ಪ್ರಧಾನಮಂತ್ರಿ ಅವರು 2023ರ ಮೇ 20ರಂದು ಹಿರೋಷಿಮಾದಲ್ಲಿ ಜಿ-7 ಶೃಂಗಸಭೆಯ ನೇಪಥ್ಯದಲ್ಲಿ ಉಕ್ರೇನ್ ಅಧ್ಯಕ್ಷ ಘನತೆವೆತ್ತ ಶ್ರೀ ವೊಲೊಡಿಮಿರ್ ಝಲೆನ್ಸ್ಕಿ ಅವರನ್ನು ಭೇಟಿ ಮಾಡಿದ್ದರು.

ಉಕ್ರೇನ್ ನಲ್ಲಿನ ಸಂಘರ್ಷವು ಇಡೀ ಪ್ರಪಂಚದ ಮೇಲೆ ಗಮನಾರ್ಹ ಪರಿಣಾಮ ಬೀರಿದೆ ಎಂದು ಪ್ರಧಾನಿ ಗಮನಿಸಿದರು. ಆದಾಗ್ಯೂ, ಇದು ರಾಜಕೀಯ ಅಥವಾ ಆರ್ಥಿಕ ವಿಷಯವಲ್ಲ, ಆದರೆ ಮಾನವೀಯತೆಯ, ಮಾನವೀಯ ಮೌಲ್ಯಗಳ ಸಮಸ್ಯೆಯಾಗಿದೆ ಎಂದು ಅವರು ಒತ್ತಿ ಹೇಳಿದರು.

ಭಾರತೀಯ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಸ್ಥಳಾಂತರಿಸುವಲ್ಲಿ ಉಕ್ರೇನ್ ಸಹಕಾರವನ್ನು ಪ್ರಧಾನಿ ಶ್ಲಾಘಿಸಿದರು ಮತ್ತು ವಿದ್ಯಾರ್ಥಿಗಳಿಗೆ ಭಾರತದಲ್ಲಿ ಪರೀಕ್ಷೆ ನಡೆಸುವ ಉಕ್ರೇನ್ ಸಂಸ್ಥೆಗಳ ನಿರ್ಧಾರವನ್ನು ಸ್ವಾಗತಿಸಿದರು.

ಮುಂದುವರಿಯುವ ಮಾರ್ಗವನ್ನು ಕಂಡುಕೊಳ್ಳಲು ಮಾತುಕತೆ ಮತ್ತು ರಾಜತಾಂತ್ರಿಕತೆಗೆ ಭಾರತದ ಸ್ಪಷ್ಟ ಬೆಂಬಲವನ್ನು ಪ್ರಧಾನಿ ತಿಳಿಸಿದರು. ಜತೆಗೆ ಪರಿಸ್ಥಿತಿಯ ಪರಿಹಾರಕ್ಕಾಗಿ ಭಾರತ ಮತ್ತು ಪ್ರಧಾನ ಮಂತ್ರಿಗಳು ವೈಯಕ್ತಿಕವಾಗಿ ನಮ್ಮ ಕೈಲಾದ ಎಲ್ಲಾ ನೆರವನ್ನು ನೀಡಲಾಗುವುದು ಎಂದು ಅವರು ಹೇಳಿದರು.

ಭಾರತವು ಉಕ್ರೇನ್ ಜನರಿಗೆ ಮಾನವೀಯ ನೆರವು ನೀಡುವುದನ್ನು ಮುಂದುವರಿಸಲಿದೆ ಎಂದು ಪ್ರಧಾನಿ ಹೇಳಿದರು. ಅಧ್ಯಕ್ಷ ಝಲೆನ್ಸ್ಕಿ ಅವರು ಪ್ರಧಾನಮಂತ್ರಿಯವರಿಗೆ ಉಕ್ರೇನ್ ನ ಪ್ರಸಕ್ತ ಪರಿಸ್ಥಿತಿಯ ಬಗ್ಗೆ ವಿವರಿಸಿದರು. ಈ ಸಂದರ್ಭದಲ್ಲಿ ಎರಡೂ ಕಡೆಯವರು ಸಂಪರ್ಕದಲ್ಲಿರಲು ಒಪ್ಪಿಕೊಂಡರು. 

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
Semiconductors to clean energy: Inside PM Modi’s high-profile meeting with 16 Dutch CEOs in The Hague

Media Coverage

Semiconductors to clean energy: Inside PM Modi’s high-profile meeting with 16 Dutch CEOs in The Hague
NM on the go

Nm on the go

Always be the first to hear from the PM. Get the App Now!
...
Prime Minister Narendra Modi and Prime Minster of Sweden exchange special gifts celebrating the shared cultural legacy of Rabindranath Tagore
May 17, 2026