ವಿಶ್ವ ಪರಿಸರ ದಿನದಂದು, ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವದೆಹಲಿಯಲ್ಲಿರುವ ತಮ್ಮ ನಿವಾಸದಲ್ಲಿ ಕುಂಕುಮದ (ಸಿಂದೂರ) ಸಸಿ ನೆಟ್ಟರು. 1971ರ ಭಾರತ-ಪಾಕಿಸ್ತಾನ ಯುದ್ಧದ ಸಮಯದಲ್ಲಿ ಅಸಾಧಾರಣ ಧೈರ್ಯ ಮತ್ತು ದೇಶಭಕ್ತಿಯನ್ನು ಪ್ರದರ್ಶಿಸಿದ ಗುಜರಾತಿನ ಕಚ್ ನ ಧೈರ್ಯಶಾಲಿ ತಾಯಂದಿರು ಮತ್ತು ಸಹೋದರಿಯರು ಈ ಸಸಿಯನ್ನು ಅವರಿಗೆ ಉಡುಗೊರೆಯಾಗಿ ನೀಡಿದ್ದರು.
ಗುಜರಾತ್ ಗೆ ತಮ್ಮ ಇತ್ತೀಚಿನ ಭೇಟಿಯನ್ನು ನೆನಪಿಸಿಕೊಂಡ ಪ್ರಧಾನಮಂತ್ರಿಯವರು, ಕುಂಕುಮ (ಸಿಂದೂರ) ಸಸ್ಯದ ಉಡುಗೊರೆ ನಮ್ಮ ದೇಶದ ಮಹಿಳಾ ಶಕ್ತಿಯ ಶೌರ್ಯ ಮತ್ತು ಸ್ಫೂರ್ತಿಯ ಬಲವಾದ ಸಂಕೇತವಾಗಿ ಉಳಿಯುತ್ತದೆ ಎಂದು ಹೇಳಿದರು.
ಎಕ್ಸ್ ನ ಪೋಸ್ಟ್ ನಲ್ಲಿ ಪ್ರಧಾನಮಂತ್ರಿ ಮೋದಿಯವರು ಹೀಗೆ ಹೇಳಿದರು;
"1971ರ ಯುದ್ಧದಲ್ಲಿ ಧೈರ್ಯ ಮತ್ತು ಶೌರ್ಯಕ್ಕೆ ಅದ್ಭುತ ಉದಾಹರಣೆ ನೀಡಿದ ಕಚ್ ನ ಧೈರ್ಯಶಾಲಿ ತಾಯಂದಿರು ಮತ್ತು ಸಹೋದರಿಯರು ಇತ್ತೀಚೆಗೆ ಗುಜರಾತ್ ಗೆ ಭೇಟಿ ನೀಡಿದ ಸಂದರ್ಭದಲ್ಲಿ ನನಗೆ ಸಿಂದೂರ ಗಿಡವನ್ನು ಉಡುಗೊರೆಯಾಗಿ ನೀಡಿದರು. ಇಂದು, ವಿಶ್ವ ಪರಿಸರ ದಿನದಂದು, ನವದೆಹಲಿಯಲ್ಲಿರುವ ಪ್ರಧಾನಮಂತ್ರಿ ನಿವಾಸದಲ್ಲಿ ಆ ಗಿಡವನ್ನು ನೆಡುವ ಸೌಭಾಗ್ಯ ನನಗೆ ಸಿಕ್ಕಿದೆ. ಈ ಗಿಡ ನಮ್ಮ ದೇಶದ ಮಹಿಳಾ ಶಕ್ತಿಯ ಶೌರ್ಯ ಮತ್ತು ಸ್ಫೂರ್ತಿಯ ಬಲವಾದ ಸಂಕೇತವಾಗಿ ಉಳಿಯುತ್ತದೆ."
1971 के युद्ध में साहस और पराक्रम की अद्भुत मिसाल पेश करने वाली कच्छ की वीरांगना माताओं-बहनों ने हाल ही में गुजरात के दौरे पर मुझे सिंदूर का पौधा भेंट किया था। विश्व पर्यावरण दिवस पर आज मुझे उस पौधे को नई दिल्ली के प्रधानमंत्री आवास में लगाने का सौभाग्य मिला है। यह पौधा हमारे देश… pic.twitter.com/GsHCCNBUVp
— Narendra Modi (@narendramodi) June 5, 2025


