Rajmata Scindia proved that for people's representatives not 'Raj Satta' but 'Jan Seva' is important: PM
Rajmata had turned down many posts with humility: PM Modi
There is lots to learn from several aspects of Rajmata's life: PM Modi

ರಾಜಮಾತೆ ವಿಜಯರಾಜೇ ಸಿಂಧಿಯಾ ಅವರ ಜನ್ಮ ಶತಮಾನೋತ್ಸವವದ ಸ್ಮರಣಾರ್ಥ 100 ರೂ. ನಾಣ್ಯವನ್ನು ಪ್ರಧಾನಿ ಶ್ರೀ ನರೇಂದ್ರ ಮೋದಿ ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಬಿಡುಗಡೆ ಮಾಡಿ, ರಾಜಮಾತೆಯವರಿಗೆ ಗೌರವ ಸಲ್ಲಿಸಿದರು.

ರಾಜಮಾತೆ ವಿಜಯರಾಜೆ ಸಿಂಧಿಯಾ ಅವರ ಗೌರವಾರ್ಥ 100 ರೂಪಾಯಿ ವಿಶೇಷ ಸ್ಮರಣಾರ್ಥ ನಾಣ್ಯವನ್ನು ಬಿಡುಗಡೆ ಮಾಡುವ ಅವಕಾಶ ದೊರೆತಿರುವುದು ನನ್ನ ಅದೃಷ್ಟ ಎಂದು ಪ್ರಧಾನಿ ಈ ಸಂದರ್ಭದಲ್ಲಿ ಹೇಳಿದರು.

ವಿಜಯರಾಜೆಯವರ ಪುಸ್ತಕವನ್ನು ಉಲ್ಲೇಖಿಸಿದ ಪ್ರಧಾನಿಯವರು, ಪುಸ್ತಕದಲ್ಲಿ ತಮ್ಮನ್ನು ಗುಜರಾತ್‌ನ ಯುವ ನಾಯಕನೆಂದು ಪರಿಚಯಿಸಲಾಗಿತ್ತು. ಇಂದು ಇಷ್ಟು ವರ್ಷಗಳ ನಂತರ ತಾನು ದೇಶದ ಪ್ರಧಾನ ಸೇವಕರಾಗಿ ಸೇವೆ ಸಲ್ಲಿಸುತ್ತಿದ್ದೇನೆ ಎಂದು ಹೇಳಿದರು.

ಭಾರತವನ್ನು ಸರಿಯಾದ ದಿಕ್ಕಿನಲ್ಲಿ ಮುನ್ನಡೆಸಿದವರಲ್ಲಿ ರಾಜಮಾತೆ ವಿಜಯರಾಜೇ ಸಿಂಧಿಯಾ ಕೂಡಾ ಒಬ್ಬರು. ಅವರೊಬ್ಬ ನಿರ್ಣಾಯಕ ನಾಯಕಿ ಮತ್ತು ಕುಶಲ ಆಡಳಿತಗಾರರಾಗಿದ್ದರು. ವಿದೇಶಿ ಬಟ್ಟೆಗಳನ್ನು ಸುಡುವುದು, ತುರ್ತುಪರಿಸ್ಥಿ ಮತ್ತು ರಾಮ ಮಂದಿರ ಆಂದೋಲನ ಮುಂತಾದ ಭಾರತ ರಾಜಕಾರಣದ ಪ್ರತಿಯೊಂದು ಪ್ರಮುಖ ಹಂತಕ್ಕೂ ಅವರು ಸಾಕ್ಷಿಯಾಗಿದ್ದರು ಎಂದು ಪ್ರಧಾನ ಮಂತ್ರಿ ಹೇಳಿದರು. ಈಗಿನ ಪೀಳಿಗೆಯು ರಾಜಮಾತೆಯ ಜೀವನದ ಬಗ್ಗೆ ತಿಳಿದುಕೊಳ್ಳುವುದು ಬಹಳ ಮುಖ್ಯವಾಗಿದೆ. ಆದ್ದರಿಂದ ಅವರ ಬಗ್ಗೆ ಮತ್ತು ಅವರ ಅನುಭವಗಳ ಬಗ್ಗೆ ಪದೇ ಪದೇ ಪ್ರಸ್ತಾಪಿಸುವುದು ಅವಶ್ಯಕ ಎಂದು ಅವರು ಒತ್ತಿ ಹೇಳಿದರು.

ಸಾರ್ವಜನಿಕ ಸೇವೆ ಮಾಡಲು ನಿರ್ದಿಷ್ಟ ಕುಟುಂಬದಲ್ಲೇ ಜನಿಸುವುದು ಅನಿವಾರ್ಯವಲ್ಲ ಎಂದು ರಾಜಮಾತೆ ನಮಗೆ ಕಲಿಸಿದ್ದಾರೆ ಎಂದು ಪ್ರಧಾನಿ ಹೇಳಿದರು. ಸಾರ್ವಜನಿಕ ಸೇವೆಗೆ ಬೇಕಾಗಿರುವುದು ರಾಷ್ಟ್ರದ ಮೇಲಿನ ಪ್ರೀತಿ ಮತ್ತು ಪ್ರಜಾಪ್ರಭುತ್ವದ ಮನೋಧರ್ಮ. ಈ ತತ್ವ, ಆದರ್ಶಗಳನ್ನು ಅವರ ಜೀವನದಲ್ಲಿ ಕಾಣಬಹುದು. ರಾಜಮಾತೆಯವರಿಗೆ ಸಾವಿರಾರು ಮಂದಿ ಕೆಲಸಗಾರರರು ಇದ್ದರು, ಭವ್ಯವಾದ ಅರಮನೆ ಇತ್ತು ಮತ್ತು ಎಲ್ಲಾ ಸೌಲಭ್ಯಗಳನ್ನು ಅವರು ಹೊಂದಿದ್ದರು. ಆದರೆ ಜನಸಾಮಾನ್ಯರ ಹಿತಕ್ಕಾಗಿ, ಬಡವರ ಆಕಾಂಕ್ಷೆಗಳಿಗಾಗಿ ಅವರು ತಮ್ಮ ಜೀವನವನ್ನು ಮುಡುಪಾಗಿಟ್ಟರು. ಅವರು ಯಾವಾಗಲೂ ಜನರೊಂದಿಗೆ ಸಂಪರ್ಕ ಹೊಂದಿದ್ದರು ಮತ್ತು ಸಾರ್ವಜನಿಕ ಸೇವೆಗೆ ಬದ್ಧರಾಗಿದ್ದರು. ರಾಜಮಾತೆಯು ರಾಷ್ಟ್ರದ ಭವಿಷ್ಯಕ್ಕಾಗಿ ತಮ್ಮನ್ನು ತಾವು ಸಮರ್ಪಿಸಿಕೊಂಡಿದ್ದರು. ಅವರು ದೇಶದ ಮುಂದಿನ ಪೀಳಿಗೆಗಾಗಿ ತಮ್ಮ ಎಲ್ಲ ಸಂತೋಷವನ್ನು ತ್ಯಾಗ ಮಾಡಿದ್ದರು. ರಾಜಮಾತೆಯವರು ಸ್ಥಾನ ಮತ್ತು ಪ್ರತಿಷ್ಠೆಗಾಗಿ ಬದುಕಲಿಲ್ಲ, ರಾಜಕೀಯ ಕೂಡ ಮಾಡಲಿಲ್ಲ ಎಂದು ಅವರು ಹೇಳಿದರು.

ರಾಜಮಾತೆಯವರು ವಿನಯದಿಂದಲೇ ಅನೇಕ ಸ್ಥಾನಗಳನ್ನು ತಿರಸ್ಕರಿಸಿದ ಕೆಲವು ಸಂದರ್ಭಗಳನ್ನು ಪ್ರಧಾನಿ ನೆನಪಿಸಿಕೊಂಡರು. ಜನ ಸಂಘದ ಅಧ್ಯಕ್ಷರಾಗುವಂತೆ ಅಟಲ್ ಜಿ ಮತ್ತು ಅಡ್ವಾಣಿ ಜಿ ಅವರು ಒಮ್ಮೆ ಒತ್ತಾಯಿಸಿದರು. ಆದರೆ ಜನ ಸಂಘದಲ್ಲಿ ಕಾರ್ಯಕರ್ತರಾಗಿಯೇ ಸೇವೆ ಸಲ್ಲಿಸಲು ಅವರು ಬಯಸಿದರು ಎಂದು ಅವರು ಹೇಳಿದರು.

ರಾಜಮಾತೆಯವರು ತಮ್ಮ ಸಹಚರರನ್ನು ಹೆಸರಿನಿಂದ ಗುರುತಿಸಲು ಇಷ್ಟಪಡುತ್ತಿದ್ದರು ಮತ್ತು ಕೆಲಸಗಾರರ ಬಗೆಗಿನ ಈ ಭಾವನೆ ಎಲ್ಲರ ಮನಸ್ಸಿನಲ್ಲೂ ಇರಬೇಕು. ಹೆಮ್ಮೆಯ ಬದಲು ಗೌರವವು ರಾಜಕೀಯದ ತಿರುಳಾಗಿರಬೇಕು ಎಂದು ಪ್ರಧಾನಿ ಹೇಳಿದರು. ರಾಜಮಾತೆಯವರನ್ನು ಆಧ್ಯಾತ್ಮಿಕ ವ್ಯಕ್ತಿತ್ವ ಎಂದು ಪ್ರಧಾನಿ ಬಣ್ಣಿಸಿದರು.

ಸಾರ್ವಜನಿಕರಲ್ಲಿ ಜಾಗೃತಿ ಮತ್ತು ಸಾಮೂಹಿಕ ಆಂದೋಲನಗಳಿಂದಾಗಿ ಕಳೆದ ಕೆಲವು ವರ್ಷಗಳಲ್ಲಿ ದೇಶದಲ್ಲಿ ಅನೇಕ ಬದಲಾವಣೆಗಳು ನಡೆದಿವೆ ಮತ್ತು ಅನೇಕ ಅಭಿಯಾನಗಳು ಮತ್ತು ಯೋಜನೆಗಳು ಯಶಸ್ವಿಯಾಗಿವೆ ಎಂದು ಪ್ರಧಾನಿ ಹೇಳಿದರು. ರಾಜಮಾತೆಯ ಆಶೀರ್ವಾದದೊಂದಿಗೆ ದೇಶವು ಅಭಿವೃದ್ಧಿಯ ಹಾದಿಯಲ್ಲಿ ಮುಂದುವರಿಯುತ್ತಿದೆ ಎಂದು ಅವರು ತಿಳಿಸಿದರು.

ಭಾರತದ ನಾರಿ ಶಕ್ತಿ ಇಂದು ಪ್ರಗತಿ ಕಾಣುತ್ತಿದೆ ಮತ್ತು ದೇಶದ ವಿವಿಧ ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸುತ್ತಿದೆ ಎಂದು ಪ್ರಧಾನಿ ಹೇಳಿದರು. ಮಹಿಳಾ ಸಬಲೀಕರಣದ ರಾಜಮಾತೆಯ ಕನಸುಗಳನ್ನು ಈಡೇರಿಸಲು ನೆರವಾಗಿರುವ  ಸರ್ಕಾರದ ಉಪಕ್ರಮಗಳನ್ನು ಅವರು ಪಟ್ಟಿ ಮಾಡಿದರು.

ಅವರು ಹೋರಾಟ ನಡೆಸಿದ ರಾಮ ಜನ್ಮಭೂಮಿ ಮಂದಿರದ ಕನಸು ಅವರ ಜನ್ಮ ಶತಮಾನೋತ್ಸವದ ವರ್ಷದಲ್ಲಿ ಈಡೇರಿರುವುದು ಕಾಕತಾಳೀಯ ಎಂದು ಪ್ರಧಾನಿ ಹೇಳಿದರು. ಆತ್ಮನಿರ್ಭರ ಭಾರತದ ಯಶಸ್ಸು ದೃಢ, ಸುರಕ್ಷಿತ ಮತ್ತು ಸಮೃದ್ಧ ಭಾರತವನ್ನು ಸಾಕಾರಗೊಳಿಸಲು ನಮಗೆ ಸಹಾಯ ಮಾಡುತ್ತದೆ ಎಂದು ಪ್ರಧಾನಿ ಹೇಳಿದರು.

Click here to read full text speech

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
Modi, Macron discuss West Asia, stress navigation freedom in Hormuz

Media Coverage

Modi, Macron discuss West Asia, stress navigation freedom in Hormuz
NM on the go

Nm on the go

Always be the first to hear from the PM. Get the App Now!
...
Prime Minister shares Sanskrit Subhashitam highlighting the strength and contribution of Nari Shakti
April 17, 2026

The Prime Minister, Shri Narendra Modi, said that Nari Shakti is the identity of a strong India. He noted that the mothers, sisters and daughters of the country, through their unwavering determination, dedication and spirit of service, are enhancing the pride of India in every field.

The Prime Minister shared a Sanskrit verse-

“देव्या यया ततमिदं जगदात्मशक्त्या निश्शेषदेवगणशक्तिसमूहमूर्त्या ।

तामम्बिकामखिलदेवमहर्षिपूज्यां भक्त्या नताः स्म विदधातु शुभानि सा नः ।।”

The verse invokes We offer our reverent salutations to Ambika-worshipped by all the gods and great sages-who, through her divine power, pervades this entire universe and who is the very embodiment of the collective powers of all the deities. May that Mother of the Universe bestow welfare upon us.

The Prime Minister wrote on X;

“हमारी नारी शक्ति सशक्त भारत की पहचान है। देश की माताएं-बहनें और बेटियां अपनी अटूट संकल्पशक्ति, निष्ठा और सेवाभाव से आज हर क्षेत्र में भारतवर्ष का गौरव बढ़ा रही हैं।

देव्या यया ततमिदं जगदात्मशक्त्या निश्शेषदेवगणशक्तिसमूहमूर्त्या ।

तामम्बिकामखिलदेवमहर्षिपूज्यां भक्त्या नताः स्म विदधातु शुभानि सा नः ।।”