29 ಪುರಾತನ ಕಲಾಕೃತಿಗಳನ್ನು ಭಾರತಕ್ಕೆ ಹಿಂದಿರುಗಿಸಿದ ಆಸ್ಟ್ರೇಲಿಯಾದ ಪ್ರಧಾನಿ ಸ್ಕಾಟ್ ಮಾರಿಸನ್ ಅವರಿಗೆ ಪ್ರಧಾನಿ ಮೋದಿ ಧನ್ಯವಾದ ತಿಳಿಸಿದ್ದಾರೆ
ಪ್ರಧಾನಿ ಮೋದಿ, ಆಸ್ಟ್ರೇಲಿಯಾದ ಪ್ರಧಾನಿ ಸಮಗ್ರ ಕಾರ್ಯತಂತ್ರದ ಸಹಭಾಗಿತ್ವದ ಅಡಿಯಲ್ಲಿ ಪ್ರಗತಿಯನ್ನು ಪರಿಶೀಲಿಸಿದರು

ನನ್ನ ಪ್ರೀತಿಯ ಸ್ನೇಹಿತರಾದ ಸ್ಕಾಟ್ ಅವರಿಗೆ ನಮಸ್ಕಾರ!
ಹೋಳಿ ಹಬ್ಬ ಮತ್ತು ಚುನಾವಣಾ ಗೆಲುವಿಗಾಗಿ ನಿಮ್ಮ ಶುಭಾಶಯಗಳಿಗಾಗಿ ನಾನು ನಿಮಗೆ ಆಭಾರಿಯಾಗಿದ್ದೇನೆ.
ಕ್ವೀನ್ಸ್ ಲ್ಯಾಂಡ್ ಮತ್ತು ನ್ಯೂ ಸೌತ್ ವೇಲ್ಸ್ ನಲ್ಲಿ ಸಂಭವಿಸಿದ ಪ್ರವಾಹದಿಂದ ಉಂಟಾದ ಜೀವಹಾನಿ ಮತ್ತು ಆಸ್ತಿಪಾಸ್ತಿ ಹಾನಿಗೆ ನಾನು ಎಲ್ಲ ಭಾರತೀಯರ ಪರವಾಗಿ ಸಂತಾಪ ಸೂಚಿಸುತ್ತೇನೆ.

ನಮ್ಮ ಹಿಂದಿನ ವರ್ಚುವಲ್ ಶೃಂಗಸಭೆಯಲ್ಲಿ, ನಾವು ನಮ್ಮ ಬಾಂಧವ್ಯವನ್ನು ಸಮಗ್ರ ವ್ಯೂಹಾತ್ಮಕ ಸಹಭಾಗಿತ್ವಕ್ಕೆ ಏರಿಸಿದ್ದೇವೆ. ಇಂದು, ನಾವು ಎರಡೂ ದೇಶಗಳ ನಡುವೆ ವಾರ್ಷಿಕ ಶೃಂಗಸಭೆಗಳ ಕಾರ್ಯವಿಧಾನವನ್ನು ಸ್ಥಾಪಿಸುತ್ತಿದ್ದೇವೆ ಎಂಬುದು ನನಗೆ ಸಂತಸ ತಂದಿದೆ. ಇದು ನಮ್ಮ ಬಾಂಧವ್ಯದ ನಿಯಮಿತ ಪರಾಮರ್ಶೆಯ ರಚನಾತ್ಮಕ ಕಾರ್ಯವಿಧಾನವನ್ನು ಸೃಷ್ಟಿಸುತ್ತದೆ.
ಮಾನ್ಯರೇ,
ಕಳೆದ ಕೆಲವು ವರ್ಷಗಳಲ್ಲಿ ನಮ್ಮ ಬಾಂಧವ್ಯ ಗಮನಾರ್ಹ ಪ್ರಗತಿ ಸಾಧಿಸಿದೆ. ವ್ಯಾಪಾರ ಮತ್ತು ಹೂಡಿಕೆ, ರಕ್ಷಣೆ ಮತ್ತು ಭದ್ರತೆ, ಶಿಕ್ಷಣ ಮತ್ತು ನಾವೀನ್ಯತೆ, ವಿಜ್ಞಾನ ಮತ್ತು ತಂತ್ರಜ್ಞಾನ - ಈ ಎಲ್ಲಾ ಕ್ಷೇತ್ರಗಳಲ್ಲಿ ನಾವು ಬಹಳ ನಿಕಟ ಸಹಕಾರವನ್ನು ಹೊಂದಿದ್ದೇವೆ. ನಿರ್ಣಾಯಕ ಖನಿಜಗಳು, ಜಲ ನಿರ್ವಹಣೆ, ನವೀಕರಿಸಬಹುದಾದ ಇಂಧನ ಮತ್ತು ಕೋವಿಡ್ -19 ಸಂಶೋಧನೆಯಂತಹ ಇತರ ಅನೇಕ ಕ್ಷೇತ್ರಗಳಲ್ಲೂ ನಮ್ಮ ಸಹಯೋಗವು ವೇಗವಾಗಿ ಬೆಳೆದಿದೆ.
ನಿರ್ಣಾಯಕ ಮತ್ತು ಹೊರಹೊಮ್ಮುವ ತಂತ್ರಜ್ಞಾನ ನೀತಿಗಾಗಿ ಬೆಂಗಳೂರಿನಲ್ಲಿ ಉತ್ಕೃಷ್ಟತೆಯ ಕೇಂದ್ರ ಸ್ಥಾಪಿಸುವ ಘೋಷಣೆಯನ್ನು ನಾನು ಹೃತ್ಪೂರ್ವಕವಾಗಿ ಸ್ವಾಗತಿಸುತ್ತೇನೆ. ಸೈಬರ್ ಮತ್ತು ವಿಮರ್ಶಾತ್ಮಕ ಮತ್ತು ಉದಯೋನ್ಮುಖ ತಂತ್ರಜ್ಞಾನಗಳಲ್ಲಿ ನಮ್ಮ ನಡುವೆ ಉತ್ತಮ ಸಹಕಾರ ಇರುವುದು ಅತ್ಯಗತ್ಯ. ಈ ಹೊರಹೊಮ್ಮುವ ತಂತ್ರಜ್ಞಾನಗಳಲ್ಲಿ ಸೂಕ್ತ ಜಾಗತಿಕ ಮಾನದಂಡಗಳನ್ನು ಅಳವಡಿಸಿಕೊಳ್ಳುವುದು ನಮ್ಮಂತಹ ಸಮಾನ ಮೌಲ್ಯಗಳನ್ನು ಹೊಂದಿರುವ ರಾಷ್ಟ್ರಗಳ ಜವಾಬ್ದಾರಿಯೂ ಆಗಿದೆ.
ಮಾನ್ಯರೇ,

ನಮ್ಮ ಸಮಗ್ರ ಆರ್ಥಿಕ ಸಹಕಾರ ಒಪ್ಪಂದ - "ಸಿಇಸಿಎ", ಈ ಬಗ್ಗೆ, ನೀವು ಹೇಳಿದಂತೆ, ಬಹಳ ಕಡಿಮೆ ಸಮಯದಲ್ಲಿ ಗಮನಾರ್ಹ ಪ್ರಗತಿಯನ್ನು ಸಾಧಿಸಲಾಗಿದೆ ಎಂದು ನಾನು ಹೇಳಲು ಬಯಸುತ್ತೇನೆ. ಉಳಿದ ವಿಷಯಗಳನ್ನೂ ಶೀಘ್ರದಲ್ಲೇ ಒಪ್ಪಿಕೊಳ್ಳಲಾಗುವುದು ಎಂಬ ವಿಶ್ವಾಸ ನನಗಿದೆ. "ಸಿಇಸಿಎ" ಯನ್ನು ಬೇಗನೆ ಪೂರ್ಣಗೊಳಿಸುವುದು ನಮ್ಮ ಆರ್ಥಿಕ ಬಾಂಧವ್ಯಗಳು, ಆರ್ಥಿಕ ಪುನಶ್ಚೇತನ ಮತ್ತು ಆರ್ಥಿಕ ಭದ್ರತೆಗೆ ನಿರ್ಣಾಯಕವಾಗಿರುತ್ತದೆ.
ಕ್ವಾಡ್ ನಲ್ಲಿ ನಮ್ಮ ನಡುವೆ ಉತ್ತಮ ಸಹಕಾರವೂ ಇದೆ. ನಮ್ಮ ಸಹಕಾರವು ಮುಕ್ತ ಮತ್ತು ಎಲ್ಲರನ್ನೂ ಒಳಗೊಳ್ಳುವ ಭಾರತ-ಪೆಸಿಫಿಕ್ ಗೆ ನಮ್ಮ ಬದ್ಧತೆಯನ್ನು ಪ್ರತಿಬಿಂಬಿಸುತ್ತದೆ. ಕ್ವಾಡ್ ನ ಯಶಸ್ಸು ಪ್ರಾದೇಶಿಕ ಮತ್ತು ಜಾಗತಿಕ ಸ್ಥಿರತೆಗೆ ಬಹಳ ಮುಖ್ಯವಾಗಿದೆ.
ಮಾನ್ಯರೇ,
ಪ್ರಾಚೀನ ಭಾರತೀಯ ಕಲಾಕೃತಿಗಳನ್ನು ಹಿಂದಿರುಗಿಸಲು ತಾವು ಕೈಗೊಂಡ ಉಪಕ್ರಮಕ್ಕಾಗಿ ನಾನು ನಿಮಗೆ ವಿಶೇಷವಾಗಿ ಧನ್ಯವಾದಗಳನ್ನು ಅರ್ಪಿಸಲು ಬಯಸುತ್ತೇನೆ. ರಾಜಸ್ಥಾನ , ಪಶ್ಚಿಮ ಬಂಗಾಳ, ಗುಜರಾತ್, ಹಿಮಾಚಲ ಪ್ರದೇಶ ಮತ್ತು ಇತರ ಅನೇಕ ಭಾರತೀಯ ರಾಜ್ಯಗಳಿಂದ ಅಕ್ರಮವಾಗಿ ಕಳ್ಳಸಾಗಣೆ ಮಾಡಲಾದ ನೂರಾರು ವರ್ಷಗಳ ಹಳೆಯ ವಿಗ್ರಹಗಳು ಮತ್ತು ವರ್ಣಚಿತ್ರಗಳು ನೀವು ಕಳುಹಿಸಿದ ಕಲಾಕೃತಿಗಳಲ್ಲಿ ಸೇರಿವೆ. ಇದಕ್ಕಾಗಿ ನಾನು ನಿಮಗೆ ಎಲ್ಲಾ ಭಾರತೀಯರ ಪರವಾಗಿ ವಿಶೇಷ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ. ಈಗ ನೀವು ನಮಗೆ ಹಿಂದಿರುಗಿಸಿರುವ ಎಲ್ಲಾ ವಿಗ್ರಹಗಳು ಮತ್ತು ಇತರ ವಸ್ತುಗಳನ್ನು ಅವುಗಳ ಮೂಲ ಸ್ಥಳಕ್ಕೆ ಕಳುಹಿಸಲಾಗುವುದು. ಎಲ್ಲಾ ಭಾರತೀಯ ನಾಗರಿಕರ ಪರವಾಗಿ, ಈ ಉಪಕ್ರಮಕ್ಕಾಗಿ ನಾನು ಮತ್ತೊಮ್ಮೆ ನಿಮಗೆ ಹೃತ್ಪೂರ್ವಕ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ.
ಕ್ರಿಕೆಟ್ ವಿಶ್ವಕಪ್ ನಲ್ಲಿ ಆಸ್ಟ್ರೇಲಿಯಾದ ಮಹಿಳಾ ಕ್ರಿಕೆಟ್ ತಂಡದ ಅತ್ಯುತ್ತಮ ಪ್ರದರ್ಶನಕ್ಕಾಗಿ ನಿಮಗೆ ಅಭಿನಂದನೆಗಳು. ಶನಿವಾರದ ಪಂದ್ಯದಲ್ಲಿ, ಆಸ್ಟ್ರೇಲಿಯಾ ಗೆದ್ದಿದೆ, ಆದರೆ ಪಂದ್ಯಾವಳಿ ಇನ್ನೂ ಮುಗಿದಿಲ್ಲ. ಎರಡೂ ದೇಶಗಳ ತಂಡಗಳಿಗೆ ನನ್ನ ಶುಭ ಹಾರೈಕೆಗಳು.
ಮಾನ್ಯರೇ,
ಮತ್ತೊಮ್ಮೆ, ಇಂದು ನಿಮ್ಮೊಂದಿಗೆ ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಳ್ಳುವ ಅವಕಾಶ ಸಿಕ್ಕಿದ್ದಕ್ಕಾಗಿ ನಾನು ನನ್ನ ಸಂತಸವನ್ನು ವ್ಯಕ್ತಪಡಿಸುತ್ತೇನೆ.

ಈಗ ನಾನು ಮಾಧ್ಯಮದ ಸ್ನೇಹಿತರಿಗೆ ಧನ್ಯವಾದ ಹೇಳುವ ಮೂಲಕ ಮುಕ್ತ ಅಧಿವೇಶನವನ್ನು ಸಮಾರೋಪಗೊಳಿಸಲು ಬಯಸುತ್ತೇನೆ. ಇದರ ಬಳಿಕ, ಕೆಲವು ಕ್ಷಣಗಳ ವಿರಾಮದ ನಂತರ, ಮುಂದಿನ ಕಾರ್ಯಸೂಚಿಯಂತೆ ವಿಷಯದ ಬಗ್ಗೆ ನನ್ನ ಅಭಿಪ್ರಾಯಗಳನ್ನು ಮಂಡಿಸಲು ನಾನು ಬಯಸುತ್ತೇನೆ.

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
India’s Defence Exports Explode: ₹40,000 Crore Milestone Signals a New Manufacturing Era

Media Coverage

India’s Defence Exports Explode: ₹40,000 Crore Milestone Signals a New Manufacturing Era
NM on the go

Nm on the go

Always be the first to hear from the PM. Get the App Now!
...
Text of PM’s remarks during inauguration of Swaminarayan Hindu Temple in Paris
September 06, 2026

पूज्य महंत स्वामी, फ्रांस सरकार के सम्मानित प्रतिनिधिगण, उपस्थित अतिथिगण, इंडियन कम्युनिटी के मेरे साथी, देश दुनिया से जुड़े सभी हरि भक्त, देवियों और सज्जनों, जय स्वामीनारायण!

आज फ्रांस की राजधानी पेरिस में भव्य स्वामीनारायण मंदिर का लोकार्पण हो रहा है। यह लोकार्पण भारत और फ्रांस के सांस्कृतिक संबंधों का नया युग स्तंभ है। पूज्य संत जनों और सनातन परंपरा के श्रेष्ठ जनों के आशीर्वाद के साथ आज इस लोकार्पण का मंच ‘वसुधैव कुटुम्बकम’ के भाव का मंच बन गया है। भगवान स्वामीनारायण की कृपा और हमारे संतों का स्नेह, संतों का आशीर्वाद, मेरा सौभाग्य है कि मुझे ऐसे पुण्य अवसरों से जुड़ने का अवसर हमेशा मिलता रहता है। आज भी मैं भले ही पेरिस में आप सबके बीच उपस्थित नहीं हूं, लेकिन मन से और हृदय से, मैं स्वयं को आपके बीच ही अनुभव कर रहा हूं।

साथियों,

आज इस अवसर पर मैं परम पूज्य प्रमुख स्वामी जी महाराज का भी श्रद्धापूर्वक स्मरण करता हूं। प्राचीन काल में भारत का जो सांस्कृतिक आध्यात्मिक वैभव था, उन्होंने उसके पुनर्जागरण का एक अभियान शुरू किया था। आज उसका प्रकाश यूरोप समेत पूरी दुनिया में फैल रहा है। 2024 में अबू धाबी में भव्य मंदिर का लोकार्पण हुआ था। आज वहां हजारों लोग दर्शन करने जाते हैं और अब यहां पेरिस में स्वामीनारायण मंदिर का निर्माण सृजन की यह निरंतरता, यह संतों की संकल्प शक्ति का ही प्रमाण है। मैं पुनीत कार्य के लिए पूज्य महंत स्वामी का आभार प्रकट करता हूं, मैं उनके चरणों में प्रणाम करता हूं। मैं BAPS स्वामीनारायण संस्था को और करोड़ों हरि भक्तों को इस अवसर पर हृदय की गहराई से बधाई देता हूं।

साथियों,

BAPS के माध्यम से जब अलग-अलग देश में मंदिरों की प्राण प्रतिष्ठा होती है, तो वहां भारत के प्राचीन विचार और मानवीय मूल्य भी साथ-साथ ही जाते हैं और भारत का विचार कहता है ‘समानं मनः सह चित्तमेषाम्’ अर्थात हमारे मन समान हो, हमारे हृदय साथ जुड़े। इसलिए आज जब फ्रांस में इतना भव्य मंदिर बनकर तैयार हुआ है, यह फ्रांस की विविधता को तो समृद्ध करेगा ही, इससे भारत और फ्रांस के सांस्कृतिक संबंधों को भी ऊर्जा मिलेगी।

साथियों,

बीते वर्षों में भारत और फ्रांस के संबंध नई ऊंचाइयों तक पहुंचे हैं। मेरे मित्र, प्रेसिडेंट मैक्रों के साथ मिलकर दोनों देश एक Special Global Strategic Partnership बना रहे हैं। Technology, AI और Defence से लेकर Space और Climate Action तक हम एक नई गति और नई ऊर्जा के साथ मिलकर के आगे बढ़ रहे हैं। हम 2026 को India-France Year of Innovation के रूप में भी सेलिब्रेट कर रहे हैं। भारत-फ्रांस की ये Strategic Partnership इसलिए भी खास है, क्योंकि ये हमारे पुराने सांस्कृतिक-राजनैतिक सम्बन्धों की मजबूत बुनियाद पर टिकी है। इतिहास गवाह है, फ्रांस में भारतीय सैनिकों के बलिदान का इतिहास आज भी मन-मंदिर में जीवित है। भाषा से जुड़े विषयों में रुचि रखने वाले लोग यह भी जानते हैं कि फ्रेंच स्कॉलर्स ने संस्कृत को लोकप्रिय बनाने में कितनी अहम भूमिका निभाई है। रामकृष्ण परमहंस और स्वामी विवेकानंद पर रोमाँ रोलाँ की की लेखनी हमारी सोसाइटीज़ को और करीब लाई है। पेरिस से पुडुचेरी के अरबिंदो आश्रम तक 'The mother' की spiritual journey, उसने कितने ही भारतीय और फ्रेंच साधकों को inspire किया है।

साथियों,

दशकों पहले श्रील प्रभुपाद स्वामी भी फ्रांस आए थे। इस्कॉन के जरिए भारत फ्रांस के बीच आध्यात्मिक सम्बन्धों का नया अध्याय उन्होंने शुरू किया था। आज योग भी भारत-फ्रांस के people to people कनेक्ट का एक माध्यम बन चुका है। 'इंटरनेशनल योगा डे' पर एफिल टॉवर के सामने से आने वाली तस्वीरें फ्रांस में योग की लोकप्रियता का उदाहरण बनती हैं और अब BAPS के इस भव्य मंदिर के जरिए, हमारे उन सांस्कृतिक सम्बन्धों में एक नया अध्याय जुड़ रहा है।

साथियों,

इन दिनों, भारत फ्रांस Joint Ventures की संभावनाओं पर बातें होती हैं। स्वामीनारायण मंदिर ने इस संभावना में भी एक नया आयाम जोड़ा है। यह मंदिर 'मेड इन इंडिया' है और 'बिल्ट इन फ्रांस' है। इसके काफी पत्थरों को भारत में तराशा गया है। भारत की प्राचीन प्रतिभा यहाँ फ्रांस में आधुनिक इंजीनियरिंग से आकर जुड़ चुकी है। पेरिस में इस भव्य मंदिर ने आकार लिया है। इसलिए, मैं आशा करता हूँ, यह मंदिर सदियों तक भारत और फ्रांस के बीच सहयोग और संभावनाओं का भी प्रतीक बनकर उभरेगा।

साथियों,

स्वामीनारायण मंदिर हमेशा से भक्ति के साथ-साथ सेवा का माध्यम भी रहे हैं। मुझे बताया गया है, यह मंदिर भी सेवा प्रकल्पों का वैसा ही केंद्र बनेगा। मुझे विश्वास है कि यहाँ से भारतीय संस्कृति के जो स्वर निकलेंगे, उनका लाभ पूरे यूरोप में लोगों को मिलेगा। भविष्य में मुझे जब भी समय मिलेगा, मैं इस मंदिर में दर्शन करने का प्रयास अवश्य करूंगा। इन्हीं शब्दों के साथ, एक बार फिर आज के इस लोकार्पण समारोह में सम्मिलित सभी अतिथिगणों को, सभी परिवारों को, सभी हरि भक्तों को और पूरी Indian Diaspora को मेरी ओर से इस शुभारंभ पर्व की ढेरों शुभकामनाएं!

बहुत-बहुत धन्यवाद!

मर्सी बोकू!

जय स्वामीनारायण!