“ಮಣಿಪುರದ ತಮ್ಮ ಇತಿಹಾಸ ಏರಿಳಿತಗಳನ್ನು ಎದುರಿಸುವಾಗ ಅವರ ದೃಢತೆ ಮತ್ತು ಏಕತೆ ಅವರ ನಿಜವಾದ ಶಕ್ತಿಯಾಗಿದೆ’’
“ಮಣಿಪುರ ರಸ್ತೆ ಮತ್ತು ಬಂದ್ ಮಾಡುವುದರಿಂದ ಸ್ವಾತಂತ್ರ್ಯ ಮತ್ತು ಶಾಂತಿಯನ್ನು ಪಡೆಯಲು ಅರ್ಹವಾಗಿದೆ’’
“ಮಣಿಪುರವನ್ನು ದೇಶದ ಕ್ರೀಡಾಶಕ್ತಿಯ ಕೇಂದ್ರವನ್ನಾಗಿ ಮಾಡಲು ಸರ್ಕಾರ ಬದ್ಧವಿದೆ’’
“ಈಶಾನ್ಯ ಪ್ರದೇಶವನ್ನು ಪೂರ್ವ ಕ್ರಿಯಾ ನೀತಿಯ ಕೇಂದ್ರವನ್ನಾಗಿ ಮಾಡುವ ದೃಷ್ಟಿಯಲ್ಲಿ ಮಣಿಪುರವು ಪ್ರಮುಖ ಪಾತ್ರ ವಹಿಸಲಿದೆ’’
“ರಾಜ್ಯದ ಅಭಿವೃದ್ಧಿ ಪಯಣದಲ್ಲಿನ ಅಡೆತಡೆಗಳನ್ನು ದೂರಮಾಡಲಾಗಿದೆ ಮತ್ತು ಮುಂದಿನ 25 ವರ್ಷ ಮಣಿಪುರದ ಅಭಿವೃದ್ಧಿಯ ಅಮೃತಕಾಲವಾಗಲಿದೆ’’

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಣಿಪುರದ 50ನೇ ರಾಜ್ಯೋತ್ಸವ ದಿನದಂದು ಮಣಿಪುರದ ಜನತೆಗೆ ಅಭಿನಂದನೆ ಸಲ್ಲಿಸಿದ್ದಾರೆ. ಈ ವೇಳೆ ಮಾತನಾಡಿದ ಅವರು, ಈ ವೈಭವೋಪೇತ ಪಯಣಕ್ಕೆ ಕಾರಣರಾದ ಪ್ರತಿಯೊಬ್ಬರ ತ್ಯಾಗ ಮತ್ತು ಶ್ರಮಕ್ಕೆ ಗೌರವ ಸಲ್ಲಿಸಿದರು. ರಾಜ್ಯದ ಇತಿಹಾಸದಲ್ಲಿ ಏರಿಳಿತಗಳನ್ನು ಎದುರಿಸುವ ಸಂದರ್ಭದಲ್ಲಿ ಮಣಿಪುರಿ ಜನರು ತೋರಿದ ಸ್ಥೈರ್ಯ ಮತ್ತು ಏಕತೆ ಅವರ ನಿಜವಾದ ಶಕ್ತಿ ಎಂದು ಅವರು ಬಣ್ಣಿಸಿದರು. ರಾಜ್ಯದ ಜನರ ನಿರೀಕ್ಷೆಗಳು ಮತ್ತು ಆಕಾಂಕ್ಷೆಗಳನ್ನು ಖುದ್ದು ಅರಿಯುವ ಪ್ರಯತ್ನಗಳನ್ನು ನಿರಂತರ ಪ್ರಯತ್ನಗಳನ್ನು ನಡೆಸಲಾಗುತ್ತಿದೆ ಎಂದು ಪುನರುಚ್ಚರಿಸಿದ ಅವರು, ಇದು ಅಲ್ಲಿನ ಜನರ ಭಾವನೆಗಳು ಮತ್ತು ನಿರೀಕ್ಷೆಗಳನ್ನು ಚೆನ್ನಾಗಿ ಅರ್ಥಮಾಡಿಕೊಳ್ಳಲು ಮತ್ತು ರಾಜ್ಯದ ಸಮಸ್ಯೆಗಳನ್ನು ನಿಭಾಯಿಸಲು ಮಾರ್ಗಗಳನ್ನು ಕಂಡುಕೊಳ್ಳಲು ಅನುವು ಮಾಡಿಕೊಟ್ಟಿತು ಎಂದರು. ಮಣಿಪುರಿ ಜನರು ಶಾಂತಿ ಸ್ಥಾಪನೆಯ ತಮ್ಮ ಬಹುದೊಡ್ಡ ಆಸೆಯನ್ನು ಈಡೇರಿಸಬಹುದೆಂದು ಅವರು ಹರ್ಷ ವ್ಯಕ್ತಪಡಿಸಿದರು. “ಮಣಿಪುರವು ರಸ್ತೆ ತಡೆ ಮತ್ತು ಬಂದ್ ಸ್ವಾತಂತ್ರ್ಯ ಮತ್ತು ಶಾಂತಿಗೆ ಅರ್ಹವಾಗಿದೆ" ಎಂದು ಅವರು ಹೇಳಿದರು.

ಮಣಿಪುರವನ್ನು ದೇಶದ ಕ್ರೀಡಾ ಶಕ್ತಿ ಕೇಂದ್ರವನ್ನಾಗಿ ಮಾಡಲು ಸರ್ಕಾರ ಬದ್ಧವಾಗಿದೆ ಎಂದು ಪ್ರಧಾನಿ ಹೇಳಿದರು. ಮಣಿಪುರದ ಪುತ್ರರು ಮತ್ತು ಪುತ್ರಿಯರು ಕ್ರೀಡಾ ವಲಯದಲ್ಲಿ ಗೌರವವನ್ನು ತಂದಿದ್ದಾರೆ ಮತ್ತು ಅವರ ಉತ್ಸಾಹ ಮತ್ತು ಸಾಮರ್ಥ್ಯದ ಬೆಳಕಿನಲ್ಲಿ ಭಾರತದ ಮೊದಲ ಕ್ರೀಡಾ ವಿಶ್ವವಿದ್ಯಾಲಯವನ್ನು ರಾಜ್ಯದಲ್ಲಿ ಸ್ಥಾಪಿಸಲಾಗಿದೆ ಎಂದು ಅವರು ಹೇಳಿದರು. ನವೋದ್ಯಮ ವಲಯದಲ್ಲಿ ಮಣಿಪುರದ ಯುವಕರ ಯಶಸ್ಸಿನ ಬಗ್ಗೆಯೂ ಅವರು ಪ್ರಸ್ತಾಪಿಸಿದರು. ಸ್ಥಳೀಯ ಕರಕುಶಲ ಕಲೆಯನ್ನು ಉತ್ತೇಜಿಸಲು ಸರ್ಕಾರದ ಬದ್ಧತೆ ಹೊಂದಿದೆ ಎಂದು ಬಲವಾಗಿ ಪ್ರತಿಪಾದಿಸಿದರು.

ಈಶಾನ್ಯ ಪ್ರದೇಶವನ್ನು ಪೂರ್ವ ಕ್ರಿಯಾ ನೀತಿಯ ಕೇಂದ್ರವನ್ನಾಗಿ ಮಾಡುವ ದೃಷ್ಟಿಯಲ್ಲಿ ಮಣಿಪುರ ಪ್ರಮುಖ ಪಾತ್ರವನ್ನು ವಹಿಸಲಿದೆ ಎಂದು ಪ್ರಧಾನಮಂತ್ರಿ ಒತ್ತಿ ಹೇಳಿದರು. 'ಡಬಲ್ ಇಂಜಿನ್' ಸರ್ಕಾರದ ಅಡಿಯಲ್ಲಿ, ಮಣಿಪುರವು ರೈಲ್ವೆಯಂತಹ ಬಹುನಿರೀಕ್ಷಿತ ಸೌಲಭ್ಯಗಳನ್ನು ಪಡೆಯುತ್ತಿದೆ ಎಂದು ಅವರು ಹೇಳಿದರು. ರಾಜ್ಯದಲ್ಲಿ ಜಿರಿಬಾಮ್-ತುಪುಲ್-ಇಂಫಾಲ್ ರೈಲು ಮಾರ್ಗ ಸೇರಿದಂತೆ ಸಾವಿರಾರು ಕೋಟಿ ರೂಪಾಯಿ ವೆಚ್ಚದ ಸಂಪರ್ಕ ಯೋಜನೆಗಳು ಜಾರಿಯಲ್ಲಿವೆ. ಅಂತೆಯೇ, ಇಂಫಾಲ್ ವಿಮಾನ ನಿಲ್ದಾಣವು ಅಂತರರಾಷ್ಟ್ರೀಯ ಸ್ಥಾನಮಾನವನ್ನು ಪಡೆಯುವುದರೊಂದಿಗೆ, ದೆಹಲಿ, ಕೋಲ್ಕತ್ತಾ ಮತ್ತು ಬೆಂಗಳೂರಿನೊಂದಿಗೆ ಈಶಾನ್ಯ ರಾಜ್ಯಗಳ ಸಂಪರ್ಕವು ಸುಧಾರಿಸಿದೆ. ಭಾರತ-ಮ್ಯಾನ್ಮಾರ್-ಥೈಲ್ಯಾಂಡ್ ತ್ರಿ-ಪಕ್ಷೀಯ ಹೆದ್ದಾರಿ ಮತ್ತು ಈ ಪ್ರದೇಶದಲ್ಲಿ ಮುಂಬರುವ 9 ಸಾವಿರ ಕೋಟಿ ನೈಸರ್ಗಿಕ ಅನಿಲ ಕೊಳವೆಮಾರ್ಗದಿಂದ ಮಣಿಪುರಕ್ಕೆ ಹೆಚ್ಚು ಪ್ರಯೋಜನವಾಗಲಿದೆ.

 

ರಾಜ್ಯದ ಅಭಿವೃದ್ಧಿಯ ಪಯಣದಲ್ಲಿನ ಅಡೆತಡೆಗಳನ್ನು ನಿವಾರಿಸಲಾಗಿದೆ ಮತ್ತು ಮುಂದಿನ 25 ವರ್ಷಗಳು ಮಣಿಪುರದ ಅಭಿವೃದ್ಧಿಯ ಅಮೃತ ಕಾಲವಾಗಲಿದೆ ಎಂದು ಪ್ರಧಾನಮಂತ್ರಿ ಹೇಳಿದರು. ರಾಜ್ಯದ ಡಬಲ್ ಇಂಜಿನ್ ಬೆಳವಣಿಗೆಗೆ ಶುಭ ಹಾರೈಸುವ ಮೂಲಕ ಅವರು ತಮ್ಮ ಭಾಷಣವನ್ನು ಮುಕ್ತಾಯಗೊಳಿಸಿದರು.

 

Click here to read full text speech

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
Engineering goods exports up 10.4% in January,2026, crosses $100 billion mark in April-January Period of FY26

Media Coverage

Engineering goods exports up 10.4% in January,2026, crosses $100 billion mark in April-January Period of FY26
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 26 ಫೆಬ್ರವರಿ 2026
February 27, 2026

Citizens Express Heartfelt Gratitude to PM Modi: Make in India Surge, Budget Reforms & India-Israel Saffron Synergy