ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಥಿಂಪುವಿನಲ್ಲಿ ಭೂತಾನ್ ನ ದೊರೆ ಜಿಗ್ಮೆ ಖೇಸರ್ ನಾಮ್ಗ್ಯೆಲ್ ವಾಂಗ್ಚುಕ್ ಅವರನ್ನು ಭೇಟಿಯಾದರು. ದ್ವಿಪಕ್ಷೀಯ ಸಂಬಂಧಗಳನ್ನು ಮತ್ತಷ್ಟು ಬಲಪಡಿಸಿ, ವೃದ್ದಿಸಲು ಉಭಯ ನಾಯಕರು ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡರು. ಪರಸ್ಪರ ಆಸಕ್ತಿಯ ಪ್ರಾದೇಶಿಕ ಮತ್ತು ಜಾಗತಿಕ ವಿಷಯಗಳ ಕುರಿತಾಗಿ ಕೂಡಾ ಅವರು ಚರ್ಚೆ ನಡೆಸಿದರು. ದೆಹಲಿ ದುರಂತದಲ್ಲಿ ಆದ ಜೀವಹಾನಿಗೆ ಭೂತಾನ್ ನ ದೊರೆ ಸಂತಾಪ ಸೂಚಿಸಿದರು.

ಉಭಯ ದೇಶಗಳ ನಡುವಿನ ಸ್ನೇಹ ಮತ್ತು ಸಹಕಾರದ ನಿಕಟ ಸಂಬಂಧಗಳನ್ನು ರೂಪಿಸುವಲ್ಲಿ ಸತತವಾಗಿ ಅಧಿಕಾರಕ್ಕೆ ಬಂದ ಡ್ರೂಕ್ ಗಯಾಲ್ಪೋಸ್ (ರಾಜರು) ಒದಗಿಸಿದ ಮಾರ್ಗದರ್ಶಿ ದೃಷ್ಟಿಕೋನದ ಕುರಿತಾಗಿ ಪ್ರಧಾನಮಂತ್ರಿ ಅವರು ಮೆಚ್ಚುಗೆ ವ್ಯಕ್ತಪಡಿಸಿದರು. ಭೂತಾನ್ ನ ಸಾಮಾಜಿಕ-ಆರ್ಥಿಕ ಅಭಿವೃದ್ಧಿಗೆ ಭಾರತ ಸರ್ಕಾರ ನೀಡಿದ ಅಮೂಲ್ಯ ಬೆಂಬಲಕ್ಕೆ ಘನತೆವೆತ್ತ ದೊರೆ ಮೆಚ್ಚುಗೆ ವ್ಯಕ್ತಪಡಿಸಿದರು.

 

ತಾಶಿಚೋಡ್ಜಾಂಗ್ ನ ಗ್ರ್ಯಾಂಡ್ ಕುಯೆನ್ರೆ ಹಾಲ್‌ನಲ್ಲಿ ಪ್ರತಿಷ್ಠಾಪಿಸಲಾಗಿರುವ ಭಾರತದ ಬುದ್ಧನ ಪವಿತ್ರ ಪಿಪ್ರಹ್ವಾ ಅವಶೇಷಗಳ ಮುಂದೆ ಉಭಯ ನಾಯಕರು ಪ್ರಾರ್ಥನೆ ಸಲ್ಲಿಸಿದರು. ಥಿಂಪುವಿನಲ್ಲಿ ಪವಿತ್ರ ಪಿಪ್ರಹ್ವಾ ಅವಶೇಷಗಳ ಪ್ರದರ್ಶನವು ಭೂತಾನ್ ನ ದೊರೆ, ನಾಲ್ಕನೇ ರಾಜರ 70ನೇ ಜನ್ಮದಿನ ವಾರ್ಷಿಕೋತ್ಸವ ಹಾಗೂ ಜಾಗತಿಕ ಶಾಂತಿ ಮತ್ತು ಸಂತೋಷಕ್ಕಾಗಿ ಭೂತಾನ್ ಆಯೋಜಿಸಿರುವ ಜಾಗತಿಕ ಶಾಂತಿ ಪ್ರಾರ್ಥನಾ ಉತ್ಸವದೊಂದಿಗೆ ಸಂಗಮಿಸುತ್ತದೆ.

ಉಭಯ ನಾಯಕರು ಜಂಟಿಯಾಗಿ 1020 ಮೆಗಾವ್ಯಾಟ್ ಪುನತ್ಸಂಗ್ಚು-II ಜಲವಿದ್ಯುತ್ ಯೋಜನೆಯನ್ನು ಉದ್ಘಾಟಿಸಿದರು. ಈ ಯೋಜನೆಯು ಭಾರತ ಮತ್ತು ಭೂತಾನ್ ನ ನಡುವೆ ರೋಮಾಂಚಕವಾಗಿ ಬೆಳೆಯುತ್ತಿರುವ ಪರಸ್ಪರ ಪ್ರಯೋಜನಕಾರಿ ಇಂಧನ ಪಾಲುದಾರಿಕೆಯಲ್ಲಿ ಒಂದು ಮೈಲಿಗಲ್ಲಾಗಿದೆ. ಇದು ಉಭಯ ದೇಶಗಳ ಸಾಮಾನ್ಯ ಜನರ ಜೀವನಕ್ಕೆ ಗಮನಾರ್ಹವಾಗಿ ಪ್ರಯೋಜನಕಾರಿಯಾಗಿದೆ.

 

ದ್ವಿಪಕ್ಷೀಯ ಸಹಕಾರವನ್ನು ಮತ್ತಷ್ಟು ಬಲಪಡಿಸಲು ನವೀಕರಿಸಬಹುದಾದ ಇಂಧನ, ಮಾನಸಿಕ ಆರೋಗ್ಯ ಸೇವೆಗಳು ಮತ್ತು ಆರೋಗ್ಯ ರಕ್ಷಣೆ ಕ್ಷೇತ್ರಗಳಲ್ಲಿ ಮೂರು ಒಪ್ಪಂದಗಳ ವಿನಿಮಯಕ್ಕೂ ಉಭಯ ನಾಯಕರು ಸಾಕ್ಷಿಯಾದರು. ಈ ಸಂದರ್ಭದಲ್ಲಿ, ಭಾರತ ಸರ್ಕಾರವು ಭೂತಾನ್‌ಗೆ ಇಂಧನ ಯೋಜನೆಗಳಿಗೆ ಹಣಕಾಸು ಒದಗಿಸಲು 4000 ಕೋಟಿ ರೂಪಾಯಿಗಳ ರಿಯಾಯಿತಿ ಸಾಲವನ್ನು ಘೋಷಿಸಿತು. ತಿಳಿವಳಿಕೆ ಒಪ್ಪಂದಗಳು ಮತ್ತು ಪ್ರಕಟಣೆಗಳ ಪಟ್ಟಿಯನ್ನು ಇಲ್ಲಿ ನೋಡಿ. ( ಲಿಂಕ್ )

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
The entrepreneurs building a self-reliant India

Media Coverage

The entrepreneurs building a self-reliant India
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 21 ಜುಲೈ 2026
July 21, 2026

Self-Reliance Is No Longer a Slogan — It’s Happening Across Engines, UPI, Vaccines & FDI Under the Leadership of PM Modi