“ನಮ್ಮ ಸಂವಿಧಾನವು ದೇಶದ ಅನೇಕ ತಲೆಮಾರುಗಳ ಕನಸುಗಳನ್ನು ಈಡೇರಿಸಬಲ್ಲ ಸ್ವತಂತ್ರ ಭಾರತದ ದೃಷ್ಟಿಕೋನದ ರೂಪದಲ್ಲಿ ನಮ್ಮ ಮುಂದೆ ಬಂದಿದೆ.’’
ಸಂವಿಧಾನ ಕೇವಲ ಪುಸ್ತಕವಲ್ಲ. ಇದು ಒಂದು ಕಲ್ಪನೆ, ಬದ್ಧತೆ ಮತ್ತು ಸ್ವಾತಂತ್ರ್ಯದ ಮೇಲಿನ ನಂಬಿಕೆಯಾಗಿದೆ,’’
“ ಹಕ್ಕುಗಳು ಮತ್ತು ಕರ್ತವ್ಯಗಳ ಒಡಂಬಡಿಕೆಯು ನಮ್ಮ ಸಂವಿಧಾನವನ್ನು ತುಂಬಾ ವಿಶೇಷವಾಗಿಸುತ್ತದೆ’’ “ ಭಾರತವು ಸ್ವಭಾವತಃ ಸ್ವತಂತ್ರ ಚಿಂತನೆಯ ದೇಶವಾಗಿದೆ. ಜಡತ್ವವು ನಮ್ಮ ಮೂಲಭೂತ ಸ್ವಭಾವದ ಭಾಗವಲ್ಲ’’
ಶ್ರೀ ರಾಮ್ ಬಹದ್ದೂರ್ ರಾಯ್ ಅವರ ‘ಭಾರತೀಯ ಸಂವಿಧಾನ್: ಅಂಕಾಹಿ ಕಹಾನಿ’ ಪುಸ್ತಕದ ಬಿಡುಗಡೆ ಸಮಾರಂಭದಲ್ಲಿ ಪ್ರಧಾನಮಂತ್ರಿ ಅವರು ವಿಡಿಯೋ ಸಂದೇಶದ ಮೂಲಕ ಮಾತನಾಡಿದರು.

ಪ್ರಾರಂಭದಲ್ಲಿ, ಶ್ರೀ ರಾಮ್ ಬಹದ್ದೂರ್ ರೈ ಅವರು ಹೊಸ ವಿಚಾರಗಳನ್ನು ಹುಡುಕುವ ಜೀವನಪರ್ಯಂತದ ಅನ್ವೇಷಣೆ ಮತ್ತು ಹೊಸದನ್ನು ಸಮಾಜದ ಮುಂದೆ ತರುವ ಬಯಕೆಯನ್ನು ಪ್ರಧಾನಮಂತ್ರಿ ಅವರು ಗಮನಿಸಿದರು. ಇಂದು ಬಿಡುಗಡೆಯಾದ ಪುಸ್ತಕವು ಸಂವಿಧಾನವನ್ನು ಸಮಗ್ರ ರೀತಿಯಲ್ಲಿ ಪ್ರಸ್ತುತಪಡಿಸುತ್ತದೆ ಎಂಬ ಭರವಸೆಯನ್ನು ಅವರು ವ್ಯಕ್ತಪಡಿಸಿದರು. ಸಂವಿಧಾನದ ಪ್ರಜಾಸತ್ತಾತ್ಮಕ ಚಲನಶೀಲತೆಯ ಮೊದಲ ದಿನವನ್ನು ಗುರುತಿಸುವ ಸಂವಿಧಾನದ ಮೊದಲ ತಿದ್ದುಪಡಿಗೆ ಜೂನ್ 18 ರಂದು ರಾಷ್ಟ್ರಪತಿ ರಾಜೇಂದ್ರ ಪ್ರಸಾದ್ ಅವರು ಸಹಿ ಹಾಕಿದರು ಎಂದು ಶ್ರೀ ನರೇಂದ್ರ ಮೋದಿ ಅವರು ಹೇಳಿದರು, ಇದೇ ವೇಳೆ ಇದು ನಮ್ಮ ಅತಿದೊಡ್ಡ ಶಕ್ತಿಯಾಗಿದೆ ಎಂದು ಪ್ರಧಾನಮಂತ್ರಿ ಹೇಳಿದರು.

“ದೇಶದ ಅನೇಕ ತಲೆಮಾರುಗಳ ಕನಸುಗಳನ್ನು ನನಸು ಮಾಡಬಲ್ಲ ಸ್ವತಂತ್ರ ಭಾರತದ ದೃಷ್ಟಿಕೋನದ ರೂಪದಲ್ಲಿ ನಮ್ಮ ಸಂವಿಧಾನವು ನಮ್ಮ ಮುಂದೆ ಬಂದಿದೆ," ಎಂದು ಪ್ರಧಾನಿ ಹೇಳಿದರು. ಸಂವಿಧಾನ ರಚನಾ ಸಭೆಯ ಮೊದಲ ಸಭೆ ಸ್ವಾತಂತ್ರ್ಯಕ್ಕೆ ಕೆಲವು ತಿಂಗಳುಗಳ ಮೊದಲು 1946ರ ಡಿಸೆಂಬರ್ 9ರಂದು ನಡೆಯಿತು ಎಂಬುದನ್ನು ಸ್ಮರಿಸಿದ ಅವರು, ಇದು ನಮ್ಮ ಅಂತಿಮ ಸ್ವಾತಂತ್ರ್ಯ ಮತ್ತು ಪ್ರಜಾಪ್ರಭುತ್ವದ ಮೇಲಿನ ವಿಶ್ವಾಸ ಮತ್ತು ನಂಬಿಕೆಯನ್ನು ಸೂಚಿಸುತ್ತದೆ ಎಂದರು. ಇದು ಭಾರತದ ಸಂವಿಧಾನವು ಕೇವಲ ಒಂದು ಪುಸ್ತಕವಲ್ಲ ಎಂಬುದನ್ನು ಬಿಂಬಿಸುತ್ತದೆ ಎಂದು ಪ್ರಧಾನಮಂತ್ರಿ ಒತ್ತಿ ಹೇಳಿದರು. ಇದು ಒಂದು ಕಲ್ಪನೆ, ಬದ್ಧತೆ ಮತ್ತು ಸ್ವಾತಂತ್ರ್ಯದ ಮೇಲಿನ ನಂಬಿಕೆಯಾಗಿದೆ. ’’

ಶ್ರೀ ರೈಯವರ ಈ ಪುಸ್ತಕವು ಭವಿಷ್ಯದ ಭಾರತದಲ್ಲಿ ಗತಕಾಲದ ಪ್ರಜ್ಞೆ ಬಲವಾಗಿ ಉಳಿಯುವಂತೆ ಮಾಡಲು ಮರೆತುಹೋದ ಆಲೋಚನೆಗಳನ್ನು ನೆನಪಿಟ್ಟುಕೊಳ್ಳುವ ನವ ಭಾರತದ ಪ್ರಯತ್ನದ ಪರಂಪರೆಯಲ್ಲಿ ಇರಲಿದೆ ಎಂದು ಪ್ರಧಾನಮಂತ್ರಿ ಅವರು ಆಶಿಸಿದರು. ಈ ಪುಸ್ತಕವು ಸ್ವಾತಂತ್ರ್ಯದ ಇತಿಹಾಸ ಮತ್ತು ನಮ್ಮ ಸಂವಿಧಾನದ ಹೇಳಲಾಗದ ಅಧ್ಯಾಯಗಳೊಂದಿಗೆ ದೇಶದ ಯುವಕರಿಗೆ ಹೊಸ ಆಲೋಚನೆಯನ್ನು ನೀಡುತ್ತದೆ ಮತ್ತು ಅವರ ಪ್ರವಚನವನ್ನು ವಿಸ್ತರಿಸುತ್ತದೆ ಎಂದು ಅವರು ಹೇಳಿದರು.

ಶ್ರೀ ರೈ ಅವರ ಪುಸ್ತಕದ ಹಿಂದಿರುವ ತುರ್ತುಪರಿಸ್ಥಿತಿಯ ಸಂದರ್ಭವನ್ನು ಉಲ್ಲೇಖಿಸಿದ ಪ್ರಧಾನಮಂತ್ರಿ ಅವರು, “ ಹಕ್ಕುಗಳು ಮತ್ತು ಕರ್ತವ್ಯಗಳ ಒಡಂಬಡಿಕೆ ನಮ್ಮ ಸಂವಿಧಾನವನ್ನು ವಿಶೇಷವಾಗಿಸುತ್ತದೆ. ನಮಗೆ ಹಕ್ಕುಗಳಿದ್ದರೆ, ನಮಗೂ ಕರ್ತವ್ಯಗಳಿವೆ, ಮತ್ತು ನಮಗೆ ಕರ್ತವ್ಯಗಳಿದ್ದರೆ, ಹಕ್ಕುಗಳು ಸಮಾನವಾಗಿ ಬಲವಾಗಿರುತ್ತವೆ. ಅದಕ್ಕಾಗಿಯೇ, ಆಜಾದಿ ಅಮೃತ್ ಕಾಲ್ ನಲ್ಲಿ, ದೇಶವು ಕರ್ತವ್ಯ ಪ್ರಜ್ಞೆಯ ಬಗ್ಗೆ ಮಾತನಾಡುತ್ತಿದೆ ಮತ್ತು ಕರ್ತವ್ಯಗಳಿಗೆ ಹೆಚ್ಚು ಒತ್ತು ನೀಡುತ್ತಿದೆ.’’ ಎಂದು ಸಂವಿಧಾನದ ಬಗ್ಗೆ ವ್ಯಾಪಕ ಜಾಗೃತಿಯ ಅಗತ್ಯವನ್ನು ಪ್ರಧಾನಮಂತ್ರಿಯವರು ಒತ್ತಿ ಹೇಳಿದರು.

 ಗಾಂಧೀಜಿ ನಮ್ಮ ಸಂವಿಧಾನದ ಪರಿಕಲ್ಪನೆಗೆ ಹೇಗೆ ನಾಯಕತ್ವವನ್ನು ನೀಡಿದರು. ಸರ್ದಾರ್ ಪಟೇಲರು ಧರ್ಮದ ಆಧಾರದ ಮೇಲೆ ಪ್ರತ್ಯೇಕ ಚುನಾವಣಾ ವ್ಯವಸ್ಥೆಯನ್ನು ರದ್ದುಗೊಳಿಸುವ ಮೂಲಕ ಭಾರತೀಯ ಸಂವಿಧಾನವನ್ನು ಕೋಮುವಾದದಿಂದ ಮುಕ್ತಗೊಳಿಸಿದರು, ಡಾ. ಅಂಬೇಡ್ಕರ್ ಅವರು ಸಂವಿಧಾನದ ಪೀಠಿಕೆಯಲ್ಲಿ ಭ್ರಾತೃತ್ವವನ್ನು ಸೇರಿಸಿ ‘ಏಕ್ ಭಾರತ್ ಶ್ರೇಷ್ಠ ಭಾರತ’ವನ್ನು ರೂಪಿಸಿದರು ಮತ್ತು ಡಾ. ರಾಜೇಂದ್ರ ಪ್ರಸಾದ್ ಅವರಂತಹ ವಿದ್ವಾಂಸರು ಸಂವಿಧಾನವನ್ನು ಭಾರತದ ಆತ್ಮದೊಂದಿಗೆ ಸಂಪರ್ಕಿಸಲು ಹೇಗೆ ಪ್ರಯತ್ನಿಸಿದರು. ಈ ಪುಸ್ತಕವು ಇಂತಹ ಹೇಳಲಾಗದ ಅಂಶಗಳನ್ನು ನಮಗೆ ಪರಿಚಯಿಸುತ್ತದೆ,’’ ಎಂದು ಅವರು ಹೇಳಿದರು.

ಸಂವಿಧಾನದ ಜೀವಂತ ಸ್ವರೂಪದ ಬಗ್ಗೆ ವಿವರಿಸಿದ ಪ್ರಧಾನಮಂತ್ರಿ ಅವರು, “ ಭಾರತವು ಸ್ವಭಾವತಃ ಸ್ವತಂತ್ರ ಚಿಂತನೆಯ ದೇಶವಾಗಿದೆ. ಜಡತ್ವವು ನಮ್ಮ ಮೂಲ ಸ್ವಭಾವದ ಭಾಗವಲ್ಲ. ಸಂವಿಧಾನ ರಚನಾ ಸಭೆಯ ರಚನೆಯಿಂದ ಹಿಡಿದು ಅದರ ಚರ್ಚೆಗಳವರೆಗೆ, ಸಂವಿಧಾನವನ್ನು ಅಂಗೀಕರಿಸುವುದರಿಂದ ಹಿಡಿದು ಅದರ ಇಂದಿನ ಹಂತದವರೆಗೆ, ನಾವು ನಿರಂತರವಾಗಿ ಕ್ರಿಯಾತ್ಮಕ ಮತ್ತು ಪ್ರಗತಿಪರ ಸಂವಿಧಾನವನ್ನು ನೋಡಿದ್ದೇವೆ. ನಾವು ವಾದಿಸಿದ್ದೇವೆ, ಪ್ರಶ್ನೆಗಳನ್ನು ಎತ್ತಿದ್ದೇವೆ, ಚರ್ಚಿಸಿದ್ದೇವೆ ಮತ್ತು ಬದಲಾವಣೆಗಳನ್ನು ಮಾಡಿದ್ದೇವೆ. ಇದು ನಮ್ಮ ಜನಸಾಮಾನ್ಯರಲ್ಲಿ ಮತ್ತು ಜನರ ಮನಸ್ಸಿನಲ್ಲಿಯೂ ಮುಂದುವರಿಯುತ್ತದೆ ಎಂದು ನನಗೆ ಖಾತ್ರಿಯಿದೆ,’’ ಎಂದು ಅವರು ಹೇಳಿದರು.

ಭಾಷಣದ ಪೂರ್ಣ ಪಠ್ಯವನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
India attends UK-led talks as 37 countries sign pledge to secure Strait of Hormuz

Media Coverage

India attends UK-led talks as 37 countries sign pledge to secure Strait of Hormuz
NM on the go

Nm on the go

Always be the first to hear from the PM. Get the App Now!
...
Prime Minister shares Sanskrit Subhashitam highlighting the transformative power of education
April 03, 2026

The Prime Minister, Shri Narendra Modi, said that education is not merely a means of livelihood but a powerful medium to make life better. He noted that it is a priceless asset through which the youth of the country are setting new milestones in every field and bringing glory to the nation.

The Prime Minister shared a Sanskrit Subhashitam-

“श्रियः प्रदुग्धे विपदो रुणद्धि
यशांसि सूते मलिनं प्रमार्ष्टि।

संस्कारशौचेन परं पुनीते
शुद्धा हि बुद्धिः किल कामधेनुः॥”

The Subhashitam conveys that An educated, refined and pure intellect removes difficulties and brings success, respect, peace and progress into a person’s life. Indeed, an enlightened mind is considered like Kamadhenu, capable of fulfilling all kinds of aspirations.

The Prime Minister wrote on X;

“शिक्षा केवल आजीविका का साधन नहीं, बल्कि जीवन को श्रेष्ठ बनाने का सशक्त माध्यम भी है। यह वो अनमोल पूंजी है, जिसके जरिए आज हमारी युवाशक्ति हर क्षेत्र में नए-नए कीर्तिमान बनाकर देश का नाम रोशन कर रही है।

श्रियः प्रदुग्धे विपदो रुणद्धि
यशांसि सूते मलिनं प्रमार्ष्टि।

संस्कारशौचेन परं पुनीते
शुद्धा हि बुद्धिः किल कामधेनुः॥”