ಪಕ್ಷಾತೀತವಾಗಿ, ಹೊಸ ಪೀಳಿಗೆಯ ಸಂಸದರು ಮತ್ತು ಮೊದಲ ಬಾರಿಗೆ ಆಯ್ಕೆಯಾದ ಸಂಸದರಿಗೆ ಅರ್ಥಪೂರ್ಣ ಅವಕಾಶಗಳನ್ನು ನಾವು ಖಾತರಿಪಡಿಸಬೇಕು: ಪ್ರಧಾನಮಂತ್ರಿ
ಪ್ರಜಾಪ್ರಭುತ್ವವು ಫಲಿತಾಂಶಗಳನ್ನು ನೀಡಬಲ್ಲದು ಎಂಬುದನ್ನು ಭಾರತ ಸಾಬೀತುಪಡಿಸಿದೆ: ಪ್ರಧಾನಮಂತ್ರಿ
ಈ ಚಳಿಗಾಲದ ಅಧಿವೇಶನವು ದೇಶವನ್ನು ಮತ್ತಷ್ಟು ವೇಗವಾಗಿ ಮುನ್ನಡೆಸುವ ನಮ್ಮ ಪ್ರಯತ್ನಗಳಿಗೆ ಹೊಸ ಶಕ್ತಿಯನ್ನು ತುಂಬಲಿದೆ: ಪ್ರಧಾನಮಂತ್ರಿ

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಸಂಸತ್ತಿನ ಆವರಣದಲ್ಲಿ 2025ರ ಚಳಿಗಾಲದ ಸಂಸತ್‌ ಅಧಿವೇಶನ ಆರಂಭಕ್ಕೂ ಮುನ್ನ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದರು. ಈ ಅಧಿವೇಶನವು ಕೇವಲ ಒಂದು ಆಚರಣೆಯಲ್ಲ, ಬದಲಿಗೆ, ತ್ವರಿತ ಪ್ರಗತಿಯತ್ತ ರಾಷ್ಟ್ರದ ಪಯಣಕ್ಕೆ ಹೊಸ ಶಕ್ತಿಯ ಮೂಲವಾಗಿದೆ ಎಂದು ಪ್ರಧಾನಮಂತ್ರಿ ತಿಳಿಸಿದರು. "ರಾಷ್ಟ್ರದ ಪ್ರಗತಿಯನ್ನು ವೇಗಗೊಳಿಸಲು ಪ್ರಸ್ತುತ ನಡೆಯುತ್ತಿರುವ ಪ್ರಯತ್ನಗಳಿಗೆ ಈ ಅಧಿವೇಶನವು ಹೊಸ ಶಕ್ತಿಯನ್ನು ತುಂಬಲಿದೆ ಎಂಬುದು ನನ್ನ ದೃಢವಾದ ನಂಬಿಕೆ," ಎಂದು ಶ್ರೀ ಮೋದಿ ಹೇಳಿದರು.

ಭಾರತವು ತನ್ನ ಪ್ರಜಾಸತ್ತಾತ್ಮಕ ಸಂಪ್ರದಾಯಗಳ ಚೈತನ್ಯ ಮತ್ತು ರೋಮಾಂಚಕತೆಯನ್ನು ನಿರಂತರವಾಗಿ ಪ್ರದರ್ಶಿಸಿದೆ ಎಂದು ಪ್ರಧಾನಮಂತ್ರಿ ಹೇಳಿದರು. ಇತ್ತೀಚಿನ ಬಿಹಾರ ಚುನಾವಣೆಯನ್ನು ಉಲ್ಲೇಖಿಸಿದ ಅವರು, ದಾಖಲೆ ಪ್ರಮಾಣದ ಮತದಾನವು ರಾಷ್ಟ್ರದ ಪ್ರಜಾಸತ್ತಾತ್ಮಕ ಶಕ್ತಿಯ ಬಲವಾದ ದೃಢೀಕರಣವಾಗಿದೆ ಎಂದು ಶ್ಲಾಘಿಸಿದರು. ಹೆಚ್ಚುತ್ತಿರುವ ಮಹಿಳಾ ಮತದಾರರ ಭಾಗವಹಿಸುವಿಕೆಯು, ಪ್ರಜಾಪ್ರಭುತ್ವ ಪ್ರಕ್ರಿಯೆಗೆ ಹೊಸ ಭರವಸೆ ಮತ್ತು ಹೊಸ ವಿಶ್ವಾಸವನ್ನು ತುಂಬುವ ಗಮನಾರ್ಹ ಹಾಗೂ ಪ್ರೋತ್ಸಾಹದಾಯಕ ಪ್ರವೃತ್ತಿಯನ್ನು ಸೂಚಿಸುತ್ತದೆ ಎಂದು ಅವರು ತಿಳಿಸಿದರು. ಭಾರತದ ಪ್ರಜಾಸತ್ತಾತ್ಮಕ ಸಂಸ್ಥೆಗಳು ಬಲಗೊಳ್ಳುತ್ತಿರುವುದರ ಜೊತೆಗೆ, ಈ ಪ್ರಜಾಪ್ರಭುತ್ವದ ಚೌಕಟ್ಟು ರಾಷ್ಟ್ರದ ಆರ್ಥಿಕ ಸಾಮರ್ಥ್ಯಗಳನ್ನು ಹೇಗೆ ಬಲಪಡಿಸುತ್ತಿದೆ ಎಂಬುದನ್ನು ಜಗತ್ತು ಹತ್ತಿರದಿಂದ ಗಮನಿಸುತ್ತಿದೆ ಎಂದು ಪ್ರಧಾನಮಂತ್ರಿ ಹೇಳಿದರು. "ಪ್ರಜಾಪ್ರಭುತ್ವವು ಫಲಿತಾಂಶ ನೀಡಬಲ್ಲದು ಎಂಬುದನ್ನು ಭಾರತ ಸಾಬೀತುಪಡಿಸಿದೆ," ಎಂದು ಪ್ರಧಾನಮಂತ್ರಿ ಹೇಳಿದರು. "ಭಾರತದ ಆರ್ಥಿಕ ಪರಿಸ್ಥಿತಿಗಳು ವೇಗವಾಗಿ ಹೊಸ ಎತ್ತರವನ್ನು ತಲುಪುತ್ತಿವೆ. ಇದು ನಾವು ಅಭಿವೃದ್ಧಿ ಹೊಂದಿದ ಭಾರತದ ಗುರಿಯತ್ತ ಸಾಗುತ್ತಿರುವ ಈ ಸಮಯದಲ್ಲಿ ಆತ್ಮವಿಶ್ವಾಸವನ್ನು ಹೆಚ್ಚಿಸುತ್ತದೆ ಮತ್ತು ನಮಗೆ ಹೊಸ ಶಕ್ತಿಯನ್ನು ನೀಡುತ್ತದೆ," ಎಂದು ಶ್ರೀ ಮೋದಿ ತಿಳಿಸಿದರು.

 

ಸಂಸತ್‌ ಅಧಿವೇಶನದ ಗಮನವನ್ನು ರಾಷ್ಟ್ರೀಯ ಹಿತಾಸಕ್ತಿ, ರಚನಾತ್ಮಕ ಚರ್ಚೆ ಮತ್ತು ನೀತಿ ಆಧರಿತ ಫಲಿತಾಂಶಗಳ ಮೇಲೆ ಕೇಂದ್ರೀಕರಿಸುವಂತೆ ಪ್ರಧಾನಮಂತ್ರಿ ಅವರು ಎಲ್ಲ ರಾಜಕೀಯ ಪಕ್ಷಗಳಿಗೆ ಮನವಿ ಮಾಡಿದರು. ರಾಷ್ಟ್ರಕ್ಕಾಗಿ ಏನನ್ನು ನೀಡಲು ಸಂಸತ್ತು ಉದ್ದೇಶಿಸಿದೆ ಎಂಬುದರತ್ತ ಮತ್ತು ಅದನ್ನು ತಲುಪಿಸುವ ಬದ್ಧತೆಯ ಮೇಲೆ ಸಂಸತ್ತು ಗಮನಹರಿಸಬೇಕು ಎಂದು ಅವರು ತಿಳಿಸಿದರು. ಪ್ರತಿಪಕ್ಷಗಳು ತಮ್ಮ ಪ್ರಜಾಸತ್ತಾತ್ಮಕ ಜವಾಬ್ದಾರಿಯನ್ನು ಪೂರೈಸುವಂತೆ ಕರೆ ನೀಡಿದ ಪ್ರಧಾನಮಂತ್ರಿ ಅವರು, ಅರ್ಥಪೂರ್ಣ ಮತ್ತು ವಸ್ತುನಿಷ್ಠ ವಿಷಯಗಳನ್ನು ಎತ್ತುವಂತೆ ಅವರನ್ನು ಪ್ರೋತ್ಸಾಹಿಸಿದರು. ಚುನಾವಣಾ ಸೋಲಿನ ಬಗ್ಗೆ ಹತಾಶೆಯು ಸಂಸತ್ತಿನ ಕಲಾಪಗಳನ್ನು ಮರೆಮಾಚಲು ಬಿಡಬಾರದು ಎಂದು ಅವರು ಪಕ್ಷಗಳಿಗೆ ಎಚ್ಚರಿಕೆ ನೀಡಿದರು. ಅಧಿವೇಶನವು ಚುನಾವಣಾ ಗೆಲುವಿನಿಂದ ಬರುವ ದುರಹಂಕಾರದ  ಪ್ರದರ್ಶನವಾಗಬಾರದು ಎಂದು ತಿಳಿಸಿದ ಶ್ರೀ ಮೋದಿ, "ಚಳಿಗಾಲದ ಅಧಿವೇಶನವು ಸಮತೋಲನ, ಜವಾಬ್ದಾರಿ ಮತ್ತು ಸಾರ್ವಜನಿಕ ಪ್ರತಿನಿಧಿಗಳಿಂದ ನಿರೀಕ್ಷಿಸುವ ಘನತೆಯನ್ನು ಪ್ರತಿಬಿಂಬಿಸಬೇಕು," ಎಂದು ಹೇಳಿದರು.

ಮಾಹಿತಿಯುತ ಚರ್ಚೆಯ ಮಹತ್ವವನ್ನು ತಿಳಿಸಿದ ಪ್ರಧಾನಮಂತ್ರಿ ಅವರು, ಉತ್ತಮ ಕಾರ್ಯನಿರ್ವಹಣೆಯನ್ನು ಸುಧಾರಿಸುವ ನಿಟ್ಟಿನಲ್ಲಿ ಮತ್ತು ಅಗತ್ಯವಿದ್ದಲ್ಲಿ ರಚನಾತ್ಮಕ, ನಿಖರವಾದ ಟೀಕೆಗಳನ್ನು ಮಾಡುವಂತೆ ಸದಸ್ಯರನ್ನು ಒತ್ತಾಯಿಸಿದರು. ಇದರಿಂದ ನಾಗರಿಕರಿಗೆ ಉತ್ತಮ ಮಾಹಿತಿ ಸಿಗುತ್ತದೆ ಎಂದರು. "ಇದು ಅತ್ಯಂತ ಸವಾಲಿನದ್ದು, ಆದರೆ, ಇದು ರಾಷ್ಟ್ರಕ್ಕೆ ಅವಶ್ಯಕವಾದುದು," ಎಂದು ಅವರು ಹೇಳಿದರು.

 

ಮೊದಲ ಬಾರಿಗೆ ಸಂಸದರಾದವರು ಮತ್ತು ಯುವ ಸಂಸದರ ಬಗ್ಗೆ ಮಾತನಾಡಿದ ಪ್ರಧಾನಮಂತ್ರಿ ಅವರು, ಪಕ್ಷಾತೀತವಾಗಿ ಅನೇಕರು ಸಂಸದರು ತಮ್ಮ ಕ್ಷೇತ್ರಗಳನ್ನು ಪ್ರತಿನಿಧಿಸಲು ಅಥವಾ ರಾಷ್ಟ್ರೀಯ ಅಭಿವೃದ್ಧಿ ಚರ್ಚೆಗಳಿಗೆ ಕೊಡುಗೆ ನೀಡಲು ಸಾಕಷ್ಟು ಅವಕಾಶಗಳನ್ನು ಪಡೆಯುತ್ತಿಲ್ಲ ಎಂದು ಭಾವಿಸುತ್ತಾರೆ ಎಂದು ಕಳವಳ ವ್ಯಕ್ತಡಿಸಿದರು. ಈ ಸಂಸದರಿಗೆ ಅರ್ಹವಾದ ವೇದಿಕೆಯನ್ನು ನೀಡುವಂತೆ ಅವರು ಎಲ್ಲಾ ಪಕ್ಷಗಳನ್ನು ಒತ್ತಾಯಿಸಿದರು. "ಸದನ ಮತ್ತು ರಾಷ್ಟ್ರವು ಹೊಸ ಪೀಳಿಗೆಯ ಒಳನೋಟಗಳು ಮತ್ತು ಶಕ್ತಿಯಿಂದ ಪ್ರಯೋಜನ ಪಡೆಯಬೇಕು" ಎಂದು ಅವರು ಹೇಳಿದರು.

ಸಂಸತ್ತು ನೀತಿ ಮತ್ತು ಫಲಿತಾಂಶಗಳ ತಲುಪಿಸುವಿಕೆಯ ಸ್ಥಳವೇ ಹೊರತು ಹೈಡ್ರಾಮಾ ನಡೆಸುವ ಅಥವಾ ಘೋಷಣೆಗಳನ್ನು ಕೂಗುವ ಸ್ಥಳವಲ್ಲ ಎಂದು ಪ್ರಧಾನಮಂತ್ರಿ ತಿಳಿಸಿದರು. "ನಾಟಕಗಳು ಅಥವಾ ಘೋಷಣೆಗಳಿಗೆ ಬೇರೆಡೆ ಸ್ಥಳಗಳಿಗೆ ಕೊರತೆಯಿಲ್ಲ. ಸಂಸತ್ತಿನಲ್ಲಿ, ನಮ್ಮ ಗಮನವು ನೀತಿಯ ಮೇಲೆ ಇರಬೇಕು ಮತ್ತು ನಮ್ಮ ಉದ್ದೇಶವು ಸ್ಪಷ್ಟವಾಗಿರಬೇಕು," ಎಂದು ಅವರು ಹೇಳಿದರು.

ಮೇಲ್ಮನೆಯಲ್ಲಿ ಹೊಸ ಗೌರವಾನ್ವಿತ ಸಭಾಪತಿಗಳ ಕಾರ್ಯಾರಂಭದ ಹಿನ್ನೆಲೆಯಲ್ಲಿ ಈ ಅಧಿವೇಶನದ ವಿಶೇಷ ಮಹತ್ವ ಪಡೆದಿದೆ ಎಂದು ಪ್ರಧಾನಮಂತ್ರಿ ಅವರು ತಿಳಿಸಿದರು. ಮೇಲ್ಮನೆಯ ಹೊಸ ಸಭಾಪತಿಗಳಿಗೆ ತಮ್ಮ ಅಭಿನಂದನೆಗಳನ್ನು ಸಲ್ಲಿಸಿದ ಪ್ರಧಾನಮಂತ್ರಿ, ಅವರ ನಾಯಕತ್ವವು ಸಂಸದೀಯ ಕಾರ್ಯಚಟುವಟಿಕೆಯನ್ನು ಮತ್ತಷ್ಟು ಬಲಪಡಿಸುತ್ತದೆ ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿದರು.

 

ʻಜಿಎಸ್‌ಟಿʼ ಸುಧಾರಣೆಗಳು ನಾಗರಿಕರಲ್ಲಿ ಅಗಾಧ ವಿಶ್ವಾಸದ ವಾತಾವರಣವನ್ನು ಸೃಷ್ಟಿಸಿದ್ದು, ಅವುಗಳನ್ನು ಮುಂದಿನ ಪೀಳಿಗೆಯ ಸುಧಾರಣೆಗಳೆಂದು ಪರಿಗಣಿಸಲಾಗಿದೆ ಎಂದು ಪ್ರಧಾನಮಂತ್ರಿ ಹೇಳಿದರು. ಚಳಿಗಾಲದ ಅಧಿವೇಶನವು ಈ ನಿಟ್ಟಿನಲ್ಲಿ ಹಲವಾರು ಪ್ರಮುಖ ಉಪಕ್ರಮಗಳನ್ನು ಮುಂದುವರಿಸಲು ಸಜ್ಜಾಗಿದೆ ಎಂದು ಅವರು ಮಾಹಿತಿ ನೀಡಿದರು.

ಇತ್ತೀಚಿನ ಸಂಸದೀಯ ಪ್ರವೃತ್ತಿಗಳ ಬಗ್ಗೆ ಕಳವಳ ವ್ಯಕ್ತಪಡಿಸಿದ ಶ್ರೀ ಮೋದಿ, ಇತ್ತೀಚಿನ ದಿನಗಳಲ್ಲಿ, ನಮ್ಮ ಸಂಸತ್ತನ್ನು ಮುಂದಿನ ಚುನಾವಣೆಯ ʻಸಿದ್ಧತೆಯʼವೇದಿಕೆಯಾಗಿ ಅಥವಾ ಚುನಾವಣಾ ಸೋಲಿನ ನಂತರ ಹತಾಶೆಯನ್ನು ಹೊರಹಾಕುವ ಸ್ಥಳವಾಗಿ ಬಳಸಲಾಗುತ್ತಿದೆ ಎಂದು ಟೀಕಿಸಿದರು. "ದೇಶವು ಇಂತಹ ಕಾರ್ಯವಿಧಾನಗಳನ್ನು ಒಪ್ಪುವುದಿಲ್ಲ. ಅಂಥವರು ತಮ್ಮ ಕಾಋಯವಿಧಾನ ಮತ್ತು ಕಾರ್ಯತಂತ್ರವನ್ನು ಬದಲಾಯಿಸುವ ಸಮಯ ಬಂದಿದೆ. ಅವರು ಹೇಗೆ ಉತ್ತಮವಾಗಿ ಕಾರ್ಯನಿರ್ವಹಿಸಬಹುದು ಎಂಬುದರ ಕುರಿತು ಸಲಹೆಗಳನ್ನು ನೀಡಲು ನಾನು ಸಿದ್ಧನಿದ್ದೇನೆ," ಎಂದು ಶ್ರೀ ಮೋದಿ ಹೇಳಿದರು.

"ನಾವೆಲ್ಲರೂ ಈ ಜವಾಬ್ದಾರಿಗಳನ್ನು ಗಮನದಲ್ಲಿಟ್ಟುಕೊಂಡು ಮುಂದುವರಿಯುತ್ತೇವೆ ಎಂದು ನಾನು ಭಾವಿಸುತ್ತೇನೆ. ದೇಶವು ಪ್ರಗತಿಯ ಪಥವನ್ನು ಪ್ರಾರಂಭಿಸಿದೆ ಎಂದು ನಾನು ರಾಷ್ಟ್ರಕ್ಕೆ ಭರವಸೆ ನೀಡುತ್ತೇನೆ", ಎಂದು ಶ್ರೀ ಮೋದಿ ಪುನರುಚ್ಚರಿಸಿದರು. ಪ್ರಗತಿಯತ್ತ ರಾಷ್ಟ್ರವು ದೃಢವಾದ ಹೆಜ್ಜೆ ಹಾಕುತ್ತಿದೆ ಎಂದ ಅವರು, "ದೇಶವು ಹೊಸ ಎತ್ತರದತ್ತ ಸಾಗುತ್ತಿದೆ ಮತ್ತು ಈ ಸದನವು ಆ ಪ್ರಯಾಣಕ್ಕೆ ಹೊಸ ಶಕ್ತಿ ಮತ್ತು ಚತನ್ಯವನ್ನು ತುಂಬುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ," ಎಂದು ಹೇಳಿದರು.

 

ಭಾಷಣದ ಪೂರ್ಣ ಪಠ್ಯವನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
India’s AI moment: Sarvam turns unicorn at $1.5 billion valuation

Media Coverage

India’s AI moment: Sarvam turns unicorn at $1.5 billion valuation
NM on the go

Nm on the go

Always be the first to hear from the PM. Get the App Now!
...
Today, the world does not suffer from a shortage of resources; it suffers from a shortage of trust: PM Modi at G7 Summit in Evian, France
June 16, 2026

राष्ट्रपति मैक्रों,
Your Excellencies,

नमस्कार!

G-7 समिट में हमारे गर्मजोशी भरे स्वागत के लिए मैं राष्ट्रपति मैक्रों का हार्दिक आभार व्यक्त करता हूँ।

Friends,

आज का विश्व पहले से कहीं अधिक inter-connected और inter-dependent है। किसी भी देश की ऊर्जा सुरक्षा, खाद्य सुरक्षा, स्वास्थ्य सुरक्षा, साइबर सुरक्षा और आर्थिक समृद्धि केवल उसकी सीमाओं के भीतर तय नहीं होती। Mobility, data, capital, technology, ये सभी हमें आपस में जोड़ते हैं।

ऐसे समय में Partnerships का महत्व स्वाभाविक रूप से बढ़ जाता है। लेकिन साझेदारियाँ तभी सफल होती हैं जब उनके केंद्र में विश्वास हो। आज सबसे महत्वपूर्ण Strategic Asset कोई mineral, technology या market नहीं, बल्कि आपसी विश्वास है।

विश्वास कि टेक्नॉलजी और supply chains को हथियार के रूप में नहीं, global good के लिए इस्तेमाल किया जाएगा। विश्वास कि विकास के अवसर कुछ देशों तक सीमित नहीं रहेंगे। विश्वास कि वैश्विक संस्थान सभी देशों की आकांक्षाओं को पूरा करने में सक्षम होंगे।

Friends,

पिछली सदी में मानवता को दो विश्व युद्धों से गुज़रना पड़ा। अनेक बलिदानों के बाद विश्व समुदाय ने शांति, स्थिरता और समृद्धि की ओर बढ़ने के लिए व्यवस्थाएं विकसित की। इन व्यवस्थाओं का आधार भी trust ही था।

किन्तु अनेक दशकों से, अनेक पीढ़ियों के योगदान से बनाए गए विश्वास को आज चोट पहुँच रही है। कोविड ने हमें आईना दिखाया कि trust और solidarity के दावे कितने खोखले थे।

Today the world does not suffer from a shortage of resources; it suffers from a shortage of trust. And the future of our partnerships depends on building this trust.

अमेरिका के राष्ट्रपति रोनल्ड रेगन ने कहा था: Trust but Verify. यह आज के समय में भी प्रासंगिक है। भावी पीढ़ियों के प्रति हमारा दायित्व है कि हम नए युग के अनुरूप trusted rules based order का निर्माण करें।

Friends,

भारत ने सदैव विश्व को एक परिवार के रूप में देखा है। हमारे सभी प्रयास “सर्वजन हिताय, सर्वजन सुखाय” यानि, welfare and happiness for all के मूल सिद्धांत पर आधारित रहे हैं।

भारत का अनुभव दिखाता है कि विकास सबसे अधिक प्रभावी तब होता है जब वह लोगों की आकांक्षाओं से जुड़ा हो। यही सिद्धांत हमारी अंतरराष्ट्रीय साझेदारियों का भी आधार है। इसी सोच के साथ भारत ने International Solar Alliance, Coalition for Disaster Resilient Infrastructure, ग्लोबल बायोफ्यूल्स एलायंस, Mission LiFE, और “एक पेड़ माँ के नाम” जैसी वैश्विक पहलों को आगे बढ़ाया है।

संकट के समय भारत ने First Responder के रूप में सभी देशों की सहायता करना अपना दायित्व समझा है। कोविड महामारी के दौरान भारत ने डेढ़ सौ से अधिक देशों को दवाइयाँ और vaccines उपलब्ध कराईं।

श्रीलंका में cyclone हो, अफगानिस्तान में भूकंप हो, मोज़ाम्बिक में floods हों, या क्यूबा और जमैका में hurricane, भारत ने सदैव "Humanity First" के सिद्धांत पर कार्य किया है। हमारी विकास साझेदारियाँ भी इसी भावना को प्रतिबिंबित करती हैं। हमारे प्रयास पार्टनर देशों में capacity building और कौशल विकास पर केन्द्रित रहे हैं।

भारत का मानना है: The true test of partnership is not what we build for others, but what we enable others to build for themselves.

Friends,

आज ग्लोबल साउथ की विश्व समुदाय से बहुत उम्मीदें हैं। किन्तु उनकी अपेक्षा सहारे की नहीं, साथ की है। वे वैश्विक विकास के लाभार्थी नहीं, उसके भागीदार बनना चाहते हैं।

हमें donor–recipient की सोच से आगे बढ़कर, equal पार्टनर्स के रूप में काम करना होगा। उनके पास-पास नहीं, साथ-साथ चलना होगा। साझेदारी को dependency के बजाय, dignity से जोड़ना होगा। इन प्रयासों से हम भावी पीढ़ियों के सतत विकास की मजबूत नींव रख सकेंगे।

Friends,

अंतरराष्ट्रीय साझेदारियाँ और वैश्विक एकजुटता तभी सार्थक बन सकती हैं, जब हम साझा चुनौतियों का मिलकर समाधान करें। भारत का दृढ विश्वास है कि विश्व के विभिन्न हिस्सों में चल रहे तनावों और युद्धों का स्थायी समाधान dialogue, diplomacy और अंतरराष्ट्रीय सहयोग के मार्ग से ही संभव है।

हम west asia में शांति प्रयासों में हुई प्रगति का स्वागत करते हैं। इस संघर्ष से west asia में हमारे मित्र देशों को जान-माल का नुकसान झेलना पड़ा है। होर्मुज़ स्ट्रेट में maritime ट्रेड में आई बाधा के कारण पूरे विश्व की अर्थव्यवस्था को नुकसान पहुंचा। भारत के कई civilians को जान गंवानी पड़ी। Global maritime ट्रेड के माध्यम से सभी देशों को आपस में जोड़ने वाले नाविकों की सुरक्षा हमारा दायित्व है। हमें यह सुनिश्चित करना होगा कि समुद्री मार्ग सुरक्षित रहें, और Seafarers बिना भय के अपना कार्य कर सकें।

Friends,

भारत इन विषयों पर सभी पार्टनर्स के साथ मिलकर काम करने के लिए पूरी तरह से तैयार है।

बहुत-बहुत धन्यवाद।