ಸಮಗ್ರ ಜಾಗತಿಕ ಕಾರ್ಯತಂತ್ರದ ಸಹಭಾಗಿತ್ವವನ್ನು ಸಕ್ರಿಯಗೊಳಿಸಲು “2+2” ಸ್ವರೂಪದ ಕಾರ್ಯಚಟುವಟಿಕೆಯನ್ನು ಸ್ವಾಗತಿಸಿದ ಪ್ರಧಾನಮಂತ್ರಿ
ಪ್ರಧಾನಮಂತ್ರಿಯವರ ಯು.ಎಸ್. ಭೇಟಿ ಹಾಗೂ ಅಧ್ಯಕ್ಷ ಶ್ರೀ ಬಿಡೆನ್ ಅವರ ಜಿ20 ಶೃಂಗಸಭೆಗಾಗಿ ಭಾರತಕ್ಕೆ ಭೇಟಿಯ ಮುಂದುವರಿದ ಭಾಗವಾಗಿ ದ್ವಿಪಕ್ಷೀಯ ಸಹಕಾರದಲ್ಲಿ ಆಗಿರುವ ಪ್ರಗತಿಯನ್ನು ಅವರುಗಳು ಚರ್ಚಿಸಿದರು
ಪಶ್ಚಿಮ ಏಷ್ಯಾ ಸೇರಿದಂತೆ ಪರಸ್ಪರ ಆಸಕ್ತಿಯ ವಿವಿಧ ಪ್ರಾದೇಶಿಕ ಮತ್ತು ಜಾಗತಿಕ ಸಮಸ್ಯೆಗಳನ್ನು ಅವರುಗಳು ಚರ್ಚಿಸಿದರು
ಅಧ್ಯಕ್ಷ ಶ್ರೀ ಬಿಡೆನ್ ಅವರೊಂದಿಗಿರುವ ತಮಗಿರುವ ಸಂವಹನ ಹಾಗೂ ಮಾಹಿತಿ ವಿನಿಮಯದ ನಿರಂತರತೆಗಾಗಿ ಎದುರು ನೋಡುತ್ತಿರುವ ಪ್ರಧಾನಮಂತ್ರಿ

ಯು.ಎಸ್. ರಾಜ್ಯ ಕಾರ್ಯದರ್ಶಿ ಘನತೆವೆತ್ತ  ಶ್ರೀ ಆಂಟೋನಿ ಬ್ಲಿಂಕನ್ ಮತ್ತು ರಕ್ಷಣಾ ಕಾರ್ಯದರ್ಶಿ ಘನತೆವೆತ್ತ  ಶ್ರೀ ಲಾಯ್ಡ್ ಆಸ್ಟಿನ್ ಅವರು ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.

ಭಾರತದ ರಕ್ಷಣಾ ಸಚಿವರಾದ ಶ್ರೀ ರಾಜನಾಥ್ ಸಿಂಗ್ ಮತ್ತು ವಿದೇಶಾಂಗ ವ್ಯವಹಾರಗಳ ಸಚಿವರಾದ ಡಾ. ಎಸ್. ಜೈಶಂಕರ್ ಅವರೊಂದಿಗೆ "2+2" ಸ್ವರೂಪದ ಬಗ್ಗೆ ನಡೆದ ತಮ್ಮ ಚರ್ಚೆಗಳ ಕುರಿತು ಈ ಇಬ್ಬರು ಕಾರ್ಯದರ್ಶಿಗಳು ಪ್ರಧಾನಮಂತ್ರಿಯವರಿಗೆ ವಿವರಿಸಿದರು.

ಜೂನ್, 2023ರಲ್ಲಿ ಪ್ರಧಾನಮಂತ್ರಿಯವರ ಯು.ಎಸ್. ಭೇಟಿ ಮತ್ತು ಆನಂತರ ನವದೆಹಲಿಯಲ್ಲಿ ನಡೆದ ಶೃಂಗಸಭೆ ಜಿ20 ಸಂದರ್ಭದಲ್ಲಿ ಉಭಯ ನಾಯಕರ ನಡುವಿನ ಸಭೆಗಳ ನಂತರ ರಕ್ಷಣೆ, ಅರೆವಾಹಕಗಳು, ಉದಯೋನ್ಮುಖ ತಂತ್ರಜ್ಞಾನ, ಬಾಹ್ಯಾಕಾಶ, ಆರೋಗ್ಯ ಸೇರಿದಂತೆ ದ್ವಿಪಕ್ಷೀಯ ಸಹಕಾರದ ವಿವಿಧ ಕ್ಷೇತ್ರಗಳಲ್ಲಿ ಆಗಿರುವ  ಪ್ರಗತಿಯನ್ನು ಚರ್ಚಿಸಿದರು.  

 

ಎರಡೂ ದೇಶಗಳು ಎಲ್ಲಾ ಕ್ಷೇತ್ರಗಳಲ್ಲಿ ಹೊಂದಿರುವ ಆಳವಾದ ಸಹಕಾರದ ಬಗ್ಗೆ  ಪ್ರಧಾನಮಂತ್ರಿಯವರು ತೃಪ್ತಿ ವ್ಯಕ್ತಪಡಿಸಿದರು. ಭಾರತ ಮತ್ತು ಯು.ಎಸ್. ನಡುವಿನ ಸಮಗ್ರ ಜಾಗತಿಕ ಕಾರ್ಯತಂತ್ರದ ಪಾಲುದಾರಿಕೆಯು ಪ್ರಜಾಪ್ರಭುತ್ವ, ಬಹುತ್ವ ಮತ್ತು ಕಾನೂನಿನ ನಿಯಮಕ್ಕೆ ಗೌರವವನ್ನು ಹೊಂದಿದೆ ಎಂದು ಪ್ರಧಾನಮಂತ್ರಿಯವರು ಹೇಳಿದರು.

ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಬೆಳವಣಿಗೆಗಳು ಸೇರಿದಂತೆ ಪರಸ್ಪರ ಹಿತಾಸಕ್ತಿಯ ವಿವಿಧ ಪ್ರಾದೇಶಿಕ ಮತ್ತು ಜಾಗತಿಕ ವಿಷಯಗಳ ಕುರಿತು ಅವರುಗಳು ತಮ್ಮ ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಂಡರು.  ಈ ವಿಷಯಗಳಲ್ಲಿ ಭಾರತ ಮತ್ತು ಯು.ಎಸ್. ನಡುವೆ ನಿಕಟ ಸಮನ್ವಯವನ್ನು ಮುಂದುವರೆಸುವ ಅಗತ್ಯವನ್ನು ಅವರುಗಳು ಚರ್ಚಿಸಿದರು.

 

ಯು.ಎಸ್. ಅಧ್ಯಕ್ಷ ಶ್ರೀ ಬಿಡೆನ್ ಅವರಿಗೆ ಹೃತ್ಪೂರ್ವಕ ಶುಭಾಶಯಗಳನ್ನು ತಿಳಿಸಿದ ಪ್ರಧಾನಮಂತ್ರಿಯವರು, “ಅವರೊಂದಿಗೆ ಸಂವಹನ ಮತ್ತು ಮಾಹಿತಿ ವಿನಿಮಯವನ್ನು ಮುಂದುವರಿಸಲು ನಾನು ಎದುರು ನೋಡುತ್ತಿದ್ದೇನೆ” ಎಂದು ಹೇಳಿದರು.

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
Science and the power of jan bhagidari can lead to a TB-free India

Media Coverage

Science and the power of jan bhagidari can lead to a TB-free India
NM on the go

Nm on the go

Always be the first to hear from the PM. Get the App Now!
...
Prime Minister shares Sanskrit Subhashitam, seeks blessings of Maa Katyayani and shares devotional recital
March 24, 2026

The Prime Minister, Shri Narendra Modi, sought the blessings of Maa Katyayani and said that worship of Maa Jagadambe fills the mind with infinite energy and inner strength, while her divine radiance illuminates the heart with higher consciousness. He prayed that with the blessings of the Goddess, who is the embodiment of divinity and valour, all her devotees are endowed with immense strength and self-confidence.

The Prime Minister shared a Sanskrit verse-

“चन्द्रहासोज्ज्वलकरा शार्दूलवरवाहना। कात्यायनी शुभं दद्याद् देवी दानवघातिनी॥”

The Prime Minister also shared a recital in praise of the Goddess.

The Prime Minister wrote on X;

“मां कात्यायनी को वंदन! दिव्यता और पराक्रम की अधिष्ठात्री देवी मां की कृपा से उनके सभी भक्तों में अपार शक्ति और आत्मविश्वास का संचार हो।

चन्द्रहासोज्ज्वलकरा शार्दूलवरवाहना।

कात्यायनी शुभं दद्याद् देवी दानवघातिनी॥”

“मां जगदम्बे की उपासना से मन अनंत ऊर्जा और आत्मबल से भर जाता है। देवी मां का अलौकिक ओज हृदय को दिव्य चेतना से आलोकित कर देता है।