ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತಮ್ಮ ಗೌರವಾರ್ಥವಾಗಿ ಆಯೋಜಿಸಲಾದ ಭೋಜನಕೂಟದಲ್ಲಿ ಪ್ರಧಾನಮಂತ್ರಿ ಕಮಲ ಪ್ರಸಾದ್-ಬಿಸ್ಸೆಸ್ಸರ್ ಅವರಿಗೆ ಅಯೋಧ್ಯೆಯಲ್ಲಿರುವ ರಾಮ ಮಂದಿರದ ಪ್ರತಿರೂಪವನ್ನು ಉಡುಗೊರೆಯಾಗಿ ನೀಡಿದ್ದಾರೆ. ಅಲ್ಲದೆ, ಅವರು ಸರಯು ನದಿಯಿಂದ ಮತ್ತು ಪ್ರಯಾಗ್ರಾಜ್ನಲ್ಲಿ ನಡೆದ ಮಹಾಕುಂಭದ ಪವಿತ್ರ ನೀರನ್ನು ಸಮರ್ಪಿಸಿದರು.
ಪ್ರಧಾನಮಂತ್ರಿ ಅವರು ತಮ್ಮ ಸಾಮಾಜಿಕ ಜಾಲತಾಣ X ಪೋಸ್ಟ್ ನಲ್ಲಿ ಹೀಗೆ ಹೇಳಿದ್ದಾರೆ.
“ಪ್ರಧಾನಮಂತ್ರಿ ಕಮಲ ಪ್ರಸಾದ್-ಬಿಸ್ಸೆಸ್ಸರ್ ಅವರು ಆಯೋಜಿಸಿದ್ದ ಭೋಜನಕೂಟದಲ್ಲಿ, ನಾನು ಅಯೋಧ್ಯೆಯಲ್ಲಿರುವ ರಾಮ ಮಂದಿರದ ಪ್ರತಿರೂಪವನ್ನು ಮತ್ತು ಸರಯು ನದಿಯಿಂದ ಮತ್ತು ಪ್ರಯಾಗ್ರಾಜ್ನಲ್ಲಿ ನಡೆದ ಮಹಾಕುಂಭದ ಪವಿತ್ರ ನೀರನ್ನು ಉಡುಗೊರೆಯಾಗಿ ನೀಡಿದ್ದೇನೆ. ಅವು ಭಾರತ ಮತ್ತು ಟ್ರಿನಿಡಾಡ್ ಮತ್ತು ಟೊಬಾಗೋ ನಡುವಿನ ಆಳವಾದ ಸಾಂಸ್ಕೃತಿಕ ಮತ್ತು ಆಧ್ಯಾತ್ಮಿಕ ಬಾಂಧವ್ಯದ ಸಂಕೇತವಾಗಿವೆ."
At the dinner hosted by Prime Minister Kamla Persad-Bissessar, I presented a replica of the Ram Mandir in Ayodhya and holy water from the Saryu river as well as from the Mahakumbh held in Prayagraj. They symbolise the deep cultural and spiritual bonds between India and Trinidad &… pic.twitter.com/ec48ABwWdB
— Narendra Modi (@narendramodi) July 4, 2025


