ಸಮಗ್ರ ಜಾಗತಿಕ ಕಾರ್ಯತಂತ್ರದ ಸಹಭಾಗಿತ್ವವನ್ನು ಸಕ್ರಿಯಗೊಳಿಸಲು “2+2” ಸ್ವರೂಪದ ಕಾರ್ಯಚಟುವಟಿಕೆಯನ್ನು ಸ್ವಾಗತಿಸಿದ ಪ್ರಧಾನಮಂತ್ರಿ
ಪ್ರಧಾನಮಂತ್ರಿಯವರ ಯು.ಎಸ್. ಭೇಟಿ ಹಾಗೂ ಅಧ್ಯಕ್ಷ ಶ್ರೀ ಬಿಡೆನ್ ಅವರ ಜಿ20 ಶೃಂಗಸಭೆಗಾಗಿ ಭಾರತಕ್ಕೆ ಭೇಟಿಯ ಮುಂದುವರಿದ ಭಾಗವಾಗಿ ದ್ವಿಪಕ್ಷೀಯ ಸಹಕಾರದಲ್ಲಿ ಆಗಿರುವ ಪ್ರಗತಿಯನ್ನು ಅವರುಗಳು ಚರ್ಚಿಸಿದರು
ಪಶ್ಚಿಮ ಏಷ್ಯಾ ಸೇರಿದಂತೆ ಪರಸ್ಪರ ಆಸಕ್ತಿಯ ವಿವಿಧ ಪ್ರಾದೇಶಿಕ ಮತ್ತು ಜಾಗತಿಕ ಸಮಸ್ಯೆಗಳನ್ನು ಅವರುಗಳು ಚರ್ಚಿಸಿದರು
ಅಧ್ಯಕ್ಷ ಶ್ರೀ ಬಿಡೆನ್ ಅವರೊಂದಿಗಿರುವ ತಮಗಿರುವ ಸಂವಹನ ಹಾಗೂ ಮಾಹಿತಿ ವಿನಿಮಯದ ನಿರಂತರತೆಗಾಗಿ ಎದುರು ನೋಡುತ್ತಿರುವ ಪ್ರಧಾನಮಂತ್ರಿ

ಯು.ಎಸ್. ರಾಜ್ಯ ಕಾರ್ಯದರ್ಶಿ ಘನತೆವೆತ್ತ  ಶ್ರೀ ಆಂಟೋನಿ ಬ್ಲಿಂಕನ್ ಮತ್ತು ರಕ್ಷಣಾ ಕಾರ್ಯದರ್ಶಿ ಘನತೆವೆತ್ತ  ಶ್ರೀ ಲಾಯ್ಡ್ ಆಸ್ಟಿನ್ ಅವರು ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.

ಭಾರತದ ರಕ್ಷಣಾ ಸಚಿವರಾದ ಶ್ರೀ ರಾಜನಾಥ್ ಸಿಂಗ್ ಮತ್ತು ವಿದೇಶಾಂಗ ವ್ಯವಹಾರಗಳ ಸಚಿವರಾದ ಡಾ. ಎಸ್. ಜೈಶಂಕರ್ ಅವರೊಂದಿಗೆ "2+2" ಸ್ವರೂಪದ ಬಗ್ಗೆ ನಡೆದ ತಮ್ಮ ಚರ್ಚೆಗಳ ಕುರಿತು ಈ ಇಬ್ಬರು ಕಾರ್ಯದರ್ಶಿಗಳು ಪ್ರಧಾನಮಂತ್ರಿಯವರಿಗೆ ವಿವರಿಸಿದರು.

ಜೂನ್, 2023ರಲ್ಲಿ ಪ್ರಧಾನಮಂತ್ರಿಯವರ ಯು.ಎಸ್. ಭೇಟಿ ಮತ್ತು ಆನಂತರ ನವದೆಹಲಿಯಲ್ಲಿ ನಡೆದ ಶೃಂಗಸಭೆ ಜಿ20 ಸಂದರ್ಭದಲ್ಲಿ ಉಭಯ ನಾಯಕರ ನಡುವಿನ ಸಭೆಗಳ ನಂತರ ರಕ್ಷಣೆ, ಅರೆವಾಹಕಗಳು, ಉದಯೋನ್ಮುಖ ತಂತ್ರಜ್ಞಾನ, ಬಾಹ್ಯಾಕಾಶ, ಆರೋಗ್ಯ ಸೇರಿದಂತೆ ದ್ವಿಪಕ್ಷೀಯ ಸಹಕಾರದ ವಿವಿಧ ಕ್ಷೇತ್ರಗಳಲ್ಲಿ ಆಗಿರುವ  ಪ್ರಗತಿಯನ್ನು ಚರ್ಚಿಸಿದರು.  

 

ಎರಡೂ ದೇಶಗಳು ಎಲ್ಲಾ ಕ್ಷೇತ್ರಗಳಲ್ಲಿ ಹೊಂದಿರುವ ಆಳವಾದ ಸಹಕಾರದ ಬಗ್ಗೆ  ಪ್ರಧಾನಮಂತ್ರಿಯವರು ತೃಪ್ತಿ ವ್ಯಕ್ತಪಡಿಸಿದರು. ಭಾರತ ಮತ್ತು ಯು.ಎಸ್. ನಡುವಿನ ಸಮಗ್ರ ಜಾಗತಿಕ ಕಾರ್ಯತಂತ್ರದ ಪಾಲುದಾರಿಕೆಯು ಪ್ರಜಾಪ್ರಭುತ್ವ, ಬಹುತ್ವ ಮತ್ತು ಕಾನೂನಿನ ನಿಯಮಕ್ಕೆ ಗೌರವವನ್ನು ಹೊಂದಿದೆ ಎಂದು ಪ್ರಧಾನಮಂತ್ರಿಯವರು ಹೇಳಿದರು.

ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಬೆಳವಣಿಗೆಗಳು ಸೇರಿದಂತೆ ಪರಸ್ಪರ ಹಿತಾಸಕ್ತಿಯ ವಿವಿಧ ಪ್ರಾದೇಶಿಕ ಮತ್ತು ಜಾಗತಿಕ ವಿಷಯಗಳ ಕುರಿತು ಅವರುಗಳು ತಮ್ಮ ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಂಡರು.  ಈ ವಿಷಯಗಳಲ್ಲಿ ಭಾರತ ಮತ್ತು ಯು.ಎಸ್. ನಡುವೆ ನಿಕಟ ಸಮನ್ವಯವನ್ನು ಮುಂದುವರೆಸುವ ಅಗತ್ಯವನ್ನು ಅವರುಗಳು ಚರ್ಚಿಸಿದರು.

 

ಯು.ಎಸ್. ಅಧ್ಯಕ್ಷ ಶ್ರೀ ಬಿಡೆನ್ ಅವರಿಗೆ ಹೃತ್ಪೂರ್ವಕ ಶುಭಾಶಯಗಳನ್ನು ತಿಳಿಸಿದ ಪ್ರಧಾನಮಂತ್ರಿಯವರು, “ಅವರೊಂದಿಗೆ ಸಂವಹನ ಮತ್ತು ಮಾಹಿತಿ ವಿನಿಮಯವನ್ನು ಮುಂದುವರಿಸಲು ನಾನು ಎದುರು ನೋಡುತ್ತಿದ್ದೇನೆ” ಎಂದು ಹೇಳಿದರು.

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
1 year of Operation Sindoor: 'Defining moment in India's strategic journey'

Media Coverage

1 year of Operation Sindoor: 'Defining moment in India's strategic journey'
NM on the go

Nm on the go

Always be the first to hear from the PM. Get the App Now!
...
Prime Minister shares Sanskrit Subhashitam highlighting the valour and duty of the Indian Armed Forces
May 08, 2026

The Prime Minister, Shri Narendra Modi, said that the courage and valour of the Indian Armed Forces in protecting the honour and dignity of the nation make every citizen proud. He noted that their spirit of sacrificing everything for Mother India is a source of inspiration for all.

The Prime Minister shared a Sanskrit verse-

“स्वधर्ममपि चावेक्ष्य न विकम्पितुमर्हसि |
धर्म्याद्धि युद्धाच्छ्रेयोऽन्यत्क्षत्रियस्य न विद्यते ||”

The verse conveys that When one becomes aware of one’s duty, there should be no hesitation or fear of any kind in the mind, because the struggle undertaken to protect religion and honour on the altar of justice is the most excellent and most glorious path to self-welfare for a warrior.