ನು ರಚಿಸಿತು ಮತ್ತು ಬುಡಕಟ್ಟು ಸಮಾಜದ ಕಲ್ಯಾಣಕ್ಕಾಗಿ ಅನುದಾನ ನಿಗದಿಪಡಿಸಿತು ಎಂದು ಅವರು ಒತ್ತಿಹೇಳಿದರು. ಕಳೆದ 9 ವರ್ಷಗಳಲ್ಲಿ ಈ ವರ್ಗಕ್ಕಾಗಿ ಬಜೆಟ್‌ ಅನುದಾನವನ್ನು ಹಲವು ಪಟ್ಟು ಹೆಚ್ಚಿಸಲಾಗಿದೆ ಎಂದು ಶ್ರೀ ಮೋದಿ ಮಾಹಿತಿ ನೀಡಿದರು. ಭಾರತವು ತನ್ನ ಮೊದಲ ಮಹಿಳಾ ಬುಡಕಟ್ಟು ರಾಷ್ಟ್ರಪತಿಯನ್ನು ಪಡೆದ ಬಗ್ಗೆ ಹಾಗೂ ಲಾರ್ಡ್ ಬಿರ್ಸಾ ಮುಂಡಾ ಅವರ ಜನ್ಮದಿನವನ್ನು ʻಗೌರವ್ ದಿವಸ್ʼ ಎಂದು ಆಚರಿಸುತ್ತಿರುವ ಬಗ್ಗೆಯೂ ಅವರು ಪ್ರಸ್ತಾಪಿಸಿದರು. ದೇಶದ ಅತ್ಯಂತ ಆಧುನಿಕ ರೈಲ್ವೆ ನಿಲ್ದಾಣಗಳಲ್ಲಿ ಒಂದಕ್ಕೆ ರಾಣಿ ಕಮಲಾಪತಿ ಅವರ ಹೆಸರಿಡುವುದು, ಪಾತಲ್ಪಾನಿ ನಿಲ್ದಾಣವನ್ನು ಜನನಾಯಕ್ ತಂತ್ರ್ಯಭಿಲ್ ಎಂದು ಮರುನಾಮಕರಣ ಮಾಡುವುದು ಮತ್ತು ಗೊಂಡ್ ಸಮುದಾಯಕ್ಕೆ ಸ್ಫೂರ್ತಿಯಾಗಿರುವ ರಾಣಿ ದುರ್ಗಾವತಿ ಅವರ ಹೆಸರಿನಲ್ಲಿ ನಿರ್ಮಿಸಲಾಗುತ್ತಿರುವ ಭವ್ಯ ಸ್ಮಾರಕದ ಇಂದಿನ ಯೋಜನೆಯನ್ನು ಶ್ರೀ ಮೋದಿ ಒತ್ತಿ ಹೇಳಿದರು. ಶ್ರೀಮಂತ ಗೊಂಡ್ ಸಂಪ್ರದಾಯದ ಬಗ್ಗೆ ಜಾಗೃತಿ ಮೂಡಿಸುವ ಉದ್ದೇಶದಿಂದ ನಿರ್ಮಿಸಲಾದ ವಸ್ತು ಪ್ರದರ್ಶನಾಲಯವು ಗೊಂಡ್ ಸಂಸ್ಕೃತಿ, ಇತಿಹಾಸ ಮತ್ತು ಕಲೆಯನ್ನು ಪ್ರದರ್ಶಿಸುತ್ತದೆ ಎಂದು ಅವರು ಮಾಹಿತಿ ನೀಡಿದರು. ವಿಶ್ವ ನಾಯಕರಿಗೆ ಗೊಂಡ್ ವರ್ಣಚಿತ್ರಗಳನ್ನು ಉಡುಗೊರೆಯಾಗಿ ನೀಡಿದ ಬಗ್ಗೆಯೂ ಪ್ರಧಾನಿ ಮೋದಿ ಪ್ರಸ್ತಾಪಿಸಿದರು.

ಮೋವ್ ಸೇರಿದಂತೆ ವಿಶ್ವದಾದ್ಯಂತ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರಿಗೆ ಸಂಬಂಧಿಸಿದ ಸ್ಥಳಗಳನ್ನು ʻಪಂಚತೀರ್ಥʼವಾಗಿಸಿದ್ದು ಪ್ರಸ್ತುತ ಸರ್ಕಾರವೇ ಎಂದು ಪ್ರಧಾನಿ ಪುನರುಚ್ಚರಿಸಿದರು. ಕೆಲವು ವಾರಗಳ ಹಿಂದೆ ಸಾಗರದಲ್ಲಿ ಸಂತ ರವಿದಾಸ್ ಜೀ ಅವರ ಸ್ಮಾರಕ ಸ್ಥಳಕ್ಕೆ ಭೂಮಿ ಪೂಜೆ ನೆರವೇರಿಸಿದ್ದನ್ನು ಅವರು ಸ್ಮರಿಸಿದರು. ಇದು ಸಾಮಾಜಿಕ ಸಾಮರಸ್ಯ ಮತ್ತು ಪರಂಪರೆಯ ಬಗ್ಗೆ ಸರ್ಕಾರದ ಬದ್ಧತೆಯನ್ನು ತೋರಿಸುತ್ತದೆ ಎಂದು ಅವರು ಹೇಳಿದರು.

ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರವನ್ನು ಪೋಷಿಸುವ ಪಕ್ಷಗಳು ಬುಡಕಟ್ಟು ಸಮಾಜದ ಸಂಪನ್ಮೂಲಗಳನ್ನು ಲೂಟಿ ಮಾಡಿವೆ ಎಂದು ಅವರು ಒತ್ತಿ ಹೇಳಿದರು. 2014ಕ್ಕಿಂತ ಮೊದಲು, ಕೇವಲ 8-10 ಅರಣ್ಯ ಉತ್ಪನ್ನಗಳಿಗೆ ಮಾತ್ರ ಕನಿಷ್ಠ ಬೆಂಬಲ ಬೆಲೆಯನ್ನು (ಎಂಎಸ್‌ಪಿ) ನೀಡಲಾಗುತ್ತಿತ್ತು, ಉಳಿದವುಗಳನ್ನು ಕಡಿಮೆ ಬೆಲೆಗೆ ಮಾರಾಟ ಮಾಡಲಾಗುತ್ತಿತ್ತು, ಆದರೆ ಇಂದು ಸುಮಾರು 90 ಅರಣ್ಯ ಉತ್ಪನ್ನಗಳನ್ನು ʻಎಂಎಸ್‌ಪಿʼ ವ್ಯಾಪ್ತಿಗೆ ತರಲಾಗಿದೆ ಎಂದು ಪ್ರಧಾನಿ ಮಾಹಿತಿ ನೀಡಿದರು.

ಈ ಹಿಂದೆ ಬುಡಕಟ್ಟು ಮತ್ತು ಸಣ್ಣ ರೈತರು ಉತ್ಪಾದಿಸುವ ಕೊಡೋ-ಕುಟ್ಕಿಯಂತಹ ಒರಟು ಧಾನ್ಯಗಳಿಗೆ ಹೆಚ್ಚಿನ ಪ್ರಾಮುಖ್ಯತೆ ನೀಡುತ್ತಿರಲಿಲ್ಲ ಎಂದು ಪ್ರಧಾನಿ ಹೇಳಿದರು. ʻಜಿ-20ʼ ಅತಿಥಿಗಳಿಗೆ ಆಹಾರ ತಯಾರಿಕೆಗಳನ್ನು ನಿಮ್ಮ ʻಕೊಡೊ-ಕುಟ್ಕಿʼಯಿಂದ ತಯಾರಿಸಲಾಗಿದೆ ಎಂದು ಅವರು ಒತ್ತಿ ಹೇಳಿದರು. "ಪ್ರಸ್ತುತ ಸರ್ಕಾರವು ಸಿರಿಧಾನ್ಯಗಳ (ಶ್ರೀ ಅನ್ನ) ರೂಪದಲ್ಲಿ ʻಕೊಡೊ-ಕುಟ್ಕಿʼಯನ್ನು ದೇಶ ಮತ್ತು ವಿದೇಶಗಳ ಮಾರುಕಟ್ಟೆಗಳಿಗೆ ತಲುಪಿಸಲು ಬಯಸಿದೆ," ಎಂದು ಅವರು ಹೇಳಿದರು.

"ಡಬಲ್ ಇಂಜಿನ್ ಸರ್ಕಾರ ದೀನದಲಿತರಿಗೆ ಆದ್ಯತೆ ನೀಡುತ್ತದೆ," ಎಂದು ಪ್ರಧಾನಿ ಹೇಳಿದರು. ಬಡವರ ಆರೋಗ್ಯಕ್ಕಾಗಿ ಶುದ್ಧ ಕುಡಿಯುವ ನೀರು ಸರಬರಾಜಿನ ಮಹತ್ವವನ್ನು ಒತ್ತಿ ಹೇಳಿದ ಪ್ರಧಾನಮಂತ್ರಿಯವರು, ಸುಮಾರು 1,600 ಹಳ್ಳಿಗಳಿಗೆ ನೀರು ಪೂರೈಸಲು ವ್ಯವಸ್ಥೆ ಮಾಡಲಾದ ಇಂದಿನ ಯೋಜನೆಗಳನ್ನು ಉಲ್ಲೇಖಿಸಿದರು. ʻನಾರಿ ಶಕ್ತಿ ವಂದನ್ ಅಧಿನಿಯಮ್ʼ ಮೂಲಕ ಲೋಕಸಭೆ ಮತ್ತು ವಿಧಾನಸಭೆಯಲ್ಲಿ ಮಹಿಳೆಯರಿಗೆ ಅವರ ಹಕ್ಕುಗಳನ್ನು ನೀಡುವ ಬಗ್ಗೆಯೂ ಅವರು ಪ್ರಸ್ತಾಪಿಸಿದರು. 13 ಸಾವಿರ ಕೋಟಿ ರೂ.ಗಳ ʻಪಿಎಂ ವಿಶ್ವಕರ್ಮʼ ಯೋಜನೆಯ ಬಗ್ಗೆಯೂ ಪ್ರಧಾನಿ ಪ್ರಸ್ತಾಪಿಸಿದರು.

ಭಾಷಣವನ್ನು ಮುಕ್ತಾಯಗೊಳಿಸುವ ಮುನ್ನ ಪ್ರಧಾನಮಂತ್ರಿಯವರು, ಅಭಿವೃದ್ಧಿಯ ವಿಷಯದಲ್ಲಿ ಮಧ್ಯಪ್ರದೇಶವನ್ನು ಅಗ್ರಸ್ಥಾನಕ್ಕೆ ಕೊಂಡೊಯ್ಯುವ ಮೋದಿಯವರ ಖಾತರಿಯ ಬಗ್ಗೆ ನಾಗರಿಕರಿಗೆ ಭರವಸೆ ನೀಡಿದರು. "ಮಧ್ಯಪ್ರದೇಶದ ಮಹಾಕೌಶಲವು ಮೋದಿ ಮತ್ತು ಸರ್ಕಾರದ ಈ ಸಂಕಲ್ಪವನ್ನು ಬಲಪಡಿಸುತ್ತದೆ ಎಂದು ನನಗೆ ವಿಶ್ವಾಸವಿದೆ," ಎಂದು ಅವರು ಹೇಳಿದರು.

ಮಧ್ಯಪ್ರದೇಶದ ರಾಜ್ಯಪಾಲ ಮಂಗುಭಾಯಿ ಸಿ. ಪಟೇಲ್ ಮತ್ತು ಮಧ್ಯಪ್ರದೇಶದ ಮುಖ್ಯಮಂತ್ರಿ ಶ್ರೀ ಶಿವರಾಜ್ ಸಿಂಗ್ ಚೌಹಾಣ್ ಅವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಹಿನ್ನೆಲೆ

ರಾಣಿ ದುರ್ಗಾವತಿ ಅವರ 500ನೇ ಜನ್ಮ ದಿನಾಚರಣೆಯನ್ನು ಭಾರತ ಸರ್ಕಾರವು ಬಹಳ ಉತ್ಸಾಹದಿಂದ ಆಚರಿಸುತ್ತಿದೆ. 2023ರ ಜುಲೈನಲ್ಲಿ ಮಧ್ಯಪ್ರದೇಶದ ಶಹದೋಲ್‌ಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಪ್ರಧಾನಮಂತ್ರಿಯವರು ಈ ಆಚರಣೆಯ ಬಗ್ಗೆ ಘೋಷಣೆ ಮಾಡಿದ್ದರು. ಈ ವರ್ಷದ ಐತಿಹಾಸಿಕ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಅವರು ಕೆಂಪು ಕೋಟೆಯ ಕೊತ್ತಲಗಳಿಂದ ರಾಷ್ಟ್ರವನ್ನುದ್ದೇಶಿಸಿ ಮಾಡಿದ ಭಾಷಣದಲ್ಲಿ ಈ ಘೋಷಣೆಯನ್ನು ಪುನರುಚ್ಚರಿಸಿದರು. ಈ ಆಚರಣೆಗಳಿಗೆ ಅನುಗುಣವಾಗಿ ಪ್ರಧಾನಮಂತ್ರಿಯವರು 'ವೀರಾಂಗನಾ ರಾಣಿ ದುರ್ಗಾವತಿ ಸ್ಮಾರಕ ಮತ್ತು ಉದ್ಯಾನ'ಕ್ಕೆ ಭೂಮಿ ಪೂಜೆ ನೆರವೇರಿಸಿದರು.

ಜಬಲ್‌ಪುರದಲ್ಲಿ ಸುಮಾರು 100 ಕೋಟಿ ರೂ.ಗಳ ವೆಚ್ಚದಲ್ಲಿ ನಿರ್ಮಿಸಲಾಗುವ 'ವೀರಾಂಗನಾ ರಾಣಿ ದುರ್ಗಾವತಿ ಸ್ಮಾರಕ ಮತ್ತು ಉದ್ಯಾನ'ವು ಸುಮಾರು 21 ಎಕರೆ ಪ್ರದೇಶದಲ್ಲಿ ಹರಡಿದೆ. ಇದು ರಾಣಿ ದುರ್ಗಾವತಿಯ 52 ಅಡಿ ಎತ್ತರದ ಕಂಚಿನ ಪ್ರತಿಮೆಯನ್ನು ಒಳಗೊಂಡಿದೆ. ಇದು ರಾಣಿ ದುರ್ಗಾವತಿಯ ಶೌರ್ಯ ಮತ್ತು ಸಾಹಸ ಸೇರಿದಂತೆ ಗೊಂಡ್ವಾನಾ ಪ್ರದೇಶದ ಇತಿಹಾಸವನ್ನು ಎತ್ತಿ ತೋರಿಸುವ ಭವ್ಯವಾದ ವಸ್ತುಸಂಗ್ರಹಾಲಯವನ್ನು ಹೊಂದಿರುತ್ತದೆ. ಇದು ಗೊಂಡ್ ಜನರು ಮತ್ತು ಇತರ ಬುಡಕಟ್ಟು ಸಮುದಾಯಗಳ ಪಾಕಪದ್ಧತಿ, ಕಲೆ, ಸಂಸ್ಕೃತಿ, ಜೀವನ ವಿಧಾನ ಇತ್ಯಾದಿಗಳನ್ನು ಎತ್ತಿ ತೋರಿಸುತ್ತದೆ. 'ವೀರಾಂಗನ ರಾಣಿ ದುರ್ಗಾವತಿ ಸ್ಮಾರಕ ಮತ್ತು ಉದ್ಯಾನ'ದ ಆವರಣದಲ್ಲಿ ಔಷಧೀಯ ಸಸ್ಯಗಳ ಉದ್ಯಾನ, ಕಳ್ಳಿ ತೋಟ ಮತ್ತು ರಾಕ್ ಗಾರ್ಡನ್ ಸೇರಿದಂತೆ ಅನೇಕ ಉದ್ಯಾನವನಗಳು ಇರಲಿವೆ. ರಾಣಿ ದುರ್ಗಾವತಿ ಅವರು 16ನೇ ಶತಮಾನದ ಮಧ್ಯಭಾಗದಲ್ಲಿ ಗೊಂಡ್ವಾನಾದ ರಾಣಿಯಾಗಿದ್ದರು. ಮೊಘಲರ ವಿರುದ್ಧ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಧೈರ್ಯಶಾಲಿ, ನಿರ್ಭೀತ ಮತ್ತು ಸಾಹಸಿ ಯೋಧಳಾಗಿ ಅವರನ್ನು ಸ್ಮರಿಸಲಾಗುತ್ತದೆ.

ಮಧ್ಯಪ್ರದೇಶದ ಇಂದೋರ್‌ನಲ್ಲಿ ʻಲೈಟ್ ಹೌಸ್ʼ ಯೋಜನೆಯನ್ನು ಉದ್ಘಾಟಿಸುವುದರೊಂದಿಗೆ 'ಎಲ್ಲರಿಗೂ ವಸತಿ' ಒದಗಿಸುವ ಪ್ರಧಾನಮಂತ್ರಿಯವರ ಆಶಯಕ್ಕೆ ಬಲ ಬಂದಿದೆ. ʻಪ್ರಧಾನ ಮಂತ್ರಿ ಆವಾಸ್ ಯೋಜನೆ – ನಗರʼ ಅಡಿಯಲ್ಲಿ ಸುಮಾರು 128 ಕೋಟಿ ರೂ.ಗಳ ವೆಚ್ಚದಲ್ಲಿ ನಿರ್ಮಿಸಲಾದ ಈ ಯೋಜನೆಯು 1000 ಕ್ಕೂ ಹೆಚ್ಚು ಫಲಾನುಭವಿ ಕುಟುಂಬಗಳಿಗೆ ಪ್ರಯೋಜನವನ್ನು ನೀಡುತ್ತದೆ. ಸಕಲ ಮೂಲಸೌಕರ್ಯಗಳೊಂದಿಗೆ ಗುಣಮಟ್ಟದ ಮನೆಗಳನ್ನು ನಿರ್ಮಿಸಲು ಇದರಲ್ಲಿ ನವೀನ ತಂತ್ರಜ್ಞಾನವನ್ನು ಬಳಸಲಾಗುತ್ತಿದ್ದು, 'ಪ್ರಿ-ಎಂಜಿನಿಯರ್ಡ್ ಸ್ಟೀಲ್ ಸ್ಟ್ರಕ್ಚರಲ್ ಸಿಸ್ಟಮ್' ವ್ಯವಸ್ಥೆಯು ನಿರ್ಮಾಣ ಸಮಯವನ್ನು ಗಣನೀಯವಾಗಿ ಕಡಿಮೆ ಮಾಡಿದೆ.

ವೈಯಕ್ತಿಕ ಮನೆ ಕೊಳಾಯಿ ಸಂಪರ್ಕಗಳ ಮೂಲಕ ಸುರಕ್ಷಿತ ಮತ್ತು ಸಮರ್ಪಕ ಕುಡಿಯುವ ನೀರನ್ನು ಒದಗಿಸುವ ಪ್ರಧಾನಮಂತ್ರಿಯವರ ಆಶಯವನ್ನು ಸಾಕಾರಗೊಳಿಸುವ ಒಂದು ಹೆಜ್ಜೆಯಾಗಿ, ಮಾಂಡ್ಲಾ, ಜಬಲ್‌ಪುರ ಮತ್ತು ದಿಂಡೋರಿ ಜಿಲ್ಲೆಗಳಲ್ಲಿ 2,350 ಕೋಟಿ ರೂ.ಗೂ ಅಧಿಕ ಮೌಲ್ಯದ ಹಲವು ʻಜಲ ಜೀವನ್ ಮಿಷನ್ʼ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಲಾಯಿತು. ಪ್ರಧಾನಮಂತ್ರಿಯವರು ಸಿಯೋನಿ ಜಿಲ್ಲೆಯಲ್ಲಿ 100 ಕೋಟಿ ರೂ.ಗೂ ಅಧಿಕ ಮೌಲ್ಯದ ʻಜಲ ಜೀವನ್ ಮಿಷನ್ʼ ಯೋಜನೆ ಕಾಮಗಾರಿಗಳನ್ನು ರಾಷ್ಟ್ರಕ್ಕೆ ಸಮರ್ಪಿಸಿದರು. ರಾಜ್ಯದ ನಾಲ್ಕು ಜಿಲ್ಲೆಗಳಲ್ಲಿನ ಈ ಯೋಜನೆಗಳು ಮಧ್ಯಪ್ರದೇಶದ ಸುಮಾರು 1,575 ಗ್ರಾಮಗಳಿಗೆ ಪ್ರಯೋಜನವನ್ನು ನೀಡಲಿವೆ.

ಮಧ್ಯಪ್ರದೇಶದಲ್ಲಿ ರಸ್ತೆ ಮೂಲಸೌಕರ್ಯ ಸುಧಾರಣೆಗಾಗಿ 4,800 ಕೋಟಿ ರೂ.ಗೂ ಅಧಿಕ ಮೌಲ್ಯದ ಹಲವು ಯೋಜನೆಗಳಿಗೆ ಪ್ರಧಾನಮಂತ್ರಿ ಅವರು ಶಂಕುಸ್ಥಾಪನೆ / ಲೋಕಾರ್ಪಣೆ ನೆರವೇರಿಸಿದರು. ಪ್ರಧಾನಮಂತ್ರಿಯವರು ರಾಷ್ಟ್ರೀಯ ಹೆದ್ದಾರಿ 346ರ ʻಜಾರ್ಖೇಡಾ-ಬೆರಾಸಿಯಾ-ಧೋಲ್‌ಖೇಡಿʼಯನ್ನು ಸಂಪರ್ಕಿಸುವ ರಸ್ತೆಯನ್ನು ಮೇಲ್ದರ್ಜೆಗೇರಿಸುವುದು ಸೇರಿದಂತೆ ಹಲವು ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು. ರಾಷ್ಟ್ರೀಯ ಹೆದ್ದಾರಿ 543ರ ʻಬಾಲಾಘಾಟ್ – ಗೊಂಡಿಯಾʼ ವಿಭಾಗವನ್ನು ಚತುಷ್ಪಥಗೊಳಿಸುವುದು; ರುಧಿ ಮತ್ತು ದೇಶಗಾಂವ್ ಅನ್ನು ಸಂಪರ್ಕಿಸುವ ʻಖಾಂಡ್ವಾ ಬೈಪಾಸ್ʼನ ಚತುಷ್ಪಥ ಕಾಮಗಾರಿ; ರಾಷ್ಟ್ರೀಯ ಹೆದ್ದಾರಿ 47ರ ʻತೆಮಗಾಂವ್‌ನಿಂದ ಚಿಚೋಲಿʼ ವಿಭಾಗವನ್ನು ಚತುಷ್ಪಥಗೊಳಿಸುವುದು; ʻಬೋರೆಗಾಂವ್‌ನಿಂದ ಶಹಪುರʼಕ್ಕೆ ಸಂಪರ್ಕ ಕಲ್ಪಿಸುವ ಚತುಷ್ಪಥ ರಸ್ತೆ; ಮತ್ತು ʻಶಹಪುರದಿಂದ ಮುಕ್ತೈʼನಗರಕ್ಕೆ ಸಂಪರ್ಕ ಕಲ್ಪಿಸುವ ಚತುಷ್ಪಥ ರಸ್ತೆ ಇವುಗಳಲ್ಲಿ ಸೇರಿವೆ. ರಾಷ್ಟ್ರೀಯ ಹೆದ್ದಾರಿ ʻ347ಸಿʼಯ ಖಲ್‌ಘಾಟ್‌ನಿಂದ ಸರ್ವಾರ್‌ದೇವ್ಲಾಗೆ ಸಂಪರ್ಕ ಕಲ್ಪಿಸುವ ರಸ್ತೆಯನ್ನು ಮೇಲ್ದರ್ಜೆಗೇರಿಸುವ ಕಾಮಗಾರಿಯನ್ನು ಪ್ರಧಾನಮಂತ್ರಿ ಅವರು ರಾಷ್ಟ್ರಕ್ಕೆ ಸಮರ್ಪಿಸಿದರು.

ಪ್ರಧಾನಮಂತ್ರಿಯವರು 1,850 ಕೋಟಿ ರೂ.ಗೂ ಅಧಿಕ ಮೌಲ್ಯದ ರೈಲು ಯೋಜನೆಗಳನ್ನು ರಾಷ್ಟ್ರಕ್ಕೆ ಸಮರ್ಪಿಸಿದರು. ಕತ್ನಿ- ವಿಜಯ್‌ಸೋಟ (102 ಕಿ.ಮೀ) ಮತ್ತು ಮಾರ್ವಾಸ್‌ಗ್ರಾಮ್ - ಸಿಂಗ್ರೌಲಿ (78.50 ಕಿ.ಮೀ) ಅನ್ನು ಸಂಪರ್ಕಿಸುವ ರೈಲು ಮಾರ್ಗದ ಡಬ್ಲಿಂಗ್‌ ಯೋಜನೆ ಇದರಲ್ಲಿ ಸೇರಿದೆ. ಈ ಎರಡೂ ಯೋಜನೆಗಳು ಕತ್ನಿ - ಸಿಂಗ್ರೌಲಿ ವಿಭಾಗವನ್ನು ಸಂಪರ್ಕಿಸುವ ರೈಲು ಮಾರ್ಗವನ್ನು ದ್ವಿಗುಣಗೊಳಿಸುವ ಯೋಜನೆಯ ಭಾಗವಾಗಿವೆ. ಈ ಯೋಜನೆಗಳು ಮಧ್ಯಪ್ರದೇಶದಲ್ಲಿ ರೈಲು ಮೂಲಸೌಕರ್ಯವನ್ನು ಸುಧಾರಿಸಲಿದ್ದು, ರಾಜ್ಯದ ವ್ಯಾಪಾರ ಮತ್ತು ಪ್ರವಾಸೋದ್ಯಮಕ್ಕೆ ಪ್ರಯೋಜನವನ್ನು ನೀಡಲಿವೆ.

ಪ್ರಧಾನಮಂತ್ರಿಯವರು ವಿಜೈಪುರ - ಔರೈಯಾನ್- ಫೂಲ್‌ಪುರ ಪೈಪ್‌ಲೈನ್‌ʼ ಯೋಜನೆಯನ್ನು ರಾಷ್ಟ್ರಕ್ಕೆ ಸಮರ್ಪಿಸಿದರು. 352 ಕಿ.ಮೀ ಉದ್ದದ ಈ ಕೊಳವೆ ಮಾರ್ಗವನ್ನು 1,750 ಕೋಟಿ ರೂ.ಗಿಂತ ಹೆಚ್ಚು ವೆಚ್ಚದಲ್ಲಿ ನಿರ್ಮಿಸಲಾಗಿದೆ. ಪ್ರಧಾನಮಂತ್ರಿಯವರು ಮುಂಬೈ-ನಾಗ್‌ಪುರ ಜಾರ್ಸುಗುಡ ಪೈಪ್‌ಲೈನ್ʼ ಯೋಜನೆಯ ʻನಾಗ್‌ಪುರ ಜಬಲ್‌ಪುರ ವಿಭಾಗʼಕ್ಕೆ (317 ಕಿ.ಮೀ.) ಶಂಕುಸ್ಥಾಪನೆ ನೆರವೇರಿಸಿದರು. ಈ ಯೋಜನೆಯನ್ನು 1,100 ಕೋಟಿ ರೂ.ಗಿಂತ ಅಧಿಕ ವೆಚ್ಚದಲ್ಲಿ ನಿರ್ಮಿಸಲಾಗುವುದು. ಅನಿಲ ಕೊಳವೆ ಮಾರ್ಗ ಯೋಜನೆಗಳು ಕೈಗಾರಿಕೆಗಳು ಹಾಗೂ ಮನೆಗಳಿಗೆ ಶುದ್ಧ ಮತ್ತು ಕೈಗೆಟುಕುವ ನೈಸರ್ಗಿಕ ಅನಿಲವನ್ನು ಒದಗಿಸುತ್ತವೆ. ಜೊತೆಗೆ, ಪರಿಸರಕ್ಕೆ ಮಾಲಿನ್ಯಕಾರಕ ಅನಿಲಗಳ ಹೊರಸೂಸುವಿಕೆಯನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಇದು ಮಹತ್ವದ ಹೆಜ್ಜೆಯಾಗಿದೆ. ಜಬಲ್‌ಪುರದಲ್ಲಿ ಸುಮಾರು 147 ಕೋಟಿ ರೂ.ಗಳ ವೆಚ್ಚದಲ್ಲಿ ನಿರ್ಮಿಸಲಾದ ಹೊಸ ಬಾಟ್ಲಿಂಗ್ ಘಟಕವನ್ನೂ ಪ್ರಧಾನಿ ರಾಷ್ಟ್ರಕ್ಕೆ ಸಮರ್ಪಿಸಿದರು.

ಭಾಷಣದ ಪೂರ್ಣ ಪಠ್ಯವನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
With HPV vaccine rollout, AIIMS oncologist says it’s the beginning of the end for cervical cancer in India

Media Coverage

With HPV vaccine rollout, AIIMS oncologist says it’s the beginning of the end for cervical cancer in India
NM on the go

Nm on the go

Always be the first to hear from the PM. Get the App Now!
...
The HPV vaccination campaign, launched from Ajmer, marks a significant step towards empowering the nation’s Nari Shakti: PM Modi in Rajasthan
February 28, 2026
Our government is committed to all-round development: PM
Today, I had the privilege of launching the nationwide HPV vaccination campaign from Ajmer, inaugurating and laying foundation stones for multiple projects and distributing appointment letters to the youth: PM
The HPV vaccination campaign has commenced from Ajmer, this campaign is a significant step towards empowering the Nari Shakti of the country: PM
The double-engine government is moving forward by taking both Rajasthan’s heritage and development together: PM
The campaign to link rivers started by our government will significantly benefit Rajasthan: PM
There is no shortage of sunlight in Rajasthan, this very sunshine is becoming a source of savings and income for the common man: PM
A very significant role is being played by the PM Surya Ghar Free Electricity Scheme, this scheme has the power to change Rajasthan's destiny: PM

भारत माता की जय।

भारत माता की जय।

भारत माता की जय।

तीर्थराज पुष्कर और माता सावित्री की इस पावन भूमि पर, आज मुझे आप सबके बीच आने का, आपके आशीर्वाद प्राप्त करने का अवसर मिला है। इस मंच से मैं सुरसुरा के तेजाजी धाम को, पृथ्वीराज की भूमि अजमेर को प्रणाम करता हूं।

मेरे साथ बोलिए –

तीर्थराज पुष्कर की जय।

तीर्थराज पुष्कर की जय।

वीर तेजाजी महाराज की जय।

वीर तेजाजी महाराज की जय।

भगवान देव नारायण की जय।

भगवान देव नारायण की जय।

वरूण अवतार भगवान झूलेलाल जी की जय।

भगवान झूलेलाल जी की जय।

मंच पर विराजमान राजस्थान के राज्यपाल हरिभाउ बागडे जी, राज्य के लोकप्रिय मुख्यमंत्री श्री भजनलाल शर्मा जी, पूर्व मुख्यमंत्री बहन वसुंधरा जी, केंद्रीय मंत्रिमंडल में मेरे साथी भगीरथ चौधरी जी, उपमुख्यमंत्री प्रेमचंद भैरवा जी, दिया कुमारी जी, संसद में मेरे साथी, भाजपा के प्रदेश अध्यक्ष मदन राठौर जी, उपस्थित अन्य मंत्रिगण, अन्य महानुभाव और राजस्थान के मेरे प्यारे भाई और बहनों। मैं पूज्य संतों का बहुत आभारी हूं, कि हमें आशीर्वाद देने के लिए इतनी बड़ी संख्या में पूज्य संतगण यहां मौजूद हैं।

साथियों,

अजमेर आस्था और शौर्य की धरती है। यहां तीर्थ भी है और क्रांतिवीरों के पदचिन्ह भी हैं। अभी कल ही मैं इजराइल की यात्रा को पूरा करके भारत लौटा हूं। राजस्थान के सपूत मेजर दलपत सिंह के शौर्य को इजराइल के लोग आज भी गौरव से याद करते हैं। मुझे भी इजराइल की संसद में, मेजर दलपत सिंह जी के शौर्य को नमन करने का सौभाग्य मिला। राजस्थान के वीर बाकुरों की, इजराइल के हाइफा शहर को आजाद कराने में जो भूमिका थी, मुझे उसका गौरवगान करने का अवसर मिला है।

साथियों,

कुछ समय पहले ही, राजस्थान में भाजपा की डबल इंजर सरकार को दो साल पूरे हुए हैं, मुझे संतोष है कि आज राजस्थान विकास के नए पथ पर अग्रसर है। विकास के जिन वायदों के साथ भाजपा सरकार आपकी सेवा में आई थी, उन्हें तेजी के साथ पूरा कर रही है। और आज का दिन, विकास के इसी अभियान को तेज करने का दिवस है। थोड़ी देर पहले यहां राजस्थान के विकास से जुड़ी करबी 17 हजार करोड़ रूपयों की परियोजनाओं का शिलान्यास और लोकार्पण हुआ है। सड़क, बिजली, पानी, स्वास्थ्य, शिक्षा, हर क्षेत्र में नई शक्ति जुड़ रही है। ये सारे प्रोजेक्टस राजस्थान की जनता की सुविधा बढ़ाएंगे और राजस्थान के युवाओं के लिए, रोजगार के भी अवसर पैदा करेंगे।

साथियों,

भाजपा की डबल इंजर सरकार लगातार युवा शक्ति को सशक्त कर रही है। दो साल पहले तक राजस्थान से भर्तियों में भ्रष्टाचार और पेपर लीक की ही खबरें चमकती रहती थीं, आती रहती थीं। अब राजस्थान में पेपर लीक पर लगाम लगी है, दोषियों पर सख्त कार्रवाई हो रही है। आज यहां इसी मंच से राजस्थान के 21 हजार से अधिक युवाओं को नियुक्ति पत्र भी सौंपे गए हैं। ये बहुत बड़ा बदलाव आया है। मैं इस बदलाव के लिए, नई नौकरियों के लिए, विकास के सभी कामों के लिए, राजस्थान के आप सभी लोगों को बहुत-बहुत बधाई देता हूं।

साथियों,

आज वीरांगनाओं की इस धरती से, मुझे देशभर की बेटियों के लिए एक अहम अभियान शुरू करने का अवसर मिला है। यहां अजमेर से HPV वैक्सीनेशन अभियान शुरू हुआ है। ये अभियान, देश की नारीशक्ति को सशक्त करने की दिशा में अहम कदम है।

साथियों,

हम सब जानते हैं कि परिवार में जब मां बीमार होती है, तो घर बिखर सा जाता है। अगर मां स्वस्थ है, तो परिवार हर संकट का सामना करने में सक्षम रहता है। इसी भाव से, भाजपा सरकार ने महिलाओं को संबल देने वाली अनेक योजनाएं चलाई हैं।

साथियों,

हमने 2014 से पहले का वो दौर देखा है, जिसमें शौचालय के अभाव में बहनों-बेटियों को कितनी पीड़ा, कितना अपमान झेलना पड़ता था। बच्चियां स्कूल छोड़ देती थीं, क्योंकि वहां अलग टॉयलेट की सुविधा नहीं होती थी। गरीब बेटियां सेनिटरी पैड्स नहीं ले पाती थीं। पहले जो सत्ता में रहे, उनके लिए ये छोटी बातें थीं। इसलिए इन समस्याओं की चर्चा तक नहीं होती थी। लेकिन हमारे लिए ये बहनों-बेटियों को बीमार करने वाला, उनके अपमान से जुड़ा संवेदनशील मसला था। इसलिए, हमने इनका मिशन मोड पर समाधान किया।

साथियों,

गर्भावस्था के दौरान कुपोषण माताओं के जीवन के लिए बहुत बड़ा खतरा होता था। हमने सुरक्षित मातृत्व के लिए योजना चलाई, मां को पोषक आहार मिले, इसके लिए पांच हज़ार रुपए बहनों के खाते में जमा करने की योजना शुरु की। मां धुएं में खांसती रहती थी, लेकिन उफ्फ तक नहीं करती थी। हमने कहा ये नहीं चलेगा। और इसलिए उज्जवला गैस योजना बनाई गई। ये सब इसलिए संभव हुआ, क्योंकि भाजपा सरकार, सत्ता भाव से नहीं, संवेदनशीलता के साथ काम करती है।

साथियों,

21वीं सदी का एक चौथाई हिस्सा बीत चुका है। आज का समय राजस्थान के विकास के लिए बड़ा महत्वपूर्ण है। भाजपा की डबल इंजन सरकार, राजस्थान की विरासत और विकास, दोनों को साथ लेकर चल रही है। हम सब जानते हैं, अच्छी सड़क, अच्छी रेल और हवाई सुविधा सिर्फ सफर आसान नहीं करती, वो पूरे इलाके की किस्मत बदल देती है। जब गांव-गांव तक अच्छी सड़क पहुँचती है, तो किसान अपनी फसल सही दाम पर बेच पाता है। व्यापारी आसानी से अपना सामान बाहर भेज पाते हैं। और हमारा अजमेर-पुष्कर तो, उसकी पर्यटन की ताकत कौन नहीं जानता। अच्छी कनेक्टिविटी का पर्यटन पर सबसे अच्छा असर पड़ता है। जब सफर आसान होता है, तो ज्यादा लोग घूमने आते हैं।

और साथियों,

जब पर्यटक आते हैं तो स्वाभाविक है होटल चलते हैं, ढाबे चलते हैं, कचौड़ी और दाल बाटी ज्यादा बिकती है, यहां राजस्थान के कारीगरों का बनाया सामान बिकता है, टैक्सी चलती है, गाइड को काम मिलता है। यानी एक पर्यटक कई परिवारों की रोज़ी-रोटी बन जाता है। इसी सोच के साथ हमारी सरकार, राजस्थान में आधुनिक कनेक्टिविटी पर बहुत बल दे रही है।

साथियों,

जैसे-जैसे राजस्थान में कनेक्टिविटी का विस्तार हो रहा है, वैसे-वैसे यहां निवेश के लिए भी अवसर लगातार बढ़ते जा रहे हैं। दिल्ली-मुंबई इंडस्ट्रियल कॉरिडोर के इर्द-गिर्द उद्योगों के लिए एक बहुत ही शानदार इंफ्रास्ट्रक्चर बनाया जा रहा है। यानी राजस्थान को अवसरों की भूमि बनाने के लिए, डबल इंजन सरकार हर संभव, अनेक विध काम कर रही है।

साथियों,

राजस्थान की माताएं अपने बच्चों को पालने में ही, राष्ट्र भक्ति का संस्कार देती हैं। राजस्थान की ये धरा जानती है कि देश का सम्मान क्या होता है, और इसीलिए आज राजस्थान की इस धरा पर, मैं आप लोगों से एक और बात कहने आया हूं।

साथियों,

हाल में ही, दिल्ली में, दुनिया का सबसे बड़ा AI सम्मेलन हुआ, Artificial Intelligence इसमें दुनिया के अनेक देशों के प्रधानमंत्री, अनेक देशों के राष्ट्रपति, अनेक देशों के मंत्रि, उस कार्यक्रम में आए थे। दुनिया की बड़ी-बड़ी कंपनियां, उन कंपनियों के कर्ता-धर्ता वो भी एक छत के नीचे इकट्ठे हुए थे। सबने भारत की खुले मन से प्रशंसा की। मैं जरा राजस्थान के मेरे भाई-बहनों से पूछना चाहता हूं। जब दुनिया के इतने सारे लोग, भारत की प्रशंसा करते हैं, ये सुनकर के आपको गर्व होता है की नहीं होता है? आपको गर्व होता है कि नहीं होता है? आपको अभिमान होता है कि नहीं होता है? आपका माथा ऊंचा हुआ या नहीं हुआ? आपका सीना चौड़ा हुआ कि नहीं हुआ?

साथियों,

आपको गर्व हुआ, लेकिन हताशा निराशा में डूबी, लगातार पराजय के कारण थक चुकी कांग्रेस ने क्या किया, ये आपने देखा है। दुनियाभर के मेहमानों के सामने, कांग्रेस ने देश को बदनाम करने की कोशिश की। इन्होंने विदेशी मेहमानों के सामने देश को बेइज्जत करने के लिए पूरा ड्रामा किया।

साथियों,

कांग्रेस, पूरे देश में ल्रगातार हार रही है, और गुस्से में वो इसका बदला, वो भारत को बदनाम करके ले रही है। कभी कांग्रेस, INC यानी इंडियन नेशनल कांग्रेस थी, लेकिन अब INC नहीं बची है, इंडियन नेशनल कांग्रेस नहीं बची है, आज वो INC के बजाय MMC, MMC बन गई है। MMC यानी मुस्लिम लीगी माओवादी कांग्रेस हो चुकी है।

राजस्थान के मेरे वीरों,

इतिहास गवाह है, मुस्लिम लीग भारत से नफरत करती थी, और इसलिए मुस्लिम लीग ने देश बांट दिया। आज कांग्रेस भी वही कर रही है। माओवादी भी, भारत की समृद्धि, हमारे संविधान और हमारे सफल लोकतंत्र से नफरत करते हैं, ये घात लगाकर हमला करते हैं, कांग्रेस भी घात लगाकर, देश को बदनाम करने के लिए कहीं भी घुस जाती है। कांग्रेस के ऐसे कुकर्मों को देश कभी माफ नहीं करेगा।

साथियों,

देश को बदनाम करना, देश की सेनाओं को कमजोर करना, ये कांग्रेस की पुरानी आदत रही है। आप याद कीजिए, यही कांग्रेस है, जिसने हमारी सेना के जवानों को हथियारों और वर्दी तक के लिए तरसा कर रखा था। ये वही कांग्रेस है, जिसने सालों तक हमारे सैनिक परिवारों को वन रैंक वन पेंशन से वंचित रखा था। ये वही कांग्रेस है, जिसके जमाने में विदेशों से होने वाले रक्षा सौदों में बड़े-बड़े घोटाले होते थे।

साथियों,

बीते 11 वर्षों में भारत की सेना ने हर मोर्चे पर आतंकियों पर, देश के दुश्मनों पर करारा प्रहार किया। हमारी सेना, हर मिशन, हर मोर्चे में विजयी रही। सर्जिकल स्ट्राइक से लेकर ऑपरेशन सिंदूर तक, वीरता का लोहा मनवाया, लेकिन कांग्रेस के नेताओं ने इसमें भी दुश्मनों के झूठ को ही आगे बढ़ाया। देश के लिए जो भी शुभ है, जो भी अच्छा है, जो भी देशवासियों का भला करने वाला है, कांग्रेस उस सबका विरोध करती है। इसलिए, देश आज कांग्रेस को सबक सिखा रहा है।

साथियों,

राजस्थान में तो आपने कांग्रेस के कुशासन को करीब से अनुभव किया है। यहां जितने दिन कांग्रेस की सरकार रही, वो भ्रष्टाचार करने और आपसी लड़ाई-झगड़े में ही उलझी रही। कांग्रेस ने हमारे किसानों को भी हमेशा धोखा दिया है। आप याद कीजिए, कांग्रेस ने दशकों तक सिंचाई की परियोजनाओं को कैसे लटकाए रखा। इसका राजस्थान के किसानों को बहुत अधिक नुकसान हुआ है। ERCP परियोजना को कांग्रेस की सरकारों ने केवल फाइलों और घोषणाओं में उलझाकर रखा। हमारी सरकार ने आते ही इस स्कीम को फाइलों से निकालकर धरातल पर उतारने का प्रयास किया है।

साथियों,

हमारी सरकार ने नदियों को जोड़ने का जो अभियान शुरु किया है, उसका बहुत अधिक फायदा राजस्थान को मिलना तय है। संशोधित पार्वती-कालीसिंध-चंबल लिंक परियोजना हो, यमुना-राजस्थान लिंक प्रोजेक्ट हो, डबल इंजन सरकार ऐसी अनेक सिंचाई परियोजनाओं का लाभ किसानों तक पहुंचाने के लिए प्रतिबद्ध है। आज भी झालावाड़, बारां, कोटा और बूंदी जिले के लिए पानी की अनेक परियोजनाओं पर काम शुरु हुआ है। हमारा प्रयास है, कि राजस्थान में भूजल का स्तर भी ऊपर उठे।

साथियों,

भाजपा सरकार, राजस्थान के सामर्थ्य को समझते हुए, योजनाएं बना रही है, उन्हें लागू कर रही है। मुझे खुशी है कि राजस्थान अब, सूरज की ताकत से समृद्धि कमाने वाली धरती बन गया है। हम सब जानते हैं, हमारे राजस्थान में धूप की कोई कमी नहीं। अब यही धूप, सामान्य मानवी के घर की बचत और कमाई का साधन बन रही है। और इसमें बहुत बड़ी भूमिका है, प्रधानमंत्री सूर्यघर मुफ्त बिजली योजना की। इस योजना में राजस्थान का भाग्य बदलने की ताकत है। इस योजना में भाजपा सरकार लोगों को अपनी छत पर सोलर पैनल लगाने के लिए 78 हजार रुपए की सहायता देती है। सरकार सीधे आपके बैंक खाते में पैसे भेजती है। आजादी के बाज सब बजट, सब योजनाएं देख लीजिए, जिसमें मध्यम वर्ग को सबसे ज्यादा लाभ होने वाला है, ऐेसी योजना कभी नजर नहीं आएगी, आज इन परिवारों को सोलर पैनल लगाने के लिए 78 हजार रुपए सीधा सरकार देती है। सबसे अधिक लाभ मध्यम वर्ग के लोग ले रहे हैं। और जिससे घर पर एक छोटा सा बिजली घर तैयार हो जाता है। दिन में सूरज की रोशनी से बिजली बनती है, घर में वही बिजली काम आती है और जो ज्यादा बिजली बनती है, वो बिजली ग्रिड में जाती है। और जिस घर में बिजली बनी होती है, उसे भी इसका लाभ मिलता है।

साथियों,

आज राजस्थान में सवा लाख से अधिक परिवार इस योजना से जुड़ चुके हैं। और इस योजना की वजह से, कई घरों का बिजली बिल लगभग जीरो आ रहा है। यानी खर्च कम हुआ है, बचत ज़्यादा हुई है।

साथियों,

विकसित राजस्थान से विकसित भारत के मंत्र पर हम लगातार काम कर रहे हैं। आज जिन योजनाओं पर काम शुरू हुआ है, वो विकसित राजस्थान की नींव को और अधिक मजबूत करेंगे। जब राजस्थान विकसित होगा, तो यहां के हर परिवार का जीवन समृद्ध होगा। आप सभी को एक बार फिर, विकास परियोजनाओं के लिए बहुत-बहुत शुभकामनाएं। मेरे साथ बोलिये-

भारत माता की जय!

भारत माता की जय!

वंदे मातरम के 150 साल देश मना रहा है। मेरे साथ बोलिये-

वंदे मातरम।

वंदे मातरम।

वंदे मातरम।

वंदे मातरम।

वंदे मातरम।

वंदे मातरम।

वंदे मातरम।

वंदे मातरम।

वंदे मातरम।

वंदे मातरम।

बहुत-बहुत धन्यवाद।