"ಹಿಮಾಚಲ ಪ್ರದೇಶದ ಜನರು ಸವಾಲುಗಳನ್ನು ಅವಕಾಶಗಳಾಗಿ ಪರಿವರ್ತಿಸಿದ್ದಾರೆ"
"ಡಬಲ್ ಎಂಜಿನ್ ಸರ್ಕಾರ” ವು ಗ್ರಾಮೀಣ ರಸ್ತೆಗಳು, ಹೆದ್ದಾರಿ, ರೈಲ್ವೆ ಜಾಲವನ್ನು ವಿಸ್ತರಿಸುವ ಉಪಕ್ರಮವನ್ನು ಕೈಗೆತ್ತಿಕೊಂಡಿದೆ, ಅದರ ಫಲಿತಾಂಶಗಳು ಈಗ ಗೋಚರಿಸುತ್ತಿವೆ"
"ಪ್ರಾಮಾಣಿಕ ನಾಯಕತ್ವ, ಶಾಂತಿಯುತ ಪರಿಸರ, ದೇವ - ದೇವತೆಗಳ ಆಶೀರ್ವಾದ ಮತ್ತು ಹಿಮಾಚಲದ ಜನರ ಪರಿಶ್ರಮಕ್ಕೆ ಹೋಲಿಕೆಯಿಲ್ಲ. ಹಿಮಾಚಲವು ತ್ವರಿತ ಬೆಳವಣಿಗೆಗೆ ಅಗತ್ಯವಿರುವ ಎಲ್ಲವನ್ನೂ ಹೊಂದಿದೆ "

ಹಿಮಾಚಲ ಪ್ರದೇಶದ 75 ನೇ ಸ್ಥಾಪನಾ ದಿನದ ಸಂದರ್ಭದಲ್ಲಿ ಪ್ರಧಾನಿ ಶ್ರೀ ನರೇಂದ್ರ ಮೋದಿಯವರು ರಾಜ್ಯದ ಜನರಿಗೆ ಶುಭಾಶಯ ಕೋರಿದ್ದಾರೆ. ಸ್ವಾತಂತ್ರ್ಯದ 75 ನೇ ವರ್ಷದಲ್ಲಿ 75 ನೇ ಸ್ಥಾಪನಾ ದಿನ ಬಂದಿರುವುದು ಸಂತೋಷದ ಕಾಕತಾಳೀಯ ಎಂದು ಅವರು ತಿಳಿಸಿದ್ದಾರೆ. ಆಜಾದಿ ಕಾ ಅಮೃತ ಮಹೋತ್ಸವದಲ್ಲಿ ರಾಜ್ಯದ ಪ್ರತಿಯೊಬ್ಬರಿಗೂ ಅಭಿವೃದ್ಧಿಯ ಅಮೃತವನ್ನು ಹಂಚುವ  ಬದ್ಧತೆಯನ್ನು ಅವರು ಪುನರುಚ್ಚರಿಸಿದರು.

ಶ್ರೀ ಅಟಲ್ ಬಿಹಾರಿ ವಾಜಪೇಯಿ ಅವರ ಕವಿತೆಯನ್ನು ಉಲ್ಲೇಖಿಸಿದ ಪ್ರಧಾನಿಯವರು, ಶ್ರಮಶೀಲ ಮತ್ತು ದೃಢನಿರ್ಧಾರದ ಜನರ ಸುಂದರ ರಾಜ್ಯದೊಂದಿಗಿನ ತಮ್ಮ ಸುದೀರ್ಘ ಸಂಬಂಧವನ್ನು ಸ್ಮರಿಸಿಕೊಂಡರು.

1948 ರಲ್ಲಿ ಅದರ ರಚನೆಯ ಸಮಯದಲ್ಲಿ ಗುಡ್ಡಗಾಡು ರಾಜ್ಯದ ಸವಾಲುಗಳನ್ನು ನೆನಪಿಸಿಕೊಂಡ ಪ್ರಧಾನಿಯವರು, ಸವಾಲುಗಳನ್ನು ಅವಕಾಶಗಳಾಗಿ ಪರಿವರ್ತಿಸಿದ ಹಿಮಾಚಲ ಪ್ರದೇಶದ ಜನರ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ತೋಟಗಾರಿಕೆ, ಹೆಚ್ಚುವರಿ ವಿದ್ಯುತ್, ಸಾಕ್ಷರತಾ ಪ್ರಮಾಣ, ಗ್ರಾಮೀಣ ರಸ್ತೆ ಸಂಪರ್ಕ, ಪ್ರತಿ ಮನೆಗೂ ನೀರು ಮತ್ತು ವಿದ್ಯುಚ್ಛಕ್ತಿಯಲ್ಲಿ ರಾಜ್ಯದ ಸಾಧನೆಗಳನ್ನು ಪ್ರಧಾನಿಯವರು ಶ್ಲಾಘಿಸಿದರು. ಕಳೆದ 7-8 ವರ್ಷಗಳಲ್ಲಿ ಈ ಸಾಧನೆಗಳ ಪ್ರಯತ್ನಗಳನ್ನು ಅವರು ಒತ್ತಿ ಹೇಳಿದರು. "ಜೈ ರಾಮ್ ಅವರ ಯುವ ನಾಯಕತ್ವದಲ್ಲಿ, 'ಡಬಲ್ ಎಂಜಿನ್ ಸರ್ಕಾರ' ಗ್ರಾಮೀಣ ರಸ್ತೆಗಳು, ಹೆದ್ದಾರಿ, ರೈಲ್ವೆ ಜಾಲಗಳನ್ನು ವಿಸ್ತರಿಸುವ ಉಪಕ್ರಮವನ್ನು ತೆಗೆದುಕೊಂಡಿದೆ. ಅದರ ಫಲಿತಾಂಶಗಳು ಈಗ ಗೋಚರಿಸುತ್ತಿವೆ. ಸಂಪರ್ಕವು ಉತ್ತಮಗೊಳ್ಳುತ್ತಿರುವುದರಿಂದ, ಹಿಮಾಚಲ ಪ್ರವಾಸೋದ್ಯಮವು ಹೊಸ ಕ್ಷೇತ್ರಗಳು, ಹೊಸ ಪ್ರದೇಶಗಳನ್ನು ಪ್ರವೇಶಿಸುತ್ತಿದೆ "ಎಂದು ಪ್ರಧಾನಿ ಹೇಳಿದರು.

ಪ್ರವಾಸೋದ್ಯಮದ ದಾಪುಗಾಲಿನಿಂದಾಗಿ ಸ್ಥಳೀಯ ಜನರಿಗೆ ಅವಕಾಶಗಳು ಮತ್ತು ಉದ್ಯೋಗದ ಹೊಸ ಹಾದಿಗಳು ತೆರೆಯುತ್ತಿರುವ ಬಗ್ಗೆ ಪ್ರಧಾನಿಯವರು ಒತ್ತಿ ಹೇಳಿದರು. ಸಾಂಕ್ರಾಮಿಕ ಸಮಯದಲ್ಲಿ ಪರಿಣಾಮಕಾರಿ ಮತ್ತು ವೇಗದ ಲಸಿಕೆ ನೀಡುವ ಮೂಲಕ ಆರೋಗ್ಯ ವಲಯದ ವಿಶೇಷ ಪ್ರಗತಿಯನ್ನು ಅವರು ಗಮನಿಸಿದರು.

ಹಿಮಾಚಲ ಪ್ರದೇಶದ ಸಂಪೂರ್ಣ ಸಾಮರ್ಥ್ಯವನ್ನು ಬಳಸಿಕೊಳ್ಳಲು ಕಷ್ಟಪಟ್ಟು ಕೆಲಸ ಮಾಡಬೇಕಾದ ಅಗತ್ಯವನ್ನು ಪ್ರಧಾನಿ ಒತ್ತಿಹೇಳಿದರು. ಅಮೃತ ಕಾಲದ ಸಮಯದಲ್ಲಿ, ಪ್ರವಾಸೋದ್ಯಮ, ಉನ್ನತ ಶಿಕ್ಷಣ, ಸಂಶೋಧನೆ, ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ, ಆಹಾರ ಸಂಸ್ಕರಣೆ ಮತ್ತು ಸಹಜ ಕೃಷಿ ಕ್ಷೇತ್ರಗಳಲ್ಲಿ ಅಪಾರ ಕೆಲಸವನ್ನು ಮಾಡಬೇಕಾಗಿದೆ ಎಂದು ಅವರು ಹೇಳಿದರು. ಈ ವರ್ಷದ ಬಜೆಡ್‌ ನಲ್ಲಿ ಪ್ರಕಟಿಸಿರುವ ರೋಮಾಂಚಕ ಗ್ರಾಮ ಯೋಜನೆ ಹಿಮಾಚಲ ಪ್ರದೇಶಕ್ಕೆ ಅಪಾರ ಪ್ರಯೋಜನವನ್ನು ನೀಡುತ್ತದೆ ಎಂದರು. ಈ ಉಪಕ್ರಮಗಳಿಗೆ ಸಮೃದ್ಧ ಕಾಡುಗಳು, ಸ್ವಚ್ಛತೆ ಮತ್ತು ಜನರ ಪಾಲ್ಗೊಳ್ಳುವಿಕೆಯನ್ನು ಹೆಚ್ಚಿಸುವುದರ ಅಗತ್ಯವನ್ನೂ ಪ್ರಧಾನಿಯವರು ಹೇಳಿದರು.

ಮುಖ್ಯಮಂತ್ರಿ ಮತ್ತು ಅವರ ತಂಡ, ವಿಶೇಷವಾಗಿ ಸಾಮಾಜಿಕ ಭದ್ರತೆಯ ಕ್ಷೇತ್ರದಲ್ಲಿ ಕೇಂದ್ರದ ಕಲ್ಯಾಣ ಯೋಜನೆಗಳನ್ನು ವಿಸ್ತರಿಸಿರುವ ಬಗ್ಗೆ ಪ್ರಧಾನಿಯವರು ಉಲ್ಲೇಖಿಸಿದರು. "ಪ್ರಾಮಾಣಿಕ ನಾಯಕತ್ವ, ಶಾಂತಿಯುತ ಪರಿಸರ, ದೇವ - ದೇವತೆಗಳ ಆಶೀರ್ವಾದ ಮತ್ತು ಹಿಮಾಚಲದ ಜನರ ಪರಿಶ್ರಮಕ್ಕೆ ಹೋಲಿಕೆಯಿಲ್ಲ. ಹಿಮಾಚಲವು ತ್ವರಿತ ಬೆಳವಣಿಗೆಗೆ ಅಗತ್ಯವಿರುವ ಎಲ್ಲವನ್ನೂ ಹೊಂದಿದೆ " ಎಂದು ಪ್ರಧಾನಿಯವರು ಸಂದೇಶವನ್ನು ಮುಕ್ತಾಯಗೊಳಿಸಿದರು.

ಭಾಷಣದ ಪೂರ್ಣ ಪಠ್ಯವನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
Make in India Electronics: Cos create 1.33 million job as PLI scheme boosts smartphone manufacturing & exports

Media Coverage

Make in India Electronics: Cos create 1.33 million job as PLI scheme boosts smartphone manufacturing & exports
NM on the go

Nm on the go

Always be the first to hear from the PM. Get the App Now!
...
Prime Minister pays homage to Sri Guru Gobind Singh Ji on sacred Parkash Utsav
December 27, 2025

The Prime Minister, Shri Narendra Modi paid homage to Sri Guru Gobind Singh Ji on the occasion of sacred Parkash Utsav, today. Shri Modi stated that he remains an embodiment of courage, compassion and sacrifice. "His life and teachings inspire us to stand for truth, justice, righteousness and to protect human dignity. Sri Guru Gobind Singh Ji’s vision continues to guide generations towards service and selfless duty" Shri Modi said.

The Prime Minister posted on X:

"On the sacred Parkash Utsav of Sri Guru Gobind Singh Ji, we bow in reverence to him. He remains an embodiment of courage, compassion and sacrifice. His life and teachings inspire us to stand for truth, justice, righteousness and to protect human dignity. Sri Guru Gobind Singh Ji’s vision continues to guide generations towards service and selfless duty.

Here are pictures from my visit to the Takhat Sri Harimandir Ji Patna Sahib earlier this year, where I also had Darshan of the Holy Jore Sahib of Sri Guru Gobind Singh Ji and Mata Sahib Kaur Ji."

"ਸ੍ਰੀ ਗੁਰੂ ਗੋਬਿੰਦ ਸਿੰਘ ਜੀ ਦੇ ਪਵਿੱਤਰ ਪ੍ਰਕਾਸ਼ ਉਤਸਵ 'ਤੇ ਅਸੀਂ ਉਨ੍ਹਾਂ ਨੂੰ ਸ਼ਰਧਾ ਸਹਿਤ ਪ੍ਰਣਾਮ ਕਰਦੇ ਹਾਂ। ਉਹ ਹਿੰਮਤ, ਹਮਦਰਦੀ ਅਤੇ ਕੁਰਬਾਨੀ ਦੇ ਪ੍ਰਤੀਕ ਹਨ।ਉਨ੍ਹਾਂ ਦਾ ਜੀਵਨ ਅਤੇ ਸਿੱਖਿਆਵਾਂ ਸਾਨੂੰ ਸੱਚ, ਨਿਆਂ, ਧਰਮ ਲਈ ਖੜ੍ਹੇ ਹੋਣ ਅਤੇ ਮਨੁੱਖੀ ਮਾਣ-ਸਨਮਾਨ ਦੀ ਰਾਖੀ ਲਈ ਪ੍ਰੇਰਿਤ ਕਰਦੀਆਂ ਹਨ। ਸ੍ਰੀ ਗੁਰੂ ਗੋਬਿੰਦ ਸਿੰਘ ਜੀ ਦਾ ਦ੍ਰਿਸ਼ਟੀਕੋਣ ਪੀੜ੍ਹੀਆਂ ਨੂੰ ਸੇਵਾ ਅਤੇ ਨਿਰਸਵਾਰਥ ਕਰਤੱਵ ਦੇ ਰਾਹ 'ਤੇ ਰਹਿਨੁਮਾਈ ਕਰਦਾ ਰਹਿੰਦਾ ਹੈ।

ਇਸ ਸਾਲ ਦੀ ਸ਼ੁਰੂਆਤ ਵਿੱਚ ਤਖ਼ਤ ਸ੍ਰੀ ਹਰਿਮੰਦਰ ਜੀ ਪਟਨਾ ਸਾਹਿਬ ਦੀ ਮੇਰੀ ਯਾਤਰਾ ਦੀਆਂ ਇੱਥੇ ਤਸਵੀਰਾਂ ਹਨ, ਜਿੱਥੇ ਮੈਨੂੰ ਸ੍ਰੀ ਗੁਰੂ ਗੋਬਿੰਦ ਸਿੰਘ ਜੀ ਅਤੇ ਮਾਤਾ ਸਾਹਿਬ ਕੌਰ ਜੀ ਦੇ ਪਵਿੱਤਰ ਜੋੜਾ ਸਾਹਿਬ ਦੇ ਦਰਸ਼ਨ ਵੀ ਹੋਏ ਸਨ।"